ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ * - ಅನುವಾದಗಳ ವಿಷಯಸೂಚಿ

XML CSV Excel API
Please review the Terms and Policies

ಅರ್ಥಗಳ ಅನುವಾದ ಶ್ಲೋಕ: (14) ಅಧ್ಯಾಯ: ಸೂರ ಸಬಅ್
فَلَمَّا قَضَیْنَا عَلَیْهِ الْمَوْتَ مَا دَلَّهُمْ عَلٰی مَوْتِهٖۤ اِلَّا دَآبَّةُ الْاَرْضِ تَاْكُلُ مِنْسَاَتَهٗ ۚ— فَلَمَّا خَرَّ تَبَیَّنَتِ الْجِنُّ اَنْ لَّوْ كَانُوْا یَعْلَمُوْنَ الْغَیْبَ مَا لَبِثُوْا فِی الْعَذَابِ الْمُهِیْنِ ۟
ನಾವು ಅವರಿಗೆ ಮರಣವನ್ನು ವಿಧಿಸಿದಾಗ, ಅವರ ಮರಣದ ಬಗ್ಗೆ ಜಿನ್ನ್‌ಗಳಿಗೆ ತಿಳಿಸಿದ್ದು ಅವರ ಊರುಗೋಲನ್ನು ತಿನ್ನುತ್ತಿದ್ದ ಗೆದ್ದಲುಗಳಾಗಿದ್ದವು. ಸುಲೈಮಾನರ ದೇಹವು ಕೆಳಗೆ ಬಿದ್ದಾಗ, ನಮಗೆ ಅದೃಶ್ಯ ವಿಷಯಗಳು ತಿಳಿದಿರುತ್ತಿದ್ದರೆ ನಾವು ಈ ಅವಮಾನಕರ ಶಿಕ್ಷೆಯಲ್ಲಿ ಕೊಳೆಯಬೇಕಾಗಿ ಬರುತ್ತಿರಲಿಲ್ಲ ಎಂದು ಜಿನ್ನ್‌ಗಳಿಗೆ ಮನವರಿಕೆಯಾಯಿತು.[1]
[1] ಜಿನ್ನ್‌ಗಳಿಗೆ ಅದೃಶ್ಯಜ್ಞಾನವಿದೆ, ಅವರು ಅದೃಶ್ಯವನ್ನು ತಿಳಿಯುತ್ತಾರೆಂದು ಸುಲೈಮಾನರ (ಅವರ ಮೇಲೆ ಶಾಂತಿಯಿರಲಿ) ಕಾಲದ ಕೆಲವು ಜನರು ನಂಬಿದ್ದರು. ಸುಲೈಮಾನರ (ಅವರ ಮೇಲೆ ಶಾಂತಿಯಿರಲಿ) ಮರಣದ ಮೂಲಕ ಈ ನಂಬಿಕೆ ಹುಸಿಯೆಂದು ಸಾಬೀತಾಯಿತು. ಸುಲೈಮಾನರು (ಅವರ ಮೇಲೆ ಶಾಂತಿಯಿರಲಿ) ತಮ್ಮ ಊರುಗೋಲಿನ ಆಸರೆಯಿಂದ ನಿಂತು ಜಿನ್ನ್‌ಗಳು ಕೆಲಸ ಮಾಡುವುದನ್ನು ವೀಕ್ಷಿಸುತ್ತಿದ್ದಾಗಲೇ ಮರಣಹೊಂದಿದರು. ಅವರು ನಿಧನರಾದ ವಿಷಯ ಜಿನ್ನ್‌ಗಳಿಗೆ ತಿಳಿಯಲಿಲ್ಲ. ಅವರು ತಮ್ಮನ್ನು ವೀಕ್ಷಿಸುತ್ತಲೇ ಇದ್ದಾರೆಂದು ಜಿನ್ನ್‌ಗಳು ಭಾವಿಸಿದ್ದರು. ಆದರೆ ಸುಲೈಮಾನರ (ಅವರ ಮೇಲೆ ಶಾಂತಿಯಿರಲಿ) ಊರುಗೋಲನ್ನು ಗೆದ್ದಲುಗಳು ತಿಂದು ಸುಲೈಮಾನರು ನೆಲಕ್ಕೆ ಬಿದ್ದಾಗ ಅವರು ನಿಧನರಾಗಿದ್ದಾರೆಂದು ಜಿನ್ನ್‌ಗಳಿಗೆ ತಿಳಿಯಿತು.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (14) ಅಧ್ಯಾಯ: ಸೂರ ಸಬಅ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಅನುವಾದಗಳ ವಿಷಯಸೂಚಿ

ಪವಿತ್ರ ಕುರ್‌ಆನ್ ಕನ್ನಡ ಅರ್ಥಾನುವಾದ - ಮುಹಮ್ಮದ್ ಹಂಝ ಪುತ್ತೂರು

ಮುಚ್ಚಿ