ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ * - ಅನುವಾದಗಳ ವಿಷಯಸೂಚಿ

XML CSV Excel API
Please review the Terms and Policies

ಅರ್ಥಗಳ ಅನುವಾದ ಅಧ್ಯಾಯ: ಸೂರ ಅರ್‍ರೂಮ್   ಶ್ಲೋಕ:

ಸೂರ ಅರ್‍ರೂಮ್

الٓمّٓ ۟ۚ
ಅಲಿಫ್-ಲಾಮ್-ಮೀಮ್.
ಅರಬ್ಬಿ ವ್ಯಾಖ್ಯಾನಗಳು:
غُلِبَتِ الرُّوْمُ ۟ۙ
ರೋಮನ್ನರು ಪರಾಜಿತರಾದರು.
ಅರಬ್ಬಿ ವ್ಯಾಖ್ಯಾನಗಳು:
فِیْۤ اَدْنَی الْاَرْضِ وَهُمْ مِّنْ بَعْدِ غَلَبِهِمْ سَیَغْلِبُوْنَ ۟ۙ
ಸಮೀಪದ ಪ್ರದೇಶದಲ್ಲಿ. ತಮ್ಮ ಪರಾಜಯದ ಬಳಿಕ ಅವರು ಸದ್ಯವೇ ವಿಜಯಿಗಳಾಗುವರು.[1]
[1] ಪ್ರವಾದಿ ಮುಹಮ್ಮದರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕಾಲದಲ್ಲಿ ಎರಡು ಮಹಾ ಸಾಮ್ರಾಜ್ಯಗಳು ಅಸ್ತಿತ್ವದಲ್ಲಿದ್ದವು. ರೋಮನ್ ಸಾಮ್ರಾಜ್ಯ ಮತ್ತು ಪರ್ಶಿಯನ್ ಸಾಮ್ರಾಜ್ಯ. ಪರ್ಶಿಯನ್ನರು ಅಗ್ನಿಪೂಜಕರಾಗಿದ್ದರು ಮತ್ತು ರೋಮನ್ನರು ಅಹ್ಲೆ ಕಿತಾಬ್ (ಗ್ರಂಥ ನೀಡಲಾದವರು) ಆಗಿದ್ದರು. ಮಕ್ಕಾದ ಬಹುದೇವಾರಾಧಕರು ಪರ್ಶಿಯನ್ನರನ್ನು ಬೆಂಬಲಿಸುತ್ತಿದ್ದರು. ಏಕೆಂದರೆ ಅವರು ವಿಶ್ವಾಸ-ಆಚಾರಗಳಲ್ಲಿ ಸಾಮ್ಯತೆಯಿತ್ತು. ಮುಸಲ್ಮಾನರು ರೋಮನ್ನರ ಪರವಾಗಿದ್ದರು. ಮುಹಮ್ಮದ್ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪ್ರವಾದಿಯಾದ ಕೆಲವೇ ವರ್ಷಗಳಲ್ಲಿ ಪರ್ಶಿಯನ್ನರು ರೋಮನ್ ಸಾಮ್ರಾಜ್ಯದ ಮೇಲೆ ದಾಳಿ ಮಾಡಿ ಅವರನ್ನು ಸೋಲಿಸಿದರು. ಇದರಿಂದ ಮಕ್ಕಾದ ಬಹುದೇವರಾಧಕರು ಹಿರಿ-ಹಿರಿ ಹಿಗ್ಗುತ್ತಾ ಮುಸ್ಲಿಮರನ್ನು ಮೂದಲಿಸತೊಡಗಿದರು. ಆಗ ಅಲ್ಲಾಹು ಈ ವಚನಗಳನ್ನು ಅವತೀರ್ಣಗೊಳಿಸಿದನು.
ಅರಬ್ಬಿ ವ್ಯಾಖ್ಯಾನಗಳು:
فِیْ بِضْعِ سِنِیْنَ ؕ۬— لِلّٰهِ الْاَمْرُ مِنْ قَبْلُ وَمِنْ بَعْدُ ؕ— وَیَوْمَىِٕذٍ یَّفْرَحُ الْمُؤْمِنُوْنَ ۟ۙ
ಕೆಲವೇ ವರ್ಷಗಳಲ್ಲಿ.[1] ಅದರ ಮುಂದಿನ ಮತ್ತು ಹಿಂದಿನ ಸಂಗತಿಗಳ ನಿಯಂತ್ರಣವು ಅಲ್ಲಾಹನ ಕೈಯಲ್ಲಿದೆ. ಅಂದು ಸತ್ಯವಿಶ್ವಾಸಿಗಳು ಸಂಭ್ರಮಿಸುವರು.
[1] ಅಂದರೆ ಮೂರರಿಂದ ಒಂಬತ್ತು ವರ್ಷಗಳೊಳಗೆ. ಕುರ್‌ಆನ್‌ನ ಈ ಭವಿಷ್ಯ ನುಡಿ ಸತ್ಯವಾಯಿತು. ಏಳು ವರ್ಷಗಳಲ್ಲಿ ರೋಮನ್ನರು ಪರ್ಶಿಯನ್ನರನ್ನು ಸೋಲಿಸಿ ತಮ್ಮ ಪ್ರದೇಶಗಳನ್ನು ಮರಳಿ ವಶಪಡಿಸಿದರು.
ಅರಬ್ಬಿ ವ್ಯಾಖ್ಯಾನಗಳು:
بِنَصْرِ اللّٰهِ ؕ— یَنْصُرُ مَنْ یَّشَآءُ ؕ— وَهُوَ الْعَزِیْزُ الرَّحِیْمُ ۟ۙ
ಅಲ್ಲಾಹನ ಸಹಾಯದಿಂದ. ಅಲ್ಲಾಹು ಅವನು ಬಯಸುವವರಿಗೆ ಸಹಾಯ ಮಾಡುತ್ತಾನೆ. ಅವನು ಪ್ರಬಲನು ಮತ್ತು ದಯೆ ತೋರುವವನಾಗಿದ್ದಾನೆ.
ಅರಬ್ಬಿ ವ್ಯಾಖ್ಯಾನಗಳು:
وَعْدَ اللّٰهِ ؕ— لَا یُخْلِفُ اللّٰهُ وَعْدَهٗ وَلٰكِنَّ اَكْثَرَ النَّاسِ لَا یَعْلَمُوْنَ ۟
ಇದು ಅಲ್ಲಾಹನ ವಾಗ್ದಾನವಾಗಿದೆ. ಅಲ್ಲಾಹು ಅವನ ವಾಗ್ದಾನವನ್ನು ಉಲ್ಲಂಘಿಸುವುದಿಲ್ಲ. ಆದರೆ ಜನರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
یَعْلَمُوْنَ ظَاهِرًا مِّنَ الْحَیٰوةِ الدُّنْیَا ۖۚ— وَهُمْ عَنِ الْاٰخِرَةِ هُمْ غٰفِلُوْنَ ۟
ಅವರು ಇಹಲೋಕ ಜೀವನದ ಬಹಿರಂಗ ವಿಷಯಗಳನ್ನು ಮಾತ್ರ ತಿಳಿದಿದ್ದಾರೆ. ಆದರೆ ಪರಲೋಕದ ಬಗ್ಗೆ ಅವರಿಗೆ ಯಾವುದೇ ಜ್ಞಾನವಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
اَوَلَمْ یَتَفَكَّرُوْا فِیْۤ اَنْفُسِهِمْ ۫— مَا خَلَقَ اللّٰهُ السَّمٰوٰتِ وَالْاَرْضَ وَمَا بَیْنَهُمَاۤ اِلَّا بِالْحَقِّ وَاَجَلٍ مُّسَمًّی ؕ— وَاِنَّ كَثِیْرًا مِّنَ النَّاسِ بِلِقَآئِ رَبِّهِمْ لَكٰفِرُوْنَ ۟
ಅವರು ಸ್ವಯಂ ಆಲೋಚಿಸುವುದಿಲ್ಲವೇ? ಅಲ್ಲಾಹು ಭೂಮ್ಯಾಕಾಶಗಳನ್ನು ಹಾಗೂ ಅವುಗಳ ನಡುವೆಯಿರುವ ಎಲ್ಲಾ ವಸ್ತುಗಳನ್ನು ಸತ್ಯ ಸಮೇತವಾಗಿ ಮತ್ತು ಒಂದು ನಿಶ್ಚಿತ ಅವಧಿಯವರೆಗೆ ಮಾತ್ರ ಸೃಷ್ಟಿಸಿದ್ದಾನೆ. ಜನರಲ್ಲಿ ಹೆಚ್ಚಿನವರು ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭೇಟಿಯಾಗುವುದನ್ನು ನಿಷೇಧಿಸಿದವರಾಗಿದ್ದಾರೆ.
ಅರಬ್ಬಿ ವ್ಯಾಖ್ಯಾನಗಳು:
اَوَلَمْ یَسِیْرُوْا فِی الْاَرْضِ فَیَنْظُرُوْا كَیْفَ كَانَ عَاقِبَةُ الَّذِیْنَ مِنْ قَبْلِهِمْ ؕ— كَانُوْۤا اَشَدَّ مِنْهُمْ قُوَّةً وَّاَثَارُوا الْاَرْضَ وَعَمَرُوْهَاۤ اَكْثَرَ مِمَّا عَمَرُوْهَا وَجَآءَتْهُمْ رُسُلُهُمْ بِالْبَیِّنٰتِ ؕ— فَمَا كَانَ اللّٰهُ لِیَظْلِمَهُمْ وَلٰكِنْ كَانُوْۤا اَنْفُسَهُمْ یَظْلِمُوْنَ ۟ؕ
ಅವರು ಭೂಮಿಯಲ್ಲಿ ಸಂಚರಿಸಿ, ಅವರಿಗಿಂತ ಮೊದಲಿನವರ ಅಂತ್ಯವು ಹೇಗಿತ್ತೆಂದು ನೋಡುವುದಿಲ್ಲವೇ? ಅವರು ಇವರಿಗಿಂತಲೂ ಹೆಚ್ಚು ಶಕ್ತಿಶಾಲಿಗಳಾಗಿದ್ದರು. ಅವರು ಭೂಮಿಯನ್ನು ಉತ್ತು ಬೇಸಾಯ ಮಾಡಿದರು. ಅವರು ಇವರಿಗಿಂತಲೂ ಹೆಚ್ಚು ಭೂಮಿಯಲ್ಲಿ ವಾಸವಾಗಿದ್ದರು. ನಮ್ಮ ಸಂದೇಶವಾಹಕರು ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಅವರ ಬಳಿಗೆ ಬಂದರು. ಅಲ್ಲಾಹು ಅವರಿಗೆ ಯಾವುದೇ ಅನ್ಯಾಯ ಮಾಡಲಿಲ್ಲ. ಆದರೆ ಅವರು ಸ್ವತಃ ಅವರೊಂದಿಗೇ ಅನ್ಯಾಯವೆಸಗಿದರು.
ಅರಬ್ಬಿ ವ್ಯಾಖ್ಯಾನಗಳು:
ثُمَّ كَانَ عَاقِبَةَ الَّذِیْنَ اَسَآءُوا السُّوْٓاٰۤی اَنْ كَذَّبُوْا بِاٰیٰتِ اللّٰهِ وَكَانُوْا بِهَا یَسْتَهْزِءُوْنَ ۟۠
ನಂತರ, ದುಷ್ಕರ್ಮವೆಸಗಿದವರ ಅಂತ್ಯವು ಅತ್ಯಂತ ದುಸ್ತರವಾಗಿತ್ತು. ಏಕೆಂದರೆ ಅವರು ಅಲ್ಲಾಹನ ವಚನಗಳನ್ನು ನಿಷೇಧಿಸಿದರು ಮತ್ತು ಅವುಗಳನ್ನು ತಮಾಷೆ ಮಾಡುತ್ತಿದ್ದರು.
ಅರಬ್ಬಿ ವ್ಯಾಖ್ಯಾನಗಳು:
اَللّٰهُ یَبْدَؤُا الْخَلْقَ ثُمَّ یُعِیْدُهٗ ثُمَّ اِلَیْهِ تُرْجَعُوْنَ ۟
ಅಲ್ಲಾಹು ಪ್ರಥಮ ಬಾರಿಗೆ ಸೃಷ್ಟಿಸುತ್ತಾನೆ. ನಂತರ ಅದನ್ನು ಪುನರಾವರ್ತಿಸುತ್ತಾನೆ. ನಂತರ ನಿಮ್ಮನ್ನು ಅವನ ಬಳಿಗೇ ಮರಳಿಸಲಾಗುವುದು.
ಅರಬ್ಬಿ ವ್ಯಾಖ್ಯಾನಗಳು:
وَیَوْمَ تَقُوْمُ السَّاعَةُ یُبْلِسُ الْمُجْرِمُوْنَ ۟
ಅಂತ್ಯಸಮಯವು ಸಂಭವಿಸುವ ದಿನ ಅಪರಾಧಿಗಳು ಹತಾಶರಾಗುವರು.
ಅರಬ್ಬಿ ವ್ಯಾಖ್ಯಾನಗಳು:
وَلَمْ یَكُنْ لَّهُمْ مِّنْ شُرَكَآىِٕهِمْ شُفَعٰٓؤُا وَكَانُوْا بِشُرَكَآىِٕهِمْ كٰفِرِیْنَ ۟
ಅವರು ಅಲ್ಲಾಹನೊಂದಿಗೆ ಸಹಭಾಗಿಗಳನ್ನಾಗಿ ಮಾಡಿದವರಲ್ಲಿ (ದೇವರುಗಳಲ್ಲಿ) ಯಾರೂ ಕೂಡ ಅವರಿಗೆ ಶಿಫಾರಸು ಮಾಡುವುದಿಲ್ಲ. ಸ್ವತಃ ಅವರೇ ಆ ಸಹಭಾಗಿಗಳನ್ನು ನಿಷೇಧಿಸುವರು.
ಅರಬ್ಬಿ ವ್ಯಾಖ್ಯಾನಗಳು:
وَیَوْمَ تَقُوْمُ السَّاعَةُ یَوْمَىِٕذٍ یَّتَفَرَّقُوْنَ ۟
ಅಂತ್ಯಸಮಯವು ಸಂಭವಿಸುವ ದಿನ. ಅಂದು ಅವರು ಪರಸ್ಪರ ಬೇರ್ಪಡುವರು.
ಅರಬ್ಬಿ ವ್ಯಾಖ್ಯಾನಗಳು:
فَاَمَّا الَّذِیْنَ اٰمَنُوْا وَعَمِلُوا الصَّلِحٰتِ فَهُمْ فِیْ رَوْضَةٍ یُّحْبَرُوْنَ ۟
ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ ಅವರು ಉದ್ಯಾನವನದಲ್ಲಿ ಆನಂದದಿಂದ ನಲಿದಾಡುವರು.
ಅರಬ್ಬಿ ವ್ಯಾಖ್ಯಾನಗಳು:
وَاَمَّا الَّذِیْنَ كَفَرُوْا وَكَذَّبُوْا بِاٰیٰتِنَا وَلِقَآئِ الْاٰخِرَةِ فَاُولٰٓىِٕكَ فِی الْعَذَابِ مُحْضَرُوْنَ ۟
ಆದರೆ ಸತ್ಯನಿಷೇಧಿಗಳು ಮತ್ತು ನಮ್ಮ ವಚನಗಳನ್ನು ಹಾಗೂ ಪರಲೋಕದ ಭೇಟಿಯನ್ನು ನಿಷೇಧಿಸಿದವರು ಯಾರೋ ಅವರನ್ನು ಶಿಕ್ಷೆಗಾಗಿ ಹಾಜರುಪಡಿಸಲಾಗುವುದು.
ಅರಬ್ಬಿ ವ್ಯಾಖ್ಯಾನಗಳು:
فَسُبْحٰنَ اللّٰهِ حِیْنَ تُمْسُوْنَ وَحِیْنَ تُصْبِحُوْنَ ۟
ಸಂಜೆಯಾಗುವಾಗ ಮತ್ತು ಮುಂಜಾನೆಯಾಗುವಾಗ ಅಲ್ಲಾಹನ ಪರಿಶುದ್ಧಿಯನ್ನು ಕೊಂಡಾಡಿರಿ.
ಅರಬ್ಬಿ ವ್ಯಾಖ್ಯಾನಗಳು:
وَلَهُ الْحَمْدُ فِی السَّمٰوٰتِ وَالْاَرْضِ وَعَشِیًّا وَّحِیْنَ تُظْهِرُوْنَ ۟
ಭೂಮ್ಯಾಕಾಶಗಳಲ್ಲಿ ಸರ್ವಸ್ತುತಿಗಳು ಅವನಿಗೆ ಮಾತ್ರ ಮೀಸಲು. ರಾತ್ರಿ ಹಾಗೂ ಮಧ್ಯಾಹ್ನದಲ್ಲೂ ಅವನ್ನು ಕೊಂಡಾಡಿರಿ.
ಅರಬ್ಬಿ ವ್ಯಾಖ್ಯಾನಗಳು:
یُخْرِجُ الْحَیَّ مِنَ الْمَیِّتِ وَیُخْرِجُ الْمَیِّتَ مِنَ الْحَیِّ وَیُحْیِ الْاَرْضَ بَعْدَ مَوْتِهَا ؕ— وَكَذٰلِكَ تُخْرَجُوْنَ ۟۠
ಅವನು ನಿರ್ಜೀವಿಯಿಂದ ಜೀವಿಯನ್ನು ಹೊರತರುತ್ತಾನೆ ಮತ್ತು ಜೀವಿಯಿಂದ ನಿರ್ಜೀವಿಯನ್ನು ಹೊರತರುತ್ತಾನೆ. ಭೂಮಿಯು ನಿರ್ಜೀವವಾದ ಬಳಿಕ ಅವನು ಅದಕ್ಕೆ ಜೀವವನ್ನು ನೀಡುತ್ತಾನೆ. ಇದೇ ರೀತಿ ನಿಮ್ಮನ್ನು ಕೂಡ ಹೊರತರಲಾಗುವುದು.
ಅರಬ್ಬಿ ವ್ಯಾಖ್ಯಾನಗಳು:
وَمِنْ اٰیٰتِهٖۤ اَنْ خَلَقَكُمْ مِّنْ تُرَابٍ ثُمَّ اِذَاۤ اَنْتُمْ بَشَرٌ تَنْتَشِرُوْنَ ۟
ಅವನು ನಿಮ್ಮನ್ನು ಮಣ್ಣಿನಿಂದ ಸೃಷ್ಟಿಸಿದ್ದು ಅವನ ದೃಷ್ಟಾಂತಗಳಲ್ಲಿ ಒಂದಾಗಿದೆ. ನಂತರ ನೀವು (ಜಗತ್ತಿನಾದ್ಯಂತ) ಹಬ್ಬಿಕೊಂಡ ಮಾನುಕುಲವಾಗಿ ಮಾರ್ಪಟ್ಟಿರಿ.
ಅರಬ್ಬಿ ವ್ಯಾಖ್ಯಾನಗಳು:
وَمِنْ اٰیٰتِهٖۤ اَنْ خَلَقَ لَكُمْ مِّنْ اَنْفُسِكُمْ اَزْوَاجًا لِّتَسْكُنُوْۤا اِلَیْهَا وَجَعَلَ بَیْنَكُمْ مَّوَدَّةً وَّرَحْمَةً ؕ— اِنَّ فِیْ ذٰلِكَ لَاٰیٰتٍ لِّقَوْمٍ یَّتَفَكَّرُوْنَ ۟
ನಿಮಗೆ ನಿಮ್ಮಿಂದಲೇ ಪತ್ನಿಯರನ್ನು ಸೃಷ್ಟಿಸಿದ್ದು ಅವನ ದೃಷ್ಟಾಂತಗಳಲ್ಲಿ ಒಂದಾಗಿದೆ. ನೀವು ಅವಳಲ್ಲಿ ನೆಮ್ಮದಿಯನ್ನು ಪಡೆಯುವುದಕ್ಕಾಗಿ. ಅವನು ನಿಮ್ಮ ನಡುವೆ ಪ್ರೀತಿ ಮತ್ತು ಅನುಕಂಪವನ್ನು ಇಟ್ಟನು. ನಿಶ್ಚಯವಾಗಿಯೂ ಆಲೋಚಿಸುವ ಜನರಿಗೆ ಅದರಲ್ಲಿ ದೃಷ್ಟಾಂತಗಳಿವೆ.
ಅರಬ್ಬಿ ವ್ಯಾಖ್ಯಾನಗಳು:
وَمِنْ اٰیٰتِهٖ خَلْقُ السَّمٰوٰتِ وَالْاَرْضِ وَاخْتِلَافُ اَلْسِنَتِكُمْ وَاَلْوَانِكُمْ ؕ— اِنَّ فِیْ ذٰلِكَ لَاٰیٰتٍ لِّلْعٰلِمِیْنَ ۟
ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದು ಮತ್ತು ನಿಮ್ಮ ಭಾಷೆಗಳಲ್ಲಿ ಹಾಗೂ ವರ್ಣಗಳಲ್ಲಿ ವೈವಿಧ್ಯತೆಯನ್ನು ಮಾಡಿದ್ದು ಅವನ ದೃಷ್ಟಾಂತಗಳಲ್ಲಿ ಒಂದಾಗಿದೆ. ನಿಶ್ಚಯವಾಗಿಯೂ ಜ್ಞಾನವಂತರಿಗೆ ಅದರಲ್ಲಿ ದೃಷ್ಟಾಂತಗಳಿವೆ.
ಅರಬ್ಬಿ ವ್ಯಾಖ್ಯಾನಗಳು:
وَمِنْ اٰیٰتِهٖ مَنَامُكُمْ بِالَّیْلِ وَالنَّهَارِ وَابْتِغَآؤُكُمْ مِّنْ فَضْلِهٖ ؕ— اِنَّ فِیْ ذٰلِكَ لَاٰیٰتٍ لِّقَوْمٍ یَّسْمَعُوْنَ ۟
ನೀವು ರಾತ್ರಿಯಲ್ಲಿ ಮತ್ತು ಹಗಲಲ್ಲಿ ನಿದ್ದೆ ಮಾಡುವುದು ಹಾಗೂ ಅಲ್ಲಾಹನ ಔದಾರ್ಯದಿಂದ ನೀವು ಉಪಜೀವನವನ್ನು ಹುಡುಕುವುದು ಅವನ ದೃಷ್ಟಾಂತಗಳಲ್ಲಿ ಒಂದಾಗಿದೆ. ನಿಶ್ಚಯವಾಗಿಯೂ ಕಿವಿಗೊಡುವ ಜನರಿಗೆ ಅದರಲ್ಲಿ ದೃಷ್ಟಾಂತಗಳಿವೆ.
ಅರಬ್ಬಿ ವ್ಯಾಖ್ಯಾನಗಳು:
وَمِنْ اٰیٰتِهٖ یُرِیْكُمُ الْبَرْقَ خَوْفًا وَّطَمَعًا وَّیُنَزِّلُ مِنَ السَّمَآءِ مَآءً فَیُحْیٖ بِهِ الْاَرْضَ بَعْدَ مَوْتِهَا ؕ— اِنَّ فِیْ ذٰلِكَ لَاٰیٰتٍ لِّقَوْمٍ یَّعْقِلُوْنَ ۟
ನಿಮ್ಮಲ್ಲಿ ಭಯ ಮತ್ತು ನಿರೀಕ್ಷೆಯನ್ನು ಹುಟ್ಟಿಸುತ್ತಾ ಮಿಂಚನ್ನು ತೋರಿಸುವುದು ಹಾಗೂ ಆಕಾಶದಿಂದ ಮಳೆಯನ್ನು ಸುರಿಸಿ ತನ್ಮೂಲಕ ನಿರ್ಜೀವ ಭೂಮಿಗೆ ಜೀವವನ್ನು ನೀಡುವುದು ಅವನ ದೃಷ್ಟಾಂತಗಳಲ್ಲಿ ಒಂದಾಗಿದೆ. ನಿಶ್ಚಯವಾಗಿಯೂ ಅರ್ಥಮಾಡಿಕೊಳ್ಳುವ ಜನರಿಗೆ ಅದರಲ್ಲಿ ದೃಷ್ಟಾಂತಗಳಿವೆ.
ಅರಬ್ಬಿ ವ್ಯಾಖ್ಯಾನಗಳು:
وَمِنْ اٰیٰتِهٖۤ اَنْ تَقُوْمَ السَّمَآءُ وَالْاَرْضُ بِاَمْرِهٖ ؕ— ثُمَّ اِذَا دَعَاكُمْ دَعْوَةً ۖۗ— مِّنَ الْاَرْضِ اِذَاۤ اَنْتُمْ تَخْرُجُوْنَ ۟
ಭೂಮ್ಯಾಕಾಶವು ಅವನ ಆಜ್ಞೆಯಂತೆ ಅಸ್ತಿತ್ವದಲ್ಲಿರುವುದು ಅವನ ದೃಷ್ಟಾಂತಗಳಲ್ಲಿ ಒಂದಾಗಿದೆ. ನಂತರ ಅವನು ಭೂಮಿಯಿಂದ ನಿಮ್ಮನ್ನು ಒಮ್ಮೆ ಕರೆದು ಬಿಟ್ಟರೆ, ಅಗೋ! ನೀವು ಹೊರಟು ಬರುತ್ತೀರಿ.
ಅರಬ್ಬಿ ವ್ಯಾಖ್ಯಾನಗಳು:
وَلَهٗ مَنْ فِی السَّمٰوٰتِ وَالْاَرْضِ ؕ— كُلٌّ لَّهٗ قٰنِتُوْنَ ۟
ಭೂಮ್ಯಾಕಾಶಗಳಲ್ಲಿರುವ ಎಲ್ಲರೂ ಅವನ ನಿಯಂತ್ರಣದಲ್ಲಿದ್ದಾರೆ. ಎಲ್ಲರೂ ಅವನ ಆಜ್ಞೆಗೆ ವಿಧೇಯರಾಗಿದ್ದಾರೆ.
ಅರಬ್ಬಿ ವ್ಯಾಖ್ಯಾನಗಳು:
وَهُوَ الَّذِیْ یَبْدَؤُا الْخَلْقَ ثُمَّ یُعِیْدُهٗ وَهُوَ اَهْوَنُ عَلَیْهِ ؕ— وَلَهُ الْمَثَلُ الْاَعْلٰى فِی السَّمٰوٰتِ وَالْاَرْضِ ۚ— وَهُوَ الْعَزِیْزُ الْحَكِیْمُ ۟۠
ಅವನೇ ಪ್ರಥಮ ಬಾರಿಗೆ ಸೃಷ್ಟಿಸುವವನು ಮತ್ತು ನಂತರ ಅದನ್ನು ಪುನರಾವರ್ತಿಸುವವನು. ಅದು ಅವನಿಗೆ ಅತ್ಯಂತ ಸುಲಭವಾಗಿದೆ. ಅವನಿಗೆ ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಉನ್ನತ ಗುಣಲಕ್ಷಣಗಳಿವೆ. ಅವನು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.
ಅರಬ್ಬಿ ವ್ಯಾಖ್ಯಾನಗಳು:
ضَرَبَ لَكُمْ مَّثَلًا مِّنْ اَنْفُسِكُمْ ؕ— هَلْ لَّكُمْ مِّنْ مَّا مَلَكَتْ اَیْمَانُكُمْ مِّنْ شُرَكَآءَ فِیْ مَا رَزَقْنٰكُمْ فَاَنْتُمْ فِیْهِ سَوَآءٌ تَخَافُوْنَهُمْ كَخِیْفَتِكُمْ اَنْفُسَكُمْ ؕ— كَذٰلِكَ نُفَصِّلُ الْاٰیٰتِ لِقَوْمٍ یَّعْقِلُوْنَ ۟
ಅಲ್ಲಾಹು ನಿಮಗೆ ನಿಮ್ಮಿಂದಲೇ ಒಂದು ಉದಾಹರಣೆಯನ್ನು ನೀಡುತ್ತಾನೆ. ನಾವು ನಿಮಗೆ ನೀಡಿದ ಸವಲತ್ತುಗಳಲ್ಲಿ ನಿಮ್ಮ ಗುಲಾಮರು ಯಾರಾದರೂ ನಿಮ್ಮ ಪಾಲುದಾರರಾಗಿದ್ದಾರೆಯೇ? ಅಂದರೆ, ನಿಮಗೆ ಮತ್ತು ಅವರಿಗೆ ಸಮಾನ ಸ್ಥಾನಮಾನವಿರುವ ರೀತಿಯಲ್ಲಿ? ನೀವು ಸ್ವತಃ ನಿಮ್ಮ ಬಗ್ಗೆ ಭಯಪಡುವಂತೆ ಅವರ ಬಗ್ಗೆಯೂ ಭಯಪಡುವ ರೀತಿಯಲ್ಲಿ? ಅರ್ಥಮಾಡಿಕೊಳ್ಳುವ ಜನರಿಗೆ ನಾವು ಈ ರೀತಿ ವಚನಗಳನ್ನು ವಿವರಿಸಿಕೊಡುತ್ತೇವೆ.
ಅರಬ್ಬಿ ವ್ಯಾಖ್ಯಾನಗಳು:
بَلِ اتَّبَعَ الَّذِیْنَ ظَلَمُوْۤا اَهْوَآءَهُمْ بِغَیْرِ عِلْمٍ ۚ— فَمَنْ یَّهْدِیْ مَنْ اَضَلَّ اللّٰهُ ؕ— وَمَا لَهُمْ مِّنْ نّٰصِرِیْنَ ۟
ಆದರೆ ಅಕ್ರಮವೆಸಗಿದವರು ಯಾವುದೇ ಜ್ಞಾನವಿಲ್ಲದೆ ಅವರ ಸ್ವೇಚ್ಛೆಗಳನ್ನು ಹಿಂಬಾಲಿಸಿದರು. ಅಲ್ಲಾಹು ದಾರಿತಪ್ಪಿಸಿದವರಿಗೆ ಸನ್ಮಾರ್ಗ ತೋರಿಸಲು ಯಾರಿಗೂ ಸಾಧ್ಯವಿಲ್ಲ. ಅವರಿಗೆ ಯಾವುದೇ ಸಹಾಯಕರೂ ಇರುವುದಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
فَاَقِمْ وَجْهَكَ لِلدِّیْنِ حَنِیْفًا ؕ— فِطْرَتَ اللّٰهِ الَّتِیْ فَطَرَ النَّاسَ عَلَیْهَا ؕ— لَا تَبْدِیْلَ لِخَلْقِ اللّٰهِ ؕ— ذٰلِكَ الدِّیْنُ الْقَیِّمُ ۙۗ— وَلٰكِنَّ اَكْثَرَ النَّاسِ لَا یَعْلَمُوْنَ ۟ۗۙ
ಆದ್ದರಿಂದ ನೀವು ಏಕನಿಷ್ಠರಾಗಿ ನಿಮ್ಮ ಮುಖವನ್ನು ಧರ್ಮದ ಕಡೆಗೆ ತಿರುಗಿಸಿರಿ. ಅದು ಅಲ್ಲಾಹು ಮನುಷ್ಯರನ್ನು ಸೃಷ್ಟಿಸಿದ ಸಹಜ ಮನೋಧರ್ಮವಾಗಿದೆ. ಅಲ್ಲಾಹನ ಸೃಷ್ಟಿ ನಿಯಮಕ್ಕೆ ಯಾವುದೇ ಬದಲಾವಣೆಯಿಲ್ಲ. ಅದೇ ನೇರವಾದ ಧರ್ಮ. ಆದರೆ ಮನುಷ್ಯರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
مُنِیْبِیْنَ اِلَیْهِ وَاتَّقُوْهُ وَاَقِیْمُوا الصَّلٰوةَ وَلَا تَكُوْنُوْا مِنَ الْمُشْرِكِیْنَ ۟ۙ
ಅಲ್ಲಾಹನ ಕಡೆಗೆ ತಿರುಗಿ ಅವನನ್ನು ಭಯಪಡಿರಿ ಮತ್ತು ನಮಾಝ್ ಸಂಸ್ಥಾಪಿಸಿರಿ. ಬಹುದೇವಾರಾಧಕರಲ್ಲಿ ಸೇರಬೇಡಿ.
ಅರಬ್ಬಿ ವ್ಯಾಖ್ಯಾನಗಳು:
مِنَ الَّذِیْنَ فَرَّقُوْا دِیْنَهُمْ وَكَانُوْا شِیَعًا ؕ— كُلُّ حِزْبٍ بِمَا لَدَیْهِمْ فَرِحُوْنَ ۟
ಅಂದರೆ, ತಮ್ಮ ಧರ್ಮವನ್ನು ಒಡೆದು ಹಲವಾರು ಪಂಗಡಗಳಾಗಿ ಬಿಟ್ಟವರು. ಪ್ರತಿಯೊಂದು ಪಂಗಡವೂ ಅದರ ಕೈಯಲ್ಲಿ ಏನಿದೆಯೋ ಅದರಲ್ಲಿ ಸಂಭ್ರಮಿಸುತ್ತಿದೆ.
ಅರಬ್ಬಿ ವ್ಯಾಖ್ಯಾನಗಳು:
وَاِذَا مَسَّ النَّاسَ ضُرٌّ دَعَوْا رَبَّهُمْ مُّنِیْبِیْنَ اِلَیْهِ ثُمَّ اِذَاۤ اَذَاقَهُمْ مِّنْهُ رَحْمَةً اِذَا فَرِیْقٌ مِّنْهُمْ بِرَبِّهِمْ یُشْرِكُوْنَ ۟ۙ
ಜನರಿಗೆ ಏನಾದರೂ ತೊಂದರೆಯುಂಟಾದರೆ, ಅವರು ತಮ್ಮ ಪರಿಪಾಲಕನ (ಅಲ್ಲಾಹನ) ಕಡೆಗೆ ಸಂಪೂರ್ಣವಾಗಿ ತಿರುಗಿ ಅವನನ್ನು ಕರೆದು ಪ್ರಾರ್ಥಿಸುತ್ತಾರೆ. ನಂತರ ಅಲ್ಲಾಹು ಅವರಿಗೆ ತನ್ನ ದಯೆಯ ರುಚಿಯನ್ನು ತೋರಿಸಿದರೆ, ಅವರಲ್ಲೊಂದು ಗುಂಪು ತಮ್ಮ ಪರಿಪಾಲಕನೊಂದಿಗೆ (ಅಲ್ಲಾಹನೊಂದಿಗೆ) ಸಹಭಾಗಿತ್ವ (ಶಿರ್ಕ್) ಮಾಡುತ್ತಾರೆ.
ಅರಬ್ಬಿ ವ್ಯಾಖ್ಯಾನಗಳು:
لِیَكْفُرُوْا بِمَاۤ اٰتَیْنٰهُمْ ؕ— فَتَمَتَّعُوْا ۥ— فَسَوْفَ تَعْلَمُوْنَ ۟
ನಾವು ಅವರಿಗೆ ದಯಪಾಲಿಸಿದ ಅನುಗ್ರಹಗಳಿಗೆ ಕೃತಘ್ನತೆ ತೋರಲೆಂದು! ಸರಿ, ನೀವು ಆನಂದಿಸಿ. ಸದ್ಯವೇ ನಿಮಗೆ ತಿಳಿಯಲಿದೆ.
ಅರಬ್ಬಿ ವ್ಯಾಖ್ಯಾನಗಳು:
اَمْ اَنْزَلْنَا عَلَیْهِمْ سُلْطٰنًا فَهُوَ یَتَكَلَّمُ بِمَا كَانُوْا بِهٖ یُشْرِكُوْنَ ۟
ನಾವು ಅವರಿಗೆ ಏನಾದರೂ ಸಾಕ್ಷ್ಯಾಧಾರವನ್ನು ಅವತೀರ್ಣಗೊಳಿಸಿದ್ದು, ಅದು ಅವರು ಮಾಡುತ್ತಿರುವ ಸಹಭಾಗಿತ್ವದ (ಶಿರ್ಕ್‌) ಬಗ್ಗೆ ಮಾತನಾಡುತ್ತದೆಯೇ?
ಅರಬ್ಬಿ ವ್ಯಾಖ್ಯಾನಗಳು:
وَاِذَاۤ اَذَقْنَا النَّاسَ رَحْمَةً فَرِحُوْا بِهَا ؕ— وَاِنْ تُصِبْهُمْ سَیِّئَةٌ بِمَا قَدَّمَتْ اَیْدِیْهِمْ اِذَا هُمْ یَقْنَطُوْنَ ۟
ನಾವು ಮನುಷ್ಯರಿಗೆ ದಯೆಯ ರುಚಿಯನ್ನು ತೋರಿಸಿದರೆ ಅವರು ಸಂತೋಷಪಡುತ್ತಾರೆ. ಆದರೆ, ಅವರ ಕೈಗಳು ಮುಂದಕ್ಕೆ ಕಳುಹಿಸಿರುವ ದುಷ್ಕರ್ಮಗಳ ಕಾರಣದಿಂದ ಅವರಿಗೇನಾದರೂ ಅನಾಹುತ ಸಂಭವಿಸಿದರೆ ಅಗೋ! ಅವರು ಹತಾಶರಾಗಿ ಬಿಡುತ್ತಾರೆ.
ಅರಬ್ಬಿ ವ್ಯಾಖ್ಯಾನಗಳು:
اَوَلَمْ یَرَوْا اَنَّ اللّٰهَ یَبْسُطُ الرِّزْقَ لِمَنْ یَّشَآءُ وَیَقْدِرُ ؕ— اِنَّ فِیْ ذٰلِكَ لَاٰیٰتٍ لِّقَوْمٍ یُّؤْمِنُوْنَ ۟
ಅಲ್ಲಾಹು ಅವನು ಇಚ್ಛಿಸುವವರಿಗೆ ಉಪಜೀವನವನ್ನು ವಿಶಾಲಗೊಳಿಸುತ್ತಾನೆ ಮತ್ತು ಅವನು ಇಚ್ಛಿಸುವವರಿಗೆ ಇಕ್ಕಟ್ಟುಗೊಳಿಸುತ್ತಾನೆಂದು ಅವರು ನೋಡಿಲ್ಲವೇ?ನಿಶ್ಚಯವಾಗಿಯೂ ವಿಶ್ವಾಸವಿಡುವ ಜನರಿಗೆ ಅದರಲ್ಲಿ ದೃಷ್ಟಾಂತಗಳಿವೆ.
ಅರಬ್ಬಿ ವ್ಯಾಖ್ಯಾನಗಳು:
فَاٰتِ ذَا الْقُرْبٰى حَقَّهٗ وَالْمِسْكِیْنَ وَابْنَ السَّبِیْلِ ؕ— ذٰلِكَ خَیْرٌ لِّلَّذِیْنَ یُرِیْدُوْنَ وَجْهَ اللّٰهِ ؗ— وَاُولٰٓىِٕكَ هُمُ الْمُفْلِحُوْنَ ۟
ಆದ್ದರಿಂದ ನೀವು ಕುಟುಂಬ ಸಂಬಂಧಿಕರಿಗೆ ಅವರ ಹಕ್ಕನ್ನು ನೀಡಿರಿ. ಬಡವರಿಗೂ, ಪ್ರಯಾಣಿಕರಿಗೂ (ಅವರ ಹಕ್ಕನ್ನು ನೀಡಿರಿ). ಅಲ್ಲಾಹನ ಮುಖವನ್ನು ಬಯಸುವವರಿಗೆ ಅದು ಉತ್ತಮವಾಗಿದೆ. ಅವರೇ ಯಶಸ್ವಿಯಾದವರು.
ಅರಬ್ಬಿ ವ್ಯಾಖ್ಯಾನಗಳು:
وَمَاۤ اٰتَیْتُمْ مِّنْ رِّبًا لِّیَرْبُوَاۡ فِیْۤ اَمْوَالِ النَّاسِ فَلَا یَرْبُوْا عِنْدَ اللّٰهِ ۚ— وَمَاۤ اٰتَیْتُمْ مِّنْ زَكٰوةٍ تُرِیْدُوْنَ وَجْهَ اللّٰهِ فَاُولٰٓىِٕكَ هُمُ الْمُضْعِفُوْنَ ۟
ಜನರ ಧನದಲ್ಲಿ ಹೆಚ್ಚಾಗುತ್ತಾ ಇರಲು ನೀವು ಏನನ್ನು ಬಡ್ಡಿಗೆ ನೀಡುತ್ತೀರೋ ಅದು ಅಲ್ಲಾಹನ ಬಳಿ ಹೆಚ್ಚಾಗುವುದಿಲ್ಲ. ಆದರೆ ನೀವು ಅಲ್ಲಾಹನ ಮುಖವನ್ನು ಬಯಸಿ ನೀಡುವ ಝಕಾತ್—ಅವರೇ ಇಮ್ಮಡಿ ಪ್ರತಿಫಲವನ್ನು ಪಡೆಯುವವರು.
ಅರಬ್ಬಿ ವ್ಯಾಖ್ಯಾನಗಳು:
اَللّٰهُ الَّذِیْ خَلَقَكُمْ ثُمَّ رَزَقَكُمْ ثُمَّ یُمِیْتُكُمْ ثُمَّ یُحْیِیْكُمْ ؕ— هَلْ مِنْ شُرَكَآىِٕكُمْ مَّنْ یَّفْعَلُ مِنْ ذٰلِكُمْ مِّنْ شَیْءٍ ؕ— سُبْحٰنَهٗ وَتَعٰلٰى عَمَّا یُشْرِكُوْنَ ۟۠
ಅಲ್ಲಾಹನೇ ನಿಮ್ಮನ್ನು ಸೃಷ್ಟಿಸಿದವನು. ನಂತರ ಅವನು ನಿಮಗೆ ಉಪಜೀವನವನ್ನು ಒದಗಿಸಿದನು. ನಂತರ ಅವನು ನಿಮ್ಮನ್ನು ಮೃತಪಡಿಸುತ್ತಾನೆ. ನಂತರ ಪುನಃ ನಿಮಗೆ ಜೀವವನ್ನು ನೀಡುತ್ತಾನೆ. ನೀವು ಅಲ್ಲಾಹನೊಂದಿಗೆ ಸಹಭಾಗಿಗಳಾಗಿ ಮಾಡಿದವರಲ್ಲಿ (ನಿಮ್ಮ ದೇವರುಗಳಲ್ಲಿ) ಯಾರಾದರೂ ಒಬ್ಬರು ಇವುಗಳಲ್ಲಿ ಯಾವುದಾದರೂ ಒಂದನ್ನು ಮಾಡುವರೇ? ಅವರು ಮಾಡುವ ಸಹಭಾಗಿತ್ವದಿಂದ (ಶಿರ್ಕ್‌ನಿಂದ) ಅಲ್ಲಾಹು ಎಷ್ಟೋ ಪರಿಶುದ್ಧನು ಮತ್ತು ಪರಮೋನ್ನತನಾಗಿದ್ದಾನೆ.
ಅರಬ್ಬಿ ವ್ಯಾಖ್ಯಾನಗಳು:
ظَهَرَ الْفَسَادُ فِی الْبَرِّ وَالْبَحْرِ بِمَا كَسَبَتْ اَیْدِی النَّاسِ لِیُذِیْقَهُمْ بَعْضَ الَّذِیْ عَمِلُوْا لَعَلَّهُمْ یَرْجِعُوْنَ ۟
ಮನುಷ್ಯರು ಮಾಡಿದ ದುಷ್ಕರ್ಮಗಳ ಕಾರಣದಿಂದ ನೆಲದಲ್ಲೂ, ಕಡಲಲ್ಲೂ ವಿನಾಶವು ಹರಡಿಕೊಂಡಿದೆ. ಅವರು ಮಾಡಿದ ಕೆಲವು ಕರ್ಮಗಳ ರುಚಿಯನ್ನು ಅವರಿಗೆ ತೋರಿಸಲೆಂದು. ಅವರು (ಸತ್ಯಮಾರ್ಗಕ್ಕೆ) ಮರಳಿ ಬರುವುದಕ್ಕಾಗಿ.
ಅರಬ್ಬಿ ವ್ಯಾಖ್ಯಾನಗಳು:
قُلْ سِیْرُوْا فِی الْاَرْضِ فَانْظُرُوْا كَیْفَ كَانَ عَاقِبَةُ الَّذِیْنَ مِنْ قَبْلُ ؕ— كَانَ اَكْثَرُهُمْ مُّشْرِكِیْنَ ۟
ಹೇಳಿರಿ: “ನೀವು ಭೂಮಿಯಲ್ಲಿ ಸಂಚರಿಸಿ ಹಿಂದಿನ ಕಾಲದ ಜನರ ಅಂತ್ಯವು ಹೇಗಿತ್ತೆಂದು ನೋಡಿರಿ. ಅವರಲ್ಲಿ ಹೆಚ್ಚಿನವರು ಬಹುದೇವಾರಾಧಕರಾಗಿದ್ದರು.”
ಅರಬ್ಬಿ ವ್ಯಾಖ್ಯಾನಗಳು:
فَاَقِمْ وَجْهَكَ لِلدِّیْنِ الْقَیِّمِ مِنْ قَبْلِ اَنْ یَّاْتِیَ یَوْمٌ لَّا مَرَدَّ لَهٗ مِنَ اللّٰهِ یَوْمَىِٕذٍ یَّصَّدَّعُوْنَ ۟
ಯಾರಿಗೂ ತಡೆಯೊಡ್ಡಲು ಸಾಧ್ಯವಾಗದ ಒಂದು ದಿನ ಬರುವುದಕ್ಕೆ ಮೊದಲು ನೀವು ನಿಮ್ಮ ಮುಖವನ್ನು ನೇರವಾದ ಧರ್ಮದ ಕಡೆಗೆ ತಿರುಗಿಸಿರಿ. ಅಂದು ಎಲ್ಲರೂ ಬೇರೆ ಬೇರೆಯಾಗಿ ಬಿಡುವರು.
ಅರಬ್ಬಿ ವ್ಯಾಖ್ಯಾನಗಳು:
مَنْ كَفَرَ فَعَلَیْهِ كُفْرُهٗ ۚ— وَمَنْ عَمِلَ صَالِحًا فَلِاَنْفُسِهِمْ یَمْهَدُوْنَ ۟ۙ
ಯಾರು ಸತ್ಯವನ್ನು ನಿಷೇಧಿಸುತ್ತಾರೋ ಅವರ ಸತ್ಯನಿಷೇಧವು ಅವರಿಗೇ ಕೆಡುಕಾಗಿದೆ. ಯಾರು ಸತ್ಕರ್ಮವೆಸಗುತ್ತಾರೋ ಅವರು ಸ್ವಯಂ ಅವರಿಗೇ ವಾಸ್ತವ್ಯಗಳನ್ನು ಸಿದ್ಧಗೊಳಿಸುತ್ತಿದ್ದಾರೆ.
ಅರಬ್ಬಿ ವ್ಯಾಖ್ಯಾನಗಳು:
لِیَجْزِیَ الَّذِیْنَ اٰمَنُوْا وَعَمِلُوا الصَّلِحٰتِ مِنْ فَضْلِهٖ ؕ— اِنَّهٗ لَا یُحِبُّ الْكٰفِرِیْنَ ۟
ಅಲ್ಲಾಹು ತನ್ನ ಔದಾರ್ಯದಿಂದ ಸತ್ಯವಿಶ್ವಾಸಿಗಳಿಗೆ ಮತ್ತು ಸತ್ಕರ್ಮವೆಸಗಿದವರಿಗೆ ಪ್ರತಿಫಲವನ್ನು ನೀಡಲೆಂದು. ಅವನು ಸತ್ಯನಿಷೇಧಿಗಳನ್ನು ಎಂದಿಗೂ ಇಷ್ಟಪಡುವುದಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
وَمِنْ اٰیٰتِهٖۤ اَنْ یُّرْسِلَ الرِّیٰحَ مُبَشِّرٰتٍ وَّلِیُذِیْقَكُمْ مِّنْ رَّحْمَتِهٖ وَلِتَجْرِیَ الْفُلْكُ بِاَمْرِهٖ وَلِتَبْتَغُوْا مِنْ فَضْلِهٖ وَلَعَلَّكُمْ تَشْكُرُوْنَ ۟
ನಿಮಗೆ ಮಳೆಯ ಬಗ್ಗೆ ಸಿಹಿ ಸುದ್ದಿ ನೀಡಲು, ಅವನ ದಯೆಯ ರುಚಿಯನ್ನು ನಿಮಗೆ ತೋರಿಸಲು, ನಾವೆಗಳು ಅವನ ಆಜ್ಞೆಯಂತೆ (ಸಮುದ್ರದಲ್ಲಿ) ಚಲಿಸಲು ಮತ್ತು ಅವನ ಔದಾರ್ಯದಿಂದ ನೀವು ಉಪಜೀವನವನ್ನು ಹುಡುಕಲು ಅವನು ಗಾಳಿಗಳನ್ನು ಕಳುಹಿಸುವುದು ಅವನ ದೃಷ್ಟಾಂತಗಳಲ್ಲಿ ಒಂದಾಗಿದೆ. ನೀವು ಕೃತಜ್ಞರಾಗುವುದಕ್ಕಾಗಿ.
ಅರಬ್ಬಿ ವ್ಯಾಖ್ಯಾನಗಳು:
وَلَقَدْ اَرْسَلْنَا مِنْ قَبْلِكَ رُسُلًا اِلٰى قَوْمِهِمْ فَجَآءُوْهُمْ بِالْبَیِّنٰتِ فَانْتَقَمْنَا مِنَ الَّذِیْنَ اَجْرَمُوْا ؕ— وَكَانَ حَقًّا عَلَیْنَا نَصْرُ الْمُؤْمِنِیْنَ ۟
ನಾವು ನಿಮಗಿಂತ ಮೊದಲು ಅನೇಕ ಪ್ರವಾದಿಗಳನ್ನು ಅವರ ಜನರ ಬಳಿಗೆ ಕಳುಹಿಸಿದ್ದೇವೆ. ಅವರು ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಅವರ ಬಳಿಗೆ ಬಂದರು. ಆಗ ನಾವು ಅಪರಾಧವೆಸಗಿದ ಜನರಿಂದ ಪ್ರತೀಕಾರ ಪಡೆದೆವು. ಸತ್ಯವಿಶ್ವಾಸಿಗಳಿಗೆ ಸಹಾಯ ಮಾಡುವುದು ನಮ್ಮ ಕರ್ತವ್ಯವಾಗಿದೆ.
ಅರಬ್ಬಿ ವ್ಯಾಖ್ಯಾನಗಳು:
اَللّٰهُ الَّذِیْ یُرْسِلُ الرِّیٰحَ فَتُثِیْرُ سَحَابًا فَیَبْسُطُهٗ فِی السَّمَآءِ كَیْفَ یَشَآءُ وَیَجْعَلُهٗ كِسَفًا فَتَرَی الْوَدْقَ یَخْرُجُ مِنْ خِلٰلِهٖ ۚ— فَاِذَاۤ اَصَابَ بِهٖ مَنْ یَّشَآءُ مِنْ عِبَادِهٖۤ اِذَا هُمْ یَسْتَبْشِرُوْنَ ۟
ಅಲ್ಲಾಹು ಗಾಳಿಗಳನ್ನು ಕಳುಹಿಸುತ್ತಾನೆ. ಅವು ಮೋಡಗಳನ್ನು ಎತ್ತಿಕೊಳ್ಳುತ್ತವೆ. ನಂತರ ಅಲ್ಲಾಹು ಅವನು ಇಚ್ಛಿಸುವಂತೆ ಅದನ್ನು ಆಕಾಶದಲ್ಲಿ ಹರಡುತ್ತಾನೆ. ನಂತರ ಅದನ್ನು ತುಣುಕುಗಳನ್ನಾಗಿ ಮಾಡುತ್ತಾನೆ. ಆಗ ಅದರ ಎಡೆಯಿಂದ ಮಳೆಹನಿಗಳು ಹೊರಬರುವುದನ್ನು ನೀವು ಕಾಣುತ್ತೀರಿ. ಅವನು ತನ್ನ ದಾಸರಲ್ಲಿ ಅವನು ಇಚ್ಛಿಸುವವರ ಮೇಲೆ ಅದನ್ನು ಸುರಿಸಿದಾಗ ಅಗೋ! ಅವರು ಸಂತೋಷಪಡುತ್ತಾರೆ.
ಅರಬ್ಬಿ ವ್ಯಾಖ್ಯಾನಗಳು:
وَاِنْ كَانُوْا مِنْ قَبْلِ اَنْ یُّنَزَّلَ عَلَیْهِمْ مِّنْ قَبْلِهٖ لَمُبْلِسِیْنَ ۟
ಆ ಮಳೆಯು ಅವರ ಮೇಲೆ ಸುರಿಯುವುದಕ್ಕೆ ಮೊದಲು ಖಂಡಿತವಾಗಿಯೂ ಅವರು ನಿರಾಶರಾಗಿದ್ದರು.
ಅರಬ್ಬಿ ವ್ಯಾಖ್ಯಾನಗಳು:
فَانْظُرْ اِلٰۤی اٰثٰرِ رَحْمَتِ اللّٰهِ كَیْفَ یُحْیِ الْاَرْضَ بَعْدَ مَوْتِهَا ؕ— اِنَّ ذٰلِكَ لَمُحْیِ الْمَوْتٰى ۚ— وَهُوَ عَلٰى كُلِّ شَیْءٍ قَدِیْرٌ ۟
ಅಲ್ಲಾಹನ ದಯೆಯ ಪರಿಣಾಮಗಳನ್ನು ನೋಡಿರಿ. ಭೂಮಿಯು ನಿರ್ಜೀವವಾದ ಬಳಿಕ ಅವನು ಅದಕ್ಕೆ ಹೇಗೆ ಜೀವ ನೀಡುತ್ತಾನೆಂದು. ಅಂತಹವನು ಸತ್ತವರಿಗೆ ಜೀವ ನೀಡುತ್ತಾನೆ ಎಂಬುದರಲ್ಲಿ ಸಂಶಯವೇ ಇಲ್ಲ. ಅವನು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.
ಅರಬ್ಬಿ ವ್ಯಾಖ್ಯಾನಗಳು:
وَلَىِٕنْ اَرْسَلْنَا رِیْحًا فَرَاَوْهُ مُصْفَرًّا لَّظَلُّوْا مِنْ بَعْدِهٖ یَكْفُرُوْنَ ۟
ನಾವು ಬಿರುಗಾಳಿಯನ್ನು ಕಳುಹಿಸಿ ಅದು ಅವರ ಹೊಲಗಳನ್ನು ಹಳದಿ ಬಣ್ಣಕ್ಕೆ ತಿರುಗಿಸುವುದನ್ನು (ಬಾಡಿಸುವುದನ್ನು) ಕಂಡರೂ ಅವರು ಅದರ ಬಳಿಕವೂ ಕೃತಘ್ನರಾಗಿಯೇ ಇರುವರು.
ಅರಬ್ಬಿ ವ್ಯಾಖ್ಯಾನಗಳು:
فَاِنَّكَ لَا تُسْمِعُ الْمَوْتٰى وَلَا تُسْمِعُ الصُّمَّ الدُّعَآءَ اِذَا وَلَّوْا مُدْبِرِیْنَ ۟
ಸತ್ತವರಿಗೆ ಕೇಳುವಂತೆ ಮಾಡಲು ನಿಮಗೆ ಖಂಡಿತ ಸಾಧ್ಯವಿಲ್ಲ. ಕಿವುಡರು ಬೆನ್ನು ತಿರುಗಿಸಿ ನಡೆದರೆ ಅವರಿಗೆ ಕರೆ ಕೇಳುವಂತೆ ಮಾಡಲು ಕೂಡ ನಿಮಗೆ ಸಾಧ್ಯವಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
وَمَاۤ اَنْتَ بِهٰدِ الْعُمْیِ عَنْ ضَلٰلَتِهِمْ ؕ— اِنْ تُسْمِعُ اِلَّا مَنْ یُّؤْمِنُ بِاٰیٰتِنَا فَهُمْ مُّسْلِمُوْنَ ۟۠
ಕುರುಡರನ್ನು ಅವರ ದುರ್ಮಾರ್ಗದಿಂದ ಮುಕ್ತಗೊಳಿಸಿ ಸನ್ಮಾರ್ಗಕ್ಕೆ ದಾರಿ ತೋರಿಸಲು ನಿಮಗೆ ಸಾಧ್ಯವಿಲ್ಲ. ನಮ್ಮ ವಚನಗಳಲ್ಲಿ ವಿಶ್ವಾಸವಿಟ್ಟು ನಂತರ ಶರಣಾಗುವವರು ಯಾರೋ ಅವರಿಗೆ ಮಾತ್ರ ನೀವು ಕೇಳುವಂತೆ ಮಾಡಬಲ್ಲಿರಿ.
ಅರಬ್ಬಿ ವ್ಯಾಖ್ಯಾನಗಳು:
اَللّٰهُ الَّذِیْ خَلَقَكُمْ مِّنْ ضُؔعْفٍ ثُمَّ جَعَلَ مِنْ بَعْدِ ضُؔعْفٍ قُوَّةً ثُمَّ جَعَلَ مِنْ بَعْدِ قُوَّةٍ ضُؔعْفًا وَّشَیْبَةً ؕ— یَخْلُقُ مَا یَشَآءُ ۚ— وَهُوَ الْعَلِیْمُ الْقَدِیْرُ ۟
ಅಲ್ಲಾಹು ನಿಮ್ಮನ್ನು ದುರ್ಬಲ ಸ್ಥಿತಿಯಲ್ಲಿ ಸೃಷ್ಟಿಸಿದನು. ನಂತರ ದೌರ್ಬಲ್ಯದ ಬಳಿಕ ಅವನು ನಿಮಗೆ ಶಕ್ತಿಯನ್ನು ನೀಡಿದನು. ನಂತರ ಶಕ್ತಿಯನ್ನು ನೀಡಿದ ಬಳಿಕ ಅವನು ನಿಮ್ಮನ್ನು ಪುನಃ ದುರ್ಬಲರಾಗಿ ಮತ್ತು ಕೂದಲು ನೆರೆತವರಾಗಿ ಮಾಡಿದನು. ಅವನು ಇಚ್ಛಿಸುವುದನ್ನು ಅವನು ಸೃಷ್ಟಿಸುತ್ತಾನೆ. ಅವನು ಸರ್ವಜ್ಞನು ಮತ್ತು ಸರ್ವಶಕ್ತನಾಗಿದ್ದಾನೆ.
ಅರಬ್ಬಿ ವ್ಯಾಖ್ಯಾನಗಳು:
وَیَوْمَ تَقُوْمُ السَّاعَةُ یُقْسِمُ الْمُجْرِمُوْنَ ۙ۬— مَا لَبِثُوْا غَیْرَ سَاعَةٍ ؕ— كَذٰلِكَ كَانُوْا یُؤْفَكُوْنَ ۟
ಅಂತ್ಯಸಮಯವು ಸಂಭವಿಸುವ ದಿನದಂದು ಅಪರಾಧಿಗಳು ಆಣೆ ಮಾಡುತ್ತಾ, “ನಾವು (ಇಹಲೋಕದಲ್ಲಿ) ಒಂದು ತಾಸಿಗಿಂತ ಹೆಚ್ಚು ವಾಸವಾಗಿರಲಿಲ್ಲ” ಎಂದು ಹೇಳುವರು. ಈ ರೀತಿ ಅವರನ್ನು (ಸತ್ಯದಿಂದ) ತಪ್ಪಿಸಿಬಿಡಲಾಗಿದೆ.
ಅರಬ್ಬಿ ವ್ಯಾಖ್ಯಾನಗಳು:
وَقَالَ الَّذِیْنَ اُوْتُوا الْعِلْمَ وَالْاِیْمَانَ لَقَدْ لَبِثْتُمْ فِیْ كِتٰبِ اللّٰهِ اِلٰى یَوْمِ الْبَعْثِ ؗ— فَهٰذَا یَوْمُ الْبَعْثِ وَلٰكِنَّكُمْ كُنْتُمْ لَا تَعْلَمُوْنَ ۟
ಜ್ಞಾನ ಮತ್ತು ವಿಶ್ವಾಸವನ್ನು ನೀಡಲಾದವರು ಹೇಳುವರು: “ನೀವು ಅಲ್ಲಾಹನ ದಾಖಲೆಯಲ್ಲಿರುವಂತೆ ಪುನರುತ್ಥಾನ ದಿನದವರೆಗೆ ವಾಸವಾಗಿದ್ದಿರಿ. ಇಗೋ ಇದೇ ಪುನರುತ್ಥಾನದ ದಿನ! ಆದರೆ ನಿಮಗೆ ಅದು ತಿಳಿದಿಲ್ಲ.”
ಅರಬ್ಬಿ ವ್ಯಾಖ್ಯಾನಗಳು:
فَیَوْمَىِٕذٍ لَّا یَنْفَعُ الَّذِیْنَ ظَلَمُوْا مَعْذِرَتُهُمْ وَلَا هُمْ یُسْتَعْتَبُوْنَ ۟
ಅಕ್ರಮಿಗಳಿಗೆ ಆ ದಿನ ಅವರ ನೆಪಗಳು ಯಾವುದೇ ಉಪಕಾರ ಮಾಡುವುದಿಲ್ಲ. ಅವರೊಡನೆ ಪಶ್ಚಾತ್ತಾಪಪಡುವಂತೆಯೂ ಕೇಳಿಕೊಳ್ಳಲಾಗುವುದಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
وَلَقَدْ ضَرَبْنَا لِلنَّاسِ فِیْ هٰذَا الْقُرْاٰنِ مِنْ كُلِّ مَثَلٍ ؕ— وَلَىِٕنْ جِئْتَهُمْ بِاٰیَةٍ لَّیَقُوْلَنَّ الَّذِیْنَ كَفَرُوْۤا اِنْ اَنْتُمْ اِلَّا مُبْطِلُوْنَ ۟
ನಾವು ಈ ಕುರ್‌ಆನ್‍ನಲ್ಲಿ ಜನರಿಗೋಸ್ಕರ ಎಲ್ಲ ರೀತಿಯ ಉದಾಹರಣೆಗಳನ್ನು ವಿವರಿಸಿದ್ದೇವೆ. ನೀವು ಒಂದು ದೃಷ್ಟಾಂತದೊಂದಿಗೆ ಅವರ ಬಳಿ ತೆರಳಿದರೂ ಸತ್ಯನಿಷೇಧಿಗಳು ಹೇಳುವರು: “ನೀವು ಖಂಡಿತವಾಗಿಯೂ ಮಿಥ್ಯವಾದಿಗಳಾಗಿದ್ದೀರಿ.”
ಅರಬ್ಬಿ ವ್ಯಾಖ್ಯಾನಗಳು:
كَذٰلِكَ یَطْبَعُ اللّٰهُ عَلٰى قُلُوْبِ الَّذِیْنَ لَا یَعْلَمُوْنَ ۟
ಈ ರೀತಿ ಅಲ್ಲಾಹು (ಸತ್ಯವನ್ನು) ಅರ್ಥಮಾಡಿಕೊಳ್ಳಲು ಮುಂದಾಗದವರ ಹೃದಯಗಳಿಗೆ ಮೊಹರು ಹಾಕುವನು.
ಅರಬ್ಬಿ ವ್ಯಾಖ್ಯಾನಗಳು:
فَاصْبِرْ اِنَّ وَعْدَ اللّٰهِ حَقٌّ وَّلَا یَسْتَخِفَّنَّكَ الَّذِیْنَ لَا یُوْقِنُوْنَ ۟۠
ನೀವು ತಾಳ್ಮೆಯಿಂದಿರಿ. ನಿಶ್ಚಯವಾಗಿಯೂ ಅಲ್ಲಾಹನ ವಾಗ್ದಾನವು ಸತ್ಯವಾಗಿದೆ. ದೃಢವಿಶ್ವಾಸವಿಲ್ಲದ ಆ ಜನರು ನಿಮ್ಮನ್ನು ತಾಳ್ಮೆಗೆಡುವಂತೆ ಮಾಡದಿರಲಿ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಅಧ್ಯಾಯ: ಸೂರ ಅರ್‍ರೂಮ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಅನುವಾದಗಳ ವಿಷಯಸೂಚಿ

ಪವಿತ್ರ ಕುರ್‌ಆನ್ ಕನ್ನಡ ಅರ್ಥಾನುವಾದ - ಮುಹಮ್ಮದ್ ಹಂಝ ಪುತ್ತೂರು

ಮುಚ್ಚಿ