Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು * - ಅನುವಾದಗಳ ವಿಷಯಸೂಚಿ

PDF XML CSV Excel API
Please review the Terms and Policies

ಅರ್ಥಗಳ ಅನುವಾದ ಶ್ಲೋಕ: (122) ಅಧ್ಯಾಯ: ಆಲು ಇಮ್ರಾನ್
اِذْ هَمَّتْ طَّآىِٕفَتٰنِ مِنْكُمْ اَنْ تَفْشَلَا ۙ— وَاللّٰهُ وَلِیُّهُمَا ؕ— وَعَلَی اللّٰهِ فَلْیَتَوَكَّلِ الْمُؤْمِنُوْنَ ۟
ನಿಮ್ಮಲ್ಲಿನ ಎರಡು ಗುಂಪುಗಳು ಹೇಡಿಗಳಾಗಲು ಮುಂದಾದ ಸಂದರ್ಭ.[1] ಅಲ್ಲಾಹು ಆ ಎರಡು ಪಂಗಡಗಳ ರಕ್ಷಕನಾಗಿದ್ದಾನೆ. ಸತ್ಯವಿಶ್ವಾಸಿಗಳು ಅಲ್ಲಾಹನಲ್ಲಿಯೇ ಭರವಸೆಯಿಡಲಿ.
[1] ಉಹುದ್ ಯುದ್ಧದ ಸಂದರ್ಭ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕಾಲಾಳುಪಡೆ, ಅಶ್ವಸೇನೆ ಮತ್ತು ಬಿಲ್ಲುಗಾರರನ್ನು ಕೆಲವು ಆಯಕಟ್ಟಿನ ಸ್ಥಳಗಳಲ್ಲಿ ನಿಲ್ಲಿಸಿದ್ದರು. ಯುದ್ಧ ತಂತ್ರದ ಪ್ರಮುಖ ಭಾಗವಾಗಿ ಒಂದು ಗುಡ್ಡೆಯ ಮೇಲೆ ಕಾವಲು ನಿಲ್ಲಿಸಲಾಗಿದ್ದ ಬಿಲ್ಲುಗಾರರು ತಮ್ಮ ಕಾರ್ಯನಿರ್ವಹಣೆಯಲ್ಲಿ ತಪ್ಪೆಸಗಿದ ಕಾರಣ ಉಹುದ್ ಯುದ್ಧದಲ್ಲಿ ಮುಸ್ಲಿಮರಿಗೆ ಅನೇಕ ನಾಶ-ನಷ್ಟಗಳು ಸಂಭವಿಸಿದವು. ಯುದ್ಧದಲ್ಲಿ ಹೋರಾಡುತ್ತಿದ್ದ ಎರಡು ಗೋತ್ರದ ಜನರು ದಿಗಿಲುಗೊಂಡು ಯುದ್ಧದಿಂದ ಪಲಾಯನ ಮಾಡಬೇಕೆಂದು ಒಂದು ಕ್ಷಣ ಯೋಚಿಸಿದರು. ಆದರೆ ಅಲ್ಲಾಹು ಅವರ ಮನಸ್ಸಿಗೆ ದೃಢತೆಯನ್ನು ನೀಡಿ ಅವರನ್ನು ನಿಲ್ಲಿಸಿದನು.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (122) ಅಧ್ಯಾಯ: ಆಲು ಇಮ್ರಾನ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು - ಅನುವಾದಗಳ ವಿಷಯಸೂಚಿ

ಅನುವಾದ - ಮುಹಮ್ಮದ್ ಹಂಝ ಪುತ್ತೂರು ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ