ಎಚ್ಚರಿಕೆ ಧರ್ಮವು ನಿಷ್ಕಳಂಕವಾಗಿ ಕೇವಲ ಅಲ್ಲಾಹನಿಗೇ ಮೀಸಲಾಗಿದೆ ಮತ್ತು ಯಾರು ಅವನ ಹೊರತು ಇತರರನ್ನು ರಕ್ಷಕ ಮಿತ್ರರನ್ನಾಗಿ ಮಾಡಿಕೊಂಡಿರುತ್ತಾರೋ ಅವರು ನಮ್ಮನ್ನು 'ಅಲ್ಲಾಹನ ಬಳಿ ನಿಕಟಗೊಳಿಸಲೆಂದು ಮಾತ್ರ ನಾವು ಅವರನ್ನು ಆರಾಧಿಸುತ್ತೇವೆ (ಎಂದು ಹೇಳುತ್ತಾರೆ). ಅವರು ಭಿನ್ನತೆ ತೋರುತ್ತಿದ್ದ ವಿಚಾರಗಳ ತೀರ್ಮಾನವನ್ನು ಅಲ್ಲಾಹನು ಮಾಡಲಿದ್ದಾನೆ. ನಿಶ್ಚಯವಾಗಿಯು ಸುಳ್ಳರೂ, ಕೃತಘ್ನರೂ ಆದವರನ್ನು ಅಲ್ಲಾಹನು ಸನ್ಮಾರ್ಗಕ್ಕೆ ಮುನ್ನಡೆಸುವುದಿಲ್ಲ.