Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು * - ಅನುವಾದಗಳ ವಿಷಯಸೂಚಿ

PDF XML CSV Excel API
Please review the Terms and Policies

ಅರ್ಥಗಳ ಅನುವಾದ ಅಧ್ಯಾಯ: ಅಲ್ -ಮಾಇದ   ಶ್ಲೋಕ:
یٰۤاَیُّهَا الَّذِیْنَ اٰمَنُوْا لَا تَتَّخِذُوا الْیَهُوْدَ وَالنَّصٰرٰۤی اَوْلِیَآءَ ؔۘ— بَعْضُهُمْ اَوْلِیَآءُ بَعْضٍ ؕ— وَمَنْ یَّتَوَلَّهُمْ مِّنْكُمْ فَاِنَّهٗ مِنْهُمْ ؕ— اِنَّ اللّٰهَ لَا یَهْدِی الْقَوْمَ الظّٰلِمِیْنَ ۟
ಓ ಸತ್ಯವಿಶ್ವಾಸಿಗಳೇ! ಯಹೂದಿಗಳನ್ನು ಮತ್ತು ಕ್ರೈಸ್ತರನ್ನು ಆಪ್ತಮಿತ್ರರಾಗಿ ಸ್ವೀಕರಿಸಬೇಡಿ. ಅವರು ಪರಸ್ಪರ ಆಪ್ತಮಿತ್ರರಾಗಿದ್ದಾರೆ. ನಿಮ್ಮಲ್ಲಿ ಯಾರು ಅವರನ್ನು ಆಪ್ತಮಿತ್ರರಾಗಿ ಸ್ವೀಕರಿಸುತ್ತಾನೋ ಅವನು ಅವರಲ್ಲಿ ಸೇರುತ್ತಾನೆ. ನಿಶ್ಚಯವಾಗಿಯೂ ಅಕ್ರಮಿಗಳಾದ ಜನರಿಗೆ ಅಲ್ಲಾಹು ಸನ್ಮಾರ್ಗ ತೋರಿಸುವುದಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
فَتَرَی الَّذِیْنَ فِیْ قُلُوْبِهِمْ مَّرَضٌ یُّسَارِعُوْنَ فِیْهِمْ یَقُوْلُوْنَ نَخْشٰۤی اَنْ تُصِیْبَنَا دَآىِٕرَةٌ ؕ— فَعَسَی اللّٰهُ اَنْ یَّاْتِیَ بِالْفَتْحِ اَوْ اَمْرٍ مِّنْ عِنْدِهٖ فَیُصْبِحُوْا عَلٰی مَاۤ اَسَرُّوْا فِیْۤ اَنْفُسِهِمْ نٰدِمِیْنَ ۟ؕ
ಹೃದಯಗಳಲ್ಲಿ ರೋಗವಿರುವವರು (ಕಪಟವಿಶ್ವಾಸಿಗಳು) ಅವರೊಡನೆ ಸೇರಲು ತ್ವರೆ ಮಾಡುವುದನ್ನು ನೀವು ಕಾಣುವಿರಿ. ಅವರು ಹೇಳುತ್ತಾರೆ: “ನಮಗೇನಾದರೂ ಆಪತ್ತು ಸಂಭವಿಸಬಹುದೆಂದು ನಮಗೆ ಭಯವಾಗುತ್ತಿದೆ.” ಆದರೆ ಅಲ್ಲಾಹು ನಿಮಗೆ ಗೆಲುವನ್ನು ಅಥವಾ ತನ್ನ ಕಡೆಯ ಏನಾದರೂ ಆದೇಶವನ್ನು ನೀಡಬಹುದು. ಆಗ ಅವರು ತಮ್ಮ ಮನಸ್ಸಿನಲ್ಲಿ ರಹಸ್ಯವಾಗಿಟ್ಟ ವಿಚಾರಗಳನ್ನು ನೆನೆದು ವಿಷಾದಪಡುವರು.
ಅರಬ್ಬಿ ವ್ಯಾಖ್ಯಾನಗಳು:
وَیَقُوْلُ الَّذِیْنَ اٰمَنُوْۤا اَهٰۤؤُلَآءِ الَّذِیْنَ اَقْسَمُوْا بِاللّٰهِ جَهْدَ اَیْمَانِهِمْ ۙ— اِنَّهُمْ لَمَعَكُمْ ؕ— حَبِطَتْ اَعْمَالُهُمْ فَاَصْبَحُوْا خٰسِرِیْنَ ۟
ಸತ್ಯವಿಶ್ವಾಸಿಗಳು ಹೇಳುವರು: “ನಾವು ನಿಮ್ಮ ಜೊತೆಯಲ್ಲೇ ಇದ್ದೇವೆ ಎಂದು ಅಲ್ಲಾಹನ ಮೇಲೆ ಬಲವಾಗಿ ಆಣೆ ಮಾಡಿದವರು ಇವರೇ ಏನು?” ಅವರ ಕರ್ಮಗಳು ನಿಷ್ಫಲವಾದವು ಮತ್ತು ಅವರು ನಷ್ಟಹೊಂದಿದವರಾಗಿ ಬಿಟ್ಟರು.
ಅರಬ್ಬಿ ವ್ಯಾಖ್ಯಾನಗಳು:
یٰۤاَیُّهَا الَّذِیْنَ اٰمَنُوْا مَنْ یَّرْتَدَّ مِنْكُمْ عَنْ دِیْنِهٖ فَسَوْفَ یَاْتِی اللّٰهُ بِقَوْمٍ یُّحِبُّهُمْ وَیُحِبُّوْنَهٗۤ ۙ— اَذِلَّةٍ عَلَی الْمُؤْمِنِیْنَ اَعِزَّةٍ عَلَی الْكٰفِرِیْنَ ؗ— یُجَاهِدُوْنَ فِیْ سَبِیْلِ اللّٰهِ وَلَا یَخَافُوْنَ لَوْمَةَ لَآىِٕمٍ ؕ— ذٰلِكَ فَضْلُ اللّٰهِ یُؤْتِیْهِ مَنْ یَّشَآءُ ؕ— وَاللّٰهُ وَاسِعٌ عَلِیْمٌ ۟
ಓ ಸತ್ಯವಿಶ್ವಾಸಿಗಳೇ! ನಿಮ್ಮಲ್ಲಿ ಯಾರಾದರೂ ಧರ್ಮಪರಿತ್ಯಾಗ ಮಾಡಿದರೆ, ಸದ್ಯವೇ ಅಲ್ಲಾಹು (ನಿಮ್ಮ ಬದಲಿಗೆ) ಬೇರೆ ಜನರನ್ನು ತರುವನು. ಅವನು ಅವರನ್ನು ಪ್ರೀತಿಸುವನು ಮತ್ತು ಅವರು ಅವನನ್ನು ಪ್ರೀತಿಸುವರು. ಅವರು ಸತ್ಯವಿಶ್ವಾಸಿಗಳ ಮುಂದೆ ದೈನ್ಯತೆ ಮತ್ತು ಸತ್ಯನಿಷೇಧಿಗಳ ಮುಂದೆ ಪೌರುಷವನ್ನು ಪ್ರಕಟಿಸುವರು. ಅವರು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುವರು ಮತ್ತು ಆಕ್ಷೇಪಿಸುವವನ ಯಾವುದೇ ಆಕ್ಷೇಪಕ್ಕೂ ಭಯಪಡಲಾರರು. ಅದು ಅಲ್ಲಾಹನ ಔದಾರ್ಯವಾಗಿದೆ. ಅವನು ಇಚ್ಛಿಸುವವರಿಗೆ ಅದನ್ನು ನೀಡುತ್ತಾನೆ. ಅಲ್ಲಾಹು ವಿಶಾಲನು ಮತ್ತು ಸರ್ವಜ್ಞನಾಗಿದ್ದಾನೆ.[1]
[1] ಇಸ್ಲಾಂ ಧರ್ಮದ ಅಸ್ತಿತ್ವವು ನಿಮ್ಮನ್ನು ಅವಲಂಬಿಸಿಲ್ಲ. ನೀವು ಧರ್ಮಪರಿತ್ಯಾಗ ಮಾಡಿದರೆ ಅಲ್ಲಾಹು ನಿಮ್ಮ ಸ್ಥಾನದಲ್ಲಿ ಬೇರೆ ಜನರನ್ನು ತರುವನು. ಅವರಿಗೆ ನಾಲ್ಕು ವಿಶೇಷತೆಗಳಿರುವುದು. 1. ಅವರನ್ನು ಅಲ್ಲಾಹು ಪ್ರೀತಿಸುತ್ತಾನೆ ಮತ್ತು ಅವರು ಅಲ್ಲಾಹನನ್ನು ಪ್ರೀತಿಸುತ್ತಾರೆ. 2. ಅವರು ಸತ್ಯವಿಶ್ವಾಸಿಗಳೊಂದಿಗೆ ಮೃದುವಾಗಿ ವರ್ತಿಸುತ್ತಾರೆ ಮತ್ತು ಸತ್ಯನಿಷೇಧಿಗಳೊಂದಿಗೆ ಕಠೋರವಾಗಿ ವರ್ತಿಸುತ್ತಾರೆ. 3. ಅವರು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುತ್ತಾರೆ. 4. ಅವರು ಅಲ್ಲಾಹನ ವಿಷಯದಲ್ಲಿ ಯಾರನ್ನೂ ಭಯಪಡುವುದಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
اِنَّمَا وَلِیُّكُمُ اللّٰهُ وَرَسُوْلُهٗ وَالَّذِیْنَ اٰمَنُوا الَّذِیْنَ یُقِیْمُوْنَ الصَّلٰوةَ وَیُؤْتُوْنَ الزَّكٰوةَ وَهُمْ رٰكِعُوْنَ ۟
ಅಲ್ಲಾಹು, ಅವನ ಸಂದೇಶವಾಹಕರು ಮತ್ತು ನಮಾಝ್ ಸಂಸ್ಥಾಪಿಸುವ, ಝಕಾತ್ ನೀಡುವ ಹಾಗೂ ಭಯಭಕ್ತಿಯಿಂದ ತಲೆಬಾಗುವ ಸತ್ಯವಿಶ್ವಾಸಿಗಳೇ ನಿಮ್ಮ ಆಪ್ತಮಿತ್ರರು.
ಅರಬ್ಬಿ ವ್ಯಾಖ್ಯಾನಗಳು:
وَمَنْ یَّتَوَلَّ اللّٰهَ وَرَسُوْلَهٗ وَالَّذِیْنَ اٰمَنُوْا فَاِنَّ حِزْبَ اللّٰهِ هُمُ الْغٰلِبُوْنَ ۟۠
ಅಲ್ಲಾಹನನ್ನು, ಅವನ ಸಂದೇಶವಾಹಕರನ್ನು ಮತ್ತು ಸತ್ಯವಿಶ್ವಾಸಿಗಳನ್ನು ಯಾರು ಆಪ್ತಮಿತ್ರರಾಗಿ ಸ್ವೀಕರಿಸುತ್ತಾರೋ—ನಿಶ್ಚಯವಾಗಿಯೂ ಅಲ್ಲಾಹನ ಪಕ್ಷದವರೇ ವಿಜಯಿಗಳು.
ಅರಬ್ಬಿ ವ್ಯಾಖ್ಯಾನಗಳು:
یٰۤاَیُّهَا الَّذِیْنَ اٰمَنُوْا لَا تَتَّخِذُوا الَّذِیْنَ اتَّخَذُوْا دِیْنَكُمْ هُزُوًا وَّلَعِبًا مِّنَ الَّذِیْنَ اُوْتُوا الْكِتٰبَ مِنْ قَبْلِكُمْ وَالْكُفَّارَ اَوْلِیَآءَ ۚ— وَاتَّقُوا اللّٰهَ اِنْ كُنْتُمْ مُّؤْمِنِیْنَ ۟
ಓ ಸತ್ಯವಿಶ್ವಾಸಿಗಳೇ! ನಿಮಗಿಂತ ಮೊದಲು ಗ್ರಂಥ ನೀಡಲಾದವರಲ್ಲಿ (ಯಹೂದಿಗಳು ಮತ್ತು ಕ್ರೈಸ್ತರಲ್ಲಿ) ನಿಮ್ಮ ಧರ್ಮವನ್ನು ತಮಾಷೆ ಮತ್ತು ಆಟದ ವಸ್ತುವಾಗಿ ಸ್ವೀಕರಿಸಿದವರನ್ನು ಮತ್ತು ಸತ್ಯನಿಷೇಧಿಗಳನ್ನು ನೀವು ಆಪ್ತಮಿತ್ರರಾಗಿ ಸ್ವೀಕರಿಸಬೇಡಿ. ನೀವು ಸತ್ಯವಿಶ್ವಾಸಿಗಳಾಗಿದ್ದರೆ ಅಲ್ಲಾಹನನ್ನು ಭಯಪಡಿರಿ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಅಧ್ಯಾಯ: ಅಲ್ -ಮಾಇದ
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು - ಅನುವಾದಗಳ ವಿಷಯಸೂಚಿ

ಅನುವಾದ - ಮುಹಮ್ಮದ್ ಹಂಝ ಪುತ್ತೂರು ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ