Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಅಧ್ಯಾಯ: ಅಝ್ಝುಮರ್   ಶ್ಲೋಕ:
وَنُفِخَ فِی الصُّوْرِ فَصَعِقَ مَنْ فِی السَّمٰوٰتِ وَمَنْ فِی الْاَرْضِ اِلَّا مَنْ شَآءَ اللّٰهُ ؕ— ثُمَّ نُفِخَ فِیْهِ اُخْرٰی فَاِذَا هُمْ قِیَامٌ یَّنْظُرُوْنَ ۟
ಮತ್ತು ಕಹಳೆಯನ್ನು ಊದಲಾದಾಗ. ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವವರು ಮೂರ್ಛೆತಪ್ಪಿ ಹೋಗುವರು. ಆದರೆ ಅಲ್ಲಾಹನು ಇಚ್ಛಿಸಿದವರ ಹೊರತು. ಅನಂತರ ಪುನಃ ಕಹಳೆಯನ್ನು ಊದಲಾದಾಗ ಒಮ್ಮೇಲೆ ಅವರು ಎದ್ದು ನಿಂತು ವೀಕ್ಷಿಸುವರು.
ಅರಬ್ಬಿ ವ್ಯಾಖ್ಯಾನಗಳು:
وَاَشْرَقَتِ الْاَرْضُ بِنُوْرِ رَبِّهَا وَوُضِعَ الْكِتٰبُ وَجِایْٓءَ بِالنَّبِیّٖنَ وَالشُّهَدَآءِ وَقُضِیَ بَیْنَهُمْ بِالْحَقِّ وَهُمْ لَا یُظْلَمُوْنَ ۟
ಭೂಮಿಯು ತನ್ನ ಪ್ರಭುವಿನ ಪ್ರಕಾಶದಿಂದ ಬೆಳಗುವುದು ಮತ್ತು ಕರ್ಮ ಗ್ರಂಥಗಳನ್ನು ಇರಿಸಲಾಗುವುದು ಮತ್ತು ಪ್ರವಾದಿಗಳನ್ನೂ, ಸಾಕ್ಷಿಗಳನ್ನೂ ತರಲಾಗುವುದು ಮತ್ತು ಜನರ ನಡುವೆ ಸತ್ಯದೊಂದಿಗೆ ತೀರ್ಪು ನೀಡಲಾಗುವುದು ಮತ್ತು ಅವರು ಅನ್ಯಾಯಕ್ಕೊಳಗಾಗ ಲಾರರು.
ಅರಬ್ಬಿ ವ್ಯಾಖ್ಯಾನಗಳು:
وَوُفِّیَتْ كُلُّ نَفْسٍ مَّا عَمِلَتْ وَهُوَ اَعْلَمُ بِمَا یَفْعَلُوْنَ ۟۠
ಪ್ರತಿಯೊಬ್ಬ ವ್ಯಕ್ತಿಗೂ ಅವನು ಮಾಡುತ್ತಿದ್ದ ಕರ್ಮಗಳ ಪ್ರತಿಫಲವನ್ನು ಪರಿಪೂರ್ಣವಾಗಿ ನೀಡಲಾಗುವುದು ಮತ್ತು ಅವರು ಮಾಡುತ್ತಿರುವುದನ್ನು ಅಲ್ಲಾಹನು ಚೆನ್ನಾಗಿ ಬಲ್ಲನು
ಅರಬ್ಬಿ ವ್ಯಾಖ್ಯಾನಗಳು:
وَسِیْقَ الَّذِیْنَ كَفَرُوْۤا اِلٰی جَهَنَّمَ زُمَرًا ؕ— حَتّٰۤی اِذَا جَآءُوْهَا فُتِحَتْ اَبْوَابُهَا وَقَالَ لَهُمْ خَزَنَتُهَاۤ اَلَمْ یَاْتِكُمْ رُسُلٌ مِّنْكُمْ یَتْلُوْنَ عَلَیْكُمْ اٰیٰتِ رَبِّكُمْ وَیُنْذِرُوْنَكُمْ لِقَآءَ یَوْمِكُمْ هٰذَا ؕ— قَالُوْا بَلٰی وَلٰكِنْ حَقَّتْ كَلِمَةُ الْعَذَابِ عَلَی الْكٰفِرِیْنَ ۟
ಮತ್ತು ಸತ್ಯನಿಷೇಧಿಗಳನ್ನು ನರಕದೆಡೆಗೆ ತಂಡೋಪತAಡವಾಗಿ ಅಟ್ಟಲಾಗುವುದು. ಅವರು ಅಲ್ಲಿಗೆ ತಲುಪಿದಾಗ ಅದರ ದ್ವಾರಗಳು ತೆರೆಯಲಾಗುವುವು ಮತ್ತು ಅವರೊಂದಿಗೆ ಅದರ ಕಾವಲುಗಾರರು ಕೇಳುವರು: ನಿಮ್ಮ ಮುಂದೆ ನಿಮ್ಮ ಪ್ರಭುವಿನ ಸೂಕ್ತಿಗಳನ್ನು ಓದುವ ಮತ್ತು ನಿಮ್ಮನ್ನು ಈ ದಿನದ ಭೇಟಿಯ ಬಗ್ಗೆ ಎಚ್ಚರಿಸುವ ಸಂದೇಶವಾಹಕರು ನಿಮ್ಮಿಂದಲೇ ನಿಮ್ಮ ಬಳಿ ಬಂದಿರಲಿಲ್ಲವೇ ? ಆಗ ಅವರು ಹೇಳುವರು: ಹೌದು ಬಂದಿದ್ದರು. ಆದರೆ ಸತ್ಯನಿಷೇಧಿಗಳ ಮೇಲೆ ಯಾತನೆಯ ವಚನವು ಸಾಬೀತುಗೊಂಡಿದೆ.
ಅರಬ್ಬಿ ವ್ಯಾಖ್ಯಾನಗಳು:
قِیْلَ ادْخُلُوْۤا اَبْوَابَ جَهَنَّمَ خٰلِدِیْنَ فِیْهَا ۚ— فَبِئْسَ مَثْوَی الْمُتَكَبِّرِیْنَ ۟
ಹೇಳಲಾಗುವುದು: ನೀವು ನರಕದ ದ್ವಾರಗಳಲ್ಲಿ ಪ್ರವೇಶಿಸಿರಿ. ಅಲ್ಲಿ ನೀವು ಶಾಶ್ವತರಾಗಿರುವಿರಿ. ಹಾಗೆಯೇ ಅಹಂಕಾರಿಗಳ ವಾಸಸ್ಥಳವು ಅದೆಷ್ಟು ನಿಕೃಷ್ಟವಾಗಿದೆ.
ಅರಬ್ಬಿ ವ್ಯಾಖ್ಯಾನಗಳು:
وَسِیْقَ الَّذِیْنَ اتَّقَوْا رَبَّهُمْ اِلَی الْجَنَّةِ زُمَرًا ؕ— حَتّٰۤی اِذَا جَآءُوْهَا وَفُتِحَتْ اَبْوَابُهَا وَقَالَ لَهُمْ خَزَنَتُهَا سَلٰمٌ عَلَیْكُمْ طِبْتُمْ فَادْخُلُوْهَا خٰلِدِیْنَ ۟
ಇನ್ನು ತಮ್ಮ ಪ್ರಭುವನ್ನು ಭಯಪಡುವವರು ಸ್ವರ್ಗದೆಡೆಗೆ ತಂಡೋಪ ತಂಡವಾಗಿ ಕರೆದೊಯ್ಯಲಾಗುವರು. ಅವರು ಅಲ್ಲಿಗೆ ತಲುಪಿದಾಗ ಅದರ ದ್ವಾರಗಳು ತೆÉರೆಯಲಾಗುವುದು. ಅದರ ಕಾವಲುಗಾರರು ಅವರಿಗೆ ಹೇಳುವರು: ನಿಮ್ಮ ಮೇಲೆ ಶಾಂತಿ ಇರಲಿ. ನೀವು ಸಂತುಷ್ಟರಾಗಿರಿ. ಮತ್ತು ಇದರಲ್ಲಿ ಶಾಶ್ವತವಾಗಿ ಪ್ರವೇಶಿಸಿರಿ.
ಅರಬ್ಬಿ ವ್ಯಾಖ್ಯಾನಗಳು:
وَقَالُوا الْحَمْدُ لِلّٰهِ الَّذِیْ صَدَقَنَا وَعْدَهٗ وَاَوْرَثَنَا الْاَرْضَ نَتَبَوَّاُ مِنَ الْجَنَّةِ حَیْثُ نَشَآءُ ۚ— فَنِعْمَ اَجْرُ الْعٰمِلِیْنَ ۟
ಅವರು ಹೇಳುವರು: ನಮ್ಮೊಂದಿಗೆ ತನ್ನ ವಾಗ್ದಾನವನ್ನು ಸತ್ಯವನ್ನಾಗಿಸಿ ನಮ್ಮನ್ನು ಈ ನೆಲದ ವಾರೀಸುದಾರರನ್ನಾಗಿ ಮಾಡಿದ ಅಲ್ಲಾಹನಿಗೇ ಸರ್ವಸ್ತುತಿಯು ಮೀಸಲು. ಸ್ವರ್ಗದಲ್ಲಿ ನಾವು ಇಚ್ಛಿಸಿದ ಕಡೆ ನೆಲೆಸಬಹುದು. ಸತ್ಕರ್ಮಿಗಳ ಪ್ರತಿಫಲವು ಅದೆಷ್ಟು ಉತ್ತಮವಾದುದು!
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಅಧ್ಯಾಯ: ಅಝ್ಝುಮರ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ