وه‌رگێڕانی ماناكانی قورئانی پیرۆز - الترجمة الكنادية - بشير ميسوري * - پێڕستی وه‌رگێڕاوه‌كان


وه‌رگێڕانی ماناكان سوره‌تی: سورەتی الحج   ئایه‌تی:

ಸೂರ ಅಲ್- ಹಜ್ಜ್

یٰۤاَیُّهَا النَّاسُ اتَّقُوْا رَبَّكُمْ ۚ— اِنَّ زَلْزَلَةَ السَّاعَةِ شَیْءٌ عَظِیْمٌ ۟
ಓ ಜನರೇ, ನೀವು ನಿಮ್ಮ ಪ್ರಭುವಿನ ಯಾತನೆಯಿಂದ, ಭಯಪಡಿರಿ. ನಿಸ್ಸಂದೇಹವಾಗಿಯೂ ಪ್ರಳಯದ ಅಂತ್ಯ ಘಳಿಗೆಯ ಕಂಪನವು ಒಂದು ಭಯಂಕರ ಸಂಗತಿಯಾಗಿದೆ.
تەفسیرە عەرەبیەکان:
یَوْمَ تَرَوْنَهَا تَذْهَلُ كُلُّ مُرْضِعَةٍ عَمَّاۤ اَرْضَعَتْ وَتَضَعُ كُلُّ ذَاتِ حَمْلٍ حَمْلَهَا وَتَرَی النَّاسَ سُكٰرٰی وَمَا هُمْ بِسُكٰرٰی وَلٰكِنَّ عَذَابَ اللّٰهِ شَدِیْدٌ ۟
ಅದನ್ನು ನೀವು ಕಾಣುವ ದಿನ ಪ್ರತಿಯೊಬ್ಬ ಹಾಲುಣಿಸುವವಳು ತಾನು ಹಾಲುಣಿಸುವ ಮಗುವನ್ನು ಮರೆತುಬಿಡುವಳು ಮತ್ತು ಪ್ರತಿಯೊಬ್ಬ ಗರ್ಭಿಣಿಯ ಗರ್ಭ ಪಾತವಾಗಿ ಬಿಡುವುದು ಮತ್ತು ನೀವು ಜನರನ್ನು ಅಮಲೇರಿದವರನ್ನಾಗಿ ಕಾಣುವಿರಿ ವಾಸ್ತವದಲ್ಲಿ ಅವರು ಅಮಲೇರಿದವರಲ್ಲ. ಆದರೆ ಅಲ್ಲಾಹನ ಯಾತನೆಯು ಅತ್ಯಂತ ಕಠೋರವಾಗಿರುತ್ತದೆ.
تەفسیرە عەرەبیەکان:
وَمِنَ النَّاسِ مَنْ یُّجَادِلُ فِی اللّٰهِ بِغَیْرِ عِلْمٍ وَّیَتَّبِعُ كُلَّ شَیْطٰنٍ مَّرِیْدٍ ۟ۙ
ಅದನ್ನು ನೀವು ಕಾಣುವ ದಿನ ಪ್ರತಿಯೊಬ್ಬ ಹಾಲುಣಿಸುವವಳು ತಾನು ಹಾಲುಣಿಸುವ ಮಗುವನ್ನು ಮರೆತುಬಿಡುವಳು ಮತ್ತು ಪ್ರತಿಯೊಬ್ಬ ಗರ್ಭಿಣಿಯ ಗರ್ಭ ಪಾತವಾಗಿ ಬಿಡುವುದು ಮತ್ತು ನೀವು ಜನರನ್ನು ಅಮಲೇರಿದವರನ್ನಾಗಿ ಕಾಣುವಿರಿ ವಾಸ್ತವದಲ್ಲಿ ಅವರು ಅಮಲೇರಿದವರಲ್ಲ. ಆದರೆ ಅಲ್ಲಾಹನ ಯಾತನೆಯು ಅತ್ಯಂತ ಕಠೋರವಾಗಿರುತ್ತದೆ.
تەفسیرە عەرەبیەکان:
كُتِبَ عَلَیْهِ اَنَّهٗ مَنْ تَوَلَّاهُ فَاَنَّهٗ یُضِلُّهٗ وَیَهْدِیْهِ اِلٰی عَذَابِ السَّعِیْرِ ۟
ಯಾರು ಆ ಶೈತಾನನ್ನು ಆಪ್ತನನ್ನಾಗಿ ಮಾಡುತ್ತಾನೋ ಅವನು ಅವನನ್ನು ದಾರಿಗೆಡಿಸುತ್ತಾನೆ ಮತ್ತು ಅವನನ್ನು ನರಕ ಯಾತನೆಯೆಡೆಗೆ ಮುನ್ನಡೆಸುತ್ತಾನೆ ಎಂದು ಅವನ (ಶೈತಾನನ) ಅದೃಷ್ಟದಲ್ಲೇ ಬರೆಯಲಾಗಿದೆ.
تەفسیرە عەرەبیەکان:
یٰۤاَیُّهَا النَّاسُ اِنْ كُنْتُمْ فِیْ رَیْبٍ مِّنَ الْبَعْثِ فَاِنَّا خَلَقْنٰكُمْ مِّنْ تُرَابٍ ثُمَّ مِنْ نُّطْفَةٍ ثُمَّ مِنْ عَلَقَةٍ ثُمَّ مِنْ مُّضْغَةٍ مُّخَلَّقَةٍ وَّغَیْرِ مُخَلَّقَةٍ لِّنُبَیِّنَ لَكُمْ ؕ— وَنُقِرُّ فِی الْاَرْحَامِ مَا نَشَآءُ اِلٰۤی اَجَلٍ مُّسَمًّی ثُمَّ نُخْرِجُكُمْ طِفْلًا ثُمَّ لِتَبْلُغُوْۤا اَشُدَّكُمْ ۚ— وَمِنْكُمْ مَّنْ یُّتَوَفّٰی وَمِنْكُمْ مَّنْ یُّرَدُّ اِلٰۤی اَرْذَلِ الْعُمُرِ لِكَیْلَا یَعْلَمَ مِنْ بَعْدِ عِلْمٍ شَیْـًٔا ؕ— وَتَرَی الْاَرْضَ هَامِدَةً فَاِذَاۤ اَنْزَلْنَا عَلَیْهَا الْمَآءَ اهْتَزَّتْ وَرَبَتْ وَاَنْۢبَتَتْ مِنْ كُلِّ زَوْجٍ بَهِیْجٍ ۟
ಓ ಜನರೇ, ನಿಮಗೆ ಪುನರುತ್ಥಾನದ ಬಗ್ಗೆ ಸಂದೇಹವಿದ್ದರೆ ಚಿಂತಿಸಿ ನೋಡಿರಿ: ನಾವು ನಿಮ್ಮನ್ನು ಮಣ್ಣಿನಿಂದ, ಆ ಬಳಿಕ ವೀರ್ಯದಿಂದ, ನಂತರ ರಕ್ತ ಪಿಂಡದಿAದ, ತರುವಾಯ ರೂಪವಿರುವ, ಸ್ವರೂಪವಿಲ್ಲದ ಮಾಂಸ ಪಿಂಡದಿAದ ಸೃಷ್ಟಿಸಿರುತ್ತೇವೆ. (ಇದೆಕೆಂದರೆ) ವಸ್ತುಸ್ಥಿತಿಯನ್ನು ವಿವರಿಸಲಿಕ್ಕಾಗಿ ನಾವಿದನ್ನು ನಿಮಗೆ (ನಮ್ಮ ಸಾಮರ್ಥ್ಯವನ್ನು) ತಿಳಿಸುತ್ತಿದ್ದೇವೆ ಮತ್ತು ನಾವು ಇಚ್ಛಿಸಿದವರನ್ನು ಗರ್ಭಾಶಯಗಳಲ್ಲಿ ಒಂದು ನಿರ್ಧಿಷ್ಟಾವಧಿಯವರೆಗೆ ನೆಲೆಗೊಳಿಸುತ್ತೇವೆ. ತರುವಾಯ ನಿಮ್ಮನ್ನು ಶಿಶುವಿನ ರೂಪದಲ್ಲಿ ಹೊರ ತರುತ್ತೇವೆ. ಇದು ಆ ಬಳಿಕ ನೀವು ನಿಮ್ಮ ಪರಿಪೂರ್ಣ ಯವ್ವನಕ್ಕೆ ತಲುಪಲೆಂದಾಗಿರುತ್ತದೆ. ನಿಮ್ಮ ಪೈಕಿ ಕೆಲವರು ಮೊದಲೇ ಮರಣ ಹೊಂದುವವರಿದ್ದಾರೆ ಮತ್ತು ಕೆಲವರು ಒಂದು ವಸ್ತುವಿನ ಜ್ಞಾನ ಪಡೆದ ನಂತರ ಅರಿವಿಲ್ಲದಾಗುವಷ್ಟು ಮುಪ್ಪಿನ ಪ್ರಾಯಕ್ಕೆ ಮರಳಿಸಲ್ಪಡುವವರೂ ಇದ್ದಾರೆ ಮತ್ತು ನೀವು ಭೂಮಿಯನ್ನು ಒಣಗಿ ಬಂಜರು ಆಗಿರುವುದಾಗಿ ಕಾಣುತ್ತೀರಿ. ಇನ್ನು ನಾವು ಅದರ ಮೇಲೆ ಮಳೆಯನ್ನು ಸುರಿಸಿದಾಗ ಅದು ಗರಿಗೆದರಿ ಮೊಳೆಯುತ್ತದೆ ಮತ್ತು ಸಕಲ ವಿಧದ ಮನ ಮೋಹಕ ಬೆಳೆಯನ್ನು ಬೆಳೆಯುತ್ತದೆ.
تەفسیرە عەرەبیەکان:
ذٰلِكَ بِاَنَّ اللّٰهَ هُوَ الْحَقُّ وَاَنَّهٗ یُحْیِ الْمَوْتٰی وَاَنَّهٗ عَلٰی كُلِّ شَیْءٍ قَدِیْرٌ ۟ۙ
ಇದೇಕೆಂದರೆ ನಿಶ್ಚಯವಾಗಿಯೂ ಅಲ್ಲಾಹನೇ ಪರಮ ಸತ್ಯ ಮತ್ತು ಅವನೇ ಮೃತರನ್ನು ಜೀವಂತಗೊಳಿಸುತ್ತಾನೆ ಮತ್ತು ಅವನು ಪ್ರತಿಯೊಂದು ವಸ್ತುವಿನ ಮೇಲೆ ಸರ್ವ ಸಮರ್ಥನಾಗಿದ್ದಾನೆ.
تەفسیرە عەرەبیەکان:
وَّاَنَّ السَّاعَةَ اٰتِیَةٌ لَّا رَیْبَ فِیْهَا ۙ— وَاَنَّ اللّٰهَ یَبْعَثُ مَنْ فِی الْقُبُوْرِ ۟
ಪ್ರಳಯ ಸಮಯವು ಖಂಡಿತ ಬರಲಿದೆ. ಅದರಲ್ಲಿ ಯಾವುದೇ ಸಂಶಯವಿಲ್ಲ. ಮತ್ತು ನಿಶ್ಚಯವಾಗಿಯೂ ಅಲ್ಲಾಹನು ಸಮಾಧಿಯಲ್ಲಿರುವವರನ್ನು ಪುನಃ ಎಬ್ಬಿಸುವನು.
تەفسیرە عەرەبیەکان:
وَمِنَ النَّاسِ مَنْ یُّجَادِلُ فِی اللّٰهِ بِغَیْرِ عِلْمٍ وَّلَا هُدًی وَّلَا كِتٰبٍ مُّنِیْرٍ ۟ۙ
ಜನರ ಪೈಕಿ ಕೆಲವರು ಅಲ್ಲಾಹನ ವಿಚಾರದಲ್ಲಿ ಯಾವುದೇ ಜ್ಞಾನ, ಮಾರ್ಗದರ್ಶನ, ಮತ್ತು ಪ್ರಕಾಶಮಯ ಗ್ರಂಥವಿಲ್ಲದೇ ತರ್ಕ ಮಾಡುವವರೂ ಇದ್ದಾರೆ.
تەفسیرە عەرەبیەکان:
ثَانِیَ عِطْفِهٖ لِیُضِلَّ عَنْ سَبِیْلِ اللّٰهِ ؕ— لَهٗ فِی الدُّنْیَا خِزْیٌ وَّنُذِیْقُهٗ یَوْمَ الْقِیٰمَةِ عَذَابَ الْحَرِیْقِ ۟
ಜನರ ಪೈಕಿ ಕೆಲವರು ಅಲ್ಲಾಹನ ವಿಚಾರದಲ್ಲಿ ಯಾವುದೇ ಜ್ಞಾನ, ಮಾರ್ಗದರ್ಶನ, ಮತ್ತು ಪ್ರಕಾಶಮಯ ಗ್ರಂಥವಿಲ್ಲದೇ ತರ್ಕ ಮಾಡುವವರೂ ಇದ್ದಾರೆ.
تەفسیرە عەرەبیەکان:
ذٰلِكَ بِمَا قَدَّمَتْ یَدٰكَ وَاَنَّ اللّٰهَ لَیْسَ بِظَلَّامٍ لِّلْعَبِیْدِ ۟۠
ಇದು ನಿನ್ನ ಕೈಗಳು ಮೊದಲೇ ಮಾಡಿರುವ ಕರ್ಮಗಳ ಫಲವಾಗಿದೆ ಮತ್ತು ನಿಶ್ಚಯವಾಗಿಯೂ ಅಲ್ಲಾಹನು ತನ್ನ ದಾಸರ ಮೇಲೆ ಅಕ್ರಮವೆಸುಗುವವನಲ್ಲ.
تەفسیرە عەرەبیەکان:
وَمِنَ النَّاسِ مَنْ یَّعْبُدُ اللّٰهَ عَلٰی حَرْفٍ ۚ— فَاِنْ اَصَابَهٗ خَیْرُ ١طْمَاَنَّ بِهٖ ۚ— وَاِنْ اَصَابَتْهُ فِتْنَةُ ١نْقَلَبَ عَلٰی وَجْهِهٖ ۫ۚ— خَسِرَ الدُّنْیَا وَالْاٰخِرَةَ ؕ— ذٰلِكَ هُوَ الْخُسْرَانُ الْمُبِیْنُ ۟
ಜನರಲ್ಲಿ ಕೆಲವರು ಅಂಚಿನಲ್ಲಿ ನಿಂತು ಅಲ್ಲಾಹನನ್ನು ಆರಾಧಿಸುವವರಾಗಿದ್ದಾರೆ. ಅವರಿಗೆ ಒಳಿತೇನಾದರೂ ಸಿಕ್ಕಿದರೆ ಆಸಕ್ತಿ ತೋರಿಸುತ್ತಾರೆ ಇನ್ನು ಯಾವುದಾದರೂ ವಿಪತ್ತು ಬಾಧಿಸಿದರೆ ಕೂಡಲೇ ವಿಮುಖರಾಗಿಬಿಡುತ್ತಾರೆ. ಅವರು ಇಹಪರ ಲೋಕಗಳನ್ನು ನಷ್ಟ ಮಾಡಿಕೊಂಡವರಾಗಿದ್ದಾರೆ. ನಿಜವಾಗಿಯು ಇದುವೇ ಸ್ಪಷ್ಟ ನಷ್ಟ.
تەفسیرە عەرەبیەکان:
یَدْعُوْا مِنْ دُوْنِ اللّٰهِ مَا لَا یَضُرُّهٗ وَمَا لَا یَنْفَعُهٗ ؕ— ذٰلِكَ هُوَ الضَّلٰلُ الْبَعِیْدُ ۟ۚ
ಅವನು ಅಲ್ಲಾಹನ ಹೊರತು ತಮಗೆ ಹಾನಿಯನ್ನಾಗಲೀ, ಲಾಭವನ್ನಾಗಲೀ ಮಾಡದ ವಸ್ತುಗಳನ್ನು ಕರೆದು ಬೇಡುತ್ತಾನೆ. ಇದುವೇ ಅತಿವಿದೂರದ ಮಾರ್ಗಭ್ರಷ್ಟತೆಯಾಗಿದೆ.
تەفسیرە عەرەبیەکان:
یَدْعُوْا لَمَنْ ضَرُّهٗۤ اَقْرَبُ مِنْ نَّفْعِهٖ ؕ— لَبِئْسَ الْمَوْلٰی وَلَبِئْسَ الْعَشِیْرُ ۟
ಯಾರ ಹಾನಿಯು ಅವರ ಲಾಭಕ್ಕಿಂತ ಹತ್ತಿರವಿದೆಯೋ ಅಂತಹವನನ್ನು ಅವನು ಕರೆದು ಬೇಡುತ್ತಾನೆ. ವಾಸ್ತವದಲ್ಲಿ ಅವನು ಅದೆಷ್ಟು ಕೆಟ್ಟ ರಕ್ಷಕನು! ಮತ್ತು ಅದೆಷ್ಟು ಕೆಟ್ಟ ಸಂಗಾತಿ!
تەفسیرە عەرەبیەکان:
اِنَّ اللّٰهَ یُدْخِلُ الَّذِیْنَ اٰمَنُوْا وَعَمِلُوا الصّٰلِحٰتِ جَنّٰتٍ تَجْرِیْ مِنْ تَحْتِهَا الْاَنْهٰرُ ؕ— اِنَّ اللّٰهَ یَفْعَلُ مَا یُرِیْدُ ۟
ಸತ್ಯವಿಶ್ವಾಸಿವಿರಿಸಿ, ಸತ್ಕರ್ಮಗಳನ್ನು ಕೈಗೊಂಡವರನ್ನು ನಿಶ್ಚಯವಾಗಿಯು ಅಲ್ಲಾಹನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಿಸುವನು. ಖಂಡಿತವಾಗಿಯೂ ಅಲ್ಲಾಹನು ತಾನಿಚ್ಛಿಸಿದ್ದನ್ನು ಮಾಡುತ್ತಾನೆ.
تەفسیرە عەرەبیەکان:
مَنْ كَانَ یَظُنُّ اَنْ لَّنْ یَّنْصُرَهُ اللّٰهُ فِی الدُّنْیَا وَالْاٰخِرَةِ فَلْیَمْدُدْ بِسَبَبٍ اِلَی السَّمَآءِ ثُمَّ لْیَقْطَعْ فَلْیَنْظُرْ هَلْ یُذْهِبَنَّ كَیْدُهٗ مَا یَغِیْظُ ۟
ಅಲ್ಲಾಹನು ತನ್ನ ಸಂದೇಶವಾಹಕರಿಗೆ ಇಹಪರ ಲೋಕದಲ್ಲಿ ಸಹಾಯ ಮಾಡಲಾರನೆಂದು ಯಾರು ಭಾವಿಸುತ್ತಿದ್ದನೋ ಅವನು ಒಂದು ಹಗ್ಗವನ್ನು ಎತ್ತರಕ್ಕೆ ಕಟ್ಟಿಕೊಂಡು (ತನ್ನ ಕೊರಳಿಗೆ ಉರುಳಾಗಿಸಿ ತನ್ನ ಕತ್ತನ್ನು ಹಿಸುಕಿಕೊಳ್ಳಲಿ) ಆ ಬಳಿಕ ಅವನು ತನ್ನ ಯೋಜನೆಗಳು ತನಗೆ ಅಸಹನೆ ಹುಟ್ಟಿಸುತ್ತಿದ್ದಂತಹ ವಿಚಾರವನ್ನು ನೀಗಿಸುವುದೇ ನೋಡಲಿ.
تەفسیرە عەرەبیەکان:
وَكَذٰلِكَ اَنْزَلْنٰهُ اٰیٰتٍۢ بَیِّنٰتٍ ۙ— وَّاَنَّ اللّٰهَ یَهْدِیْ مَنْ یُّرِیْدُ ۟
ಇದೇ ಪ್ರಕಾರ ನಾವು ಈ ಕುರ್‌ಆನನ್ನು ಸುಸ್ಪಷ್ಟವಾದ ಸೂಕ್ತಿಗಳೊಂದಿಗೆ ಅವತೀರ್ಣಗೊಳಿಸಿರುತ್ತೇವೆ. ನಿಶ್ಚಯವಾಗಿಯು ಅಲ್ಲಾಹನು ತಾನಿಚ್ಛಿಸಿದವರನ್ನು ಸನ್ಮಾರ್ಗದಲ್ಲಿ ಮುನ್ನಡೆಸುತ್ತಾನೆ.
تەفسیرە عەرەبیەکان:
اِنَّ الَّذِیْنَ اٰمَنُوْا وَالَّذِیْنَ هَادُوْا وَالصّٰبِـِٕیْنَ وَالنَّصٰرٰی وَالْمَجُوْسَ وَالَّذِیْنَ اَشْرَكُوْۤا ۖۗ— اِنَّ اللّٰهَ یَفْصِلُ بَیْنَهُمْ یَوْمَ الْقِیٰمَةِ ؕ— اِنَّ اللّٰهَ عَلٰی كُلِّ شَیْءٍ شَهِیْدٌ ۟
ಇದೇ ಪ್ರಕಾರ ನಾವು ಈ ಕುರ್‌ಆನನ್ನು ಸುಸ್ಪಷ್ಟವಾದ ಸೂಕ್ತಿಗಳೊಂದಿಗೆ ಅವತೀರ್ಣಗೊಳಿಸಿರುತ್ತೇವೆ. ನಿಶ್ಚಯವಾಗಿಯು ಅಲ್ಲಾಹನು ತಾನಿಚ್ಛಿಸಿದವರನ್ನು ಸನ್ಮಾರ್ಗದಲ್ಲಿ ಮುನ್ನಡೆಸುತ್ತಾನೆ.
تەفسیرە عەرەبیەکان:
اَلَمْ تَرَ اَنَّ اللّٰهَ یَسْجُدُ لَهٗ مَنْ فِی السَّمٰوٰتِ وَمَنْ فِی الْاَرْضِ وَالشَّمْسُ وَالْقَمَرُ وَالنُّجُوْمُ وَالْجِبَالُ وَالشَّجَرُ وَالدَّوَآبُّ وَكَثِیْرٌ مِّنَ النَّاسِ ؕ— وَكَثِیْرٌ حَقَّ عَلَیْهِ الْعَذَابُ ؕ— وَمَنْ یُّهِنِ اللّٰهُ فَمَا لَهٗ مِنْ مُّكْرِمٍ ؕ— اِنَّ اللّٰهَ یَفْعَلُ مَا یَشَآءُ ۟
ಭೂಮಿ ಆಕಾಶಗಳಲ್ಲಿರುವವರು, ಸೂರ್ಯ, ಚಂದ್ರ, ನಕ್ಷತ್ರಗಳು, ಪರ್ವತಗಳು, ಮರಗಳು, ಜೀವಿಗಳು ಮತ್ತು ಬಹುತೇಕ ಜನರು ಅಲ್ಲಾಹನ ಮುಂದೆ ಸಾಷ್ಟಾಂಗವೆರಗುತ್ತಿರುವುದನ್ನು ನೀವು ಕಾಣುವುದಿಲ್ಲವೇ? ಮತ್ತು ಅಲ್ಲಾಹನ ಶಿಕ್ಷೆಗೆ ಅರ್ಹರಾದವರು ಅನೇಕರಿದ್ದಾರೆ. ಅಲ್ಲಾಹನು ಯಾರನ್ನು ಅಪಮಾನಿಸುತ್ತಾನೋ ಅವನಿಗೆ ಗೌರವ ನೀಡುವವರಾರಿಲ್ಲ. ಖಂಡಿತವಾಗಿಯೂ ಅಲ್ಲಾಹನು ತಾನಿಚ್ಛಿಸಿದ್ದನ್ನು ಮಾಡುತ್ತಾನೆ.
تەفسیرە عەرەبیەکان:
هٰذٰنِ خَصْمٰنِ اخْتَصَمُوْا فِیْ رَبِّهِمْ ؗ— فَالَّذِیْنَ كَفَرُوْا قُطِّعَتْ لَهُمْ ثِیَابٌ مِّنْ نَّارٍ ؕ— یُصَبُّ مِنْ فَوْقِ رُءُوْسِهِمُ الْحَمِیْمُ ۟ۚ
ತಮ್ಮ ಪ್ರಭುವಿನ ವಿಚಾರದಲ್ಲಿ ವಾಗ್ವಾದ ನಡೆಸುತ್ತಿದ್ದ ಎರಡು ಪಂಗಡಗಳಿವು. ಆದ್ದರಿಂದ ಸತ್ಯ ನಿಷೇಧಿಸಿದವರಿಗೆ ಅಗ್ನಿಯ ವಸ್ತçವನ್ನು ತಯಾರಿಸಿಡಲಾಗಿದೆ. ಅವರ ತಲೆಗಳ ಮೇಲಿಂದ ತೀವ್ರವಾಗಿ ಕುದಿಯುವ ನೀರನ್ನು ಸುರಿಸಲಾಗವುದು.
تەفسیرە عەرەبیەکان:
یُصْهَرُ بِهٖ مَا فِیْ بُطُوْنِهِمْ وَالْجُلُوْدُ ۟ؕ
ಅದರಿಂದ ಅವರ ಹೊಟ್ಟೆಯೊಳಗಿರುವುದೆಲ್ಲವೂ ಮತ್ತು ಚರ್ಮಗಳೂ ಕರಗಿ ಬಿಡುವುದು.
تەفسیرە عەرەبیەکان:
وَلَهُمْ مَّقَامِعُ مِنْ حَدِیْدٍ ۟
ಮತ್ತು ಅವರ ದಂಡನೆಗಾಗಿ ಕಬ್ಬಿಣದ ಗದೆಗಳಿವೆ.
تەفسیرە عەرەبیەکان:
كُلَّمَاۤ اَرَادُوْۤا اَنْ یَّخْرُجُوْا مِنْهَا مِنْ غَمٍّ اُعِیْدُوْا فِیْهَا ۗ— وَذُوْقُوْا عَذَابَ الْحَرِیْقِ ۟۠
ಮತ್ತು ಅವರ ದಂಡನೆಗಾಗಿ ಕಬ್ಬಿಣದ ಗದೆಗಳಿವೆ.
تەفسیرە عەرەبیەکان:
اِنَّ اللّٰهَ یُدْخِلُ الَّذِیْنَ اٰمَنُوْا وَعَمِلُوا الصّٰلِحٰتِ جَنّٰتٍ تَجْرِیْ مِنْ تَحْتِهَا الْاَنْهٰرُ یُحَلَّوْنَ فِیْهَا مِنْ اَسَاوِرَ مِنْ ذَهَبٍ وَّلُؤْلُؤًا ؕ— وَلِبَاسُهُمْ فِیْهَا حَرِیْرٌ ۟
ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಂಡವರನ್ನು ಅಲ್ಲಾಹನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಿಸುವನು. ಅಲ್ಲಿ ಅವರಿಗೆ ಚಿನ್ನದ ಕಂಕಣಗಳನ್ನು, ಮುತ್ತುಗಳನ್ನು ತೊಡಿಸಲಾಗುವುದು ಮತ್ತು ಅಲ್ಲಿ ಅವರ ಉಡುಪು ರೇಶ್ಮೆಯದ್ದಾಗಿರುವುದು.
تەفسیرە عەرەبیەکان:
وَهُدُوْۤا اِلَی الطَّیِّبِ مِنَ الْقَوْلِ ۖۗۚ— وَهُدُوْۤا اِلٰی صِرَاطِ الْحَمِیْدِ ۟
ಐಹಿಕ ಜೀವನದಲ್ಲಿ ಅವರನ್ನು ಪವಿತ್ರ ವಚನದೆಡೆಗೆ (ಸಾಕ್ಷಿ ವಚನ) ಮುನ್ನಡೆಸಲಾಗಿದೆ ಮತ್ತು ಅವರನ್ನು ಸ್ತುತ್ಯರ್ಹನಾದ ಅಲ್ಲಾಹನ ಮಾರ್ಗದೆಡೆಗೆ ಮುನ್ನಡೆಸಲಾಗಿತ್ತು.
تەفسیرە عەرەبیەکان:
اِنَّ الَّذِیْنَ كَفَرُوْا وَیَصُدُّوْنَ عَنْ سَبِیْلِ اللّٰهِ وَالْمَسْجِدِ الْحَرَامِ الَّذِیْ جَعَلْنٰهُ لِلنَّاسِ سَوَآءَ ١لْعَاكِفُ فِیْهِ وَالْبَادِ ؕ— وَمَنْ یُّرِدْ فِیْهِ بِاِلْحَادٍ بِظُلْمٍ نُّذِقْهُ مِنْ عَذَابٍ اَلِیْمٍ ۟۠
ಯಾರು ಸತ್ಯನಿಷೇಧಿಸಿದರೊ ಮತ್ತು ಅಲ್ಲಾಹನ ಮಾರ್ಗದಿಂದ ತಡೆಯುತ್ತಾರೋ ಮತ್ತು ಅಲ್ಲಿನ ನಿವಾಸಿಗಳಿಗೂ ಹಾಗೂ ಹೊರ ನಾಡಿನವರಿಗೂ ನಾವು ಸಮಾನ ಹಕ್ಕುನ್ನು ನೀಡಿರುವ. ಮಸ್ಜಿದುಲ್ ಹರಾಮ್‌ನಿಂದ ತಡೆಯುತ್ತಾರೋ ಮತ್ತು ಅಲ್ಲಿ ಯಾರು ಅನ್ಯಾಯದೊಂದಿಗೆ ಅತಿರೇಕವನ್ನು ಬಯಸುತ್ತಾನೋ ಅವನಿಗೆ ನಾವು ವೇದನಾಜನಕ ಯಾತನೆಯನ್ನು ಸವಿಯುವಂತೆ ಮಾಡುವೆವು.
تەفسیرە عەرەبیەکان:
وَاِذْ بَوَّاْنَا لِاِبْرٰهِیْمَ مَكَانَ الْبَیْتِ اَنْ لَّا تُشْرِكْ بِیْ شَیْـًٔا وَّطَهِّرْ بَیْتِیَ لِلطَّآىِٕفِیْنَ وَالْقَآىِٕمِیْنَ وَالرُّكَّعِ السُّجُوْدِ ۟
ನಾವು ಇಬ್ರಾಹೀಮರಿಗೆ ಕಾಬಾಲಯದ ಸ್ಥಾನವನ್ನು ನಿಶ್ಚಯಿಸಿಕೊಟ್ಟ ಸಂದರ್ಭವನ್ನು ಸ್ಮರಿಸಿರಿ. ನೀವು ನನ್ನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ಮಾಡಬೇಡಿರಿ ಮತ್ತು ಪ್ರದಕ್ಷಿಣೆ ಹಾಕುವವರಿಗೆ, ನಮಾಝ್ ನಿರ್ವಹಿಸುವವರಿಗೆ, ಬಾಗುವವರಿಗೆ, ಸಾಷ್ಟಾಂಗ ಮಾಡುವವರಿಗೆ ನನ್ನ ಭವನವನ್ನು ಶುಚಿಯಾಗಿರಿಸಿರಿ.
تەفسیرە عەرەبیەکان:
وَاَذِّنْ فِی النَّاسِ بِالْحَجِّ یَاْتُوْكَ رِجَالًا وَّعَلٰی كُلِّ ضَامِرٍ یَّاْتِیْنَ مِنْ كُلِّ فَجٍّ عَمِیْقٍ ۟ۙ
ಹಜ್ಜ್ಗಾಗಿ ನೀವು ಜನರಿಗೆ ಕರೆ ನೀಡಿರಿ. ಅವರು ಪಾದಚಾರಿಗಳಾಗಿಯೂ, ಬಳಲಿದ ಒಂಟೆಗಳ ಮೇಲೂ ದೂರದ ಎಲ್ಲಾ ಮಾರ್ಗದಿಂದಲೂ ನಿಮ್ಮ ಬಳಿಗೆ ಬರುವರು.
تەفسیرە عەرەبیەکان:
لِّیَشْهَدُوْا مَنَافِعَ لَهُمْ وَیَذْكُرُوا اسْمَ اللّٰهِ فِیْۤ اَیَّامٍ مَّعْلُوْمٰتٍ عَلٰی مَا رَزَقَهُمْ مِّنْ بَهِیْمَةِ الْاَنْعَامِ ۚ— فَكُلُوْا مِنْهَا وَاَطْعِمُوا الْبَآىِٕسَ الْفَقِیْرَ ۟ؗ
ಅವರು ತಮ್ಮ ಪ್ರಯೋಜನಗಳನ್ನು ಪಡೆಯಲಿಕ್ಕಾಗಿ ಬರಲಿ ಮತ್ತು ಅವರಿಗೆ ದಯಪಾಲಿಸಿದ ಜಾನುವಾರುಗಳ ಮೇಲೆ ನಿರ್ಧಿಷ್ಟ ದಿನಗಳಲ್ಲಿ ಅಲ್ಲಾಹನ ನಾಮವನ್ನುಚ್ಚರಿಸಲಿ. ಅದರಿಂದ ನೀವೂ ತಿನ್ನಿರಿ ಹಾಗೂ ಕಡುಬಡವರಿಗೂ ತಿನ್ನಿಸಿರಿ.
تەفسیرە عەرەبیەکان:
ثُمَّ لْیَقْضُوْا تَفَثَهُمْ وَلْیُوْفُوْا نُذُوْرَهُمْ وَلْیَطَّوَّفُوْا بِالْبَیْتِ الْعَتِیْقِ ۟
ತರುವಾಯ ಅವರು ತಮ್ಮ ಮಾಲಿನ್ಯಗಳನ್ನು ನೀಗಿಸಲಿ ಮತ್ತು ತಮ್ಮ ಪುರಾತನ ಭವನ ಕಾಬಾದ ಪ್ರದಕ್ಷಿಣೆ ಮಾಡಲಿ.
تەفسیرە عەرەبیەکان:
ذٰلِكَ ۗ— وَمَنْ یُّعَظِّمْ حُرُمٰتِ اللّٰهِ فَهُوَ خَیْرٌ لَّهٗ عِنْدَ رَبِّهٖ ؕ— وَاُحِلَّتْ لَكُمُ الْاَنْعَامُ اِلَّا مَا یُتْلٰی عَلَیْكُمْ فَاجْتَنِبُوا الرِّجْسَ مِنَ الْاَوْثَانِ وَاجْتَنِبُوْا قَوْلَ الزُّوْرِ ۟ۙ
ಇದು ಹಜ್ಜ್ನ ವಿಷಯವಾಗಿದೆ ಮತ್ತು ಯಾರು ಅಲ್ಲಾಹನು ಪಾವನಗೊಳಿಸಿದವುಗಳನ್ನು ಗೌರವಿಸುವನೋ ಅವನ ಪಾಲಿಗೆ ಅವನ ಪ್ರಭುವಿನ ಬಳಿ ಅತ್ಯುತ್ತಮವಾದುದು ಇದೆ ಮತ್ತು ಜಾನುವಾರುಗಳನ್ನು ನಿಮಗೆ ಧರ್ಮಸಮ್ಮತಗೊಳಿಸಲಾಗಿದೆ ಆದರೆ ನಿಮಗೆ ಓದಿ ಹೇಳಲಾದವುಗಳ ಹೊರತು ಹಾಗೆಯೇ ನೀವು ವಿಗ್ರಹಗಳ ಮಾಲಿನ್ಯದಿಂದ ದೂರವಿರಿ ಮತ್ತು ಸುಳ್ಳು ಮಾತನ್ನು ತೊರೆದು ಬಿಡರಿ.
تەفسیرە عەرەبیەکان:
حُنَفَآءَ لِلّٰهِ غَیْرَ مُشْرِكِیْنَ بِهٖ ؕ— وَمَنْ یُّشْرِكْ بِاللّٰهِ فَكَاَنَّمَا خَرَّ مِنَ السَّمَآءِ فَتَخْطَفُهُ الطَّیْرُ اَوْ تَهْوِیْ بِهِ الرِّیْحُ فِیْ مَكَانٍ سَحِیْقٍ ۟
ಅಲ್ಲಾಹನಿಗೆ ಏಕನಿಷ್ಠರಾಗಿ ಅವನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ಮಾಡದಿರಿ. ಅಲ್ಲಾಹನೊಂದಿಗೆ ಸಹಭಬಾಗಿಯನ್ನು ನಿಶ್ಚಯಿಸುವವನು ಆಕಾಶದಿಂದ ಕೆಳಗೆ ಬಿದ್ದಂತಿರುವನು. ಅವನನ್ನು ಪಕ್ಷಿಗಳು ಹೆಕ್ಕಿಕೊಂಡು ಹೋಗುವುವು. ಇಲ್ಲವೇ ಬೀಸುಗಾಳಿಯು ಅವನನ್ನು ದೂರ ಸ್ಥಳಕ್ಕೆ ಎಸೆದು ಬಿಡುವುದು.
تەفسیرە عەرەبیەکان:
ذٰلِكَ ۗ— وَمَنْ یُّعَظِّمْ شَعَآىِٕرَ اللّٰهِ فَاِنَّهَا مِنْ تَقْوَی الْقُلُوْبِ ۟
ಇದು ವಾಸ್ತವಿಕತೆಯಾಗಿದೆ. ಇನ್ನು ಯಾರು ಅಲ್ಲಾಹನ ಲಾಂಛನಗಳಿಗೆ ಗೌರವ ನೀಡುತ್ತಾನೋ ಖಂಡಿತವಾಗಿಯೂ ಅದು ಅವನ ಹೃದಯದ ಭಯಭಕ್ತಿಯಿಂದಾಗಿರುತ್ತದೆ.
تەفسیرە عەرەبیەکان:
لَكُمْ فِیْهَا مَنَافِعُ اِلٰۤی اَجَلٍ مُّسَمًّی ثُمَّ مَحِلُّهَاۤ اِلَی الْبَیْتِ الْعَتِیْقِ ۟۠
ನಿಮಗೆ ಆ ಜಾನುವಾರುಗಳಲ್ಲಿ ಒಂದು ನಿಶ್ಚಿತಾವಧಿಯವರೆಗೆ ಪ್ರಯೋಜನಗಳಿವೆ. ಅನಂತರ ಅವುಗಳ ಬಲಿದಾನದ ಸ್ಥಳವು ಪುರಾತನ ಭವನವಾಗಿದೆ.
تەفسیرە عەرەبیەکان:
وَلِكُلِّ اُمَّةٍ جَعَلْنَا مَنْسَكًا لِّیَذْكُرُوا اسْمَ اللّٰهِ عَلٰی مَا رَزَقَهُمْ مِّنْ بَهِیْمَةِ الْاَنْعَامِ ؕ— فَاِلٰهُكُمْ اِلٰهٌ وَّاحِدٌ فَلَهٗۤ اَسْلِمُوْا ؕ— وَبَشِّرِ الْمُخْبِتِیْنَ ۟ۙ
ಪ್ರತಿಯೊಂದು ಜನಾಂಗಕ್ಕೂ ನಾವು ಬಲಿ ಕರ್ಮವನ್ನು ನಿಶ್ಚಯಿಸಿಕೊಟ್ಟಿರುತ್ತೇವೆ. ಇದು ಅವರು ತಮಗೆ ಅಲ್ಲಾಹನು ದಯಪಾಲಿಸಿದ ಜಾನುವಾರುಗಳ ಮೇಲೆ ಅಲ್ಲಾಹನ ನಾಮವನ್ನು ಉಚ್ಛರಿಸಲೆಂದಾಗಿದೆ. ನಿಮ್ಮೆಲ್ಲರ ಆರಾಧ್ಯನು ಏಕೈಕ ಆರಾಧ್ಯನಾಗಿದ್ದಾನೆ. ಆದ್ದರಿಂದ ನೀವು ಅವನಿಗೇ ವಿಧೇಯರಾಗಿರಿ ಮತ್ತು ದೈನ್ಯರಾದವರಿಗೆ (ಓ ಪೈಗಂಬರರೇ) ನೀವು ಶುಭವಾರ್ತೆಯನ್ನೀಡಿರಿ.
تەفسیرە عەرەبیەکان:
الَّذِیْنَ اِذَا ذُكِرَ اللّٰهُ وَجِلَتْ قُلُوْبُهُمْ وَالصّٰبِرِیْنَ عَلٰی مَاۤ اَصَابَهُمْ وَالْمُقِیْمِی الصَّلٰوةِ ۙ— وَمِمَّا رَزَقْنٰهُمْ یُنْفِقُوْنَ ۟
ಅವರ ಮುಂದೆ ಅಲ್ಲಾಹನ ಸ್ಮರಣೆಯನ್ನು ಮಾಡಲಾದಾಗ ಅವರ ಹೃದಯಗಳು ಕಂಪಿಸುತ್ತವೆ. ಮತ್ತು ಅವರಿಗೆ ಬಾಧಿಸಿದ ಸಂಕಷ್ಟಗಳ ಮೇಲೆ ಸಹನೆ ವಹಿಸುತ್ತಾರೆ ಮತ್ತು ನಮಾಝನ್ನು ಸಂಸ್ಥಾಪಿಸುತ್ತಾರೆ. ಹಾಗೂ ನಾವು ಅವರಿಗೆ ನೀಡಿದ ಸಂಪತ್ತಿನಿAದ ಖರ್ಚು ಮಾಡುವವರೂ ಆಗಿದ್ದಾರೆ.
تەفسیرە عەرەبیەکان:
وَالْبُدْنَ جَعَلْنٰهَا لَكُمْ مِّنْ شَعَآىِٕرِ اللّٰهِ لَكُمْ فِیْهَا خَیْرٌ ۖۗ— فَاذْكُرُوا اسْمَ اللّٰهِ عَلَیْهَا صَوَآفَّ ۚ— فَاِذَا وَجَبَتْ جُنُوْبُهَا فَكُلُوْا مِنْهَا وَاَطْعِمُوا الْقَانِعَ وَالْمُعْتَرَّ ؕ— كَذٰلِكَ سَخَّرْنٰهَا لَكُمْ لَعَلَّكُمْ تَشْكُرُوْنَ ۟
ಬಲಿದಾನದ ಒಂಟೆಗಳನ್ನು ನಾವು ನಿಮಗೆ ಅಲ್ಲಾಹನ ಲಾಂಛನಗಳಾಗಿ ಮಾಡಿರುತ್ತೇವೆ. ಅವುಗಳಲ್ಲಿ ನಿಮಗೆ ಒಳಿತಿದೆ. ಆದ್ದರಿಂದ ನೀವು ಅವುಗಳನ್ನು ಸಾಲಾಗಿ ನಿಲ್ಲಿಸಿ ಅವುಗಳ ಮೇಲೆ ಅಲ್ಲಾಹನ ನಾಮವನ್ನುಚ್ಛರಿಸಿರಿ ಹಾಗೆಯೇ ಅವುಗಳ ಪಾರ್ಶ್ವಗಳು ನೆಲಕ್ಕೊರಗಿದರೆ ಅವುಗಳನ್ನು ತಿನ್ನಿರಿ ಮತ್ತು ಯಾಚಿಸುವವನಿಗೂ, ಯಾಚಿಸದ ಬಡವನಿಗೂ, ತಿನ್ನಿಸಿರಿ.ಇದೇ ಪ್ರಕಾರ ನಾವು ಜಾನುವಾರುಗಳನ್ನು ನಿಮಗೆ ಅಧೀನಗೊಳಿಸಿರುತ್ತೇವೆ. ಇದು ನೀವು ಕೃತಜ್ಞತೆ ತೋರಲೆಂದಾಗಿದೆ.
تەفسیرە عەرەبیەکان:
لَنْ یَّنَالَ اللّٰهَ لُحُوْمُهَا وَلَا دِمَآؤُهَا وَلٰكِنْ یَّنَالُهُ التَّقْوٰی مِنْكُمْ ؕ— كَذٰلِكَ سَخَّرَهَا لَكُمْ لِتُكَبِّرُوا اللّٰهَ عَلٰی مَا هَدٰىكُمْ ؕ— وَبَشِّرِ الْمُحْسِنِیْنَ ۟
ಅವುಗಳ ಮಾಂಸವಾಗಲೀ, ರಕ್ತವಾಗಲೀ ಅಲ್ಲಾಹನಿಗೆ ತಲುಪುವುದಿಲ್ಲ. ಆದರೆ ಅವನಿಗೆ ನಿಮ್ಮ ಹೃದಯದ ಭಯಭಕ್ತಿಯು ತಲುಪುವುದು. ಇದೇ ಪ್ರಕಾರ ಅಲ್ಲಾಹನು ಆ ಜಾನುವಾರುಗಳನ್ನು ನಿಮಗೆ ಅಧೀನಗೊಳಿಸಿರುತ್ತಾನೆ. ಇದು ನಿಮ್ಮನ್ನು ಅವನು ಸನ್ಮಾರ್ಗದಲ್ಲಿ ಮುನ್ನಡೆಸಿರುವುದಕ್ಕೋಸ್ಕರ ನೀವು ಅವನ ಮಹಾನತೆಯನ್ನು ಕೊಂಡಾಡಲೆAದಾಗಿದೆ ಮತ್ತು ಒಳಿತಿನ ಪಾಲಕರಿಗೆ ನೀವು ಸುವಾರ್ತೆಯನ್ನು ನೀಡಿರಿ.
تەفسیرە عەرەبیەکان:
اِنَّ اللّٰهَ یُدٰفِعُ عَنِ الَّذِیْنَ اٰمَنُوْا ؕ— اِنَّ اللّٰهَ لَا یُحِبُّ كُلَّ خَوَّانٍ كَفُوْرٍ ۟۠
ನಿಶ್ಚಯವಾಗಿಯು ಅಲ್ಲಾಹನು ಸತ್ಯವಿಶ್ವಾಸಿಗಳನ್ನು ಶತ್ರುಗಳಿಂದ ರಕ್ಷಿಸುತ್ತಾನೆ ಮತ್ತು ವಿಶ್ವಾಸಘಾತುಕ ಅವಿಶ್ವಾಸಿಯನ್ನು ಅಲ್ಲಾಹನು ಎಂದಿಗೂ ಮೆಚ್ಚಲಾರನು.
تەفسیرە عەرەبیەکان:
اُذِنَ لِلَّذِیْنَ یُقٰتَلُوْنَ بِاَنَّهُمْ ظُلِمُوْا ؕ— وَاِنَّ اللّٰهَ عَلٰی نَصْرِهِمْ لَقَدِیْرُ ۟ۙ
ಯಾವ ಸತ್ಯವಿಶ್ವಾಸಿಗಳ ವಿರುದ್ಧ ಯುದ್ಧ ಮಾಡಲಾಗುತ್ತಿದೆಯೋ ಅವರಿಗೂ ಪ್ರತಿ ಯುದ್ಧಕ್ಕೆ ಅನುಮತಿ ನೀಡಲಾಗಿದೆ. ಏಕೆಂದರೆ ಅವರು ಮರ್ದಿತರಾಗಿದ್ದಾರೆ. ನಿಸ್ಸಂಶಯವಾಗಿಯು ಅಲ್ಲಾಹನು ಅವರ ಸಹಾಯಕ್ಕೆ ಸಮರ್ಥನಿರುವನು.
تەفسیرە عەرەبیەکان:
١لَّذِیْنَ اُخْرِجُوْا مِنْ دِیَارِهِمْ بِغَیْرِ حَقٍّ اِلَّاۤ اَنْ یَّقُوْلُوْا رَبُّنَا اللّٰهُ ؕ— وَلَوْلَا دَفْعُ اللّٰهِ النَّاسَ بَعْضَهُمْ بِبَعْضٍ لَّهُدِّمَتْ صَوَامِعُ وَبِیَعٌ وَّصَلَوٰتٌ وَّمَسٰجِدُ یُذْكَرُ فِیْهَا اسْمُ اللّٰهِ كَثِیْرًا ؕ— وَلَیَنْصُرَنَّ اللّٰهُ مَنْ یَّنْصُرُهٗ ؕ— اِنَّ اللّٰهَ لَقَوِیٌّ عَزِیْزٌ ۟
ಯಾವ ಸತ್ಯವಿಶ್ವಾಸಿಗಳ ವಿರುದ್ಧ ಯುದ್ಧ ಮಾಡಲಾಗುತ್ತಿದೆಯೋ ಅವರಿಗೂ ಪ್ರತಿ ಯುದ್ಧಕ್ಕೆ ಅನುಮತಿ ನೀಡಲಾಗಿದೆ. ಏಕೆಂದರೆ ಅವರು ಮರ್ದಿತರಾಗಿದ್ದಾರೆ. ನಿಸ್ಸಂಶಯವಾಗಿಯು ಅಲ್ಲಾಹನು ಅವರ ಸಹಾಯಕ್ಕೆ ಸಮರ್ಥನಿರುವನು.
تەفسیرە عەرەبیەکان:
اَلَّذِیْنَ اِنْ مَّكَّنّٰهُمْ فِی الْاَرْضِ اَقَامُوا الصَّلٰوةَ وَاٰتَوُا الزَّكٰوةَ وَاَمَرُوْا بِالْمَعْرُوْفِ وَنَهَوْا عَنِ الْمُنْكَرِ ؕ— وَلِلّٰهِ عَاقِبَةُ الْاُمُوْرِ ۟
ಅವರಿಗೆ ನಾವು ಭೂಮಿಯಲ್ಲಿ ಅಧಿಕಾರವನ್ನು ಕೊಟ್ಟರೆ ಅವರು ನಮಾಝ್ ಸಂಸ್ಥಾಪಿಸುತ್ತಾರೆ ಝಕಾತ್ ನೀಡುತ್ತಾರೆ ಒಳಿತನ ಆದೇಶ ನೀಡುತ್ತಾರೆ ಮತ್ತು ಕೆಡುಕಿನಿಂದ ತಡೆಯುತ್ತಾರೆ. ಸರ್ವ ಕಾರ್ಯಗಳ ಅಂತಿಮ ಪರಿಣಾಮವು ಅಲ್ಲಾಹನ ನಿಯಂತ್ರಣದಲ್ಲಿದೆ.
تەفسیرە عەرەبیەکان:
وَاِنْ یُّكَذِّبُوْكَ فَقَدْ كَذَّبَتْ قَبْلَهُمْ قَوْمُ نُوْحٍ وَّعَادٌ وَّثَمُوْدُ ۟ۙ
(ಓ ಪೈಗಂಬರರೇ) ಇವರು ನಿಮ್ಮನ್ನು ಸುಳ್ಳಾಗಿಸುವುದಾದರೆ ಇವರಿಗಿಂತ ಮೊದಲು ನೂಹರವರ ಜನಾಂಗವು, ಆದ್ ಮತ್ತು ಸಮೂದ್ ಜನಾಂಗವೂ ಸುಳ್ಳಾಗಿಸಿದೆ.
تەفسیرە عەرەبیەکان:
وَقَوْمُ اِبْرٰهِیْمَ وَقَوْمُ لُوْطٍ ۟ۙ
ಮತ್ತು ಇಬ್ರಾಹೀಮರವರ ಜನಾಂಗವೂ, ಲೂತರವರ ಜನಾಂಗವೂ ಸಹ
تەفسیرە عەرەبیەکان:
وَّاَصْحٰبُ مَدْیَنَ ۚ— وَكُذِّبَ مُوْسٰی فَاَمْلَیْتُ لِلْكٰفِرِیْنَ ثُمَّ اَخَذْتُهُمْ ۚ— فَكَیْفَ كَانَ نَكِیْرِ ۟
ಮತ್ತು ಮದ್‌ಯನ್‌ನ ಜನರು ಸಹ ತಮ್ಮ ಪೈಗಂಬರರನ್ನು ಸುಳ್ಳಾಗಿಸಿದ್ದರು. ಮೂಸಾರವರೂ ಸಹ ಸುಳ್ಳಾಗಿಸಲ್ಪಟ್ಟರು. ಆಗ ನಾನು ಸತ್ಯನಿಷೇಧಿಗಳಿಗೆ ಒಂದಿಷ್ಟು ಅವಕಾಶವನ್ನು ನೀಡಿ, ನಂತರ ಅವರನ್ನು ಹಿಡಿದುಬಿಟ್ಟೆನು. ಆಮೇಲೆ ನನ್ನ ಶಿಕ್ಷೆಯು ಹೇಗಿತ್ತು ಎಂಬದನ್ನು ನೋಡಿರಿ.
تەفسیرە عەرەبیەکان:
فَكَاَیِّنْ مِّنْ قَرْیَةٍ اَهْلَكْنٰهَا وَهِیَ ظَالِمَةٌ فَهِیَ خَاوِیَةٌ عَلٰی عُرُوْشِهَا ؗ— وَبِئْرٍ مُّعَطَّلَةٍ وَّقَصْرٍ مَّشِیْدٍ ۟
ಅದೆಷ್ಟೋ ದೌರ್ಜನ್ಯವೆಸಗುತ್ತಿದ್ದ ನಾಡುಗಳನ್ನು ನಾವು ನಾಶ ಮಾಡಿದೆವು ಅವು ತಮ್ಮ ಛಾವಣಿಗಳ ಮೇಲೆ ಬುಡಮೇಲಾಗಿ ಬಿದ್ದಿವೆ ಮತ್ತು ಎಷ್ಟೋ ಬಾವಿಗಳು ಹಾಗೂ ಅದೆಷ್ಟೋ ಸುಭದ್ರ ಅರಮನೆಗಳೂ ಪಾಳು ಬಿದ್ದಿವೆ.
تەفسیرە عەرەبیەکان:
اَفَلَمْ یَسِیْرُوْا فِی الْاَرْضِ فَتَكُوْنَ لَهُمْ قُلُوْبٌ یَّعْقِلُوْنَ بِهَاۤ اَوْ اٰذَانٌ یَّسْمَعُوْنَ بِهَا ۚ— فَاِنَّهَا لَا تَعْمَی الْاَبْصَارُ وَلٰكِنْ تَعْمَی الْقُلُوْبُ الَّتِیْ فِی الصُّدُوْرِ ۟
ಅವರ ಹೃದಯಗಳು ಈ ವಿಚಾರಗಳನ್ನು ಗ್ರಹಿಸಿಕೊಳ್ಳುವಂತಾಗಲು ಅಥವಾ ಕಿವಿಗಳು ಕೇಳಿಸಿಕೊಳ್ಳುವಂತಾಗಲು ಅವರು ಭೂಮಿಯಲ್ಲಿ ಸಂಚರಿಸುವುದಿಲ್ಲವೇ? ಕೇವಲ ದೃಷ್ಟಿಗಳು ಮಾತ್ರ ಕುರುಡಾಗವುದಿಲ್ಲ. ಆದರೆ ಎದೆಗಳೊಳಗೆ ಇರುವಂತಹ ಹೃದಯಗಳು ಸಹ ಕುರುಡಾಗುತ್ತವೆ.
تەفسیرە عەرەبیەکان:
وَیَسْتَعْجِلُوْنَكَ بِالْعَذَابِ وَلَنْ یُّخْلِفَ اللّٰهُ وَعْدَهٗ ؕ— وَاِنَّ یَوْمًا عِنْدَ رَبِّكَ كَاَلْفِ سَنَةٍ مِّمَّا تَعُدُّوْنَ ۟
ಅವರು ಯಾತನೆಗೆ ಆತುರಪಟ್ಟುಕೊಳ್ಳುತ್ತಿದ್ದಾರೆ. ಆದರೆ ಅಲ್ಲಾಹನು ತನ್ನ ವಾಗ್ದನವನ್ನೆಂದೂ ಉಲ್ಲಂಘಿಸುವುದಿಲ್ಲ. ವಾಸ್ತವದಲ್ಲಿ ನಿಮ್ಮ ಪ್ರಭುವಿನ ಬಳಿ ಒಂದು ದಿನವೆಂದರೆ ನೀವು ಎಣಿಸುವ ಒಂದು ಸಾವಿರ ವರ್ಷಗಳದ್ದಾಗಿರುತ್ತದೆ.
تەفسیرە عەرەبیەکان:
وَكَاَیِّنْ مِّنْ قَرْیَةٍ اَمْلَیْتُ لَهَا وَهِیَ ظَالِمَةٌ ثُمَّ اَخَذْتُهَا ۚ— وَاِلَیَّ الْمَصِیْرُ ۟۠
ಅದೆಷ್ಟೋ ಅಕ್ರಮಿ ನಾಡುಗಳಿಗೆ ನಾನು ಕಾಲಾವಕಾಶವನ್ನು ನೀಡಿದೆನು. ಅನಂತರ ನಾನು ಅವರನ್ನು ಹಿಡಿದುಬಿಟ್ಟೆನು ಮತ್ತು ನನ್ನೆಡೆಗೇ ಮರಳುವಿಕೆಯಿರುವುದು.
تەفسیرە عەرەبیەکان:
قُلْ یٰۤاَیُّهَا النَّاسُ اِنَّمَاۤ اَنَا لَكُمْ نَذِیْرٌ مُّبِیْنٌ ۟ۚ
(ಓ ಪೈಗಂಬರರೇ) ಹೇಳಿರಿ: ಓ ಜನರೇ, ನಾನು ನಿಮಗೆ ಬಹಿರಂಗವಾಗಿ ಮುನ್ನೆಚ್ಚರಿಕೆ ನೀಡುವವನು ಮಾತ್ರವಾಗಿದ್ದೇನೆ.
تەفسیرە عەرەبیەکان:
فَالَّذِیْنَ اٰمَنُوْا وَعَمِلُوا الصّٰلِحٰتِ لَهُمْ مَّغْفِرَةٌ وَّرِزْقٌ كَرِیْمٌ ۟
ಯಾರು ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಂಡಿರುವರೋ ಅವರಿಗೆ ಕ್ಷಮೆಯೂ, ಗೌರವಪೂರ್ಣ ಜೀವನಾಧಾರವು ಇರುವುದು.
تەفسیرە عەرەبیەکان:
وَالَّذِیْنَ سَعَوْا فِیْۤ اٰیٰتِنَا مُعٰجِزِیْنَ اُولٰٓىِٕكَ اَصْحٰبُ الْجَحِیْمِ ۟
ನಮ್ಮ ದೃಷ್ಟಾಂತಗಳನ್ನು ಸೋಲಿಸುವ ಪ್ರಯತ್ನದಲ್ಲಿರುವವರು ನರಕವಾಸಿಗಳಾಗಿರುವರು.
تەفسیرە عەرەبیەکان:
وَمَاۤ اَرْسَلْنَا مِنْ قَبْلِكَ مِنْ رَّسُوْلٍ وَّلَا نَبِیٍّ اِلَّاۤ اِذَا تَمَنّٰۤی اَلْقَی الشَّیْطٰنُ فِیْۤ اُمْنِیَّتِهٖ ۚ— فَیَنْسَخُ اللّٰهُ مَا یُلْقِی الشَّیْطٰنُ ثُمَّ یُحْكِمُ اللّٰهُ اٰیٰتِهٖ ؕ— وَاللّٰهُ عَلِیْمٌ حَكِیْمٌ ۟ۙ
ನಾವು ನಿಮಗಿಂತ ಮೊದಲು ಯಾವೊಬ್ಬ ಸಂದೇಶವಾಹಕನನ್ನಾಗಲಿ, ಪ್ರವಾದಿಯನ್ನಾಗಲೀ ಕಳುಹಿಸಿರುತ್ತೇವೆಯೋ ಅವನು ಏನೇ ಉದ್ದೇಶಿಸಿದರೂ ಅವನ ಉದ್ದೇಶ ಮಾರ್ಗದಲ್ಲಿ ಶೈತಾನನು ದುಷ್ಪೆçÃರಣೆಗಳನ್ನು ಹಾಕಿದನು. ಆದರೆ ಅಲ್ಲಾಹನು ಶೈತಾನನ ದುಷ್ಪೆçÃರಣೆಗಳನ್ನು ನೀಗಿಸುತ್ತಾನೆ. ಮತ್ತು ತನ್ನ ವಚನಗಳನ್ನು ಸದೃಢಗೊಳಿಸುತ್ತಾನೆ. ಅಲ್ಲಾಹನು ಸರ್ವಜ್ಞನು, ಯುಕ್ತಿಪೂರ್ಣನು ಆಗಿರುವನು.
تەفسیرە عەرەبیەکان:
لِّیَجْعَلَ مَا یُلْقِی الشَّیْطٰنُ فِتْنَةً لِّلَّذِیْنَ فِیْ قُلُوْبِهِمْ مَّرَضٌ وَّالْقَاسِیَةِ قُلُوْبُهُمْ ؕ— وَاِنَّ الظّٰلِمِیْنَ لَفِیْ شِقَاقٍ بَعِیْدٍ ۟ۙ
ಇದೇಕೆಂದರೆ ಅಲ್ಲಾಹನು ಶೈತಾನನ ದುಷ್ಪೆçÃರಣೆಗಳನ್ನು ಹೃದಯಗಳಲ್ಲಿ ರೋಗವಿರುವವರಿಗೂ ಮತ್ತು ಕಠಿಣ ಹೃದಯವಂತರಿಗೂ ಪರೀಕ್ಷಾ ಸಾಧನವನ್ನಾಗಿ ಮಾಡಲೆಂದಾಗಿದೆ ಮತ್ತು ನಿಸ್ಸಂದೇಹವಾಗಿಯೂ ಅಕ್ರಮಿಗಳು ವಿರೋಧದಲ್ಲಿ ಬಹುದೂರ ಸರಿದಿದ್ದಾರೆ.
تەفسیرە عەرەبیەکان:
وَّلِیَعْلَمَ الَّذِیْنَ اُوْتُوا الْعِلْمَ اَنَّهُ الْحَقُّ مِنْ رَّبِّكَ فَیُؤْمِنُوْا بِهٖ فَتُخْبِتَ لَهٗ قُلُوْبُهُمْ ؕ— وَاِنَّ اللّٰهَ لَهَادِ الَّذِیْنَ اٰمَنُوْۤا اِلٰی صِرَاطٍ مُّسْتَقِیْمٍ ۟
ಮತ್ತು ಜ್ಞಾನ ಪಡೆದವರು ಇದು ನಿಮ್ಮ ಪ್ರಭುವಿನ ಕಡೆಯ ಸತ್ಯವೇ ಆಗಿದೆಯೆಂದು ದೃಢವಾಗಿ ತಿಳಿಯಲೆಂದಾಗಿದೆ. ಆ ಬಳಿಕ ಅವರು ಅದರಲ್ಲಿ ವಿಶ್ವಾಸವಿಡಲಿ ಮತ್ತು ಅವರ ಹೃದಯಗಳು ಅದಕ್ಕೆ ಶರಣಾಗಲಿ. ನಿಶ್ಚಯವಾಗಿಯು ಅಲ್ಲಾಹನು ಸತ್ಯವಿಶ್ವಾಸವಿರಿಸಿದವರಿಗೆ ಋಜುವಾದ ಮಾರ್ಗದೆಡೆಗೆ ಮುನ್ನಡೆಸುತ್ತಾನೆ.
تەفسیرە عەرەبیەکان:
وَلَا یَزَالُ الَّذِیْنَ كَفَرُوْا فِیْ مِرْیَةٍ مِّنْهُ حَتّٰی تَاْتِیَهُمُ السَّاعَةُ بَغْتَةً اَوْ یَاْتِیَهُمْ عَذَابُ یَوْمٍ عَقِیْمٍ ۟
ಸತ್ಯನಿಷೇಧಿಸಿದವರು ದಿವ್ಯವಾಣಿಯ ಕುರಿತು ಸದಾ ಸಂದೇಹದಲ್ಲೇ ಇರುವರು. ಕೊನೆಗೆ ಅವರ ಮೇಲೆ ಅಂತ್ಯ ಗಳಿಗೆಯು ಹಠಾತ್ತನೆ ಬಂದುಬಿಡುವುದು ಅಥವಾ ಅಶುಭದಿನದ ಯಾತನೆಯು ಅವರ ಬಳಿ ಬಂದು ಬಿಡುವುದು.
تەفسیرە عەرەبیەکان:
اَلْمُلْكُ یَوْمَىِٕذٍ لِّلّٰهِ ؕ— یَحْكُمُ بَیْنَهُمْ ؕ— فَالَّذِیْنَ اٰمَنُوْا وَعَمِلُوا الصّٰلِحٰتِ فِیْ جَنّٰتِ النَّعِیْمِ ۟
ಆ ದಿನ ಕೇವಲ ಅಲ್ಲಾಹನ ಅಧಿಪತ್ಯವಿರುವುದು. ಅವನೇ ಅವರ ನಡುವೆ ತೀರ್ಪು ನೀಡುವನು.ಸತ್ಯವಿಶ್ವಾಸವಿರಿಸಿದವರು, ಸತ್ಕರ್ಮಗಳನ್ನು ಕೈಗೊಂಡವರು ಅನುಗ್ರಹಪೂರ್ಣ ಸ್ವಗೋದ್ಯಾನಗಳಲ್ಲಿರುವರು.
تەفسیرە عەرەبیەکان:
وَالَّذِیْنَ كَفَرُوْا وَكَذَّبُوْا بِاٰیٰتِنَا فَاُولٰٓىِٕكَ لَهُمْ عَذَابٌ مُّهِیْنٌ ۟۠
ಇನ್ನು ಯಾರು ಸತ್ಯನಿಷೇಧಿಸಿ ನಮ್ಮ ಸೂಕ್ತಿಗಳನ್ನು ಸುಳ್ಳಾಗಿಸಿದರೋ ಅವರಿಗೆ ಅಪಮಾನಕರ ಶಿಕ್ಷೆಯಿರುವುದು.
تەفسیرە عەرەبیەکان:
وَالَّذِیْنَ هَاجَرُوْا فِیْ سَبِیْلِ اللّٰهِ ثُمَّ قُتِلُوْۤا اَوْ مَاتُوْا لَیَرْزُقَنَّهُمُ اللّٰهُ رِزْقًا حَسَنًا ؕ— وَاِنَّ اللّٰهَ لَهُوَ خَیْرُ الرّٰزِقِیْنَ ۟
ಯಾರು ಅಲ್ಲಾಹನ ಮಾರ್ಗದಲ್ಲಿ ವಲಸೆ ಹೋಗಿ ಅನಂತರ ಕೊಲ್ಲಲ್ಪಟ್ಟರೋ ಅಥವ ಸಹಜ ಮರಣ ಹೊಂದಿದರೋ ಅವರಿಗೆ ಅಲ್ಲಾಹನು ಅತ್ಯುತ್ತಮವಾಗಿರುವ ಜೀವನಾಧಾರವನ್ನು ದಯಪಾಲಿಸುತ್ತಾನೆ. ಮತ್ತು ನಿಸ್ಸಂಶಯವಾಗಿಯೂ ಅವನು ಜೀವನಾಧಾರ ನೀಡುವವರಲ್ಲಿ ಅತ್ಯುತ್ತಮನಾಗಿರುವನು.
تەفسیرە عەرەبیەکان:
لَیُدْخِلَنَّهُمْ مُّدْخَلًا یَّرْضَوْنَهٗ ؕ— وَاِنَّ اللّٰهَ لَعَلِیْمٌ حَلِیْمٌ ۟
ಅವರು ಸಂತುಷ್ಟರಾಗುವAತಹ ಸ್ಥಳಕ್ಕೆ ಅವರನ್ನು ತಲುಪಿಸುವನು. ನಿಸ್ಸಂದೇಹವಾಗಿಯೂ ಅಲ್ಲಾಹನು ಮಹಾಜ್ಞಾನಿಯೂ ಹಾಗೂ ಸಹನಾಶೀಲನಾಗಿರುವನು.
تەفسیرە عەرەبیەکان:
ذٰلِكَ ۚ— وَمَنْ عَاقَبَ بِمِثْلِ مَا عُوْقِبَ بِهٖ ثُمَّ بُغِیَ عَلَیْهِ لَیَنْصُرَنَّهُ اللّٰهُ ؕ— اِنَّ اللّٰهَ لَعَفُوٌّ غَفُوْرٌ ۟
ಇದು ಅವರ ಅಂತಿಮ ಪರಿಣಾಮವಾಯಿತು. ಒಬ್ಬನು ಹಿಂಸೆಗೊಳಗಾದಷ್ಟೇ ಪ್ರತಿಕಾರ ಪಡೆದರೆ ಆ ಬಳಿಕ ಅವನ ಮೇಲೆ ಪುನಃ ಅತಿಕ್ರಮ ನಡೆದರೆ ಖಂಡಿತವಾಗಿಯು ಅಲ್ಲಾಹನು ಅವನಿಗೆ ಸಹಾಯ ನೀಡುತ್ತಾನೆ. ನಿಸ್ಸಂಶಯವಾಗಿಯೂ ಅಲ್ಲಾಹನು ಪಾಪಗಳನ್ನು ಮನ್ನಿಸುವವನು, ಕ್ಷಮಾಶೀಲನು ಆಗಿರುವನು.
تەفسیرە عەرەبیەکان:
ذٰلِكَ بِاَنَّ اللّٰهَ یُوْلِجُ الَّیْلَ فِی النَّهَارِ وَیُوْلِجُ النَّهَارَ فِی الَّیْلِ وَاَنَّ اللّٰهَ سَمِیْعٌ بَصِیْرٌ ۟
ಇದೇಕೆಂದರೆ ಅಲ್ಲಾಹನು ರಾತ್ರಿಯನ್ನು ಹಗಲಿನೊಳಗೆ ಹಾಗೂ ಹಗಲನ್ನು ರಾತ್ರಿಯೊಳಗೆ ಪ್ರವೇಶಿಸುತ್ತಾನೆ ಮತ್ತು ವಾಸ್ತವದಲ್ಲಿ ಅಲ್ಲಾಹನು ಸರ್ವವನ್ನಾಲಿಸುವವನು, ಚೆನ್ನಾಗಿ ನೋಡುವವನು ಆಗಿದ್ದಾನೆ.
تەفسیرە عەرەبیەکان:
ذٰلِكَ بِاَنَّ اللّٰهَ هُوَ الْحَقُّ وَاَنَّ مَا یَدْعُوْنَ مِنْ دُوْنِهٖ هُوَ الْبَاطِلُ وَاَنَّ اللّٰهَ هُوَ الْعَلِیُّ الْكَبِیْرُ ۟
ಇದೇಕೆಂದರೆ ವಾಸ್ತವದಲ್ಲಿ ಅಲ್ಲಾಹನೇ ಸತ್ಯ ಮತ್ತು ಅವನ ಹೊರತು ಅವರು ಕರೆದು ಬೇಡುತ್ತಿರುವ ವಸ್ತುಗಳು ಮಿಥ್ಯವಾಗಿರುವುದು. ನಿಶ್ಚಯವಾಗಿಯೂ ಅಲ್ಲಾಹನು ಉನ್ನತನು, ಮಹಾನನು ಆಗಿದ್ದಾನೆ.
تەفسیرە عەرەبیەکان:
اَلَمْ تَرَ اَنَّ اللّٰهَ اَنْزَلَ مِنَ السَّمَآءِ مَآءً ؗ— فَتُصْبِحُ الْاَرْضُ مُخْضَرَّةً ؕ— اِنَّ اللّٰهَ لَطِیْفٌ خَبِیْرٌ ۟ۚ
ಅಲ್ಲಾಹನು ಆಕಾಶದಿಂದ ನೀರನ್ನು ಸುರಿಸಿ, ಅನಂತರ ಭೂಮಿಯು ಹಚ್ಚಹಸಿರಾಗಿರುವುದನ್ನು ನೀವು ನೋಡಲಿಲ್ಲವೇ? ನಿಸ್ಸಂಶಯವಾಗಿಯೂ ಅಲ್ಲಾಹನು ಸೂಕ್ಷö್ಮಗ್ರಹಿಯು, ವಿವರ ಪೂರ್ಣನೂ ಆಗಿದ್ದಾನೆ.
تەفسیرە عەرەبیەکان:
لَهٗ مَا فِی السَّمٰوٰتِ وَمَا فِی الْاَرْضِ ؕ— وَاِنَّ اللّٰهَ لَهُوَ الْغَنِیُّ الْحَمِیْدُ ۟۠
ಭೂಮಿ, ಆಕಾಶಗಳಲ್ಲಿರುವುದೆಲ್ಲವೂ ಅವನದ್ದಾಗಿದೆ. ನಿಶ್ಚಯವಾಗಿಯೂ ಅಲ್ಲಾಹನೇ ನಿರಪೇಕ್ಷಕನು ಸ್ತುತ್ಯರ್ಹನು ಆಗಿದ್ದಾನೆ.
تەفسیرە عەرەبیەکان:
اَلَمْ تَرَ اَنَّ اللّٰهَ سَخَّرَ لَكُمْ مَّا فِی الْاَرْضِ وَالْفُلْكَ تَجْرِیْ فِی الْبَحْرِ بِاَمْرِهٖ ؕ— وَیُمْسِكُ السَّمَآءَ اَنْ تَقَعَ عَلَی الْاَرْضِ اِلَّا بِاِذْنِهٖ ؕ— اِنَّ اللّٰهَ بِالنَّاسِ لَرَءُوْفٌ رَّحِیْمٌ ۟
ನಿಶ್ಚಯವಾಗಿಯು ಅಲ್ಲಾಹನು ಭೂಮಿಯಲ್ಲಿರುವುದನ್ನು ಮತ್ತು ಅವನ ಅಪ್ಪಣೆಯಿಂದ ಸಮುದ್ರದಲ್ಲಿ ಸಂಚರಿಸುವ ಹಡಗನ್ನು ನಿಮಗೆ ಅಧೀನಗೊಳಿಸಿದ್ದಾನೆಂದು ನೀವು ನೋಡಲಿಲ್ಲವೇ? ಮತ್ತು ಅವನ ಅನುಮತಿಯ ವಿನಃ ಆಕಾಶವು ಭೂಮಿಯ ಮೇಲೆ ಬೀಳದಂತೆ ಅವನೇ ಆಧರಿಸಿದ್ದಾನೆ ವಾಸ್ತವದಲ್ಲಿ ಅಲ್ಲಾಹನು ಜನರ ಕುರಿತು ಕೃಪಾಳುವು, ಕರುಣಾಮಯಿಯು ಆಗಿದ್ದಾನೆ.
تەفسیرە عەرەبیەکان:
وَهُوَ الَّذِیْۤ اَحْیَاكُمْ ؗ— ثُمَّ یُمِیْتُكُمْ ثُمَّ یُحْیِیْكُمْ ؕ— اِنَّ الْاِنْسَانَ لَكَفُوْرٌ ۟
ಅವನೇ ನಿಮಗೆ ಜೀವ ನೀಡಿದನು. ನಂತರ ನಿಮ್ಮನ್ನು ಮರಣಗೊಳಿಸುತ್ತಾನೆ. ಅನಂತರ ನಿಮ್ಮನ್ನು (ಪುನಃ) ಜೀವಂತಗೊಳಿಸುವನು. ವಾಸ್ತವದಲ್ಲಿ ಮನುಷ್ಯನು ಕೃತಘ್ನನಾಗಿದ್ದಾನೆ.
تەفسیرە عەرەبیەکان:
لِكُلِّ اُمَّةٍ جَعَلْنَا مَنْسَكًا هُمْ نَاسِكُوْهُ فَلَا یُنَازِعُنَّكَ فِی الْاَمْرِ وَادْعُ اِلٰی رَبِّكَ ؕ— اِنَّكَ لَعَلٰی هُدًی مُّسْتَقِیْمٍ ۟
ಪ್ರತಿಯೊಂದು ಸಮುದಾಯಕ್ಕೂ ನಾವು ಆರಾಧನ ಕ್ರಮವನ್ನು ನಿಶ್ಚಯಿಸಿದ್ದೇವು ಅವರು ಅದನ್ನು ಪಾಲಿಸುತ್ತಿದ್ದರು. ಇನ್ನು ಇವರು ನಿಮ್ಮೊಂದಿಗೆ ಈ ವಿಚಾರದಲ್ಲಿ ತರ್ಕ ಮಾಡದಿರಲಿ ಮತ್ತು ನೀವು ನಿಮ್ಮ ಪ್ರಭುವಿನ ಕಡೆಗೆ ಕರೆಯಿರಿ. ನಿಸ್ಸಂಶಯವಾಗಿಯೂ ನೀವು ಋಜುವಾದ ಮಾರ್ಗದಲ್ಲಿದ್ದೀರಿ.
تەفسیرە عەرەبیەکان:
وَاِنْ جٰدَلُوْكَ فَقُلِ اللّٰهُ اَعْلَمُ بِمَا تَعْمَلُوْنَ ۟
ಮತ್ತು ಅವರೇನಾದರೂ ನಿಮ್ಮೊಡನೆ ಜಗಳವಾಡಿದರೆ ಹೇಳಿರಿ: ನೀವು ಮಾಡುತ್ತಿರುವುದೆಲ್ಲವನ್ನು ಅಲ್ಲಾಹನು ಚೆನ್ನಾಗಿ ಬಲ್ಲನು.
تەفسیرە عەرەبیەکان:
اَللّٰهُ یَحْكُمُ بَیْنَكُمْ یَوْمَ الْقِیٰمَةِ فِیْمَا كُنْتُمْ فِیْهِ تَخْتَلِفُوْنَ ۟
ನಿಸ್ಸಂಶಯವಾಗಿಯೂ ಅಲ್ಲಾಹನು ಪುನರುತ್ಥಾನ ದಿನದಂದು ನೀವು ಭಿನ್ನಾಭಿಪ್ರಾಯ ಹೊಂದಿದ ಸಕಲ ವಿಷಯಗಳ ಬಗ್ಗೆ ನಿಮ್ಮ ನಡುವೆ ತೀರ್ಮಾನ ಮಾಡಲಿದ್ದಾನೆ.
تەفسیرە عەرەبیەکان:
اَلَمْ تَعْلَمْ اَنَّ اللّٰهَ یَعْلَمُ مَا فِی السَّمَآءِ وَالْاَرْضِ ؕ— اِنَّ ذٰلِكَ فِیْ كِتٰبٍ ؕ— اِنَّ ذٰلِكَ عَلَی اللّٰهِ یَسِیْرٌ ۟
ಭೂಮಿ, ಆಕಾಶಗಳಲ್ಲಿರುವ ಸಕಲ ಸಂಗತಿಗಳನ್ನು ಅಲ್ಲಾಹನು ಬಲ್ಲನೆಂದು ನೀವು ಅರಿತಿಲ್ಲವೇ? ಖಂಡಿತವಾಗಿ ಇವೆಲ್ಲವೂ ಒಂದು ದಾಖಲಿಸಲ್ಪಟ್ಟ ಗ್ರಂಥದಲ್ಲಿದೆ. ನಿಶ್ಚಯವಾಗಿಯು ಈ ಕಾರ್ಯವು ಅಲ್ಲಾಹನ ಪಾಲಿಗೆ ಸುಲಭವಾಗಿದೆ.
تەفسیرە عەرەبیەکان:
وَیَعْبُدُوْنَ مِنْ دُوْنِ اللّٰهِ مَا لَمْ یُنَزِّلْ بِهٖ سُلْطٰنًا وَّمَا لَیْسَ لَهُمْ بِهٖ عِلْمٌ ؕ— وَمَا لِلظّٰلِمِیْنَ مِنْ نَّصِیْرٍ ۟
ಅವರು ಅಲ್ಲಾಹನನ್ನು ಬಿಟ್ಟು ಅವನು ಅದರ ಬಗ್ಗೆ ಯಾವುದೇ ಪುರಾವೆಯನ್ನು ಇಳಿಸದ ಹಾಗೂ ಅದರ ಕುರಿತು ಸ್ವತಃ ಅವರಿಗೂ ಯಾವ ಜ್ಞಾನವಿಲ್ಲದ ವಸ್ತುಗಳನ್ನು ಆರಾಧಿಸುತ್ತಾರೆ. ಮತ್ತು ಅಕ್ರಮಿಗಳಿಗೆ ಯಾವ ಸಹಾಯಕನೂ ಇರಲಾರನು.
تەفسیرە عەرەبیەکان:
وَاِذَا تُتْلٰی عَلَیْهِمْ اٰیٰتُنَا بَیِّنٰتٍ تَعْرِفُ فِیْ وُجُوْهِ الَّذِیْنَ كَفَرُوا الْمُنْكَرَ ؕ— یَكَادُوْنَ یَسْطُوْنَ بِالَّذِیْنَ یَتْلُوْنَ عَلَیْهِمْ اٰیٰتِنَا ؕ— قُلْ اَفَاُنَبِّئُكُمْ بِشَرٍّ مِّنْ ذٰلِكُمْ ؕ— اَلنَّارُ ؕ— وَعَدَهَا اللّٰهُ الَّذِیْنَ كَفَرُوْا ؕ— وَبِئْسَ الْمَصِیْرُ ۟۠
ಅವರ ಮುಂದೆ ನಮ್ಮ ಸುಸ್ಪಷ್ಟವಾದ ಸೂಕ್ತಿಗಳನ್ನು ಓದಿ ಹೇಳಲಾದಾಗ ನೀವು ಸತ್ಯನಿಷೇಧಿಗಳ ಮುಖಗಳು ವಿಕಾರಗೊಳ್ಳುತ್ತಿರುವುದನ್ನು ಕಾಣುವಿರಿ. ಅವರು ನಮ್ಮ ಸೂಕ್ತಿಗಳನ್ನು ಓದಿ ಹೇಳುವವರ ಮೇಲೆ ಮುಗಿಬೀಳಬಹುದು. ಹೇಳಿರಿ: ನಾನು ನಿಮಗೆ ಇದಕ್ಕಿಂತಲೂ ಅತ್ಯಂತ ಕೆಟ್ಟದ್ದಾಗಿರುವುದನ್ನು ತಿಳಿಸಿ ಕೊಡಲೇ? ಅದೇ ನರಕಾಗ್ನಿ! ಅಲ್ಲಾಹನು ಸತ್ಯನಿಷೇಧಿಸಿದವರಿಗೆ ಅದರ ವಾಗ್ದಾನವನ್ನು ಮಾಡಿದ್ದಾನೆ ಮತ್ತು ಅದು ಮರಳುವ ಕೆಟ್ಟ ತಾಣವಾಗಿದೆ.
تەفسیرە عەرەبیەکان:
یٰۤاَیُّهَا النَّاسُ ضُرِبَ مَثَلٌ فَاسْتَمِعُوْا لَهٗ ؕ— اِنَّ الَّذِیْنَ تَدْعُوْنَ مِنْ دُوْنِ اللّٰهِ لَنْ یَّخْلُقُوْا ذُبَابًا وَّلَوِ اجْتَمَعُوْا لَهٗ ؕ— وَاِنْ یَّسْلُبْهُمُ الذُّبَابُ شَیْـًٔا لَّا یَسْتَنْقِذُوْهُ مِنْهُ ؕ— ضَعُفَ الطَّالِبُ وَالْمَطْلُوْبُ ۟
ಓ ಜನರೇ, ಒಂದು ಉಪಮೆಯನ್ನು ಕೊಡಲಾಗುತ್ತಿದೆ. ಗಮನವಿಟ್ಟು ಕೇಳಿರಿ. ನೀವು ಅಲ್ಲಾಹನನ್ನು ಬಿಟ್ಟು ಯಾರನ್ನು ಕರೆದು ಬೆಡುತ್ತಿರುವಿರೋ ನಿಜವಾಗಿಯೂ ಅವರು ಒಂದು ನೊಣವನ್ನೂ ಸಹ ಸೃಷ್ಟಿಸಲಾರರು. ಅವರೆಲ್ಲರೂ ಅದಕ್ಕೋಸ್ಕರ ಒಟ್ಟು ಸೇರಿದರೂ ಸರಿಯೇ. ಅಷ್ಟೇಕೆ! ನೊಣವು ಅವರಿಂದ ಏನನ್ನಾದರೂ ಕಸಿದು ಕೊಂಡು ಹೋದರೆ ಅವರು ಅದನ್ನು ಅದರಿಂದ ಹಿಂದಕ್ಕೆ ಪಡೆಯಲೂ ಅಶಕ್ತರು. ಬೇಡುವವನೂ ದುರ್ಬಲನು, ಯಾರಿಂದ ಬೇಡಲಾಗುತ್ತಿದೆಯೋ ಅವನೂ ದುರ್ಬಲನು!
تەفسیرە عەرەبیەکان:
مَا قَدَرُوا اللّٰهَ حَقَّ قَدْرِهٖ ؕ— اِنَّ اللّٰهَ لَقَوِیٌّ عَزِیْزٌ ۟
ಅವರು ಅಲ್ಲಾಹನ ಮಹತ್ವವನ್ನು ಅರಿತುಕೊಳ್ಳಬೇಕಾದ ರೀತಿಯಲ್ಲಿ ಅರಿತುಕೊಳ್ಳಲೇ ಇಲ್ಲ. ನಿಶ್ಚಯವಾಗಿಯೂ ಅಲ್ಲಾಹನು ಮಹಾ ಶಕ್ತಿವಂತನೂ, ಪ್ರಚಂಡನೂ ಆಗಿದ್ದಾನೆ.
تەفسیرە عەرەبیەکان:
اَللّٰهُ یَصْطَفِیْ مِنَ الْمَلٰٓىِٕكَةِ رُسُلًا وَّمِنَ النَّاسِ ؕ— اِنَّ اللّٰهَ سَمِیْعٌ بَصِیْرٌ ۟ۚ
ಅಲ್ಲಾಹನು ಮಲಕ್‌ಗಳಿಂದಲೂ, ಮನುಷ್ಯರಿಂದಲೂ ಸಂದೇಶವಾಹಕರನ್ನು ಆಯ್ದುಕೊಳ್ಳುತ್ತಾನೆ. ನಿಸ್ಸಂದೇಹವಾಗಿಯು ಅಲ್ಲಾಹನು ಸರ್ವವನ್ನು ಆಲಿಸುವವನು, ಸರ್ವವನ್ನು ನೋಡುವವನು ಆಗಿದ್ದಾನೆ.
تەفسیرە عەرەبیەکان:
یَعْلَمُ مَا بَیْنَ اَیْدِیْهِمْ وَمَا خَلْفَهُمْ ؕ— وَاِلَی اللّٰهِ تُرْجَعُ الْاُمُوْرُ ۟
ಜನರ ಮುಂದಿರುವುದನ್ನು ಹಿಂದಿರುವುದನ್ನು ಅವನು ಬಲ್ಲನು.ಮತ್ತು ಕಾರ್ಯಗಳೆಲ್ಲವೂ ಅಲ್ಲಾಹನೆಡೆಗೆ ಮರಳಿಸಲ್ಪಡುತ್ತವೆ.
تەفسیرە عەرەبیەکان:
یٰۤاَیُّهَا الَّذِیْنَ اٰمَنُوا ارْكَعُوْا وَاسْجُدُوْا وَاعْبُدُوْا رَبَّكُمْ وَافْعَلُوا الْخَیْرَ لَعَلَّكُمْ تُفْلِحُوْنَ ۟
ಓ ಸತ್ಯವಿಶ್ಚಾಸಿಗಳೇ, ನೀವು ಬಾಗಿರಿ, ಸಾಷ್ಟಾಂಗವೆರಗಿರಿ ಮತ್ತು ನಿಮ್ಮ ಪ್ರಭುವನ್ನು ಆರಾಧಿಸಿರಿ ಹಾಗೂ ಒಳಿತನ್ನು ಮಾಡಿರಿ. ನೀವು ಯಶಸ್ಸು ಪಡೆಯಬಹುದು.
تەفسیرە عەرەبیەکان:
وَجَاهِدُوْا فِی اللّٰهِ حَقَّ جِهَادِهٖ ؕ— هُوَ اجْتَبٰىكُمْ وَمَا جَعَلَ عَلَیْكُمْ فِی الدِّیْنِ مِنْ حَرَجٍ ؕ— مِلَّةَ اَبِیْكُمْ اِبْرٰهِیْمَ ؕ— هُوَ سَمّٰىكُمُ الْمُسْلِمِیْنَ ۙ۬— مِنْ قَبْلُ وَفِیْ هٰذَا لِیَكُوْنَ الرَّسُوْلُ شَهِیْدًا عَلَیْكُمْ وَتَكُوْنُوْا شُهَدَآءَ عَلَی النَّاسِ ۖۚ— فَاَقِیْمُوا الصَّلٰوةَ وَاٰتُوا الزَّكٰوةَ وَاعْتَصِمُوْا بِاللّٰهِ ؕ— هُوَ مَوْلٰىكُمْ ۚ— فَنِعْمَ الْمَوْلٰی وَنِعْمَ النَّصِیْرُ ۟۠
ನೀವು ಅಲ್ಲಾಹನ ಮಾರ್ಗದಲ್ಲಿ ಹೋರಾಡಬೇಕಾದ ರೀತಿಯಲ್ಲಿ ಹೋರಾಡಿರಿ! ಅವನು ನಿಮ್ಮನ್ನು ಆಯ್ಕೆ ಮಾಡಿದ್ದಾನೆ ಮತ್ತು ಅವನು ನಿಮ್ಮ ಮೇಲೆ ಧರ್ಮವಿಷಯದಲ್ಲಿ ಯಾವುದೇ ಇಕ್ಕಟ್ಟನ್ನುಂಟು ಮಾಡಿಲ್ಲ. ನಿಮ್ಮ ತಂದೆ ಇಬ್ರಾಹೀಮ್‌ರ ಧರ್ಮವನ್ನು ಸಂಸ್ಥಾಪಿಸಿರಿ. ಈ ಕುರ್‌ಆನ್‌ಗಿಂತ ಮೊದಲು (ಬಂದ ಗ್ರಂಥಗಳಲ್ಲೂ), ಇದರಲ್ಲೂ ಅವನು ನಿಮ್ಮ ಹೆಸರನ್ನು ಮುಸ್ಲಿಮ್ ಎಂದಿಟ್ಟಿರುತ್ತಾನೆ. ಇದು ಸಂದೇಶವಾಹಕರು ನಿಮ್ಮ ಮೇಲೆ ಸಾಕ್ಷಿಯಾಗಲೆಂದು, ನೀವು ಸಕಲ ಜನರ ಮೇಲೆ ಸಾಕ್ಷಿಗಳಾಗಲೆಂದಾಗಿದೆ. ಹಾಗೆಯೇ ನೀವು ನಮಾಝ್ ಸಂಸ್ಥಾಪಿಸಿರಿ ಹಾಗೂ ಝಕಾತ್ ನೀಡಿರಿ ಮತ್ತು ಅಲ್ಲಾಹನ ಪಾಶವನ್ನು ಭದ್ರವಾಗಿ ಹಿಡಿದುಕೊಳ್ಳಿರಿ. ಅವನೇ ನಿಮ್ಮ ರಕ್ಷಕ ಮಿತ್ರನಾಗಿದ್ದಾನೆ. ಅವನು ಅದೆಷ್ಟು ಉತ್ತಮನು ಹಾಗೂ ಅದೆಷ್ಟು ಉತ್ತಮ ಸಹಾಯಕನು!.
تەفسیرە عەرەبیەکان:
 
وه‌رگێڕانی ماناكان سوره‌تی: سورەتی الحج
پێڕستی سوره‌ته‌كان ژمارەی پەڕە
 
وه‌رگێڕانی ماناكانی قورئانی پیرۆز - الترجمة الكنادية - بشير ميسوري - پێڕستی وه‌رگێڕاوه‌كان

ترجمة معاني القرآن الكريم إلى اللغة الكنادية ترجمها بشير ميسوري.

داخستن