Check out the new design

ශුද්ධවූ අල් කුර්ආන් අර්ථ කථනය - කැනඩියානු පරිවර්තනය - හම්සා බිතූන් * - පරිවර්තන පටුන

PDF XML CSV Excel API
Please review the Terms and Policies

අර්ථ කථනය පරිච්ඡේදය: අල් මුජාදලා   වාක්‍යය:
اَلَمْ تَرَ اَنَّ اللّٰهَ یَعْلَمُ مَا فِی السَّمٰوٰتِ وَمَا فِی الْاَرْضِ ؕ— مَا یَكُوْنُ مِنْ نَّجْوٰی ثَلٰثَةٍ اِلَّا هُوَ رَابِعُهُمْ وَلَا خَمْسَةٍ اِلَّا هُوَ سَادِسُهُمْ وَلَاۤ اَدْنٰی مِنْ ذٰلِكَ وَلَاۤ اَكْثَرَ اِلَّا هُوَ مَعَهُمْ اَیْنَ مَا كَانُوْا ۚ— ثُمَّ یُنَبِّئُهُمْ بِمَا عَمِلُوْا یَوْمَ الْقِیٰمَةِ ؕ— اِنَّ اللّٰهَ بِكُلِّ شَیْءٍ عَلِیْمٌ ۟
ಭೂಮ್ಯಾಕಾಶಗಳಲ್ಲಿರುವ ಎಲ್ಲಾ ವಸ್ತುಗಳನ್ನು ಅಲ್ಲಾಹು ತಿಳಿದಿದ್ದಾನೆಂದು ನೀವು ನೋಡಿಲ್ಲವೇ? ಮೂರು ಜನರು ನಡೆಸುವ ರಹಸ್ಯ ಮಾತುಕತೆಯು ನಾಲ್ಕನೆಯವನಾಗಿ ಅಲ್ಲಾಹು ಇಲ್ಲದಿರುವ ಹೊರತು ಸಂಭವಿಸುವುದಿಲ್ಲ. ಐದು ಜನರು ನಡೆಸುವ ರಹಸ್ಯ ಮಾತುಕತೆಯು ಆರನೆಯವನಾಗಿ ಅಲ್ಲಾಹು ಇಲ್ಲದಿರುವ ಹೊರತು ಸಂಭವಿಸುವುದಿಲ್ಲ. ಅದಕ್ಕಿಂತ ಕಡಿಮೆ ಸಂಖ್ಯೆಯ ಅಥವಾ ಹೆಚ್ಚು ಸಂಖ್ಯೆಯ ಜನರು ನಡೆಸುವ (ರಹಸ್ಯ ಮಾತುಕತೆಯು) ಅವರ ಜೊತೆಗೆ ಅಲ್ಲಾಹು ಇಲ್ಲದಿರುವ ಹೊರತು ಸಂಭವಿಸುವುದಿಲ್ಲ. ಅವರು ಎಲ್ಲೇ ಇದ್ದರೂ ಸಹ. ನಂತರ ಪುನರುತ್ಥಾನ ದಿನದಂದು ಅವರು ಮಾಡಿರುವ ಕರ್ಮಗಳ ಬಗ್ಗೆ ಅವನು ಅವರಿಗೆ ತಿಳಿಸಿಕೊಡುವನು. ನಿಶ್ಚಯವಾಗಿಯೂ ಅಲ್ಲಾಹು ಎಲ್ಲ ವಿಷಯಗಳನ್ನು ತಿಳಿದವನಾಗಿದ್ದಾನೆ.
අල්කුර්ආන් අරාබි අර්ථ විවරණ:
اَلَمْ تَرَ اِلَی الَّذِیْنَ نُهُوْا عَنِ النَّجْوٰی ثُمَّ یَعُوْدُوْنَ لِمَا نُهُوْا عَنْهُ وَیَتَنٰجَوْنَ بِالْاِثْمِ وَالْعُدْوَانِ وَمَعْصِیَتِ الرَّسُوْلِ ؗ— وَاِذَا جَآءُوْكَ حَیَّوْكَ بِمَا لَمْ یُحَیِّكَ بِهِ اللّٰهُ ۙ— وَیَقُوْلُوْنَ فِیْۤ اَنْفُسِهِمْ لَوْلَا یُعَذِّبُنَا اللّٰهُ بِمَا نَقُوْلُ ؕ— حَسْبُهُمْ جَهَنَّمُ ۚ— یَصْلَوْنَهَا ۚ— فَبِئْسَ الْمَصِیْرُ ۟
ರಹಸ್ಯ ಮಾತುಕತೆ ನಡೆಸುವುದನ್ನು ವಿರೋಧಿಸಲಾದ ಜನರನ್ನು ನೀವು ನೋಡಿಲ್ಲವೇ? ನಂತರ ಅವರಿಗೆ ವಿರೋಧಿಸಲಾದ ಕೆಲಸವನ್ನೇ ಅವರು ಮಾಡುತ್ತಾರೆ. ಅವರು ಪರಸ್ಪರ ಪಾಪ, ಅತಿರೇಕ ಮತ್ತು ಪ್ರವಾದಿಯನ್ನು ಧಿಕ್ಕರಿಸುವ ಕೆಲಸಗಳಿಗಾಗಿ ರಹಸ್ಯ ಮಾತುಕತೆ ಮಾಡುತ್ತಾರೆ. ಅವರು ನಿಮ್ಮ ಬಳಿಗೆ ಬಂದರೆ ಅಲ್ಲಾಹು ನಿಮಗೆ ಸಲಾಂ ಹೇಳಲು ಬಳಸದ ಪದಗಳೊಂದಿಗೆ ಅವರು ನಿಮಗೆ ಸಲಾಂ ಹೇಳುತ್ತಾರೆ.[1] “ನಾವು ಹೇಳುವ ಈ ಮಾತುಗಳಿಗಾಗಿ ಅಲ್ಲಾಹು ನಮ್ಮನ್ನೇಕೆ ಶಿಕ್ಷಿಸುವುದಿಲ್ಲ?” ಎಂದು ಅವರು ಮನಸ್ಸಿನಲ್ಲೇ ಕೇಳುತ್ತಾರೆ.[2] ಅವರಿಗೆ ನರಕಾಗ್ನಿಯೇ ಸಾಕು. ಅವರು ಅದರಲ್ಲಿ ಉರಿಯುವರು. ಆ ಗಮ್ಯಸ್ಥಾನವು ಬಹಳ ನಿಕೃಷ್ಟವಾಗಿದೆ.
[1] ಅಂದರೆ ಅವರು "ಅಸ್ಸಲಾಮು ಅಲೈಕುಂ" (ನಿಮ್ಮ ಮೇಲೆ ಶಾಂತಿಯಿರಲಿ) ಎಂದು ಹೇಳುವ ಬದಲು "ಅಸ್ಸಾಮು ಅಲೈಕುಂ" (ನಿಮಗೆ ಸಾವು ಬರಲಿ) ಎಂದು ಹೇಳುತ್ತಿದ್ದರು.
[2] ಮುಹಮ್ಮದ್ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಿಜವಾಗಿಯೂ ಒಬ್ಬ ಪ್ರವಾದಿಯಾಗಿದ್ದರೆ ನಾವು ಅವರಿಗೆ ಇಂತಹ ಮಾತನ್ನು ಹೇಳಿಯೂ ಸಹ ಅಲ್ಲಾಹು ನಮ್ಮನ್ನೇಕೆ ಶಿಕ್ಷಿಸುವುದಿಲ್ಲ? ಎಂದು ಅವರು ಪರಸ್ಪರ ಕೇಳುತ್ತಾರೆ.
අල්කුර්ආන් අරාබි අර්ථ විවරණ:
یٰۤاَیُّهَا الَّذِیْنَ اٰمَنُوْۤا اِذَا تَنَاجَیْتُمْ فَلَا تَتَنَاجَوْا بِالْاِثْمِ وَالْعُدْوَانِ وَمَعْصِیَتِ الرَّسُوْلِ وَتَنَاجَوْا بِالْبِرِّ وَالتَّقْوٰی ؕ— وَاتَّقُوا اللّٰهَ الَّذِیْۤ اِلَیْهِ تُحْشَرُوْنَ ۟
ಓ ಸತ್ಯವಿಶ್ವಾಸಿಗಳೇ! ನೀವು ರಹಸ್ಯ ಮಾತುಕತೆ ನಡೆಸುವುದಾದರೆ ಪರಸ್ಪರ ಪಾಪ, ಅತಿರೇಕ ಮತ್ತು ಪ್ರವಾದಿಯನ್ನು ಧಿಕ್ಕರಿಸುವ ಕೆಲಸಗಳಿಗಾಗಿ ರಹಸ್ಯ ಮಾತುಕತೆ ನಡೆಸಬೇಡಿ. ಬದಲಿಗೆ, ಒಳಿತು ಮತ್ತು ದೇವಭಯದ ವಿಷಯಗಳಿಗಾಗಿ ರಹಸ್ಯ ಮಾತುಕತೆ ನಡೆಸಿರಿ. ಯಾವ ಅಲ್ಲಾಹನ ಬಳಿಗೆ ನಿಮ್ಮನ್ನು ಒಟ್ಟುಗೂಡಿಸಲಾಗುವುದೋ ಅವನನ್ನು ಭಯಪಡಿರಿ.
අල්කුර්ආන් අරාබි අර්ථ විවරණ:
اِنَّمَا النَّجْوٰی مِنَ الشَّیْطٰنِ لِیَحْزُنَ الَّذِیْنَ اٰمَنُوْا وَلَیْسَ بِضَآرِّهِمْ شَیْـًٔا اِلَّا بِاِذْنِ اللّٰهِ ؕ— وَعَلَی اللّٰهِ فَلْیَتَوَكَّلِ الْمُؤْمِنُوْنَ ۟
(ಕೆಟ್ಟ ಉದ್ದೇಶಗಳಿಗಾಗಿರುವ) ರಹಸ್ಯ ಮಾತುಕತೆಯು ಪೈಶಾಚಿಕ ಪ್ರವೃತ್ತಿಯಾಗಿದೆ. ಅದು ಸತ್ಯವಿಶ್ವಾಸಿಗಳು ವ್ಯಥೆಪಡುವಂತೆ ಮಾಡುವುದಕ್ಕಾಗಿದೆ. ಆದರೆ ಅಲ್ಲಾಹನ ಅಪ್ಪಣೆಯಿಲ್ಲದೆ ಅದು ಅವರಿಗೆ ಯಾವುದೇ ತೊಂದರೆ ಮಾಡುವುದಿಲ್ಲ. ಸತ್ಯವಿಶ್ವಾಸಿಗಳು ಅಲ್ಲಾಹನಲ್ಲಿ ಭರವಸೆಯಿಡಲಿ.
අල්කුර්ආන් අරාබි අර්ථ විවරණ:
یٰۤاَیُّهَا الَّذِیْنَ اٰمَنُوْۤا اِذَا قِیْلَ لَكُمْ تَفَسَّحُوْا فِی الْمَجٰلِسِ فَافْسَحُوْا یَفْسَحِ اللّٰهُ لَكُمْ ۚ— وَاِذَا قِیْلَ انْشُزُوْا فَانْشُزُوْا یَرْفَعِ اللّٰهُ الَّذِیْنَ اٰمَنُوْا مِنْكُمْ ۙ— وَالَّذِیْنَ اُوْتُوا الْعِلْمَ دَرَجٰتٍ ؕ— وَاللّٰهُ بِمَا تَعْمَلُوْنَ خَبِیْرٌ ۟
ಓ ಸತ್ಯವಿಶ್ವಾಸಿಗಳೇ! “ಸಭೆಗಳಲ್ಲಿ ಎಡೆ ಮಾಡಿಕೊಡಿ” ಎಂದು ನಿಮ್ಮೊಂದಿಗೆ ಹೇಳಲಾದರೆ ಎಡೆ ಮಾಡಿಕೊಡಿ. ಅಲ್ಲಾಹು ನಿಮಗೆ ಎಡೆ ಮಾಡಿಕೊಡುವನು. ನಿಮ್ಮೊಡನೆ “ಎದ್ದೇಳಿ” ಎಂದು ಹೇಳಲಾದರೆ ಎದ್ದೇಳಿರಿ. ನಿಮ್ಮ ಪೈಕಿ ಸತ್ಯವಿಶ್ವಾಸಿಗಳು ಮತ್ತು ಜ್ಞಾನ ನೀಡಲಾದವರನ್ನು ಅಲ್ಲಾಹು ಹಲವು ಪದವಿಗಳಿಗೆ ಏರಿಸುವನು. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ಸೂಕ್ಷ್ಮಜ್ಞಾನವುಳ್ಳವನಾಗಿದ್ದಾನೆ.
අල්කුර්ආන් අරාබි අර්ථ විවරණ:
 
අර්ථ කථනය පරිච්ඡේදය: අල් මුජාදලා
සූරා පටුන පිටු අංක
 
ශුද්ධවූ අල් කුර්ආන් අර්ථ කථනය - කැනඩියානු පරිවර්තනය - හම්සා බිතූන් - පරිවර්තන පටුන

මොහොමඩ් හම්සා බටූර් විසින් පරිවර්තනය කරන ලදී. රුව්වාද් පරිවර්තන මධ්‍යස්ථානයේ අධීක්ෂණය යටතේ එය වැඩි දියුණු කර ඇත.

වසන්න