ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ * - ಅನುವಾದಗಳ ವಿಷಯಸೂಚಿ

XML CSV Excel API
Please review the Terms and Policies

ಅರ್ಥಗಳ ಅನುವಾದ ಶ್ಲೋಕ: (144) ಅಧ್ಯಾಯ: ಸೂರ ಆಲು ಇಮ್ರಾನ್
وَمَا مُحَمَّدٌ اِلَّا رَسُوْلٌ ۚ— قَدْ خَلَتْ مِنْ قَبْلِهِ الرُّسُلُ ؕ— اَفَاۡىِٕنْ مَّاتَ اَوْ قُتِلَ انْقَلَبْتُمْ عَلٰۤی اَعْقَابِكُمْ ؕ— وَمَنْ یَّنْقَلِبْ عَلٰی عَقِبَیْهِ فَلَنْ یَّضُرَّ اللّٰهَ شَیْـًٔا ؕ— وَسَیَجْزِی اللّٰهُ الشّٰكِرِیْنَ ۟
ಮುಹಮ್ಮದ್ ಒಬ್ಬ ಸಂದೇಶವಾಹಕರು ಮಾತ್ರ. ಅವರಿಗಿಂತ ಮೊದಲು ಅನೇಕ ಸಂದೇಶವಾಹಕರುಗಳು ಬಂದು ಹೋಗಿದ್ದಾರೆ. ಅವರೇನಾದರೂ ಅಸುನೀಗಿದರೆ ಅಥವಾ ಕೊಲೆಯಾದರೆ, ನೀವು ಹಿಂದಕ್ಕೆ (ಸತ್ಯನಿಷೇಧಕ್ಕೆ) ಮರಳುವಿರಾ? ಯಾರು ಹಿಂದಕ್ಕೆ ಮರಳುತ್ತಾನೋ ಅವನು ಅಲ್ಲಾಹನಿಗೆ ಯಾವುದೇ ತೊಂದರೆ ಮಾಡುವುದಿಲ್ಲ. ಕೃತಜ್ಞರಾಗಿರುವವರಿಗೆ ಅಲ್ಲಾಹು ಸದ್ಯವೇ ಸೂಕ್ತ ಪ್ರತಿಫಲವನ್ನು ನೀಡುವನು.[1]
[1] ಉಹುದ್ ಯುದ್ಧದಲ್ಲಿ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೊಲೆಯಾದರೆಂದು ವೈರಿಗಳನ್ನು ವದಂತಿ ಹಬ್ಬಿಸಿದರು. ಮುಸ್ಲಿಮರಲ್ಲಿ ಕೆಲವರು ಈ ವದಂತಿಯನ್ನು ನಂಬಿ ಸಂಪೂರ್ಣ ನಿರಾಶರಾಗಿ ಯುದ್ಧದಿಂದ ಹಿಂದೆ ಸರಿದರು. ಇವರ ಬಗ್ಗೆ ಈ ವಚನವು ಅವತೀರ್ಣವಾಯಿತು. ಪ್ರವಾದಿಗಳು ಮರಣಹೊಂದುವುದು ಅಥವಾ ವೈರಿಗಳು ಪ್ರವಾದಿಗಳನ್ನು ಕೊಲೆ ಮಾಡುವುದು ಹೊಸದೇನಲ್ಲ. ಹಿಂದೆಯೂ ಅನೇಕ ಪ್ರವಾದಿಗಳು ವೈರಿಗಳ ಕೈಯಿಂದ ಕೊಲೆಯಾಗಿದ್ದಾರೆ. ಅದೇ ರೀತಿ ಮುಹಮ್ಮದ್ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಸುನೀಗಿದರೆ ಅಥವಾ ಕೊಲೆಯಾದರೆ ನೀವು ನಿಮ್ಮ ಧರ್ಮದಿಂದ ಹಿಂದೆ ಸರಿಯುತ್ತೀರಾ? ಯಾರಾದರೂ ಹಿಂದೆ ಸರಿದರೆ ಅದರಿಂದ ಅಲ್ಲಾಹನಿಗೇನೂ ನಷ್ಟವಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (144) ಅಧ್ಯಾಯ: ಸೂರ ಆಲು ಇಮ್ರಾನ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಅನುವಾದಗಳ ವಿಷಯಸೂಚಿ

ಪವಿತ್ರ ಕುರ್‌ಆನ್ ಕನ್ನಡ ಅರ್ಥಾನುವಾದ - ಮುಹಮ್ಮದ್ ಹಂಝ ಪುತ್ತೂರು

ಮುಚ್ಚಿ