Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು * - ಅನುವಾದಗಳ ವಿಷಯಸೂಚಿ

PDF XML CSV Excel API
Please review the Terms and Policies

ಅರ್ಥಗಳ ಅನುವಾದ ಅಧ್ಯಾಯ: ಅರ್‍ರೂಮ್   ಶ್ಲೋಕ:
وَعْدَ اللّٰهِ ؕ— لَا یُخْلِفُ اللّٰهُ وَعْدَهٗ وَلٰكِنَّ اَكْثَرَ النَّاسِ لَا یَعْلَمُوْنَ ۟
ಇದು ಅಲ್ಲಾಹನ ವಾಗ್ದಾನವಾಗಿದೆ. ಅಲ್ಲಾಹು ಅವನ ವಾಗ್ದಾನವನ್ನು ಉಲ್ಲಂಘಿಸುವುದಿಲ್ಲ. ಆದರೆ ಜನರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
یَعْلَمُوْنَ ظَاهِرًا مِّنَ الْحَیٰوةِ الدُّنْیَا ۖۚ— وَهُمْ عَنِ الْاٰخِرَةِ هُمْ غٰفِلُوْنَ ۟
ಅವರು ಇಹಲೋಕ ಜೀವನದ ಬಹಿರಂಗ ವಿಷಯಗಳನ್ನು ಮಾತ್ರ ತಿಳಿದಿದ್ದಾರೆ. ಆದರೆ ಪರಲೋಕದ ಬಗ್ಗೆ ಅವರಿಗೆ ಯಾವುದೇ ಜ್ಞಾನವಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
اَوَلَمْ یَتَفَكَّرُوْا فِیْۤ اَنْفُسِهِمْ ۫— مَا خَلَقَ اللّٰهُ السَّمٰوٰتِ وَالْاَرْضَ وَمَا بَیْنَهُمَاۤ اِلَّا بِالْحَقِّ وَاَجَلٍ مُّسَمًّی ؕ— وَاِنَّ كَثِیْرًا مِّنَ النَّاسِ بِلِقَآئِ رَبِّهِمْ لَكٰفِرُوْنَ ۟
ಅವರು ಸ್ವಯಂ ಆಲೋಚಿಸುವುದಿಲ್ಲವೇ? ಅಲ್ಲಾಹು ಭೂಮ್ಯಾಕಾಶಗಳನ್ನು ಹಾಗೂ ಅವುಗಳ ನಡುವೆಯಿರುವ ಎಲ್ಲಾ ವಸ್ತುಗಳನ್ನು ಸತ್ಯ ಸಮೇತವಾಗಿ ಮತ್ತು ಒಂದು ನಿಶ್ಚಿತ ಅವಧಿಯವರೆಗೆ ಮಾತ್ರ ಸೃಷ್ಟಿಸಿದ್ದಾನೆ. ಜನರಲ್ಲಿ ಹೆಚ್ಚಿನವರು ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭೇಟಿಯಾಗುವುದನ್ನು ನಿಷೇಧಿಸಿದವರಾಗಿದ್ದಾರೆ.
ಅರಬ್ಬಿ ವ್ಯಾಖ್ಯಾನಗಳು:
اَوَلَمْ یَسِیْرُوْا فِی الْاَرْضِ فَیَنْظُرُوْا كَیْفَ كَانَ عَاقِبَةُ الَّذِیْنَ مِنْ قَبْلِهِمْ ؕ— كَانُوْۤا اَشَدَّ مِنْهُمْ قُوَّةً وَّاَثَارُوا الْاَرْضَ وَعَمَرُوْهَاۤ اَكْثَرَ مِمَّا عَمَرُوْهَا وَجَآءَتْهُمْ رُسُلُهُمْ بِالْبَیِّنٰتِ ؕ— فَمَا كَانَ اللّٰهُ لِیَظْلِمَهُمْ وَلٰكِنْ كَانُوْۤا اَنْفُسَهُمْ یَظْلِمُوْنَ ۟ؕ
ಅವರು ಭೂಮಿಯಲ್ಲಿ ಸಂಚರಿಸಿ, ಅವರಿಗಿಂತ ಮೊದಲಿನವರ ಅಂತ್ಯವು ಹೇಗಿತ್ತೆಂದು ನೋಡುವುದಿಲ್ಲವೇ? ಅವರು ಇವರಿಗಿಂತಲೂ ಹೆಚ್ಚು ಶಕ್ತಿಶಾಲಿಗಳಾಗಿದ್ದರು. ಅವರು ಭೂಮಿಯನ್ನು ಉತ್ತು ಬೇಸಾಯ ಮಾಡಿದರು. ಅವರು ಇವರಿಗಿಂತಲೂ ಹೆಚ್ಚು ಭೂಮಿಯಲ್ಲಿ ವಾಸವಾಗಿದ್ದರು. ನಮ್ಮ ಸಂದೇಶವಾಹಕರು ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಅವರ ಬಳಿಗೆ ಬಂದರು. ಅಲ್ಲಾಹು ಅವರಿಗೆ ಯಾವುದೇ ಅನ್ಯಾಯ ಮಾಡಲಿಲ್ಲ. ಆದರೆ ಅವರು ಸ್ವತಃ ಅವರೊಂದಿಗೇ ಅನ್ಯಾಯವೆಸಗಿದರು.
ಅರಬ್ಬಿ ವ್ಯಾಖ್ಯಾನಗಳು:
ثُمَّ كَانَ عَاقِبَةَ الَّذِیْنَ اَسَآءُوا السُّوْٓاٰۤی اَنْ كَذَّبُوْا بِاٰیٰتِ اللّٰهِ وَكَانُوْا بِهَا یَسْتَهْزِءُوْنَ ۟۠
ನಂತರ, ದುಷ್ಕರ್ಮವೆಸಗಿದವರ ಅಂತ್ಯವು ಅತ್ಯಂತ ದುಸ್ತರವಾಗಿತ್ತು. ಏಕೆಂದರೆ ಅವರು ಅಲ್ಲಾಹನ ವಚನಗಳನ್ನು ನಿಷೇಧಿಸಿದರು ಮತ್ತು ಅವುಗಳನ್ನು ತಮಾಷೆ ಮಾಡುತ್ತಿದ್ದರು.
ಅರಬ್ಬಿ ವ್ಯಾಖ್ಯಾನಗಳು:
اَللّٰهُ یَبْدَؤُا الْخَلْقَ ثُمَّ یُعِیْدُهٗ ثُمَّ اِلَیْهِ تُرْجَعُوْنَ ۟
ಅಲ್ಲಾಹು ಪ್ರಥಮ ಬಾರಿಗೆ ಸೃಷ್ಟಿಸುತ್ತಾನೆ. ನಂತರ ಅದನ್ನು ಪುನರಾವರ್ತಿಸುತ್ತಾನೆ. ನಂತರ ನಿಮ್ಮನ್ನು ಅವನ ಬಳಿಗೇ ಮರಳಿಸಲಾಗುವುದು.
ಅರಬ್ಬಿ ವ್ಯಾಖ್ಯಾನಗಳು:
وَیَوْمَ تَقُوْمُ السَّاعَةُ یُبْلِسُ الْمُجْرِمُوْنَ ۟
ಅಂತ್ಯಸಮಯವು ಸಂಭವಿಸುವ ದಿನ ಅಪರಾಧಿಗಳು ಹತಾಶರಾಗುವರು.
ಅರಬ್ಬಿ ವ್ಯಾಖ್ಯಾನಗಳು:
وَلَمْ یَكُنْ لَّهُمْ مِّنْ شُرَكَآىِٕهِمْ شُفَعٰٓؤُا وَكَانُوْا بِشُرَكَآىِٕهِمْ كٰفِرِیْنَ ۟
ಅವರು ಅಲ್ಲಾಹನೊಂದಿಗೆ ಸಹಭಾಗಿಗಳನ್ನಾಗಿ ಮಾಡಿದವರಲ್ಲಿ (ದೇವರುಗಳಲ್ಲಿ) ಯಾರೂ ಕೂಡ ಅವರಿಗೆ ಶಿಫಾರಸು ಮಾಡುವುದಿಲ್ಲ. ಸ್ವತಃ ಅವರೇ ಆ ಸಹಭಾಗಿಗಳನ್ನು ನಿಷೇಧಿಸುವರು.
ಅರಬ್ಬಿ ವ್ಯಾಖ್ಯಾನಗಳು:
وَیَوْمَ تَقُوْمُ السَّاعَةُ یَوْمَىِٕذٍ یَّتَفَرَّقُوْنَ ۟
ಅಂತ್ಯಸಮಯವು ಸಂಭವಿಸುವ ದಿನ. ಅಂದು ಅವರು ಪರಸ್ಪರ ಬೇರ್ಪಡುವರು.
ಅರಬ್ಬಿ ವ್ಯಾಖ್ಯಾನಗಳು:
فَاَمَّا الَّذِیْنَ اٰمَنُوْا وَعَمِلُوا الصَّلِحٰتِ فَهُمْ فِیْ رَوْضَةٍ یُّحْبَرُوْنَ ۟
ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ ಅವರು ಉದ್ಯಾನವನದಲ್ಲಿ ಆನಂದದಿಂದ ನಲಿದಾಡುವರು.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಅಧ್ಯಾಯ: ಅರ್‍ರೂಮ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು - ಅನುವಾದಗಳ ವಿಷಯಸೂಚಿ

ಅನುವಾದ - ಮುಹಮ್ಮದ್ ಹಂಝ ಪುತ್ತೂರು ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ