ನಿಮ್ಮ ಪೈಕಿ ಯಾರು ತಮ್ಮ ಪತ್ನಿಯೊಂದಿಗೆ ಝಿಹಾರ್ ಮಾಡಿ (ತಾಯಿ ಎಂದು ಹೇಳಿ) ಬಿಡುತ್ತಾರೋ ವಸ್ತುತಃ ಅವರು ಅವರ ತಾಯಂದಿರರಾಗ ಲಾರರು ,ಅವರನ್ನು ಹೆತ್ತವರೇ ಅವರ ತಾಯಂದಿರು, ನಿಜವಾಗಿಯೂ ಅವರು ವಿವೇಕಕ್ಕೆ ನಿಲುಕದಂತಹ ಸುಳ್ಳು ಹೇಳುತ್ತಿದ್ದಾರೆ. ನಿಸ್ಸಂಶಯವಾಗಿಯೂ ಅಲ್ಲಾಹನು ಮನ್ನಿಸುವವನು ಕ್ಷಮಾಶೀಲನೂ ಆಗಿದ್ದಾನೆ.
ತಮ್ಮ ಸ್ತ್ರೀಯರೊಂದಿಗೆ ಝಿಹಾರ್ ಮಾಡುವವರು ತರುವಾಯ ತಾವು ಹೇಳಿದ ಮಾತಿನಿಂದ ಪಶ್ಚಾತ್ತಾಪ ಪಟ್ಟು ಮರಳಿದರೆ ಅವರು ಪರಸ್ಪರರನ್ನು ಸ್ಪರ್ಶಿಸುವ ಮೊದಲು ಒಬ್ಬ ಗುಲಾಮನನ್ನು ವಿಮೋಚಿಸತಕ್ಕದ್ದು. ಇದರ ಮೂಲಕ ನಿಮಗೆ ಉಪದೇಶ ನೀಡಲಾಗುತ್ತಿದೆ, ಅಲ್ಲಾಹನು ನೀವು ಮಾಡುತ್ತಿರುವುದರ ಕುರಿತು ಸೂಕ್ಷ್ಮಜ್ಞಾನಿಯಾಗಿರುವನು.
ಇನ್ನು ಯಾರಿಗಾದರೂ ಗುಲಾಮನು ಸಿಗದಿದ್ದರೆ ಅವರು ಪರಸ್ಪರ ಸ್ಪರ್ಶಿಸುವ ಮೊದಲು ಅವನು ನಿರಂತರವಾಗಿ ಎರಡು ತಿಂಗಳ ಕಾಲ ಉಪವಾಸ ಆಚರಿಸಬೇಕಾಗಿದೆ, ಇದು ಸಾಧ್ಯವಾಗದಿದ್ದರೆ ಅವನು ಅರವತ್ತು ನಿರ್ಗತಿಕರಿಗೆ ಉಣಬಡಿಸಬೇಕಾಗಿದೆ. ಇದು ನೀವು ಅಲ್ಲಾಹನ ಹಾಗೂ ಅವನ ಸಂದೇಶವಾಹಕರ ಮೇಲೆ ವಿಶ್ವಾಸವಿಡಲೆಂದಾಗಿದೆ. ಇವು ಅಲ್ಲಾಹನ ಮೇರೆಗಳಾಗಿವೆ. ಮತ್ತು ಸತ್ಯ ನಿಷೇಧಿಗಳಿಗೆ ವೇದನಾಜನಕ ಯಾತನೆ ಇದೆ.
ನಿಸ್ಸಂದೇಹವಾಗಿಯೂ ಅಲ್ಲಾಹನನ್ನು ಅವನ ಸಂದೇಶವಾಹಕರನ್ನು ವಿರೋಧಿಸುವವರು ತಮಗಿಂತ ಮುಂಚಿನವರು ನಿಂದಿಸಲ್ಪಟ್ಟAತೆ ಅವರೂ ನಿಂದಿಸಲ್ಪಡುವರು, ನಿಸ್ಸಂಶಯವಾಗಿಯೂ ನಾವು ಸುಸ್ಪಷ್ಟ ಪುರಾವೆಗಳನ್ನು ಅವತೀರ್ಣಗೊಳಿಸಿದ್ದೇವೆ ಮತ್ತು ಸತ್ಯ ನಿಷೇಧಿಗಳಿಗೆ ನಿಂದ್ಯತೆಯ ಯಾತನೆ ಇದೆ.
ಅಲ್ಲಾಹನು ಅವರೆಲ್ಲರನ್ನು ಎಬ್ಬಿಸಿ ಅವರಿಗೆ ಅವರು ಮಾಡಿದಂತಹ ಕರ್ಮಗಳನ್ನು ತಿಳಿಸಿಕೊಡುವ ದಿನ. ಅಲ್ಲಾಹನು ಅದನ್ನು ಎಣಿಸಿ ದಾಖಲಿಸಿದ್ದಾನೆ. ಆದರೆ ಅವರು ಅದನ್ನು ಮರೆತುಬಿಟ್ಟಿದ್ದರು ಅಲ್ಲಾಹನು ಎಲ್ಲಾ ಸಂಗತಿಗಳ ಮೇಲೆ ಸಾಕ್ಷಿಯಾಗಿದ್ದಾನೆ.