Check out the new design

വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ * - വിവർത്തനങ്ങളുടെ സൂചിക

PDF XML CSV Excel API
Please review the Terms and Policies

പരിഭാഷ അദ്ധ്യായം: ബഖറഃ   ആയത്ത്:
لَیْسَ الْبِرَّ اَنْ تُوَلُّوْا وُجُوْهَكُمْ قِبَلَ الْمَشْرِقِ وَالْمَغْرِبِ وَلٰكِنَّ الْبِرَّ مَنْ اٰمَنَ بِاللّٰهِ وَالْیَوْمِ الْاٰخِرِ وَالْمَلٰٓىِٕكَةِ وَالْكِتٰبِ وَالنَّبِیّٖنَ ۚ— وَاٰتَی الْمَالَ عَلٰی حُبِّهٖ ذَوِی الْقُرْبٰی وَالْیَتٰمٰی وَالْمَسٰكِیْنَ وَابْنَ السَّبِیْلِ ۙ— وَالسَّآىِٕلِیْنَ وَفِی الرِّقَابِ ۚ— وَاَقَامَ الصَّلٰوةَ وَاٰتَی الزَّكٰوةَ ۚ— وَالْمُوْفُوْنَ بِعَهْدِهِمْ اِذَا عٰهَدُوْا ۚ— وَالصّٰبِرِیْنَ فِی الْبَاْسَآءِ وَالضَّرَّآءِ وَحِیْنَ الْبَاْسِ ؕ— اُولٰٓىِٕكَ الَّذِیْنَ صَدَقُوْا ؕ— وَاُولٰٓىِٕكَ هُمُ الْمُتَّقُوْنَ ۟
ಒಳಿತು ಎಂದರೆ ನೀವು ನಿಮ್ಮ ಮುಖಗಳನ್ನು ಪೂರ್ವಕ್ಕೆ ಅಥವಾ ಪಶ್ಚಿಮಕ್ಕೆ ತಿರುಗಿಸುವುದಲ್ಲ. ಬದಲಿಗೆ, ಒಳಿತಿನಲ್ಲಿರುವವನು ಯಾರೆಂದರೆ ಅಲ್ಲಾಹನಲ್ಲಿ, ಅಂತ್ಯದಿನದಲ್ಲಿ, ದೇವದೂತರುಗಳಲ್ಲಿ, ಗ್ರಂಥದಲ್ಲಿ ಮತ್ತು ಪ್ರವಾದಿಗಳಲ್ಲಿ ವಿಶ್ವಾಸವಿಡುವವನು, ಧನದ ಮೇಲೆ ಪ್ರೀತಿಯಿದ್ದೂ ಸಹ ಅದನ್ನು ಸಂಬಂಧಿಕರಿಗೆ, ಅನಾಥರಿಗೆ, ನಿರ್ಗತಿಕರಿಗೆ, ದಾರಿಹೋಕನಿಗೆ, ಬೇಡುವವರಿಗೆ ಮತ್ತು ಗುಲಾಮ ವಿಮೋಚನೆಗೆ ಖರ್ಚು ಮಾಡುವವನು, ನಮಾಝನ್ನು ಸಂಸ್ಥಾಪಿಸುವವನು, ಝಕಾತ್ ನೀಡುವವನು, ಕರಾರು ಮಾಡಿದರೆ ಅದನ್ನು ನೆರವೇರಿಸುವವನು ಮತ್ತು ಬಡತನ, ಸಂಕಷ್ಟ ಹಾಗೂ ಯುದ್ಧಗಳ ಸಂದರ್ಭಗಳಲ್ಲಿ ತಾಳ್ಮೆಯಿಂದಿರುವವರು. ಅವರೇ (ನಿಜವಾದ) ಸತ್ಯವಂತರು ಮತ್ತು ಅವರೇ ದೇವಭಯವುಳ್ಳವರು.
അറബി ഖുർആൻ വിവരണങ്ങൾ:
یٰۤاَیُّهَا الَّذِیْنَ اٰمَنُوْا كُتِبَ عَلَیْكُمُ الْقِصَاصُ فِی الْقَتْلٰی ؕ— اَلْحُرُّ بِالْحُرِّ وَالْعَبْدُ بِالْعَبْدِ وَالْاُ بِالْاُ ؕ— فَمَنْ عُفِیَ لَهٗ مِنْ اَخِیْهِ شَیْءٌ فَاتِّبَاعٌ بِالْمَعْرُوْفِ وَاَدَآءٌ اِلَیْهِ بِاِحْسَانٍ ؕ— ذٰلِكَ تَخْفِیْفٌ مِّنْ رَّبِّكُمْ وَرَحْمَةٌ ؕ— فَمَنِ اعْتَدٰی بَعْدَ ذٰلِكَ فَلَهٗ عَذَابٌ اَلِیْمٌ ۟ۚ
ಓ ಸತ್ಯವಿಶ್ವಾಸಿಗಳೇ! ಕೊಲೆಯಾದವರ ವಿಷಯದಲ್ಲಿ ಪ್ರತೀಕಾರ ಪಡೆಯುವುದನ್ನು ನಿಮಗೆ ಕಡ್ಡಾಯಗೊಳಿಸಲಾಗಿದೆ. ಸ್ವತಂತ್ರನ ಬದಲಿಗೆ ಸ್ವತಂತ್ರ, ಗುಲಾಮನ ಬದಲಿಗೆ ಗುಲಾಮ ಮತ್ತು ಹೆಣ್ಣಿನ ಬದಲಿಗೆ ಹೆಣ್ಣು. ಯಾರಿಗಾದರೂ ಅವನ ಸಹೋದರನ (ಕೊಲೆಯಾದವನ) ಕಡೆಯಿಂದ ಮಾಫಿ ನೀಡಲಾದರೆ, ಅವನು ಸ್ವೀಕಾರಾರ್ಹ ರೀತಿಯನ್ನು ಅನುಸರಿಸಲಿ ಮತ್ತು ಒಳ್ಳೆಯ ರೀತಿಯಲ್ಲಿ ಪರಿಹಾರವನ್ನು ನೀಡಲಿ. ಅದು ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ರಿಯಾಯಿತಿ ಮತ್ತು ದಯೆಯಾಗಿದೆ. ಅದರ ನಂತರವೂ ಯಾರಾದರೂ ಅತಿರೇಕವೆಸಗಿದರೆ ಅವನಿಗೆ ವೇದನಾಭರಿತ ಶಿಕ್ಷೆಯಿದೆ.
അറബി ഖുർആൻ വിവരണങ്ങൾ:
وَلَكُمْ فِی الْقِصَاصِ حَیٰوةٌ یّٰۤاُولِی الْاَلْبَابِ لَعَلَّكُمْ تَتَّقُوْنَ ۟
ಓ ಬುದ್ಧಿವಂತರೇ! ಪ್ರತೀಕಾರ ಪಡೆಯುವುದರಲ್ಲಿ ನಿಮಗೆ ಜೀವನವಿದೆ. ನೀವು ದೇವಭಯವುಳ್ಳವರಾಗುವುದಕ್ಕಾಗಿ.[1]
[1] ಕೊಲೆ ಮಾಡುವವನಿಗೆ ಪ್ರತೀಕಾರ ನಿಯಮದ ಮೂಲಕ ತಾನೂ ಕೊಲೆಯಾಗುವೆನು ಎಂಬ ಭಯ ಮೂಡಿದರೆ ಅವನು ಕೊಲೆ ಮಾಡುವ ಮೊದಲು ಸಾವಿರ ಬಾರಿ ಯೋಚಿಸುತ್ತಾನೆ. ಕೊಲೆಗೆ ಕೊಲೆಯೆಂಬ ಪ್ರತೀಕಾರ ನಿಯಮವನ್ನು ಜಾರಿಗೊಳಿಸಿದರೆ ಆ ಸಮಾಜವು ಕೊಲೆಗಳಿಂದ ಸಂಪೂರ್ಣ ಮುಕ್ತವಾಗುತ್ತದೆ ಎಂಬುದರಲ್ಲಿ ಸಂಶಯವಿಲ್ಲ. ಇಂದು ಜನರು ಹೆಚ್ಚಾಗಿ ಕೊಲೆ ಮಾಡುವುದು ಕಾನೂನಿನಿಂದ ಸುಲಭವಾಗಿ ಪಾರಾಗಲು ಸಾಧ್ಯವಿದೆ ಎಂಬ ಭರವಸೆಯಿಂದಲೇ ಆಗಿದೆ.
അറബി ഖുർആൻ വിവരണങ്ങൾ:
كُتِبَ عَلَیْكُمْ اِذَا حَضَرَ اَحَدَكُمُ الْمَوْتُ اِنْ تَرَكَ خَیْرَا ۖۚ— ١لْوَصِیَّةُ لِلْوَالِدَیْنِ وَالْاَقْرَبِیْنَ بِالْمَعْرُوْفِ ۚ— حَقًّا عَلَی الْمُتَّقِیْنَ ۟ؕ
ನಿಮ್ಮಲ್ಲೊಬ್ಬರಿಗೆ ಮರಣವು ಆಸನ್ನವಾಗಿ ಅವನು ಆಸ್ತಿಯನ್ನು ಬಿಟ್ಟು ಹೋಗುವುದಾದರೆ, ತಂದೆ-ತಾಯಿಗೆ ಮತ್ತು ನಿಕಟ ಸಂಬಂಧಿಕರಿಗೆ ಸ್ವೀಕಾರಾರ್ಹ ರೀತಿಯಲ್ಲಿ ಉಯಿಲು ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ.[1] ಇದು ದೇವಭಯವುಳ್ಳವರ ಕರ್ತವ್ಯವಾಗಿದೆ.
[1] ಈ ವಚನವು ಪ್ರತಿಯೊಬ್ಬ ವಾರಿಸುದಾರನಿಗೂ ಅವನ ಹಕ್ಕನ್ನು ನಿಖರವಾಗಿ ನಿಗದಿಪಡಿಸಲಾದ ವಾರಿಸು ಹಕ್ಕಿನ ವಚನವು ಅವತೀರ್ಣವಾಗುವ ಮೊದಲು ಅವತೀರ್ಣವಾಗಿದೆ. ವಾರಿಸು ಹಕ್ಕಿನ ವಚನವು ಅವತೀರ್ಣವಾದ ಬಳಿಕ ಈ ವಚನದಲ್ಲಿರುವ ನಿಯಮವನ್ನು ರದ್ದುಗೊಳಿಸಲಾಗಿದೆ.
അറബി ഖുർആൻ വിവരണങ്ങൾ:
فَمَنْ بَدَّلَهٗ بَعْدَ مَا سَمِعَهٗ فَاِنَّمَاۤ اِثْمُهٗ عَلَی الَّذِیْنَ یُبَدِّلُوْنَهٗ ؕ— اِنَّ اللّٰهَ سَمِیْعٌ عَلِیْمٌ ۟ؕ
ಆದರೆ, ಅದನ್ನು (ಉಯಿಲನ್ನು) ಕೇಳಿದ ಬಳಿಕವೂ ಯಾರಾದರೂ ಅದನ್ನು ಬದಲಾಯಿಸಿದರೆ, ಆ ಪಾಪವು ಬದಲಾಯಿಸುವವರಿಗೆ ಮಾತ್ರವಾಗಿದೆ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲವನ್ನೂ ಕೇಳುವವನು ಮತ್ತು ತಿಳಿದವನಾಗಿದ್ದಾನೆ.
അറബി ഖുർആൻ വിവരണങ്ങൾ:
 
പരിഭാഷ അദ്ധ്യായം: ബഖറഃ
സൂറത്തുകളുടെ സൂചിക പേജ് നമ്പർ
 
വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ - വിവർത്തനങ്ങളുടെ സൂചിക

മുഹമ്മദ് ഹംസ ബതൂർ വിവർത്തനം ചെയ്തിരിക്കുന്നു. റുവാദൂത്തർജമ മർകസിൻ്റെ മേൽ നോട്ടത്തിലാണ് ഇത് വികസിപ്പിച്ചെടുത്തത്.

അടക്കുക