Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು * - ಅನುವಾದಗಳ ವಿಷಯಸೂಚಿ

PDF XML CSV Excel API
Please review the Terms and Policies

ಅರ್ಥಗಳ ಅನುವಾದ ಅಧ್ಯಾಯ: ಅತ್ತೌಬ   ಶ್ಲೋಕ:
اِنْفِرُوْا خِفَافًا وَّثِقَالًا وَّجَاهِدُوْا بِاَمْوَالِكُمْ وَاَنْفُسِكُمْ فِیْ سَبِیْلِ اللّٰهِ ؕ— ذٰلِكُمْ خَیْرٌ لَّكُمْ اِنْ كُنْتُمْ تَعْلَمُوْنَ ۟
ನೀವು ಹಗುರವಾಗಿರುವಾಗಲೂ ಭಾರವಾಗಿರುವಾಗಲೂ ಯುದ್ಧಕ್ಕೆ ಹೊರಡಿರಿ.[1] ಅಲ್ಲಾಹನ ಮಾರ್ಗದಲ್ಲಿ ನಿಮ್ಮ ತನು-ಧನಗಳಿಂದ ಯುದ್ಧ ಮಾಡಿರಿ. ನೀವು ತಿಳಿದವರಾಗಿದ್ದರೆ ಅದೇ ನಿಮಗೆ ಶ್ರೇಷ್ಠವಾಗಿದೆ.
[1] ಅಂದರೆ ನೀವು ಯುವಕರಾಗಿದ್ದರೂ, ವೃದ್ಧರಾಗಿದ್ದರೂ, ಸಂತೋಷದಲ್ಲಿದ್ದರೂ, ಕಷ್ಟದಲ್ಲಿದ್ದರೂ, ವಾಹನವಿದ್ದರೂ, ಇಲ್ಲದಿದ್ದರೂ ಎಲ್ಲಾ ಸಂದರ್ಭಗಳಲ್ಲೂ ಯುದ್ಧಕ್ಕೆ ಹೊರಡಿರಿ.
ಅರಬ್ಬಿ ವ್ಯಾಖ್ಯಾನಗಳು:
لَوْ كَانَ عَرَضًا قَرِیْبًا وَّسَفَرًا قَاصِدًا لَّاتَّبَعُوْكَ وَلٰكِنْ بَعُدَتْ عَلَیْهِمُ الشُّقَّةُ ؕ— وَسَیَحْلِفُوْنَ بِاللّٰهِ لَوِ اسْتَطَعْنَا لَخَرَجْنَا مَعَكُمْ ۚ— یُهْلِكُوْنَ اَنْفُسَهُمْ ۚ— وَاللّٰهُ یَعْلَمُ اِنَّهُمْ لَكٰذِبُوْنَ ۟۠
ಅದು ಸಮೀಪದ (ಸುಲಭದ) ಲಾಭವಾಗಿದ್ದರೆ ಮತ್ತು ನಿರಾಯಾಸ ಪ್ರಯಾಣವಾಗಿದ್ದರೆ ಅವರು (ಕಪಟವಿಶ್ವಾಸಿಗಳು) ನಿಮ್ಮನ್ನು ಹಿಂಬಾಲಿಸುತ್ತಿದ್ದರು. ಆದರೆ ಅವರಿಗೆ ಅದು ವಿದೂರ ಮತ್ತು ಆಯಾಸಕರವಾಗಿದೆ. “ನಮಗೆ ಸಾಮರ್ಥ್ಯವಿರುತ್ತಿದ್ದರೆ ನಾವು ನಿಮ್ಮೊಂದಿಗೆ ಹೊರಡುತ್ತಿದ್ದೆವು” ಎಂದು ಅವರು ಅಲ್ಲಾಹನ ಮೇಲೆ ಆಣೆ ಮಾಡಿ ಹೇಳುತ್ತಾರೆ. ಅವರು ಅವರನ್ನೇ ನಾಶ ಮಾಡುತ್ತಿದ್ದಾರೆ. ನಿಶ್ಚಯವಾಗಿಯೂ ಅವರು ಸುಳ್ಳು ಹೇಳುತ್ತಿದ್ದಾರೆಂದು ಅಲ್ಲಾಹನಿಗೆ ತಿಳಿದಿದೆ.[1]
[1] ಯುದ್ಧಕ್ಕೆ ಹೋಗದಿರಲು ವಿನಾಯಿತಿಯಿರುವವರ ಹೊರತು ಉಳಿದವರೆಲ್ಲರೂ ತಬೂಕ್ ಯುದ್ಧಕ್ಕೆ ಹೊರಡಬೇಕೆಂದು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಆದೇಶ ಹೊರಡಿಸಿದಾಗ, ಕಪಟವಿಶ್ವಾಸಿಗಳು ಸುಳ್ಳು ನೆಪಗಳನ್ನು ಹೇಳಿ ಯುದ್ಧದಿಂದ ತಪ್ಪಿಸಿಕೊಂಡರು. ಇಲ್ಲಿಂದ ಮುಂದಕ್ಕೆ ಆ ಕಪಟವಿಶ್ವಾಸಿಗಳ ಬಗ್ಗೆ ವಿವರಿಸಲಾಗಿದೆ.
ಅರಬ್ಬಿ ವ್ಯಾಖ್ಯಾನಗಳು:
عَفَا اللّٰهُ عَنْكَ ۚ— لِمَ اَذِنْتَ لَهُمْ حَتّٰی یَتَبَیَّنَ لَكَ الَّذِیْنَ صَدَقُوْا وَتَعْلَمَ الْكٰذِبِیْنَ ۟
(ಪ್ರವಾದಿಯವರೇ) ಅಲ್ಲಾಹು ನಿಮ್ಮನ್ನು ಕ್ಷಮಿಸಲಿ. ನೀವೇಕೆ ಅವರಿಗೆ ಅನುಮತಿ ನೀಡಿದಿರಿ? ಸತ್ಯ ಹೇಳುವವರು ಯಾರು ಮತ್ತು ಸುಳ್ಳು ಹೇಳುವವರು ಯಾರೆಂದು ಸ್ಪಷ್ಟವಾಗಿ ತಿಳಿಯುವವರೆಗೆ (ನೀವು ಅನುಮತಿ ನೀಡಬಾರದಿತ್ತು).
ಅರಬ್ಬಿ ವ್ಯಾಖ್ಯಾನಗಳು:
لَا یَسْتَاْذِنُكَ الَّذِیْنَ یُؤْمِنُوْنَ بِاللّٰهِ وَالْیَوْمِ الْاٰخِرِ اَنْ یُّجَاهِدُوْا بِاَمْوَالِهِمْ وَاَنْفُسِهِمْ ؕ— وَاللّٰهُ عَلِیْمٌۢ بِالْمُتَّقِیْنَ ۟
ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುವವರು ತಮ್ಮ ತನು-ಧನಗಳಿಂದ (ಅಲ್ಲಾಹನ ಮಾರ್ಗದಲ್ಲಿ) ಯುದ್ಧ ಮಾಡದಿರಲು ನಿಮ್ಮೊಡನೆ ಅನುಮತಿ ಕೇಳುವುದಿಲ್ಲ. ದೇವಭಯವುಳ್ಳವರ ಬಗ್ಗೆ ಅಲ್ಲಾಹನಿಗೆ ಬಹಳ ಚೆನ್ನಾಗಿ ತಿಳಿದಿದೆ.
ಅರಬ್ಬಿ ವ್ಯಾಖ್ಯಾನಗಳು:
اِنَّمَا یَسْتَاْذِنُكَ الَّذِیْنَ لَا یُؤْمِنُوْنَ بِاللّٰهِ وَالْیَوْمِ الْاٰخِرِ وَارْتَابَتْ قُلُوْبُهُمْ فَهُمْ فِیْ رَیْبِهِمْ یَتَرَدَّدُوْنَ ۟
ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡದವರು ಹಾಗೂ ಹೃದಯದಲ್ಲಿ ಸಂಶಯವಿರುವವರು ಮಾತ್ರ ನಿಮ್ಮೊಡನೆ ಅನುಮತಿ ಕೇಳುತ್ತಾರೆ. ಅವರು ಅವರ ಸಂಶಯದಲ್ಲಿಯೇ ಅಲೆದಾಡುತ್ತಿದ್ದಾರೆ.
ಅರಬ್ಬಿ ವ್ಯಾಖ್ಯಾನಗಳು:
وَلَوْ اَرَادُوا الْخُرُوْجَ لَاَعَدُّوْا لَهٗ عُدَّةً وَّلٰكِنْ كَرِهَ اللّٰهُ انْۢبِعَاثَهُمْ فَثَبَّطَهُمْ وَقِیْلَ اقْعُدُوْا مَعَ الْقٰعِدِیْنَ ۟
ಅವರಿಗೆ (ಯುದ್ಧಕ್ಕೆ) ಹೊರಡುವ ಇಚ್ಛೆಯಿದ್ದರೆ ಅವರು ಅದಕ್ಕೆ ಬೇಕಾದ ತಯಾರಿಯನ್ನು ಮಾಡುತ್ತಿದ್ದರು. ಆದರೆ ಅವರು ಅದಕ್ಕಾಗಿ ಎದ್ದೇಳುವುದನ್ನು ಅಲ್ಲಾಹು ಇಷ್ಟಪಡಲಿಲ್ಲ. ಆದ್ದರಿಂದ ಅವನು ಅವರನ್ನು ತಡೆದನು. ಕುಳಿತುಕೊಳ್ಳುವವರೊಡನೆ ನೀವೂ ಕುಳಿತುಕೊಳ್ಳಿರಿ ಎಂದು ಅವರೊಡನೆ ಹೇಳಲಾಯಿತು.
ಅರಬ್ಬಿ ವ್ಯಾಖ್ಯಾನಗಳು:
لَوْ خَرَجُوْا فِیْكُمْ مَّا زَادُوْكُمْ اِلَّا خَبَالًا وَّلَاۡاَوْضَعُوْا خِلٰلَكُمْ یَبْغُوْنَكُمُ الْفِتْنَةَ ۚ— وَفِیْكُمْ سَمّٰعُوْنَ لَهُمْ ؕ— وَاللّٰهُ عَلِیْمٌۢ بِالظّٰلِمِیْنَ ۟
ಅವರು ನಿಮ್ಮ ಜೊತೆಗೆ ಹೊರಡುತ್ತಿದ್ದರೆ ನಿಮಗೆ ಗೊಂದಲವಲ್ಲದೆ ಇನ್ನೇನೂ ಹೆಚ್ಚುವಂತೆ ಮಾಡುತ್ತಿರಲಿಲ್ಲ. ಅವರು ನಿಮ್ಮ ನಡುವೆ ಒಡಕು ಮೂಡಿಸಲು ಸಕ್ರಿಯವಾಗಿ ಓಡಾಡುತ್ತಿದ್ದರು. ಅವರ ಮಾತುಗಳನ್ನು ಕಿವಿಗೊಟ್ಟು ಕೇಳುವವರೂ ನಿಮ್ಮಲ್ಲಿದ್ದಾರೆ. ಅಕ್ರಮಿಗಳ ಬಗ್ಗೆ ಅಲ್ಲಾಹು ಬಹಳ ಚೆನ್ನಾಗಿ ತಿಳಿದಿದ್ದಾನೆ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಅಧ್ಯಾಯ: ಅತ್ತೌಬ
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು - ಅನುವಾದಗಳ ವಿಷಯಸೂಚಿ

ಅನುವಾದ - ಮುಹಮ್ಮದ್ ಹಂಝ ಪುತ್ತೂರು ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ