Check out the new design

ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ * - សន្ទស្សន៍នៃការបកប្រែ

PDF XML CSV Excel API
Please review the Terms and Policies

ការបកប្រែអត្ថន័យ ជំពូក​: អាល់ហ្វាត់ហ៍   អាយ៉ាត់:
وَهُوَ الَّذِیْ كَفَّ اَیْدِیَهُمْ عَنْكُمْ وَاَیْدِیَكُمْ عَنْهُمْ بِبَطْنِ مَكَّةَ مِنْ بَعْدِ اَنْ اَظْفَرَكُمْ عَلَیْهِمْ ؕ— وَكَانَ اللّٰهُ بِمَا تَعْمَلُوْنَ بَصِیْرًا ۟
ನಿಮಗೆ ಅವರ (ವೈರಿಗಳ) ವಿರುದ್ಧ ಗೆಲುವನ್ನು ನೀಡಿದ ಬಳಿಕ ಮಕ್ಕಾದಲ್ಲಿ ಅವರ ಕೈಗಳನ್ನು ನಿಮ್ಮಿಂದ ಮತ್ತು ನಿಮ್ಮ ಕೈಗಳನ್ನು ಅವರಿಂದ ತಡೆದದ್ದು ಅವನೇ. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳನ್ನು ವೀಕ್ಷಿಸುತ್ತಿದ್ದಾನೆ.
តាហ្វសៀរជាភាសា​អារ៉ាប់ជាច្រេីន:
هُمُ الَّذِیْنَ كَفَرُوْا وَصَدُّوْكُمْ عَنِ الْمَسْجِدِ الْحَرَامِ وَالْهَدْیَ مَعْكُوْفًا اَنْ یَّبْلُغَ مَحِلَّهٗ ؕ— وَلَوْلَا رِجَالٌ مُّؤْمِنُوْنَ وَنِسَآءٌ مُّؤْمِنٰتٌ لَّمْ تَعْلَمُوْهُمْ اَنْ تَطَـُٔوْهُمْ فَتُصِیْبَكُمْ مِّنْهُمْ مَّعَرَّةٌ بِغَیْرِ عِلْمٍ ۚ— لِیُدْخِلَ اللّٰهُ فِیْ رَحْمَتِهٖ مَنْ یَّشَآءُ ۚ— لَوْ تَزَیَّلُوْا لَعَذَّبْنَا الَّذِیْنَ كَفَرُوْا مِنْهُمْ عَذَابًا اَلِیْمًا ۟
ಅವರೇ ಸತ್ಯವನ್ನು ನಿಷೇಧಿಸಿದವರು, ಪವಿತ್ರ ಮಸೀದಿಯಿಂದ ನಿಮ್ಮನ್ನು ತಡೆದವರು ಮತ್ತು ಬಲಿಮೃಗಗಳು ಅವುಗಳನ್ನು ಬಲಿ ನೀಡುವ ಸ್ಥಳಕ್ಕೆ ತಲುಪದಂತೆ ತಡೆಹಿಡಿದವರು. ನೀವು ತಿಳಿದಿರದ (ಅನೇಕ) ಸತ್ಯವಿಶ್ವಾಸಿ ಪುರುಷರು ಮತ್ತು (ಅನೇಕ) ಸತ್ಯವಿಶ್ವಾಸಿ ಮಹಿಳೆಯರು (ಮಕ್ಕಾದಲ್ಲಿ) ಇರದಿದ್ದಲ್ಲಿ—ಅಂದರೆ ನೀವು ಅವರನ್ನು ತುಳಿದು (ಹತ್ಯೆ ಮಾಡಿ), ಅದರಿಂದ ನೀವು ತಿಳಿಯದೆ ನಿಮಗೆ ಅನಾಹುತ ಎರಗುವ ಸಾಧ್ಯತೆ ಇರದಿದ್ದಲ್ಲಿ (ನೀವು ಅವರ ವಿರುದ್ಧ ಯುದ್ಧ ಮಾಡಲು ಅಲ್ಲಾಹು ನಿಮಗೆ ಅನುಮತಿ ನೀಡುತ್ತಿದ್ದನು). ಇದು ಅಲ್ಲಾಹು ಅವನು ಇಚ್ಛಿಸುವವರನ್ನು ಅವನ ದಯೆಯಲ್ಲಿ ಸೇರಿಸುವುದಕ್ಕಾಗಿದೆ. ಅವರು (ಮಕ್ಕಾದಲ್ಲಿರುವ ಸತ್ಯವಿಶ್ವಾಸಿಗಳು ಮತ್ತು ಸತ್ಯನಿಷೇಧಿಗಳು) ಬೇರೆ ಬೇರೆಯಾಗಿ ವಾಸಿಸುತ್ತಿದ್ದರೆ ಅವರಲ್ಲಿರುವ ಸತ್ಯನಿಷೇಧಿಗಳಿಗೆ ನಾವು ಯಾತನಾಮಯ ಶಿಕ್ಷೆಯನ್ನು ನೀಡುತ್ತಿದ್ದೆವು.
តាហ្វសៀរជាភាសា​អារ៉ាប់ជាច្រេីន:
اِذْ جَعَلَ الَّذِیْنَ كَفَرُوْا فِیْ قُلُوْبِهِمُ الْحَمِیَّةَ حَمِیَّةَ الْجَاهِلِیَّةِ فَاَنْزَلَ اللّٰهُ سَكِیْنَتَهٗ عَلٰی رَسُوْلِهٖ وَعَلَی الْمُؤْمِنِیْنَ وَاَلْزَمَهُمْ كَلِمَةَ التَّقْوٰی وَكَانُوْۤا اَحَقَّ بِهَا وَاَهْلَهَا ؕ— وَكَانَ اللّٰهُ بِكُلِّ شَیْءٍ عَلِیْمًا ۟۠
ಸತ್ಯನಿಷೇಧಿಗಳು ತಮ್ಮ ಹೃದಯಗಳಲ್ಲಿ ದುರಭಿಮಾನವನ್ನು—ಅಜ್ಞಾನಕಾಲದ ದುರಭಿಮಾನವನ್ನು—ಇಟ್ಟುಕೊಂಡಿದ್ದ ಸಂದರ್ಭ! ಅಲ್ಲಾಹು ಅವನ ಸಂದೇಶವಾಹಕರ ಮೇಲೆ ಮತ್ತು ಸತ್ಯವಿಶ್ವಾಸಿಗಳ ಮೇಲೆ ಅವನ ಕಡೆಯ ಮನಃಶಾಂತಿಯನ್ನು ಇಳಿಸಿಕೊಟ್ಟನು. ಅಲ್ಲಾಹು ಅವರನ್ನು ದೇವಭಯದಲ್ಲಿ ದೃಢವಾಗಿ ನಿಲ್ಲಿಸಿದನು. ಅವರು ಅದಕ್ಕೆ ಅರ್ಹರು ಮತ್ತು ಅದರ ಹಕ್ಕುಳ್ಳವರಾಗಿದ್ದರು. ಅಲ್ಲಾಹು ಎಲ್ಲ ವಿಷಯಗಳ ಬಗ್ಗೆ ತಿಳಿದವನಾಗಿದ್ದಾನೆ.
តាហ្វសៀរជាភាសា​អារ៉ាប់ជាច្រេីន:
لَقَدْ صَدَقَ اللّٰهُ رَسُوْلَهُ الرُّءْیَا بِالْحَقِّ ۚ— لَتَدْخُلُنَّ الْمَسْجِدَ الْحَرَامَ اِنْ شَآءَ اللّٰهُ اٰمِنِیْنَ ۙ— مُحَلِّقِیْنَ رُءُوْسَكُمْ وَمُقَصِّرِیْنَ ۙ— لَا تَخَافُوْنَ ؕ— فَعَلِمَ مَا لَمْ تَعْلَمُوْا فَجَعَلَ مِنْ دُوْنِ ذٰلِكَ فَتْحًا قَرِیْبًا ۟
ಅಲ್ಲಾಹು ತನ್ನ ಸಂದೇಶವಾಹಕರಿಗೆ ತೋರಿಸಿದ ಕನಸನ್ನು ಸಾಕಾರಗೊಳಿಸಿದನು. ಅಂದರೆ ಅಲ್ಲಾಹು ಇಚ್ಛಿಸಿದರೆ ನೀವು ನಿರ್ಭಯರಾಗಿ, ತಲೆಗೂದಲು ಬೋಳಿಸಿ ಮತ್ತು ಕಿರಿದಾಗಿಸಿದ ಸ್ಥಿತಿಯಲ್ಲಿ ಯಾರನ್ನೂ ಭಯಪಡದೆ ಪವಿತ್ರ ಮಸೀದಿಯನ್ನು ಪ್ರವೇಶಿಸುವಿರಿ (ಎಂಬ ಕನಸು). ನೀವು ತಿಳಿಯದೇ ಇರುವ ವಿಷಯಗಳನ್ನು ಅವನು ತಿಳಿದಿದ್ದಾನೆ. ಆದ್ದರಿಂದ ಅವನು ಅದಕ್ಕೆ ಮೊದಲು ಹತ್ತಿರದಲ್ಲೇ ಇರುವ ಒಂದು ವಿಜಯವನ್ನು ನಿಮಗೆ ಸುಗಮಗೊಳಿಸಿದನು.[1]
[1] ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಹಾಬಿಗಳೊಡನೆ ಶಾಂತಿಯಿಂದ ಉಮ್ರ ನಿರ್ವಹಿಸುವ ಕನಸನ್ನು ಕಂಡರು. ಆದ್ದರಿಂದ ಅವರು ಉಮ್ರ ನಿರ್ವಹಿಸುವುದಕ್ಕಾಗಿ ಮಕ್ಕಾಗೆ ಹೊರಟರು. ಆದರೆ ದಾರಿ ಮಧ್ಯೆ ಕುರೈಶರು ಅವರನ್ನು ಮಕ್ಕಾ ಪ್ರವೇಶಿಸದಂತೆ ತಡೆದರು. ಒಂದು ಯುದ್ಧದ ಹಂತಕ್ಕೆ ತಲುಪಿದ್ದ ಸಂಘರ್ಷವು ನಂತರ ಹುದೈಬಿಯಾ ಒಪ್ಪಂದದ ಮೂಲಕ ಕೊನೆಯಾಯಿತು. ಈ ಒಪ್ಪಂದದ ಪ್ರಕಾರ ಈ ವರ್ಷ ಮುಸ್ಲಿಮರು ಉಮ್ರ ನಿರ್ಹಹಿಸಬಾರದು. ಆದರೆ ಮುಂದಿನ ವರ್ಷ ನಿರ್ವಹಿಸಬಹುದು. ಮುಂದಿನ ವರ್ಷ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಹಾಬಿಗಳೊಡನೆ ಶಾಂತಿಯಿಂದ ಉಮ್ರ ನಿರ್ವಹಿಸಿದರು.
តាហ្វសៀរជាភាសា​អារ៉ាប់ជាច្រេីន:
هُوَ الَّذِیْۤ اَرْسَلَ رَسُوْلَهٗ بِالْهُدٰی وَدِیْنِ الْحَقِّ لِیُظْهِرَهٗ عَلَی الدِّیْنِ كُلِّهٖ ؕ— وَكَفٰی بِاللّٰهِ شَهِیْدًا ۟ؕ
ಅವನೇ ಸನ್ಮಾರ್ಗ ಮತ್ತು ಸತ್ಯಧರ್ಮದೊಂದಿಗೆ ತನ್ನ ಸಂದೇಶವಾಹಕರನ್ನು ಕಳುಹಿಸಿದವನು. ಅದನ್ನು ಎಲ್ಲ ಧರ್ಮಗಳ ಮೇಲೆ ವಿಜಯಿಯಾಗಿಸುವುದಕ್ಕಾಗಿ. ಸಾಕ್ಷಿಯಾಗಿ ಅಲ್ಲಾಹು ಸಾಕು.
តាហ្វសៀរជាភាសា​អារ៉ាប់ជាច្រេីន:
 
ការបកប្រែអត្ថន័យ ជំពូក​: អាល់ហ្វាត់ហ៍
សន្ទស្សន៍នៃជំពូក លេខ​ទំព័រ
 
ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ - សន្ទស្សន៍នៃការបកប្រែ

បានបកប្រែដោយ​មុហាម៉ាត់ ហាំហ្សា បេតួរ។ បានអភិវឌ្ឍដោយការត្រួតពិនិត្យរបស់មជ្ឈមណ្ឌលបកប្រែរ៉ូវ៉ាទ។

បិទ