ಮನುಷ್ಯನಿಗೆ ಯಾವುದಾದರೂ ಸಂಕಷ್ಟ ಬಾಧಿಸಿದರೆ ಅವನು ನಮ್ಮನ್ನು ಪ್ರಾರ್ಥಿಸುತ್ತಾನೆ. ತರುವಾಯ ನಾವು ಅವನಿಗೆ ನಮ್ಮ ಕಡೆಯಿಂದ ಯಾವುದಾದರೂ ಅನುಗ್ರಹವನ್ನು ದಯಪಾಲಿಸಿದರೆ ಅವನು ಇದನ್ನು ನನಗೆ ನನ್ನಜ್ಞಾನದ ಆಧಾರದಲ್ಲಿ ಕೊಡಲಾಗಿದೆ ಎನ್ನುತ್ತಾನೆ ಅಲ್ಲ !ಇದು ಒಂದು ಪರೀಕ್ಷೆಯಾಗಿದೆ. ಆದರೆ ಅವರಲ್ಲಿ ಹೆಚ್ಚಿನವರು ಅರಿಯುವುದಿಲ್ಲ.