কুরআনুল কারীমের অর্থসমূহের অনুবাদ - الترجمة الكنادية * - অনুবাদসমূহের সূচী

XML CSV Excel API
Please review the Terms and Policies

অর্থসমূহের অনুবাদ সূরা: সূরা আল-হাশর   আয়াত:

ಸೂರ ಅಲ್ -ಹಶ್ರ್

سَبَّحَ لِلّٰهِ مَا فِی السَّمٰوٰتِ وَمَا فِی الْاَرْضِ ۚ— وَهُوَ الْعَزِیْزُ الْحَكِیْمُ ۟
ಭೂಮ್ಯಾಕಾಶಗಳಲ್ಲಿರುವ ಎಲ್ಲಾ ವಸ್ತುಗಳೂ ಅಲ್ಲಾಹನ ಪರಿಶುದ್ಧಿಯನ್ನು ಕೊಂಡಾಡುತ್ತಿವೆ. ಅವನು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.
আরবি তাফসীরসমূহ:
هُوَ الَّذِیْۤ اَخْرَجَ الَّذِیْنَ كَفَرُوْا مِنْ اَهْلِ الْكِتٰبِ مِنْ دِیَارِهِمْ لِاَوَّلِ الْحَشْرِ ؔؕ— مَا ظَنَنْتُمْ اَنْ یَّخْرُجُوْا وَظَنُّوْۤا اَنَّهُمْ مَّا نِعَتُهُمْ حُصُوْنُهُمْ مِّنَ اللّٰهِ فَاَتٰىهُمُ اللّٰهُ مِنْ حَیْثُ لَمْ یَحْتَسِبُوْا وَقَذَفَ فِیْ قُلُوْبِهِمُ الرُّعْبَ یُخْرِبُوْنَ بُیُوْتَهُمْ بِاَیْدِیْهِمْ وَاَیْدِی الْمُؤْمِنِیْنَ ۗ— فَاعْتَبِرُوْا یٰۤاُولِی الْاَبْصَارِ ۟
ಅವನೇ ಪ್ರಥಮ ಗಡೀಪಾರಿನಲ್ಲಿ ಗ್ರಂಥದವರಲ್ಲಿ ಸೇರಿದ ಸತ್ಯನಿಷೇಧಿಗಳನ್ನು ಅವರ ಮನೆಗಳಿಂದ ಹೊರದಬ್ಬಿದವನು.[1] ಅವರು ಹೊರಹೋಗುವರೆಂದು ನೀವು ಊಹಿಸಿಯೂ ಇರಲಿಲ್ಲ. ಅವರ ಕೋಟೆಗಳು ಅವರನ್ನು ಅಲ್ಲಾಹನ ಶಿಕ್ಷೆಯಿಂದ ಕಾಪಾಡುತ್ತವೆ ಎಂದು ಅವರು ಭಾವಿಸಿದ್ದರು. ಆದರೆ ಅವರು ನಿರೀಕ್ಷಿಸಿಯೇ ಇರದ ಕಡೆಯಿಂದ ಅಲ್ಲಾಹನ ಶಿಕ್ಷೆಯು ಅವರ ಬಳಿಗೆ ಬಂತು. ಅಲ್ಲಾಹು ಅವರ ಹೃದಯದಲ್ಲಿ ಭೀತಿಯನ್ನು ಬಿತ್ತಿದನು. ಅವರು ಅವರ ಕೈಗಳಿಂದಲೇ ಅವರ ಮನೆಗಳನ್ನು ನಾಶ ಮಾಡುತ್ತಿದ್ದರು. ಸತ್ಯವಿಶ್ವಾಸಿಗಳ ಕೈಗಳು ಕೂಡ (ಅವುಗಳನ್ನು ನಾಶ ಮಾಡಿಸುತ್ತಿದ್ದವು). ಆದ್ದರಿಂದ ಓ ದೃಷ್ಟಿಯುಳ್ಳವರೇ, ಇದರಿಂದ ಪಾಠ ಕಲಿತುಕೊಳ್ಳಿರಿ.
[1] ಮದೀನದ ಆಸುಪಾಸಿನಲ್ಲಿ ಮೂರು ಯಹೂದಿ ಗೋತ್ರಗಳು ವಾಸವಾಗಿದ್ದವು. ಬನೂ ನದೀರ್, ಬನೂ ಕುರೈಝ ಮತ್ತು ಬನೂ ಕೈನುಕಾ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮದೀನಕ್ಕೆ ಬಂದಾಗ ಇವರೊಡನೆ ಶಾಂತಿ ಒಪ್ಪಂದ ಮಾಡಿಕೊಂಡಿದ್ದರು. ಆದರೆ ಅವಕಾಶ ದೊರೆತಾಗಲೆಲ್ಲಾ ಇವರು ರಹಸ್ಯ ಮಾತುಕತೆ ನಡೆಸಿ ಮುಸ್ಲಿಮರ ವಿರುದ್ಧ ವೈರಿಗಳೊಡನೆ ಕೈ ಜೋಡಿಸುತ್ತಿದ್ದರು. ಒಮ್ಮೆ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬನೂ ನದೀರ್ ಗೋತ್ರದವರ ಬಳಿಗೆ ಹೋದಾಗ ಅವರು ಒಂದು ದೊಡ್ಡ ಕಲ್ಲನ್ನು ಉರುಳಿಸಿ ಪ್ರವಾದಿಯವರನ್ನು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೊಲೆ ಮಾಡುವ ಸಂಚು ನಡೆಸಿದ್ದರು. ದಿವ್ಯವಾಣಿಯ ಮೂಲಕ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇದರ ಬಗ್ಗೆ ತಿಳಿದು ಮದೀನಕ್ಕೆ ಮರಳಿದರು. ಒಪ್ಪಂದವನ್ನು ಮುರಿದ ಕಾರಣ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರ ಮೇಲೆ ದಾಳಿ ಮಾಡಿದರು. ಅವರು ತಮ್ಮ ಕೋಟೆಗಳಲ್ಲಿ ಆಶ್ರಯಪಡೆದರು. ಹಲವು ದಿನಗಳ ಕಾಲ ಕೋಟೆಯೊಳಗಿದ್ದು ನಂತರ ಗತ್ಯಂತರವಿಲ್ಲದೆ ಅವರು ಶರಣಾಗಿ ಪ್ರಾಣವನ್ನು ಉಳಿಸಿಕೊಳ್ಳಲು ಮದೀನದಿಂದ ಹೊರಹೋಗುತ್ತೇವೆಂದರು. ಇದನ್ನು ಪ್ರಥಮ ಗಡೀಪಾರು ಎಂದು ಕರೆಯಲಾಗುತ್ತದೆ. ಅವರು ಮದೀನದಿಂದ ಹೊರಹೋಗಿ ಖೈಬರ್‌ನಲ್ಲಿ ಆಶ್ರಯಪಡೆದರು. ಎರಡನೇ ಖಲೀಫ ಉಮರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ತಮ್ಮ ಆಡಳಿತಕಾಲದಲ್ಲಿ ಇವರು ಅಲ್ಲಿಂದ ಶಾಮ್ (ಸಿರಿಯಾ ಜೋರ್ಡಾನ್ ಪ್ರದೇಶ)ಗೆ ಗಡೀಪಾರ ಮಾಡಿದರು.
আরবি তাফসীরসমূহ:
وَلَوْلَاۤ اَنْ كَتَبَ اللّٰهُ عَلَیْهِمُ الْجَلَآءَ لَعَذَّبَهُمْ فِی الدُّنْیَا ؕ— وَلَهُمْ فِی الْاٰخِرَةِ عَذَابُ النَّارِ ۟
ಅಲ್ಲಾಹು ಅವರಿಗೆ ಊರು ಬಿಡುವುದನ್ನು ವಿಧಿಸದಿರುತ್ತಿದ್ದರೆ ಭೂಲೋಕದಲ್ಲೇ ಅವರನ್ನು ಶಿಕ್ಷಿಸುತ್ತಿದ್ದನು. ಪರಲೋಕದಲ್ಲಿ ಅವರಿಗೆ ನರಕಾಗ್ನಿಯ ಶಿಕ್ಷೆಯಿದೆ.
আরবি তাফসীরসমূহ:
ذٰلِكَ بِاَنَّهُمْ شَآقُّوا اللّٰهَ وَرَسُوْلَهٗ ۚ— وَمَنْ یُّشَآقِّ اللّٰهَ فَاِنَّ اللّٰهَ شَدِیْدُ الْعِقَابِ ۟
ಅದೇಕೆಂದರೆ ಅವರು ಅಲ್ಲಾಹು ಮತ್ತು ಅವನ ಸಂದೇಶವಾಹಕರಿಗೆ ವಿರುದ್ಧವಾಗಿ ಸಾಗಿದರು. ಯಾರು ಅಲ್ಲಾಹನಿಗೆ ವಿರುದ್ಧವಾಗಿ ಸಾಗುತ್ತಾರೋ—ಅವರಿಗೆ ಅಲ್ಲಾಹು ಅತಿಕಠೋರ ಶಿಕ್ಷೆಯನ್ನು ನೀಡುತ್ತಾನೆ.
আরবি তাফসীরসমূহ:
مَا قَطَعْتُمْ مِّنْ لِّیْنَةٍ اَوْ تَرَكْتُمُوْهَا قَآىِٕمَةً عَلٰۤی اُصُوْلِهَا فَبِاِذْنِ اللّٰهِ وَلِیُخْزِیَ الْفٰسِقِیْنَ ۟
ನೀವು ಖರ್ಜೂರದ ಮರಗಳಲ್ಲಿ ಯಾವುದನ್ನೆಲ್ಲಾ ಕಡಿದಿದ್ದೀರೋ ಮತ್ತು ಯಾವುದನ್ನೆಲ್ಲಾ ಅದರ ಕಾಂಡದ ಮೇಲೆ ನಿಲ್ಲುವಂತೆ ಹಾಗೆಯೇ ಬಿಟ್ಟಿದ್ದೀರೋ—ಇವೆಲ್ಲವೂ ಅಲ್ಲಾಹನ ಅಪ್ಪಣೆಯಿಂದಲೇ ಆಗಿತ್ತು. ಅದು ಅಲ್ಲಾಹು ಆ ದುಷ್ಕರ್ಮಿಗಳನ್ನು ಅವಮಾನಿಸುವುದಕ್ಕಾಗಿತ್ತು.
আরবি তাফসীরসমূহ:
وَمَاۤ اَفَآءَ اللّٰهُ عَلٰی رَسُوْلِهٖ مِنْهُمْ فَمَاۤ اَوْجَفْتُمْ عَلَیْهِ مِنْ خَیْلٍ وَّلَا رِكَابٍ وَّلٰكِنَّ اللّٰهَ یُسَلِّطُ رُسُلَهٗ عَلٰی مَنْ یَّشَآءُ ؕ— وَاللّٰهُ عَلٰی كُلِّ شَیْءٍ قَدِیْرٌ ۟
ಅವರ ಆಸ್ತಿಗಳಲ್ಲಿ ಏನನ್ನೆಲ್ಲಾ ಅಲ್ಲಾಹು ಅವನ ಸಂದೇಶವಾಹಕರಿಗೆ ವಶಪಡಿಸಿಕೊಟ್ಟನೋ ಅದಕ್ಕಾಗಿ ನೀವು ಕುದುರೆಗಳನ್ನೋ ಒಂಟೆಗಳನ್ನೋ ಓಡಿಸಬೇಕಾಗಿ ಬರಲಿಲ್ಲ.[1] ಅಲ್ಲಾಹು ಅವನು ಇಚ್ಛಿಸುವವರ ಮೇಲೆ ಅವನ ಸಂದೇಶವಾಹಕರಿಗೆ ಅಧಿಕಾರವನ್ನು ನೀಡುತ್ತಾನೆ. ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.
[1] ಬನೂ ನದೀರ್ ವಾಸವಾಗಿದ್ದ ಸ್ಥಳವು ಮದೀನದಿಂದ ಕೇವಲ ಮೂರು ಅಥವಾ ನಾಲ್ಕು ಮೈಲು ದೂರದಲ್ಲಿತ್ತು. ಆದ್ದರಿಂದ ಅದನ್ನು ವಶಪಡಿಸಲು ಮುಸ್ಲಿಮರಿಗೆ ದೀರ್ಘ ಯಾತ್ರೆ ಮಾಡುವ ಅಗತ್ಯ ಬರಲಿಲ್ಲ. ಅಥವಾ ಅದನ್ನು ವಶಪಡಿಸಲು ಮುಸ್ಲಿಮರಿಗೆ ಒಂಟೆ ಅಥವಾ ಕುದುರೆಗಳನ್ನು ಓಡಿಸಬೇಕಾಗಿ ಬರಲಿಲ್ಲ. ಮಾತ್ರವಲ್ಲದೆ, ಅದನ್ನು ಒಪ್ಪಂದದ ಮೂಲಕ ವಶಪಡಿಸಲಾಯಿತು. ಯುದ್ಧವಿಲ್ಲದೆ ವಶವಾಗುವ ಸಂಪತ್ತನ್ನು ಫೈಅ್ ಎಂದು ಕರೆಯಲಾಗುತ್ತದೆ. ಯುದ್ಧದಿಂದ ವಶವಾಗುವ ಸಂಪತ್ತನ್ನು ಗನೀಮತ್ (ಸಮರಾರ್ಜಿತ ಸೊತ್ತು) ಎಂದು ಕರೆಯಲಾಗುತ್ತದೆ.
আরবি তাফসীরসমূহ:
مَاۤ اَفَآءَ اللّٰهُ عَلٰی رَسُوْلِهٖ مِنْ اَهْلِ الْقُرٰی فَلِلّٰهِ وَلِلرَّسُوْلِ وَلِذِی الْقُرْبٰی وَالْیَتٰمٰی وَالْمَسٰكِیْنِ وَابْنِ السَّبِیْلِ ۙ— كَیْ لَا یَكُوْنَ دُوْلَةً بَیْنَ الْاَغْنِیَآءِ مِنْكُمْ ؕ— وَمَاۤ اٰتٰىكُمُ الرَّسُوْلُ فَخُذُوْهُ ۚ— وَمَا نَهٰىكُمْ عَنْهُ فَانْتَهُوْا ۚ— وَاتَّقُوا اللّٰهَ ؕ— اِنَّ اللّٰهَ شَدِیْدُ الْعِقَابِ ۟ۘ
ವಿವಿಧ ಊರುಗಳ ಜನರ ಆಸ್ತಿಗಳಿಂದ ಅಲ್ಲಾಹು ತನ್ನ ಸಂದೇಶವಾಹಕರಿಗೆ ಏನನ್ನು ವಶಪಡಿಸಿಕೊಟ್ಟನೋ, ಅದು ಅಲ್ಲಾಹನಿಗೆ, ಸಂದೇಶವಾಹಕರಿಗೆ, ಹತ್ತಿರದ ಸಂಬಂಧಿಕರಿಗೆ, ಅನಾಥರಿಗೆ, ಕಡುಬಡವರಿಗೆ ಮತ್ತು ಪ್ರಯಾಣಿಕರಿಗೆ ಇರುವುದಾಗಿದೆ. ಇದೇಕೆಂದರೆ, ಧನವು ನಿಮ್ಮಲ್ಲಿನ ಶ್ರೀಮಂತರ ನಡುವೆ ಮಾತ್ರ ಚಲಾವಣೆಯಾಗದಿರುವುದಕ್ಕಾಗಿ. ಸಂದೇಶವಾಹಕರು ನಿಮಗೆ ಏನು ಕೊಡುತ್ತಾರೋ ಅದನ್ನು ಸ್ವೀಕರಿಸಿರಿ ಮತ್ತು ಅವರು ನಿಮಗೆ ಏನು ವಿರೋಧಿಸುತ್ತಾರೋ ಅದರಿಂದ ದೂರವಿರಿ. ಅಲ್ಲಾಹನನ್ನು ಭಯಪಡಿರಿ. ನಿಶ್ತಯವಾಗಿಯೂ ಅಲ್ಲಾಹು ಅತಿಕಠೋರವಾಗಿ ಶಿಕ್ಷಿಸುವವನಾಗಿದ್ದಾನೆ.
আরবি তাফসীরসমূহ:
لِلْفُقَرَآءِ الْمُهٰجِرِیْنَ الَّذِیْنَ اُخْرِجُوْا مِنْ دِیَارِهِمْ وَاَمْوَالِهِمْ یَبْتَغُوْنَ فَضْلًا مِّنَ اللّٰهِ وَرِضْوَانًا وَّیَنْصُرُوْنَ اللّٰهَ وَرَسُوْلَهٗ ؕ— اُولٰٓىِٕكَ هُمُ الصّٰدِقُوْنَ ۟ۚ
(ಆ ಧನವು) ತಮ್ಮ ಮನೆಗಳಿಂದ ಮತ್ತು ಆಸ್ತಿಗಳಿಂದ ಹೊರದಬ್ಬಲಾದ ಬಡ ಮುಹಾಜಿರರಿಗೆ ಇರುವುದಾಗಿದೆ. ಅವರು ಅಲ್ಲಾಹನ ಔದಾರ್ಯ ಮತ್ತು ಸಂಪ್ರೀತಿಯನ್ನು ಹುಡುಕುತ್ತಾರೆ ಮತ್ತು ಅಲ್ಲಾಹು ಹಾಗೂ ಅವನ ಸಂದೇಶವಾಹಕರಿಗೆ ಸಹಾಯ ಮಾಡುತ್ತಾರೆ. ಅವರೇ ಸತ್ಯವಂತರು.
আরবি তাফসীরসমূহ:
وَالَّذِیْنَ تَبَوَّءُو الدَّارَ وَالْاِیْمَانَ مِنْ قَبْلِهِمْ یُحِبُّوْنَ مَنْ هَاجَرَ اِلَیْهِمْ وَلَا یَجِدُوْنَ فِیْ صُدُوْرِهِمْ حَاجَةً مِّمَّاۤ اُوْتُوْا وَیُؤْثِرُوْنَ عَلٰۤی اَنْفُسِهِمْ وَلَوْ كَانَ بِهِمْ خَصَاصَةٌ ۫ؕ— وَمَنْ یُّوْقَ شُحَّ نَفْسِهٖ فَاُولٰٓىِٕكَ هُمُ الْمُفْلِحُوْنَ ۟ۚ
ಅವರಿಗಿಂತ ಮೊದಲೇ ಆ ಮನೆಯಲ್ಲಿ (ಮದೀನದಲ್ಲಿ) ಮತ್ತು ಸತ್ಯವಿಶ್ವಾಸದಲ್ಲಿ ವಾಸ್ತವ್ಯವನ್ನು ಸಿದ್ಧಗೊಳಿಸಿದವರಿಗೂ (ಇರುವುದಾಗಿದೆ). ಅವರು ತಮ್ಮ ಬಳಿಗೆ ವಲಸೆ (ಹಿಜ್ರ) ಮಾಡಿದವರನ್ನು ಪ್ರೀತಿಸುತ್ತಾರೆ.[1] ಮುಹಾಜಿರರಿಗೆ ಏನು ಕೊಡಲಾಗುತ್ತದೋ ಅದರ ಬಗ್ಗೆ ಇವರಿಗೆ ಇವರ ಹೃದಯದಲ್ಲಿ ಯಾವುದೇ ಅಸಮಾಧಾನವು ಉಂಟಾಗುವುದಿಲ್ಲ. ತಮಗೆ ಎಷ್ಟೇ ಅಗತ್ಯವಿದ್ದರೂ ಸಹ ಇವರು ಅವರಿಗೆ ಆದ್ಯತೆಯನ್ನು ನೀಡುತ್ತಾರೆ. ಯಾರನ್ನು ಅವರ ಮನಸ್ಸಿನ ಜಿಪುಣತನದಿಂದ ರಕ್ಷಿಸಲಾಗಿದೆಯೋ ಅವರೇ ಯಶಸ್ವಿಯಾದವರು.
[1] ಮುಹಾಜಿರ್‌ಗಳೆಂದರೆ ಮಕ್ಕಾದಿಂದ ಮದೀನಕ್ಕೆ ವಲಸೆ ಬಂದವರು. ಅವರಿಗೆ ಸಂರಕ್ಷಣೆ ನೀಡಿ ಸಹಾಯ ಮಾಡಿದ ಮದೀನ ನಿವಾಸಿಗಳಾದ ಮುಸ್ಲಿಮರನ್ನು ಅನ್ಸಾರ್ ಎಂದು ಕರೆಯಲಾಗುತ್ತದೆ.
আরবি তাফসীরসমূহ:
وَالَّذِیْنَ جَآءُوْ مِنْ بَعْدِهِمْ یَقُوْلُوْنَ رَبَّنَا اغْفِرْ لَنَا وَلِاِخْوَانِنَا الَّذِیْنَ سَبَقُوْنَا بِالْاِیْمَانِ وَلَا تَجْعَلْ فِیْ قُلُوْبِنَا غِلًّا لِّلَّذِیْنَ اٰمَنُوْا رَبَّنَاۤ اِنَّكَ رَءُوْفٌ رَّحِیْمٌ ۟۠
ಅವರ ಬಳಿಕ ಬಂದವರಿಗೂ (ಇರುವುದಾಗಿದೆ). ಅವರು ಹೇಳುತ್ತಾರೆ: “ನಮ್ಮ ಪರಿಪಾಲಕನೇ! ನಮಗೆ ಮತ್ತು ಸತ್ಯವಿಶ್ವಾಸದಲ್ಲಿ ನಮಗಿಂತ ಮುಂಚೂಣಿಯಲ್ಲಿರುವ ನಮ್ಮ ಸಹೋದರರಿಗೆ ಕ್ಷಮಿಸು. ಸತ್ಯವಿಶ್ವಾಸಿಗಳ ಬಗ್ಗೆ ನಮ್ಮ ಹೃದಯದಲ್ಲಿ ಯಾವುದೇ ದ್ವೇಷವನ್ನು ಉಂಟುಮಾಡಬೇಡ. ನಮ್ಮ ಪರಿಪಾಲಕನೇ! ನಿಶ್ಚಯವಾಗಿಯೂ ನೀನು ಕೃಪೆ ತೋರುವವನು ಮತ್ತು ದಯೆ ತೋರುವವನಾಗಿರುವೆ.”
আরবি তাফসীরসমূহ:
اَلَمْ تَرَ اِلَی الَّذِیْنَ نَافَقُوْا یَقُوْلُوْنَ لِاِخْوَانِهِمُ الَّذِیْنَ كَفَرُوْا مِنْ اَهْلِ الْكِتٰبِ لَىِٕنْ اُخْرِجْتُمْ لَنَخْرُجَنَّ مَعَكُمْ وَلَا نُطِیْعُ فِیْكُمْ اَحَدًا اَبَدًا ۙ— وَّاِنْ قُوْتِلْتُمْ لَنَنْصُرَنَّكُمْ ؕ— وَاللّٰهُ یَشْهَدُ اِنَّهُمْ لَكٰذِبُوْنَ ۟
ಆ ಕಪಟವಿಶ್ವಾಸಿಗಳನ್ನು ನೀವು ನೋಡಿಲ್ಲವೇ? ಗ್ರಂಥದವರಲ್ಲಿ ಸೇರಿದ ತಮ್ಮ ಸತ್ಯನಿಷೇಧಿ ಸಹೋದರರೊಂದಿಗೆ ಅವರು ಹೇಳುತ್ತಾರೆ: “ನಿಮ್ಮನ್ನು ಗಡೀಪಾರು ಮಾಡಲಾದರೆ ಖಂಡಿತವಾಗಿಯೂ ನಾವು ನಿಮ್ಮೊಂದಿಗೆ ಹೊರಹೋಗುತ್ತೇವೆ. ನಿಮ್ಮ ವಿಷಯದಲ್ಲಿ ನಾವು ಯಾರ ಮಾತನ್ನೂ ಕೇಳುವುದಿಲ್ಲ. ನಿಮ್ಮ ವಿರುದ್ಧ ಯುದ್ಧ ನಡೆದರೆ ಖಂಡಿತವಾಗಿಯೂ ನಾವು ನಿಮಗೆ ಸಹಾಯ ಮಾಡುತ್ತೇವೆ.” ನಿಶ್ಚಯವಾಗಿಯೂ ಅವರು ಸುಳ್ಳು ಹೇಳುತ್ತಿದ್ದಾರೆಂದು ಅಲ್ಲಾಹು ಸಾಕ್ಷಿ ನುಡಿಯುತ್ತಾನೆ.
আরবি তাফসীরসমূহ:
لَىِٕنْ اُخْرِجُوْا لَا یَخْرُجُوْنَ مَعَهُمْ ۚ— وَلَىِٕنْ قُوْتِلُوْا لَا یَنْصُرُوْنَهُمْ ۚ— وَلَىِٕنْ نَّصَرُوْهُمْ لَیُوَلُّنَّ الْاَدْبَارَ ۫— ثُمَّ لَا یُنْصَرُوْنَ ۟
ಅವರನ್ನು (ಯಹೂದಿಗಳನ್ನು) ಗಡೀಪಾರು ಮಾಡಲಾದರೆ ಇವರು (ಕಪಟವಿಶ್ವಾಸಿಗಳು) ಅವರ ಜೊತೆಗೆ ಖಂಡಿತ ಹೊರಹೋಗುವುದಿಲ್ಲ. ಅವರ ವಿರುದ್ಧ ಯುದ್ಧ ನಡೆದರೆ ಇವರು ಅವರಿಗೆ ಸಹಾಯ ಮಾಡುವುದೂ ಇಲ್ಲ. ಇವರು ಅವರಿಗೆ ಸಹಾಯ ಮಾಡಲು ಬಂದರೂ ಇವರು ಖಂಡಿತವಾಗಿಯೂ ಬೆನ್ನು ತೋರಿಸಿ ಓಡುತ್ತಾರೆ. ನಂತರ ಅವರಿಗೆ ಯಾವುದೇ ಸಹಾಯವೂ ದೊರೆಯುವುದಿಲ್ಲ.
আরবি তাফসীরসমূহ:
لَاَنْتُمْ اَشَدُّ رَهْبَةً فِیْ صُدُوْرِهِمْ مِّنَ اللّٰهِ ؕ— ذٰلِكَ بِاَنَّهُمْ قَوْمٌ لَّا یَفْقَهُوْنَ ۟
ಅವರ ಹೃದಯಗಳಲ್ಲಿ ಅಲ್ಲಾಹನಿಗಿಂತಲೂ ಹೆಚ್ಚು ನಿಮ್ಮ ಬಗ್ಗೆ ಭಯವಿದೆ. ಅದೇಕೆಂದರೆ, ಅವರು (ಸತ್ಯಸಂಗತಿಯನ್ನು) ಅರ್ಥಮಾಡಿಕೊಳ್ಳದ ಜನರಾಗಿದ್ದಾರೆ.
আরবি তাফসীরসমূহ:
لَا یُقَاتِلُوْنَكُمْ جَمِیْعًا اِلَّا فِیْ قُرًی مُّحَصَّنَةٍ اَوْ مِنْ وَّرَآءِ جُدُرٍ ؕ— بَاْسُهُمْ بَیْنَهُمْ شَدِیْدٌ ؕ— تَحْسَبُهُمْ جَمِیْعًا وَّقُلُوْبُهُمْ شَتّٰی ؕ— ذٰلِكَ بِاَنَّهُمْ قَوْمٌ لَّا یَعْقِلُوْنَ ۟ۚ
ಅವರೆಲ್ಲರೂ ಒಟ್ಟಾಗಿಯೂ ಕೂಡ ನಿಮ್ಮೊಡನೆ ಯುದ್ಧ ಮಾಡಲಾರರು—ಸುಭದ್ರ ಕೋಟೆಗಳಿರುವ ನಗರಗಳಿಂದ ಅಥವಾ ಗೋಡೆಗಳ ಹಿಂಭಾಗದಿಂದ ಹೊರತು. ಅವರೊಳಗಿನ ಆಂತರಿಕ ಕಲಹವು ಬಹಳ ತೀಕ್ಷ್ಣವಾಗಿದೆ. ಅವರು ಒಗ್ಗಟ್ಟಿನಲ್ಲಿದ್ದಾರೆಂದು ನೀವು ಭಾವಿಸುತ್ತೀರಿ. ಆದರೆ ಅವರ ಹೃದಯಗಳು ಭಿನ್ನವಾಗಿವೆ. ಅದೇಕೆಂದರೆ, ಅವರು (ಸತ್ಯಸಂಗತಿಯನ್ನು) ಅರ್ಥಮಾಡಿಕೊಳ್ಳದ ಜನರಾಗಿದ್ದಾರೆ.
আরবি তাফসীরসমূহ:
كَمَثَلِ الَّذِیْنَ مِنْ قَبْلِهِمْ قَرِیْبًا ذَاقُوْا وَبَالَ اَمْرِهِمْ ۚ— وَلَهُمْ عَذَابٌ اَلِیْمٌ ۟ۚ
(ಅವರ ಸ್ಥಿತಿಯು) ಅವರಿಗಿಂತ ಸ್ವಲ್ಪ ಮೊದಲಿನವರ ಸ್ಥಿತಿಯಂತೆ![1] ಅವರು ತಮ್ಮ ಕಾರ್ಯದ ದುಷ್ಫಲವನ್ನು ಅನುಭವಿಸಿದರು. ಅವರಿಗೆ ವೇದನಾಭರಿತ ಶಿಕ್ಷೆಯಿದೆ.
[1] ಅಂದರೆ ಬದ್ರ್ ಯುದ್ಧದಲ್ಲಿ ಸೋತು ಸುಣ್ಣವಾಗಿ ಹೋದ ಕುರೈಶರು, ಅಥವಾ ಯಹೂದಿಗಳ ಇನ್ನೊಂದು ಗೋತ್ರವಾದ ಬನೂ ಕೈನುಕಾದವರು.
আরবি তাফসীরসমূহ:
كَمَثَلِ الشَّیْطٰنِ اِذْ قَالَ لِلْاِنْسَانِ اكْفُرْ ۚ— فَلَمَّا كَفَرَ قَالَ اِنِّیْ بَرِیْٓءٌ مِّنْكَ اِنِّیْۤ اَخَافُ اللّٰهَ رَبَّ الْعٰلَمِیْنَ ۟
ಶೈತಾನನ ಸ್ಥಿತಿಯಂತೆ! ಅವನು ಮನುಷ್ಯನೊಡನೆ “ಸತ್ಯನಿಷೇಧಿಯಾಗು” ಎಂದು ಹೇಳಿದ ಸಂದರ್ಭ. ಮನುಷ್ಯ ಸತ್ಯನಿಷೇಧಿಯಾದಾಗ ಅವನು ಹೇಳುತ್ತಾನೆ: “ನಿಶ್ಚಯವಾಗಿಯೂ ನಾನು ನಿನ್ನಿಂದ ದೂರ ಸರಿದಿದ್ದೇನೆ. ನಿಶ್ಚಯವಾಗಿಯೂ ನಾನು ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹನನ್ನು ಭಯಪಡುತ್ತೇನೆ.”
আরবি তাফসীরসমূহ:
فَكَانَ عَاقِبَتَهُمَاۤ اَنَّهُمَا فِی النَّارِ خَالِدَیْنِ فِیْهَا ؕ— وَذٰلِكَ جَزٰٓؤُا الظّٰلِمِیْنَ ۟۠
ಹೀಗೆ ಅವರಿಬ್ಬರ ಅಂತ್ಯವು ಅವರಿಬ್ಬರೂ ನರಕದಲ್ಲಿ ಶಾಶ್ವತವಾಗಿ ವಾಸಿಸುವುದಾಗಿದೆ. ಅದು ಅಕ್ರಮಿಗಳಿಗಿರುವ ಪ್ರತಿಫಲವಾಗಿದೆ.
আরবি তাফসীরসমূহ:
یٰۤاَیُّهَا الَّذِیْنَ اٰمَنُوا اتَّقُوا اللّٰهَ وَلْتَنْظُرْ نَفْسٌ مَّا قَدَّمَتْ لِغَدٍ ۚ— وَاتَّقُوا اللّٰهَ ؕ— اِنَّ اللّٰهَ خَبِیْرٌ بِمَا تَعْمَلُوْنَ ۟
ಓ ಸತ್ಯವಿಶ್ವಾಸಿಗಳೇ! ಅಲ್ಲಾಹನನ್ನು ಭಯಪಡಿರಿ. ಪ್ರತಿಯೊಬ್ಬರೂ ನಾಳೆಗಾಗಿ (ಪುನರುತ್ಥಾನ ದಿನಕ್ಕಾಗಿ) ಏನು ಮಾಡಿದ್ದೇನೆಂದು ನೋಡಿಕೊಳ್ಳಲಿ. ಅಲ್ಲಾಹನನ್ನು ಭಯಪಡಿರಿ. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ಸೂಕ್ಷ್ಮಜ್ಞಾನವುಳ್ಳವನಾಗಿದ್ದಾನೆ.
আরবি তাফসীরসমূহ:
وَلَا تَكُوْنُوْا كَالَّذِیْنَ نَسُوا اللّٰهَ فَاَنْسٰىهُمْ اَنْفُسَهُمْ ؕ— اُولٰٓىِٕكَ هُمُ الْفٰسِقُوْنَ ۟
ನೀವು ಅಲ್ಲಾಹನನ್ನು (ಅಲ್ಲಾಹನ ನಿಯಮಗಳನ್ನು) ಮರೆತುಬಿಟ್ಟ ಜನರಂತೆ ಆಗಬೇಡಿ. ಆಗ ಅವರು ಅವರನ್ನೇ ಮರೆಯುವಂತೆ ಅಲ್ಲಾಹು ಮಾಡಿದನು. ಅವರೇ ದುಷ್ಕರ್ಮಿಗಳು.
আরবি তাফসীরসমূহ:
لَا یَسْتَوِیْۤ اَصْحٰبُ النَّارِ وَاَصْحٰبُ الْجَنَّةِ ؕ— اَصْحٰبُ الْجَنَّةِ هُمُ الْفَآىِٕزُوْنَ ۟
ನರಕವಾಸಿಗಳು ಮತ್ತು ಸ್ವರ್ಗವಾಸಿಗಳು ಸಮಾನರಲ್ಲ. ಸ್ವರ್ಗವಾಸಿಗಳೇ ಯಶಸ್ವಿಯಾದವರು.
আরবি তাফসীরসমূহ:
لَوْ اَنْزَلْنَا هٰذَا الْقُرْاٰنَ عَلٰی جَبَلٍ لَّرَاَیْتَهٗ خَاشِعًا مُّتَصَدِّعًا مِّنْ خَشْیَةِ اللّٰهِ ؕ— وَتِلْكَ الْاَمْثَالُ نَضْرِبُهَا لِلنَّاسِ لَعَلَّهُمْ یَتَفَكَّرُوْنَ ۟
ನಾವು ಈ ಕುರ್‌ಆನನ್ನು ಒಂದು ಪರ್ವತದ ಮೇಲೆ ಅವತೀರ್ಣಗೊಳಿಸುತ್ತಿದ್ದರೆ ಅಲ್ಲಾಹನ ಭಯದಿಂದ ಅದು ವಿನಮ್ರವಾಗಿ ಒಡೆದು ಚೂರಾಗುವುದನ್ನು ನೀವು ಕಾಣುತ್ತಿದ್ದಿರಿ. ನಾವು ಜನರಿಗೆ ಈ ಉದಾಹರಣೆಗಳನ್ನು ವಿವರಿಸಿಕೊಡುತ್ತೇವೆ. ಅವರು ಆಲೋಚಿಸುವುದಕ್ಕಾಗಿ.
আরবি তাফসীরসমূহ:
هُوَ اللّٰهُ الَّذِیْ لَاۤ اِلٰهَ اِلَّا هُوَ ۚ— عٰلِمُ الْغَیْبِ وَالشَّهَادَةِ ۚ— هُوَ الرَّحْمٰنُ الرَّحِیْمُ ۟
ಅವನೇ ಅಲ್ಲಾಹು! ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಅವನು ದೃಶ್ಯ-ಅದೃಶ್ಯವನ್ನು ತಿಳಿದವನು. ಅವನು ಪರಮ ದಯಾಮಯನು ಮತ್ತು ಕರುಣಾನಿಧಿಯಾಗಿದ್ದಾನೆ.
আরবি তাফসীরসমূহ:
هُوَ اللّٰهُ الَّذِیْ لَاۤ اِلٰهَ اِلَّا هُوَ ۚ— اَلْمَلِكُ الْقُدُّوْسُ السَّلٰمُ الْمُؤْمِنُ الْمُهَیْمِنُ الْعَزِیْزُ الْجَبَّارُ الْمُتَكَبِّرُ ؕ— سُبْحٰنَ اللّٰهِ عَمَّا یُشْرِكُوْنَ ۟
ಅವನೇ ಅಲ್ಲಾಹು! ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಅವನು ಸಾಮ್ರಾಟನು, ಪರಮ ಪರಿಶುದ್ಧನು, (ಎಲ್ಲಾ ಕುಂದು-ಕೊರತೆಗಳಿಂದ ಮತ್ತು ಅಪೂರ್ಣತೆಗಳಿಂದ) ಸುರಕ್ಷಿತನು, ಅಭಯದಾತನು, ಮೇಲ್ನೋಟ ವಹಿಸುವವನು, ಪ್ರಬಲನು, ಸರ್ವಾಧಿಕಾರಿ ಮತ್ತು ಮಹಾಮಹಿಮನು. ಅವರು ಮಾಡುವ ಸಹಭಾಗಿತ್ವ (ಶಿರ್ಕ್) ದಿಂದ ಅಲ್ಲಾಹು ಎಷ್ಟೋ ಪರಿಶುದ್ಧನಾಗಿದ್ದಾನೆ.
আরবি তাফসীরসমূহ:
هُوَ اللّٰهُ الْخَالِقُ الْبَارِئُ الْمُصَوِّرُ لَهُ الْاَسْمَآءُ الْحُسْنٰی ؕ— یُسَبِّحُ لَهٗ مَا فِی السَّمٰوٰتِ وَالْاَرْضِ ۚ— وَهُوَ الْعَزِیْزُ الْحَكِیْمُ ۟۠
ಅವನೇ ಅಲ್ಲಾಹು! ಸೃಷ್ಟಿಕರ್ತನು, ಅಸ್ತಿತ್ವವನ್ನು ನೀಡುವವನು ಮತ್ತು ರೂಪ ನೀಡುವವನು. ಅವನಿಗೆ ಅತ್ಯುತ್ತಮವಾದ ಹೆಸರುಗಳಿವೆ. ಭೂಮ್ಯಾಕಾಶಗಳಲ್ಲಿರುವ ಎಲ್ಲಾ ವಸ್ತುಗಳೂ ಅವನ ಪರಿಶುದ್ಧಿಯನ್ನು ಕೊಂಡಾಡುತ್ತಿವೆ. ಅವನು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.
আরবি তাফসীরসমূহ:
 
অর্থসমূহের অনুবাদ সূরা: সূরা আল-হাশর
সূরাসমূহের সূচী পৃষ্ঠার নাম্বার
 
কুরআনুল কারীমের অর্থসমূহের অনুবাদ - الترجمة الكنادية - অনুবাদসমূহের সূচী

ترجمة معاني القرآن الكريم إلى اللغة الكنادية ترجمها محمد حمزة بتور.

বন্ধ