ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ * - ಅನುವಾದಗಳ ವಿಷಯಸೂಚಿ

XML CSV Excel API
Please review the Terms and Policies

ಅರ್ಥಗಳ ಅನುವಾದ ಶ್ಲೋಕ: (67) ಅಧ್ಯಾಯ: ಸೂರ ಯೂಸುಫ್
وَقَالَ یٰبَنِیَّ لَا تَدْخُلُوْا مِنْ بَابٍ وَّاحِدٍ وَّادْخُلُوْا مِنْ اَبْوَابٍ مُّتَفَرِّقَةٍ ؕ— وَمَاۤ اُغْنِیْ عَنْكُمْ مِّنَ اللّٰهِ مِنْ شَیْءٍ ؕ— اِنِ الْحُكْمُ اِلَّا لِلّٰهِ ؕ— عَلَیْهِ تَوَكَّلْتُ ۚ— وَعَلَیْهِ فَلْیَتَوَكَّلِ الْمُتَوَكِّلُوْنَ ۟
ತಂದೆ ಹೇಳಿದರು: “ನನ್ನ ಪ್ರೀತಿಯ ಮಕ್ಕಳೇ! ನೀವು ಒಂದೇ ಬಾಗಿಲಿನಿಂದ ಪ್ರವೇಶ ಮಾಡಬೇಡಿ. ಬದಲಿಗೆ, ಬೇರೆ ಬೇರೆ ಬಾಗಿಲುಗಳಿಂದ ಪ್ರವೇಶ ಮಾಡಿರಿ. ಅಲ್ಲಾಹನ ಕಡೆಯಿಂದ ಬರುವ ಏನನ್ನೂ ನಿಮ್ಮಿಂದ ತಡೆಗಟ್ಟಲು ನನಗೆ ಸಾಧ್ಯವಿಲ್ಲ. ತೀರ್ಪು ನೀಡುವ ಅಧಿಕಾರವಿರುವುದು ಅಲ್ಲಾಹನಿಗೆ ಮಾತ್ರ. ನಾನು ಅವನಲ್ಲಿ ಭರವಸೆಯಿಟ್ಟಿದ್ದೇನೆ. ಭರವಸೆಯಿಡುವವರು ಅವನಲ್ಲಿಯೇ ಭರವಸೆಯಿಡಲಿ.”[1]
[1] ಸ್ಫುರದ್ರೂಪಿಗಳು ಮತ್ತು ಉತ್ತಮ ದೇಹದಾರ್ಢ್ಯವನ್ನು ಹೊಂದಿರುವ ತನ್ನ ಹನ್ನೊಂದು ಮಕ್ಕಳು ಒಟ್ಟೊಟ್ಟಿಗೆ ಪ್ರವೇಶ ಮಾಡುವಾಗ ಜನರು ಅವರನ್ನು ಕಂಡು ಬೆರಗಾಗುವರು ಮತ್ತು ಅಸೂಯೆಪಡುವರು. ಇದರಿಂದ ಅವರಿಗೆ ದೃಷ್ಟಿ ತಾಗುವ ಸಾಧ್ಯತೆಯಿದೆ. ಜನರ ದೃಷ್ಟಿಯಿಂದ ಅವರನ್ನು ಕಾಪಾಡಲು ಯಾಕೂಬ್ (ಅವರ ಮೇಲೆ ಶಾಂತಿಯಿರಲಿ) ಈ ಉಪಾಯವನ್ನು ಹೇಳಿದ್ದರು. ಆದರೆ ಇದರ ಹೊರತಾಗಿಯೂ ದೃಷ್ಟಿ ತಾಗಬೇಕೆಂದು ಅಲ್ಲಾಹನ ವಿಧಿಸಿದ್ದರೆ ಅದನ್ನು ತಡೆಗಟ್ಟಲು ಯಾರಿಗೂ ಸಾಧ್ಯವಿಲ್ಲ. ಇದು ಕೇವಲ ಒಂದು ಮುಂಜಾಗೃತಾ ಕ್ರಮ ಮಾತ್ರವಾಗಿದೆ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (67) ಅಧ್ಯಾಯ: ಸೂರ ಯೂಸುಫ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಅನುವಾದಗಳ ವಿಷಯಸೂಚಿ

ಪವಿತ್ರ ಕುರ್‌ಆನ್ ಕನ್ನಡ ಅರ್ಥಾನುವಾದ - ಮುಹಮ್ಮದ್ ಹಂಝ ಪುತ್ತೂರು

ಮುಚ್ಚಿ