Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು * - ಅನುವಾದಗಳ ವಿಷಯಸೂಚಿ

PDF XML CSV Excel API
Please review the Terms and Policies

ಅರ್ಥಗಳ ಅನುವಾದ ಅಧ್ಯಾಯ: ಗಾಫಿರ್   ಶ್ಲೋಕ:
وَلَقَدْ جَآءَكُمْ یُوْسُفُ مِنْ قَبْلُ بِالْبَیِّنٰتِ فَمَا زِلْتُمْ فِیْ شَكٍّ مِّمَّا جَآءَكُمْ بِهٖ ؕ— حَتّٰۤی اِذَا هَلَكَ قُلْتُمْ لَنْ یَّبْعَثَ اللّٰهُ مِنْ بَعْدِهٖ رَسُوْلًا ؕ— كَذٰلِكَ یُضِلُّ اللّٰهُ مَنْ هُوَ مُسْرِفٌ مُّرْتَابُ ۟ۚۖ
ಇದಕ್ಕೆ ಮೊದಲು ಯೂಸುಫರು ನಿಮ್ಮ ಬಳಿಗೆ ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಬಂದಿದ್ದರು. ಆದರೂ ಅವರು ನಿಮ್ಮ ಬಳಿಗೆ ತಂದ (ಸಾಕ್ಷ್ಯಾಧಾರಗಳ) ಬಗ್ಗೆ ನೀವು ಸಂದೇಹದಲ್ಲೇ ಇದ್ದಿರಿ. ಎಲ್ಲಿಯವರೆಗೆಂದರೆ ಅವರು ನಿಧನರಾದಾಗ, “ಇವರ ಬಳಿಕ ಅಲ್ಲಾಹು ಇನ್ನೊಬ್ಬ ಸಂದೇಶವಾಹಕರನ್ನು ಕಳುಹಿಸುವುದಿಲ್ಲ” ಎಂದು ನೀವು ಹೇಳಿದಿರಿ. ಈ ರೀತಿ ಅಲ್ಲಾಹು ಎಲ್ಲೆ ಮೀರಿದವರನ್ನು ಮತ್ತು ಸಂಶಯಗ್ರಸ್ಥರನ್ನು ದಾರಿತಪ್ಪಿಸುತ್ತಾನೆ.
ಅರಬ್ಬಿ ವ್ಯಾಖ್ಯಾನಗಳು:
١لَّذِیْنَ یُجَادِلُوْنَ فِیْۤ اٰیٰتِ اللّٰهِ بِغَیْرِ سُلْطٰنٍ اَتٰىهُمْ ؕ— كَبُرَ مَقْتًا عِنْدَ اللّٰهِ وَعِنْدَ الَّذِیْنَ اٰمَنُوْا ؕ— كَذٰلِكَ یَطْبَعُ اللّٰهُ عَلٰی كُلِّ قَلْبِ مُتَكَبِّرٍ جَبَّارٍ ۟
ಅವರು ತಮ್ಮ ಬಳಿಗೆ ಬಂದ ಯಾವುದೇ ಸ್ಪಷ್ಟ ಪುರಾವೆಯಿಲ್ಲದೆ ಅಲ್ಲಾಹನ ವಚನಗಳ ವಿಷಯದಲ್ಲಿ ತರ್ಕಿಸುವವರು. ಇದು ಅಲ್ಲಾಹನ ಬಳಿ ಮತ್ತು ಸತ್ಯವಿಶ್ವಾಸಿಗಳ ಬಳಿ ಮಹಾ ಅಸಂತೃಪ್ತಿಯ ವಿಷಯವಾಗಿದೆ. ಈ ರೀತಿ ಅಲ್ಲಾಹು ಎಲ್ಲಾ ಅಹಂಕಾರಿಗಳ ಮತ್ತು ಗರ್ವಿಷ್ಠರ ಹೃದಯಗಳಿಗೆ ಮೊಹರು ಹಾಕುತ್ತಾನೆ.
ಅರಬ್ಬಿ ವ್ಯಾಖ್ಯಾನಗಳು:
وَقَالَ فِرْعَوْنُ یٰهَامٰنُ ابْنِ لِیْ صَرْحًا لَّعَلِّیْۤ اَبْلُغُ الْاَسْبَابَ ۟ۙ
ಫರೋಹ ಹೇಳಿದನು: “ಓ ಹಾಮಾನ್! ನನಗೆ ಒಂದು ಗೋಪುರವನ್ನು ನಿರ್ಮಿಸಿಕೊಡು. ನಾನು ಆ ಬಾಗಿಲುಗಳಿಗೆ ತಲುಪುವುದಕ್ಕಾಗಿ.
ಅರಬ್ಬಿ ವ್ಯಾಖ್ಯಾನಗಳು:
اَسْبَابَ السَّمٰوٰتِ فَاَطَّلِعَ اِلٰۤی اِلٰهِ مُوْسٰی وَاِنِّیْ لَاَظُنُّهٗ كَاذِبًا ؕ— وَكَذٰلِكَ زُیِّنَ لِفِرْعَوْنَ سُوْٓءُ عَمَلِهٖ وَصُدَّ عَنِ السَّبِیْلِ ؕ— وَمَا كَیْدُ فِرْعَوْنَ اِلَّا فِیْ تَبَابٍ ۟۠
ಅಂದರೆ ಆಕಾಶಗಳ ಬಾಗಿಲುಗಳಿಗೆ. ನನಗೆ ಮೂಸಾನ ದೇವನನ್ನು ಇಣುಕಿ ನೋಡಬೇಕು. ನಿಶ್ಚಯವಾಗಿಯೂ ಅವನು ಸುಳ್ಳು ಹೇಳುತ್ತಿದ್ದಾನೆಂದು ನಾನು ಭಾವಿಸುತ್ತಿದ್ದೇನೆ.” ಈ ರೀತಿ ಫರೋಹ‍ನಿಗೆ ಅವನ ದುಷ್ಕೃತ್ಯವನ್ನು ಅಲಂಕರಿಸಿ ತೋರಿಸಲಾಗಿದೆ ಮತ್ತು ಅವನನ್ನು ನೇರ ಮಾರ್ಗದಿಂದ ತಡೆಯಲಾಗಿದೆ. ಫರೋಹನ (ಎಲ್ಲಾ) ತಂತ್ರಗಾರಿಕೆಗಳು ನಷ್ಟದಲ್ಲೇ ಇವೆ.
ಅರಬ್ಬಿ ವ್ಯಾಖ್ಯಾನಗಳು:
وَقَالَ الَّذِیْۤ اٰمَنَ یٰقَوْمِ اتَّبِعُوْنِ اَهْدِكُمْ سَبِیْلَ الرَّشَادِ ۟ۚ
ಆ ಸತ್ಯವಿಶ್ವಾಸಿ ವ್ಯಕ್ತಿ ಹೇಳಿದರು: “ಓ ನನ್ನ ಜನರೇ! ನನ್ನನ್ನು ಅನುಸರಿಸಿರಿ! ನಾನು ನಿಮಗೆ ಒಳಿತನ ಮಾರ್ಗವನ್ನು ತೋರಿಸುತ್ತೇನೆ.
ಅರಬ್ಬಿ ವ್ಯಾಖ್ಯಾನಗಳು:
یٰقَوْمِ اِنَّمَا هٰذِهِ الْحَیٰوةُ الدُّنْیَا مَتَاعٌ ؗ— وَّاِنَّ الْاٰخِرَةَ هِیَ دَارُ الْقَرَارِ ۟
ಓ ನನ್ನ ಜನರೇ! ಈ ಇಹಲೋಕ ಜೀವನವು ಒಂದು (ತಾತ್ಕಾಲಿಕ) ಆನಂದವಾಗಿದೆ. ನಿಶ್ಚಯವಾಗಿಯೂ ಶಾಶ್ವತ ವಾಸದ ಭವನವು ಪರಲೋಕವಾಗಿದೆ.
ಅರಬ್ಬಿ ವ್ಯಾಖ್ಯಾನಗಳು:
مَنْ عَمِلَ سَیِّئَةً فَلَا یُجْزٰۤی اِلَّا مِثْلَهَا ۚ— وَمَنْ عَمِلَ صَالِحًا مِّنْ ذَكَرٍ اَوْ اُ وَهُوَ مُؤْمِنٌ فَاُولٰٓىِٕكَ یَدْخُلُوْنَ الْجَنَّةَ یُرْزَقُوْنَ فِیْهَا بِغَیْرِ حِسَابٍ ۟
ಯಾರು ಒಂದು ಕೆಡುಕು ಮಾಡುತ್ತಾರೋ ಅವನಿಗೆ ಅದಕ್ಕೆ ಸಮಾನವಾದ ಪ್ರತಿಫಲವನ್ನೇ ನೀಡಲಾಗುತ್ತದೆ. ಆದರೆ ಯಾರು ಸತ್ಯವಿಶ್ವಾಸಿಯಾಗಿದ್ದು ಸತ್ಕರ್ಮವೆಸಗುತ್ತಾರೋ ಅವರು—ಪುರುಷರಾಗಿದ್ದರೂ ಸ್ತ್ರೀಯರಾಗಿದ್ದರೂ—ಸ್ವರ್ಗವನ್ನು ಪ್ರವೇಶಿಸುವರು. ಅಲ್ಲಿ ಅವರಿಗೆ ಲೆಕ್ಕವಿಲ್ಲದೆ ಉಪಜೀವನವನ್ನು ಒದಗಿಸಲಾಗುವುದು.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಅಧ್ಯಾಯ: ಗಾಫಿರ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು - ಅನುವಾದಗಳ ವಿಷಯಸೂಚಿ

ಅನುವಾದ - ಮುಹಮ್ಮದ್ ಹಂಝ ಪುತ್ತೂರು ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ