Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಅಧ್ಯಾಯ: ಅತ್ತೌಬ   ಶ್ಲೋಕ:
یُبَشِّرُهُمْ رَبُّهُمْ بِرَحْمَةٍ مِّنْهُ وَرِضْوَانٍ وَّجَنّٰتٍ لَّهُمْ فِیْهَا نَعِیْمٌ مُّقِیْمٌ ۟ۙ
ಅವರಿಗೆ ಅವರ ಪ್ರಭೂ ತನ್ನ ಕಾರುಣ್ಯ, ಸಂತೃಪ್ತಿ ಮತ್ತು ಸ್ವರ್ಗೋದ್ಯಾನಗಳ ಶುಭವಾರ್ತೆಯನ್ನು ತಿಳಿಸುವನು. ಅವರಿಗೆ ಅಲ್ಲಿ ಶಾಶ್ವತ ಅನುಗ್ರಹವಿದೆ.
ಅರಬ್ಬಿ ವ್ಯಾಖ್ಯಾನಗಳು:
خٰلِدِیْنَ فِیْهَاۤ اَبَدًا ؕ— اِنَّ اللّٰهَ عِنْدَهٗۤ اَجْرٌ عَظِیْمٌ ۟
ಅವರದರಲ್ಲಿ ಶಾಶ್ವತವಾಗಿ ವಾಸಿಸುವರು. ಖಂಡಿತವಾಗಿಯು ಅಲ್ಲಾಹನ ಬಳಿ ಮಹಾಪ್ರತಿಫಲವಿದೆ.
ಅರಬ್ಬಿ ವ್ಯಾಖ್ಯಾನಗಳು:
یٰۤاَیُّهَا الَّذِیْنَ اٰمَنُوْا لَا تَتَّخِذُوْۤا اٰبَآءَكُمْ وَاِخْوَانَكُمْ اَوْلِیَآءَ اِنِ اسْتَحَبُّوا الْكُفْرَ عَلَی الْاِیْمَانِ ؕ— وَمَنْ یَّتَوَلَّهُمْ مِّنْكُمْ فَاُولٰٓىِٕكَ هُمُ الظّٰلِمُوْنَ ۟
ಓ ಸತ್ಯವಿಶ್ವಾಸಿಗಳೇ, ನಿಮ್ಮ ತಂದೆ ತಾತಂದಿರನ್ನೂ, ನಿಮ್ಮ ಸಹೋದರರನ್ನೂ ಸತ್ಯವಿಶ್ವಾಸದ ಬದಲಿಗೆ ಸತ್ಯನಿಷೇಧವನ್ನು ಇಷ್ಟಪಟ್ಟರೆ ಅವರನ್ನು ಮಿತ್ರರನ್ನಾಗಿ ಮಾಡಿಕೊಳ್ಳಬೇಡಿರಿ. ನಿಮ್ಮಲ್ಲಿ ಯಾರಾದರು ಅವರನ್ನು ಮಿತ್ರರನ್ನಾಗಿ ಮಾಡಿಕೊಂಡರೆ ಅವರೇ ಅಕ್ರಮಿಗಳಾಗಿದ್ದಾರೆ.
ಅರಬ್ಬಿ ವ್ಯಾಖ್ಯಾನಗಳು:
قُلْ اِنْ كَانَ اٰبَآؤُكُمْ وَاَبْنَآؤُكُمْ وَاِخْوَانُكُمْ وَاَزْوَاجُكُمْ وَعَشِیْرَتُكُمْ وَاَمْوَالُ ١قْتَرَفْتُمُوْهَا وَتِجَارَةٌ تَخْشَوْنَ كَسَادَهَا وَمَسٰكِنُ تَرْضَوْنَهَاۤ اَحَبَّ اِلَیْكُمْ مِّنَ اللّٰهِ وَرَسُوْلِهٖ وَجِهَادٍ فِیْ سَبِیْلِهٖ فَتَرَبَّصُوْا حَتّٰی یَاْتِیَ اللّٰهُ بِاَمْرِهٖ ؕ— وَاللّٰهُ لَا یَهْدِی الْقَوْمَ الْفٰسِقِیْنَ ۟۠
ಹೇಳಿರಿ: ನಿಮ್ಮ ತಂದೆ ತಾತಂದಿರು, ನಿಮ್ಮ ಪುತ್ರರು, ನಿಮ್ಮ ಸಹೋದರರು, ನಿಮ್ಮ ಪತ್ನಿಯರು, ನಿಮ್ಮ ಕುಟುಂಬದವರು, ನೀವು ಸಂಪಾದಿಸಿರುವ ಸಂಪತ್ತುಗಳು, ನಷ್ಟವುಂಟಾಗಬಹುದೆAದು ಭಯಪಡುವ ವ್ಯಾಪಾರ ಮತ್ತು ನೀವು ತೃಪ್ತಿ ಪಡುವ ವಸತಿಗಳು; ನಿಮಗೆ ಅಲ್ಲಾಹನಿಗಿಂತಲೂ, ಅವನ ಸಂದೇಶವಾಹಕರಿಗಿAತಲೂ, ಅವನ ಮಾರ್ಗದಲ್ಲಿ ಹೋರಾಡುವುದಕ್ಕಿಂತಲೂ ಹೆಚ್ಚು ಪ್ರಿಯವಾಗಿದ್ದರೆ ಅಲ್ಲಾಹನು ತನ್ನ ಶಿಕ್ಷೆಯನ್ನು ಜಾರಿಗೆ ತರುವವರೆಗೆ ನೀವು ಕಾಯುತ್ತಿರಿ. ಧಿಕ್ಕಾರಿಗಳಾದ ಜನರಿಗೆ ಅಲ್ಲಾಹನು ಸನ್ಮಾರ್ಗವನ್ನು ಕರುಣಿಸುವುದಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
لَقَدْ نَصَرَكُمُ اللّٰهُ فِیْ مَوَاطِنَ كَثِیْرَةٍ ۙ— وَّیَوْمَ حُنَیْنٍ ۙ— اِذْ اَعْجَبَتْكُمْ كَثْرَتُكُمْ فَلَمْ تُغْنِ عَنْكُمْ شَیْـًٔا وَّضَاقَتْ عَلَیْكُمُ الْاَرْضُ بِمَا رَحُبَتْ ثُمَّ وَلَّیْتُمْ مُّدْبِرِیْنَ ۟ۚ
ಖಂಡಿತವಾಗಿಯು ಅಲ್ಲಾಹನು ಅನೇಕ ರಣರಂಗಗಳಲ್ಲಿ ನಿಮಗೆ ಸಹಾಯವನ್ನು ಮಾಡಿದ್ದಾನೆ. ಮತ್ತು ಹುನೈನ್ ಕಾಳಗದ ದಿನ ನಿಮಗೆ ನಿಮ್ಮ ಅಧಿಕ ಸಂಖ್ಯೆಯು ಅಭಿಮಾನ ಪಡುವಂತೆ ಮಾಡಿತು. ಆದರೆ ಅದು ನಿಮಗೆ ಯಾವುದೇ ಪ್ರಯೋಜನವನ್ನೂ ನೀಡಲಿಲ್ಲ. ಮಾತ್ರವಲ್ಲ ಭೂಮಿಯು ವಿಶಾಲವಾಗಿದ್ದರೂ ನಿಮ್ಮ ಪಾಲಿಗೆ ಇಕ್ಕಟ್ಟಾಗಿ ಪರಿಣಮಿಸಿತು. ನಂತರ ನೀವು ಬೆನ್ನು ತಿರುಗಿಸಿ ಓಡಿದಿರಿ.
ಅರಬ್ಬಿ ವ್ಯಾಖ್ಯಾನಗಳು:
ثُمَّ اَنْزَلَ اللّٰهُ سَكِیْنَتَهٗ عَلٰی رَسُوْلِهٖ وَعَلَی الْمُؤْمِنِیْنَ وَاَنْزَلَ جُنُوْدًا لَّمْ تَرَوْهَا ۚ— وَعَذَّبَ الَّذِیْنَ كَفَرُوْا ؕ— وَذٰلِكَ جَزَآءُ الْكٰفِرِیْنَ ۟
ನಂತರ ಅಲ್ಲಾಹನು ತನ್ನ ಕಡೆಯಿಂದ ತನ್ನ ಸಂದೇಶವಾಹಕರ ಮತ್ತು ಸತ್ಯವಿಶ್ವಾಸಿಗಳ ಮೇಲೆ ಮನಃಶಾಂತಿಯನ್ನು ಇಳಿಸಿದನು ಮತ್ತು ನೀವು ನೋಡಲು ಸಾಧ್ಯವಿಲ್ಲದಂತಹ ಕೆಲವು ಸೈನ್ಯಗಳನ್ನೂ ಇಳಿಸಿದನು ಮತ್ತು ಅವನು ಸತ್ಯನಿಷೇಧಿಗಳನ್ನು ಪರಿಪೂರ್ಣವಾಗಿ ಶಿಕ್ಷಿಸಿದನು. ಆ ಸತ್ಯನಿಷೇಧಿಗಳಿಗಿರುವ ಪ್ರತಿಕಾರವು ಇದೇ ಆಗಿದೆ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಅಧ್ಯಾಯ: ಅತ್ತೌಬ
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ