Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು * - ಅನುವಾದಗಳ ವಿಷಯಸೂಚಿ

PDF XML CSV Excel API
Please review the Terms and Policies

ಅರ್ಥಗಳ ಅನುವಾದ ಅಧ್ಯಾಯ: ಅನ್ನಿಸಾಅ್   ಶ್ಲೋಕ:
وَاِذَا كُنْتَ فِیْهِمْ فَاَقَمْتَ لَهُمُ الصَّلٰوةَ فَلْتَقُمْ طَآىِٕفَةٌ مِّنْهُمْ مَّعَكَ وَلْیَاْخُذُوْۤا اَسْلِحَتَهُمْ ۫— فَاِذَا سَجَدُوْا فَلْیَكُوْنُوْا مِنْ وَّرَآىِٕكُمْ ۪— وَلْتَاْتِ طَآىِٕفَةٌ اُخْرٰی لَمْ یُصَلُّوْا فَلْیُصَلُّوْا مَعَكَ وَلْیَاْخُذُوْا حِذْرَهُمْ وَاَسْلِحَتَهُمْ ۚ— وَدَّ الَّذِیْنَ كَفَرُوْا لَوْ تَغْفُلُوْنَ عَنْ اَسْلِحَتِكُمْ وَاَمْتِعَتِكُمْ فَیَمِیْلُوْنَ عَلَیْكُمْ مَّیْلَةً وَّاحِدَةً ؕ— وَلَا جُنَاحَ عَلَیْكُمْ اِنْ كَانَ بِكُمْ اَذًی مِّنْ مَّطَرٍ اَوْ كُنْتُمْ مَّرْضٰۤی اَنْ تَضَعُوْۤا اَسْلِحَتَكُمْ ۚ— وَخُذُوْا حِذْرَكُمْ ؕ— اِنَّ اللّٰهَ اَعَدَّ لِلْكٰفِرِیْنَ عَذَابًا مُّهِیْنًا ۟
(ಓ ಪ್ರವಾದಿಯವರೇ!) ನೀವು ಅವರ ಜೊತೆಯಲ್ಲಿರುವಾಗ ಮತ್ತು ಅವರಿಗೆ ಇಮಾಂ ನಿಂತು ನಮಾಝ್ ನಿರ್ವಹಿಸುತ್ತಿರುವಾಗ, ಅವರಲ್ಲೊಂದು ಗುಂಪು ತಮ್ಮ ಜೊತೆಗೆ ನಮಾಝ್ ಮಾಡಲಿ. ಅವರು ತಮ್ಮ ಶಸ್ತ್ರಗಳನ್ನು ಹಿಡಿದುಕೊಂಡಿರಲಿ. ಅವರು ಸುಜೂದ್ ಮಾಡಿದ ನಂತರ ತಮ್ಮ ಹಿಂಭಾಗಕ್ಕೆ ಸರಿದು, ನಮಾಝ್ ನಿರ್ವಹಿಸದ ಇನ್ನೊಂದು ಗುಂಪು ಬಂದು ನಿಮ್ಮೊಂದಿಗೆ ನಮಾಝ್ ನಿರ್ವಹಿಸಲಿ. ಅವರು ಎಚ್ಚರವಾಗಿರಲಿ ಮತ್ತು ತಮ್ಮ ಶಸ್ತ್ರಗಳನ್ನು ಹಿಡಿದುಕೊಂಡಿರಲಿ. ನೀವು ನಿಮ್ಮ ಶಸ್ತ್ರಗಳನ್ನು ಮತ್ತು ನಿಮ್ಮ ಸಾಮಗ್ರಿಗಳನ್ನು ನಿರ್ಲಕ್ಷಿಸಿದರೆ, ನಿಮ್ಮ ಮೇಲೆ ಒಮ್ಮೆಲೇ ದಾಳಿ ಮಾಡಬಹುದೆಂದು ಸತ್ಯನಿಷೇಧಿಗಳು ಬಯಸುತ್ತಾರೆ. ಆದರೆ ನೀವು ಮಳೆಯಿಂದ ತೊಂದರೆ ಅನುಭವಿಸುತ್ತಿದ್ದರೆ, ಅಥವಾ ನೀವು ಅನಾರೋಗ್ಯದಲ್ಲಿದ್ದರೆ, ನಿಮ್ಮ ಶಸ್ತ್ರಗಳನ್ನು ಕೆಳಗಿಡುವುದರಲ್ಲಿ ದೋಷವಿಲ್ಲ. ಆದರೆ ಪೂರ್ಣ ಎಚ್ಚರಿಕೆಯಿಂದಿರಿ. ನಿಶ್ಚಯವಾಗಿಯೂ ಅಲ್ಲಾಹು ಸತ್ಯನಿಷೇಧಿಗಳಿಗೆ ಅವಮಾನಕರ ಶಿಕ್ಷೆಯನ್ನು ಸಿದ್ಧಗೊಳಿಸಿದ್ದಾನೆ.[1]
[1] ಇದು ಯುದ್ಧ ಮಾಡುವ ಸಂದರ್ಭದಲ್ಲಿ ನಮಾಝ್ ಹೇಗೆ ನಿರ್ವಹಿಸಬೇಕು ಎಂಬುದರ ವಿವರಣೆಯಾಗಿದೆ. ಇದನ್ನು ಸಲಾತುಲ್ ಖೌಫ್ (ಭಯದ ನಮಾಝ್) ಎಂದು ಕರೆಯಲಾಗುತ್ತದೆ.
ಅರಬ್ಬಿ ವ್ಯಾಖ್ಯಾನಗಳು:
فَاِذَا قَضَیْتُمُ الصَّلٰوةَ فَاذْكُرُوا اللّٰهَ قِیٰمًا وَّقُعُوْدًا وَّعَلٰی جُنُوْبِكُمْ ۚ— فَاِذَا اطْمَاْنَنْتُمْ فَاَقِیْمُوا الصَّلٰوةَ ۚ— اِنَّ الصَّلٰوةَ كَانَتْ عَلَی الْمُؤْمِنِیْنَ كِتٰبًا مَّوْقُوْتًا ۟
ನೀವು ನಮಾಝ್ ನಿರ್ವಹಿಸಿದ ಬಳಿಕ ನಿಂತು, ಕುಳಿತು ಮತ್ತು ಪಾರ್ಶ್ವಕ್ಕೆ ಸರಿದು (ಮಲಗಿ) ಅಲ್ಲಾಹನನ್ನು ಸ್ಮರಿಸಿರಿ. ನೀವು ನಿರ್ಭಯರಾಗಿರುವಾಗ, ನಮಾಝನ್ನು ಯಥಾಪ್ರಕಾರ ಸಂಸ್ಥಾಪಿಸಿರಿ. ನಿಶ್ಚಯವಾಗಿಯೂ ನಮಾಝ್ ಸತ್ಯವಿಶ್ವಾಸಿಗಳ ಮೇಲೆ ಸಮಯ ನಿರ್ಣಿತ ಕಡ್ಡಾಯ ಕರ್ಮವಾಗಿದೆ.
ಅರಬ್ಬಿ ವ್ಯಾಖ್ಯಾನಗಳು:
وَلَا تَهِنُوْا فِی ابْتِغَآءِ الْقَوْمِ ؕ— اِنْ تَكُوْنُوْا تَاْلَمُوْنَ فَاِنَّهُمْ یَاْلَمُوْنَ كَمَا تَاْلَمُوْنَ ۚ— وَتَرْجُوْنَ مِنَ اللّٰهِ مَا لَا یَرْجُوْنَ ؕ— وَكَانَ اللّٰهُ عَلِیْمًا حَكِیْمًا ۟۠
ಶತ್ರುಗಳನ್ನು ಬೆನ್ನಟ್ಟುವುದರಲ್ಲಿ ಬಲಹೀನರಾಗಬೇಡಿ. ನೀವು ನೋವು ಅನುಭವಿಸುತ್ತಿದ್ದರೆ, ಅವರು ಕೂಡ ನಿಮ್ಮಂತೆಯೇ ನೋವು ಅನುಭವಿಸುತ್ತಿದ್ದಾರೆ. ಆದರೆ ನೀವು ಅಲ್ಲಾಹನಿಂದ ಅವರು ನಿರೀಕ್ಷಿಸದೇ ಇರುವುದನ್ನು ನಿರೀಕ್ಷಿಸುತ್ತೀರಿ. ಅಲ್ಲಾಹು ಎಲ್ಲವನ್ನು ತಿಳಿದವನು ಮತ್ತು ವಿವೇಕಪೂರ್ಣನಾಗಿದ್ದಾನೆ.
ಅರಬ್ಬಿ ವ್ಯಾಖ್ಯಾನಗಳು:
اِنَّاۤ اَنْزَلْنَاۤ اِلَیْكَ الْكِتٰبَ بِالْحَقِّ لِتَحْكُمَ بَیْنَ النَّاسِ بِمَاۤ اَرٰىكَ اللّٰهُ ؕ— وَلَا تَكُنْ لِّلْخَآىِٕنِیْنَ خَصِیْمًا ۟ۙ
ಅಲ್ಲಾಹು ನಿಮಗೆ ತೋರಿಸಿಕೊಟ್ಟಂತೆ ನೀವು ಜನರ ನಡುವೆ ತೀರ್ಪು ನೀಡಲು ನಾವು ನಿಮಗೆ ಈ ಗ್ರಂಥವನ್ನು ಸತ್ಯಸಹಿತ ಅವತೀರ್ಣಗೊಳಿಸಿದ್ದೇವೆ. ನೀವು ವಂಚಕರಿಗಾಗಿ ತರ್ಕಿಸುವವರಾಗಬೇಡಿ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಅಧ್ಯಾಯ: ಅನ್ನಿಸಾಅ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು - ಅನುವಾದಗಳ ವಿಷಯಸೂಚಿ

ಅನುವಾದ - ಮುಹಮ್ಮದ್ ಹಂಝ ಪುತ್ತೂರು ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ