Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಅಧ್ಯಾಯ: ಅದ್ದಾರಿಯಾತ್   ಶ್ಲೋಕ:
كَذٰلِكَ مَاۤ اَتَی الَّذِیْنَ مِنْ قَبْلِهِمْ مِّنْ رَّسُوْلٍ اِلَّا قَالُوْا سَاحِرٌ اَوْ مَجْنُوْنٌ ۟۫
ಇದೇ ಪ್ರಕಾರ ಇವರಿಗಿಂತ ಮುಂಚಿನ ಸಮುದಾಯಗಳ ಬಳಿ ಯಾವ ಸಂದೇಶವಾಹಕರು ಬಂದರೂ ಅವರು ಇವರನ್ನು ಜಾದುಗಾರ ಅಥವ ಹುಚ್ಚನೆಂದು ಹೇಳದೇ ಬಿಟ್ಟಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
اَتَوَاصَوْا بِهٖ ۚ— بَلْ هُمْ قَوْمٌ طَاغُوْنَ ۟ۚ
ಅವರು ಈ ಬಗ್ಗೆ ಪರಸ್ಪರ ಉಯಿಲು ಮಾಡುತ್ತಾ ಬಂದಿರುವರೇ ? ಇಲ್ಲ ಅವರು ಅತಿಕ್ರಮಿ ಜನರಾಗಿದ್ದರು.
ಅರಬ್ಬಿ ವ್ಯಾಖ್ಯಾನಗಳು:
فَتَوَلَّ عَنْهُمْ فَمَاۤ اَنْتَ بِمَلُوْمٍ ۟ؗ
ಆದ್ದರಿಂದ ನೀವು ಅವರಿಂದ ಮುಖ ತಿರುಗಿಸಿಕೊಳ್ಳಿರಿ, ನೀವು ಆಕ್ಷೇಪಾರ್ಹರಲ್ಲ.
ಅರಬ್ಬಿ ವ್ಯಾಖ್ಯಾನಗಳು:
وَّذَكِّرْ فَاِنَّ الذِّكْرٰی تَنْفَعُ الْمُؤْمِنِیْنَ ۟
ನೀವು ಉಪದೇಶಿಸುತ್ತಿರಿ, ನಿಜವಾಗಿಯೂ ಉಪದೇಶವು ಸತ್ಯವಿಶ್ವಾಸಿಗಳಿಗೆ ಪ್ರಯೋಜನಕಾರಿಯಾಗಿರುತ್ತದೆ.
ಅರಬ್ಬಿ ವ್ಯಾಖ್ಯಾನಗಳು:
وَمَا خَلَقْتُ الْجِنَّ وَالْاِنْسَ اِلَّا لِیَعْبُدُوْنِ ۟
ನಾನು ಯಕ್ಷಗಳನ್ನು, ಮನುಷ್ಯರನ್ನು, ನನ್ನ ಆರಾಧನೆಗಲ್ಲದೇ ಸೃಷ್ಟಿಸಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
مَاۤ اُرِیْدُ مِنْهُمْ مِّنْ رِّزْقٍ وَّمَاۤ اُرِیْدُ اَنْ یُّطْعِمُوْنِ ۟
ನಾನು ಅವರಿಂದ ಜೀವನಾಧಾರವನ್ನು ಬಯಸುವುದಿಲ್ಲ, ಮತ್ತು ಅವರು ನನಗೆ ಉಣಿಸಬೇಕೆಂದೂ ಬಯಸುವುದಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
اِنَّ اللّٰهَ هُوَ الرَّزَّاقُ ذُو الْقُوَّةِ الْمَتِیْنُ ۟
ನಿಶ್ಚಯವಾಗಿಯು ಅಲ್ಲಾಹನು ಮಹಾ ಅನ್ನದಾತನೂ, ಶಕ್ತಿ ಸಾಮರ್ಥ್ಯವುಳ್ಳವನೂ ಆಗಿದ್ದಾನೆ.
ಅರಬ್ಬಿ ವ್ಯಾಖ್ಯಾನಗಳು:
فَاِنَّ لِلَّذِیْنَ ظَلَمُوْا ذَنُوْبًا مِّثْلَ ذَنُوْبِ اَصْحٰبِهِمْ فَلَا یَسْتَعْجِلُوْنِ ۟
ಆದ್ದರಿಂದ ಅಕ್ರಮವೆಸಗಿದವರಿಗೂ ತಮ್ಮ ಸಂಗಡಿಗರಿಗೆ ಸಿಕ್ಕಿದಂತಹ ಶಿಕ್ಷೆಯಪಾಲಿದೆ, ಆದ್ದರಿಂದ ಅವರು ನನ್ನಲ್ಲಿ ಆತುರಪಡದಿರಲಿ.
ಅರಬ್ಬಿ ವ್ಯಾಖ್ಯಾನಗಳು:
فَوَیْلٌ لِّلَّذِیْنَ كَفَرُوْا مِنْ یَّوْمِهِمُ الَّذِیْ یُوْعَدُوْنَ ۟۠
ಆದ್ದರಿಂದ ಎಚ್ಚರಿಕೆ ನೀಡಲಾಗುತ್ತಿರುವ ಆ ದಿನದಂದು ಸತ್ಯನಿಷೇಧಿಗಳಿಗೆ ನಾಶವಿದೆ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಅಧ್ಯಾಯ: ಅದ್ದಾರಿಯಾತ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ