Check out the new design

وه‌رگێڕانی ماناكانی قورئانی پیرۆز - وەرگێڕاوی کەنادی - حەمزە بتور * - پێڕستی وه‌رگێڕاوه‌كان

PDF XML CSV Excel API
Please review the Terms and Policies

وه‌رگێڕانی ماناكان سوره‌تی: یوسف   ئایه‌تی:
وَمَا تَسْـَٔلُهُمْ عَلَیْهِ مِنْ اَجْرٍ ؕ— اِنْ هُوَ اِلَّا ذِكْرٌ لِّلْعٰلَمِیْنَ ۟۠
ನೀವು ಇದಕ್ಕಾಗಿ ಅವರೊಡನೆ ಯಾವುದೇ ಪ್ರತಿಫಲವನ್ನು ಕೇಳುವುದಿಲ್ಲ. ಇದು ಸರ್ವಲೋಕದವರಿಗೆ ಒಂದು ಉಪದೇಶ ಮಾತ್ರವಾಗಿದೆ.
تەفسیرە عەرەبیەکان:
وَكَاَیِّنْ مِّنْ اٰیَةٍ فِی السَّمٰوٰتِ وَالْاَرْضِ یَمُرُّوْنَ عَلَیْهَا وَهُمْ عَنْهَا مُعْرِضُوْنَ ۟
ಭೂಮ್ಯಾಕಾಶಗಳಲ್ಲಿ ಎಷ್ಟೋ ದೃಷ್ಟಾಂತಗಳಿವೆ! ಅವರು ಅವುಗಳ ಬಳಿಯಿಂದ ಮುಖ ತಿರುಗಿಸಿಕೊಂಡು (ನಿರ್ಲಕ್ಷ್ಯ ಭಾವದಿಂದ) ಹಾದುಹೋಗುತ್ತಾರೆ.
تەفسیرە عەرەبیەکان:
وَمَا یُؤْمِنُ اَكْثَرُهُمْ بِاللّٰهِ اِلَّا وَهُمْ مُّشْرِكُوْنَ ۟
ಅವರಲ್ಲಿ ಹೆಚ್ಚಿನವರು ಅಲ್ಲಾಹನಲ್ಲಿ ವಿಶ್ವಾಸವಿರುವವರಾಗಿದ್ದೂ ಸಹ (ಆರಾಧನೆಯಲ್ಲಿ) ಸಹಭಾಗಿತ್ವ (ಶಿರ್ಕ್) ಮಾಡುತ್ತಾರೆ.[1]
[1] ಅಂದರೆ ಬಹುದೇವವಿಶ್ವಾಸಿಗಳಲ್ಲಿ ಹೆಚ್ಚಿನವರು ಅಲ್ಲಾಹನ ಪ್ರಭುತ್ವದಲ್ಲಿ (ರುಬೂಬಿಯತ್) ವಿಶ್ವಾಸವಿಡುತ್ತಾರೆ. ಅಂದರೆ ಸೃಷ್ಟಿಕರ್ತ, ಪರಿಪಾಲಕ, ನಿಯಂತ್ರಕ, ಅನ್ನದಾತ, ಜೀವ ಮತ್ತು ಮರಣ ನೀಡುವವನು ಮುಂತಾದ ಎಲ್ಲವೂ ಅಲ್ಲಾಹನೆಂದು ಅವರು ವಿಶ್ವಾಸವಿಡುತ್ತಾರೆ. ಇದರಲ್ಲಿ ಅಲ್ಲಾಹನಿಗೆ ಯಾವುದೇ ಸಹಭಾಗಿಗಳು ಅಥವಾ ಪಾಲುದಾರರು ಇಲ್ಲವೆಂದು ಅವರು ದೃಢವಾಗಿ ವಿಶ್ವಾಸವಿಡುತ್ತಾರೆ. ಆದರೆ ಆರಾಧನೆಯ ವಿಷಯದಲ್ಲಿ ಅವರು ಅಲ್ಲಾಹನೊಂದಿಗೆ ಇತರರನ್ನು ಸಹಭಾಗಿಗಳನ್ನಾಗಿ ಮಾಡುತ್ತಾರೆ.
تەفسیرە عەرەبیەکان:
اَفَاَمِنُوْۤا اَنْ تَاْتِیَهُمْ غَاشِیَةٌ مِّنْ عَذَابِ اللّٰهِ اَوْ تَاْتِیَهُمُ السَّاعَةُ بَغْتَةً وَّهُمْ لَا یَشْعُرُوْنَ ۟
ಅಲ್ಲಾಹನ ಶಿಕ್ಷೆಗಳಲ್ಲಿ ಒಳಪಟ್ಟ ಒಂದು ಸಾರ್ವತ್ರಿಕ ಶಿಕ್ಷೆಯು ಅವರ ಮೇಲೆರಗಲಾರದು, ಅಥವಾ ಅವರಿಗೆ ತಿಳಿಯದಂತೆಯೇ ಹಠಾತ್ತನೆ ಅಂತಿಮದಿನವು ಸಂಭವಿಸಲಾರದು ಎಂದು ಅವರು ನಿರ್ಭಯರಾಗಿದ್ದಾರೆಯೇ?
تەفسیرە عەرەبیەکان:
قُلْ هٰذِهٖ سَبِیْلِیْۤ اَدْعُوْۤا اِلَی اللّٰهِ ؔ۫— عَلٰی بَصِیْرَةٍ اَنَا وَمَنِ اتَّبَعَنِیْ ؕ— وَسُبْحٰنَ اللّٰهِ وَمَاۤ اَنَا مِنَ الْمُشْرِكِیْنَ ۟
ಹೇಳಿರಿ: “ಇದೇ ನನ್ನ ಮಾರ್ಗ. ನಾನು ಮತ್ತು ನನ್ನ ಅನುಯಾಯಿಗಳು ಪೂರ್ಣ ಭರವಸೆಯೊಂದಿಗೆ ಅಲ್ಲಾಹನ ಕಡೆಗೆ ಕರೆಯುತ್ತಿದ್ದೇವೆ. ಅಲ್ಲಾಹು ಪರಿಶುದ್ಧನು. ನಾನು ದೇವಸಹಭಾಗಿತ್ವ (ಶಿರ್ಕ್) ಮಾಡುವವರಲ್ಲಿ ಸೇರಿದವನಲ್ಲ.”
تەفسیرە عەرەبیەکان:
وَمَاۤ اَرْسَلْنَا مِنْ قَبْلِكَ اِلَّا رِجَالًا نُّوْحِیْۤ اِلَیْهِمْ مِّنْ اَهْلِ الْقُرٰی ؕ— اَفَلَمْ یَسِیْرُوْا فِی الْاَرْضِ فَیَنْظُرُوْا كَیْفَ كَانَ عَاقِبَةُ الَّذِیْنَ مِنْ قَبْلِهِمْ ؕ— وَلَدَارُ الْاٰخِرَةِ خَیْرٌ لِّلَّذِیْنَ اتَّقَوْا ؕ— اَفَلَا تَعْقِلُوْنَ ۟
ನಿಮಗಿಂತ ಮೊದಲು ನಾವು ವಿಭಿನ್ನ ಊರುಗಳಲ್ಲಿ ಎಷ್ಟು ಸಂದೇಶವಾಹಕರನ್ನು ಕಳುಹಿಸಿದ್ದೆವೋ ಅವರೆಲ್ಲರೂ ನಾವು ದೇವವಾಣಿ ನೀಡಿದ ಪುರುಷರಾಗಿದ್ದರು. ಅವರು ಭೂಮಿಯಲ್ಲಿ ಸಂಚರಿಸಿ ಅವರಿಗಿಂತ ಮೊದಲಿನ ಜನರ ಅಂತ್ಯವು ಹೇಗಿತ್ತೆಂದು ನೋಡುವುದಿಲ್ಲವೇ? ದೇವಭಯವುಳ್ಳವರಿಗೆ ಪರಲೋಕ ಭವನವೇ ಅತಿಶ್ರೇಷ್ಠವಾಗಿದೆ. ಆದರೂ ನೀವು ಅರ್ಥಮಾಡಿಕೊಳ್ಳುವುದಿಲ್ಲವೇ?
435. ಪ್ರತಿಯೊಂದು ಪ್ರದೇಶಕ್ಕೂ ಅವರಿಂದಲೇ ವಿಶೇಷವಾಗಿ ಆರಿಸಲ್ಪಟ್ಟ ಪುರುಷರನ್ನು ಮಾತ್ರ ಅಲ್ಲಾಹು ಸಂದೇಶವಾಹಕರನ್ನಾಗಿ ಕಳುಹಿಸಿರುವನು.
تەفسیرە عەرەبیەکان:
حَتّٰۤی اِذَا اسْتَیْـَٔسَ الرُّسُلُ وَظَنُّوْۤا اَنَّهُمْ قَدْ كُذِبُوْا جَآءَهُمْ نَصْرُنَا ۙ— فَنُجِّیَ مَنْ نَّشَآءُ ؕ— وَلَا یُرَدُّ بَاْسُنَا عَنِ الْقَوْمِ الْمُجْرِمِیْنَ ۟
ಎಲ್ಲಿಯವರೆಗೆಂದರೆ, ಸಂದೇಶವಾಹಕರುಗಳು ನಿರಾಶರಾಗಿ, ಜನರು ತಮ್ಮನ್ನು ಸಂಪೂರ್ಣವಾಗಿ ನಿಷೇಧಿಸಿದ್ದಾರೆಂದು ಅವರಿಗೆ ಖಾತ್ರಿಯಾದಾಗ, ನಮ್ಮ ಸಹಾಯವು ಅವರ ಬಳಿಗೆ ಬಂತು. ಆಗ ನಾವು ಇಚ್ಛಿಸುವವರು ಪಾರಾದರು. ಅಕ್ರಮವೆಸಗುವ ಜನರಿಂದ ನಮ್ಮ ಶಿಕ್ಷೆಯನ್ನು ಹಿಂದೆಗೆಯಲಾಗುವುದಿಲ್ಲ.
تەفسیرە عەرەبیەکان:
لَقَدْ كَانَ فِیْ قَصَصِهِمْ عِبْرَةٌ لِّاُولِی الْاَلْبَابِ ؕ— مَا كَانَ حَدِیْثًا یُّفْتَرٰی وَلٰكِنْ تَصْدِیْقَ الَّذِیْ بَیْنَ یَدَیْهِ وَتَفْصِیْلَ كُلِّ شَیْءٍ وَّهُدًی وَّرَحْمَةً لِّقَوْمٍ یُّؤْمِنُوْنَ ۟۠
ಅವರ ಕಥೆಗಳಲ್ಲಿ ಬುದ್ಧಿವಂತರಿಗೆ ನೀತಿಪಾಠಗಳಿದ್ದವು. ಇದು (ಕುರ್‌ಆನ್) ಸ್ವಯಂ ರಚಿಸಲಾದ ಗ್ರಂಥವಲ್ಲ. ಬದಲಿಗೆ, ಇದು ಇದಕ್ಕಿಂತ ಮೊದಲಿನ ಗ್ರಂಥಗಳ ದೃಢೀಕರಣವಾಗಿದೆ ಮತ್ತು ಎಲ್ಲಾ ವಿಷಯಗಳ ವಿವರಣೆಯಾಗಿದೆ. ವಿಶ್ವಾಸವಿಡುವ ಜನರಿಗೆ ಇದು ಸನ್ಮಾರ್ಗ ಮತ್ತು ದಯೆಯಾಗಿದೆ.
تەفسیرە عەرەبیەکان:
 
وه‌رگێڕانی ماناكان سوره‌تی: یوسف
پێڕستی سوره‌ته‌كان ژمارەی پەڕە
 
وه‌رگێڕانی ماناكانی قورئانی پیرۆز - وەرگێڕاوی کەنادی - حەمزە بتور - پێڕستی وه‌رگێڕاوه‌كان

وەرگێڕاوی کردووە محەمەد حەمزە بەتور. پەرەیپێدراوە بە سەرپەرشتیاری ناوەندی ڕوواد بۆ وەرگێڕان.

داخستن