আল-কোৰআনুল কাৰীমৰ অৰ্থানুবাদ - الترجمة الكنادية * - অনুবাদসমূহৰ সূচীপত্ৰ

XML CSV Excel API
Please review the Terms and Policies

অৰ্থানুবাদ ছুৰা: ছুৰা আল-ফাতাহ   আয়াত:

ಸೂರ ಅಲ್ -ಫತ್ ಹ್

اِنَّا فَتَحْنَا لَكَ فَتْحًا مُّبِیْنًا ۟ۙ
(ಪ್ರವಾದಿಯವರೇ) ನಿಶ್ಚಯವಾಗಿಯೂ ನಾವು ನಿಮಗೆ ಸ್ಪಷ್ಟ ವಿಜಯವನ್ನು[1] ದಯಪಾಲಿಸಿದ್ದೇವೆ.
[1] ಸ್ಪಷ್ಟ ವಿಜಯ ಎಂದರೆ ಹುದೈಬಿಯಾ ಒಪ್ಪಂದ. ಈ ಒಪ್ಪಂದದಿಂದಾಗಿ ಮುಸ್ಲಿಮರಿಗೆ ನಾಲ್ಕೂ ಕಡೆ ನಿರ್ಭಯವಾಗಿ ಓಡಾಡಿ ಇಸ್ಲಾಂ ಧರ್ಮವನ್ನು ಪ್ರಚಾರ ಮಾಡಲು ಸಾಧ್ಯವಾಯಿತು. ಇದರಿಂದ ಇಸ್ಲಾಂ ಧರ್ಮದ ಬಗ್ಗೆ ಹೆಚ್ಚು ಹೆಚ್ಚು ಜನರು ಆಕರ್ಷಿತರಾದರು. ಇದು ನಂತರ ಮಕ್ಕಾ ವಿಜಯಕ್ಕೆ ನಾಂದಿಯಾಯಿತು.
আৰবী তাফছীৰসমূহ:
لِّیَغْفِرَ لَكَ اللّٰهُ مَا تَقَدَّمَ مِنْ ذَنْۢبِكَ وَمَا تَاَخَّرَ وَیُتِمَّ نِعْمَتَهٗ عَلَیْكَ وَیَهْدِیَكَ صِرَاطًا مُّسْتَقِیْمًا ۟ۙ
ಹಿಂದೆ ಸಂಭವಿಸಿರುವ ನಿಮ್ಮ ತಪ್ಪುಗಳನ್ನು ಮತ್ತು ಮುಂದೆ ಸಂಭವಿಸಲಿರುವುದನ್ನು ಅಲ್ಲಾಹು ನಿಮಗೆ ಕ್ಷಮಿಸುವುದಕ್ಕಾಗಿ, ಅವನ ಅನುಗ್ರಹವನ್ನು ನಿಮಗೆ ಪೂರ್ಣಗೊಳಿಸುವುದಕ್ಕಾಗಿ ಮತ್ತು ನಿಮ್ಮನ್ನು ನೇರಮಾರ್ಗದಲ್ಲಿ ಮುನ್ನಡೆಸುವುದಕ್ಕಾಗಿ.
আৰবী তাফছীৰসমূহ:
وَّیَنْصُرَكَ اللّٰهُ نَصْرًا عَزِیْزًا ۟
ಅಲ್ಲಾಹು ನಿಮಗೆ ಪ್ರಬಲವಾದ ಸಹಾಯವನ್ನು ನೀಡುವುದಕ್ಕಾಗಿ.
আৰবী তাফছীৰসমূহ:
هُوَ الَّذِیْۤ اَنْزَلَ السَّكِیْنَةَ فِیْ قُلُوْبِ الْمُؤْمِنِیْنَ لِیَزْدَادُوْۤا اِیْمَانًا مَّعَ اِیْمَانِهِمْ ؕ— وَلِلّٰهِ جُنُوْدُ السَّمٰوٰتِ وَالْاَرْضِ ؕ— وَكَانَ اللّٰهُ عَلِیْمًا حَكِیْمًا ۟ۙ
ಅವನೇ ಸತ್ಯವಿಶ್ವಾಸಿಗಳ ಹೃದಯಗಳಲ್ಲಿ ಶಾಂತಿಯನ್ನು ಇಳಿಸಿದವನು. ಅವರಲ್ಲಿರುವ ಸತ್ಯವಿಶ್ವಾಸಕ್ಕೆ ಇನ್ನಷ್ಟು ಸತ್ಯವಿಶ್ವಾಸವು ಹೆಚ್ಚಾಗುವುದಕ್ಕಾಗಿ. ಭೂಮ್ಯಾಕಾಶಗಳ ಸೈನ್ಯಗಳು ಅಲ್ಲಾಹನಿಗೆ ಸೇರಿದ್ದು. ಅಲ್ಲಾಹು ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ.
আৰবী তাফছীৰসমূহ:
لِّیُدْخِلَ الْمُؤْمِنِیْنَ وَالْمُؤْمِنٰتِ جَنّٰتٍ تَجْرِیْ مِنْ تَحْتِهَا الْاَنْهٰرُ خٰلِدِیْنَ فِیْهَا وَیُكَفِّرَ عَنْهُمْ سَیِّاٰتِهِمْ ؕ— وَكَانَ ذٰلِكَ عِنْدَ اللّٰهِ فَوْزًا عَظِیْمًا ۟ۙ
ಸತ್ಯವಿಶ್ವಾಸಿ ಪುರುಷರು ಮತ್ತು ಸತ್ಯವಿಶ್ವಾಸಿ ಸ್ತ್ರೀಯರನ್ನು ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಲ್ಲಿ ಶಾಶ್ವತವಾಸಿಗಳಾಗಿ ಪ್ರವೇಶಗೊಳಿಸುವುದಕ್ಕಾಗಿ ಮತ್ತು ಅವರ ಕೆಡುಕುಗಳನ್ನು ಅಳಿಸುವುದಕ್ಕಾಗಿ. ಅದು ಅಲ್ಲಾಹನ ದೃಷ್ಟಿಯಲ್ಲಿ ಅತಿದೊಡ್ಡ ವಿಜಯವಾಗಿದೆ.
আৰবী তাফছীৰসমূহ:
وَّیُعَذِّبَ الْمُنٰفِقِیْنَ وَالْمُنٰفِقٰتِ وَالْمُشْرِكِیْنَ وَالْمُشْرِكٰتِ الظَّآنِّیْنَ بِاللّٰهِ ظَنَّ السَّوْءِ ؕ— عَلَیْهِمْ دَآىِٕرَةُ السَّوْءِ ۚ— وَغَضِبَ اللّٰهُ عَلَیْهِمْ وَلَعَنَهُمْ وَاَعَدَّ لَهُمْ جَهَنَّمَ ؕ— وَسَآءَتْ مَصِیْرًا ۟
ಅಲ್ಲಾಹನ ವಿಷಯದಲ್ಲಿ ಕೆಟ್ಟ ಭಾವನೆಗಳನ್ನು ಇಟ್ಟುಕೊಂಡಿರುವ ಕಪಟವಿಶ್ವಾಸಿ ಪುರುಷರು ಮತ್ತು ಕಪಟವಿಶ್ವಾಸಿ ಸ್ತ್ರೀಯರನ್ನು, ಬಹುದೇವವಿಶ್ವಾಸಿ ಪುರುಷರು ಮತ್ತು ಬಹುದೇವವಿಶ್ವಾಸಿ ಸ್ತ್ರೀಯರನ್ನು ಶಿಕ್ಷಿಸುವುದಕ್ಕಾಗಿ. ಅವರ ಮೇಲೆ ಕೆಡುಕಿನ ಆವರಣವಿದೆ. ಅಲ್ಲಾಹು ಅವರ ಮೇಲೆ ಕೋಪಿಸಿದ್ದಾನೆ, ಅವರನ್ನು ಶಪಿಸಿದ್ದಾನೆ ಮತ್ತು ಅವರಿಗೆ ನರಕಾಗ್ನಿಯನ್ನು ಸಿದ್ಧಗೊಳಿಸಿದ್ದಾನೆ. ಆ ಗಮ್ಯಸ್ಥಾನವು ಬಹಳ ನಿಕೃಷ್ಟವಾಗಿದೆ.
আৰবী তাফছীৰসমূহ:
وَلِلّٰهِ جُنُوْدُ السَّمٰوٰتِ وَالْاَرْضِ ؕ— وَكَانَ اللّٰهُ عَزِیْزًا حَكِیْمًا ۟
ಭೂಮ್ಯಾಕಾಶಗಳ ಸೈನ್ಯಗಳು ಅಲ್ಲಾಹನಿಗೆ ಸೇರಿದ್ದು. ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.
আৰবী তাফছীৰসমূহ:
اِنَّاۤ اَرْسَلْنٰكَ شَاهِدًا وَّمُبَشِّرًا وَّنَذِیْرًا ۟ۙ
ನಿಶ್ಚಯವಾಗಿಯೂ ನಾವು ನಿಮ್ಮನ್ನು ಸಾಕ್ಷಿಯಾಗಿ, ಸುವಾರ್ತೆ ನೀಡುವವರಾಗಿ ಮತ್ತು ಮುನ್ನೆಚ್ಚರಿಕೆ ನೀಡುವವರಾಗಿ ಕಳುಹಿಸಿದ್ದೇವೆ.
আৰবী তাফছীৰসমূহ:
لِّتُؤْمِنُوْا بِاللّٰهِ وَرَسُوْلِهٖ وَتُعَزِّرُوْهُ وَتُوَقِّرُوْهُ ؕ— وَتُسَبِّحُوْهُ بُكْرَةً وَّاَصِیْلًا ۟
ನೀವು (ಜನರು) ಅಲ್ಲಾಹನಲ್ಲಿ ಮತ್ತು ಅವನ ಸಂದೇಶವಾಹಕರಲ್ಲಿ ವಿಶ್ವಾಸವಿಡುವುದಕ್ಕಾಗಿ, ಅವರಿಗೆ (ಪ್ರವಾದಿಗೆ) ಸಹಾಯ ಮಾಡುವುದಕ್ಕಾಗಿ, ಅವರನ್ನು ಗೌರವಿಸುವುದಕ್ಕಾಗಿ ಮತ್ತು ಮುಂಜಾನೆ ಹಾಗೂ ಸಂಜೆ ಅವನ (ಅಲ್ಲಾಹನ) ಮಹತ್ವವನ್ನು ಕೊಂಡಾಡುವುದಕ್ಕಾಗಿ.
আৰবী তাফছীৰসমূহ:
اِنَّ الَّذِیْنَ یُبَایِعُوْنَكَ اِنَّمَا یُبَایِعُوْنَ اللّٰهَ ؕ— یَدُ اللّٰهِ فَوْقَ اَیْدِیْهِمْ ۚ— فَمَنْ نَّكَثَ فَاِنَّمَا یَنْكُثُ عَلٰی نَفْسِهٖ ۚ— وَمَنْ اَوْفٰی بِمَا عٰهَدَ عَلَیْهُ اللّٰهَ فَسَیُؤْتِیْهِ اَجْرًا عَظِیْمًا ۟۠
ನಿಮ್ಮ ಮುಂದೆ ಪ್ರತಿಜ್ಞೆ ಮಾಡುವವರು ನಿಶ್ಚಯವಾಗಿಯೂ ಅಲ್ಲಾಹನ ಮುಂದೆ ಪ್ರತಿಜ್ಞೆ ಮಾಡುತ್ತಿದ್ದಾರೆ. ಅವರ ಕೈಗಳ ಮೇಲೆ ಅಲ್ಲಾಹನ ಕೈ ಇದೆ. ಯಾರು ತನ್ನ ಪ್ರತಿಜ್ಞೆಯನ್ನು ಮುರಿಯುತ್ತಾನೋ ಅವನು ಅವನಿಗೆ ವಿರುದ್ಧವಾಗಿಯೇ ಅದನ್ನು ಮುರಿಯುತ್ತಾನೆ. ಯಾರು ಅಲ್ಲಾಹನ ಮುಂದೆ ಮಾಡಿದ ಕರಾರನ್ನು ಪೂರ್ಣಗೊಳಿಸುತ್ತಾನೋ ಅವನಿಗೆ ಅಲ್ಲಾಹು ಮಹಾ ಪ್ರತಿಫಲವನ್ನು ನೀಡುತ್ತಾನೆ.
আৰবী তাফছীৰসমূহ:
سَیَقُوْلُ لَكَ الْمُخَلَّفُوْنَ مِنَ الْاَعْرَابِ شَغَلَتْنَاۤ اَمْوَالُنَا وَاَهْلُوْنَا فَاسْتَغْفِرْ لَنَا ۚ— یَقُوْلُوْنَ بِاَلْسِنَتِهِمْ مَّا لَیْسَ فِیْ قُلُوْبِهِمْ ؕ— قُلْ فَمَنْ یَّمْلِكُ لَكُمْ مِّنَ اللّٰهِ شَیْـًٔا اِنْ اَرَادَ بِكُمْ ضَرًّا اَوْ اَرَادَ بِكُمْ نَفْعًا ؕ— بَلْ كَانَ اللّٰهُ بِمَا تَعْمَلُوْنَ خَبِیْرًا ۟
ಮರುಭೂಮಿ ನಿವಾಸಿಗಳಲ್ಲಿ ಹಿಂದೆ ಉಳಿದವರು ನಿಮ್ಮೊಡನೆ ಹೇಳುತ್ತಾರೆ: “ನಮ್ಮ ಆಸ್ತಿ ಮತ್ತು ಕುಟುಂಬಗಳು ನಮ್ಮನ್ನು ಕಾರ್ಯಮಗ್ನಗೊಳಿಸಿವೆ. ಆದ್ದರಿಂದ ನೀವು ನಮಗೋಸ್ಕರ ಕ್ಷಮೆಯಾಚಿಸಿರಿ.” ಅವರು ತಮ್ಮ ಹೃದಯಗಳಲ್ಲಿ ಇಲ್ಲದಿರುವುದನ್ನು ತಮ್ಮ ನಾಲಗೆಗಳ ಮೂಲಕ ಹೇಳುತ್ತಾರೆ. ಹೇಳಿರಿ: “ಅಲ್ಲಾಹು ನಿಮಗೆ ಏನಾದರೂ ತೊಂದರೆ ಮಾಡಲು ಬಯಸಿದರೆ ಅಥವಾ ನಿಮಗೆ ಏನಾದರೂ ಪ್ರಯೋಜನ ನೀಡಲು ಬಯಸಿದರೆ ನಿಮಗೋಸ್ಕರ ಅಲ್ಲಾಹನ ಕಡೆಯಿಂದ ಬರುವ ಯಾವುದೇ ವಸ್ತುವಿನ ಮೇಲೆ ಅಧಿಕಾರ ಹೊಂದಿರುವವರು ಯಾರು?” ಅಲ್ಲ, ವಾಸ್ತವವಾಗಿ, ನೀವು ಮಾಡುತ್ತಿರುವ ಕರ್ಮಗಳನ್ನು ಅಲ್ಲಾಹು ಸೂಕ್ಷ್ಮವಾಗಿ ತಿಳಿಯುತ್ತಾನೆ.
আৰবী তাফছীৰসমূহ:
بَلْ ظَنَنْتُمْ اَنْ لَّنْ یَّنْقَلِبَ الرَّسُوْلُ وَالْمُؤْمِنُوْنَ اِلٰۤی اَهْلِیْهِمْ اَبَدًا وَّزُیِّنَ ذٰلِكَ فِیْ قُلُوْبِكُمْ وَظَنَنْتُمْ ظَنَّ السَّوْءِ ۖۚ— وَكُنْتُمْ قَوْمًا بُوْرًا ۟
ಸಂದೇಶವಾಹಕರು ಮತ್ತು ಸತ್ಯವಿಶ್ವಾಸಿಗಳು ಎಂದಿಗೂ ಅವರ ಕುಟುಂಬಕ್ಕೆ ಮರಳಿ ಬರುವುದಿಲ್ಲ ಎಂದೇ ನೀವು ಭಾವಿಸಿದಿರಿ. ಅದನ್ನು ನಿಮ್ಮ ಹೃದಯಗಳಲ್ಲಿ ಅಂದವಾಗಿ ತೋರಿಸಿಕೊಡಲಾಗಿತ್ತು. ನೀವು ಕೆಟ್ಟ ಭಾವನೆಗಳನ್ನು ಹೊಂದಿದ್ದಿರಿ. ನೀವು ನಾಶಕ್ಕೆ ತುತ್ತಾದ ಜನರಾಗಿದ್ದೀರಿ.
আৰবী তাফছীৰসমূহ:
وَمَنْ لَّمْ یُؤْمِنْ بِاللّٰهِ وَرَسُوْلِهٖ فَاِنَّاۤ اَعْتَدْنَا لِلْكٰفِرِیْنَ سَعِیْرًا ۟
ಯಾರು ಅಲ್ಲಾಹನಲ್ಲಿ ಮತ್ತು ಅವನ ಸಂದೇಶವಾಹಕರಲ್ಲಿ ವಿಶ್ವಾಸವಿಡುವುದಿಲ್ಲವೋ ಅಂತಹ ಸತ್ಯನಿಷೇಧಿಗಳಿಗೆ ನಾವು ಜ್ವಲಿಸುವ ನರಕಾಗ್ನಿಯನ್ನು ಸಿದ್ಧಗೊಳಿಸಿದ್ದೇವೆ.
আৰবী তাফছীৰসমূহ:
وَلِلّٰهِ مُلْكُ السَّمٰوٰتِ وَالْاَرْضِ ؕ— یَغْفِرُ لِمَنْ یَّشَآءُ وَیُعَذِّبُ مَنْ یَّشَآءُ ؕ— وَكَانَ اللّٰهُ غَفُوْرًا رَّحِیْمًا ۟
ಭೂಮ್ಯಾಕಾಶಗಳ ಸಾರ್ವಭೌಮತ್ವವು ಅಲ್ಲಾಹನಿಗೆ ಸೇರಿದ್ದು. ಅವನು ಇಚ್ಛಿಸುವವರಿಗೆ ಕ್ಷಮಿಸುತ್ತಾನೆ ಮತ್ತು ಅವನು ಇಚ್ಛಿಸುವವರನ್ನು ಶಿಕ್ಷಿಸುತ್ತಾನೆ. ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
আৰবী তাফছীৰসমূহ:
سَیَقُوْلُ الْمُخَلَّفُوْنَ اِذَا انْطَلَقْتُمْ اِلٰی مَغَانِمَ لِتَاْخُذُوْهَا ذَرُوْنَا نَتَّبِعْكُمْ ۚ— یُرِیْدُوْنَ اَنْ یُّبَدِّلُوْا كَلٰمَ اللّٰهِ ؕ— قُلْ لَّنْ تَتَّبِعُوْنَا كَذٰلِكُمْ قَالَ اللّٰهُ مِنْ قَبْلُ ۚ— فَسَیَقُوْلُوْنَ بَلْ تَحْسُدُوْنَنَا ؕ— بَلْ كَانُوْا لَا یَفْقَهُوْنَ اِلَّا قَلِیْلًا ۟
ನೀವು ಯುದ್ಧಾರ್ಜಿತ ಸೊತ್ತನ್ನು ವಶಪಡಿಸಲು ಹೋಗುವಾಗ ಹಿಂದೆ ಉಳಿದವರು ಹೇಳುತ್ತಾರೆ: “ನಾವು ಕೂಡ ನಿಮ್ಮೊಡನೆ ಬರಲು ಅನುಮತಿ ನೀಡಿರಿ.” ಅವರು ಅಲ್ಲಾಹನ ವಚನಗಳನ್ನು ಬದಲಾಯಿಸಲು ಬಯಸುತ್ತಾರೆ. ಹೇಳಿರಿ: “ನೀವು ಎಂದಿಗೂ ನಮ್ಮ ಜೊತೆಗೆ ಬರುವುದಿಲ್ಲ ಎಂದು ಅಲ್ಲಾಹು ಮೊದಲೇ ಹೇಳಿಬಿಟ್ಟಿದ್ದಾನೆ.” ಆಗ ಅವರು ಹೇಳುತ್ತಾರೆ: “ವಾಸ್ತವವಾಗಿ, ನಿಮಗೆ ನಮ್ಮ ಮೇಲೆ ಅಸೂಯೆಯಿದೆ.” ಅಲ್ಲ, ವಾಸ್ತವವಾಗಿ ಅವರು ಸ್ವಲ್ಪವೇ ಅರ್ಥಮಾಡಿಕೊಳ್ಳುತ್ತಾರೆ.
আৰবী তাফছীৰসমূহ:
قُلْ لِّلْمُخَلَّفِیْنَ مِنَ الْاَعْرَابِ سَتُدْعَوْنَ اِلٰی قَوْمٍ اُولِیْ بَاْسٍ شَدِیْدٍ تُقَاتِلُوْنَهُمْ اَوْ یُسْلِمُوْنَ ۚ— فَاِنْ تُطِیْعُوْا یُؤْتِكُمُ اللّٰهُ اَجْرًا حَسَنًا ۚ— وَاِنْ تَتَوَلَّوْا كَمَا تَوَلَّیْتُمْ مِّنْ قَبْلُ یُعَذِّبْكُمْ عَذَابًا اَلِیْمًا ۟
ಮರುಭೂಮಿ ನಿವಾಸಿಗಳಲ್ಲಿ ಹಿಂದೆ ಉಳಿದವರೊಡನೆ ಹೇಳಿರಿ: “ಮಹಾ ಪರಾಕ್ರಮಿಗಳಾದ ಜನರ ವಿರುದ್ಧ ಯುದ್ಧ ಮಾಡಲು ನಿಮ್ಮನ್ನು ಸದ್ಯವೇ ಕರೆಯಲಾಗುವುದು. ನೀವು ಅವರೊಡನೆ ಯುದ್ಧ ಮಾಡಬೇಕು ಅಥವಾ ಅವರು ಮುಸಲ್ಮಾನರಾಗಬೇಕು! ನೀವು ಈ ಆಜ್ಞೆಯನ್ನು ಪಾಲಿಸಿದರೆ ಅಲ್ಲಾಹು ನಿಮಗೆ ಉತ್ತಮ ಪ್ರತಿಫಲವನ್ನು ನೀಡುವನು. ಇದಕ್ಕೆ ಮೊದಲು ನೀವು ಮುಖ ತಿರುಗಿಸಿ ನಡೆದಂತೆ ಈಗಲೂ ನೀವು ಮುಖ ತಿರುಗಿಸಿ ನಡೆದರೆ ಅವನು ನಿಮಗೆ ಯಾತನಾಮಯ ಶಿಕ್ಷೆಯನ್ನು ನೀಡುವನು.”
আৰবী তাফছীৰসমূহ:
لَیْسَ عَلَی الْاَعْمٰی حَرَجٌ وَّلَا عَلَی الْاَعْرَجِ حَرَجٌ وَّلَا عَلَی الْمَرِیْضِ حَرَجٌ ؕ— وَمَنْ یُّطِعِ اللّٰهَ وَرَسُوْلَهٗ یُدْخِلْهُ جَنّٰتٍ تَجْرِیْ مِنْ تَحْتِهَا الْاَنْهٰرُ ۚ— وَمَنْ یَّتَوَلَّ یُعَذِّبْهُ عَذَابًا اَلِیْمًا ۟۠
ಕುರುಡನ ಮೇಲೆ ದೋಷವಿಲ್ಲ. ಕುಂಟನ ಮೇಲೆ ದೋಷವಿಲ್ಲ. ರೋಗಿಯ ಮೇಲೂ ದೋಷವಿಲ್ಲ. ಯಾರು ಅಲ್ಲಾಹು ಮತ್ತು ಅವನ ಸಂದೇಶವಾಹಕರನ್ನು ಅನುಸರಿಸುತ್ತಾನೋ ಅವನನ್ನು ಅಲ್ಲಾಹು ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿಗೆ ಪ್ರವೇಶ ಮಾಡಿಸುವನು. ಯಾರು ಮುಖ ತಿರುಗಿಸಿ ನಡೆಯುತ್ತಾನೋ ಅವನಿಗೆ ಅಲ್ಲಾಹು ಯಾತನಾಮಯ ಶಿಕ್ಷೆಯನ್ನು ನೀಡುತ್ತಾನೆ.
আৰবী তাফছীৰসমূহ:
لَقَدْ رَضِیَ اللّٰهُ عَنِ الْمُؤْمِنِیْنَ اِذْ یُبَایِعُوْنَكَ تَحْتَ الشَّجَرَةِ فَعَلِمَ مَا فِیْ قُلُوْبِهِمْ فَاَنْزَلَ السَّكِیْنَةَ عَلَیْهِمْ وَاَثَابَهُمْ فَتْحًا قَرِیْبًا ۟ۙ
ಆ ಮರದ ಕೆಳಗೆ ನಿಮ್ಮ ಮುಂದೆ ಪ್ರತಿಜ್ಞೆ ಮಾಡುತ್ತಿದ್ದ ಆ ಸತ್ಯವಿಶ್ವಾಸಿಗಳ ಬಗ್ಗೆ ಅಲ್ಲಾಹು ಸಂಪ್ರೀತನಾಗಿದ್ದಾನೆ. ಅವರ ಹೃದಯಗಳಲ್ಲಿರುವುದು ಏನೆಂದು ಅವನಿಗೆ ತಿಳಿದಿದೆ. ಅವನು ಅವರಿಗೆ ಮನಃಶಾಂತಿಯನ್ನು ಇಳಿಸಿಕೊಟ್ಟನು ಮತ್ತು ಹತ್ತಿರದಲ್ಲೇ ಇರುವ ವಿಜಯವನ್ನು ಅವರಿಗೆ ಪ್ರತಿಫಲವಾಗಿ ನೀಡಿದನು.
আৰবী তাফছীৰসমূহ:
وَّمَغَانِمَ كَثِیْرَةً یَّاْخُذُوْنَهَا ؕ— وَكَانَ اللّٰهُ عَزِیْزًا حَكِیْمًا ۟
ಅವರು ವಶಪಡಿಸುವಂತಹ ಹೇರಳ ಯುದ್ಧಾರ್ಜಿತ ಸೊತ್ತನ್ನು ಅವನು ಅವರಿಗೆ ನೀಡಿದನು. ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.
আৰবী তাফছীৰসমূহ:
وَعَدَكُمُ اللّٰهُ مَغَانِمَ كَثِیْرَةً تَاْخُذُوْنَهَا فَعَجَّلَ لَكُمْ هٰذِهٖ وَكَفَّ اَیْدِیَ النَّاسِ عَنْكُمْ ۚ— وَلِتَكُوْنَ اٰیَةً لِّلْمُؤْمِنِیْنَ وَیَهْدِیَكُمْ صِرَاطًا مُّسْتَقِیْمًا ۟ۙ
ನೀವು ವಶಪಡಿಸುವಂತಹ ಹೇರಳ ಯುದ್ಧಾರ್ಜಿತ ಸೊತ್ತನ್ನು ಅಲ್ಲಾಹು ನಿಮಗೆ ವಾಗ್ದಾನ ಮಾಡಿದ್ದಾನೆ. ಅವನು ನಿಮಗೆ ಇದನ್ನು (ಖೈಬರ್ ಯುದ್ಧದ ಸೊತ್ತನ್ನು) ಬೇಗನೇ ನೀಡಿದನು. ಜನರ ಕೈಗಳನ್ನು ನಿಮ್ಮಿಂದ ತಡೆದನು. ಅದು ಸತ್ಯವಿಶ್ವಾಸಿಗಳಿಗೆ ಒಂದು ದೃಷ್ಟಾಂತವಾಗುವುದಕ್ಕಾಗಿ ಮತ್ತು ಅವನು ನಿಮ್ಮನ್ನು ನೇರಮಾರ್ಗಕ್ಕೆ ಮುನ್ನಡೆಸುವುದಕ್ಕಾಗಿ.
আৰবী তাফছীৰসমূহ:
وَّاُخْرٰی لَمْ تَقْدِرُوْا عَلَیْهَا قَدْ اَحَاطَ اللّٰهُ بِهَا ؕ— وَكَانَ اللّٰهُ عَلٰی كُلِّ شَیْءٍ قَدِیْرًا ۟
ನೀವು ವಶಪಡಿಸದಂತಹ ಬೇರೆ (ಯುದ್ಧಾರ್ಜಿತ ಸೊತ್ತನ್ನು) ಕೂಡ ವಾಗ್ದಾನ ಮಾಡಿದ್ದಾನೆ. ಅಲ್ಲಾಹು ಅವುಗಳನ್ನು ಅವನ ನಿಯಂತ್ರಣದಲ್ಲಿಟ್ಟಿದ್ದಾನೆ. ಅಲ್ಲಾಹು ಎಲ್ಲ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.
আৰবী তাফছীৰসমূহ:
وَلَوْ قَاتَلَكُمُ الَّذِیْنَ كَفَرُوْا لَوَلَّوُا الْاَدْبَارَ ثُمَّ لَا یَجِدُوْنَ وَلِیًّا وَّلَا نَصِیْرًا ۟
ಆ ಸತ್ಯನಿಷೇಧಿಗಳು ನಿಮ್ಮೊಂದಿಗೆ ಯುದ್ಧ ಮಾಡಿದರೆ ಅವರು ಬೆನ್ನು ತೋರಿಸಿ ಓಡುತ್ತಾರೆ. ನಂತರ ಅವರು ಯಾವುದೇ ರಕ್ಷಕನನ್ನು ಅಥವಾ ಸಹಾಯಕನನ್ನು ಕಾಣುವುದಿಲ್ಲ.
আৰবী তাফছীৰসমূহ:
سُنَّةَ اللّٰهِ الَّتِیْ قَدْ خَلَتْ مِنْ قَبْلُ ۖۚ— وَلَنْ تَجِدَ لِسُنَّةِ اللّٰهِ تَبْدِیْلًا ۟
ಅದು ಮೊದಲಿನಿಂದಲೇ ನಡೆದು ಬಂದಿರುವ ಅಲ್ಲಾಹನ ನಿಯಮವಾಗಿದೆ. ಅಲ್ಲಾಹನ ನಿಯಮಕ್ಕೆ ಬದಲಾವಣೆ ತರುವವರನ್ನು ನೀವು ಕಾಣಲಾರಿರಿ.
আৰবী তাফছীৰসমূহ:
وَهُوَ الَّذِیْ كَفَّ اَیْدِیَهُمْ عَنْكُمْ وَاَیْدِیَكُمْ عَنْهُمْ بِبَطْنِ مَكَّةَ مِنْ بَعْدِ اَنْ اَظْفَرَكُمْ عَلَیْهِمْ ؕ— وَكَانَ اللّٰهُ بِمَا تَعْمَلُوْنَ بَصِیْرًا ۟
ನಿಮಗೆ ಅವರ (ವೈರಿಗಳ) ವಿರುದ್ಧ ಗೆಲುವನ್ನು ನೀಡಿದ ಬಳಿಕ ಮಕ್ಕಾದಲ್ಲಿ ಅವರ ಕೈಗಳನ್ನು ನಿಮ್ಮಿಂದ ಮತ್ತು ನಿಮ್ಮ ಕೈಗಳನ್ನು ಅವರಿಂದ ತಡೆದದ್ದು ಅವನೇ. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳನ್ನು ವೀಕ್ಷಿಸುತ್ತಿದ್ದಾನೆ.
আৰবী তাফছীৰসমূহ:
هُمُ الَّذِیْنَ كَفَرُوْا وَصَدُّوْكُمْ عَنِ الْمَسْجِدِ الْحَرَامِ وَالْهَدْیَ مَعْكُوْفًا اَنْ یَّبْلُغَ مَحِلَّهٗ ؕ— وَلَوْلَا رِجَالٌ مُّؤْمِنُوْنَ وَنِسَآءٌ مُّؤْمِنٰتٌ لَّمْ تَعْلَمُوْهُمْ اَنْ تَطَـُٔوْهُمْ فَتُصِیْبَكُمْ مِّنْهُمْ مَّعَرَّةٌ بِغَیْرِ عِلْمٍ ۚ— لِیُدْخِلَ اللّٰهُ فِیْ رَحْمَتِهٖ مَنْ یَّشَآءُ ۚ— لَوْ تَزَیَّلُوْا لَعَذَّبْنَا الَّذِیْنَ كَفَرُوْا مِنْهُمْ عَذَابًا اَلِیْمًا ۟
ಅವರೇ ಸತ್ಯವನ್ನು ನಿಷೇಧಿಸಿದವರು, ಪವಿತ್ರ ಮಸೀದಿಯಿಂದ ನಿಮ್ಮನ್ನು ತಡೆದವರು ಮತ್ತು ಬಲಿಮೃಗಗಳು ಅವುಗಳನ್ನು ಬಲಿ ನೀಡುವ ಸ್ಥಳಕ್ಕೆ ತಲುಪದಂತೆ ತಡೆಹಿಡಿದವರು. ನೀವು ತಿಳಿದಿರದ (ಅನೇಕ) ಸತ್ಯವಿಶ್ವಾಸಿ ಪುರುಷರು ಮತ್ತು (ಅನೇಕ) ಸತ್ಯವಿಶ್ವಾಸಿ ಮಹಿಳೆಯರು (ಮಕ್ಕಾದಲ್ಲಿ) ಇರದಿದ್ದಲ್ಲಿ—ಅಂದರೆ ನೀವು ಅವರನ್ನು ತುಳಿದು (ಹತ್ಯೆ ಮಾಡಿ), ಅದರಿಂದ ನೀವು ತಿಳಿಯದೆ ನಿಮಗೆ ಅನಾಹುತ ಎರಗುವ ಸಾಧ್ಯತೆ ಇರದಿದ್ದಲ್ಲಿ (ನೀವು ಅವರ ವಿರುದ್ಧ ಯುದ್ಧ ಮಾಡಲು ಅಲ್ಲಾಹು ನಿಮಗೆ ಅನುಮತಿ ನೀಡುತ್ತಿದ್ದನು). ಇದು ಅಲ್ಲಾಹು ಅವನು ಇಚ್ಛಿಸುವವರನ್ನು ಅವನ ದಯೆಯಲ್ಲಿ ಸೇರಿಸುವುದಕ್ಕಾಗಿದೆ. ಅವರು (ಮಕ್ಕಾದಲ್ಲಿರುವ ಸತ್ಯವಿಶ್ವಾಸಿಗಳು ಮತ್ತು ಸತ್ಯನಿಷೇಧಿಗಳು) ಬೇರೆ ಬೇರೆಯಾಗಿ ವಾಸಿಸುತ್ತಿದ್ದರೆ ಅವರಲ್ಲಿರುವ ಸತ್ಯನಿಷೇಧಿಗಳಿಗೆ ನಾವು ಯಾತನಾಮಯ ಶಿಕ್ಷೆಯನ್ನು ನೀಡುತ್ತಿದ್ದೆವು.
আৰবী তাফছীৰসমূহ:
اِذْ جَعَلَ الَّذِیْنَ كَفَرُوْا فِیْ قُلُوْبِهِمُ الْحَمِیَّةَ حَمِیَّةَ الْجَاهِلِیَّةِ فَاَنْزَلَ اللّٰهُ سَكِیْنَتَهٗ عَلٰی رَسُوْلِهٖ وَعَلَی الْمُؤْمِنِیْنَ وَاَلْزَمَهُمْ كَلِمَةَ التَّقْوٰی وَكَانُوْۤا اَحَقَّ بِهَا وَاَهْلَهَا ؕ— وَكَانَ اللّٰهُ بِكُلِّ شَیْءٍ عَلِیْمًا ۟۠
ಸತ್ಯನಿಷೇಧಿಗಳು ತಮ್ಮ ಹೃದಯಗಳಲ್ಲಿ ದುರಭಿಮಾನವನ್ನು—ಅಜ್ಞಾನಕಾಲದ ದುರಭಿಮಾನವನ್ನು—ಇಟ್ಟುಕೊಂಡಿದ್ದ ಸಂದರ್ಭ! ಅಲ್ಲಾಹು ಅವನ ಸಂದೇಶವಾಹಕರ ಮೇಲೆ ಮತ್ತು ಸತ್ಯವಿಶ್ವಾಸಿಗಳ ಮೇಲೆ ಅವನ ಕಡೆಯ ಮನಃಶಾಂತಿಯನ್ನು ಇಳಿಸಿಕೊಟ್ಟನು. ಅಲ್ಲಾಹು ಅವರನ್ನು ದೇವಭಯದಲ್ಲಿ ದೃಢವಾಗಿ ನಿಲ್ಲಿಸಿದನು. ಅವರು ಅದಕ್ಕೆ ಅರ್ಹರು ಮತ್ತು ಅದರ ಹಕ್ಕುಳ್ಳವರಾಗಿದ್ದರು. ಅಲ್ಲಾಹು ಎಲ್ಲ ವಿಷಯಗಳ ಬಗ್ಗೆ ತಿಳಿದವನಾಗಿದ್ದಾನೆ.
আৰবী তাফছীৰসমূহ:
لَقَدْ صَدَقَ اللّٰهُ رَسُوْلَهُ الرُّءْیَا بِالْحَقِّ ۚ— لَتَدْخُلُنَّ الْمَسْجِدَ الْحَرَامَ اِنْ شَآءَ اللّٰهُ اٰمِنِیْنَ ۙ— مُحَلِّقِیْنَ رُءُوْسَكُمْ وَمُقَصِّرِیْنَ ۙ— لَا تَخَافُوْنَ ؕ— فَعَلِمَ مَا لَمْ تَعْلَمُوْا فَجَعَلَ مِنْ دُوْنِ ذٰلِكَ فَتْحًا قَرِیْبًا ۟
ಅಲ್ಲಾಹು ತನ್ನ ಸಂದೇಶವಾಹಕರಿಗೆ ತೋರಿಸಿದ ಕನಸನ್ನು ಸಾಕಾರಗೊಳಿಸಿದನು. ಅಂದರೆ ಅಲ್ಲಾಹು ಇಚ್ಛಿಸಿದರೆ ನೀವು ನಿರ್ಭಯರಾಗಿ, ತಲೆಗೂದಲು ಬೋಳಿಸಿ ಮತ್ತು ಕಿರಿದಾಗಿಸಿದ ಸ್ಥಿತಿಯಲ್ಲಿ ಯಾರನ್ನೂ ಭಯಪಡದೆ ಪವಿತ್ರ ಮಸೀದಿಯನ್ನು ಪ್ರವೇಶಿಸುವಿರಿ (ಎಂಬ ಕನಸು). ನೀವು ತಿಳಿಯದೇ ಇರುವ ವಿಷಯಗಳನ್ನು ಅವನು ತಿಳಿದಿದ್ದಾನೆ. ಆದ್ದರಿಂದ ಅವನು ಅದಕ್ಕೆ ಮೊದಲು ಹತ್ತಿರದಲ್ಲೇ ಇರುವ ಒಂದು ವಿಜಯವನ್ನು ನಿಮಗೆ ಸುಗಮಗೊಳಿಸಿದನು.[1]
[1] ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಹಾಬಿಗಳೊಡನೆ ಶಾಂತಿಯಿಂದ ಉಮ್ರ ನಿರ್ವಹಿಸುವ ಕನಸನ್ನು ಕಂಡರು. ಆದ್ದರಿಂದ ಅವರು ಉಮ್ರ ನಿರ್ವಹಿಸುವುದಕ್ಕಾಗಿ ಮಕ್ಕಾಗೆ ಹೊರಟರು. ಆದರೆ ದಾರಿ ಮಧ್ಯೆ ಕುರೈಶರು ಅವರನ್ನು ಮಕ್ಕಾ ಪ್ರವೇಶಿಸದಂತೆ ತಡೆದರು. ಒಂದು ಯುದ್ಧದ ಹಂತಕ್ಕೆ ತಲುಪಿದ್ದ ಸಂಘರ್ಷವು ನಂತರ ಹುದೈಬಿಯಾ ಒಪ್ಪಂದದ ಮೂಲಕ ಕೊನೆಯಾಯಿತು. ಈ ಒಪ್ಪಂದದ ಪ್ರಕಾರ ಈ ವರ್ಷ ಮುಸ್ಲಿಮರು ಉಮ್ರ ನಿರ್ಹಹಿಸಬಾರದು. ಆದರೆ ಮುಂದಿನ ವರ್ಷ ನಿರ್ವಹಿಸಬಹುದು. ಮುಂದಿನ ವರ್ಷ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಹಾಬಿಗಳೊಡನೆ ಶಾಂತಿಯಿಂದ ಉಮ್ರ ನಿರ್ವಹಿಸಿದರು.
আৰবী তাফছীৰসমূহ:
هُوَ الَّذِیْۤ اَرْسَلَ رَسُوْلَهٗ بِالْهُدٰی وَدِیْنِ الْحَقِّ لِیُظْهِرَهٗ عَلَی الدِّیْنِ كُلِّهٖ ؕ— وَكَفٰی بِاللّٰهِ شَهِیْدًا ۟ؕ
ಅವನೇ ಸನ್ಮಾರ್ಗ ಮತ್ತು ಸತ್ಯಧರ್ಮದೊಂದಿಗೆ ತನ್ನ ಸಂದೇಶವಾಹಕರನ್ನು ಕಳುಹಿಸಿದವನು. ಅದನ್ನು ಎಲ್ಲ ಧರ್ಮಗಳ ಮೇಲೆ ವಿಜಯಿಯಾಗಿಸುವುದಕ್ಕಾಗಿ. ಸಾಕ್ಷಿಯಾಗಿ ಅಲ್ಲಾಹು ಸಾಕು.
আৰবী তাফছীৰসমূহ:
مُحَمَّدٌ رَّسُوْلُ اللّٰهِ ؕ— وَالَّذِیْنَ مَعَهٗۤ اَشِدَّآءُ عَلَی الْكُفَّارِ رُحَمَآءُ بَیْنَهُمْ تَرٰىهُمْ رُكَّعًا سُجَّدًا یَّبْتَغُوْنَ فَضْلًا مِّنَ اللّٰهِ وَرِضْوَانًا ؗ— سِیْمَاهُمْ فِیْ وُجُوْهِهِمْ مِّنْ اَثَرِ السُّجُوْدِ ؕ— ذٰلِكَ مَثَلُهُمْ فِی التَّوْرٰىةِ ۛۖۚ— وَمَثَلُهُمْ فِی الْاِنْجِیْلِ ۛ۫ۚ— كَزَرْعٍ اَخْرَجَ شَطْاَهٗ فَاٰزَرَهٗ فَاسْتَغْلَظَ فَاسْتَوٰی عَلٰی سُوْقِهٖ یُعْجِبُ الزُّرَّاعَ لِیَغِیْظَ بِهِمُ الْكُفَّارَ ؕ— وَعَدَ اللّٰهُ الَّذِیْنَ اٰمَنُوْا وَعَمِلُوا الصّٰلِحٰتِ مِنْهُمْ مَّغْفِرَةً وَّاَجْرًا عَظِیْمًا ۟۠
ಮುಹಮ್ಮದ್ ಅಲ್ಲಾಹನ ಸಂದೇಶವಾಹಕರು. ಅವರ ಜೊತೆಗಿರುವವರು ಸತ್ಯನಿಷೇಧಿಗಳೊಡನೆ ಕಠೋರವಾಗಿ ವರ್ತಿಸುವವರು ಮತ್ತು ತಮ್ಮೊಳಗೆ ಅಪಾರ ದಯೆಯುಳ್ಳವರಾಗಿದ್ದಾರೆ. ಅವರು ಅಲ್ಲಾಹನ ಔದಾರ್ಯ ಮತ್ತು ಸಂಪ್ರೀತಿಯನ್ನು ಹುಡುಕುತ್ತಾ ತಲೆಬಾಗುವುದನ್ನು ಮತ್ತು ಸಾಷ್ಟಾಂಗ ಮಾಡುವುದನ್ನು ನೀವು ಕಾಣುವಿರಿ. ಸಾಷ್ಟಾಂಗ ಮಾಡಿದ ಕಾರಣದಿಂದಾಗಿ ಅವರ ಮುಖಗಳಲ್ಲಿ ಅವರ ಗುರುತು ಇದೆ. ಇದು ತೌರಾತಿನಲ್ಲಿರುವ ಅವರ ವಿವರಣೆಯಾಗಿದೆ. ಇಂಜೀಲಿನಲ್ಲಿರುವ ಅವರ ವಿವರಣೆಯು ಒಂದು ಸಸ್ಯದಂತೆ. ಅದರ ಮೊಳಕೆಯನ್ನು ಹೊರತಂದಿತು. ನಂತರ ಅದಕ್ಕೆ ಪುಷ್ಠಿಯನ್ನು ನೀಡಿತು. ನಂತರ ಅದು ಬಲವನ್ನು ಪಡೆದು ರೈತರಿಗೆ ಸಂತೋಷವನ್ನು ನೀಡುವ ರೀತಿಯಲ್ಲಿ ಅದರ ಕಾಂಡದ ಮೇಲೆ ನೆಟ್ಟಗೆ ನಿಂತಿತು. ಅವರ ಮೂಲಕ ಅಲ್ಲಾಹು ಸತ್ಯನಿಷೇಧಿಗಳನ್ನು ರೇಗಿಸುವುದಕ್ಕಾಗಿ. ಅವರಲ್ಲಿರುವ ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರಿಗೆ ಅಲ್ಲಾಹು ಕ್ಷಮೆ ಮತ್ತು ಮಹಾ ಪ್ರತಿಫಲವನ್ನು ವಾಗ್ದಾನ ಮಾಡಿದ್ದಾನೆ.
আৰবী তাফছীৰসমূহ:
 
অৰ্থানুবাদ ছুৰা: ছুৰা আল-ফাতাহ
ছুৰাৰ তালিকা পৃষ্ঠা নং
 
আল-কোৰআনুল কাৰীমৰ অৰ্থানুবাদ - الترجمة الكنادية - অনুবাদসমূহৰ সূচীপত্ৰ

ترجمة معاني القرآن الكريم إلى اللغة الكنادية ترجمها محمد حمزة بتور.

বন্ধ