ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - الترجمة الكنادية * - ߘߟߊߡߌߘߊ ߟߎ߫ ߦߌ߬ߘߊ߬ߥߟߊ

XML CSV Excel API
Please review the Terms and Policies

ߞߘߐ ߟߎ߬ ߘߟߊߡߌ߬ߘߊ߬ߟߌ ߝߐߘߊ ߘߏ߫: ߘߌ߬ߛߊ߬ߕߌ߮ ߝߐߘߊ   ߟߝߊߙߌ ߘߏ߫:

ಸೂರ ಅಲ್ -ಮುದ್ದಸ್ಸಿರ್

یٰۤاَیُّهَا الْمُدَّثِّرُ ۟ۙ
ಓ ಹೊದಿಕೆಯನ್ನು ಹೊದ್ದುಕೊಂಡವರೇ![1]
[1] ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮೊಟ್ಟಮೊದಲು ಸೂರ ಅಲಕ್‌ನ ಪ್ರಥಮ 5 ವಚನಗಳು ಅವತೀರ್ಣವಾದವು. ನಂತರ ದೀರ್ಘ ಸಮಯದ ತನಕ ಅವರಿಗೆ ಕುರ್‌ಆನ್ ಅವತೀರ್ಣವಾಗಲಿಲ್ಲ. ಒಂದಿನ ಇದ್ದಕ್ಕಿದ್ದಂತೆ ಹಿರಾ ಗುಹೆಯಲ್ಲಿ ನೋಡಿದ ಅದೇ ದೇವದೂತರು ಆಕಾಶ ಮತ್ತು ಭೂಮಿಯ ಮಧ್ಯೆ ಸಂಪೂರ್ಣ ದಿಗಂತವನ್ನು ಮುಚ್ಚುವ ರೀತಿಯಲ್ಲಿ ಕುಳಿತಿರುವುದನ್ನು ಕಂಡರು. ಅವರು ಭಯದಿಂದ ಮನೆಗೆ ಓಡಿ ನನ್ನನ್ನು ಹೊದಿಯಿರಿ; ನನ್ನನ್ನು ಹೊದಿಯಿರಿ ಎಂದರು. ಅವರನ್ನು ಹೊದಿಕೆಯಿಂದ ಹೊದಿಯಲಾಯಿತು. ಆಗ ಈ ವಚನಗಳು ಅವತೀರ್ಣವಾದವು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قُمْ فَاَنْذِرْ ۟ۙ
ಎದ್ದೇಳಿರಿ ಮತ್ತು ಎಚ್ಚರಿಕೆ ನೀಡಿರಿ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَرَبَّكَ فَكَبِّرْ ۟ۙ
ನಿಮ್ಮ ಪರಿಪಾಲಕನ (ಅಲ್ಲಾಹನ) ಮಹಾತ್ಮೆಯನ್ನು ಕೊಂಡಾಡಿರಿ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَثِیَابَكَ فَطَهِّرْ ۟ۙ
ನಿಮ್ಮ ಬಟ್ಟೆಗಳನ್ನು ಶುದ್ಧವಾಗಿಡಿರಿ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَالرُّجْزَ فَاهْجُرْ ۟ۙ
ಅಶುದ್ಧವನ್ನು ವರ್ಜಿಸಿರಿ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَلَا تَمْنُنْ تَسْتَكْثِرُ ۟ۙ
ಉಪಕಾರ ಮಾಡಿ ಹೆಚ್ಚು ಗಳಿಸುವ ವ್ಯಾಮೋಹ ಬಿಟ್ಟುಬಿಡಿ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَلِرَبِّكَ فَاصْبِرْ ۟ؕ
ನಿಮ್ಮ ಪರಿಪಾಲಕನ (ಅಲ್ಲಾಹನ) ಮಾರ್ಗದಲ್ಲಿ ತಾಳ್ಮೆಯಿಂದಿರಿ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
فَاِذَا نُقِرَ فِی النَّاقُوْرِ ۟ۙ
ಕಹಳೆಯಲ್ಲಿ ಊದಲಾಗುವಾಗ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
فَذٰلِكَ یَوْمَىِٕذٍ یَّوْمٌ عَسِیْرٌ ۟ۙ
ಆ ದಿನವು ಅತ್ಯಂತ ಕಠಿಣ ದಿನವಾಗಿರುವುದು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
عَلَی الْكٰفِرِیْنَ غَیْرُ یَسِیْرٍ ۟
ಅದು ಸತ್ಯನಿಷೇಧಿಗಳಿಗೆ ಸುಗಮವಾಗಿರುವುದಿಲ್ಲ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
ذَرْنِیْ وَمَنْ خَلَقْتُ وَحِیْدًا ۟ۙ
ನನ್ನನ್ನು ಹಾಗೂ ನಾನು ಏಕಾಂಗಿಯಾಗಿ ಸೃಷ್ಟಿದವನನ್ನು ಬಿಟ್ಟುಬಿಡಿ.[1]
[1] ಅಂದರೆ ಅವನ ವಿಷಯವನ್ನು ನಾನು ನೋಡಿಕೊಳ್ಳುವೆನು. ಅವನು ಅವನ ತಾಯಿಯ ಹೊಟ್ಟೆಯಿಂದ ಹೊರಬರುವಾಗ ಅವನಲ್ಲಿ ಐಶ್ವರ್ಯ ಅಥವಾ ಮಕ್ಕಳಿರಲಿಲ್ಲ. ಇವೆಲ್ಲವೂ ನಾನು ಅವನಿಗೆ ನೀಡಿದ ಅನುಗ್ರಹಗಳು. ಆದರೂ ಅವನು ಈಗ ನನ್ನ ವಿರುದ್ಧ ಸೆಟೆದು ನಿಂತಿದ್ದಾನೆ. — ಇಲ್ಲಿ ಹೇಳಲಾಗಿರುವುದು ಕುರೈಷಿ ಮುಖಂಡ ವಲೀದ್ ಬಿನ್ ಮುಗೀರ ಎಂಬವನ ಬಗ್ಗೆಯಾಗಿದೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَّجَعَلْتُ لَهٗ مَالًا مَّمْدُوْدًا ۟ۙ
ನಾನು ಅವನಿಗೆ ಹೇರಳ ಐಶ್ವರ್ಯವನ್ನು ನೀಡಿದೆನು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَّبَنِیْنَ شُهُوْدًا ۟ۙ
ಸನ್ನದ್ಧರಾಗಿರುವ ಗಂಡು ಮಕ್ಕಳನ್ನು ನೀಡಿದೆನು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَّمَهَّدْتُّ لَهٗ تَمْهِیْدًا ۟ۙ
ನಾನು ಅವನಿಗೆ ಅನೇಕ ಅನುಕೂಲತೆಗಳನ್ನು ಮಾಡಿಕೊಟ್ಟೆನು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
ثُمَّ یَطْمَعُ اَنْ اَزِیْدَ ۟ۙ
ಆದರೂ ನಾನು ಅವನಿಗೆ ಇನ್ನೂ ಹೆಚ್ಚು ನೀಡಬೇಕೆಂದು ಅವನು ಹಾತೊರೆಯುತ್ತಾನೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
كَلَّا ؕ— اِنَّهٗ كَانَ لِاٰیٰتِنَا عَنِیْدًا ۟ؕ
ಖಂಡಿತ ಇಲ್ಲ. ಅವನು ನಮ್ಮ ವಚನಗಳ ವಿರೋಧಿಯಾಗಿದ್ದಾನೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
سَاُرْهِقُهٗ صَعُوْدًا ۟ؕ
ಸದ್ಯವೇ ನಾನು ಅವನನ್ನು ಒಂದು ಪ್ರಯಾಸಕರ ಏರುವಿಕೆಯನ್ನು ಏರುವಂತೆ ಮಾಡುವೆನು.[1]
[1] ಅಂದರೆ ಅವನಿಗೆ ಸಹಿಸಲು ಅಸಾಧ್ಯವಾದ ಶಿಕ್ಷೆಯನ್ನು ನೀಡುವೆನು. ಇತರ ಕೆಲವು ವ್ಯಾಖ್ಯಾನಕಾರರು ಹೇಳುವಂತೆ ನರಕದಲ್ಲಿ ಒಂದು ಅಗ್ನಿಯ ಪರ್ವತವಿದ್ದು ಈತ ಅದನ್ನು ಏರುತ್ತಲೇ ಇರುವನು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
اِنَّهٗ فَكَّرَ وَقَدَّرَ ۟ۙ
ಅವನು ಯೋಚಿಸಿದನು ಮತ್ತು ನಿರ್ಣಯಿಸಿದನು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
فَقُتِلَ كَیْفَ قَدَّرَ ۟ۙ
ಅವನು ನಾಶವಾಗಲಿ! ಅವನು ಹೇಗೆ ನಿರ್ಣಯಿಸಿದನು?
ߊߙߊߓߎߞߊ߲ߡߊ ߞߘߐߦߌߘߊ ߟߎ߬:
ثُمَّ قُتِلَ كَیْفَ قَدَّرَ ۟ۙ
ಪುನಃ ಅವನು ನಾಶವಾಗಲಿ! ಅವನು ಹೇಗೆ ನಿರ್ಣಯಿಸಿದನು?
ߊߙߊߓߎߞߊ߲ߡߊ ߞߘߐߦߌߘߊ ߟߎ߬:
ثُمَّ نَظَرَ ۟ۙ
ನಂತರ ಅವನು ನೋಡಿದನು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
ثُمَّ عَبَسَ وَبَسَرَ ۟ۙ
ನಂತರ ಅವನು ಹುಬ್ಬುಗಂಟಿಕ್ಕಿದನು ಮತ್ತು ಮುಖವನ್ನು ಸಿಂಡರಿಸಿದನು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
ثُمَّ اَدْبَرَ وَاسْتَكْبَرَ ۟ۙ
ನಂತರ ಅವನು ಹಿಂದಡಿಯಿಟ್ಟನು ಮತ್ತು ಅಹಂಕಾರ ತೋರಿದನು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
فَقَالَ اِنْ هٰذَاۤ اِلَّا سِحْرٌ یُّؤْثَرُ ۟ۙ
ನಂತರ ಅವನು ಹೇಳಿದನು: “ಇದು (ಕುರ್‌ಆನ್) ನಕಲು ಮಾಡಲಾದ ಮಾಟಗಾರಿಕೆಯಲ್ಲದೆ ಇನ್ನೇನೂ ಅಲ್ಲ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
اِنْ هٰذَاۤ اِلَّا قَوْلُ الْبَشَرِ ۟ؕ
ಇದು ಕೇವಲ ಒಬ್ಬ ಮನುಷ್ಯನ ಮಾತಾಗಿದೆ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
سَاُصْلِیْهِ سَقَرَ ۟
ನಾನು ಸದ್ಯವೇ ಅವನನ್ನು ಸಖರ್‌ಗೆ (ನರಕಕ್ಕೆ) ಹಾಕುವೆನು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَمَاۤ اَدْرٰىكَ مَا سَقَرُ ۟ؕ
ಸಖರ್ ಏನೆಂದು ನಿಮಗೇನು ಗೊತ್ತು?
ߊߙߊߓߎߞߊ߲ߡߊ ߞߘߐߦߌߘߊ ߟߎ߬:
لَا تُبْقِیْ وَلَا تَذَرُ ۟ۚ
ಅದು ಏನನ್ನೂ ಉಳಿಸುವುದಿಲ್ಲ ಮತ್ತು ಬಿಟ್ಟುಬಿಡುವುದಿಲ್ಲ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
لَوَّاحَةٌ لِّلْبَشَرِ ۟ۚ
ಅದು ಚರ್ಮವನ್ನು ಸುಟ್ಟು ಕರಕಲಾಗಿಸುತ್ತದೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
عَلَیْهَا تِسْعَةَ عَشَرَ ۟ؕ
ಅದರ ಮೇಲೆ ಹತ್ತೊಂಬತ್ತು (ದೇವದೂತರುಗಳು) ಇದ್ದಾರೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَمَا جَعَلْنَاۤ اَصْحٰبَ النَّارِ اِلَّا مَلٰٓىِٕكَةً ۪— وَّمَا جَعَلْنَا عِدَّتَهُمْ اِلَّا فِتْنَةً لِّلَّذِیْنَ كَفَرُوْا ۙ— لِیَسْتَیْقِنَ الَّذِیْنَ اُوْتُوا الْكِتٰبَ وَیَزْدَادَ الَّذِیْنَ اٰمَنُوْۤا اِیْمَانًا وَّلَا یَرْتَابَ الَّذِیْنَ اُوْتُوا الْكِتٰبَ وَالْمُؤْمِنُوْنَ ۙ— وَلِیَقُوْلَ الَّذِیْنَ فِیْ قُلُوْبِهِمْ مَّرَضٌ وَّالْكٰفِرُوْنَ مَاذَاۤ اَرَادَ اللّٰهُ بِهٰذَا مَثَلًا ؕ— كَذٰلِكَ یُضِلُّ اللّٰهُ مَنْ یَّشَآءُ وَیَهْدِیْ مَنْ یَّشَآءُ ؕ— وَمَا یَعْلَمُ جُنُوْدَ رَبِّكَ اِلَّا هُوَ ؕ— وَمَا هِیَ اِلَّا ذِكْرٰی لِلْبَشَرِ ۟۠
ನಾವು ನರಕದ ಕಾವಲುಗಾರರಾಗಿ ಕೇವಲ ದೇವದೂತರುಗಳನ್ನು ಮಾತ್ರ ನಿಶ್ಚಯಿಸಿದ್ದೇವೆ. ನಾವು ಅವರ ಸಂಖ್ಯೆಯನ್ನು ಸತ್ಯನಿಷೇಧಿಗಳಿಗೆ ಒಂದು ಪರೀಕ್ಷೆಯಾಗಿ ಮಾಡಿದ್ದೇವೆ.[1] ಇದೇಕೆಂದರೆ, ಗ್ರಂಥ ನೀಡಲಾದವರಿಗೆ ದೃಢವಿಶ್ವಾಸ ಉಂಟಾಗಲೆಂದು[2] ಮತ್ತು ಸತ್ಯವಿಶ್ವಾಸಿಗಳ ವಿಶ್ವಾಸವು ಇನ್ನಷ್ಟು ಹೆಚ್ಚಾಗಲೆಂದು. ಅದೇ ರೀತಿ ಗ್ರಂಥ ನೀಡಲಾದವರು ಹಾಗೂ ಸತ್ಯವಿಶ್ವಾಸಿಗಳು ಸಂಶಯ ಪಡದಿರಲೆಂದು ಮತ್ತು ಹೃದಯದಲ್ಲಿ ರೋಗವಿರುವವರು ಹಾಗೂ ಸತ್ಯನಿಷೇಧಿಗಳು, “ಈ ವಿವರಣೆಯಿಂದ ಅಲ್ಲಾಹು ಉದ್ದೇಶಿಸುವುದೇನು?” ಎಂದು ಕೇಳಲೆಂದು. ಈ ರೀತಿ ಅಲ್ಲಾಹು ಅವನು ಇಚ್ಛಿಸಿದವರನ್ನು ದಾರಿತಪ್ಪಿಸುತ್ತಾನೆ ಮತ್ತು ಅವನು ಇಚ್ಛಿಸಿದವರಿಗೆ ಸನ್ಮಾರ್ಗ ತೋರಿಸುತ್ತಾನೆ. ನಿಮ್ಮ ಪರಿಪಾಲಕನ (ಅಲ್ಲಾಹನ) ಸೈನ್ಯವನ್ನು ಅವನ ಹೊರತು ಯಾರೂ ತಿಳಿದಿಲ್ಲ. ಅದು (ನರಕ) ಮನುಷ್ಯರಿಗೆ ಒಂದು ಉಪದೇಶವಲ್ಲದೆ ಇನ್ನೇನೂ ಅಲ್ಲ.
[1] ನರಕದ ಕಾವಲುಗಾರರ ಸಂಖ್ಯೆ 19 ಎಂಬ ವಚನ ಅವತೀರ್ಣವಾದಾಗ, ಸತ್ಯನಿಷೇಧಿಗಳ ಮುಖಂಡ ಅಬೂಜಹಲ್ ತನ್ನ ಜನರನ್ನು ಕರೆದು ವ್ಯಂಗ್ಯವಾಗಿ ಹೇಳಿದ: ನಿಮ್ಮಲ್ಲಿ ಪ್ರತಿ ಹತ್ತು ಜನರಿಗೆ ಒಬ್ಬೊಬ್ಬ ದೇವದೂತನನ್ನು ಸೋಲಿಸಲು ಸಾಧ್ಯವಿಲ್ಲವೇ? ಆಗ ಈ ವಚನವು ಅವತೀರ್ಣವಾಯಿತು.
[2] ಈ ವಿಷಯವು ತೌರಾತ್ ಮತ್ತು ಇಂಜೀಲ್‌ನಲ್ಲಿ ಕೂಡ ಇರುವುದರಿಂದ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದ್ದು ಸತ್ಯವೆಂದು ಗ್ರಂಥದವರಿಗೆ ದೃಢವಿಶ್ವಾಸ ಉಂಟಾಗಲಿದೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
كَلَّا وَالْقَمَرِ ۟ۙ
ಇಲ್ಲ; ಚಂದ್ರನ ಮೇಲಾಣೆ!
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَالَّیْلِ اِذْ اَدْبَرَ ۟ۙ
ರಾತ್ರಿಯ ಮೇಲಾಣೆ! ಅದು ಹಿಂದಕ್ಕೆ ಸರಿಯುವಾಗ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَالصُّبْحِ اِذَاۤ اَسْفَرَ ۟ۙ
ಬೆಳಗ್ಗಿನ ಮೇಲಾಣೆ! ಅದು ಬೆಳಗುವಾಗ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
اِنَّهَا لَاِحْدَی الْكُبَرِ ۟ۙ
ನಿಶ್ಚಯವಾಗಿಯೂ ಅದು (ನರಕ) ಮಹಾ ವಿಷಯಗಳಲ್ಲಿ ಒಂದಾಗಿದೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
نَذِیْرًا لِّلْبَشَرِ ۟ۙ
ಮನುಷ್ಯರಿಗೆ ಒಂದು ಮುನ್ನೆಚ್ಚರಿಕೆಯಾಗಿದೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
لِمَنْ شَآءَ مِنْكُمْ اَنْ یَّتَقَدَّمَ اَوْ یَتَاَخَّرَ ۟ؕ
ಅಂದರೆ ನಿಮ್ಮಲ್ಲಿ ಮುಂದಕ್ಕೆ ಬರಲು ಅಥವಾ ಹಿಂದೆಯೇ ಉಳಿಯಲು ಇಚ್ಛಿಸುವವರಿಗೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
كُلُّ نَفْسٍ بِمَا كَسَبَتْ رَهِیْنَةٌ ۟ۙ
ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಕರ್ಮಗಳಿಗೆ ಅಡಮಾನವಾಗಿದ್ದಾನೆ.[1]
[1] ಅಂದರೆ ಒಂದೋ ಅವನ ಕರ್ಮಗಳು ಅವನನ್ನು ಸ್ವರ್ಗಕ್ಕೆ ಸೇರಿಸುತ್ತವೆ ಅಥವಾ ಅವನ ಕರ್ಮಗಳು ಅವನನ್ನು ನರಕಕ್ಕೆ ಸೇರಿಸುತ್ತವೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
اِلَّاۤ اَصْحٰبَ الْیَمِیْنِ ۟ؕۛ
ಬಲಭಾಗದ ಜನರ ಹೊರತು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
فِیْ جَنّٰتٍ ۛ۫— یَتَسَآءَلُوْنَ ۟ۙ
ಅವರು ಸ್ವರ್ಗೋದ್ಯಾನಗಳಲ್ಲಿ (ಕುಳಿತು) ಪರಸ್ಪರ ವಿಚಾರಿಸುವರು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
عَنِ الْمُجْرِمِیْنَ ۟ۙ
ಅಪರಾಧಿಗಳ ಕುರಿತು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
مَا سَلَكَكُمْ فِیْ سَقَرَ ۟
ನಿಮ್ಮನ್ನು ನರಕದಲ್ಲಿ ಬೀಳಿಸಿದ್ದೇನು?
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالُوْا لَمْ نَكُ مِنَ الْمُصَلِّیْنَ ۟ۙ
ಅವರು ಹೇಳುವರು: “ನಾವು ನಮಾಝ್ ಮಾಡುವವರಾಗಿರಲಿಲ್ಲ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَلَمْ نَكُ نُطْعِمُ الْمِسْكِیْنَ ۟ۙ
ನಾವು ಬಡವರಿಗೆ ಆಹಾರ ನೀಡುತ್ತಿರಲಿಲ್ಲ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَكُنَّا نَخُوْضُ مَعَ الْخَآىِٕضِیْنَ ۟ۙ
ನಾವು ಅನಗತ್ಯ ಮಾತುಕತೆ ನಡೆಸುವವರ (ಸತ್ಯನಿಷೇಧಿಗಳ) ಜೊತೆಗೆ ಅನಗತ್ಯ ಮಾತುಗಳಲ್ಲಿ ತಲ್ಲೀನರಾಗಿದ್ದೆವು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَكُنَّا نُكَذِّبُ بِیَوْمِ الدِّیْنِ ۟ۙ
ನಾವು ಪ್ರತಿಫಲದ ದಿನವನ್ನು ನಿಷೇಧಿಸುತ್ತಿದ್ದೆವು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
حَتّٰۤی اَتٰىنَا الْیَقِیْنُ ۟ؕ
ಎಲ್ಲಿಯವರೆಗೆಂದರೆ ನಮಗೆ ಸಾವು ಬರುವ ತನಕ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
فَمَا تَنْفَعُهُمْ شَفَاعَةُ الشّٰفِعِیْنَ ۟ؕ
ಅವರಿಗೆ ಶಿಫಾರಸುಗಾರರ ಶಿಫಾರಸು ಪ್ರಯೋಜನಪಡುವುದಿಲ್ಲ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
فَمَا لَهُمْ عَنِ التَّذْكِرَةِ مُعْرِضِیْنَ ۟ۙ
ಅವರಿಗೇನಾಗಿದೆ? ಅವರೇಕೆ ಉಪದೇಶದಿಂದ ವಿಮುಖರಾಗುತ್ತಿದ್ದಾರೆ?
ߊߙߊߓߎߞߊ߲ߡߊ ߞߘߐߦߌߘߊ ߟߎ߬:
كَاَنَّهُمْ حُمُرٌ مُّسْتَنْفِرَةٌ ۟ۙ
ಅವರು ಗಾಬರಿಗೊಂಡ ಕತ್ತೆಗಳೋ ಎಂಬಂತೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
فَرَّتْ مِنْ قَسْوَرَةٍ ۟ؕ
ಸಿಂಹವನ್ನು ಕಂಡು ಪಲಾಯನ ಮಾಡಿದ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
بَلْ یُرِیْدُ كُلُّ امْرِئٍ مِّنْهُمْ اَنْ یُّؤْتٰی صُحُفًا مُّنَشَّرَةً ۟ۙ
ಅಲ್ಲ, ವಾಸ್ತವವಾಗಿ ಅವರಲ್ಲಿ ಪ್ರತಿಯೊಬ್ಬನೂ ತನಗೆ ತೆರೆದಿಟ್ಟ ಧರ್ಮಗ್ರಂಥಗಳು ಸಿಗಬೇಕೆಂದು ಬಯಸುತ್ತಾನೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
كَلَّا ؕ— بَلْ لَّا یَخَافُوْنَ الْاٰخِرَةَ ۟ؕ
ಇಲ್ಲ; ವಾಸ್ತವವಾಗಿ ಅವರು ಪರಲೋಕವನ್ನು ಭಯಪಡುವುದಿಲ್ಲ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
كَلَّاۤ اِنَّهٗ تَذْكِرَةٌ ۟ۚ
ಖಂಡಿತ ಇಲ್ಲ. ನಿಶ್ಚಯವಾಗಿಯೂ ಇದು (ಕುರ್‌ಆನ್) ಉಪದೇಶವಾಗಿದೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
فَمَنْ شَآءَ ذَكَرَهٗ ۟ؕ
ಇಷ್ಟವಿರುವವರು ಅದರಿಂದ ಉಪದೇಶವನ್ನು ಪಡೆದುಕೊಳ್ಳಲಿ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَمَا یَذْكُرُوْنَ اِلَّاۤ اَنْ یَّشَآءَ اللّٰهُ ؕ— هُوَ اَهْلُ التَّقْوٰی وَاَهْلُ الْمَغْفِرَةِ ۟۠
ಆದರೆ ಅಲ್ಲಾಹು ಇಚ್ಛಿಸಿದ ಹೊರತು ಅವರು ಅದರಿಂದ ಉಪದೇಶ ಪಡೆಯುವುದಿಲ್ಲ. ಅವನು ಭಯಪಡಲು ಅರ್ಹನಾಗಿದ್ದಾನೆ ಮತ್ತು ಕ್ಷಮಿಸಲು ಅರ್ಹನಾಗಿದ್ದಾನೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
 
ߞߘߐ ߟߎ߬ ߘߟߊߡߌ߬ߘߊ߬ߟߌ ߝߐߘߊ ߘߏ߫: ߘߌ߬ߛߊ߬ߕߌ߮ ߝߐߘߊ
ߝߐߘߊ ߟߎ߫ ߦߌ߬ߘߊ߬ߥߟߊ ߞߐߜߍ ߝߙߍߕߍ
 
ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - الترجمة الكنادية - ߘߟߊߡߌߘߊ ߟߎ߫ ߦߌ߬ߘߊ߬ߥߟߊ

ترجمة معاني القرآن الكريم إلى اللغة الكنادية ترجمها محمد حمزة بتور.

ߘߊߕߎ߲߯ߠߌ߲