ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ * - ಅನುವಾದಗಳ ವಿಷಯಸೂಚಿ

XML CSV Excel API
Please review the Terms and Policies

ಅರ್ಥಗಳ ಅನುವಾದ ಶ್ಲೋಕ: (74) ಅಧ್ಯಾಯ: ಸೂರ ಅತ್ತೌಬ
یَحْلِفُوْنَ بِاللّٰهِ مَا قَالُوْا ؕ— وَلَقَدْ قَالُوْا كَلِمَةَ الْكُفْرِ وَكَفَرُوْا بَعْدَ اِسْلَامِهِمْ وَهَمُّوْا بِمَا لَمْ یَنَالُوْا ۚ— وَمَا نَقَمُوْۤا اِلَّاۤ اَنْ اَغْنٰىهُمُ اللّٰهُ وَرَسُوْلُهٗ مِنْ فَضْلِهٖ ۚ— فَاِنْ یَّتُوْبُوْا یَكُ خَیْرًا لَّهُمْ ۚ— وَاِنْ یَّتَوَلَّوْا یُعَذِّبْهُمُ اللّٰهُ عَذَابًا اَلِیْمًا فِی الدُّنْیَا وَالْاٰخِرَةِ ۚ— وَمَا لَهُمْ فِی الْاَرْضِ مِنْ وَّلِیٍّ وَّلَا نَصِیْرٍ ۟
ನಾವು (ಪ್ರವಾದಿಯ ವಿರುದ್ಧ ಏನೂ) ಹೇಳಿಲ್ಲವೆಂದು ಅವರು (ಕಪಟವಿಶ್ವಾಸಿಗಳು) ಅಲ್ಲಾಹನ ಮೇಲೆ ಆಣೆ ಮಾಡಿ ಹೇಳುತ್ತಾರೆ. ಆದರೆ (ವಾಸ್ತವದಲ್ಲಿ) ಅವರು ಸತ್ಯನಿಷೇಧದ ಮಾತನ್ನೇ ಹೇಳಿದ್ದಾರೆ. ಇಸ್ಲಾಮ್ ಸ್ವೀಕರಿಸಿದ ಬಳಿಕ ಅವರು ಸತ್ಯನಿಷೇಧಿಗಳಾಗಿ ಮಾರ್ಪಟ್ಟಿದ್ದಾರೆ. ಅವರಿಗೆ ಮಾಡಲು ಸಾಧ್ಯವಾಗದ ಸಂಗತಿಗಾಗಿ (ಪ್ರವಾದಿಯ ಹತ್ಯೆಗಾಗಿ) ಅವರು ಹವಣಿಸಿದ್ದರು. ಅಲ್ಲಾಹು ಅವನ ಔದಾರ್ಯದಿಂದ ಅವರನ್ನು ಶ್ರೀಮಂತಗೊಳಿಸಿದನು ಮತ್ತು ಅವನ ಸಂದೇಶವಾಹಕರು ಕೂಡ (ಅವರನ್ನು ಶ್ರೀಮಂತಗೊಳಿಸಿದರು) ಎಂಬುದಲ್ಲದೆ ಅವರ ಪ್ರತೀಕಾರಕ್ಕೆ ಬೇರೇನು ಕಾರಣವಿದೆ? ಅವರು ಪಶ್ಚಾತ್ತಾಪಪಟ್ಟು ಮರಳಿದರೆ ಅದು ಅವರಿಗೇ ಒಳ್ಳೆಯದು. ಅವರು ಬೆನ್ನು ತೋರಿಸಿ ನಡೆದರೆ, ಅಲ್ಲಾಹು ಅವರಿಗೆ ಇಹಲೋಕದಲ್ಲೂ, ಪರಲೋಕದಲ್ಲೂ ಯಾತನಾಮಯ ಶಿಕ್ಷೆಯನ್ನು ನೀಡುವನು. ಭೂಮಿಯಲ್ಲಿ ಅವರಿಗೆ ಯಾವುದೇ ರಕ್ಷಕರು ಅಥವಾ ಸಹಾಯಕರು ಇರಲಾರರು.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (74) ಅಧ್ಯಾಯ: ಸೂರ ಅತ್ತೌಬ
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಅನುವಾದಗಳ ವಿಷಯಸೂಚಿ

ಪವಿತ್ರ ಕುರ್‌ಆನ್ ಕನ್ನಡ ಅರ್ಥಾನುವಾದ - ಮುಹಮ್ಮದ್ ಹಂಝ ಪುತ್ತೂರು

ಮುಚ್ಚಿ