Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು * - ಅನುವಾದಗಳ ವಿಷಯಸೂಚಿ

PDF XML CSV Excel API
Please review the Terms and Policies

ಅರ್ಥಗಳ ಅನುವಾದ ಅಧ್ಯಾಯ: ಅತ್ತೌಬ   ಶ್ಲೋಕ:
وَالَّذِیْنَ اتَّخَذُوْا مَسْجِدًا ضِرَارًا وَّكُفْرًا وَّتَفْرِیْقًا بَیْنَ الْمُؤْمِنِیْنَ وَاِرْصَادًا لِّمَنْ حَارَبَ اللّٰهَ وَرَسُوْلَهٗ مِنْ قَبْلُ ؕ— وَلَیَحْلِفُنَّ اِنْ اَرَدْنَاۤ اِلَّا الْحُسْنٰی ؕ— وَاللّٰهُ یَشْهَدُ اِنَّهُمْ لَكٰذِبُوْنَ ۟
ಹಾನಿ ಮಾಡಲು, ಅಲ್ಲಾಹನನ್ನು ನಿಷೇಧಿಸಲು, ಸತ್ಯವಿಶ್ವಾಸಿಗಳ ನಡುವೆ ಒಡಕು ಮೂಡಿಸಲು ಮತ್ತು ಈಗಾಗಲೇ ಅಲ್ಲಾಹು ಮತ್ತು ಅವನ ಸಂದೇಶವಾಹಕರ ವಿರುದ್ಧ ಯುದ್ಧ ಮಾಡಿದವರಿಗೆ ಹೊಂಚುದಾಣವನ್ನು ನಿರ್ಮಿಸಿಕೊಡಲು ಒಂದು ಮಸೀದಿಯನ್ನು[1] ನಿರ್ಮಿಸಿದವರು ಯಾರೋ—ಅವರು, “ನಾವು ಒಳಿತನ್ನು ಮಾತ್ರ ಉದ್ದೇಶಿಸುತ್ತೇವೆ” ಎಂದು ಆಣೆ ಮಾಡಿ ಹೇಳುತ್ತಾರೆ. ಆದರೆ ಅವರು ಸುಳ್ಳು ಹೇಳುತ್ತಿದ್ದಾರೆ ಎಂಬುದಕ್ಕೆ ಅಲ್ಲಾಹು ಸಾಕ್ಷಿಯಾಗಿದ್ದಾನೆ.
[1] ಇಲ್ಲಿ ಸೂಚಿಸಿರುವುದು ಕಪಟವಿಶ್ವಾಸಿಗಳು ಮದೀನದ ಕುಬಾ ಮಸೀದಿಯ ಸಮೀಪ ನಿರ್ಮಿಸಿದ ಇನ್ನೊಂದು ಮಸೀದಿ. ಇದನ್ನು ಮಸ್ಜಿದ್ ದಿರಾರ್ (ಹಾನಿಕರ ಮಸೀದಿ) ಎಂದು ಕುರ್‌ಆನ್ ಕರೆದಿದೆ.
ಅರಬ್ಬಿ ವ್ಯಾಖ್ಯಾನಗಳು:
لَا تَقُمْ فِیْهِ اَبَدًا ؕ— لَمَسْجِدٌ اُسِّسَ عَلَی التَّقْوٰی مِنْ اَوَّلِ یَوْمٍ اَحَقُّ اَنْ تَقُوْمَ فِیْهِ ؕ— فِیْهِ رِجَالٌ یُّحِبُّوْنَ اَنْ یَّتَطَهَّرُوْا ؕ— وَاللّٰهُ یُحِبُّ الْمُطَّهِّرِیْنَ ۟
ನೀವು ಯಾವತ್ತೂ ಅಲ್ಲಿ (ನಮಾಝ್ ಮಾಡಲು) ನಿಲ್ಲಬೇಡಿ. ನಿಮಗೆ ನಿಲ್ಲಲು (ನಮಾಝ್ ಮಾಡಲು) ಹೆಚ್ಚು ಅರ್ಹವಾಗಿರುವುದು ಮೊದಲ ದಿನದಿಂದಲೇ ದೇವಭಯದ ಆಧಾರದಲ್ಲಿ ನಿರ್ಮಿಸಲಾದ ಮಸೀದಿಯಾಗಿದೆ. ಅಲ್ಲಿ (ಆ ಮಸೀದಿಯಲ್ಲಿ) ಶುದ್ಧಿಯಾಗಲು ಇಷ್ಟಪಡುವ ಜನರಿದ್ದಾರೆ. ಅಲ್ಲಾಹು ಶುದ್ಧಿಯಾಗಿರುವವರನ್ನು ಇಷ್ಟಪಡುತ್ತಾನೆ.
ಅರಬ್ಬಿ ವ್ಯಾಖ್ಯಾನಗಳು:
اَفَمَنْ اَسَّسَ بُنْیَانَهٗ عَلٰی تَقْوٰی مِنَ اللّٰهِ وَرِضْوَانٍ خَیْرٌ اَمْ مَّنْ اَسَّسَ بُنْیَانَهٗ عَلٰی شَفَا جُرُفٍ هَارٍ فَانْهَارَ بِهٖ فِیْ نَارِ جَهَنَّمَ ؕ— وَاللّٰهُ لَا یَهْدِی الْقَوْمَ الظّٰلِمِیْنَ ۟
ಅಲ್ಲಾಹನ ಭಯ ಮತ್ತು ಸಂಪ್ರೀತಿಯ ತಳಹದಿಯ ಮೇಲೆ ತನ್ನ ಕಟ್ಟಡವನ್ನು ನಿರ್ಮಿಸಿದವನು ಉತ್ತಮನೋ ಅಥವಾ ಕುಸಿಯುವ ಹಂತದಲ್ಲಿರುವ ಪ್ರಪಾತದ ಅಂಚಿನಲ್ಲಿ ತನ್ನ ಕಟ್ಟಡವನ್ನು ನಿರ್ಮಿಸಿ ಅದರೊಂದಿಗೆ ನರಕಾಗ್ನಿಗೆ ಕುಸಿದು ಬಿದ್ದವನೋ? ಅಕ್ರಮಿಗಳಾದ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
لَا یَزَالُ بُنْیَانُهُمُ الَّذِیْ بَنَوْا رِیْبَةً فِیْ قُلُوْبِهِمْ اِلَّاۤ اَنْ تَقَطَّعَ قُلُوْبُهُمْ ؕ— وَاللّٰهُ عَلِیْمٌ حَكِیْمٌ ۟۠
ಅವರು ನಿರ್ಮಿಸಿದ ಅವರ ಕಟ್ಟಡವು ಅವರ ಹೃದಯಗಳಲ್ಲಿ ಸಂಶಯ ಪಿಶಾಚಿಯಂತೆ ಅವರನ್ನು ಸತತವಾಗಿ ಚುಚ್ಚುತ್ತಲೇ ಇರುವುದು. ಅಲ್ಲಾಹು ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ.
ಅರಬ್ಬಿ ವ್ಯಾಖ್ಯಾನಗಳು:
اِنَّ اللّٰهَ اشْتَرٰی مِنَ الْمُؤْمِنِیْنَ اَنْفُسَهُمْ وَاَمْوَالَهُمْ بِاَنَّ لَهُمُ الْجَنَّةَ ؕ— یُقَاتِلُوْنَ فِیْ سَبِیْلِ اللّٰهِ فَیَقْتُلُوْنَ وَیُقْتَلُوْنَ ۫— وَعْدًا عَلَیْهِ حَقًّا فِی التَّوْرٰىةِ وَالْاِنْجِیْلِ وَالْقُرْاٰنِ ؕ— وَمَنْ اَوْفٰی بِعَهْدِهٖ مِنَ اللّٰهِ فَاسْتَبْشِرُوْا بِبَیْعِكُمُ الَّذِیْ بَایَعْتُمْ بِهٖ ؕ— وَذٰلِكَ هُوَ الْفَوْزُ الْعَظِیْمُ ۟
ನಿಶ್ಚಯವಾಗಿಯೂ ಅಲ್ಲಾಹು ಸತ್ಯವಿಶ್ವಾಸಿಗಳಿಂದ, ಅವರಿಗೆ ಸ್ವರ್ಗವನ್ನು ನೀಡುವೆನು ಎಂಬುದಕ್ಕೆ ಬದಲಿಯಾಗಿ, ಅವರ ತನು-ಧನಗಳನ್ನು ಖರೀದಿಸಿದ್ದಾನೆ. ಅವರು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುತ್ತಾ (ವೈರಿಗಳನ್ನು) ಕೊಲ್ಲುತ್ತಾರೆ ಮತ್ತು (ವೈರಿಗಳಿಂದ) ಕೊಲೆಗೀಡಾಗುತ್ತಾರೆ. ಇದು ತೌರಾತ್‍ನಲ್ಲಿ, ಇಂಜೀಲ್‍ನಲ್ಲಿ ಮತ್ತು ಕುರ್‌ಆನ್‍ನಲ್ಲಿ ಅಲ್ಲಾಹು ನೀಡಿದ ಸತ್ಯ ವಾಗ್ದಾನವಾಗಿದೆ. ಅಲ್ಲಾಹನಿಗಿಂತಲೂ ಹೆಚ್ಚು ತನ್ನ ಕರಾರನ್ನು ಪೂರ್ತಿ ಮಾಡುವವನು ಯಾರು? ಆದ್ದರಿಂದ ನೀವು ಮಾಡಿರುವ ಈ ವ್ಯವಹಾರದಲ್ಲಿ ಸಂತೋಷಪಡಿರಿ. ಅದೇ ಅತಿದೊಡ್ಡ ಯಶಸ್ಸು.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಅಧ್ಯಾಯ: ಅತ್ತೌಬ
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು - ಅನುವಾದಗಳ ವಿಷಯಸೂಚಿ

ಅನುವಾದ - ಮುಹಮ್ಮದ್ ಹಂಝ ಪುತ್ತೂರು ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ