Check out the new design

ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫ * - ߘߟߊߡߌߘߊ ߟߎ߫ ߦߌ߬ߘߊ߬ߥߟߊ

PDF XML CSV Excel API
Please review the Terms and Policies

ߞߘߐ ߟߎ߬ ߘߟߊߡߌ߬ߘߊ߬ߟߌ ߝߐߘߊ ߘߏ߫: ߞߐ߲ߛߐ߲ ߠߎ߬   ߟߝߊߙߌ ߘߏ߫:
وَاِنْ یُّرِیْدُوْۤا اَنْ یَّخْدَعُوْكَ فَاِنَّ حَسْبَكَ اللّٰهُ ؕ— هُوَ الَّذِیْۤ اَیَّدَكَ بِنَصْرِهٖ وَبِالْمُؤْمِنِیْنَ ۟ۙ
ಅವರು ನಿಮಗೆ ದ್ರೋಹ ಬಗೆಯಲು ಬಯಸಿದರೆ, ನಿಶ್ಚಯವಾಗಿಯೂ ನಿಮಗೆ ಅಲ್ಲಾಹು ಸಾಕು. ತನ್ನ ಸಹಾಯದಿಂದ ಮತ್ತು ಸತ್ಯವಿಶ್ವಾಸಿಗಳ ಮೂಲಕ ನಿಮಗೆ ಶಕ್ತಿ ನೀಡಿದ್ದು ಅವನೇ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَاَلَّفَ بَیْنَ قُلُوْبِهِمْ ؕ— لَوْ اَنْفَقْتَ مَا فِی الْاَرْضِ جَمِیْعًا مَّاۤ اَلَّفْتَ بَیْنَ قُلُوْبِهِمْ ۙ— وَلٰكِنَّ اللّٰهَ اَلَّفَ بَیْنَهُمْ ؕ— اِنَّهٗ عَزِیْزٌ حَكِیْمٌ ۟
ಅವನು ಅವರ (ಸತ್ಯವಿಶ್ವಾಸಿಗಳ) ಹೃದಯಗಳನ್ನು ಬೆಸೆದನು. ಭೂಮಿಯಲ್ಲಿರುವ ಎಲ್ಲಾ ವಸ್ತುಗಳನ್ನು ಖರ್ಚು ಮಾಡಿದರೂ ಸಹ ನಿಮಗೆ ಅವರ ಹೃದಯಗಳನ್ನು ಬೆಸೆಯಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಅಲ್ಲಾಹು ಅವರನ್ನು ಒಂದುಗೂಡಿಸಿದನು. ನಿಶ್ಚಯವಾಗಿಯೂ ಅವನು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
یٰۤاَیُّهَا النَّبِیُّ حَسْبُكَ اللّٰهُ وَمَنِ اتَّبَعَكَ مِنَ الْمُؤْمِنِیْنَ ۟۠
ಓ ಪ್ರವಾದಿಯವರೇ! ನಿಮಗೆ ಮತ್ತು ನಿಮ್ಮನ್ನು ಹಿಂಬಾಲಿಸಿದ ಸತ್ಯವಿಶ್ವಾಸಿಗಳಿಗೆ ಅಲ್ಲಾಹು ಸಾಕು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
یٰۤاَیُّهَا النَّبِیُّ حَرِّضِ الْمُؤْمِنِیْنَ عَلَی الْقِتَالِ ؕ— اِنْ یَّكُنْ مِّنْكُمْ عِشْرُوْنَ صٰبِرُوْنَ یَغْلِبُوْا مِائَتَیْنِ ۚ— وَاِنْ یَّكُنْ مِّنْكُمْ مِّائَةٌ یَّغْلِبُوْۤا اَلْفًا مِّنَ الَّذِیْنَ كَفَرُوْا بِاَنَّهُمْ قَوْمٌ لَّا یَفْقَهُوْنَ ۟
ಓ ಪ್ರವಾದಿಯವರೇ! ಸತ್ಯವಿಶ್ವಾಸಿಗಳನ್ನು ಯುದ್ಧ ಮಾಡಲು ಉತ್ತೇಜಿಸಿರಿ. ನಿಮ್ಮಲ್ಲಿ ಇಪ್ಪತ್ತು ಸ್ಥೈರ್ಯವಂತರಿದ್ದರೆ ಅವರು ಇನ್ನೂರು ವೈರಿಗಳನ್ನು ಸದೆಬಡಿಯುವರು. ನಿಮ್ಮಲ್ಲಿ ನೂರು ಮಂದಿಯಿದ್ದರೆ ಅವರು ಸಾವಿರ ಸತ್ಯನಿಷೇಧಿಗಳನ್ನು ಸದೆಬಡಿಯುವರು. ಅದೇಕೆಂದರೆ ಅವರು (ಸತ್ಯನಿಷೇಧಿಗಳು) ಅರ್ಥಮಾಡಿಕೊಳ್ಳದ ಜನರಾಗಿದ್ದಾರೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
اَلْـٰٔنَ خَفَّفَ اللّٰهُ عَنْكُمْ وَعَلِمَ اَنَّ فِیْكُمْ ضَعْفًا ؕ— فَاِنْ یَّكُنْ مِّنْكُمْ مِّائَةٌ صَابِرَةٌ یَّغْلِبُوْا مِائَتَیْنِ ۚ— وَاِنْ یَّكُنْ مِّنْكُمْ اَلْفٌ یَّغْلِبُوْۤا اَلْفَیْنِ بِاِذْنِ اللّٰهِ ؕ— وَاللّٰهُ مَعَ الصّٰبِرِیْنَ ۟
ಈಗ ಅಲ್ಲಾಹು ನಿಮಗೆ ರಿಯಾಯಿತಿ ನೀಡಿದ್ದಾನೆ ಮತ್ತು ನಿಮ್ಮಲ್ಲಿ ಬಲಹೀನತೆಯಿದೆಯೆಂದು ತಿಳಿದಿದ್ದಾನೆ. ಆದ್ದರಿಂದ, ನಿಮ್ಮಲ್ಲಿ ನೂರು ಸ್ಥೈರ್ಯವಂತರಿದ್ದರೆ ಅವರು ಇನ್ನೂರು ಮಂದಿಯನ್ನು ಸದೆಬಡಿಯುವರು ಮತ್ತು ನಿಮ್ಮಲ್ಲಿ ಸಾವಿರ ಮಂದಿಯಿದ್ದರೆ ಅವರು ಅಲ್ಲಾಹನ ಅಪ್ಪಣೆಯಿಂದ ಎರಡು ಸಾವಿರ ವೈರಿಗಳನ್ನು ಸದೆಬಡಿಯುವರು. ಅಲ್ಲಾಹು ಸ್ಥೈರ್ಯವಂತರ ಜೊತೆಗಿದ್ದಾನೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
مَا كَانَ لِنَبِیٍّ اَنْ یَّكُوْنَ لَهٗۤ اَسْرٰی حَتّٰی یُثْخِنَ فِی الْاَرْضِ ؕ— تُرِیْدُوْنَ عَرَضَ الدُّنْیَا ۖۗ— وَاللّٰهُ یُرِیْدُ الْاٰخِرَةَ ؕ— وَاللّٰهُ عَزِیْزٌ حَكِیْمٌ ۟
(ಶತ್ರುಗಳನ್ನು ಸದೆಬಡಿದು) ನಾಡಿನಲ್ಲಿ ಪ್ರಾಬಲ್ಯ ಪಡೆಯುವ ತನಕ ಪ್ರವಾದಿಯ ಕೈಯಲ್ಲಿ ಯುದ್ಧ ಖೈದಿಗಳಿರುವುದು ಸರಿಯಲ್ಲ.[1] ನೀವು ಇಹಲೋಕದ ಐಶ್ವರ್ಯವನ್ನು ಬಯಸುತ್ತೀರಿ. ಆದರೆ ಅಲ್ಲಾಹು ಪರಲೋಕವನ್ನು ಬಯಸುತ್ತಾನೆ. ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.
[1] ಬದ್ರ್ ಯುದ್ಧದಲ್ಲಿ 70 ಶತ್ರುಗಳು ಹತರಾಗಿದ್ದರು ಮತ್ತು 70 ಶತ್ರುಗಳನ್ನು ಸೆರೆಹಿಡಿಯಲಾಗಿತ್ತು. ಇದು ಇಸ್ಲಾಂನಲ್ಲಿ ನಡೆದ ಮೊದಲ ಯುದ್ಧವಾಗಿದ್ದರಿಂದ ಈ ಖೈದಿಗಳನ್ನು ಏನು ಮಾಡಬೇಕೆಂಬ ಬಗ್ಗೆ ಯಾವುದೇ ನಿರ್ಧಾರವಿರಲಿಲ್ಲ. ಆದ್ದರಿಂದ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮುಸಲ್ಮಾನರ ಸಭೆ ಕರೆದು ಸಮಾಲೋಚನೆ ಮಾಡಿದರು. ಕೆಲವರು ಖೈದಿಗಳನ್ನು ಕೊಲ್ಲಬೇಕೆಂದು ಅಭಿಪ್ರಾಯ ಹೇಳಿದರೆ ಕೆಲವರು ಪರಿಹಾರವನ್ನು ಪಡೆದು ಖೈದಿಗಳನ್ನು ಬಿಟ್ಟು ಬಿಡೋಣ ಎಂದರು. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎರಡನೇ ಅಭಿಪ್ರಾಯವನ್ನು ಆರಿಸಿದರು. ಆಗ ಅಲ್ಲಾಹು ಈ ವಚನವನ್ನು ಅವತೀರ್ಣಗೊಳಿಸಿದನು. ಅಂದರೆ, ಮುಸಲ್ಮಾನರಿಗೆ ನಾಡಿನಲ್ಲಿ ಪ್ರಾಬಲ್ಯ ಸಿಗುವ ತನಕ ಪರಿಹಾರ ಪಡೆದು ಯುದ್ಧ ಖೈದಿಗಳನ್ನು ಬಿಟ್ಟುಬಿಡಬಾರದು. ಏಕೆಂದರೆ ಅದರಿಂದ ಅವರು ತಂತ್ರಗಳನ್ನು ರೂಪಿಸಿ ಇನ್ನೊಂದು ಯುದ್ಧಕ್ಕೆ ತಯಾರಿ ನಡೆಸುವ ಸಾಧ್ಯತೆಯಿರುತ್ತದೆ. ಆದರೆ ಮುಸಲ್ಮಾನರಿಗೆ ನಾಡಿನಲ್ಲಿ ಪ್ರಾಬಲ್ಯವುಂಟಾಗಿ ಅವರನ್ನು ಸೋಲಿಸುವುದು ಅಷ್ಟು ಸುಲಭವಲ್ಲ ಎಂಬ ಸ್ಥಿತಿಯು ಉಂಟಾದರೆ ಯುದ್ಧ ಖೈದಿಗಳ ವಿಷಯದಲ್ಲಿ ಈ ಕೆಳಗಿನ ನಾಲ್ಕು ಆಯ್ಕೆಗಳಲ್ಲಿ ಒಂದನ್ನು ಆರಿಸಬಹುದು: 1. ಅವರನ್ನು ಕೊಲ್ಲುವುದು. 2. ಪರಿಹಾರ ಪಡೆದು ಅವರನ್ನು ಬಿಟ್ಟುಬಿಡುವುದು. 3. ಅವರನ್ನು ಮುಸಲ್ಮಾನ ಖೈದಿಗಳೊಡನೆ ವಿನಿಮಯ ಮಾಡಿಕೊಳ್ಳುವುದು. 4. ಅವರನ್ನು ಗುಲಾಮರನ್ನಾಗಿ ಮಾಡುವುದು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
لَوْلَا كِتٰبٌ مِّنَ اللّٰهِ سَبَقَ لَمَسَّكُمْ فِیْمَاۤ اَخَذْتُمْ عَذَابٌ عَظِیْمٌ ۟
ಅಲ್ಲಾಹನ ಕಡೆಯ ಒಂದು ಪೂರ್ವ ಲಿಖಿತ ನಿರ್ಧಾರವಿಲ್ಲದಿರುತ್ತಿದ್ದರೆ, ನೀವೇನು ಪಡೆದಿರೋ ಅದಕ್ಕಾಗಿ ನಿಮಗೆ ಘೋರ ಶಿಕ್ಷೆ ನೀಡಲಾಗುತ್ತಿತ್ತು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
فَكُلُوْا مِمَّا غَنِمْتُمْ حَلٰلًا طَیِّبًا ۖؗ— وَّاتَّقُوا اللّٰهَ ؕ— اِنَّ اللّٰهَ غَفُوْرٌ رَّحِیْمٌ ۟۠
ಆದ್ದರಿಂದ (ಯುದ್ಧದಲ್ಲಿ) ನೀವು ಗಳಿಸಿದ ಧರ್ಮಸಮ್ಮತ ಮತ್ತು ಶುದ್ಧ ಸಂಪತ್ತನ್ನು ತಿನ್ನಿರಿ. ಅಲ್ಲಾಹನನ್ನು ಭಯಪಡಿರಿ. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
 
ߞߘߐ ߟߎ߬ ߘߟߊߡߌ߬ߘߊ߬ߟߌ ߝߐߘߊ ߘߏ߫: ߞߐ߲ߛߐ߲ ߠߎ߬
ߝߐߘߊ ߟߎ߫ ߦߌ߬ߘߊ߬ߥߟߊ ߞߐߜߍ ߝߙߍߕߍ
 
ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫ - ߘߟߊߡߌߘߊ ߟߎ߫ ߦߌ߬ߘߊ߬ߥߟߊ

ߡߊ߬ߥߊ߲߬ߡߊ߬ ߡߊ߬ߙߊ߲߬ߡߊ߬ ߞߊ߬ߟߊ߲߬ߡߊ߬ ߘߟߊߡߌߘߊ ߘߟߊߡߌߘߊ ߙߎ߬ߥߊ߯ߘߎ߫ ߢߍߡߌߘߊ ߓߟߏ߫ ߡߊ߬ߥߊ߲߬ߡߊ߬ ߡߊ߬ߙߊ߲߬ߡߊ߬ ߞߊ߬ߟߊ߲߬ߡߊ߬ ߘߟߊߡߌߘߊ ߘߟߊߡߌߘߊ ߙߎ߬ߥߊ߯ߘߎ߫ ߢߍߡߌߘߊ ߓߟߏ߫.

ߘߊߕߎ߲߯ߠߌ߲