Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು * - ಅನುವಾದಗಳ ವಿಷಯಸೂಚಿ

PDF XML CSV Excel API
Please review the Terms and Policies

ಅರ್ಥಗಳ ಅನುವಾದ ಅಧ್ಯಾಯ: ಅತ್ತೌಬ   ಶ್ಲೋಕ:
یُبَشِّرُهُمْ رَبُّهُمْ بِرَحْمَةٍ مِّنْهُ وَرِضْوَانٍ وَّجَنّٰتٍ لَّهُمْ فِیْهَا نَعِیْمٌ مُّقِیْمٌ ۟ۙ
ಅವರ ಪರಿಪಾಲಕನು (ಅಲ್ಲಾಹು) ಅವರಿಗೆ ತನ್ನ ದಯೆ, ಸಂಪ್ರೀತಿ ಮತ್ತು ಸ್ವರ್ಗೋದ್ಯಾನಗಳ ಸುವಾರ್ತೆಯನ್ನು ನೀಡುತ್ತಾನೆ. ಅಲ್ಲಿ ಅವರಿಗೆ ಶಾಶ್ವತ ಸಂತೋಷಗಳಿವೆ.
ಅರಬ್ಬಿ ವ್ಯಾಖ್ಯಾನಗಳು:
خٰلِدِیْنَ فِیْهَاۤ اَبَدًا ؕ— اِنَّ اللّٰهَ عِنْدَهٗۤ اَجْرٌ عَظِیْمٌ ۟
ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ನಿಶ್ಚಯವಾಗಿಯೂ ಅಲ್ಲಾಹನ ಬಳಿ ಅತಿದೊಡ್ಡ ಪ್ರತಿಫಲವಿದೆ.
ಅರಬ್ಬಿ ವ್ಯಾಖ್ಯಾನಗಳು:
یٰۤاَیُّهَا الَّذِیْنَ اٰمَنُوْا لَا تَتَّخِذُوْۤا اٰبَآءَكُمْ وَاِخْوَانَكُمْ اَوْلِیَآءَ اِنِ اسْتَحَبُّوا الْكُفْرَ عَلَی الْاِیْمَانِ ؕ— وَمَنْ یَّتَوَلَّهُمْ مِّنْكُمْ فَاُولٰٓىِٕكَ هُمُ الظّٰلِمُوْنَ ۟
ಓ ಸತ್ಯವಿಶ್ವಾಸಿಗಳೇ! ನಿಮ್ಮ ತಂದೆಯರನ್ನು ಮತ್ತು ನಿಮ್ಮ ಸಹೋದರರನ್ನು ನಿಮ್ಮ ಮಿತ್ರರನ್ನಾಗಿ ಸ್ವೀಕರಿಸಬೇಡಿ—ಅವರು ಸತ್ಯವಿಶ್ವಾಸಕ್ಕಿಂತ ಹೆಚ್ಚು ಸತ್ಯನಿಷೇಧವನ್ನು ಪ್ರೀತಿಸುವುದಾದರೆ. ನಿಮ್ಮಲ್ಲಿ ಯಾರು ಅವರನ್ನು ಮಿತ್ರರನ್ನಾಗಿ ಸ್ವೀಕರಿಸುತ್ತಾರೋ ಅವರೇ ಅಕ್ರಮಿಗಳು.
ಅರಬ್ಬಿ ವ್ಯಾಖ್ಯಾನಗಳು:
قُلْ اِنْ كَانَ اٰبَآؤُكُمْ وَاَبْنَآؤُكُمْ وَاِخْوَانُكُمْ وَاَزْوَاجُكُمْ وَعَشِیْرَتُكُمْ وَاَمْوَالُ ١قْتَرَفْتُمُوْهَا وَتِجَارَةٌ تَخْشَوْنَ كَسَادَهَا وَمَسٰكِنُ تَرْضَوْنَهَاۤ اَحَبَّ اِلَیْكُمْ مِّنَ اللّٰهِ وَرَسُوْلِهٖ وَجِهَادٍ فِیْ سَبِیْلِهٖ فَتَرَبَّصُوْا حَتّٰی یَاْتِیَ اللّٰهُ بِاَمْرِهٖ ؕ— وَاللّٰهُ لَا یَهْدِی الْقَوْمَ الْفٰسِقِیْنَ ۟۠
ಹೇಳಿರಿ: “ನಿಮ್ಮ ತಂದೆಯರು, ನಿಮ್ಮ ಮಕ್ಕಳು, ನಿಮ್ಮ ಸಹೋದರರು, ನಿಮ್ಮ ಪತ್ನಿಯರು, ನಿಮ್ಮ ಸಂಬಂಧಿಕರು, ನೀವು ಸಂಪಾದಿಸಿದ ಆಸ್ತಿಗಳು, ನಷ್ಟವಾಗಬಹುದೆಂದು ನೀವು ಹೆದರುವ ವ್ಯಾಪಾರಗಳು, ನೀವು ಪ್ರೀತಿಸುವ ನಿಮ್ಮ ಮನೆಗಳು—ಇವೆಲ್ಲವೂ ನಿಮಗೆ ಅಲ್ಲಾಹನಿಗಿಂತ, ಅವನ ಸಂದೇಶವಾಹಕರಿಗಿಂತ ಮತ್ತು ಅವನ ಮಾರ್ಗದಲ್ಲಿ ಮಾಡುವ ಹೋರಾಟಕ್ಕಿಂತ ಹೆಚ್ಚು ಪ್ರೀತಿಯುಳ್ಳದ್ದಾಗಿದ್ದರೆ, ಅಲ್ಲಾಹು ಅವನ ಆಜ್ಞೆಯನ್ನು ತರುವ ತನಕ ಕಾಯಿರಿ. ಅವಿಧೇಯತೆ ತೋರುವ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ.”
ಅರಬ್ಬಿ ವ್ಯಾಖ್ಯಾನಗಳು:
لَقَدْ نَصَرَكُمُ اللّٰهُ فِیْ مَوَاطِنَ كَثِیْرَةٍ ۙ— وَّیَوْمَ حُنَیْنٍ ۙ— اِذْ اَعْجَبَتْكُمْ كَثْرَتُكُمْ فَلَمْ تُغْنِ عَنْكُمْ شَیْـًٔا وَّضَاقَتْ عَلَیْكُمُ الْاَرْضُ بِمَا رَحُبَتْ ثُمَّ وَلَّیْتُمْ مُّدْبِرِیْنَ ۟ۚ
ನಿಶ್ಚಯವಾಗಿಯೂ ಅನೇಕ ಸ್ಥಳಗಳಲ್ಲಿ ಅಲ್ಲಾಹು ನಿಮಗೆ ಸಹಾಯ ಮಾಡಿದ್ದಾನೆ. ಹುನೈನ್ ಯುದ್ಧ ನಡೆದ ದಿನದಲ್ಲಿ ಕೂಡ (ಅವನು ನಿಮಗೆ ಸಹಾಯ ಮಾಡಿದ್ದಾನೆ). ಅಂದು ನಿಮ್ಮ ಸಂಖ್ಯಾಬಲವನ್ನು ನೋಡಿ ನೀವು ಪುಳಕಿತರಾದ ಸಂದರ್ಭ. ಆದರೆ ಅದು ನಿಮಗೆ ಯಾವುದೇ ಉಪಕಾರ ಮಾಡಲಿಲ್ಲ. ಭೂಮಿಯು ವಿಶಾಲವಾಗಿದ್ದೂ ಸಹ ನಿಮಗೆ ಸಂಕುಚಿತವಾದಂತೆ ತೋರಿತು. ನಂತರ ನೀವು ದಿಕ್ಕೆಟ್ಟು ಪಲಾಯನ ಮಾಡಿದಿರಿ.[1]
[1] ಹಿಜ್ರ 8ನೇ ವರ್ಷದಲ್ಲಿ ಹುನೈನ್ ಯುದ್ಧ ನಡೆಯಿತು. ಮುಸ್ಲಿಮರು ಮಕ್ಕಾ ವಶಪಡಿಸಿದ್ದನ್ನು ಕಂಡು ರೋಷದಿಂದ ಕೆಲವು ಸತ್ಯನಿಷೇಧಿ ಗೋತ್ರಗಳು ಮುಸ್ಲಿಮರ ವಿರುದ್ಧ ಯುದ್ಧ ಸಾರಿದರು. ಈ ಯುದ್ಧದಲ್ಲಿ ಮುಸ್ಲಿಮರು ಗಣನೀಯ ಸಂಖ್ಯೆಯಲ್ಲಿದ್ದೂ ಸಹ ಆರಂಭದಲ್ಲಿ ಸೋಲನ್ನು ಕಂಡರು. ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೆಲವು ಆಪ್ತ ಸಂಗಡಿಗರ ಹೊರತು ಉಳಿದವರು ಯುದ್ಧರಂಗದಿಂದ ಪಲಾಯನ ಮಾಡಿದರು. ಆದರೆ ಕೆಲವೇ ಕ್ಷಣಗಳಲ್ಲಿ ಅವರು ಮರಳಿ ಬಂದು ವೀರಾವೇಶದಿಂದ ಹೋರಾಡಿ ಯುದ್ಧವನ್ನು ಗೆದ್ದರು.
ಅರಬ್ಬಿ ವ್ಯಾಖ್ಯಾನಗಳು:
ثُمَّ اَنْزَلَ اللّٰهُ سَكِیْنَتَهٗ عَلٰی رَسُوْلِهٖ وَعَلَی الْمُؤْمِنِیْنَ وَاَنْزَلَ جُنُوْدًا لَّمْ تَرَوْهَا ۚ— وَعَذَّبَ الَّذِیْنَ كَفَرُوْا ؕ— وَذٰلِكَ جَزَآءُ الْكٰفِرِیْنَ ۟
ನಂತರ ಅಲ್ಲಾಹು ಅವನ ಸಂದೇಶವಾಹಕರ ಮೇಲೆ ಮತ್ತು ಸತ್ಯವಿಶ್ವಾಸಿಗಳ ಮೇಲೆ ಅವನ ಕಡೆಯ ಶಾಂತಿಯನ್ನು ಇಳಿಸಿಕೊಟ್ಟನು. ನಿಮಗೆ ಕಾಣದಂತಹ ಸೈನ್ಯಗಳನ್ನು ಕಳುಹಿಸಿ ಸತ್ಯನಿಷೇಧಿಗಳನ್ನು ಶಿಕ್ಷಿಸಿದನು. ಅದು ಸತ್ಯನಿಷೇಧಿಗಳಿಗೆ ಪ್ರತಿಫಲವಾಗಿದೆ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಅಧ್ಯಾಯ: ಅತ್ತೌಬ
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು - ಅನುವಾದಗಳ ವಿಷಯಸೂಚಿ

ಅನುವಾದ - ಮುಹಮ್ಮದ್ ಹಂಝ ಪುತ್ತೂರು ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ