Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಅಧ್ಯಾಯ: ಅಲ್- ಬಕರ   ಶ್ಲೋಕ:
قَالُوا ادْعُ لَنَا رَبَّكَ یُبَیِّنْ لَّنَا مَا هِیَ ۙ— اِنَّ الْبَقَرَ تَشٰبَهَ عَلَیْنَا ؕ— وَاِنَّاۤ اِنْ شَآءَ اللّٰهُ لَمُهْتَدُوْنَ ۟
ಅದು ಯಾವ ತರಹದ್ದಾಗಿರಬೇಕೆಂದು ಅದರ ಹೆಚ್ಚಿನ ವಿವರ ತಿಳಿಸಲು ನೀವು ನಮಗಾಗಿ ನಿಮ್ಮ ಪ್ರಭುವಿನೊಡನೆ ಪ್ರಾರ್ಥಿಸಿರಿ ಎಂದರು. ಒಂದಕ್ಕೊಂದು ಹೋಲುವ ಹಸುಗಳಿಂದ ನಮಗೆ ಗೊಂದಲವಾಗುತ್ತಿದೆ. ಅಲ್ಲಾಹನೇನಾದರು ಇಚ್ಛಿಸಿದರೆ ನಾವು ಸರಿಯಾದ ದಾರಿ ಪಡೆಯುವೆವು.
ಅರಬ್ಬಿ ವ್ಯಾಖ್ಯಾನಗಳು:
قَالَ اِنَّهٗ یَقُوْلُ اِنَّهَا بَقَرَةٌ لَّا ذَلُوْلٌ تُثِیْرُ الْاَرْضَ وَلَا تَسْقِی الْحَرْثَ ۚ— مُسَلَّمَةٌ لَّا شِیَةَ فِیْهَا ؕ— قَالُوا الْـٰٔنَ جِئْتَ بِالْحَقِّ ؕ— فَذَبَحُوْهَا وَمَا كَادُوْا یَفْعَلُوْنَ ۟۠
ಮೂಸ(ಅ) ಹೇಳಿದರು; ಆ ಹಸುವು ಭೂಮಿಯನ್ನು ಊಳುವುದಕ್ಕಾಗಲೀ, ಕೃಷಿಗೆ ನೀರು ಎತ್ತಲಿಕ್ಕಾಗಲೀ ಬಳಸದ ಅಂಗ ವೈಕಲ್ಯ ಇಲ್ಲದ್ದಾಗಿರಬೇಕು ಎಂದು ಅವನು ಹೇಳುತ್ತಾನೆ. ಆಗ ಅವರು ಹೇಳಿದರು; ನೀವು ಇದೀಗ ಸಂಪೂರ್ಣ ಮಾಹಿತಿಯನ್ನು ನೀಡಿರುವಿರಿ, ಅವರು ಅದನ್ನು ಮಾಡುವ ಸ್ಥಿತಿಯಲ್ಲಿ ಇರಲಿಲ್ಲ. ಆದರೆ ಅವರು ಅದನ್ನು ಒಪ್ಪಿಕೊಂಡರು ಮತ್ತು ಆ ಹಸುವನ್ನು ಕೊಯ್ದು ಬಿಟ್ಟರು.
ಅರಬ್ಬಿ ವ್ಯಾಖ್ಯಾನಗಳು:
وَاِذْ قَتَلْتُمْ نَفْسًا فَادّٰرَءْتُمْ فِیْهَا ؕ— وَاللّٰهُ مُخْرِجٌ مَّا كُنْتُمْ تَكْتُمُوْنَ ۟ۚ
ನೀವು ಒಬ್ಬ ವ್ಯಕ್ತಿಯನ್ನು ಕೊಂದು ಅನಂತರ ಅದರಲ್ಲಿ ಪರಸ್ಪರ ಭಿನ್ನಾಭಿಪ್ರಾಯ ತೋರಿದ ಸಂದರ್ಭ ಮತ್ತು ಅಲ್ಲಾಹನು ನೀವು ರಹಸ್ಯವಾಗಿಡುವುದನ್ನು ಹೊರತರುವವನಾಗಿದ್ದನು.
ಅರಬ್ಬಿ ವ್ಯಾಖ್ಯಾನಗಳು:
فَقُلْنَا اضْرِبُوْهُ بِبَعْضِهَا ؕ— كَذٰلِكَ یُحْیِ اللّٰهُ الْمَوْتٰی وَیُرِیْكُمْ اٰیٰتِهٖ لَعَلَّكُمْ تَعْقِلُوْنَ ۟
ಆಗ ನಾವು ಹೇಳಿದೆವು ! ಆ ಹಸುವಿನ ಒಂದು ತುಂಡನ್ನು ಕೊಲೆಗೀಡಾದವನ ಶರೀರಕ್ಕೆ ತಾಗಿಸಿರಿ. (ಅವನು ಜೀವಂತವಾಗಿ ಏಳುವನು) ಇದೇ ಪ್ರಕಾರ ಅಲ್ಲಾಹನು ಮೃತರನ್ನು ಜೀವಂತಗೊಳಿಸುತ್ತಾನೆ. ನೀವು ಯೋಚಿಸಲ್ಲಿಕ್ಕಾಗಿ ಅವನು ತನ್ನ ದೃಷ್ಟಾಂತಗಳನ್ನು ನಿಮಗೆ ತೋರಿಸಿ ಕೊಡುತ್ತಾನೆ.
ಅರಬ್ಬಿ ವ್ಯಾಖ್ಯಾನಗಳು:
ثُمَّ قَسَتْ قُلُوْبُكُمْ مِّنْ بَعْدِ ذٰلِكَ فَهِیَ كَالْحِجَارَةِ اَوْ اَشَدُّ قَسْوَةً ؕ— وَاِنَّ مِنَ الْحِجَارَةِ لَمَا یَتَفَجَّرُ مِنْهُ الْاَنْهٰرُ ؕ— وَاِنَّ مِنْهَا لَمَا یَشَّقَّقُ فَیَخْرُجُ مِنْهُ الْمَآءُ ؕ— وَاِنَّ مِنْهَا لَمَا یَهْبِطُ مِنْ خَشْیَةِ اللّٰهِ ؕ— وَمَا اللّٰهُ بِغَافِلٍ عَمَّا تَعْمَلُوْنَ ۟
ಅದಾದ ಬಳಿಕ ನಿಮ್ಮ ಹೃದಯಗಳು ಕಲ್ಲಿನಂತೆ ಅಥವಾ ಅದಕ್ಕಿಂತಲೂ ಕಠೋರವಾದವು. ಕೆÀಲವು ಕಲ್ಲುಗಳಿಂದ ಚಿಲಮೆಗಳು ಹೊರಚಿಮ್ಮುತ್ತವೆ ಮತ್ತು ಕೆಲವು ಒಡೆಯುತ್ತವೆ ಹಾಗೂ ಅವುಗಳಿಂದ ಜಲವು ಹೊರ ಬರುತ್ತದೆ. ಮತ್ತು ಕೆಲವು ಅಲ್ಲಾಹನ ಭಯದ ನಿಮಿತ್ತ ಕೆಳಗುರುಳುತ್ತವೆ ಮತ್ತು ಅಲ್ಲಾಹನು ನಿಮ್ಮ ಕೃತ್ಯಗಳ ಕುರಿತು ಅಲಕ್ಷö್ಯನಲ್ಲ.
ಅರಬ್ಬಿ ವ್ಯಾಖ್ಯಾನಗಳು:
اَفَتَطْمَعُوْنَ اَنْ یُّؤْمِنُوْا لَكُمْ وَقَدْ كَانَ فَرِیْقٌ مِّنْهُمْ یَسْمَعُوْنَ كَلٰمَ اللّٰهِ ثُمَّ یُحَرِّفُوْنَهٗ مِنْ بَعْدِ مَا عَقَلُوْهُ وَهُمْ یَعْلَمُوْنَ ۟
ಓ ಸತ್ಯವಿಶ್ವಾಸಿಗಳೇ ಈ ಜನರು (ಯಹೂದರು) ವಿಶ್ವಾಸಿಗಳಾಗಲೆಂದು ನೀವು ಆಶಿಸುತ್ತಿದ್ದೀರಾ? ವಸ್ತುತಃ ಅವರ ಪೈಕಿ ಒಂದು ವರ್ಗವು ಅಲ್ಲಾಹನ ವಚನಗಳನ್ನು ಕೇಳಿ ಅದನ್ನು ಅರ್ಥ ಮಾಡಿಕೊಂಡ ಬಳಿಕವೂ ಅದರಲ್ಲಿ ಬದಲಾವಣೆ ಮಾಡುತ್ತಿದ್ದರು.
ಅರಬ್ಬಿ ವ್ಯಾಖ್ಯಾನಗಳು:
وَاِذَا لَقُوا الَّذِیْنَ اٰمَنُوْا قَالُوْۤا اٰمَنَّا ۖۚ— وَاِذَا خَلَا بَعْضُهُمْ اِلٰی بَعْضٍ قَالُوْۤا اَتُحَدِّثُوْنَهُمْ بِمَا فَتَحَ اللّٰهُ عَلَیْكُمْ لِیُحَآجُّوْكُمْ بِهٖ عِنْدَ رَبِّكُمْ ؕ— اَفَلَا تَعْقِلُوْنَ ۟
ಅವರು (ಯಹೂದಿ) ಸತ್ಯವಿಶ್ವಾಸಿಗಳನ್ನು ಭೇಟಿಯಾದಾಗ ನಾವು ವಿಶ್ವಾಸಿಗಳೆಂದು ಹೇಳುತ್ತಾರೆ. ಮತ್ತು ಅವರು ಪರಸ್ಪರರನ್ನು ಏಕಾಂತದಲ್ಲಿ ಭೇಟಿಯಾದಾಗ ಹೇಳುತ್ತಾರೆ; ನಿಮ್ಮ ಪ್ರಭುವಿನ ಬಳಿ ನಿಮ್ಮ ವಿರುದ್ಧ ಮುಸ್ಲಿಮರಿಗೆ ಆಧಾರವಾಗಲೆಂದು ನಿಮಗೆ ಅಲ್ಲಾಹನು ವ್ಯಕ್ತಗೊಳಿಸಿದ ವಿಚಾರವನ್ನು ನೀವು ಅವರಿಗೆ ತಿಳಿಸಿಕೊಡುತ್ತ್ತಿರುವಿರಾ? ನೀವು ಯೋಚಿಸುವುದಿಲ್ಲವೇ?
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಅಧ್ಯಾಯ: ಅಲ್- ಬಕರ
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ