Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಅಧ್ಯಾಯ: ಅಝ್ಝುಮರ್   ಶ್ಲೋಕ:
خَلَقَكُمْ مِّنْ نَّفْسٍ وَّاحِدَةٍ ثُمَّ جَعَلَ مِنْهَا زَوْجَهَا وَاَنْزَلَ لَكُمْ مِّنَ الْاَنْعَامِ ثَمٰنِیَةَ اَزْوَاجٍ ؕ— یَخْلُقُكُمْ فِیْ بُطُوْنِ اُمَّهٰتِكُمْ خَلْقًا مِّنْ بَعْدِ خَلْقٍ فِیْ ظُلُمٰتٍ ثَلٰثٍ ؕ— ذٰلِكُمُ اللّٰهُ رَبُّكُمْ لَهُ الْمُلْكُ ؕ— لَاۤ اِلٰهَ اِلَّا هُوَ ۚ— فَاَنّٰی تُصْرَفُوْنَ ۟
ಅವನು ನಿಮ್ಮೆಲ್ಲರನ್ನು ಒಂದೇ ಜೀವದಿಂದ ಸೃಷ್ಟಿಸಿರುವನು. ತರುವಾಯ ಅದರಿಂದ ಅದರ ಜೋಡಿಯನ್ನು ಉಂಟು ಮಾಡಿದನು ಹಾಗೂ ನಿಮಗಾಗಿ ಜಾನುವಾರುಗಳಿಂದ ಎಂಟು ವರ್ಗ ಗಂಡು ಹೆಣ್ಣುಗಳನ್ನು ಇಳಿಸಿರುವನು. ಅವನು ನಿಮ್ಮನ್ನು ನಿಮ್ಮ ತಾಯಂದಿರ ಹೊಟ್ಟೆಗಳಲ್ಲಿ ಒಂದು ಸೃಷ್ಟಿ ಹಂತದ ಬಳಿಕ ಮತ್ತೊಂದು ಸೃಷ್ಟಿ ಹಂತವನ್ನಾಗಿ ಮೂರು ಅಂಧಕಾರಗಳಲ್ಲಿ ಸೃಷ್ಟಿಸುವನು. ಅವನೇ ನಿಮ್ಮ ಪ್ರಭುವು ಅಲ್ಲಾಹನಾಗಿದ್ದಾನೆ. ಅಧಿಪತ್ಯವು ಅವನದೇ ಆಗಿರುವುದು. ಅವನ ಹೊರತು ಇನ್ನಾವ ಆರಾಧ್ಯನಿಲ್ಲ. ಹಾಗಿದ್ದೂ ನೀವೆತ್ತ ಅಲೆದಾಡುತ್ತಿರುವಿರಿ?
ಅರಬ್ಬಿ ವ್ಯಾಖ್ಯಾನಗಳು:
اِنْ تَكْفُرُوْا فَاِنَّ اللّٰهَ غَنِیٌّ عَنْكُمْ ۫— وَلَا یَرْضٰی لِعِبَادِهِ الْكُفْرَ ۚ— وَاِنْ تَشْكُرُوْا یَرْضَهُ لَكُمْ ؕ— وَلَا تَزِرُ وَازِرَةٌ وِّزْرَ اُخْرٰی ؕ— ثُمَّ اِلٰی رَبِّكُمْ مَّرْجِعُكُمْ فَیُنَبِّئُكُمْ بِمَا كُنْتُمْ تَعْمَلُوْنَ ؕ— اِنَّهٗ عَلِیْمٌۢ بِذَاتِ الصُّدُوْرِ ۟
ನೀವು ಕೃತಘ್ನತೆ ತೋರುವುದಾದರೆ ಅಲ್ಲಾಹನು ನಿಮ್ಮಿಂದ ನಿರಪೇಕ್ಷನಾಗಿದ್ದಾನೆ ಹಾಗೂ ಅವನು ತನ್ನ ದಾಸರ ಪಾಲಿಗೆ ಕೃತಘ್ನತೆಯನ್ನು ಮೆಚ್ಚುವುದಿಲ್ಲ ಮತ್ತು ನೀವು ಕೃತಜ್ಞತೆ ತೋರುವುದಾದರೆ ಅದನ್ನು ಅವನು ನಿಮ್ಮ ಪಾಲಿಗೆ ಮೆಚ್ಚುತ್ತಾನೆ ಮತ್ತು ಪಾಪ ಭಾರ ಹೊರುವವನು ಮತ್ತೊಬ್ಬನ ಭಾರವನ್ನು ಹೊರಲಾರನು. ತರುವಾಯ ನಿಮ್ಮೆಲ್ಲರ ಮರಳುವಿಕೆಯು ನಿಮ್ಮ ಪ್ರಭುವಿನೆಡೆಗೇ ಆಗಿದೆ. ನೀವು ಮಾಡುತ್ತಿದ್ದಿದ್ದನ್ನು ಅವನು ನಿಮಗೆ ತಿಳಿಸಿಕೊಡುವನು. ಖಂಡಿತವಾಗಿಯು ಅವನು ಮನಸ್ಸಿನಲ್ಲಿರುವ ಸಂಗತಿಗಳನ್ನು ಚೆನ್ನಾಗಿಬಲ್ಲನು.
ಅರಬ್ಬಿ ವ್ಯಾಖ್ಯಾನಗಳು:
وَاِذَا مَسَّ الْاِنْسَانَ ضُرٌّ دَعَا رَبَّهٗ مُنِیْبًا اِلَیْهِ ثُمَّ اِذَا خَوَّلَهٗ نِعْمَةً مِّنْهُ نَسِیَ مَا كَانَ یَدْعُوْۤا اِلَیْهِ مِنْ قَبْلُ وَجَعَلَ لِلّٰهِ اَنْدَادًا لِّیُضِلَّ عَنْ سَبِیْلِهٖ ؕ— قُلْ تَمَتَّعْ بِكُفْرِكَ قَلِیْلًا ۖۗ— اِنَّكَ مِنْ اَصْحٰبِ النَّارِ ۟
ಮನುಷ್ಯನಿಗೆ ಯಾವುದಾದರೂ ವಿಪತ್ತು ಬಾಧಿಸಿದಾಗ ಅವನು ತನ್ನ ಪ್ರಭುವಿನೆಡೆಗೆ ಮರಳಿ ವಿನಮ್ರತೆಯಿಂದ ಅವನನ್ನು ಕರೆದುಬೇಡುತ್ತಾನೆ. ತರುವಾಯ ಅಲ್ಲಾಹನು ತನ್ನ ವತಿಯಿಂದ ಯಾವುದಾದರೂ ಅನುಗ್ರಹವನ್ನು ಅವನಿಗೆ ದಯಪಾಲಿಸಿದರೆ. ಅವನು ಇದಕ್ಕೆ ಮೊದಲು ತಾನು ಅವನೆಡೆಗೆ ಮೊರೆಯಿಟ್ಟಿರುವುದನ್ನು (ಸಂಪೂರ್ಣವಾಗಿ) ಮರೆತು ಬಿಡುತ್ತಾನೆ ಮತ್ತು ಇತರರನ್ನು ಅವನ ಮಾರ್ಗದಿಂದ ಭ್ರಷ್ಟಗೊಳಿಸಲು ಅಲ್ಲಾಹನಿಗೆ ಸರಿಸಮಾನರನ್ನು ನಿಶ್ಚಯಿಸುತ್ತಾನೆ. ಓ ಪೈಗಂಬರರೇ, ಹೇಳಿರಿ ಈ ಸತ್ಯನಿಷೇಧದ ಲಾಭವನ್ನು ಅಲ್ಪ ಕಾಲ ಭೋಗಿಸು. ಖಂಡಿತವಾಗಿಯು ನೀನು ನರಕವಾಸಿಗಳಲ್ಲಿ ಸೇರಲಿರುವೆ.
ಅರಬ್ಬಿ ವ್ಯಾಖ್ಯಾನಗಳು:
اَمَّنْ هُوَ قَانِتٌ اٰنَآءَ الَّیْلِ سَاجِدًا وَّقَآىِٕمًا یَّحْذَرُ الْاٰخِرَةَ وَیَرْجُوْا رَحْمَةَ رَبِّهٖ ؕ— قُلْ هَلْ یَسْتَوِی الَّذِیْنَ یَعْلَمُوْنَ وَالَّذِیْنَ لَا یَعْلَمُوْنَ ؕ— اِنَّمَا یَتَذَكَّرُ اُولُوا الْاَلْبَابِ ۟۠
ಪರಲೋಕವನ್ನು ಭಯಪಟ್ಟು, ತನ್ನ ಪ್ರಭುವಿನ ಕಾರುಣ್ಯವನ್ನು ಆಶಿಸಿ ರಾತ್ರಿ ಆಯಾಮಗಳಲ್ಲಿ ಸಾಷ್ಟಾಂಗವೆರಗುತ್ತಾ ಮತ್ತÄ ನಿಂತುಕೊAಡು ತನ್ನ ಪ್ರಭುವನ್ನು ಆರಾಧಿಸುವವನು ಇದಕ್ಕೆ ವ್ಯತಿರಿಕ್ತವಾಗಿರುವವನಿಗೆ ಸಮಾನನೇ? ಹೇಳಿರಿ: ಜ್ಞಾನವುಳ್ಳವರೂ, ಅಜ್ಞಾನಿಗಳೂ ಸರಿಸಮಾನರಾಗುವರೇ? ನಿಜವಾಗಿಯು ಬುದ್ಧಿಜೀವಿಗಳು ಮಾತ್ರ ಉಪದೇಶವನ್ನು ಸ್ವೀಕರಿಸುತ್ತಾರೆ.
ಅರಬ್ಬಿ ವ್ಯಾಖ್ಯಾನಗಳು:
قُلْ یٰعِبَادِ الَّذِیْنَ اٰمَنُوا اتَّقُوْا رَبَّكُمْ ؕ— لِلَّذِیْنَ اَحْسَنُوْا فِیْ هٰذِهِ الدُّنْیَا حَسَنَةٌ ؕ— وَاَرْضُ اللّٰهِ وَاسِعَةٌ ؕ— اِنَّمَا یُوَفَّی الصّٰبِرُوْنَ اَجْرَهُمْ بِغَیْرِ حِسَابٍ ۟
ಹೇಳಿರಿ: ಓ ನನ್ನ ಸತ್ಯವಿಶ್ವಾಸಿ ದಾಸರೇ, ನೀವು ನಿಮ್ಮ ಪ್ರಭುವನ್ನು ಭಯಪಡುತ್ತಿರಿ. ಇಹಲೋಕದಲ್ಲಿ ಒಳಿತನ್ನು ಮಾಡುವವರಿಗೇ ಸತ್ಫಲವಿರುವುದು ಮತ್ತು ಅಲ್ಲಾಹನ ಭೂಮಿಯು ವಿಶಾಲವಾಗಿರುವುದು. ಖಂಡಿತವಾಗಿಯು ಸಹನಶೀಲರಿಗೆ ಅವರ ಪ್ರತಿಫಲವನ್ನು ಲೆಕ್ಕಾತೀತವಾಗಿ ನೀಡಲಾಗುವುದು.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಅಧ್ಯಾಯ: ಅಝ್ಝುಮರ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ