Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು * - ಅನುವಾದಗಳ ವಿಷಯಸೂಚಿ

PDF XML CSV Excel API
Please review the Terms and Policies

ಅರ್ಥಗಳ ಅನುವಾದ ಅಧ್ಯಾಯ: ಅಲ್- ಅನ್ ಆಮ್   ಶ್ಲೋಕ:
وَلَوْ جَعَلْنٰهُ مَلَكًا لَّجَعَلْنٰهُ رَجُلًا وَّلَلَبَسْنَا عَلَیْهِمْ مَّا یَلْبِسُوْنَ ۟
ನಾವು ದೇವದೂತರನ್ನು ಪ್ರವಾದಿಯಾಗಿ ಕಳುಹಿಸುತ್ತಿದ್ದರೂ ಸಹ ಅವರನ್ನು ಮನುಷ್ಯನಾಗಿ ಮಾಡಿಯೇ ಕಳುಹಿಸುತ್ತಿದ್ದೆವು. ಅವರು ಈಗ ಏನು ಗೊಂದಲ ಮಾಡುತ್ತಿದ್ದಾರೋ ಅದೇ ಗೊಂದಲವನ್ನು ಅವರು ಆಗಲೂ ಮಾಡುತ್ತಿದ್ದರು.[1]
[1] ಅಲ್ಲಾಹು ದೇವದೂತರನ್ನು ಪ್ರವಾದಿಯಾಗಿ ಕಳುಹಿಸುವುದು ಸಾಧ್ಯವಿಲ್ಲ. ಏಕೆಂದರೆ ದೇವದೂತರನ್ನು ಕಳುಹಿಸಿದರೆ ಜನರು ಹೇಳುತ್ತಿದ್ದರು: “ನೀನೇಕೆ ದೇವದೂತರನ್ನು ಪ್ರವಾದಿಯಾಗಿ ಕಳುಹಿಸಿದೆ? ನೀನು ಮನುಷ್ಯನನ್ನು ಪ್ರವಾದಿಯಾಗಿ ಕಳುಹಿಸುತ್ತಿದ್ದರೆ ನಾವು ಆ ಪ್ರವಾದಿಯನ್ನು ಅನುಸರಿಸುತ್ತಿದ್ದೆವು. ನಾವು ದೇವದೂತರನ್ನು ಅನುಸರಿಸುವುದು ಹೇಗೆ ಸಾಧ್ಯ? ಅವರಿಗೂ ನಮಗೂ ಅಗಾಧ ವ್ಯತ್ಯಾಸವಿದೆ.” ಇನ್ನು ದೇವದೂತರನ್ನು ಪ್ರವಾದಿಯಾಗಿ ಕಳುಹಿಸುವುದಾದರೂ ಅವರನ್ನು ಮನುಷ್ಯ ರೂಪದಲ್ಲೇ ಕಳುಹಿಸಬೇಕಾಗುತ್ತದೆ. ಆದರೆ ಆಗಲೂ ಅವರು ಈಗ ಹೇಳುತ್ತಿರುವ ಅದೇ ಕಾರಣವನ್ನು ಹೇಳಿ ಅನುಸರಿಸಲು ನಿರಾಕರಿಸುತ್ತಿದ್ದರು.
ಅರಬ್ಬಿ ವ್ಯಾಖ್ಯಾನಗಳು:
وَلَقَدِ اسْتُهْزِئَ بِرُسُلٍ مِّنْ قَبْلِكَ فَحَاقَ بِالَّذِیْنَ سَخِرُوْا مِنْهُمْ مَّا كَانُوْا بِهٖ یَسْتَهْزِءُوْنَ ۟۠
ನಿಮಗಿಂತ ಮೊದಲು ಅನೇಕ ಸಂದೇಶವಾಹಕರು ಜನರಿಂದ ತಮಾಷೆಗೆ ಗುರಿಯಾಗಿದ್ದಾರೆ. ನಂತರ, ಅವರು ಏನು ತಮಾಷೆ ಮಾಡುತ್ತಿದ್ದರೋ ಅದೇ ಅವರನ್ನು ಆವರಿಸಿಕೊಂಡಿತು.
ಅರಬ್ಬಿ ವ್ಯಾಖ್ಯಾನಗಳು:
قُلْ سِیْرُوْا فِی الْاَرْضِ ثُمَّ اَنْظُرُوْا كَیْفَ كَانَ عَاقِبَةُ الْمُكَذِّبِیْنَ ۟
ಹೇಳಿರಿ: “ನೀವು ಭೂಮಿಯಲ್ಲಿ ಸಂಚರಿಸಿರಿ. ನಂತರ ಸತ್ಯನಿಷೇಧಿಗಳ ಅಂತ್ಯವು ಹೇಗಿತ್ತೆಂದು ನೋಡಿ.”
ಅರಬ್ಬಿ ವ್ಯಾಖ್ಯಾನಗಳು:
قُلْ لِّمَنْ مَّا فِی السَّمٰوٰتِ وَالْاَرْضِ ؕ— قُلْ لِّلّٰهِ ؕ— كَتَبَ عَلٰی نَفْسِهِ الرَّحْمَةَ ؕ— لَیَجْمَعَنَّكُمْ اِلٰی یَوْمِ الْقِیٰمَةِ لَا رَیْبَ فِیْهِ ؕ— اَلَّذِیْنَ خَسِرُوْۤا اَنْفُسَهُمْ فَهُمْ لَا یُؤْمِنُوْنَ ۟
ಕೇಳಿರಿ: “ಭೂಮ್ಯಾಕಾಶಗಳಲ್ಲಿರುವುದು ಯಾರಿಗೆ ಸೇರಿದ್ದು?” ಹೇಳಿರಿ: “ಅಲ್ಲಾಹನಿಗೆ ಸೇರಿದ್ದು.” ಅವನು ದಯೆ ತೋರುವುದನ್ನು ಸ್ವಯಂ ಕಡ್ಡಾಯಗೊಳಿಸಿದ್ದಾನೆ. ಪುನರುತ್ಥಾನದ ದಿನದಂದು ಅವನು ನಿಮ್ಮನ್ನು ಖಂಡಿತ ಒಟ್ಟುಗೂಡಿಸುವನು. ಅದರಲ್ಲಿ ಸಂಶಯವೇ ಇಲ್ಲ. ಸ್ವಯಂ ನಷ್ಟಹೊಂದಿದವರು ಯಾರೋ ಅವರು ವಿಶ್ವಾಸವಿಡುವುದಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
وَلَهٗ مَا سَكَنَ فِی الَّیْلِ وَالنَّهَارِ ؕ— وَهُوَ السَّمِیْعُ الْعَلِیْمُ ۟
ರಾತ್ರಿ ಮತ್ತು ಹಗಲಿನಲ್ಲಿರುವುದೆಲ್ಲವೂ ಅವನಿಗೆ ಸೇರಿದ್ದು. ಅವನು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ.
ಅರಬ್ಬಿ ವ್ಯಾಖ್ಯಾನಗಳು:
قُلْ اَغَیْرَ اللّٰهِ اَتَّخِذُ وَلِیًّا فَاطِرِ السَّمٰوٰتِ وَالْاَرْضِ وَهُوَ یُطْعِمُ وَلَا یُطْعَمُ ؕ— قُلْ اِنِّیْۤ اُمِرْتُ اَنْ اَكُوْنَ اَوَّلَ مَنْ اَسْلَمَ وَلَا تَكُوْنَنَّ مِنَ الْمُشْرِكِیْنَ ۟
ಹೇಳಿರಿ: “ಭೂಮ್ಯಾಕಾಶಗಳ ಸೃಷ್ಟಿಕರ್ತನಾದ ಅಲ್ಲಾಹನನ್ನು ಬಿಟ್ಟು ಬೇರೆಯವರನ್ನು ನಾನು ರಕ್ಷಕನಾಗಿ ಸ್ವೀಕರಿಸಬೇಕೇ? ಅವನು ಆಹಾರ ನೀಡುತ್ತಾನೆ. ಅವನಿಗೆ ಯಾರೂ ಆಹಾರವನ್ನು ನೀಡುವುದಿಲ್ಲ.” ಹೇಳಿರಿ: “ನಿಶ್ಚಯವಾಗಿಯೂ ಅಲ್ಲಾಹನಿಗೆ ಶರಣಾದವರಲ್ಲಿ ಮೊದಲಿಗನಾಗಬೇಕೆಂದು ನನಗೆ ಆಜ್ಞಾಪಿಸಲಾಗಿದೆ. ನೀವು ಎಂದಿಗೂ ಬಹುದೇವಾರಾಧಕರಲ್ಲಿ ಸೇರಬಾರದು (ಎಂದು ಕೂಡ ನನಗೆ ಆಜ್ಞಾಪಿಸಲಾಗಿದೆ).”
ಅರಬ್ಬಿ ವ್ಯಾಖ್ಯಾನಗಳು:
قُلْ اِنِّیْۤ اَخَافُ اِنْ عَصَیْتُ رَبِّیْ عَذَابَ یَوْمٍ عَظِیْمٍ ۟
ಹೇಳಿರಿ: “ನಾನು ನನ್ನ ಪರಿಪಾಲಕನಿಗೆ (ಅಲ್ಲಾಹನಿಗೆ) ಅವಿಧೇಯತೆ ತೋರಿದರೆ, ಒಂದು ಭಯಾನಕ ದಿನದ (ಪುನರುತ್ಥಾನ ದಿನದ) ಶಿಕ್ಷೆ (ನನ್ನ ಮೇಲೆರಗಬಹುದೆಂದು) ನಾನು ಭಯಪಡುತ್ತೇನೆ.”
ಅರಬ್ಬಿ ವ್ಯಾಖ್ಯಾನಗಳು:
مَنْ یُّصْرَفْ عَنْهُ یَوْمَىِٕذٍ فَقَدْ رَحِمَهٗ ؕ— وَذٰلِكَ الْفَوْزُ الْمُبِیْنُ ۟
ಆ ದಿನ ಯಾರು ಶಿಕ್ಷೆಯಿಂದ ಪಾರಾಗುತ್ತಾನೋ ಅವನಿಗೆ ಅಲ್ಲಾಹು ಖಂಡಿತ ದಯೆ ತೋರಿದ್ದಾನೆ. ಅದು ಸ್ಪಷ್ಟ ವಿಜಯವಾಗಿದೆ.
ಅರಬ್ಬಿ ವ್ಯಾಖ್ಯಾನಗಳು:
وَاِنْ یَّمْسَسْكَ اللّٰهُ بِضُرٍّ فَلَا كَاشِفَ لَهٗۤ اِلَّا هُوَ ؕ— وَاِنْ یَّمْسَسْكَ بِخَیْرٍ فَهُوَ عَلٰی كُلِّ شَیْءٍ قَدِیْرٌ ۟
ಅಲ್ಲಾಹು ನಿಮಗೇನಾದರೂ ತೊಂದರೆ ಕೊಟ್ಟರೆ, ಅದನ್ನು ನಿವಾರಿಸಲು ಅವನ ಹೊರತು ಯಾರಿಗೂ ಸಾಧ್ಯವಿಲ್ಲ. ಅವನು ನಿಮಗೇನಾದರೂ ಒಳಿತು ಮಾಡಿದರೆ, ಅವನು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.
ಅರಬ್ಬಿ ವ್ಯಾಖ್ಯಾನಗಳು:
وَهُوَ الْقَاهِرُ فَوْقَ عِبَادِهٖ ؕ— وَهُوَ الْحَكِیْمُ الْخَبِیْرُ ۟
ಅವನಿಗೆ ಅವರ ದಾಸರ ಮೇಲೆ ಪರಮಾಧಿಕಾರವಿದೆ. ಅವನು ವಿವೇಕಪೂರ್ಣನು ಮತ್ತು ಸೂಕ್ಷ್ಮಜ್ಞಾನಿಯಾಗಿದ್ದಾನೆ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಅಧ್ಯಾಯ: ಅಲ್- ಅನ್ ಆಮ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು - ಅನುವಾದಗಳ ವಿಷಯಸೂಚಿ

ಅನುವಾದ - ಮುಹಮ್ಮದ್ ಹಂಝ ಪುತ್ತೂರು ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ