Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು * - ಅನುವಾದಗಳ ವಿಷಯಸೂಚಿ

PDF XML CSV Excel API
Please review the Terms and Policies

ಅರ್ಥಗಳ ಅನುವಾದ ಅಧ್ಯಾಯ: ಗಾಫಿರ್   ಶ್ಲೋಕ:
وَیٰقَوْمِ مَا لِیْۤ اَدْعُوْكُمْ اِلَی النَّجٰوةِ وَتَدْعُوْنَنِیْۤ اِلَی النَّارِ ۟ؕ
ಓ ನನ್ನ ಜನರೇ! ಇದೆಂತಹ ಸಂಗತಿ? ನಾನು ನಿಮ್ಮನ್ನು ಮೋಕ್ಷದ ಕಡೆಗೆ ಕರೆಯುತ್ತಿದ್ದೇನೆ. ಆದರೆ ನೀವು ನನ್ನನ್ನು ನರಕಕ್ಕೆ ಕರೆಯುತ್ತಿದ್ದೀರಿ!
ಅರಬ್ಬಿ ವ್ಯಾಖ್ಯಾನಗಳು:
تَدْعُوْنَنِیْ لِاَكْفُرَ بِاللّٰهِ وَاُشْرِكَ بِهٖ مَا لَیْسَ لِیْ بِهٖ عِلْمٌ ؗ— وَّاَنَا اَدْعُوْكُمْ اِلَی الْعَزِیْزِ الْغَفَّارِ ۟
ನಾನು ಅಲ್ಲಾಹನನ್ನು ನಿಷೇಧಿಸಲು ಮತ್ತು ನನಗೆ ಯಾವುದೇ ತಿಳುವಳಿಕೆಯಿಲ್ಲದ್ದನ್ನು ಅವನೊಂದಿಗೆ ಸಹಭಾಗಿಯನ್ನಾಗಿ ಮಾಡಲು ನೀವು ನನ್ನನ್ನು ಕರೆಯುತ್ತಿದ್ದೀರಿ! ಆದರೆ ನಾನು ನಿಮ್ಮನ್ನು ಪ್ರಬಲನು ಮತ್ತು ಕ್ಷಮಿಸುವವನಾದ ಅಲ್ಲಾಹನ ಕಡೆಗೆ ಕರೆಯುತ್ತಿದ್ದೇನೆ.
ಅರಬ್ಬಿ ವ್ಯಾಖ್ಯಾನಗಳು:
لَا جَرَمَ اَنَّمَا تَدْعُوْنَنِیْۤ اِلَیْهِ لَیْسَ لَهٗ دَعْوَةٌ فِی الدُّنْیَا وَلَا فِی الْاٰخِرَةِ وَاَنَّ مَرَدَّنَاۤ اِلَی اللّٰهِ وَاَنَّ الْمُسْرِفِیْنَ هُمْ اَصْحٰبُ النَّارِ ۟
ನೀವು ನನ್ನನ್ನು ಯಾವುದರ ಕಡೆಗೆ ಕರೆಯುತ್ತಿದ್ದೀರೋ ಅದು ಇಹಲೋಕದಲ್ಲಿ ಅಥವಾ ಪರಲೋಕದಲ್ಲಿ ಯಾವುದೇ ಪ್ರಾರ್ಥನೆಗೆ ಅರ್ಹವಲ್ಲ ಮತ್ತು ನಾವು ಮರಳಿ ಹೋಗಬೇಕಾದುದು ಅಲ್ಲಾಹನ ಬಳಿಗಾಗಿದೆ ಹಾಗೂ ಎಲ್ಲೆ ಮೀರಿದವರು ನರಕವಾಸಿಗಳಾಗಿದ್ದಾರೆ ಎಂಬುದು ದೃಢಪಟ್ಟ ವಿಷಯವಾಗಿದೆ.
ಅರಬ್ಬಿ ವ್ಯಾಖ್ಯಾನಗಳು:
فَسَتَذْكُرُوْنَ مَاۤ اَقُوْلُ لَكُمْ ؕ— وَاُفَوِّضُ اَمْرِیْۤ اِلَی اللّٰهِ ؕ— اِنَّ اللّٰهَ بَصِیْرٌ بِالْعِبَادِ ۟
ನಾನು (ಈಗ) ನಿಮ್ಮೊಂದಿಗೆ ಹೇಳುವ ಈ ವಿಷಯಗಳು ಮುಂದೆ ನಿಮಗೆ ನೆನಪಿಗೆ ಬರಲಿದೆ. ನಾನು ನನ್ನ ಕಾರ್ಯವನ್ನು ಅಲ್ಲಾಹನಿಗೆ ವಹಿಸಿಕೊಡುತ್ತೇನೆ. ನಿಶ್ಚಯವಾಗಿಯೂ ಅಲ್ಲಾಹು ದಾಸರನ್ನು ನೋಡುತ್ತಿದ್ದಾನೆ.”
ಅರಬ್ಬಿ ವ್ಯಾಖ್ಯಾನಗಳು:
فَوَقٰىهُ اللّٰهُ سَیِّاٰتِ مَا مَكَرُوْا وَحَاقَ بِاٰلِ فِرْعَوْنَ سُوْٓءُ الْعَذَابِ ۟ۚ
ಆದ್ದರಿಂದ ಅಲ್ಲಾಹು ಆ ವ್ಯಕ್ತಿಯನ್ನು ಅವರ ಎಲ್ಲಾ ತಂತ್ರಗಾರಿಕೆಗಳ ದುಷ್ಪರಿಣಾಮಗಳಿಂದ ರಕ್ಷಿಸಿದನು. ಫರೋಹನ ಜನರನ್ನು ಕಠೋರ ಶಿಕ್ಷೆಯು ಆವರಿಸಿಕೊಂಡಿತು.
ಅರಬ್ಬಿ ವ್ಯಾಖ್ಯಾನಗಳು:
اَلنَّارُ یُعْرَضُوْنَ عَلَیْهَا غُدُوًّا وَّعَشِیًّا ۚ— وَیَوْمَ تَقُوْمُ السَّاعَةُ ۫— اَدْخِلُوْۤا اٰلَ فِرْعَوْنَ اَشَدَّ الْعَذَابِ ۟
ನರಕಾಗ್ನಿ! ಬೆಳಿಗ್ಗೆ ಮತ್ತು ಸಂಜೆ ಅವರನ್ನು ಅದರ ಮುಂದೆ ಪ್ರದರ್ಶಿಸಲಾಗುವುದು.[1] ಅಂತ್ಯಸಮಯವು ಸಂಭವಿಸುವ ದಿನ “ಫರೋಹನ ಕುಟುಂಬವನ್ನು ಅತಿಕ್ರೂರ ಶಿಕ್ಷೆಗೆ ಹಾಕಿರಿ” (ಎಂದು ಆದೇಶಿಸಲಾಗುವುದು).
[1] ಬರ್ಝಕ್ (ಸತ್ತ ನಂತರ ಪುನರುತ್ಥಾನ ದಿನದ ತನಕವಿರುವ ಅವಧಿ) ನಲ್ಲಿ ಇವರಿಗೆ ದಿನನಿತ್ಯ ಬೆಳಗ್ಗೆ ಮತ್ತು ಸಂಜೆ ನರಕವನ್ನು ತೋರಿಸಲಾಗುವುದು. ಸಮಾಧಿಯಲ್ಲಿ ಸತ್ಯನಿಷೇಧಿಗಳನ್ನು ಶಿಕ್ಷಿಸಲಾಗುತ್ತದೆ ಎಂಬುದಕ್ಕೆ ಈ ವಚನವು ಪುರಾವೆಯಾಗಿದೆ.
ಅರಬ್ಬಿ ವ್ಯಾಖ್ಯಾನಗಳು:
وَاِذْ یَتَحَآجُّوْنَ فِی النَّارِ فَیَقُوْلُ الضُّعَفٰٓؤُا لِلَّذِیْنَ اسْتَكْبَرُوْۤا اِنَّا كُنَّا لَكُمْ تَبَعًا فَهَلْ اَنْتُمْ مُّغْنُوْنَ عَنَّا نَصِیْبًا مِّنَ النَّارِ ۟
ಅವರು ನರಕದಲ್ಲಿ ಪರಸ್ಪರ ತರ್ಕಿಸುವ ಸಂದರ್ಭ. ಆಗ ಬಲಹೀನರು ಅಹಂಕಾರಿಗಳೊಡನೆ ಹೇಳುವರು: “ನಿಶ್ಚಯವಾಗಿಯೂ ನಾವು ನಿಮ್ಮನ್ನು ಹಿಂಬಾಲಿಸಿದೆವು. ಆದ್ದರಿಂದ ನರಕ ಶಿಕ್ಷೆಯ ಒಂದು ಪಾಲನ್ನು ನಮ್ಮಿಂದ ದೂರೀಕರಿಸಲು ನಿಮಗೆ ಸಾಧ್ಯವೇ?”
ಅರಬ್ಬಿ ವ್ಯಾಖ್ಯಾನಗಳು:
قَالَ الَّذِیْنَ اسْتَكْبَرُوْۤا اِنَّا كُلٌّ فِیْهَاۤ اِنَّ اللّٰهَ قَدْ حَكَمَ بَیْنَ الْعِبَادِ ۟
ಅಹಂಕಾರಿಗಳು ಹೇಳುವರು: “ನಾವೆಲ್ಲರೂ ನರಕದಲ್ಲಿದ್ದೇವೆ. ನಿಶ್ಚಯವಾಗಿಯೂ ಅಲ್ಲಾಹು ಅವನ ದಾಸರ ನಡುವೆ ತೀರ್ಪು ನೀಡಿದ್ದಾನೆ!”
ಅರಬ್ಬಿ ವ್ಯಾಖ್ಯಾನಗಳು:
وَقَالَ الَّذِیْنَ فِی النَّارِ لِخَزَنَةِ جَهَنَّمَ ادْعُوْا رَبَّكُمْ یُخَفِّفْ عَنَّا یَوْمًا مِّنَ الْعَذَابِ ۟
ನರಕದಲ್ಲಿರುವವರು ನರಕದ ಕಾವಲುಗಾರರೊಡನೆ ಹೇಳುವರು: “ನೀವು ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಪ್ರಾರ್ಥಿಸಿರಿ! ಅವನು ನಮಗೆ ಒಂದು ದಿನದ ಮಟ್ಟಿಗಾದರೂ ಶಿಕ್ಷೆಯಲ್ಲಿ ರಿಯಾಯಿತಿ ನೀಡಲಿ.”
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಅಧ್ಯಾಯ: ಗಾಫಿರ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು - ಅನುವಾದಗಳ ವಿಷಯಸೂಚಿ

ಅನುವಾದ - ಮುಹಮ್ಮದ್ ಹಂಝ ಪುತ್ತೂರು ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ