Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಅಧ್ಯಾಯ: ಗಾಫಿರ್   ಶ್ಲೋಕ:
رَبَّنَا وَاَدْخِلْهُمْ جَنّٰتِ عَدْنِ ١لَّتِیْ وَعَدْتَّهُمْ وَمَنْ صَلَحَ مِنْ اٰبَآىِٕهِمْ وَاَزْوَاجِهِمْ وَذُرِّیّٰتِهِمْ ؕ— اِنَّكَ اَنْتَ الْعَزِیْزُ الْحَكِیْمُ ۟ۙ
ಓ ನಮ್ಮ ಪ್ರಭು, ಅವರನ್ನು ಮತ್ತು ಸಜ್ಜನರಾದ ಅವರ ಮಾತಾ ಪಿತರನ್ನು ಪತ್ನಿಯರನ್ನು, ಸಂತಾನಗಳನ್ನು, ಅವರಿಗೆ ವಾಗ್ದಾನ ಮಾಡಿರುವಂತಹ ಶಾಶ್ವತವಾಸದ ಸ್ವರ್ಗೊದ್ಯಾನಗಳಲ್ಲಿ ಪ್ರವೇಶಿಸು. ನಿಜವಾಗಿಯು ನೀನು ಪ್ರಚಂಡನೂ, ಸುಜ್ಞಾನಿಯೂ ಆಗಿರುವೆ.
ಅರಬ್ಬಿ ವ್ಯಾಖ್ಯಾನಗಳು:
وَقِهِمُ السَّیِّاٰتِ ؕ— وَمَنْ تَقِ السَّیِّاٰتِ یَوْمَىِٕذٍ فَقَدْ رَحِمْتَهٗ ؕ— وَذٰلِكَ هُوَ الْفَوْزُ الْعَظِیْمُ ۟۠
ಅವರನ್ನು ಕೆಡುಕುಗಳಿಂದ ರಕ್ಷಿಸು. ಆ ದಿನ ನೀನು ಯಾರನ್ನು ಕೆಡುಕುಗಳಿಂದ ರಕ್ಷಿಸಿದೆಯೋ ಅವರ ಮೇಲೆ ನೀನು ಕರುಣೆ ತೋರಿಸಿರುವೆ ಮತ್ತು ಇದುವೇ ಮಹಾ ಯಶಸ್ಸಾಗಿದೆ.
ಅರಬ್ಬಿ ವ್ಯಾಖ್ಯಾನಗಳು:
اِنَّ الَّذِیْنَ كَفَرُوْا یُنَادَوْنَ لَمَقْتُ اللّٰهِ اَكْبَرُ مِنْ مَّقْتِكُمْ اَنْفُسَكُمْ اِذْ تُدْعَوْنَ اِلَی الْاِیْمَانِ فَتَكْفُرُوْنَ ۟
ನಿಸ್ಸಂಶಯವಾಗಿಯು ಸತ್ಯನಿಷೇಧಿಗಳಿಗೆ ಹೀಗೆ ಹೇಳಲಾಗುವುದು. ನಿಮ್ಮನ್ನು ಸತ್ಯವಿಶ್ವಾಸದೆಡೆಗೆ ಕರೆಯಲಾದಾಗ ನೀವು ನಿಷೇಧಿಸುತ್ತಿದ್ದ ಸಂದರ್ಭದಲ್ಲಿ ಅಲ್ಲಾಹನಿಗೆ ನಿಮ್ಮ ಮೇಲೆ ಉಂಟಾದ ಕೋಪವು ಸ್ವತಃ ನಿಮಗೆ ನಿಮ್ಮ ಮೇಲೆ ಉಂಟಾದ ಕೋಪಕ್ಕಿಂತಲೂ ಮಿಗಿಲಾಗಿತ್ತು.
ಅರಬ್ಬಿ ವ್ಯಾಖ್ಯಾನಗಳು:
قَالُوْا رَبَّنَاۤ اَمَتَّنَا اثْنَتَیْنِ وَاَحْیَیْتَنَا اثْنَتَیْنِ فَاعْتَرَفْنَا بِذُنُوْبِنَا فَهَلْ اِلٰی خُرُوْجٍ مِّنْ سَبِیْلٍ ۟
ಅವರು ಹೇಳುವರು: ನಮ್ಮ ಪ್ರಭು, ನೀನು ನಮಗೆ ಎರಡು ಬಾರಿ ಮರಣ ನೀಡಿರುವೆ ಹಾಗೂ ಎರಡು ಬಾರಿ ಜೀವಂತಗೊಳಿಸಿರುವೆ. ನಾವೀಗ ನಮ್ಮ ಪಾಪಗಳನ್ನು ಒಪ್ಪಿಕೊಂಡೆವು. ಇನ್ನು ಇಲ್ಲಿಂದ ಹೊರಹೋಗಲಿಕ್ಕೆ ಯಾವುದಾದರು ಮಾರ್ಗವಿದೆಯೇ ?
ಅರಬ್ಬಿ ವ್ಯಾಖ್ಯಾನಗಳು:
ذٰلِكُمْ بِاَنَّهٗۤ اِذَا دُعِیَ اللّٰهُ وَحْدَهٗ كَفَرْتُمْ ۚ— وَاِنْ یُّشْرَكْ بِهٖ تُؤْمِنُوْا ؕ— فَالْحُكْمُ لِلّٰهِ الْعَلِیِّ الْكَبِیْرِ ۟
ಇದೇಕೆಂದರೆ ನಿಮ್ಮನ್ನು ಏಕÉÊಕ ಅಲ್ಲಾಹನೆಡೆಗೆ ಕರೆಯಲಾದಾಗ ನೀವು ನಿಷೇಧಿಸುತ್ತಿದ್ದಿರಿ ಮತ್ತು ಅವನೊಂದಿಗೆ ಸಹಭಾಗಿಗಳನ್ನು ಕಲ್ಪಿಸಲಾದಾಗ ನೀವು ನಂಬುತ್ತಿದ್ದಿರಿ. ಇನ್ನು ತೀರ್ಪಿನ ಅಧಿಕಾರವು ಮಹಾನನೂ ಉನ್ನತನೂ ಆದ ಅಲ್ಲಾಹನದ್ದೇ ಆಗಿದೆ.
ಅರಬ್ಬಿ ವ್ಯಾಖ್ಯಾನಗಳು:
هُوَ الَّذِیْ یُرِیْكُمْ اٰیٰتِهٖ وَیُنَزِّلُ لَكُمْ مِّنَ السَّمَآءِ رِزْقًا ؕ— وَمَا یَتَذَكَّرُ اِلَّا مَنْ یُّنِیْبُ ۟
ಅವನೇ ನಿಮಗೆ ತನ್ನ ದೃಷ್ಟಾಂತಗಳನ್ನು ತೋರಿಸುತ್ತಾನೆ ಮತ್ತು ಆಕಾಶದಿಂದ ನಿಮಗೆ ಜೀವನಾಧಾರವನ್ನು ಇಳಿಸಿಕೊಡುತ್ತಾನೆ. ಆದರೆ (ಆಲ್ಲಾಹನೆಡೆಗೆ) ಮರಳುವವನೇ ಉಪದೇಶವನ್ನು ಸ್ವೀಕರಿಸುತ್ತಾನೆ.
ಅರಬ್ಬಿ ವ್ಯಾಖ್ಯಾನಗಳು:
فَادْعُوا اللّٰهَ مُخْلِصِیْنَ لَهُ الدِّیْنَ وَلَوْ كَرِهَ الْكٰفِرُوْنَ ۟
ಇನ್ನು ನೀವು ಧರ್ಮವನ್ನು ಅಲ್ಲಾಹನಿಗೇ ಮೀಸಲಿಟ್ಟು ಅವನನ್ನೇ ಕರೆದು ಪ್ರಾರ್ಥಿಸಿರಿ. ಸತ್ಯನಿಷೇಧಿಗಳು ಇಷ್ಟಪಡದಿದ್ದರೂ ಸರಿಯೇ?
ಅರಬ್ಬಿ ವ್ಯಾಖ್ಯಾನಗಳು:
رَفِیْعُ الدَّرَجٰتِ ذُو الْعَرْشِ ۚ— یُلْقِی الرُّوْحَ مِنْ اَمْرِهٖ عَلٰی مَنْ یَّشَآءُ مِنْ عِبَادِهٖ لِیُنْذِرَ یَوْمَ التَّلَاقِ ۟ۙ
ಅವನು ಅತ್ಯುನ್ನತ ಪದವಿಯುಳ್ಳವನೂ, ಸಿಂಹಾಸನದ ಒಡೆಯನೂ ಅವನು ತನ್ನ ಆದೇಶದ ಮೂಲಕ ತನ್ನ ದಾಸರ ಪÉÊಕಿ ತಾನಿಚ್ಛಿಸಿದವರ ಮೇಲೆ ದಿವ್ಯವಾಣಿಯನ್ನು ಅವತೀರ್ಣಗೊಳಿಸುತ್ತಾನೆ. ಇದು ಅವರು ಭೇಟಿಯಾಗುವ ದಿನದ ಕುರಿತು ಎಚ್ಚರಿಸಲೆಂದಾಗಿದೆ.
ಅರಬ್ಬಿ ವ್ಯಾಖ್ಯಾನಗಳು:
یَوْمَ هُمْ بَارِزُوْنَ ۚ۬— لَا یَخْفٰی عَلَی اللّٰهِ مِنْهُمْ شَیْءٌ ؕ— لِمَنِ الْمُلْكُ الْیَوْمَ ؕ— لِلّٰهِ الْوَاحِدِ الْقَهَّارِ ۟
ಅವರು ತಮ್ಮ ಸಮಾಧಿಗಳಿಂದ ಹೊರಬರುವ ದಿನ ಅವರ ಯಾವ ವಿಷಯವೂ ಅಲ್ಲಾಹನಿಂದ ಅಡಗಿರುವುದಿಲ್ಲ. ಇಂದು ಅಧಿಪತ್ಯವು ಯಾರದು ? ಎಂದು ಅಲ್ಲಾಹನು ಕೇಳುವನು. ಏಕÉÊಕನೂ, ಪ್ರಚಂಡನೂ ಆದ ಅಲ್ಲಾಹನದ್ದು ಎಂದು ಸ್ವತಃ ಅವನೇ ಉತ್ತರಿಸುವನು.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಅಧ್ಯಾಯ: ಗಾಫಿರ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ