Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಅಧ್ಯಾಯ: ಅತ್ತೌಬ   ಶ್ಲೋಕ:
اَلتَّآىِٕبُوْنَ الْعٰبِدُوْنَ الْحٰمِدُوْنَ السَّآىِٕحُوْنَ الرّٰكِعُوْنَ السّٰجِدُوْنَ الْاٰمِرُوْنَ بِالْمَعْرُوْفِ وَالنَّاهُوْنَ عَنِ الْمُنْكَرِ وَالْحٰفِظُوْنَ لِحُدُوْدِ اللّٰهِ ؕ— وَبَشِّرِ الْمُؤْمِنِیْنَ ۟
ಅವರು ಅಲ್ಲಾಹನೆಡೆಗೆ ಪಶ್ಚಾತ್ತಾಪ ಪಟ್ಟು ಮರಳುವವರು, ಆರಾಧನೆ ಮಾಡುವವರು, ಸ್ತುತಿಸುವವರು, ಉಪವಾಸವನ್ನಾಚರಿಸುವವರು, ತಲೆಬಾಗಿಸುವವರು ಸಾಷ್ಟಾಂಗ ಮಾಡುವವರು, ಒಳಿತುಗಳ ಶಿಕ್ಷಣ ನೀಡುವವರು, ಕೆಡಕು ವಿಚಾರಗಳಿಂದ ತಡೆಯುವವರು ಮತ್ತು ಅಲ್ಲಾಹನ ಮೇರೆಗಳ ಎಚ್ಚರ ವಹಿಸುವವರಾಗಿದ್ದಾರೆ. ಮತ್ತು ಇಂತಹ ಸತ್ಯವಿಶ್ವಾಸಿಗಳಿಗೆ ತಾವು ಶುಭವಾರ್ತೆಯನ್ನು ನೀಡಿರಿ.
ಅರಬ್ಬಿ ವ್ಯಾಖ್ಯಾನಗಳು:
مَا كَانَ لِلنَّبِیِّ وَالَّذِیْنَ اٰمَنُوْۤا اَنْ یَّسْتَغْفِرُوْا لِلْمُشْرِكِیْنَ وَلَوْ كَانُوْۤا اُولِیْ قُرْبٰی مِنْ بَعْدِ مَا تَبَیَّنَ لَهُمْ اَنَّهُمْ اَصْحٰبُ الْجَحِیْمِ ۟
ಬಹುದೇವಾರಾಧಕರು ನರಕಕ್ಕೆ ಅರ್ಹರೆಂಬ ವಿಷಯ ಸ್ಪಷ್ಟವಾದ ಬಳಿಕ ಅವರು ಆಪ್ತಬಂಧುಗಳೇ ಆಗಿದ್ದರು. ಅವರ ಕ್ಷಮೆಗಾಗಿ ಪ್ರಾರ್ಥಿಸುವುದು ಪೈಗಂಬರರಿಗೂ, ಸತ್ಯವಿಶ್ವಾಸಿಗಳಿಗೂ ಯುಕ್ತವಲ್ಲ.
ಅರಬ್ಬಿ ವ್ಯಾಖ್ಯಾನಗಳು:
وَمَا كَانَ اسْتِغْفَارُ اِبْرٰهِیْمَ لِاَبِیْهِ اِلَّا عَنْ مَّوْعِدَةٍ وَّعَدَهَاۤ اِیَّاهُ ۚ— فَلَمَّا تَبَیَّنَ لَهٗۤ اَنَّهٗ عَدُوٌّ لِّلّٰهِ تَبَرَّاَ مِنْهُ ؕ— اِنَّ اِبْرٰهِیْمَ لَاَوَّاهٌ حَلِیْمٌ ۟
ಮತ್ತು ಇಬ್ರಾಹೀಮ್‌ರವರು ತನ್ನ ತಂದೆಗಾಗಿ ಕ್ಷಮೆ ಯಾಚಿಸಿದ್ದು ಕೇವಲ ಅವರು ಅವನೊಂದಿಗೆ ಮಾಡಿದ ವಾಗ್ದಾನದಿಂದಾಗಿತ್ತು. ಅನಂತರ ಅವರಿಗೆ ಅವರ ತಂದೆಯು ಅಲ್ಲಾಹನ ಶತ್ರುವೆಂದು ಸ್ಪಷ್ಟವಾದಾಗ ಅವರು ಆತನಿಂದ ಸಂಪೂರ್ಣವಾಗಿ ಬೇಸರದಿಂದ ಸರಿದುಬಿಟ್ಟರು. ಖಂಡಿತವಾಗಿಯೂ ಇಬ್ರಾಹೀಮರು ಅತ್ಯಂತ ಮೃದು ಹೃದಯಿಯೂ, ಸಹನಾಶೀಲರೂ ಆಗಿದ್ದರು.
ಅರಬ್ಬಿ ವ್ಯಾಖ್ಯಾನಗಳು:
وَمَا كَانَ اللّٰهُ لِیُضِلَّ قَوْمًا بَعْدَ اِذْ هَدٰىهُمْ حَتّٰی یُبَیِّنَ لَهُمْ مَّا یَتَّقُوْنَ ؕ— اِنَّ اللّٰهَ بِكُلِّ شَیْءٍ عَلِیْمٌ ۟
ಮತ್ತು ಅಲ್ಲಾಹನು ಯಾವುದೇ ಜನತೆಗೆ ಮಾರ್ಗದರ್ಶನ ನೀಡಿದ ನಂತರ, ಅವರು ತಮ್ಮನ್ನು ಸಂರಕ್ಷಿಸಿಕೊಳ್ಳಲು ವಹಿಸಬೇಕಾದ ಜಾಗರೂಕತೆಗಳನ್ನು ಅವರಿಗೆ ಸ್ಪಷ್ಟಗೊಳಿಸುವ ತನಕ ಅವರನ್ನು ಪಥಭ್ರಷ್ಟಗೊಳಿಸುವುದಿಲ್ಲ. ನಿಸ್ಸಂಶಯವಾಗಿಯೂ ಅಲ್ಲಾಹನು ಸಕಲ ಸಂಗತಿಗಳನ್ನು ಚೆನ್ನಾಗಿ ಅರಿಯುತ್ತಾನೆ.
ಅರಬ್ಬಿ ವ್ಯಾಖ್ಯಾನಗಳು:
اِنَّ اللّٰهَ لَهٗ مُلْكُ السَّمٰوٰتِ وَالْاَرْضِ ؕ— یُحْیٖ وَیُمِیْتُ ؕ— وَمَا لَكُمْ مِّنْ دُوْنِ اللّٰهِ مِنْ وَّلِیٍّ وَّلَا نَصِیْرٍ ۟
ನಿಸ್ಸಂಶಯವಾಗಿಯೂ ಆಕಾಶ ಮತ್ತು ಭೂಮಿಯ ಅಧಿಪತ್ಯವೂ ಅಲ್ಲಾಹನದೇ ಆಗಿದೆ. ಅವನೇ ಜೀವನೀಡುತ್ತಾನೆ ಮತ್ತು ಮರಣಗೊಳಿಸುತ್ತಾನೆ ಮತ್ತು ನಿಮಗೆ ಅಲ್ಲಾಹನ ಹೊರತು ಯಾವ ಮಿತ್ರನಾಗಲೀ, ಸಹಾಯಕನಾಗಲೀ ಇಲ್ಲ.
ಅರಬ್ಬಿ ವ್ಯಾಖ್ಯಾನಗಳು:
لَقَدْ تَّابَ اللّٰهُ عَلَی النَّبِیِّ وَالْمُهٰجِرِیْنَ وَالْاَنْصَارِ الَّذِیْنَ اتَّبَعُوْهُ فِیْ سَاعَةِ الْعُسْرَةِ مِنْ بَعْدِ مَا كَادَ یَزِیْغُ قُلُوْبُ فَرِیْقٍ مِّنْهُمْ ثُمَّ تَابَ عَلَیْهِمْ ؕ— اِنَّهٗ بِهِمْ رَءُوْفٌ رَّحِیْمٌ ۟ۙ
ಅಲ್ಲಾಹನು ಪೈಗಂಬರರನ್ನು ಮತ್ತು ಕಷ್ಟಕಾಲದಲ್ಲಿ ಪೈಗಂಬರರನ್ನು ಅನುಸರಿಸಿದ ಮುಹಾಜಿರ್ ಹಾಗೂ ಅನ್ಸಾರರನ್ನು ಕ್ಷಮಿಸಿಬಿಟ್ಟನು. (ಸಹಿಸಲು ಅಸಾಧ್ಯವಾದ ಶ್ರಮದ ನಿಮಿತ್ತ) ಅವರ ಪೈಕಿಯ ಒಂದು ಗುಂಪಿನವರ ಹೃದಯಗಳಲ್ಲಿ ಸ್ವಲ್ಪ ಮಟ್ಟಿಗೆ ವಿಚಲನೆ ಸಂಭವಿಸಿದ ಬಳಿಕ ಅಲ್ಲ್ಲಾಹನು ಅವರನ್ನು ಕ್ಷಮಿಸಿಬಿಟ್ಟನು. ನಿಸ್ಸಂದೇಹವಾಗಿಯೂ ಅಲ್ಲಾಹನು ಅವರೆಲ್ಲರ ಮೇಲೆ ಮಹಾ ಕೃಪೆಯುಳ್ಳವನೂ, ಕರುಣಾನಿಧಿಯೂ ಆಗಿದ್ದಾನೆ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಅಧ್ಯಾಯ: ಅತ್ತೌಬ
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ