Check out the new design

ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ * - សន្ទស្សន៍នៃការបកប្រែ

PDF XML CSV Excel API
Please review the Terms and Policies

ការបកប្រែអត្ថន័យ ជំពូក​: អាល់ម៉ាអ៊ីដះ   អាយ៉ាត់:
وَحَسِبُوْۤا اَلَّا تَكُوْنَ فِتْنَةٌ فَعَمُوْا وَصَمُّوْا ثُمَّ تَابَ اللّٰهُ عَلَیْهِمْ ثُمَّ عَمُوْا وَصَمُّوْا كَثِیْرٌ مِّنْهُمْ ؕ— وَاللّٰهُ بَصِیْرٌ بِمَا یَعْمَلُوْنَ ۟
ಯಾವುದೇ ಶಿಕ್ಷೆ ಎರಗುವುದಿಲ್ಲವೆಂದು ಅವರು ಭಾವಿಸಿದರು. ಆದ್ದರಿಂದ ಅವರು ಕುರುಡರು ಮತ್ತು ಕಿವುಡರಾದರು. ನಂತರ ಅಲ್ಲಾಹು ಅವರ ಪಶ್ಚಾತ್ತಾಪವನ್ನು ಸ್ವೀಕರಿಸಿದನು. ಅನಂತರ ಪುನಃ ಅವರಲ್ಲಿ ಹೆಚ್ಚಿನವರು ಕುರುಡರು ಮತ್ತು ಕಿವುಡರಾದರು. ಅಲ್ಲಾಹು ಅವರು ಮಾಡುತ್ತಿರುವುದನ್ನು ನೋಡುತ್ತಿದ್ದಾನೆ.
តាហ្វសៀរជាភាសា​អារ៉ាប់ជាច្រេីន:
لَقَدْ كَفَرَ الَّذِیْنَ قَالُوْۤا اِنَّ اللّٰهَ هُوَ الْمَسِیْحُ ابْنُ مَرْیَمَ ؕ— وَقَالَ الْمَسِیْحُ یٰبَنِیْۤ اِسْرَآءِیْلَ اعْبُدُوا اللّٰهَ رَبِّیْ وَرَبَّكُمْ ؕ— اِنَّهٗ مَنْ یُّشْرِكْ بِاللّٰهِ فَقَدْ حَرَّمَ اللّٰهُ عَلَیْهِ الْجَنَّةَ وَمَاْوٰىهُ النَّارُ ؕ— وَمَا لِلظّٰلِمِیْنَ مِنْ اَنْصَارٍ ۟
“ಮರ್ಯಮರ ಮಗ ಮಸೀಹನೇ ಅಲ್ಲಾಹು” ಎಂದು ಹೇಳಿದವರು ಖಂಡಿತವಾಗಿಯೂ ಸತ್ಯವನ್ನು ನಿಷೇಧಿಸಿದ್ದಾರೆ. ಆದರೆ ಮಸೀಹರು ಹೇಳಿದ್ದೇನೆಂದರೆ: “ಓ ಇಸ್ರಾಯೇಲ್ ಮಕ್ಕಳೇ! ನೀವು ನನ್ನ ಮತ್ತು ನಿಮ್ಮ ಪರಿಪಾಲಕನಾದ ಅಲ್ಲಾಹನನ್ನು ಆರಾಧಿಸಿರಿ.” ಯಾರು ಅಲ್ಲಾಹನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡುತ್ತಾನೋ, ಅವನಿಗೆ ಅಲ್ಲಾಹು ಸ್ವರ್ಗವನ್ನು ಖಂಡಿತ ನಿಷೇಧಿಸಿದ್ದಾನೆ. ಅವನ ವಾಸಸ್ಥಳ ನರಕಾಗ್ನಿಯಾಗಿದೆ.[1] ಅಕ್ರಮಿಗಳಿಗೆ ಯಾವುದೇ ಸಹಾಯಕರಿಲ್ಲ.
[1] ಅಲ್ಲಾಹನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡುವುದು ಎಂದರೆ ಅಲ್ಲಾಹನ ಪ್ರಭುತ್ವ, ದೈವತ್ವ ಮತ್ತು ಹೆಸರು ಹಾಗೂ ಗುಣಲಕ್ಷಣಗಳಲ್ಲಿ ಇತರರನ್ನು ಸಹಭಾಗಿಯಾಗಿ ಮಾಡುವುದು. ಈಸಾರನ್ನು ಅಲ್ಲಾಹನ ಮಗ ಅಥವಾ ಅಲ್ಲಾಹು ಎಂದು ಕಲ್ಪಿಸುವುದು ಅಲ್ಲಾಹನೊಂದಿಗೆ ಮಾಡುವ ಸಹಭಾಗಿತ್ವವಾಗಿದೆ. ಅಲ್ಲಾಹನೊಂದಿಗೆ ಸಹಭಾಗಿತ್ವ ಮಾಡುವವರಿಗೆ ಸ್ವರ್ಗವನ್ನು ನಿಷೇಧಿಸಲಾಗಿದೆ. ಅವರು ಶಾಶ್ವತ ನರಕಶಿಕ್ಷೆಗೆ ಗುರಿಯಾಗುತ್ತಾರೆ.
តាហ្វសៀរជាភាសា​អារ៉ាប់ជាច្រេីន:
لَقَدْ كَفَرَ الَّذِیْنَ قَالُوْۤا اِنَّ اللّٰهَ ثَالِثُ ثَلٰثَةٍ ۘ— وَمَا مِنْ اِلٰهٍ اِلَّاۤ اِلٰهٌ وَّاحِدٌ ؕ— وَاِنْ لَّمْ یَنْتَهُوْا عَمَّا یَقُوْلُوْنَ لَیَمَسَّنَّ الَّذِیْنَ كَفَرُوْا مِنْهُمْ عَذَابٌ اَلِیْمٌ ۟
“ಅಲ್ಲಾಹು ಮೂವರಲ್ಲಿ ಒಬ್ಬನು” ಎಂದು ಹೇಳಿದವರು ಖಂಡಿತವಾಗಿಯೂ ಸತ್ಯನಿಷೇಧಿಗಳಾಗಿದ್ದಾರೆ.[1] ಆದರೆ ಏಕೈಕ ಆರಾಧ್ಯನಾದ ಅಲ್ಲಾಹನ ಹೊರತು ಅನ್ಯ ದೇವರಿಲ್ಲ. ಅವರು ಹಾಗೆ ಹೇಳುವುದನ್ನು ನಿಲ್ಲಿಸದಿದ್ದರೆ, ಅವರಲ್ಲಿರುವ ಸತ್ಯನಿಷೇಧಿಗಳನ್ನು ಯಾತನಾಮಯ ಶಿಕ್ಷೆಯು ಸ್ಪರ್ಶಿಸುವುದು ನಿಶ್ಚಿತ.
[1] ಕ್ರೈಸ್ತರಲ್ಲಿ ಕೆಲವರು ತ್ರಿಯೇಕತ್ವದ ಪರಿಕಲ್ಪನೆಯನ್ನು ಹೊಂದಿದ್ದಾರೆ. ಅಂದರೆ ತಂದೆ (ಅಲ್ಲಾಹು), ಮಗ (ಈಸಾ) ಮತ್ತು ಪವಿತ್ರಾತ್ಮ (ಜಿಬ್ರೀಲ್) ಎಲ್ಲರೂ ದೇವರು ಎಂಬ ಪರಿಕಲ್ಪನೆ.
តាហ្វសៀរជាភាសា​អារ៉ាប់ជាច្រេីន:
اَفَلَا یَتُوْبُوْنَ اِلَی اللّٰهِ وَیَسْتَغْفِرُوْنَهٗ ؕ— وَاللّٰهُ غَفُوْرٌ رَّحِیْمٌ ۟
ಅವರಿಗೆ ಅಲ್ಲಾಹನ ಕಡೆಗೆ ಪಶ್ಚಾತ್ತಾಪದಿಂದ ಮರಳಿ ಅವನಲ್ಲಿ ಕ್ಷಮೆಯಾಚಿಸಬಾರದೇ? ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
តាហ្វសៀរជាភាសា​អារ៉ាប់ជាច្រេីន:
مَا الْمَسِیْحُ ابْنُ مَرْیَمَ اِلَّا رَسُوْلٌ ۚ— قَدْ خَلَتْ مِنْ قَبْلِهِ الرُّسُلُ ؕ— وَاُمُّهٗ صِدِّیْقَةٌ ؕ— كَانَا یَاْكُلٰنِ الطَّعَامَ ؕ— اُنْظُرْ كَیْفَ نُبَیِّنُ لَهُمُ الْاٰیٰتِ ثُمَّ انْظُرْ اَنّٰی یُؤْفَكُوْنَ ۟
ಮರ್ಯಮರ ಮಗ ಮಸೀಹರು ಒಬ್ಬ ಸಂದೇಶವಾಹಕರು ಮಾತ್ರ. ಅವರಿಗಿಂತ ಮೊದಲು ಅನೇಕ ಸಂದೇಶವಾಹಕರು ಬಂದು ಹೋಗಿದ್ದಾರೆ. ಅವರ ತಾಯಿ ಸತ್ಯವಂತೆ. ಅವರಿಬ್ಬರೂ ಆಹಾರ ಸೇವಿಸುತ್ತಿದ್ದರು. ನಾವು ಅವರಿಗೆ ಹೇಗೆ ದೃಷ್ಟಾಂತಗಳನ್ನು ವಿವರಿಸಿಕೊಡುತ್ತೇವೆಂದು ನೋಡಿ. ನಂತರ ಅವರು ಹೇಗೆ (ಸತ್ಯದಿಂದ) ತಪ್ಪಿಹೋಗುತ್ತಿದ್ದಾರೆಂದು ನೋಡಿ.[1]
[1] ಈಸಾ (ಯೇಸು) ದೇವರಲ್ಲ ಎನ್ನುವುದಕ್ಕೆ ಇದು ಸ್ಪಷ್ಟ ಸಾಕ್ಷ್ಯವಾಗಿದೆ. ದೇವನು ನಿರಪೇಕ್ಷ. ಅವನು ಹಸಿವೆ, ನಿದ್ದೆ ಮುಂತಾದ ಮನುಷ್ಯ ಗುಣಗಳಿಂದ ಮುಕ್ತನಾಗಿದ್ದಾನೆ. ಹಸಿವೆಯಿರುವವನು, ಆಹಾರ ಸೇವಿಸುವವನು ದೇವನಾಗಲು ಸಾಧ್ಯವಿಲ್ಲ. ಏಕೆಂದರೆ ಅದು ದೈವಿಕ ಗುಣಕ್ಕೆ ವಿರುದ್ಧವಾಗಿದೆ.
តាហ្វសៀរជាភាសា​អារ៉ាប់ជាច្រេីន:
قُلْ اَتَعْبُدُوْنَ مِنْ دُوْنِ اللّٰهِ مَا لَا یَمْلِكُ لَكُمْ ضَرًّا وَّلَا نَفْعًا ؕ— وَاللّٰهُ هُوَ السَّمِیْعُ الْعَلِیْمُ ۟
ಹೇಳಿರಿ: “ನೀವು ಅಲ್ಲಾಹನನ್ನು ಬಿಟ್ಟು, ನಿಮಗೆ ಉಪಕಾರ ಅಥವಾ ತೊಂದರೆ ಮಾಡದವುಗಳನ್ನು ಆರಾಧಿಸುತ್ತಿದ್ದೀರಾ? ಅಲ್ಲಾಹನಾದರೋ ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ.”
តាហ្វសៀរជាភាសា​អារ៉ាប់ជាច្រេីន:
قُلْ یٰۤاَهْلَ الْكِتٰبِ لَا تَغْلُوْا فِیْ دِیْنِكُمْ غَیْرَ الْحَقِّ وَلَا تَتَّبِعُوْۤا اَهْوَآءَ قَوْمٍ قَدْ ضَلُّوْا مِنْ قَبْلُ وَاَضَلُّوْا كَثِیْرًا وَّضَلُّوْا عَنْ سَوَآءِ السَّبِیْلِ ۟۠
ಹೇಳಿರಿ: “ಓ ಗ್ರಂಥದವರೇ! ನೀವು ನಿಮ್ಮ ಧರ್ಮದಲ್ಲಿ ಸತ್ಯಕ್ಕೆ ವಿರುದ್ಧವಾಗಿ ಹದ್ದುಮೀರಬೇಡಿ. ಈಗಾಗಲೇ ದಾರಿತಪ್ಪಿರುವ, ಅನೇಕ ಜನರನ್ನು ದಾರಿತಪ್ಪಿಸುತ್ತಿರುವ ಮತ್ತು ನೇರಮಾರ್ಗದಿಂದ ತಪ್ಪಿಹೋಗಿರುವ ಜನರ ಸ್ವೇಚ್ಛಾಚಾರಗಳನ್ನು ಹಿಂಬಾಲಿಸಬೇಡಿ.
តាហ្វសៀរជាភាសា​អារ៉ាប់ជាច្រេីន:
 
ការបកប្រែអត្ថន័យ ជំពូក​: អាល់ម៉ាអ៊ីដះ
សន្ទស្សន៍នៃជំពូក លេខ​ទំព័រ
 
ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ - សន្ទស្សន៍នៃការបកប្រែ

បានបកប្រែដោយ​មុហាម៉ាត់ ហាំហ្សា បេតួរ។ បានអភិវឌ្ឍដោយការត្រួតពិនិត្យរបស់មជ្ឈមណ្ឌលបកប្រែរ៉ូវ៉ាទ។

បិទ