Kur'an-ı Kerim meal tercümesi - الترجمة الكنادية * - Mealler fihristi

XML CSV Excel API
Please review the Terms and Policies

Anlam tercümesi Ayet: (31) Sure: Sûretu'l-Muddessir
وَمَا جَعَلْنَاۤ اَصْحٰبَ النَّارِ اِلَّا مَلٰٓىِٕكَةً ۪— وَّمَا جَعَلْنَا عِدَّتَهُمْ اِلَّا فِتْنَةً لِّلَّذِیْنَ كَفَرُوْا ۙ— لِیَسْتَیْقِنَ الَّذِیْنَ اُوْتُوا الْكِتٰبَ وَیَزْدَادَ الَّذِیْنَ اٰمَنُوْۤا اِیْمَانًا وَّلَا یَرْتَابَ الَّذِیْنَ اُوْتُوا الْكِتٰبَ وَالْمُؤْمِنُوْنَ ۙ— وَلِیَقُوْلَ الَّذِیْنَ فِیْ قُلُوْبِهِمْ مَّرَضٌ وَّالْكٰفِرُوْنَ مَاذَاۤ اَرَادَ اللّٰهُ بِهٰذَا مَثَلًا ؕ— كَذٰلِكَ یُضِلُّ اللّٰهُ مَنْ یَّشَآءُ وَیَهْدِیْ مَنْ یَّشَآءُ ؕ— وَمَا یَعْلَمُ جُنُوْدَ رَبِّكَ اِلَّا هُوَ ؕ— وَمَا هِیَ اِلَّا ذِكْرٰی لِلْبَشَرِ ۟۠
ನಾವು ನರಕದ ಕಾವಲುಗಾರರಾಗಿ ಕೇವಲ ದೇವದೂತರುಗಳನ್ನು ಮಾತ್ರ ನಿಶ್ಚಯಿಸಿದ್ದೇವೆ. ನಾವು ಅವರ ಸಂಖ್ಯೆಯನ್ನು ಸತ್ಯನಿಷೇಧಿಗಳಿಗೆ ಒಂದು ಪರೀಕ್ಷೆಯಾಗಿ ಮಾಡಿದ್ದೇವೆ.[1] ಇದೇಕೆಂದರೆ, ಗ್ರಂಥ ನೀಡಲಾದವರಿಗೆ ದೃಢವಿಶ್ವಾಸ ಉಂಟಾಗಲೆಂದು[2] ಮತ್ತು ಸತ್ಯವಿಶ್ವಾಸಿಗಳ ವಿಶ್ವಾಸವು ಇನ್ನಷ್ಟು ಹೆಚ್ಚಾಗಲೆಂದು. ಅದೇ ರೀತಿ ಗ್ರಂಥ ನೀಡಲಾದವರು ಹಾಗೂ ಸತ್ಯವಿಶ್ವಾಸಿಗಳು ಸಂಶಯ ಪಡದಿರಲೆಂದು ಮತ್ತು ಹೃದಯದಲ್ಲಿ ರೋಗವಿರುವವರು ಹಾಗೂ ಸತ್ಯನಿಷೇಧಿಗಳು, “ಈ ವಿವರಣೆಯಿಂದ ಅಲ್ಲಾಹು ಉದ್ದೇಶಿಸುವುದೇನು?” ಎಂದು ಕೇಳಲೆಂದು. ಈ ರೀತಿ ಅಲ್ಲಾಹು ಅವನು ಇಚ್ಛಿಸಿದವರನ್ನು ದಾರಿತಪ್ಪಿಸುತ್ತಾನೆ ಮತ್ತು ಅವನು ಇಚ್ಛಿಸಿದವರಿಗೆ ಸನ್ಮಾರ್ಗ ತೋರಿಸುತ್ತಾನೆ. ನಿಮ್ಮ ಪರಿಪಾಲಕನ (ಅಲ್ಲಾಹನ) ಸೈನ್ಯವನ್ನು ಅವನ ಹೊರತು ಯಾರೂ ತಿಳಿದಿಲ್ಲ. ಅದು (ನರಕ) ಮನುಷ್ಯರಿಗೆ ಒಂದು ಉಪದೇಶವಲ್ಲದೆ ಇನ್ನೇನೂ ಅಲ್ಲ.
[1] ನರಕದ ಕಾವಲುಗಾರರ ಸಂಖ್ಯೆ 19 ಎಂಬ ವಚನ ಅವತೀರ್ಣವಾದಾಗ, ಸತ್ಯನಿಷೇಧಿಗಳ ಮುಖಂಡ ಅಬೂಜಹಲ್ ತನ್ನ ಜನರನ್ನು ಕರೆದು ವ್ಯಂಗ್ಯವಾಗಿ ಹೇಳಿದ: ನಿಮ್ಮಲ್ಲಿ ಪ್ರತಿ ಹತ್ತು ಜನರಿಗೆ ಒಬ್ಬೊಬ್ಬ ದೇವದೂತನನ್ನು ಸೋಲಿಸಲು ಸಾಧ್ಯವಿಲ್ಲವೇ? ಆಗ ಈ ವಚನವು ಅವತೀರ್ಣವಾಯಿತು.
[2] ಈ ವಿಷಯವು ತೌರಾತ್ ಮತ್ತು ಇಂಜೀಲ್‌ನಲ್ಲಿ ಕೂಡ ಇರುವುದರಿಂದ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದ್ದು ಸತ್ಯವೆಂದು ಗ್ರಂಥದವರಿಗೆ ದೃಢವಿಶ್ವಾಸ ಉಂಟಾಗಲಿದೆ.
Arapça tefsirler:
 
Anlam tercümesi Ayet: (31) Sure: Sûretu'l-Muddessir
Surelerin fihristi Sayfa numarası
 
Kur'an-ı Kerim meal tercümesi - الترجمة الكنادية - Mealler fihristi

ترجمة معاني القرآن الكريم إلى اللغة الكنادية ترجمها محمد حمزة بتور.

Kapat