Check out the new design

ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ * - សន្ទស្សន៍នៃការបកប្រែ

PDF XML CSV Excel API
Please review the Terms and Policies

ការបកប្រែអត្ថន័យ ជំពូក​: ​​​អាល់មូណាហ្វុីគូន   អាយ៉ាត់:
وَاِذَا قِیْلَ لَهُمْ تَعَالَوْا یَسْتَغْفِرْ لَكُمْ رَسُوْلُ اللّٰهِ لَوَّوْا رُءُوْسَهُمْ وَرَاَیْتَهُمْ یَصُدُّوْنَ وَهُمْ مُّسْتَكْبِرُوْنَ ۟
“ಬನ್ನಿ, ಅಲ್ಲಾಹನ ಸಂದೇಶವಾಹಕರು ನಿಮಗೋಸ್ಕರ ಅಲ್ಲಾಹನಲ್ಲಿ ಕ್ಷಮೆಯಾಚನೆ ಮಾಡುತ್ತಾರೆ” ಎಂದು ಅವರೊಡನೆ ಹೇಳಲಾದರೆ ಅವರು ತಲೆಯನ್ನು ಅಲ್ಲಾಡಿಸುತ್ತಾರೆ. ಅವರು ಅಹಂಕಾರ ತೋರುತ್ತಾ ನುಣುಚಿಕೊಳ್ಳುವುದು ನಿಮಗೆ ಕಾಣಬಹುದು.
តាហ្វសៀរជាភាសា​អារ៉ាប់ជាច្រេីន:
سَوَآءٌ عَلَیْهِمْ اَسْتَغْفَرْتَ لَهُمْ اَمْ لَمْ تَسْتَغْفِرْ لَهُمْ ؕ— لَنْ یَّغْفِرَ اللّٰهُ لَهُمْ ؕ— اِنَّ اللّٰهَ لَا یَهْدِی الْقَوْمَ الْفٰسِقِیْنَ ۟
ನೀವು ಅವರಿಗೋಸ್ಕರ ಕ್ಷಮೆಯಾಚನೆ ಮಾಡಿದರೂ ಮಾಡದಿದ್ದರೂ ಅವರ ಮಟ್ಟಿಗೆ ಅದು ಸಮಾನವಾಗಿದೆ. ಅಲ್ಲಾಹು ಎಂದಿಗೂ ಅವರನ್ನು ಕ್ಷಮಿಸುವುದಿಲ್ಲ. ನಿಶ್ಚಯವಾಗಿಯೂ ದುಷ್ಕರ್ಮಿಗಳಾದ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ.
តាហ្វសៀរជាភាសា​អារ៉ាប់ជាច្រេីន:
هُمُ الَّذِیْنَ یَقُوْلُوْنَ لَا تُنْفِقُوْا عَلٰی مَنْ عِنْدَ رَسُوْلِ اللّٰهِ حَتّٰی یَنْفَضُّوْا ؕ— وَلِلّٰهِ خَزَآىِٕنُ السَّمٰوٰتِ وَالْاَرْضِ وَلٰكِنَّ الْمُنٰفِقِیْنَ لَا یَفْقَهُوْنَ ۟
ಅವರು ಯಾರೆಂದರೆ, “ಅಲ್ಲಾಹನ ಸಂದೇಶವಾಹಕರ ಬಳಿಯಿರುವವರಿಗೆ ಅವರು ಅಲ್ಲಿಂದ ಚದುರಿಹೋಗುವ ತನಕ ಖರ್ಚು ಮಾಡಬೇಡಿ” ಎಂದು ಹೇಳುವವರು.[1] ಭೂಮ್ಯಾಕಾಶಗಳ ಬೊಕ್ಕಸಗಳು ಅಲ್ಲಾಹನಿಗೆ ಸೇರಿದ್ದು. ಆದರೆ ಕಪಟವಿಶ್ವಾಸಿಗಳು ಅದನ್ನು ಅರ್ಥಮಾಡಿಕೊಳ್ಳುವುದಿಲ್ಲ.
[1] ಒಮ್ಮೆ ಒಂದು ಯುದ್ಧದಿಂದ ಹಿಂದಿರುಗಿ ಬರುವಾಗ ಒಬ್ಬ ಮುಹಾಜಿರ್ ಮತ್ತು ಅನ್ಸಾರನ ನಡುವೆ ಜಗಳವಾಯಿತು. ಇಬ್ಬರೂ ತಮ್ಮ ತಮ್ಮ ಜನರನ್ನು ಸಹಾಯಕ್ಕೆ ಕರೆದರು. ಆಗ ಕಪಟವಿಶ್ವಾಸಿಗಳ ಮುಖಂಡ ಅಬ್ದುಲ್ಲಾ ಬಿನ್ ಉಬೈ ಅನ್ಸಾರರನ್ನು ಕರೆದು, “ನೋಡಿ, ನೀವು ಅವರಿಗೆ ಸಹಾಯ ಮಾಡಿದ್ದೀರಿ. ಈಗ ಅದರ ಫಲಿತಾಂಶವೇನಾಯಿತೆಂದು ನೋಡಿ. ಅವರು ನಿಮ್ಮ ವಿರುದ್ಧ ಅವರ ಜನರನ್ನು ಕರೆಯುತ್ತಿದ್ದಾರೆ.” ನಂತರ ಆತ ಹೇಳಿದ: “ಇದಕ್ಕಿರುವ ಮದ್ದೇನೆಂದರೆ ಅವರಿಗೆ ಖರ್ಚು ಮಾಡುವುದನ್ನು ನೀವು ನಿಲ್ಲಿಸಬೇಕು. ಆಗ ಅವರ ಸ್ವಯಂ ಸರಿದಾರಿಗೆ ಬರುತ್ತಾರೆ.”
តាហ្វសៀរជាភាសា​អារ៉ាប់ជាច្រេីន:
یَقُوْلُوْنَ لَىِٕنْ رَّجَعْنَاۤ اِلَی الْمَدِیْنَةِ لَیُخْرِجَنَّ الْاَعَزُّ مِنْهَا الْاَذَلَّ ؕ— وَلِلّٰهِ الْعِزَّةُ وَلِرَسُوْلِهٖ وَلِلْمُؤْمِنِیْنَ وَلٰكِنَّ الْمُنٰفِقِیْنَ لَا یَعْلَمُوْنَ ۟۠
ಅವರು ಹೇಳುತ್ತಾರೆ: “ನಾವು ಮದೀನಕ್ಕೆ ಮರಳಿದರೆ ಪ್ರತಿಷ್ಠೆಯುಳ್ಳವರು ದೀನರನ್ನು ಅಲ್ಲಿಂದ ಹೊರಗಟ್ಟುವರು.”[1] ಪ್ರತಿಷ್ಠೆಯಿರುವುದು ಅಲ್ಲಾಹನಿಗೆ, ಅವನ ಸಂದೇಶವಾಹಕರಿಗೆ ಮತ್ತು ಸತ್ಯವಿಶ್ವಾಸಿಗಳಿಗೆ. ಆದರೆ ಕಪಟವಿಶ್ವಾಸಿಗಳು ಅದನ್ನು ತಿಳಿಯುವುದಿಲ್ಲ.
[1] ಇದು ಕಪಟವಿಶ್ವಾಸಿಗಳ ಮುಖಂಡ ಅಬ್ದುಲ್ಲಾ ಬಿನ್ ಉಬೈ ಹೇಳಿದ ಮಾತು. ಅವನ ಪ್ರಕಾರ ಅವನು ಮತ್ತು ಅವನ ಅನುಯಾಯಿಗಳು ಪ್ರತಿಷ್ಠಿತರು. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮತ್ತು ಅವರ ಅನುಯಾಯಿಗಳು ದೀನರು.
តាហ្វសៀរជាភាសា​អារ៉ាប់ជាច្រេីន:
یٰۤاَیُّهَا الَّذِیْنَ اٰمَنُوْا لَا تُلْهِكُمْ اَمْوَالُكُمْ وَلَاۤ اَوْلَادُكُمْ عَنْ ذِكْرِ اللّٰهِ ۚ— وَمَنْ یَّفْعَلْ ذٰلِكَ فَاُولٰٓىِٕكَ هُمُ الْخٰسِرُوْنَ ۟
ಓ ಸತ್ಯವಿಶ್ವಾಸಿಗಳೇ! ನಿಮ್ಮ ಆಸ್ತಿ ಮತ್ತು ಮಕ್ಕಳು ಅಲ್ಲಾಹನ ಸ್ಮರಣೆಯನ್ನು ನಿರ್ಲಕ್ಷಿಸುವಂತೆ ನಿಮ್ಮನ್ನು ಪ್ರೇರೇಪಿಸದಿರಲಿ. ಯಾರು ಹಾಗೆ ಮಾಡುತ್ತಾರೋ ಅವರೇ ನಷ್ಟ ಹೊಂದಿದವರು.
តាហ្វសៀរជាភាសា​អារ៉ាប់ជាច្រេីន:
وَاَنْفِقُوْا مِنْ مَّا رَزَقْنٰكُمْ مِّنْ قَبْلِ اَنْ یَّاْتِیَ اَحَدَكُمُ الْمَوْتُ فَیَقُوْلَ رَبِّ لَوْلَاۤ اَخَّرْتَنِیْۤ اِلٰۤی اَجَلٍ قَرِیْبٍ ۙ— فَاَصَّدَّقَ وَاَكُنْ مِّنَ الصّٰلِحِیْنَ ۟
ನಿಮ್ಮಲ್ಲೊಬ್ಬರಿಗೆ ಮರಣವು ಆಸನ್ನವಾಗಿ, “ನನ್ನ ಪರಿಪಾಲಕನೇ! ನನಗೆ ಸ್ವಲ್ಪ ಕಾಲಾವಕಾಶವನ್ನು ಕೊಟ್ಟರೆ ನಾನು ದಾನಧರ್ಮ ಮಾಡುತ್ತೇನೆ ಮತ್ತು ನೀತಿವಂತರಲ್ಲಿ ಸೇರಿಕೊಳ್ಳುತ್ತೇನೆ” ಎಂದು ಹೇಳುವಂತಾಗುವುದಕ್ಕೆ ಮೊದಲು ನಾವು ನಿಮಗೆ ಒದಗಿಸಿದ ಸಂಪತ್ತಿನಿಂದ (ಅಲ್ಲಾಹನ ಮಾರ್ಗದಲ್ಲಿ) ಖರ್ಚು ಮಾಡಿರಿ.
តាហ្វសៀរជាភាសា​អារ៉ាប់ជាច្រេីន:
وَلَنْ یُّؤَخِّرَ اللّٰهُ نَفْسًا اِذَا جَآءَ اَجَلُهَا ؕ— وَاللّٰهُ خَبِیْرٌ بِمَا تَعْمَلُوْنَ ۟۠
ಒಬ್ಬ ವ್ಯಕ್ತಿಯ ನಿಶ್ಚಿತ ಅವಧಿಯು ಬಂದು ಬಿಟ್ಟರೆ, ನಂತರ ಅಲ್ಲಾಹು ಅವನಿಗೆ ಕಾಲಾವಕಾಶ ನೀಡುವುದೇ ಇಲ್ಲ. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ಸೂಕ್ಷ್ಮಜ್ಞಾನವುಳ್ಳವನಾಗಿದ್ದಾನೆ.
តាហ្វសៀរជាភាសា​អារ៉ាប់ជាច្រេីន:
 
ការបកប្រែអត្ថន័យ ជំពូក​: ​​​អាល់មូណាហ្វុីគូន
សន្ទស្សន៍នៃជំពូក លេខ​ទំព័រ
 
ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ - សន្ទស្សន៍នៃការបកប្រែ

បានបកប្រែដោយ​មុហាម៉ាត់ ហាំហ្សា បេតួរ។ បានអភិវឌ្ឍដោយការត្រួតពិនិត្យរបស់មជ្ឈមណ្ឌលបកប្រែរ៉ូវ៉ាទ។

បិទ