Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಅಧ್ಯಾಯ: ಯೂನುಸ್   ಶ್ಲೋಕ:
وَلَوْ اَنَّ لِكُلِّ نَفْسٍ ظَلَمَتْ مَا فِی الْاَرْضِ لَافْتَدَتْ بِهٖ ؕ— وَاَسَرُّوا النَّدَامَةَ لَمَّا رَاَوُا الْعَذَابَ ۚ— وَقُضِیَ بَیْنَهُمْ بِالْقِسْطِ وَهُمْ لَا یُظْلَمُوْنَ ۟
ಅಕ್ರಮ (ಶಿರ್ಕ್)ವೆಸಗಿದ ಪ್ರತಿಯೊಬ್ಬ ವ್ಯಕ್ತಿಯ ಬಳಿ ಇಡೀ ಭೂಮಿಯ ಸಕಲ ಸಂಪತ್ತಿದ್ದರೂ (ಯಾತನೆಯಿಂದ ರಕ್ಷಣೆಗಾಗಿ) ಅವನು ಅದನ್ನೆಲ್ಲಾ ಪ್ರಾಯಶ್ಚಿತವಾಗಿ ಕೊಡುತ್ತಿದ್ದನು. ಅವರು ಯಾತನೆಯನ್ನು ಕಾಣುವಾಗ ಮನದೊಳಗೆ ಮರುಗುವರು ಆದರೆ ಅವರ ನಡುವೆ ತೀರ್ಪು ನ್ಯಾಯೋಚಿತವಾಗಿ ಮಾಡಲಾಗುವುದು ಮತ್ತು ಅವರ ಮೇಲೆ ಅನ್ಯಾಯವೆಸಗಲಾಗದು.
ಅರಬ್ಬಿ ವ್ಯಾಖ್ಯಾನಗಳು:
اَلَاۤ اِنَّ لِلّٰهِ مَا فِی السَّمٰوٰتِ وَالْاَرْضِ ؕ— اَلَاۤ اِنَّ وَعْدَ اللّٰهِ حَقٌّ وَّلٰكِنَّ اَكْثَرَهُمْ لَا یَعْلَمُوْنَ ۟
ತಿಳಿದುಕೊಳ್ಳಿರಿ ! ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅಲ್ಲಾಹನದ್ದೇ ಆಗಿದೆ. ತಿಳಿದುಕೊಳ್ಳಿರಿ! ಅಲ್ಲಾಹನ ವಾಗ್ದಾನವು ಸತ್ಯವಾಗಿದೆ. ಆದರೆ ಬಹುದೇವಾರಾಧಕರಲ್ಲಿ ಹೆಚ್ಚಿನವರು ಅದನ್ನು ಅರಿಯುವುದಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
هُوَ یُحْیٖ وَیُمِیْتُ وَاِلَیْهِ تُرْجَعُوْنَ ۟
ಅವನೇ ಜೀವಂತಗೊಳಿಸುತ್ತಾನೆ ಹಾಗೂ ಮರಣ ಕೊಡುತ್ತಾನೆ ಮತ್ತು ನೀವೆಲ್ಲರು ಅವನೆಡೆಗೇ ಮರಳಿಸಲಾಗುವಿರಿ.
ಅರಬ್ಬಿ ವ್ಯಾಖ್ಯಾನಗಳು:
یٰۤاَیُّهَا النَّاسُ قَدْ جَآءَتْكُمْ مَّوْعِظَةٌ مِّنْ رَّبِّكُمْ وَشِفَآءٌ لِّمَا فِی الصُّدُوْرِ ۙ۬— وَهُدًی وَّرَحْمَةٌ لِّلْمُؤْمِنِیْنَ ۟
ಓ ಜನರೇ, ನಿಸ್ಸಂದೇಹವಾಗಿಯೂ ನಿಮ್ಮೆಡೆಗೆ ನಿಮ್ಮ ಪ್ರಭುವಿನ ವತಿಯಿಂದ ಸದುಪದೇಶವೂ, ಹೃದಯಗಳಲ್ಲಿರುವ ರೋಗಗಳಿಗೆ ಉಪಶಮನವೂ ಬಂದಿದೆ ಮತ್ತು ಸತ್ಯವಿಶ್ವಾಸಿಗಳಿಗೆ ಸನ್ಮಾರ್ಗವೂ, ಕಾರುಣ್ಯವೂ ಆಗಿರುತ್ತದೆ.
ಅರಬ್ಬಿ ವ್ಯಾಖ್ಯಾನಗಳು:
قُلْ بِفَضْلِ اللّٰهِ وَبِرَحْمَتِهٖ فَبِذٰلِكَ فَلْیَفْرَحُوْا ؕ— هُوَ خَیْرٌ مِّمَّا یَجْمَعُوْنَ ۟
ನೀವು ಹೇಳಿರಿ; ಜನರು ಅಲ್ಲಾಹನ ಈ ಅನುಗ್ರಹ ಮತ್ತು ಕಾರುಣ್ಯದ ನಿಮಿತ್ತ ಸಂತಸಗೊಳ್ಳಲಿ. ಇದು ಅವರು ಶೇಖರಿಸುತ್ತಿರುವುದಕ್ಕಿಂತಲೂ ಅದೆಷ್ಟೋ ಉತ್ತಮವಾಗಿದೆ.
ಅರಬ್ಬಿ ವ್ಯಾಖ್ಯಾನಗಳು:
قُلْ اَرَءَیْتُمْ مَّاۤ اَنْزَلَ اللّٰهُ لَكُمْ مِّنْ رِّزْقٍ فَجَعَلْتُمْ مِّنْهُ حَرَامًا وَّحَلٰلًا ؕ— قُلْ آٰللّٰهُ اَذِنَ لَكُمْ اَمْ عَلَی اللّٰهِ تَفْتَرُوْنَ ۟
ಹೇಳಿರಿ; ಅಲ್ಲಾಹನು ನಿಮಗಾಗಿ ದಯಪಾಲಿಸಿದ ಆಹಾರದ ಬಗ್ಗೆ ನೀವು ಯೋಚಿಸಿದ್ದೀರಾ ? ನೀವು ಅದರಲ್ಲಿ ಕೆಲವು ಅಂಶವನ್ನು ನಿಷಿದ್ಧವನ್ನಾಗಿಯೂ, ಇನ್ನು ಕೆಲವು ಅಂಶವನ್ನು ಧರ್ಮಬದ್ಧವನ್ನಾಗಿಯೂ ಮಾಡಿಕೊಂಡಿರುವಿರಿ. ಹೇಳಿರಿ; ನಿಮಗೆ ಅಲ್ಲಾಹನು ಅನುಮತಿಸಿರುವನೇ ಅಥವಾ ನೀವು ಅಲ್ಲಾಹನ ಮೇಲೆ ಸುಳ್ಳು ಸೃಷ್ಟಿಸುತ್ತಿರುವಿರಾ ?
ಅರಬ್ಬಿ ವ್ಯಾಖ್ಯಾನಗಳು:
وَمَا ظَنُّ الَّذِیْنَ یَفْتَرُوْنَ عَلَی اللّٰهِ الْكَذِبَ یَوْمَ الْقِیٰمَةِ ؕ— اِنَّ اللّٰهَ لَذُوْ فَضْلٍ عَلَی النَّاسِ وَلٰكِنَّ اَكْثَرَهُمْ لَا یَشْكُرُوْنَ ۟۠
ಮತ್ತು ಅಲ್ಲಾಹನ ಮೇಲೆ ಸುಳ್ಳು ಸೃಷ್ಟಿಸುತ್ತಿರುವವರ ಭಾವನೆಯು ಪುನರುತ್ಥಾನ ದಿನದ ಕುರಿತು ಏನಾಗಿರಬಹುದು ? ನಿಜವಾಗಿಯೂ ಜನರ ಮೇಲೆ ಅಲ್ಲಾಹನ ಮಹಾ ಅನುಗ್ರವಿದೆ. ಆದರೆ ಅವರಲ್ಲಿ ಅಧಿಕಜನರು ಕೃತಜ್ಞತೆಯನ್ನು ಸಲ್ಲಿಸುವುದಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
وَمَا تَكُوْنُ فِیْ شَاْنٍ وَّمَا تَتْلُوْا مِنْهُ مِنْ قُرْاٰنٍ وَّلَا تَعْمَلُوْنَ مِنْ عَمَلٍ اِلَّا كُنَّا عَلَیْكُمْ شُهُوْدًا اِذْ تُفِیْضُوْنَ فِیْهِ ؕ— وَمَا یَعْزُبُ عَنْ رَّبِّكَ مِنْ مِّثْقَالِ ذَرَّةٍ فِی الْاَرْضِ وَلَا فِی السَّمَآءِ وَلَاۤ اَصْغَرَ مِنْ ذٰلِكَ وَلَاۤ اَكْبَرَ اِلَّا فِیْ كِتٰبٍ مُّبِیْنٍ ۟
ಓ ಪೈಗಂಬರರೇ ನೀವು ಯಾವ ಸ್ಥಿತಿಯಲ್ಲಿದ್ದರೂ, ಅಲ್ಲಾಹನು ಅವತೀರ್ಣಗೊಳಿಸಿರುವ ಕುರ್‌ಆನಿನಿಂದ ನೀವು ಓದಿ ಕೇಳಿಸುತ್ತಿದ್ದರೂ ಮತ್ತು ಓ ಜನರೇ ನೀವು ಯಾವುದೇ ಕೆಲಸ ಮಾಡುತ್ತಿದ್ದು ಅದರಲ್ಲಿ ಮಗ್ನರಾಗಿದ್ದರೂ ನಿಮ್ಮನ್ನು ನಾವು ನೋಡುತ್ತಿರುತ್ತೇವೆ, ಮತ್ತು ನಿಮ್ಮ ಪ್ರಭುವಿನಿಂದ ಭೂಮಿಯಲ್ಲಾಗಲಿ ಆಕಾಶದಲ್ಲಾಗಲಿ ಅಣು ತೂಕದಷ್ಟು ವಸ್ತುವೂ ಅಡಗಿರುವುದಿಲ್ಲ, ಅಥವಾ ಅದಕ್ಕಿಂತ ಚಿಕ್ಕದಿರಲಿ, ದೊಡ್ಡದಿರಲಿ ಎಲ್ಲವೂ ಒಂದು ಸುಸ್ಪಷ್ಟ ದಾಖಲೆಯಲ್ಲಿರುತ್ತದೆ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಅಧ್ಯಾಯ: ಯೂನುಸ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ