Check out the new design

قۇرئان كەرىم مەنىلىرىنىڭ تەرجىمىسى - كاناداچە تەرجىمىسى- بەشىير مىيسۇرى * - تەرجىمىلەر مۇندەرىجىسى


مەنالار تەرجىمىسى سۈرە: پەتىھ   ئايەت:
وَهُوَ الَّذِیْ كَفَّ اَیْدِیَهُمْ عَنْكُمْ وَاَیْدِیَكُمْ عَنْهُمْ بِبَطْنِ مَكَّةَ مِنْ بَعْدِ اَنْ اَظْفَرَكُمْ عَلَیْهِمْ ؕ— وَكَانَ اللّٰهُ بِمَا تَعْمَلُوْنَ بَصِیْرًا ۟
ಅವನೇ ಸತ್ಯನಿಷೇಧಿಗಳ ಕೈಗಳನ್ನು ನಿಮ್ಮಿಂದಲೂ ಮತ್ತು ನಿಮ್ಮ ಕೈಗಳನ್ನು ಅವರಿಂದಲೂ ಮಕ್ಕಾಃ ಕಣಿವೆಯಲ್ಲಿ ತಡೆದನು, ಬಳಿಕ ಅವನು ನಿಮಗೆ ಅವರ ಮೇಲೆ ವಿಜಯ ದಯಪಾಲಿಸಿದನು, ನೀವು ಮಾಡುತ್ತಿರುವುದನ್ನು ಅಲ್ಲಾಹನು ಚೆನ್ನಾಗಿ ಬಲ್ಲನು.
ئەرەپچە تەپسىرلەر:
هُمُ الَّذِیْنَ كَفَرُوْا وَصَدُّوْكُمْ عَنِ الْمَسْجِدِ الْحَرَامِ وَالْهَدْیَ مَعْكُوْفًا اَنْ یَّبْلُغَ مَحِلَّهٗ ؕ— وَلَوْلَا رِجَالٌ مُّؤْمِنُوْنَ وَنِسَآءٌ مُّؤْمِنٰتٌ لَّمْ تَعْلَمُوْهُمْ اَنْ تَطَـُٔوْهُمْ فَتُصِیْبَكُمْ مِّنْهُمْ مَّعَرَّةٌ بِغَیْرِ عِلْمٍ ۚ— لِیُدْخِلَ اللّٰهُ فِیْ رَحْمَتِهٖ مَنْ یَّشَآءُ ۚ— لَوْ تَزَیَّلُوْا لَعَذَّبْنَا الَّذِیْنَ كَفَرُوْا مِنْهُمْ عَذَابًا اَلِیْمًا ۟
ಅವರೇ ಸತ್ಯನಿಷೇಧಿಸಿದವರು ಮತ್ತು ನಿಮ್ಮನ್ನು ಮಸ್ಜಿದುಲ್ ಹರಾಮ್ ನಿಂದ ತಡೆದವರು ಹಾಗೂ ಬಲಿಮೃಗಗಳನ್ನು ಅವುಗಳ ಬಲಿತಾಣಗಳಿಗೆ ತಲುಪುವುದರಿಂದ (ತಡೆದವರು) ನೀವು ಅರಿಯದ ಸತ್ಯವಿಶ್ವಾಸಿ ಪುರುಷರು ಮತ್ತು ಸತ್ಯವಿಶ್ವಾಸಿನಿ ಸ್ತಿçÃಯರು ಮಕ್ಕಾಃದಲ್ಲಿ (ಸತ್ಯನಿಷೇಧಿಗಳೊಂದಿಗೆ) ಇಲ್ಲದಿರುತ್ತಿದ್ದರೆ ಆ ಸಂದರ್ಭದಲ್ಲಿ ನಿಮಗೆ ಯುದ್ಧದ ಅನುಮತಿ ಸಿಕ್ಕಿದರೆ ನೀವು ಅವರ ಬಗ್ಗೆ ತಿಳುವಳಿಕೆಯಿಲ್ಲದೆ (ಆ ಸ್ಥಿತಿಯಲ್ಲಿ ಅವರನ್ನು) ವಧಿಸಿರುವುದರಿಂದ ನಿಮಗೆ ಅಪಾಯ ತಟ್ಟುವ ಸಂಭವವಿರುತ್ತಿತ್ತು. ಇದೇಕೆಂದರೆ ಅಲ್ಲಾಹನು ತಾನಿಚ್ಛಿಸುವವರನ್ನು ತನ್ನ ಕಾರುಣ್ಯದಲ್ಲಿ ಸೇರಿಸಲೆಂದಾಗಿದೆ. ಇನ್ನು ಅವರು ಬೇರೆಬೇರೆಯಾಗಿರುತ್ತಿದ್ದರೆ ನಾವು ಅವರ ಪೈಕಿಯ ಸತ್ಯನಿಷೇಧಿಗಳಿಗೆ ವೇದನಾಜನಕ ಯಾತನೆಯನ್ನು ಕೊಡುತ್ತಿದ್ದೆವು.
ئەرەپچە تەپسىرلەر:
اِذْ جَعَلَ الَّذِیْنَ كَفَرُوْا فِیْ قُلُوْبِهِمُ الْحَمِیَّةَ حَمِیَّةَ الْجَاهِلِیَّةِ فَاَنْزَلَ اللّٰهُ سَكِیْنَتَهٗ عَلٰی رَسُوْلِهٖ وَعَلَی الْمُؤْمِنِیْنَ وَاَلْزَمَهُمْ كَلِمَةَ التَّقْوٰی وَكَانُوْۤا اَحَقَّ بِهَا وَاَهْلَهَا ؕ— وَكَانَ اللّٰهُ بِكُلِّ شَیْءٍ عَلِیْمًا ۟۠
ಸತ್ಯನಿಷೇಧಿಗಳು ತಮ್ಮ ಹೃದಯಗಳಲ್ಲಿ ಅಜ್ಞಾನ ಕಾಲದ ದುರಭಿಮಾನವನ್ನು ನೆಲೆಗೊಳಿಸಿದಾಗ! ಅಲ್ಲಾಹನು ತನ್ನ ಸಂದೇಶವಾಹಕನ ಮತ್ತು ಸತ್ಯವಿಶ್ವಾಸಿಗಳ ಮೇಲೆ ತನ್ನೆಡೆಯ ಶಾಂತಿ ನೆಮ್ಮದಿಯನ್ನು ಇಳಿಸಿದನು ಮತ್ತು ಅಲ್ಲಾಹನು ಸತ್ಯವಿಶ್ವಾಸಿಗಳಿಗೆ ಭಯಭಕ್ತಿಯ ಮಾತಿಗೆ ಬದ್ಧರನ್ನಾಗಿಸಿದನು. ಅವರೇ (ಆ ಭಯಭಕ್ತಿಯನ್ನು ಸ್ವೀಕರಿಸಲು) ಹೆಚ್ಚು ಅರ್ಹತೆಯುಳ್ಳವರೂ ಆಗಿದ್ದರು ಮತ್ತು ಅಲ್ಲಾಹನು ಪ್ರತಿಯೊಂದು ಸಂಗತಿಯನ್ನು ಚೆನ್ನಾಗಿ ಅರಿಯುತ್ತಾನೆ.
ئەرەپچە تەپسىرلەر:
لَقَدْ صَدَقَ اللّٰهُ رَسُوْلَهُ الرُّءْیَا بِالْحَقِّ ۚ— لَتَدْخُلُنَّ الْمَسْجِدَ الْحَرَامَ اِنْ شَآءَ اللّٰهُ اٰمِنِیْنَ ۙ— مُحَلِّقِیْنَ رُءُوْسَكُمْ وَمُقَصِّرِیْنَ ۙ— لَا تَخَافُوْنَ ؕ— فَعَلِمَ مَا لَمْ تَعْلَمُوْا فَجَعَلَ مِنْ دُوْنِ ذٰلِكَ فَتْحًا قَرِیْبًا ۟
ನಿಜವಾಗಿಯೂ ಅಲ್ಲಾಹನು ತನ್ನ ಸಂದೇಶವಾಹಕರ ಕನಸನ್ನು ನನಸಾಗಿ ಮಾಡಿದನು, ಆದರೆ ಅಲ್ಲಾಹನಿಚ್ಛಿಸಿದರೆ ನೀವು ನಿರ್ಭಯತೆ ಹಾಗು ಸುರಕ್ಷತೆಯೊಂದಿಗೆ ಕೇಶ ಮುಂಡನ ಮಾಡಿಸುತ್ತಾ ಮತ್ತು ತಲೆಗೂದಲನ್ನು ಕತ್ತರಿಸುತ್ತಾ ಯಾವುದೇ ಭಯವಿಲ್ಲದೇ ಖಂಡಿತ ಮಸ್ಜಿದುಲ್‌ಹರಾಮನ್ನು ಪ್ರವೇಶಿಸುವಿರಿ. ನೀವು ಅರಿಯದಿದ್ದನ್ನು ಅವನು ಅರಿಯುತ್ತಾನೆ. ಇದಕ್ಕೆ ಮೊದಲು ಅವನು ನಿಮಗೆ ಸನ್ನಿಹಿತ ಖೈಬರ್ ವಿಜಯವೊಂದನ್ನು ದಯಪಾಲಿಸಿದನು.
ئەرەپچە تەپسىرلەر:
هُوَ الَّذِیْۤ اَرْسَلَ رَسُوْلَهٗ بِالْهُدٰی وَدِیْنِ الْحَقِّ لِیُظْهِرَهٗ عَلَی الدِّیْنِ كُلِّهٖ ؕ— وَكَفٰی بِاللّٰهِ شَهِیْدًا ۟ؕ
ಅವನೇ ತನ್ನ ಸಂದೇಶವಾಹಕರನನ್ನು ಮಾರ್ಗದರ್ಶನದೊಂದಿಗೆ ಮತ್ತು ಸತ್ಯಧರ್ಮದೊಂದಿಗೆ ಕಳುಹಿಸಿದನು, ಇದೇಕೆಂದರೆ ಅದನ್ನು ಸಕಲ ಧರ್ಮಗಳ ಮೇಲೆ ವಿಜಯಸಾಧಿಸಲೆಂದಾಗಿದೆ ಮತ್ತು ಸಾಕ್ಷಿಯಾಗಿ ಅಲ್ಲಾಹನೇ ಸಾಕು.
ئەرەپچە تەپسىرلەر:
 
مەنالار تەرجىمىسى سۈرە: پەتىھ
سۈرە مۇندەرىجىسى بەت نومۇرى
 
قۇرئان كەرىم مەنىلىرىنىڭ تەرجىمىسى - كاناداچە تەرجىمىسى- بەشىير مىيسۇرى - تەرجىمىلەر مۇندەرىجىسى

بۇ تەرجىمىنى شەيخ بەشىر مەيسۇرى تەرجىمە قىلغان. رۇۋاد تەرجىمە مەركىزىنىڭ رىياسەتچىلىكىدە تەرەققىي قىلدۇرۇلغان.

تاقاش