ಸಂದೇಶವಾಹಕರೇ, ಖಂಡಿತವಾಗಿಯೂ ನಾವು ಸಕಲ ಮಾನವರಿಗಾಗಿ ಸತ್ಯಪೂರ್ಣಗ್ರಂಥವನ್ನು ನಿಮ್ಮೆಡೆಗೆ ಅವತೀರ್ಣಗೊಳಿಸಿದ್ದೇವೆ. ಯಾರು ಸನ್ಮಾರ್ಗ ಪಡೆಯುತ್ತಾನೋ ಅದು ಅವನ ಹಿತಕ್ಕಾಗಿಯೇ ಆಗಿದೆ. ಮತ್ತು ಯಾರು ಮಾರ್ಗಭ್ರಷ್ಟನಾಗುತ್ತಾನೋ ಅವನ ಮಾರ್ಗಭ್ರಷ್ಟತೆಯ ದೋಷವು ಅವನ ಮೇಲೆಯೇ ಇರುವುದು. ನೀವು ಅವರ ಮೇಲ್ವಿಚಾರಕರೇನು ಅಲ್ಲ.