Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಅಧ್ಯಾಯ: ಅಲ್ -ಅನ್ಕಬೂತ್   ಶ್ಲೋಕ:
وَقَارُوْنَ وَفِرْعَوْنَ وَهَامٰنَ ۫— وَلَقَدْ جَآءَهُمْ مُّوْسٰی بِالْبَیِّنٰتِ فَاسْتَكْبَرُوْا فِی الْاَرْضِ وَمَا كَانُوْا سٰبِقِیْنَ ۟ۚ
ಕಾರೂನ್, ಫಿರ್‌ಔನ್ ಹಾಗೂ ಹಾಮಾನರನ್ನೂ ನಾವು ನಾಶಗೊಳಿಸಿದೆವು. ಅವರ ಬಳಿಗೆ ಮೂಸಾರವರು ಸುಸ್ಪಷ್ಟ ಪುರಾವೆಗಳೊಂದಿಗೆ ಬಂದಿದರು. ಅದಾಗ್ಯೂ ಅವರು ಭೂಮಿಯಲ್ಲಿ ಉದ್ಧಟತನ ತೋರಿದರು. ಆದರೆ ಅವರಿಗೆ ನಮ್ಮಿಂದ ತಪ್ಪಿಸಿಕೊಳ್ಳಲಾಗಲಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
فَكُلًّا اَخَذْنَا بِذَنْۢبِهٖ ۚ— فَمِنْهُمْ مَّنْ اَرْسَلْنَا عَلَیْهِ حَاصِبًا ۚ— وَمِنْهُمْ مَّنْ اَخَذَتْهُ الصَّیْحَةُ ۚ— وَمِنْهُمْ مَّنْ خَسَفْنَا بِهِ الْاَرْضَ ۚ— وَمِنْهُمْ مَّنْ اَغْرَقْنَا ۚ— وَمَا كَانَ اللّٰهُ لِیَظْلِمَهُمْ وَلٰكِنْ كَانُوْۤا اَنْفُسَهُمْ یَظْلِمُوْنَ ۟
ಅನಂತರ ಪ್ರತಿಯೊಬ್ಬನನ್ನೂ ನಾವು ಅವನವನ ಪಾಪದ ಪರಿಣಾಮವಾಗಿ ಹಿಡಿದು ಬಿಟ್ಟೆವು. ಅವರ ಪೈಕಿ ಕೆಲವರ ಮೇಲೆ ನಾವು ಕಲ್ಲುಗಳ ಮಳೆಯನ್ನು ವರ್ಷಿಸಿದೆವು ಕೆಲವರನ್ನು ಮಹಾ ಘೋರ ಆರ್ಭಟವು ಹಿಡಿದು ಬಿಟ್ಟಿತು ಮತ್ತು ಕೆಲವರನ್ನು ಭೂಮಿಯೊಳಗೆ ಹುದುಗಿಸಿಬಿಟ್ಟೆವು. ಇನ್ನೂ ಕೆಲವರನ್ನು ಮುಳಿಗಿಸಿಬಿಟ್ಟೆವು. ಅಲ್ಲಾಹನು ಅವರ ಮೇಲೆ ಅಕ್ರಮವೆಸುವವನಾಗಿರಲಿಲ್ಲ. ಆದರೆ ಅವರೇ ತಮ್ಮ ಮೇಲೆ ಅಕ್ರಮವೆಸಗುತ್ತಿದ್ದರು.
ಅರಬ್ಬಿ ವ್ಯಾಖ್ಯಾನಗಳು:
مَثَلُ الَّذِیْنَ اتَّخَذُوْا مِنْ دُوْنِ اللّٰهِ اَوْلِیَآءَ كَمَثَلِ الْعَنْكَبُوْتِ ۚ— اِتَّخَذَتْ بَیْتًا ؕ— وَاِنَّ اَوْهَنَ الْبُیُوْتِ لَبَیْتُ الْعَنْكَبُوْتِ ۘ— لَوْ كَانُوْا یَعْلَمُوْنَ ۟
ಅಲ್ಲಾಹನನ್ನು ಬಿಟ್ಟು ಇತರರನ್ನು ರಕ್ಷಕ ಮಿತ್ರರನ್ನಾಗಿ ಮಾಡಿಕೊಂಡಿರುವವರ ಉಪಮೆಯು ಒಂದು ಜೇಡರ ಹುಳದಂತೆ. ಅದೊಂದು ಮನೆಯನ್ನು ನಿರ್ಮಿಸುತ್ತದೆ. ವಸ್ತುತಃ ಸಕಲ ಮನೆಗಳಿಗಿಂತ ದುರ್ಬಲ ಮನೆಯು ಜೇಡರ ಮನೆಯಾಗಿದೆ. ಅವರು ಅರಿಯುವವರಾಗಿದ್ದರೇ!
ಅರಬ್ಬಿ ವ್ಯಾಖ್ಯಾನಗಳು:
اِنَّ اللّٰهَ یَعْلَمُ مَا یَدْعُوْنَ مِنْ دُوْنِهٖ مِنْ شَیْءٍ ؕ— وَهُوَ الْعَزِیْزُ الْحَكِیْمُ ۟
ನಿಶ್ಚಯವಾಗಿಯು ಅಲ್ಲಾಹನು ತನ್ನ ಹೊರತು ಅವರು ಕರೆದು ಬೇಡುತ್ತಿರುವುದನ್ನು ಅರಿಯುತ್ತಾನೆ ಮತ್ತು ಅವನು ಪ್ರಚಂಡನು, ಸುಜ್ಞಾನಿಯು ಆಗಿದ್ದಾನೆ.
ಅರಬ್ಬಿ ವ್ಯಾಖ್ಯಾನಗಳು:
وَتِلْكَ الْاَمْثَالُ نَضْرِبُهَا لِلنَّاسِ ۚ— وَمَا یَعْقِلُهَاۤ اِلَّا الْعٰلِمُوْنَ ۟
ನಾವು ಈ ಉಪಮೆಗಳನ್ನು ಜನರಿಗೆ ವಿವರಿಸಿಕೊಡುತ್ತೇವೆ. ಅವುಗಳನ್ನು ಜ್ಞಾನಿಗಳು ಮಾತ್ರ ತಿಳಿದು ಕೊಳ್ಳುತ್ತಾರೆ.
ಅರಬ್ಬಿ ವ್ಯಾಖ್ಯಾನಗಳು:
خَلَقَ اللّٰهُ السَّمٰوٰتِ وَالْاَرْضَ بِالْحَقِّ ؕ— اِنَّ فِیْ ذٰلِكَ لَاٰیَةً لِّلْمُؤْمِنِیْنَ ۟۠
ಅಲ್ಲಾಹನು ಆಕಾಶಗಳನ್ನೂ, ಭೂಮಿಯನ್ನೂ ಸತ್ಯದೊಂದಿಗೆ ಸೃಷ್ಟಿಸಿದ್ದಾನೆ. ನಿಶ್ಚಯವಾಗಿಯು ಸತ್ಯವಿಶ್ವಾಸಿಗಳಿಗೆ ಇದರಲ್ಲಿ ಮಹಾ ಪುರಾವೆಯಿದೆ.
ಅರಬ್ಬಿ ವ್ಯಾಖ್ಯಾನಗಳು:
اُتْلُ مَاۤ اُوْحِیَ اِلَیْكَ مِنَ الْكِتٰبِ وَاَقِمِ الصَّلٰوةَ ؕ— اِنَّ الصَّلٰوةَ تَنْهٰی عَنِ الْفَحْشَآءِ وَالْمُنْكَرِ ؕ— وَلَذِكْرُ اللّٰهِ اَكْبَرُ ؕ— وَاللّٰهُ یَعْلَمُ مَا تَصْنَعُوْنَ ۟
(ಓ ಪೈಗಂಬರರೇ) ನಿಮ್ಮೆಡೆಗೆ ಸಂದೇಶ ನೀಡಲಾಗುತ್ತಿರುವ ಗ್ರಂಥದಿAದ ನೀವು ಓದಿ ಹೇಳಿರಿ ಮತ್ತು ನಮಾಝ್ ಸಂಸ್ಥಾಪಿಸಿರಿ. ನಿಜವಾಗಿಯು ನಮಾಝ್ ನಿರ್ಲಜ್ಜೆ ಮತ್ತು ಕೆಡುಕುಗಳಿಂದ ತಡೆಯುತ್ತದೆ. ನಿಸ್ಸಂಶಯವಾಗಿಯು ಅಲ್ಲಾಹನ ಸ್ಮರಣೆಯು ಅತ್ಯಂತ ಹಿರಿದಾದುದಾಗಿದೆ ಮತ್ತು ಅಲ್ಲಾಹನು ನೀವು ಮಾಡುತ್ತಿರುವುದನ್ನೆಲ್ಲ ಅರಿಯುತ್ತಾನೆ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಅಧ್ಯಾಯ: ಅಲ್ -ಅನ್ಕಬೂತ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ