Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಅಧ್ಯಾಯ: ಅರ್‍ರಅ್ ದ್   ಶ್ಲೋಕ:

ಅರ್‍ರಅ್ ದ್

الٓمّٓرٰ ۫— تِلْكَ اٰیٰتُ الْكِتٰبِ ؕ— وَالَّذِیْۤ اُنْزِلَ اِلَیْكَ مِنْ رَّبِّكَ الْحَقُّ وَلٰكِنَّ اَكْثَرَ النَّاسِ لَا یُؤْمِنُوْنَ ۟
ಅಲಿಫ್ ಲಾಮ್ ಮೀಮ್ ರಾ. ಇವು ದೈವಿಕಗ್ರಂಥದ ಸೂಕ್ತಿಗಳಾಗಿವೆ ಮತ್ತು ನಿಮ್ಮೆಡೆಗೆ ನಿಮ್ಮ ಪ್ರಭುವಿನ ಕಡೆಯಿಂದ ಅವತೀರ್ಣಗೊಳಿಸಿದ್ದೇಲ್ಲವೂ ಸತ್ಯವಾಗಿದೆ. ಆದರೆ ಅಧಿಕÀ ಜನರು ವಿಶ್ವಾಸವಿಡುವುದಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
اَللّٰهُ الَّذِیْ رَفَعَ السَّمٰوٰتِ بِغَیْرِ عَمَدٍ تَرَوْنَهَا ثُمَّ اسْتَوٰی عَلَی الْعَرْشِ وَسَخَّرَ الشَّمْسَ وَالْقَمَرَ ؕ— كُلٌّ یَّجْرِیْ لِاَجَلٍ مُّسَمًّی ؕ— یُدَبِّرُ الْاَمْرَ یُفَصِّلُ الْاٰیٰتِ لَعَلَّكُمْ بِلِقَآءِ رَبِّكُمْ تُوْقِنُوْنَ ۟
ಅಲ್ಲಾಹನೆಂದರೆ ನೀವು ನೋಡುವಂತಹ ಸ್ತಂಭಗಳಿಲ್ಲದ ಆಕಾಶಗಳನ್ನು ಮೇಲಕ್ಕೇರಿಸಿದವನು. ಅನಂತರ ಅವನು ವಿಶ್ವಸಿಂಹಾಸನದ ಮೇಲೆ ಆರೋಢನಾದನು. ಅವನೇ ಸೂರ್ಯ ಮತ್ತು ಚಂದ್ರನನ್ನು ಒಂದು ನಿಯಮಕ್ಕೆ ಅಧೀನಗೊಳಿಸಿದನು. ಪ್ರತಿಯೊಂದು ಸಹ ಒಂದು ನಿರ್ದಿಷÀ್ಟ ಅವಧಿಯ ತನಕ ಸಂಚರಿಸುತ್ತಿವೆ. ಅವನೇ ಪ್ರತಿಯೊಂದು ಕಾರ್ಯವನ್ನು ನಿಯಂತ್ರಿಸುತ್ತಾನೆ. ನೀವು ನಿಮ್ಮ ಪ್ರಭುವಿನ ಭೇಟಿಯನ್ನು ದೃಢವಾಗಿ ನಂಬಲೆAದು ತನ್ನ ದೃಷ್ಟಾಂತಗಳನ್ನು ಸ್ಪಷÀ್ಟವಾಗಿ ವಿವರಿಸುತ್ತಾನೆ.
ಅರಬ್ಬಿ ವ್ಯಾಖ್ಯಾನಗಳು:
وَهُوَ الَّذِیْ مَدَّ الْاَرْضَ وَجَعَلَ فِیْهَا رَوَاسِیَ وَاَنْهٰرًا ؕ— وَمِنْ كُلِّ الثَّمَرٰتِ جَعَلَ فِیْهَا زَوْجَیْنِ اثْنَیْنِ یُغْشِی الَّیْلَ النَّهَارَ ؕ— اِنَّ فِیْ ذٰلِكَ لَاٰیٰتٍ لِّقَوْمٍ یَّتَفَكَّرُوْنَ ۟
ಅವನೇ ಭೂಮಿಯನ್ನು ವಿಸ್ತಾರಗೊಳಿಸಿದನು ಮತ್ತು ಅದರಲ್ಲಿ ಪರ್ವತಗಳನ್ನು ನದಿಗಳನ್ನು ಉಂಟುಮಾಡಿದನು ಮತ್ತು ಅವನೇ ಪ್ರತಿಯೊಂದು ಬಗೆಯ ಫಲಗಳಲ್ಲಿ ಎರಡು ಜೋಡಿಗಳನ್ನು ಉಂಟುಮಾಡಿದನು. ಅವನು ರಾತ್ರಿಯನ್ನು ಹಗಲಿನ ಮೇಲೆ ಆಚ್ಛಾದಿಸುತ್ತಾನೆ. ನಿಶ್ಚಯವಾಗಿಯೂ ಇದರಲ್ಲಿ ಯೋಚಿಸುವ ಜನರಿಗೆ ಅನೇಕ ದೃಷ್ಟಾಂತಗಳಿವೆ.
ಅರಬ್ಬಿ ವ್ಯಾಖ್ಯಾನಗಳು:
وَفِی الْاَرْضِ قِطَعٌ مُّتَجٰوِرٰتٌ وَّجَنّٰتٌ مِّنْ اَعْنَابٍ وَّزَرْعٌ وَّنَخِیْلٌ صِنْوَانٌ وَّغَیْرُ صِنْوَانٍ یُّسْقٰی بِمَآءٍ وَّاحِدٍ ۫— وَنُفَضِّلُ بَعْضَهَا عَلٰی بَعْضٍ فِی الْاُكُلِ ؕ— اِنَّ فِیْ ذٰلِكَ لَاٰیٰتٍ لِّقَوْمٍ یَّعْقِلُوْنَ ۟
ಮತ್ತು ಭೂಮಿಯಲ್ಲಿ ಒಂದಕ್ಕೊAದು ಅಂಟಿಕೊAಡಿರುವ ವಿಭಿನ್ನ ಭೂ ಭಾಗಗಳಿವೆ, ದ್ರಾಕ್ಷಿ ತೋಟಗಳಿವೆ, ಮತ್ತು ಕೃಷಿ ಹೊಲಗಳಿವೆ, ಖರ್ಜೂರದ ಮರಗಳಿವೆ ಮತ್ತು ಅವುಗಳಲ್ಲಿ ಕೆಲವು ಕವಲೊಡೆದ ಮತ್ತು ಇನ್ನು ಕೆಲವು ಕವಲೊಡೆಯದ ಮರಗಳಿವೆ. ಎಲ್ಲವೂ ಒಂದೇ ನೀರಿನಿಂದ ಉಣಿಸಲಾಗುತ್ತವೆ. ಹಾಗು ನಾವು ಕೆಲವನ್ನು ಕೆಲವುಗಳ ಮೇಲೆ ರುಚಿಯಲ್ಲಿ ಶ್ರೇಷ್ಠಗೊಳಿಸುತ್ತೇವೆ. ಖಂಡಿತವಾಗಿಯೂ ಇದರಲ್ಲಿ ವಿವೇಚಿಸುವವರಿಗೆ ಹಲವಾರು ದೃಷ್ಟಾಂತಗಳಿವೆ.
ಅರಬ್ಬಿ ವ್ಯಾಖ್ಯಾನಗಳು:
وَاِنْ تَعْجَبْ فَعَجَبٌ قَوْلُهُمْ ءَاِذَا كُنَّا تُرٰبًا ءَاِنَّا لَفِیْ خَلْقٍ جَدِیْدٍ ؕ۬— اُولٰٓىِٕكَ الَّذِیْنَ كَفَرُوْا بِرَبِّهِمْ ۚ— وَاُولٰٓىِٕكَ الْاَغْلٰلُ فِیْۤ اَعْنَاقِهِمْ ۚ— وَاُولٰٓىِٕكَ اَصْحٰبُ النَّارِ ۚ— هُمْ فِیْهَا خٰلِدُوْنَ ۟
ಇನ್ನು ನೀವು ಆಶ್ಚರ್ಯಪಡುವುದಾದರೆ ವಾಸ್ತವದಲ್ಲಿ ಅವರ ಈ ಮಾತು ಆಶ್ಚರ್ಯಕರವಾಗಿದೆ. "ನಾವು ಮಣ್ಣಾಗಿ ಬಿಟ್ಟ ಬಳಿಕವೂ ನಮ್ಮನ್ನು ಹೊಸದಾಗಿ ಸೃಷ್ಟಿಸಲಾಗುವುದೇ?" ಅವರೇ ತಮ್ಮ ಪ್ರಭುವಿನ ನಿಷÉÃಧ ಕೈಗೊಂಡವರು ಮತ್ತು ಅವರ ಕೊರಳಲ್ಲಿ ಕಡಗಗಳಿರುವವು ಅವರೇ ನರಕವಾಸಿಗಳು. ಅದರಲ್ಲಿ ಅವರು ಶಾಶ್ವತವಾಗಿರುವರು.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಅಧ್ಯಾಯ: ಅರ್‍ರಅ್ ದ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ