Check out the new design

அல்குர்ஆன் மொழிபெயர்ப்பு - கன்னட மொழிபெயர்ப்பு - ஹம்ஸா பத்தூர் * - மொழிபெயர்ப்பு அட்டவணை

PDF XML CSV Excel API
Please review the Terms and Policies

மொழிபெயர்ப்பு அத்தியாயம்: அத்தவ்பா   வசனம்:
وَالسّٰبِقُوْنَ الْاَوَّلُوْنَ مِنَ الْمُهٰجِرِیْنَ وَالْاَنْصَارِ وَالَّذِیْنَ اتَّبَعُوْهُمْ بِاِحْسَانٍ ۙ— رَّضِیَ اللّٰهُ عَنْهُمْ وَرَضُوْا عَنْهُ وَاَعَدَّ لَهُمْ جَنّٰتٍ تَجْرِیْ تَحْتَهَا الْاَنْهٰرُ خٰلِدِیْنَ فِیْهَاۤ اَبَدًا ؕ— ذٰلِكَ الْفَوْزُ الْعَظِیْمُ ۟
ಮುಹಾಜಿರ್ ಮತ್ತು ಅನ್ಸಾರ್‌ಗಳಲ್ಲಿ ಮೊತ್ತಮೊದಲು ಸತ್ಯವಿಶ್ವಾಸ ಸ್ವೀಕರಿಸಿ ಮುಂಚೂಣಿಯಲ್ಲಿರುವವರ ಬಗ್ಗೆ ಮತ್ತು ಒಳಿತಿನ ಮೂಲಕ ಅವರನ್ನು ಹಿಂಬಾಲಿಸಿದವರ ಬಗ್ಗೆ ಅಲ್ಲಾಹು ಸಂಪ್ರೀತನಾಗಿದ್ದಾನೆ. ಅವನ ಬಗ್ಗೆ ಅವರೂ ಸಂಪ್ರೀತರಾಗಿದ್ದಾರೆ. ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳನ್ನು ಅವನು ಅವರಿಗಾಗಿ ಸಿದ್ಧಗೊಳಿಸಿದ್ದಾನೆ. ಅವರು ಅದರಲ್ಲಿ ಸದಾಕಾಲ ಶಾಶ್ವತವಾಗಿ ವಾಸಿಸುವರು. ಅದೇ ಅತಿದೊಡ್ಡ ವಿಜಯ.
அரபு விரிவுரைகள்:
وَمِمَّنْ حَوْلَكُمْ مِّنَ الْاَعْرَابِ مُنٰفِقُوْنَ ۛؕ— وَمِنْ اَهْلِ الْمَدِیْنَةِ ؔۛ۫— مَرَدُوْا عَلَی النِّفَاقِ ۫— لَا تَعْلَمُهُمْ ؕ— نَحْنُ نَعْلَمُهُمْ ؕ— سَنُعَذِّبُهُمْ مَّرَّتَیْنِ ثُمَّ یُرَدُّوْنَ اِلٰی عَذَابٍ عَظِیْمٍ ۟ۚ
ನಿಮ್ಮ ಸುತ್ತಮುತ್ತಲಲ್ಲಿರುವ ಅಲೆಮಾರಿ ಅರಬ್ಬಿಗಳಲ್ಲಿ ಕಪಟವಿಶ್ವಾಸಿಗಳಿದ್ದಾರೆ. ಮದೀನಾ ನಿವಾಸಿಗಳಲ್ಲೂ ಇದ್ದಾರೆ. ಅವರು ಕಪಟತೆಯಲ್ಲಿ ಮಿತಿಮೀರಿದ್ದಾರೆ. ನಿಮಗೆ ಅವರ ಬಗ್ಗೆ ತಿಳಿದಿಲ್ಲ. ಆದರೆ ನಮಗೆ ಅವರ ಬಗ್ಗೆ ತಿಳಿದಿದೆ. ನಾವು ಸದ್ಯವೇ ಅವರನ್ನು ಎರಡು ಬಾರಿ ಶಿಕ್ಷಿಸುವೆವು. ನಂತರ ಅವರನ್ನು ಘೋರ ಶಿಕ್ಷೆಗೆ ತಳ್ಳಲಾಗುವುದು.
அரபு விரிவுரைகள்:
وَاٰخَرُوْنَ اعْتَرَفُوْا بِذُنُوْبِهِمْ خَلَطُوْا عَمَلًا صَالِحًا وَّاٰخَرَ سَیِّئًا ؕ— عَسَی اللّٰهُ اَنْ یَّتُوْبَ عَلَیْهِمْ ؕ— اِنَّ اللّٰهَ غَفُوْرٌ رَّحِیْمٌ ۟
ತಮ್ಮ ತಪ್ಪುಗಳನ್ನು ಒಪ್ಪಿಕೊಂಡ ಬೇರೆ ಕೆಲವರಿದ್ದಾರೆ.[1] ಅವರು ಒಳ್ಳೆಯ ಮತ್ತು ಕೆಟ್ಟ ಕರ್ಮಗಳನ್ನು ಮಿಶ್ರಗೊಳಿಸಿದ್ದಾರೆ. ಅಲ್ಲಾಹು ಅವರ ಪಶ್ಚಾತ್ತಾಪವನ್ನು ಸ್ವೀಕರಿಸಲೂಬಹುದು. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
[1] ಇವರು ಸತ್ಯವಿಶ್ವಾಸಿಗಳು. ಆದರೆ ಇವರು ತಬೂಕ್ ಯುದ್ಧಕ್ಕೆ ಹೋಗಿರಲಿಲ್ಲ. ಆದರೆ ನಂತರ ಇವರಿಗೆ ತಮ್ಮ ತಪ್ಪಿನ ಅರಿವಾಗಿ ಪಶ್ಚಾತ್ತಾಪಪಟ್ಟರು.
அரபு விரிவுரைகள்:
خُذْ مِنْ اَمْوَالِهِمْ صَدَقَةً تُطَهِّرُهُمْ وَتُزَكِّیْهِمْ بِهَا وَصَلِّ عَلَیْهِمْ ؕ— اِنَّ صَلٰوتَكَ سَكَنٌ لَّهُمْ ؕ— وَاللّٰهُ سَمِیْعٌ عَلِیْمٌ ۟
ನೀವು ಅವರ ಸಂಪತ್ತುಗಳಿಂದ ದಾನವನ್ನು ಪಡೆಯಿರಿ. ಅದರ ಮೂಲಕ ನೀವು ಅವರನ್ನು ಶುದ್ಧೀಕರಿಸುತ್ತೀರಿ. ಅವರಿಗೋಸ್ಕರ ಪ್ರಾರ್ಥಿಸಿರಿ. ನಿಶ್ಚಯವಾಗಿಯೂ ನಿಮ್ಮ ಪ್ರಾರ್ಥನೆಯು ಅವರ ಪಾಲಿಗೆ ಸಮಾಧಾನವಾಗಿದೆ. ಅಲ್ಲಾಹು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ.
அரபு விரிவுரைகள்:
اَلَمْ یَعْلَمُوْۤا اَنَّ اللّٰهَ هُوَ یَقْبَلُ التَّوْبَةَ عَنْ عِبَادِهٖ وَیَاْخُذُ الصَّدَقٰتِ وَاَنَّ اللّٰهَ هُوَ التَّوَّابُ الرَّحِیْمُ ۟
ನಿಶ್ಚಯವಾಗಿಯೂ ಅಲ್ಲಾಹನೇ ತನ್ನ ದಾಸರ ಪಶ್ಚಾತ್ತಾಪವನ್ನು ಸ್ವೀಕರಿಸುತ್ತಾನೆ ಮತ್ತು ಅವರಿಂದ ದಾನಧರ್ಮಗಳನ್ನು ತೆಗೆದುಕೊಳ್ಳುತ್ತಾನೆ; ಅವನು ಪಶ್ಚಾತ್ತಾಪ ಸ್ವೀಕರಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆೆಂದು ಅವರಿಗೆ ತಿಳಿದಿಲ್ಲವೇ?
அரபு விரிவுரைகள்:
وَقُلِ اعْمَلُوْا فَسَیَرَی اللّٰهُ عَمَلَكُمْ وَرَسُوْلُهٗ وَالْمُؤْمِنُوْنَ ؕ— وَسَتُرَدُّوْنَ اِلٰی عٰلِمِ الْغَیْبِ وَالشَّهَادَةِ فَیُنَبِّئُكُمْ بِمَا كُنْتُمْ تَعْمَلُوْنَ ۟ۚ
ಹೇಳಿರಿ: “ನೀವು ಕರ್ಮವೆಸಗಿರಿ. ಅಲ್ಲಾಹು, ಅವನ ಸಂದೇಶವಾಹಕರು ಮತ್ತು ಸತ್ಯವಿಶ್ವಾಸಿಗಳು ನಿಮ್ಮ ಕರ್ಮಗಳನ್ನು ನೋಡುವರು. ನಂತರ ನಿಮ್ಮನ್ನು ದೃಶ್ಯ-ಅದೃಶ್ಯಗಳನ್ನು ತಿಳಿದವನ (ಅಲ್ಲಾಹನ) ಬಳಿಗೆ ಮರಳಿಸಲಾಗುವುದು. ಆಗ ನೀವೇನು ಮಾಡುತ್ತಿದ್ದಿರಿ ಎಂದು ಅವನು ನಿಮಗೆ ತಿಳಿಸಿಕೊಡುವನು.”
அரபு விரிவுரைகள்:
وَاٰخَرُوْنَ مُرْجَوْنَ لِاَمْرِ اللّٰهِ اِمَّا یُعَذِّبُهُمْ وَاِمَّا یَتُوْبُ عَلَیْهِمْ ؕ— وَاللّٰهُ عَلِیْمٌ حَكِیْمٌ ۟
ಅಲ್ಲಾಹನ ಆಜ್ಞೆ ಬರುವ ತನಕ ತೀರ್ಪನ್ನು ಕಾದಿರಿಸಲಾದ ಕೆಲವರಿದ್ದಾರೆ. ಅಲ್ಲಾಹು ಅವರನ್ನು ಶಿಕ್ಷಿಸಬಹುದು ಅಥವಾ ಅವರ ಪಶ್ಚಾತ್ತಾಪವನ್ನು ಸ್ವೀಕರಿಸಬಹುದು. ಅಲ್ಲಾಹು ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ.[1]
[1] ತಬೂಕ್ ಯುದ್ಧಕ್ಕೆ ಹೋಗದೆ ಹಿಂದೆ ಉಳಿದವರಲ್ಲಿ ಒಂದು ಗುಂಪು ಕಪಟವಿಶ್ವಾಸಿಗಳದ್ದು. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮತ್ತು ಸತ್ಯವಿಶ್ವಾಸಿಗಳು ಯುದ್ಧದಿಂದ ಹಿಂದಿರುಗಿ ಬಂದಾಗ ಇವರು ಸುಳ್ಳು ನೆಪಗಳನ್ನು ಹೇಳಿ ತಪ್ಪಿಸಿಕೊಂಡರು. ಆದರೆ ಯುದ್ಧಕ್ಕೆ ಹೋಗದ ಸತ್ಯವಿಶ್ವಾಸಿಗಳು ಸುಳ್ಳು ನೆಪಗಳನ್ನು ಹೇಳಲಿಲ್ಲ. ಬದಲಿಗೆ, ನಿಜವನ್ನೇ ಹೇಳಿದರು. ಆದ್ದರಿಂದ ಅವರ ತೀರ್ಪನ್ನು ಅಲ್ಲಾಹನ ಆಜ್ಞೆ ಬರುವ ತನಕ ಕಾದಿರಿಸಲಾಯಿತು.
அரபு விரிவுரைகள்:
 
மொழிபெயர்ப்பு அத்தியாயம்: அத்தவ்பா
அத்தியாயங்களின் அட்டவணை பக்க எண்
 
அல்குர்ஆன் மொழிபெயர்ப்பு - கன்னட மொழிபெயர்ப்பு - ஹம்ஸா பத்தூர் - மொழிபெயர்ப்பு அட்டவணை

முகமது ஹம்ஸா பத்தூர் மொழிபெயர்த்தார். மொழிபெயர்ப்பு முன்னோடிகள் மையத்தின் கண்காணிப்பில் உருவாக்கப்பட்டது.

மூடுக