Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಅಧ್ಯಾಯ: ಅಲ್ -ಮಾಇದ   ಶ್ಲೋಕ:
اِنَّمَا یُرِیْدُ الشَّیْطٰنُ اَنْ یُّوْقِعَ بَیْنَكُمُ الْعَدَاوَةَ وَالْبَغْضَآءَ فِی الْخَمْرِ وَالْمَیْسِرِ وَیَصُدَّكُمْ عَنْ ذِكْرِ اللّٰهِ وَعَنِ الصَّلٰوةِ ۚ— فَهَلْ اَنْتُمْ مُّنْتَهُوْنَ ۟
ಶೈತಾನನು ಮದ್ಯ ಮತ್ತು ಜೂಜಾಟದ ಮೂಲಕ ನಿಮ್ಮ ನಡುವೆ ಶತ್ರುತ್ವ ಹಾಗೂ ವಿದ್ವೇಷವನ್ನುಂಟು ಮಾಡಲು, ಅಲ್ಲಾಹನ ಸ್ಮರಣೆ ಹಾಗೂ ನಮಾಝ್‌ನಿಂದ ನಿಮ್ಮನ್ನು ದೂರವಿಡಲು ಬಯಸುತ್ತಾನೆ. ಆದ್ದರಿಂದ ನೀವು ಅವುಗಳಿಂದ ದೂರವಿರುವಿರಾ?
ಅರಬ್ಬಿ ವ್ಯಾಖ್ಯಾನಗಳು:
وَاَطِیْعُوا اللّٰهَ وَاَطِیْعُوا الرَّسُوْلَ وَاحْذَرُوْا ۚ— فَاِنْ تَوَلَّیْتُمْ فَاعْلَمُوْۤا اَنَّمَا عَلٰی رَسُوْلِنَا الْبَلٰغُ الْمُبِیْنُ ۟
ನೀವು ಅಲ್ಲಾಹನ ಆಜ್ಞಾನುಸರಣೆಯನ್ನು ಮಾಡಿರಿ ಮತ್ತು ಸಂದೇಶವಾಹಕರ ಅನುಸರಣೆಯನ್ನು ಮಾಡಿರಿ ಮತ್ತು (ಪಾಪಕೃತ್ಯಗಳಿಂದ) ಎಚ್ಚರವಹಿಸಿರಿ. ಇನ್ನು ನೀವು ವಿಮುಖರಾಗುವುದಾದರೆ ನಮ್ಮ ಸಂದೇಶವಾಹಕರ ಕರ್ತವ್ಯವು ಸ್ಪಷ್ಟವಾಗಿ ಸಂದೇಶ ತಲುಪಿಸುವುದು ಮಾತ್ರವಾಗಿದೆಂಬುದನ್ನು ತಿಳಿದುಕೊಳ್ಳಿರಿ.
ಅರಬ್ಬಿ ವ್ಯಾಖ್ಯಾನಗಳು:
لَیْسَ عَلَی الَّذِیْنَ اٰمَنُوْا وَعَمِلُوا الصّٰلِحٰتِ جُنَاحٌ فِیْمَا طَعِمُوْۤا اِذَا مَا اتَّقَوْا وَّاٰمَنُوْا وَعَمِلُوا الصّٰلِحٰتِ ثُمَّ اتَّقَوْا وَّاٰمَنُوْا ثُمَّ اتَّقَوْا وَّاَحْسَنُوْا ؕ— وَاللّٰهُ یُحِبُّ الْمُحْسِنِیْنَ ۟۠
ಸತ್ಯವಿಶ್ವಾಸವಿರಿಸಿ ಸತ್ಕರ್ಮಗೈದವರ ಮೇಲೆ ಅವರು ಈ ಹಿಂದೆ ಸೇವಿಸಿದುದರಲ್ಲಿ ಅವರ ಮೇಲೆ ಯಾವ ದೋಷವಿಲ್ಲ ಅವರು ಇನ್ನು ಮುಂದೆ ನಿಷಿದ್ಧ ವಸ್ತುಗಳನ್ನು ವರ್ಜಿಸಿದರೆ ನಂತರ ಅವರು ಭಯಭಕ್ತಿ ಪಾಲಿಸಿದರೆ ಮತ್ತು ಸತ್ಯ ವಿಶ್ವಾಸವಿರಿಸಿದರೆ ಆ ಬಳಿಕವೂ ಅವರು ಭಯಭಕ್ತಿ ಪಾಲಿಸಿದರೆ ಮತ್ತು ಸತ್ಕರ್ಮಗಳನ್ನೆಸಗಿದರೆ ಅಲ್ಲಾಹನು ಇಂತಹ ಸದಾಚಾರಿಗಳನ್ನು ಇಷ್ಟಪಡುತ್ತಾನೆ.
ಅರಬ್ಬಿ ವ್ಯಾಖ್ಯಾನಗಳು:
یٰۤاَیُّهَا الَّذِیْنَ اٰمَنُوْا لَیَبْلُوَنَّكُمُ اللّٰهُ بِشَیْءٍ مِّنَ الصَّیْدِ تَنَالُهٗۤ اَیْدِیْكُمْ وَرِمَاحُكُمْ لِیَعْلَمَ اللّٰهُ مَنْ یَّخَافُهٗ بِالْغَیْبِ ۚ— فَمَنِ اعْتَدٰی بَعْدَ ذٰلِكَ فَلَهٗ عَذَابٌ اَلِیْمٌ ۟
ಓ ಸತ್ಯವಿಶ್ವಾಸಿಗಳೇ, ನಿಮ್ಮ ಕೈಗಳು ಹಾಗೂ ಭರ್ಚಿಗಳಿಂದ ಬೇಟೆಯಾಡುವ ಪ್ರಾಣಿಗಳ ಮೂಲಕ ಅಲ್ಲಾಹನು ನಿಮ್ಮನ್ನು ಖಂಡಿತ ಪರೀಕ್ಷಿಸುವನು. ಇದು ಅಲ್ಲಾಹನು ಯಾರು ತನ್ನನ್ನು ಅಗೋಚರವಾಗಿ ಭಯಪಡುತ್ತಾನೆಂದು ತಿಳಿಯಲೆಂದಾಗಿದೆ. ಆದ್ದರಿಂದ ಯಾರು ಇದರ ನಂತರ ಹದ್ದು ಮೀರುತ್ತಾನೋ ಅವನಿಗೆ ಯಾತನಾಮಯವಾದ ಶಿಕ್ಷೆಯಿದೆ.
ಅರಬ್ಬಿ ವ್ಯಾಖ್ಯಾನಗಳು:
یٰۤاَیُّهَا الَّذِیْنَ اٰمَنُوْا لَا تَقْتُلُوا الصَّیْدَ وَاَنْتُمْ حُرُمٌ ؕ— وَمَنْ قَتَلَهٗ مِنْكُمْ مُّتَعَمِّدًا فَجَزَآءٌ مِّثْلُ مَا قَتَلَ مِنَ النَّعَمِ یَحْكُمُ بِهٖ ذَوَا عَدْلٍ مِّنْكُمْ هَدْیًا بٰلِغَ الْكَعْبَةِ اَوْ كَفَّارَةٌ طَعَامُ مَسٰكِیْنَ اَوْ عَدْلُ ذٰلِكَ صِیَامًا لِّیَذُوْقَ وَبَالَ اَمْرِهٖ ؕ— عَفَا اللّٰهُ عَمَّا سَلَفَ ؕ— وَمَنْ عَادَ فَیَنْتَقِمُ اللّٰهُ مِنْهُ ؕ— وَاللّٰهُ عَزِیْزٌ ذُو انْتِقَامٍ ۟
ಓ ಸತ್ಯವಿಶ್ವಾಸಿಗಳೇ, ನೀವು ಇಹ್ರಾಮ್‌ನಲ್ಲಿರುವಾಗ ಬೇಟೆ ಪ್ರಾಣಿಯನ್ನು ಕೊಲ್ಲಬೇಡಿರಿ. ನಿಮ್ಮ ಪೈಕಿ ಯಾರಾದರೂ ಉದ್ದೇಶಪೂರ್ವಕವಾಗಿ ಅದನ್ನು ಕೊಂದರೆ ಅವನು ಅದಕ್ಕೆ ಸಮಾನವಾದ ಪ್ರಾಣಿಯನ್ನು ಪ್ರಾಯಶ್ಚಿತ್ತವಾಗಿ ನೀಡುವುದು ಕಡ್ಡಾಯವಾಗಿದೆ. ನಿಮ್ಮ ಪೈಕಿ ಇಬ್ಬರು ನ್ಯಾಯಸಮ್ಮತ ವ್ಯಕ್ತಿಗಳು ಇದರ ತೀರ್ಮಾನ ಮಾಡಲಿ, ಪ್ರಾಯಶ್ಚಿತ್ತವು ಕಾಬಾಲಯಕ್ಕೆ ಹರಕೆಯ ರೂಪದಲ್ಲಿ ತಲುಪಿಸಬೇಕಾಗಿದೆ ಅಥವಾ ಪ್ರಾಯಶ್ಚಿತ್ತವನ್ನು ದರಿದ್ರರಿಗೆ ಆಹಾರವಾಗಿ ನೀಡಲಿ ಮತ್ತು ಅದಕ್ಕೆ ಸಮಾನವಾಗಿ ಉಪವಾಸ ಆಚರಿಸಲಿ. ಇದು ಅವನು ಮಾಡಿದ ಕೃತ್ಯದ ಪರಿಣಾಮವನ್ನು ಸ್ವತಃ ಅವನು ಅನುಭವಿಸಲೆಂದಾಗಿದೆ. ಈ ಮುಂಚೆ ಮಾಡಿರುವುದನ್ನು ಅಲ್ಲಾಹು ಕ್ಷಮಿಸಿರುತ್ತಾನೆ ಮತ್ತು ಯಾರು ಪುನಃ ಅಂತಹದೇ ಕೃತ್ಯವನ್ನು ಎಸಗುತ್ತಾನೋ ಅಲ್ಲಾಹನು ಪ್ರತೀಕಾರ ಶಿಕ್ಷಾಕ್ರಮವನ್ನು ಕೈಗೊಳ್ಳುವನು. ಅಲ್ಲಾಹನು ಪ್ರತಾಪಶಾಲಿಯೂ, ಶಿಕ್ಷಾಕ್ರಮ ಕೈಗೊಳ್ಳುವವನೂ ಆಗಿದ್ದಾನೆ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಅಧ್ಯಾಯ: ಅಲ್ -ಮಾಇದ
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ