Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು * - ಅನುವಾದಗಳ ವಿಷಯಸೂಚಿ

PDF XML CSV Excel API
Please review the Terms and Policies

ಅರ್ಥಗಳ ಅನುವಾದ ಅಧ್ಯಾಯ: ಅಲ್ -ಅನ್ಕಬೂತ್   ಶ್ಲೋಕ:
وَلَا تُجَادِلُوْۤا اَهْلَ الْكِتٰبِ اِلَّا بِالَّتِیْ هِیَ اَحْسَنُ ؗ— اِلَّا الَّذِیْنَ ظَلَمُوْا مِنْهُمْ وَقُوْلُوْۤا اٰمَنَّا بِالَّذِیْۤ اُنْزِلَ اِلَیْنَا وَاُنْزِلَ اِلَیْكُمْ وَاِلٰهُنَا وَاِلٰهُكُمْ وَاحِدٌ وَّنَحْنُ لَهٗ مُسْلِمُوْنَ ۟
ನೀವು ಗ್ರಂಥದವರೊಂದಿಗೆ ಅತ್ಯುತ್ತಮ ರೀತಿಯಲ್ಲೇ ವಿನಾ ಸಂವಾದ ಮಾಡಬೇಡಿ; ಅವರಲ್ಲಿರುವ ಅಕ್ರಮಿಗಳ ಹೊರತು. ಹೇಳಿರಿ: “ನಮಗೆ ಅವತೀರ್ಣವಾಗಿರುವುದರಲ್ಲಿ ಮತ್ತು ನಿಮಗೆ ಅವತೀರ್ಣವಾಗಿರುವುದರಲ್ಲಿ ನಾವು ವಿಶ್ವಾಸವಿಟ್ಟಿದ್ದೇವೆ. ನಮ್ಮ ದೇವನು ಮತ್ತು ನಿಮ್ಮ ದೇವನು ಒಬ್ಬನೇ. ನಾವು ಅವನಿಗೆ ಶರಣಾಗಿದ್ದೇವೆ.”
ಅರಬ್ಬಿ ವ್ಯಾಖ್ಯಾನಗಳು:
وَكَذٰلِكَ اَنْزَلْنَاۤ اِلَیْكَ الْكِتٰبَ ؕ— فَالَّذِیْنَ اٰتَیْنٰهُمُ الْكِتٰبَ یُؤْمِنُوْنَ بِهٖ ۚ— وَمِنْ هٰۤؤُلَآءِ مَنْ یُّؤْمِنُ بِهٖ ؕ— وَمَا یَجْحَدُ بِاٰیٰتِنَاۤ اِلَّا الْكٰفِرُوْنَ ۟
ಈ ರೀತಿ ನಾವು ನಿಮಗೆ ನಮ್ಮ ಗ್ರಂಥವನ್ನು ಅವತೀರ್ಣಗೊಳಿಸಿದ್ದೇವೆ. ನಾವು (ಇದಕ್ಕೆ ಮೊದಲು) ಯಾರಿಗೆ ಗ್ರಂಥವನ್ನು ನೀಡಿದ್ದೇವೋ ಅವರು ಇದರಲ್ಲಿ ವಿಶ್ವಾಸವಿಡುತ್ತಾರೆ. ಇವರಲ್ಲೂ (ಮಕ್ಕಾ ನಿವಾಸಿಗಳಲ್ಲೂ) ಕೂಡ ಕೆಲವರು ಅದರಲ್ಲಿ ವಿಶ್ವಾಸವಿಡುತ್ತಾರೆ. ಸತ್ಯನಿಷೇಧಿಗಳ ಹೊರತು ಇನ್ನಾರೂ ನಮ್ಮ ದೃಷ್ಟಾಂತಗಳನ್ನು ನಿಷೇಧಿಸುವುದಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
وَمَا كُنْتَ تَتْلُوْا مِنْ قَبْلِهٖ مِنْ كِتٰبٍ وَّلَا تَخُطُّهٗ بِیَمِیْنِكَ اِذًا لَّارْتَابَ الْمُبْطِلُوْنَ ۟
(ಪ್ರವಾದಿಯವರೇ) ಇದಕ್ಕೆ ಮೊದಲು ನೀವು ಯಾವುದೇ ಗ್ರಂಥವನ್ನು ಪಠಿಸಿರಲಿಲ್ಲ. ನಿಮ್ಮ ಬಲಗೈಯಿಂದ ಅದನ್ನು ಬರೆಯಲೂ ಇಲ್ಲ. ಹಾಗಿರುತ್ತಿದ್ದರೆ ಈ ಸತ್ಯನಿಷೇಧಿಗಳಿಗೆ ಸಂಶಯಪಡಬಹುದಾಗಿತ್ತು.
ಅರಬ್ಬಿ ವ್ಯಾಖ್ಯಾನಗಳು:
بَلْ هُوَ اٰیٰتٌۢ بَیِّنٰتٌ فِیْ صُدُوْرِ الَّذِیْنَ اُوْتُوا الْعِلْمَ ؕ— وَمَا یَجْحَدُ بِاٰیٰتِنَاۤ اِلَّا الظّٰلِمُوْنَ ۟
ಬದಲಿಗೆ, ಇದು (ಕುರ್‌ಆನ್) ಜ್ಞಾನ ನೀಡಲಾದವರ ಹೃದಯಗಳಲ್ಲಿ ಭದ್ರವಾಗಿ ನೆಲೆಯೂರಿರುವ ಸ್ಪಷ್ಟ ವಚನಗಳಾಗಿವೆ. ಅಕ್ರಮಿಗಳ ಹೊರತು ಇನ್ನಾರೂ ನಮ್ಮ ದೃಷ್ಟಾಂತಗಳನ್ನು ನಿಷೇಧಿಸುವುದಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
وَقَالُوْا لَوْلَاۤ اُنْزِلَ عَلَیْهِ اٰیٰتٌ مِّنْ رَّبِّهٖ ؕ— قُلْ اِنَّمَا الْاٰیٰتُ عِنْدَ اللّٰهِ ؕ— وَاِنَّمَاۤ اَنَا نَذِیْرٌ مُّبِیْنٌ ۟
ಸತ್ಯನಿಷೇಧಿಗಳು ಹೇಳುತ್ತಾರೆ: “ಇವನಿಗೆ (ಪ್ರವಾದಿಗೆ) ಇವನ ಪರಿಪಾಲಕನಿಂದ (ಅಲ್ಲಾಹನಿಂದ) ದೃಷ್ಟಾಂತಗಳನ್ನು (ಪವಾಡಗಳನ್ನು) ಏಕೆ ಇಳಿಸಿಕೊಡಲಾಗುವುದಿಲ್ಲ?” ಹೇಳಿರಿ: “ದೃಷ್ಟಾಂತಗಳೆಲ್ಲವೂ ಅಲ್ಲಾಹನ ಬಳಿಯಿವೆ. ನಾನೊಬ್ಬ ಸ್ಪಷ್ಟ ಮುನ್ನೆಚ್ಚರಿಕೆಗಾರ ಮಾತ್ರ.”
ಅರಬ್ಬಿ ವ್ಯಾಖ್ಯಾನಗಳು:
اَوَلَمْ یَكْفِهِمْ اَنَّاۤ اَنْزَلْنَا عَلَیْكَ الْكِتٰبَ یُتْلٰی عَلَیْهِمْ ؕ— اِنَّ فِیْ ذٰلِكَ لَرَحْمَةً وَّذِكْرٰی لِقَوْمٍ یُّؤْمِنُوْنَ ۟۠
ನಾವು ನಿಮಗೆ ಗ್ರಂಥವನ್ನು ಅವತೀರ್ಣಗೊಳಿಸಿದ್ದೇವೆ ಎಂಬುದು ಅವರಿಗೆ (ದೃಷ್ಟಾಂತವಾಗಿ) ಸಾಕಾಗುವುದಿಲ್ಲವೇ? ಅದನ್ನು ಅವರಿಗೆ ಓದಿಕೊಡಲಾಗುತ್ತಿದೆ. ನಿಶ್ಚಯವಾಗಿಯೂ ಅದರಲ್ಲಿ ಸತ್ಯವಿಶ್ವಾಸಿಗಳಾದ ಜನರಿಗೆ ದಯೆ ಮತ್ತು ಉಪದೇಶವಿದೆ.
ಅರಬ್ಬಿ ವ್ಯಾಖ್ಯಾನಗಳು:
قُلْ كَفٰی بِاللّٰهِ بَیْنِیْ وَبَیْنَكُمْ شَهِیْدًا ۚ— یَعْلَمُ مَا فِی السَّمٰوٰتِ وَالْاَرْضِ ؕ— وَالَّذِیْنَ اٰمَنُوْا بِالْبَاطِلِ وَكَفَرُوْا بِاللّٰهِ ۙ— اُولٰٓىِٕكَ هُمُ الْخٰسِرُوْنَ ۟
ಹೇಳಿರಿ: “ನನ್ನ ಮತ್ತು ನಿಮ್ಮ ನಡುವೆ ಸಾಕ್ಷಿಯಾಗಿ ಅಲ್ಲಾಹು ಸಾಕು. ಅವನು ಭೂಮ್ಯಾಕಾಶಗಳಲ್ಲಿರುವ ಎಲ್ಲವನ್ನೂ ತಿಳಿಯುತ್ತಾನೆ. ಮಿಥ್ಯದಲ್ಲಿ ವಿಶ್ವಾಸವಿಡುವವರು ಮತ್ತು ಅಲ್ಲಾಹನನ್ನು ನಿಷೇಧಿಸುವವರು ಯಾರೋ ಅವರೇ ನಷ್ಟ ಹೊಂದಿದವರು.”
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಅಧ್ಯಾಯ: ಅಲ್ -ಅನ್ಕಬೂತ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು - ಅನುವಾದಗಳ ವಿಷಯಸೂಚಿ

ಅನುವಾದ - ಮುಹಮ್ಮದ್ ಹಂಝ ಪುತ್ತೂರು ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ