ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ * - ಅನುವಾದಗಳ ವಿಷಯಸೂಚಿ

XML CSV Excel API
Please review the Terms and Policies

ಅರ್ಥಗಳ ಅನುವಾದ ಶ್ಲೋಕ: (61) ಅಧ್ಯಾಯ: ಸೂರ ಆಲು ಇಮ್ರಾನ್
فَمَنْ حَآجَّكَ فِیْهِ مِنْ بَعْدِ مَا جَآءَكَ مِنَ الْعِلْمِ فَقُلْ تَعَالَوْا نَدْعُ اَبْنَآءَنَا وَاَبْنَآءَكُمْ وَنِسَآءَنَا وَنِسَآءَكُمْ وَاَنْفُسَنَا وَاَنْفُسَكُمْ ۫— ثُمَّ نَبْتَهِلْ فَنَجْعَلْ لَّعْنَتَ اللّٰهِ عَلَی الْكٰذِبِیْنَ ۟
ನಿಮ್ಮ ಬಳಿಗೆ ಜ್ಞಾನವು ಬಂದ ಬಳಿಕವೂ ಅವರ (ಈಸಾರ) ವಿಷಯದಲ್ಲಿ ಯಾರಾದರೂ ನಿಮ್ಮೊಂದಿಗೆ ತರ್ಕಿಸಿದರೆ ನೀವು ಹೇಳಿರಿ: “ಬನ್ನಿ! ನಾವು ನಮ್ಮ ಮಕ್ಕಳನ್ನು ಮತ್ತು ನಿಮ್ಮ ಮಕ್ಕಳನ್ನು, ನಮ್ಮ ಮಹಿಳೆಯರನ್ನು ಮತ್ತು ನಿಮ್ಮ ಮಹಿಳೆಯರನ್ನು, ನಮ್ಮನ್ನು ಮತ್ತು ನಿಮ್ಮನ್ನು (ಎಲ್ಲರನ್ನೂ) ಕರೆದು ಒಟ್ಟುಗೂಡೋಣ. ನಂತರ ಮನಸಾರೆ ಪ್ರಾರ್ಥಿಸಿ ಸುಳ್ಳು ಹೇಳುವವರ ಮೇಲೆ ಅಲ್ಲಾಹನ ಶಾಪವವಿರಲೆಂದು ಬೇಡಿಕೊಳ್ಳೋಣ.”[1]
[1] ಈ ವಚನವನ್ನು ಆಯತುಲ್ ಮುಬಾಹಲ (ಶಾಪಪ್ರಾರ್ಥನೆಯ ವಚನ) ಎಂದು ಕರೆಯಲಾಗುತ್ತದೆ. ಎರಡು ಗುಂಪುಗಳ ನಡುವೆ ಭಿನ್ನಮತವಿರುವ ಒಂದು ವಿಷಯವು ಮಾತುಕತೆಯಿಂದ ಅಥವಾ ಇತರ ವಿಧಾನಗಳಿಂದ ಪರಿಹಾರವಾಗದೆ, ಎರಡು ಗುಂಪುಗಳೂ ನಾವೇ ಸತ್ಯದಲ್ಲಿರುವವರು ಎಂದು ಹಟ ಹಿಡಿದರೆ, ಆ ಎರಡು ಗುಂಪುಗಳು ಸೇರಿ ಅಸತ್ಯದಲ್ಲಿರುವ ಗುಂಪಿನ ಮೇಲೆ ಅಲ್ಲಾಹನ ಶಾಪವಿರಲಿ ಎಂದು ಅಲ್ಲಾಹನಲ್ಲಿ ಮನಸಾರೆ ಪ್ರಾರ್ಥಿಸುವುದನ್ನು ಶಾಪ ಪ್ರಾರ್ಥನೆ ಎನ್ನಲಾಗುತ್ತದೆ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (61) ಅಧ್ಯಾಯ: ಸೂರ ಆಲು ಇಮ್ರಾನ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಅನುವಾದಗಳ ವಿಷಯಸೂಚಿ

ಪವಿತ್ರ ಕುರ್‌ಆನ್ ಕನ್ನಡ ಅರ್ಥಾನುವಾದ - ಮುಹಮ್ಮದ್ ಹಂಝ ಪುತ್ತೂರು

ಮುಚ್ಚಿ