قۇرئان كەرىم مەنىلىرىنىڭ تەرجىمىسى - الترجمة الكنادية * - تەرجىمىلەر مۇندەرىجىسى

XML CSV Excel API
Please review the Terms and Policies

مەنالار تەرجىمىسى سۈرە: سۈرە نىسا   ئايەت:

ಸೂರ ಅನ್ನಿಸಾಅ್

یٰۤاَیُّهَا النَّاسُ اتَّقُوْا رَبَّكُمُ الَّذِیْ خَلَقَكُمْ مِّنْ نَّفْسٍ وَّاحِدَةٍ وَّخَلَقَ مِنْهَا زَوْجَهَا وَبَثَّ مِنْهُمَا رِجَالًا كَثِیْرًا وَّنِسَآءً ۚ— وَاتَّقُوا اللّٰهَ الَّذِیْ تَسَآءَلُوْنَ بِهٖ وَالْاَرْحَامَ ؕ— اِنَّ اللّٰهَ كَانَ عَلَیْكُمْ رَقِیْبًا ۟
ಓ ಜನರೇ! ನಿಮ್ಮನ್ನು ಒಂದೇ ದೇಹದಿಂದ ಸೃಷ್ಟಿಸಿದ ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಡಿರಿ. ಅವನು ಅದರಿಂದಲೇ ಅದರ ಸಂಗಾತಿಯನ್ನು ಸೃಷ್ಟಿಸಿದನು ಮತ್ತು ಅವರಿಬ್ಬರಿಂದ ಅಸಂಖ್ಯ ಪುರುಷರನ್ನು ಮತ್ತು ಸ್ತ್ರೀಯರನ್ನು ಹಬ್ಬಿಸಿದನು. ಯಾರ ಹೆಸರಿನಿಂದ ನೀವು ಪರಸ್ಪರ ಕೇಳುತ್ತೀರೋ ಆ ಅಲ್ಲಾಹನನ್ನು ಮತ್ತು ಕುಟುಂಬ ಸಂಬಂಧ ಕಡಿಯುವುದನ್ನು ಭಯಪಡಿರಿ. ಅಲ್ಲಾಹು ನಿಮ್ಮನ್ನು ಸದಾ ಗಮನಿಸುತ್ತಿದ್ದಾನೆ.
ئەرەپچە تەپسىرلەر:
وَاٰتُوا الْیَتٰمٰۤی اَمْوَالَهُمْ وَلَا تَتَبَدَّلُوا الْخَبِیْثَ بِالطَّیِّبِ ۪— وَلَا تَاْكُلُوْۤا اَمْوَالَهُمْ اِلٰۤی اَمْوَالِكُمْ ؕ— اِنَّهٗ كَانَ حُوْبًا كَبِیْرًا ۟
ಅನಾಥರಿಗೆ ಅವರ ಆಸ್ತಿಯನ್ನು ಕೊಟ್ಟುಬಿಡಿ. ಶುದ್ಧ (ಮತ್ತು ಧರ್ಮಸಮ್ಮತ) ವಸ್ತುಗಳ ಬದಲಿಗೆ ಹೊಲಸು (ಮತ್ತು ನಿಷಿದ್ಧ) ವಸ್ತುಗಳನ್ನು ಪಡೆಯಬೇಡಿ. ಅವರ ಆಸ್ತಿಯನ್ನು ನಿಮ್ಮ ಆಸ್ತಿಯೊಂದಿಗೆ ಸೇರಿಸಿ ತಿನ್ನಬೇಡಿ. ನಿಶ್ಚಯವಾಗಿಯೂ ಅದು ಗಂಭೀರ ಅಪರಾಧವಾಗಿದೆ.
ئەرەپچە تەپسىرلەر:
وَاِنْ خِفْتُمْ اَلَّا تُقْسِطُوْا فِی الْیَتٰمٰی فَانْكِحُوْا مَا طَابَ لَكُمْ مِّنَ النِّسَآءِ مَثْنٰی وَثُلٰثَ وَرُبٰعَ ۚ— فَاِنْ خِفْتُمْ اَلَّا تَعْدِلُوْا فَوَاحِدَةً اَوْ مَا مَلَكَتْ اَیْمَانُكُمْ ؕ— ذٰلِكَ اَدْنٰۤی اَلَّا تَعُوْلُوْا ۟ؕ
ಅನಾಥ ಹೆಣ್ಣುಮಕ್ಕಳ ವಿಷಯದಲ್ಲಿ ನ್ಯಾಯದಿಂದ ವರ್ತಿಸಲು ನಿಮಗೆ ಸಾಧ್ಯವಾಗದೆಂದು ನೀವು ಭಯಪಡುವುದಾದರೆ, ಇತರ ಮಹಿಳೆಯರಲ್ಲಿ ನಿಮಗೆ ಇಷ್ಟವಾದ ಇಬ್ಬರು, ಮೂವರು ಅಥವಾ ನಾಲ್ವರನ್ನು ವಿವಾಹವಾಗಿರಿ.[1] ಆದರೆ (ಅವರ ನಡುವೆ) ನ್ಯಾಯದಿಂದ ವರ್ತಿಸಲು ನಿಮಗೆ ಸಾಧ್ಯವಾಗದೆಂಬ ಭಯವಿದ್ದರೆ, ಒಬ್ಬಳನ್ನೇ ವಿವಾಹವಾಗಿರಿ.[2] ಅಥವಾ ನಿಮ್ಮ ಅಧೀನದಲ್ಲಿರುವ ಗುಲಾಮಸ್ತ್ರೀಯನ್ನು ವಿವಾಹವಾಗಿರಿ. ನೀವು (ಅನ್ಯಾಯದ ಕಡೆಗೆ) ವಾಲದಿರಲು ಇದು ಅತ್ಯಂತ ಸೂಕ್ತವಾಗಿದೆ.
[1] ಇಸ್ಲಾಮೀ ಪೂರ್ವ ಕಾಲದಲ್ಲಿ ಅನಾಥ ಹೆಣ್ಣುಮಕ್ಕಳ ಪೋಷಣೆಯ ಹೊಣೆಯನ್ನು ವಹಿಸಿಕೊಂಡವರು ಅವರ ಆಸ್ತಿ ಮತ್ತು ಸೌಂದರ್ಯದ ಮೇಲೆ ಕಣ್ಣಿಟ್ಟು ಅವರನ್ನು ವಿವಾಹವಾಗುತ್ತಿದ್ದರು. ಆದರೆ ಅವರಿಗೆ ವಧುದಕ್ಷಿಣೆ ನೀಡುತ್ತಿರಲಿಲ್ಲ ಮತ್ತು ಅವರೊಡನೆ ನ್ಯಾಯದಿಂದ ವರ್ತಿಸುತ್ತಿರಲಿಲ್ಲ. ಹೀಗೆ ಅವರೊಡನೆ ನ್ಯಾಯದಿಂದ ವರ್ತಿಸಲು ಸಾಧ್ಯವಾಗದು ಎಂದು ಭಯಪಡುವವರು ಅವರನ್ನು ವಿವಾಹವಾಗಬಾರದು. [2] ಏಕಕಾಲದಲ್ಲಿ ನಾಲ್ಕು ಪತ್ನಿಯರನ್ನು ಹೊಂದುವ ಅನುಮತಿಯಿದೆ. ಆದರೆ ಅವರ ನಡುವೆ ನ್ಯಾಯಯುತವಾಗಿ ವರ್ತಿಸಬೇಕು. ಅದು ಸಾಧ್ಯವಾಗದೆಂಬ ಭಯವಿದ್ದರೆ ಒಬ್ಬಳನ್ನು ಮಾತ್ರ ವಿವಾಹವಾಗಬೇಕು.
ئەرەپچە تەپسىرلەر:
وَاٰتُوا النِّسَآءَ صَدُقٰتِهِنَّ نِحْلَةً ؕ— فَاِنْ طِبْنَ لَكُمْ عَنْ شَیْءٍ مِّنْهُ نَفْسًا فَكُلُوْهُ هَنِیْٓـًٔا مَّرِیْٓـًٔا ۟
ಮಹಿಳೆಯರಿಗೆ ಅವರ ವಧುದಕ್ಷಿಣೆಯನ್ನು (ಮಹರ್) ಆತ್ಮತೃಪ್ತಿಯಿಂದ ನೀಡಿರಿ. ಅವರು ಸ್ವಯಂಪ್ರೇರಿತವಾಗಿ ಅದರಲ್ಲಿ ಏನಾದರೂ ಬಿಟ್ಟುಬಿಟ್ಟರೆ ಅದನ್ನು ಸಂತೋಷದಿಂದ ಮತ್ತು ಸಂತೃಪ್ತಿಯಿಂದ ಸೇವಿಸಿರಿ.
ئەرەپچە تەپسىرلەر:
وَلَا تُؤْتُوا السُّفَهَآءَ اَمْوَالَكُمُ الَّتِیْ جَعَلَ اللّٰهُ لَكُمْ قِیٰمًا وَّارْزُقُوْهُمْ فِیْهَا وَاكْسُوْهُمْ وَقُوْلُوْا لَهُمْ قَوْلًا مَّعْرُوْفًا ۟
ಅಲ್ಲಾಹು ನಿಮ್ಮ ಜೀವನೋಪಾಯದ ಮಾರ್ಗವಾಗಿ ಮಾಡಿರುವ ನಿಮ್ಮ ಧನವನ್ನು ವಿವೇಕವಿಲ್ಲದವರಿಗೆ ನೀಡಬೇಡಿ. ಆದರೆ, ಅದರಿಂದ ಅವರಿಗೆ ಆಹಾರ ಮತ್ತು ಬಟ್ಟೆ-ಬರೆಗಳನ್ನು ನೀಡಿರಿ; ಮತ್ತು ಅವರೊಂದಿಗೆ ಉತ್ತಮವಾದ ಮಾತುಗಳನ್ನಾಡಿರಿ.
ئەرەپچە تەپسىرلەر:
وَابْتَلُوا الْیَتٰمٰی حَتّٰۤی اِذَا بَلَغُوا النِّكَاحَ ۚ— فَاِنْ اٰنَسْتُمْ مِّنْهُمْ رُشْدًا فَادْفَعُوْۤا اِلَیْهِمْ اَمْوَالَهُمْ ۚ— وَلَا تَاْكُلُوْهَاۤ اِسْرَافًا وَّبِدَارًا اَنْ یَّكْبَرُوْا ؕ— وَمَنْ كَانَ غَنِیًّا فَلْیَسْتَعْفِفْ ۚ— وَمَنْ كَانَ فَقِیْرًا فَلْیَاْكُلْ بِالْمَعْرُوْفِ ؕ— فَاِذَا دَفَعْتُمْ اِلَیْهِمْ اَمْوَالَهُمْ فَاَشْهِدُوْا عَلَیْهِمْ ؕ— وَكَفٰی بِاللّٰهِ حَسِیْبًا ۟
ಅನಾಥರು ಪ್ರೌಢರಾಗುವ ತನಕ ಅವರನ್ನು ಪರೀಕ್ಷಿಸುತ್ತಿರಿ. ಅವರಲ್ಲಿ ವಿವೇಕ ಮತ್ತು ವ್ಯವಹಾರ ಪ್ರಜ್ಞೆಯನ್ನು ಕಂಡರೆ, ಅವರ ಆಸ್ತಿಯನ್ನು ಅವರಿಗೆ ಹಸ್ತಾಂತರಿಸಿ. ಅವರು ಪ್ರೌಢರಾಗುತ್ತಿದ್ದಾರೆಂಬ ಭಯದಿಂದ ಅವರ ಆಸ್ತಿಯನ್ನು ಅಗತ್ಯಕ್ಕಿಂತ ಹೆಚ್ಚಾಗಿ ತ್ವರೆಯಿಂದ ತಿನ್ನಬೇಡಿ. ಪೋಷಕನು ಶ್ರೀಮಂತನಾಗಿದ್ದರೆ ಆ ಆಸ್ತಿಯನ್ನು ಮುಟ್ಟದೆ ಸಂಯಮ ತೋರಲಿ. ಆದರೆ ಅವನು ಬಡವನಾಗಿದ್ದರೆ ಅಗತ್ಯಕ್ಕೆ ತಕ್ಕಷ್ಟು ಮಾತ್ರ ತೆಗೆದುಕೊಳ್ಳಲಿ. ಅವರ ಆಸ್ತಿಯನ್ನು ಅವರಿಗೆ ಹಸ್ತಾಂತರಿಸುವಾಗ ಸಾಕ್ಷಿಗಳನ್ನು ನಿಲ್ಲಿಸಿರಿ. ವಿಚಾರಣೆ ಮಾಡುವವನಾಗಿ ಅಲ್ಲಾಹು ಸಾಕು.
ئەرەپچە تەپسىرلەر:
لِلرِّجَالِ نَصِیْبٌ مِّمَّا تَرَكَ الْوَالِدٰنِ وَالْاَقْرَبُوْنَ ۪— وَلِلنِّسَآءِ نَصِیْبٌ مِّمَّا تَرَكَ الْوَالِدٰنِ وَالْاَقْرَبُوْنَ مِمَّا قَلَّ مِنْهُ اَوْ كَثُرَ ؕ— نَصِیْبًا مَّفْرُوْضًا ۟
ಮಾತಾಪಿತರು ಮತ್ತು ನಿಕಟ ಸಂಬಂಧಿಕರು ಬಿಟ್ಟುಹೋದ ಆಸ್ತಿಯಲ್ಲಿ ಪುರುಷರಿಗೆ ಪಾಲಿದೆ. ಮಾತಾಪಿತರು ಮತ್ತು ನಿಕಟ ಸಂಬಂಧಿಕರು ಬಿಟ್ಟುಹೋದ ಆಸ್ತಿಯಲ್ಲಿ ಮಹಿಳೆಯರಿಗೂ ಪಾಲಿದೆ. ಆಸ್ತಿ ಕಡಿಮೆಯಿರಲಿ ಅಥವಾ ಹೆಚ್ಚಿರಲಿ. ಅದರ ಪಾಲನ್ನು ನಿಗದಿಪಡಿಸಲಾಗಿದೆ.
ئەرەپچە تەپسىرلەر:
وَاِذَا حَضَرَ الْقِسْمَةَ اُولُوا الْقُرْبٰی وَالْیَتٰمٰی وَالْمَسٰكِیْنُ فَارْزُقُوْهُمْ مِّنْهُ وَقُوْلُوْا لَهُمْ قَوْلًا مَّعْرُوْفًا ۟
ಆಸ್ತಿ ಪಾಲು ಮಾಡುವಾಗ (ಬೇರೆ) ಸಂಬಂಧಿಕರು, ಅನಾಥರು ಮತ್ತು ಬಡವರು ಉಪಸ್ಥಿತರಿದ್ದರೆ, ಅವರಿಗೆ ಅದರಿಂದ ಸ್ವಲ್ಪ ಕೊಟ್ಟುಬಿಡಿ. ಅವರೊಂದಿಗೆ ಉತ್ತಮ ಮಾತುಗಳನ್ನಾಡಿರಿ.
ئەرەپچە تەپسىرلەر:
وَلْیَخْشَ الَّذِیْنَ لَوْ تَرَكُوْا مِنْ خَلْفِهِمْ ذُرِّیَّةً ضِعٰفًا خَافُوْا عَلَیْهِمْ ۪— فَلْیَتَّقُوا اللّٰهَ وَلْیَقُوْلُوْا قَوْلًا سَدِیْدًا ۟
ತಮ್ಮ ಅಮಾಯಕ ಮಕ್ಕಳನ್ನು ಬಿಟ್ಟು (ತಾವು ಸತ್ತರೆ ಅವರ ಸ್ಥಿತಿಯೇನಾಗಬಹುದೆಂದು) ಭಯಪಡುವವರು (ಪೋಷಕರು) ಇತರರ ಬಗ್ಗೆಯೂ ಹಾಗೆಯೇ ಭಯಪಡಲಿ. ಅವರು ಅಲ್ಲಾಹನನ್ನು ಭಯಪಡಲಿ ಮತ್ತು ಸರಿಯಾದ ಮಾತುಗಳನ್ನಾಡಲಿ.[1]
[1] ತಾನು ಸತ್ತರೆ ತನ್ನ ಪುಟ್ಟ ಮಕ್ಕಳು ಅನಾಥರಾಗುತ್ತಾರೆ. ಅವರು ಇತರರ ಪೋಷಣೆಯಲ್ಲಿ ಬೆಳೆಯಬೇಕಾಗುತ್ತದೆ. ಹೀಗೆ ತನ್ನ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ ಮಾಡುವವರು, ಅನಾಥರಾಗಿ ತಮ್ಮ ಪೋಷಣೆಗೆ ಬರುವ ಇತರ ಮಕ್ಕಳ ಬಗ್ಗೆಯೂ ಇದೇ ರೀತಿ ಚಿಂತೆ ಮಾಡಬೇಕು. ಅವರ ವಿಷಯದಲ್ಲಿ ಅಲ್ಲಾಹನನ್ನು ಭಯಪಟ್ಟು ನ್ಯಾಯದಿಂದ ವರ್ತಿಸಬೇಕು.
ئەرەپچە تەپسىرلەر:
اِنَّ الَّذِیْنَ یَاْكُلُوْنَ اَمْوَالَ الْیَتٰمٰی ظُلْمًا اِنَّمَا یَاْكُلُوْنَ فِیْ بُطُوْنِهِمْ نَارًا ؕ— وَسَیَصْلَوْنَ سَعِیْرًا ۟۠
ನಿಶ್ಚಯವಾಗಿಯೂ ಅನಾಥರ ಆಸ್ತಿಯನ್ನು ಅನ್ಯಾಯವಾಗಿ ತಿನ್ನುವವರು ಯಾರೋ—ಅವರು ತಮ್ಮ ಉದರಗಳಲ್ಲಿ ಅಗ್ನಿಯನ್ನೇ ತುಂಬಿಸುತ್ತಾರೆ. ಅವರು ಸದ್ಯವೇ ಧಗಧಗಿಸುವ ಅಗ್ನಿಯಲ್ಲಿ ಉರಿಯುವರು.
ئەرەپچە تەپسىرلەر:
یُوْصِیْكُمُ اللّٰهُ فِیْۤ اَوْلَادِكُمْ ۗ— لِلذَّكَرِ مِثْلُ حَظِّ الْاُنْثَیَیْنِ ۚ— فَاِنْ كُنَّ نِسَآءً فَوْقَ اثْنَتَیْنِ فَلَهُنَّ ثُلُثَا مَا تَرَكَ ۚ— وَاِنْ كَانَتْ وَاحِدَةً فَلَهَا النِّصْفُ ؕ— وَلِاَبَوَیْهِ لِكُلِّ وَاحِدٍ مِّنْهُمَا السُّدُسُ مِمَّا تَرَكَ اِنْ كَانَ لَهٗ وَلَدٌ ۚ— فَاِنْ لَّمْ یَكُنْ لَّهٗ وَلَدٌ وَّوَرِثَهٗۤ اَبَوٰهُ فَلِاُمِّهِ الثُّلُثُ ۚ— فَاِنْ كَانَ لَهٗۤ اِخْوَةٌ فَلِاُمِّهِ السُّدُسُ مِنْ بَعْدِ وَصِیَّةٍ یُّوْصِیْ بِهَاۤ اَوْ دَیْنٍ ؕ— اٰبَآؤُكُمْ وَاَبْنَآؤُكُمْ لَا تَدْرُوْنَ اَیُّهُمْ اَقْرَبُ لَكُمْ نَفْعًا ؕ— فَرِیْضَةً مِّنَ اللّٰهِ ؕ— اِنَّ اللّٰهَ كَانَ عَلِیْمًا حَكِیْمًا ۟
ನಿಮ್ಮ ಮಕ್ಕಳ (ಉತ್ತರಾಧಿಕಾರದ) ವಿಷಯದಲ್ಲಿ ಅಲ್ಲಾಹು ನಿಮಗೆ ಆದೇಶಿಸುತ್ತಾನೆ. ಒಬ್ಬ ಪುರುಷನ ಪಾಲು ಇಬ್ಬರು ಮಹಿಳೆಯರ ಪಾಲಿಗೆ ಸಮಾನವಾಗಿದೆ. ಮೃತನಿಗೆ ಹೆಣ್ಣು ಮಕ್ಕಳು ಮಾತ್ರವಿದ್ದು, ಅವರು ಇಬ್ಬರಿಗಿಂತ ಹೆಚ್ಚಿದ್ದರೆ,[1] ಅವನು ಬಿಟ್ಟು ಹೋದ ಆಸ್ತಿಯ ಮೂರನೇ ಎರಡು ಭಾಗವು ಅವರಿಗೆ ದೊರೆಯುತ್ತದೆ. ಒಬ್ಬ ಮಗಳು ಮಾತ್ರವಿದ್ದರೆ ಅವಳಿಗೆ ಅರ್ಧ ಭಾಗ ದೊರೆಯುತ್ತದೆ. ಮೃತನಿಗೆ ಮಕ್ಕಳಿದ್ದರೆ ಅವನ ಮಾತಾಪಿತರಲ್ಲಿ ಪ್ರತಿಯೊಬ್ಬರಿಗೂ ಅವನು ಬಿಟ್ಟುಹೋದ ಆಸ್ತಿಯ ಆರನೇ ಒಂದು ಭಾಗ ದೊರೆಯುತ್ತದೆ. ಅವನು ಸಂತಾನರಹಿತನಾಗಿದ್ದು ಮಾತಾಪಿತರು ಅವನ ವಾರಸುದಾರರಾಗಿದ್ದರೆ, ಅವನ ತಾಯಿಗೆ ಮೂರನೇ ಒಂದು ಭಾಗ ದೊರೆಯುತ್ತದೆ.[2] ಅವನಿಗೆ ಸಹೋದರರಿದ್ದರೆ (ಮತ್ತು / ಅಥವಾ ಸಹೋದರಿಯರಿದ್ದರೆ) ಅವನ ತಾಯಿಗೆ ಆರನೇ ಒಂದು ಭಾಗ ದೊರೆಯುತ್ತದೆ.[3] ಅವನು ಮಾಡಿರುವ ಉಯಿಲು ಮತ್ತು ಸಾಲವಿದ್ದರೆ ಅದನ್ನು ತೀರಿಸಿದ ನಂತರ. ನಿಮ್ಮ ತಂದೆ-ತಾಯಿ ಮತ್ತು ಮಕ್ಕಳಲ್ಲಿ ಯಾರು ನಿಮಗೆ ಹೆಚ್ಚು ಉಪಕಾರ ಮಾಡುವರೆಂದು ನಿಮಗೆ ತಿಳಿದಿಲ್ಲ. ಇವು ಅಲ್ಲಾಹು ನಿಗದಿಪಡಿಸಿದ ಪಾಲುಗಳು. ನಿಶ್ಚಯವಾಗಿಯೂ ಅಲ್ಲಾಹು ಎಲ್ಲವನ್ನು ತಿಳಿದವನು ಮತ್ತು ವಿವೇಕಪೂರ್ಣನಾಗಿದ್ದಾನೆ.
[1] ಇಬ್ಬರೇ ಹೆಣ್ಣುಮಕ್ಕಳಿದ್ದರೂ ಅವರಿಗೆ ಮೂರನೇ ಎರಡು ಭಾಗವು ದೊರೆಯುತ್ತದೆ. [2] ಉಳಿದ ಮೂರನೇ ಎರಡು ಭಾಗ ತಂದೆಗೆ ದೊರೆಯುತ್ತದೆ. [3] ಮೃತನಿಗೆ ಗಂಡುಮಕ್ಕಳು ಅಥವಾ ತಂದೆ ಇಲ್ಲದಿದ್ದರೆ ಮಾತ್ರ ಸಹೋದರ (ಅಥವಾ ಸಹೋದರರು) ವಾರಸುದಾರರಾಗುತ್ತಾರೆ. ತಾಯಿ ಮತ್ತು ಸಹೋದರರು ಮಾತ್ರವಿದ್ದರೆ ಆರನೇ ಒಂದನ್ನು ಕಳೆದು ಉಳಿದ ಆಸ್ತಿಯನ್ನು ಸಹೋದರರು ಪಾಲು ಮಾಡಬೇಕು. ಒಬ್ಬ ಸಹೋದರ ಮತ್ತು ತಾಯಿ ಮಾತ್ರ ಇದ್ದರೆ ತಾಯಿಗೆ ಮೂರನೇ ಒಂದು ಭಾಗ ಮತ್ತು ಸಹೋದರನಿಗೆ ಮೂರನೇ ಎರಡು ಭಾಗವು ದೊರೆಯುತ್ತದೆ. ಸಹೋದರರು ಇಲ್ಲದೆ, ತಾಯಿ ಮತ್ತು ಸಹೋದರಿಯರು ಮಾತ್ರ ಇದ್ದರೆ ತಾಯಿಗೆ ಆರನೇ ಒಂದು ಭಾಗ ದೊರೆಯುತ್ತದೆ.
ئەرەپچە تەپسىرلەر:
وَلَكُمْ نِصْفُ مَا تَرَكَ اَزْوَاجُكُمْ اِنْ لَّمْ یَكُنْ لَّهُنَّ وَلَدٌ ۚ— فَاِنْ كَانَ لَهُنَّ وَلَدٌ فَلَكُمُ الرُّبُعُ مِمَّا تَرَكْنَ مِنْ بَعْدِ وَصِیَّةٍ یُّوْصِیْنَ بِهَاۤ اَوْ دَیْنٍ ؕ— وَلَهُنَّ الرُّبُعُ مِمَّا تَرَكْتُمْ اِنْ لَّمْ یَكُنْ لَّكُمْ وَلَدٌ ۚ— فَاِنْ كَانَ لَكُمْ وَلَدٌ فَلَهُنَّ الثُّمُنُ مِمَّا تَرَكْتُمْ مِّنْ بَعْدِ وَصِیَّةٍ تُوْصُوْنَ بِهَاۤ اَوْ دَیْنٍ ؕ— وَاِنْ كَانَ رَجُلٌ یُّوْرَثُ كَلٰلَةً اَوِ امْرَاَةٌ وَّلَهٗۤ اَخٌ اَوْ اُخْتٌ فَلِكُلِّ وَاحِدٍ مِّنْهُمَا السُّدُسُ ۚ— فَاِنْ كَانُوْۤا اَكْثَرَ مِنْ ذٰلِكَ فَهُمْ شُرَكَآءُ فِی الثُّلُثِ مِنْ بَعْدِ وَصِیَّةٍ یُّوْصٰی بِهَاۤ اَوْ دَیْنٍ ۙ— غَیْرَ مُضَآرٍّ ۚ— وَصِیَّةً مِّنَ اللّٰهِ ؕ— وَاللّٰهُ عَلِیْمٌ حَلِیْمٌ ۟ؕ
ನಿಮ್ಮ ಪತ್ನಿಯರಿಗೆ ಮಕ್ಕಳಿಲ್ಲದಿದ್ದರೆ, ಅವರು ಬಿಟ್ಟುಹೋದ ಆಸ್ತಿಯಲ್ಲಿ ಅರ್ಧ ಭಾಗವು ನಿಮಗೆ ದೊರೆಯುತ್ತದೆ. ಅವರಿಗೆ ಮಕ್ಕಳಿದ್ದರೆ ಅವರು ಬಿಟ್ಟು ಹೋದ ಆಸ್ತಿಯಲ್ಲಿ ನಾಲ್ಕನೇ ಒಂದು ಭಾಗವು ನಿಮಗೆ ದೊರೆಯುತ್ತದೆ. ಇದು ಅವರು ಮಾಡುವ ಉಯಿಲು ಮತ್ತು ಸಾಲವನ್ನು ತೀರಿಸಿದ ನಂತರ. ನಿಮಗೆ ಮಕ್ಕಳಿಲ್ಲದಿದ್ದರೆ, ನೀವು ಬಿಟ್ಟುಹೋದ ಆಸ್ತಿಯಲ್ಲಿ ನಾಲ್ಕನೇ ಒಂದು ಭಾಗವು ಅವರಿಗೆ (ಪತ್ನಿಯರಿಗೆ) ದೊರೆಯುತ್ತದೆ. ನಿಮಗೆ ಮಕ್ಕಳಿದ್ದರೆ, ನೀವು ಬಿಟ್ಟುಹೋದ ಆಸ್ತಿಯಲ್ಲಿ ಎಂಟನೇ ಒಂದು ಭಾಗವು ಅವರಿಗೆ ದೊರೆಯುತ್ತದೆ. ಇದು ನೀವು ಮಾಡುವ ಉಯಿಲು ಮತ್ತು ಸಾಲವನ್ನು ತೀರಿಸಿದ ನಂತರ. ವಾರಸು ಆಸ್ತಿಯನ್ನು ಬಿಟ್ಟು ಹೋಗುವ ಪುರುಷ ಅಥವಾ ಮಹಿಳೆಗೆ ತಂದೆ-ತಾಯಿ ಹಾಗೂ ಮಕ್ಕಳಿಲ್ಲದೆ, ಕೇವಲ ಸಹೋದರ ಅಥವಾ ಸಹೋದರಿಯಿದ್ದರೆ, ಆ ಇಬ್ಬರಲ್ಲಿ ಪ್ರತಿಯೊಬ್ಬರಿಗೂ ಆರನೇ ಒಂದು ಭಾಗವು ದೊರೆಯುತ್ತದೆ. ಅವರು ಇಬ್ಬರಿಗಿಂತ ಹೆಚ್ಚಿದ್ದರೆ, ಅವರು ಮೂರನೇ ಒಂದು ಭಾಗದಲ್ಲಿ ಸಮಾನ ಪಾಲುದಾರರಾಗುತ್ತಾರೆ. ಇದು ಹಾನಿಕರವಲ್ಲದ ಉಯಿಲು[1] ಮತ್ತು ಸಾಲವನ್ನು ತೀರಿಸಿದ ನಂತರ. ಅಲ್ಲಾಹು ಎಲ್ಲವನ್ನೂ ತಿಳಿದವನು ಮತ್ತು ಸಹಿಷ್ಣುತೆಯುಳ್ಳವನಾಗಿದ್ದಾನೆ.
[1] ಒಟ್ಟು ಆಸ್ತಿಯ ಮೂರನೇ ಒಂದು ಭಾಗವನ್ನು ಮಾತ್ರ ಉಯಿಲು ಮಾಡಬಹುದು. ಅದಕ್ಕಿಂತ ಹೆಚ್ಚು ಉಯಿಲು ಮಾಡುವುದು ವಾರಸುದಾರರಿಗೆ ಮಾಡುವ ಅನ್ಯಾಯವಾಗಿದೆ. ಹಾನಿಕರ ಉಯಿಲು ಎಂದರೆ ವಾರಸುದಾರರಲ್ಲಿರುವ ದ್ವೇಷದಿಂದ ತನ್ನ ಆಸ್ತಿಯಲ್ಲಿ ಅವರಿಗೆ ಹಕ್ಕು ಸಿಗಬಾರದೆಂದು ತನ್ನ ಆಸ್ತಿಯನ್ನು ತನಗೆ ಇಷ್ಟವಾದ ಬೇರೊಬ್ಬ ವ್ಯಕ್ತಿಗೆ ಉಯಿಲು ಮಾಡುವುದು.
ئەرەپچە تەپسىرلەر:
تِلْكَ حُدُوْدُ اللّٰهِ ؕ— وَمَنْ یُّطِعِ اللّٰهَ وَرَسُوْلَهٗ یُدْخِلْهُ جَنّٰتٍ تَجْرِیْ مِنْ تَحْتِهَا الْاَنْهٰرُ خٰلِدِیْنَ فِیْهَا ؕ— وَذٰلِكَ الْفَوْزُ الْعَظِیْمُ ۟
ಇವು ಅಲ್ಲಾಹನ ಎಲ್ಲೆಗಳು. ಯಾರು ಅಲ್ಲಾಹನನ್ನು ಮತ್ತು ಅವನ ಸಂದೇಶವಾಹಕರನ್ನು ಅನುಸರಿಸುತ್ತಾನೋ—ಅವನನ್ನು ಅಲ್ಲಾಹು ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿಗೆ ಪ್ರವೇಶ ಮಾಡಿಸುವನು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅದೇ ಮಹಾ ವಿಜಯ.
ئەرەپچە تەپسىرلەر:
وَمَنْ یَّعْصِ اللّٰهَ وَرَسُوْلَهٗ وَیَتَعَدَّ حُدُوْدَهٗ یُدْخِلْهُ نَارًا خَالِدًا فِیْهَا ۪— وَلَهٗ عَذَابٌ مُّهِیْنٌ ۟۠
ಯಾರು ಅಲ್ಲಾಹನಿಗೆ ಮತ್ತು ಅವನ ಸಂದೇಶವಾಹಕರಿಗೆ ಅವಿಧೇಯತೆ ತೋರುತ್ತಾನೋ ಮತ್ತು ಅವನ ಎಲ್ಲೆಗಳನ್ನು ಮೀರುತ್ತಾನೋ—ಅವನನ್ನು ಅಲ್ಲಾಹು ನರಕಾಗ್ನಿಗೆ ಪ್ರವೇಶ ಮಾಡಿಸುವನು. ಅವನು ಅದರಲ್ಲಿ ಶಾಶ್ವತವಾಗಿ ವಾಸಿಸುವನು. ಅವನಿಗೆ ಅಪಮಾನಕರ ಶಿಕ್ಷೆಯಿದೆ.
ئەرەپچە تەپسىرلەر:
وَالّٰتِیْ یَاْتِیْنَ الْفَاحِشَةَ مِنْ نِّسَآىِٕكُمْ فَاسْتَشْهِدُوْا عَلَیْهِنَّ اَرْبَعَةً مِّنْكُمْ ۚ— فَاِنْ شَهِدُوْا فَاَمْسِكُوْهُنَّ فِی الْبُیُوْتِ حَتّٰی یَتَوَفّٰهُنَّ الْمَوْتُ اَوْ یَجْعَلَ اللّٰهُ لَهُنَّ سَبِیْلًا ۟
ನಿಮ್ಮ ಮಹಿಳೆಯರಲ್ಲಿ ಯಾರು ಅಶ್ಲೀಲ ಕೃತ್ಯವನ್ನು ಮಾಡುತ್ತಾರೋ—ಅವರಿಗೆದುರಾಗಿ ನಿಮ್ಮಲ್ಲಿನ ನಾಲ್ಕು ಮಂದಿಯನ್ನು ಸಾಕ್ಷಿ ನಿಲ್ಲಿಸಿರಿ. ಅವರು ಸಾಕ್ಷಿ ನಿಂತರೆ ಅವರು (ಮಹಿಳೆಯರು) ಮರಣವನ್ನಪ್ಪುವ ತನಕ ಅಥವಾ ಅಲ್ಲಾಹು ಅವರಿಗೊಂದು ಮಾರ್ಗವನ್ನು ಮಾಡಿಕೊಡುವ ತನಕ ಅವರನ್ನು ನೀವು ಮನೆಗಳಲ್ಲಿ ತಡೆದಿರಿಸಿರಿ.[1]
[1] ಇದು ಇಸ್ಲಾಮಿನ ಆರಂಭಕಾಲದಲ್ಲಿ ವ್ಯಭಿಚಾರಕ್ಕೆ ನೀಡಲಾಗುತ್ತಿದ್ದ ತಾತ್ಕಾಲಿಕ ಶಿಕ್ಷೆಯಾಗಿದೆ. ನಂತರ ವಿವಾಹಿತ ಪುರುಷರು ಮತ್ತು ಮಹಿಳೆಯರು ವ್ಯಭಿಚಾರ ಮಾಡಿದರೆ, ಅವರಿಗೆ ಕಲ್ಲೆಸೆದು ಕೊಲ್ಲುವ ಶಿಕ್ಷೆ ಮತ್ತು ವಿವಾಹಿತರಲ್ಲದ ಪುರುಷರು ಮತ್ತು ಮಹಿಳೆಯರು ವ್ಯಭಿಚಾರ ಮಾಡಿದರೆ ಅವರಿಗೆ 100 ಛಡಿಯೇಟಿನ ಶಿಕ್ಷೆಯನ್ನು ಅಂತಿಮಗೊಳಿಸಲಾಯಿತು.
ئەرەپچە تەپسىرلەر:
وَالَّذٰنِ یَاْتِیٰنِهَا مِنْكُمْ فَاٰذُوْهُمَا ۚ— فَاِنْ تَابَا وَاَصْلَحَا فَاَعْرِضُوْا عَنْهُمَا ؕ— اِنَّ اللّٰهَ كَانَ تَوَّابًا رَّحِیْمًا ۟
ನಿಮ್ಮಲ್ಲಿ ಯಾರು ಅಶ್ಲೀಲ ಕೃತ್ಯವನ್ನು ಮಾಡುತ್ತಾರೋ ಅವರಿಗೆ (ಇಬ್ಬರಿಗೂ) ತೊಂದರೆ ಕೊಡಿ. ಅವರಿಬ್ಬರೂ ಪಶ್ಚಾತ್ತಾಪಪಟ್ಟು ನಡತೆಯನ್ನು ಸರಿಪಡಿಸಿದರೆ ಅವರನ್ನು ಬಿಟ್ಟುಬಿಡಿ.[1] ನಿಶ್ಚಯವಾಗಿಯೂ ಅಲ್ಲಾಹು ಪಶ್ಚಾತ್ತಾಪ ಸ್ವೀಕರಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
[1] ಕೆಲವು ವ್ಯಾಖ್ಯಾನಕಾರರು ಇದು ಸಲಿಂಗಕಾಮ ಮಾಡುವವರ ಬಗ್ಗೆ ಎಂದಿದ್ದಾರೆ. ಕೆಲವರು ಇದು ಅವಿವಾಹಿತ ಪುರುಷರು ಮತ್ತು ಮಹಿಳೆಯರ ಬಗ್ಗೆ ಎಂದಿದ್ದಾರೆ. 15 ನೇ ವಚನವು ವಿವಾಹಿತ ಪುರುಷರು ಮತ್ತು ಮಹಿಳೆಯರ ಬಗ್ಗೆ ಎಂದು ಅವರು ಅಭಿಪ್ರಾಯಪಡುತ್ತಾರೆ. ಕೆಲವರು ಇದು ವಿವಾಹಿತ ಮತ್ತು ಅವಿವಾಹಿತ ಪುರುಷರು ಮತ್ತು ಮಹಿಳೆಯರ ಬಗ್ಗೆ ಎನ್ನುತ್ತಾರೆ. ಏನೇ ಆದರೂ ಇದು ಇಸ್ಲಾಮಿನ ಆರಂಭಕಾಲದಲ್ಲಿದ್ದ ತಾತ್ಕಾಲಿಕ ಶಿಕ್ಷೆಯಾಗಿದೆ. ಅಂತಿಮ ಶಿಕ್ಷೆ ಅವತೀರ್ಣವಾದ ಬಳಿಕ ಇದು ರದ್ದುಗೊಂಡಿದೆ.
ئەرەپچە تەپسىرلەر:
اِنَّمَا التَّوْبَةُ عَلَی اللّٰهِ لِلَّذِیْنَ یَعْمَلُوْنَ السُّوْٓءَ بِجَهَالَةٍ ثُمَّ یَتُوْبُوْنَ مِنْ قَرِیْبٍ فَاُولٰٓىِٕكَ یَتُوْبُ اللّٰهُ عَلَیْهِمْ ؕ— وَكَانَ اللّٰهُ عَلِیْمًا حَكِیْمًا ۟
ಅಲ್ಲಾಹು ಪಶ್ಚಾತ್ತಾಪವನ್ನು ಸ್ವೀಕರಿಸುವುದು ಅಜ್ಞಾನದಿಂದ ತಪ್ಪು ಮಾಡಿ (ಅದು ತಪ್ಪೆಂದು ತಿಳಿದಾಗ) ತಡಮಾಡದೆ ಪಶ್ಚಾತ್ತಾಪಪಡುವವರಿಂದ ಮಾತ್ರ. ಅವರ ಪಶ್ಚಾತ್ತಾಪವನ್ನು ಅಲ್ಲಾಹು ಸ್ವೀಕರಿಸುತ್ತಾನೆ. ಅಲ್ಲಾಹು ಎಲ್ಲವನ್ನು ತಿಳಿದವನು ಮತ್ತು ವಿವೇಕಪೂರ್ಣನಾಗಿದ್ದಾನೆ.
ئەرەپچە تەپسىرلەر:
وَلَیْسَتِ التَّوْبَةُ لِلَّذِیْنَ یَعْمَلُوْنَ السَّیِّاٰتِ ۚ— حَتّٰۤی اِذَا حَضَرَ اَحَدَهُمُ الْمَوْتُ قَالَ اِنِّیْ تُبْتُ الْـٰٔنَ وَلَا الَّذِیْنَ یَمُوْتُوْنَ وَهُمْ كُفَّارٌ ؕ— اُولٰٓىِٕكَ اَعْتَدْنَا لَهُمْ عَذَابًا اَلِیْمًا ۟
ತಪ್ಪು ಮಾಡುತ್ತಲೇ ಇದ್ದು, ಸಾವು ಸನ್ನಿಹಿತವಾದಾಗ, “ನಾನು ಪಶ್ಚಾತ್ತಾಪಪಟ್ಟಿದ್ದೇನೆ” ಎಂದು ಹೇಳುವವರ ಪಶ್ಚಾತ್ತಾಪವನ್ನು ಸ್ವೀಕರಿಸಲಾಗದು. ಸತ್ಯನಿಷೇಧಿಗಳಾಗಿ ಸಾಯುವವರ ಪಶ್ಚಾತ್ತಾಪವನ್ನೂ ಸ್ವೀಕರಿಸಲಾಗದು. ಅವರಿಗೆ ನಾವು ಯಾತನಾಮಯ ಶಿಕ್ಷೆಯನ್ನು ಸಿದ್ಧಗೊಳಿಸಿದ್ದೇವೆ.
ئەرەپچە تەپسىرلەر:
یٰۤاَیُّهَا الَّذِیْنَ اٰمَنُوْا لَا یَحِلُّ لَكُمْ اَنْ تَرِثُوا النِّسَآءَ كَرْهًا ؕ— وَلَا تَعْضُلُوْهُنَّ لِتَذْهَبُوْا بِبَعْضِ مَاۤ اٰتَیْتُمُوْهُنَّ اِلَّاۤ اَنْ یَّاْتِیْنَ بِفَاحِشَةٍ مُّبَیِّنَةٍ ۚ— وَعَاشِرُوْهُنَّ بِالْمَعْرُوْفِ ۚ— فَاِنْ كَرِهْتُمُوْهُنَّ فَعَسٰۤی اَنْ تَكْرَهُوْا شَیْـًٔا وَّیَجْعَلَ اللّٰهُ فِیْهِ خَیْرًا كَثِیْرًا ۟
ಓ ಸತ್ಯವಿಶ್ವಾಸಿಗಳೇ! ಮಹಿಳೆಯರನ್ನು ಬಲವಂತದಿಂದ ಉತ್ತರಾಧಿಕಾರವಾಗಿ ಪಡೆಯುವುದು ನಿಮಗೆ ಧರ್ಮಸಮ್ಮತವಲ್ಲ.[1] ನೀವು ಅವರಿಗೆ (ಪತ್ನಿಯರಿಗೆ) ನೀಡಿರುವುದರಲ್ಲಿ ಒಂದಂಶವನ್ನು ಹಿಂದಕ್ಕೆ ಪಡೆಯಲು ಅವರನ್ನು ತಡೆದಿರಿಸಬೇಡಿ— ಅವರು ಬಹಿರಂಗವಾಗಿ ಏನಾದರೂ ಅಶ್ಲೀಲ ಕೃತ್ಯವೆಸಗದಿದ್ದರೆ. ಅವರೊಂದಿಗೆ ಉತ್ತಮವಾಗಿ ವರ್ತಿಸಿರಿ. ನೀವು ಅವರನ್ನು ದ್ವೇಷಿಸುವುದಾದರೆ, ಬಹುಶಃ ನೀವು ದ್ವೇಷಿಸುವ ಒಂದು ವಸ್ತುವಿನಲ್ಲಿ ಅಲ್ಲಾಹು ಅತ್ಯಧಿಕ ಒಳಿತನ್ನಿಟ್ಟಿರಬಹುದು.
[1] ಇಸ್ಲಾಂ ಪೂರ್ವ ಕಾಲದಲ್ಲಿ ಮೃತನ ಆಸ್ತಿಯನ್ನು ಹಂಚಿಕೊಳ್ಳುವಾಗ ಅವನ ಪತ್ನಿಯರನ್ನೂ ಅವರ ಇಚ್ಛೆಗೆ ವಿರುದ್ಧವಾಗಿ ಹಂಚಿಕೊಳ್ಳುತ್ತಿದ್ದರು.
ئەرەپچە تەپسىرلەر:
وَاِنْ اَرَدْتُّمُ اسْتِبْدَالَ زَوْجٍ مَّكَانَ زَوْجٍ ۙ— وَّاٰتَیْتُمْ اِحْدٰىهُنَّ قِنْطَارًا فَلَا تَاْخُذُوْا مِنْهُ شَیْـًٔا ؕ— اَتَاْخُذُوْنَهٗ بُهْتَانًا وَّاِثْمًا مُّبِیْنًا ۟
ನೀವು ಒಬ್ಬ ಪತ್ನಿಯ ಬದಲಿಗೆ ಇನ್ನೊಬ್ಬ ಪತ್ನಿಯನ್ನು ತರಲು ಉದ್ದೇಶಿಸಿದರೆ, ಮತ್ತು ಅವರಲ್ಲಿ ಒಬ್ಬಳಿಗೆ ನೀವು ದೊಡ್ಡ ಮೊತ್ತವನ್ನು ಕೊಟ್ಟಿದ್ದರೆ, ಅದರಿಂದ ಏನನ್ನೂ ಹಿಂದಕ್ಕೆ ಪಡೆಯಬೇಡಿ. ಸುಳ್ಳಾರೋಪದಿಂದ ಮತ್ತು ಸ್ಪಷ್ಟ ಪಾಪದಿಂದ ನೀವು ಅದನ್ನು ಹಿಂದಕ್ಕೆ ಪಡೆಯುವಿರಾ?
ئەرەپچە تەپسىرلەر:
وَكَیْفَ تَاْخُذُوْنَهٗ وَقَدْ اَفْضٰی بَعْضُكُمْ اِلٰی بَعْضٍ وَّاَخَذْنَ مِنْكُمْ مِّیْثَاقًا غَلِیْظًا ۟
ನೀವು ಪರಸ್ಪರ ಒಂದಾಗಿದ್ದು, ಅವರು ನಿಮ್ಮಿಂದ ಬಲಿಷ್ಠ ಕರಾರನ್ನು ಪಡೆದಿರುವಾಗ ನೀವು ಹೇಗೆ ತಾನೇ ಅದನ್ನು ಹಿಂದಕ್ಕೆ ಪಡೆಯುವಿರಿ?
ئەرەپچە تەپسىرلەر:
وَلَا تَنْكِحُوْا مَا نَكَحَ اٰبَآؤُكُمْ مِّنَ النِّسَآءِ اِلَّا مَا قَدْ سَلَفَ ؕ— اِنَّهٗ كَانَ فَاحِشَةً وَّمَقْتًا ؕ— وَسَآءَ سَبِیْلًا ۟۠
ನಿಮ್ಮ ತಂದೆಯರು ವಿವಾಹವಾದ ಮಹಿಳೆಯರನ್ನು ನೀವು ವಿವಾಹವಾಗಬಾರದು. ಈಗಾಗಲೇ ಸಂಭವಿಸಿದವುಗಳ ಹೊರತು. ನಿಶ್ಚಯವಾಗಿಯೂ ಅದು ಅಶ್ಲೀಲ, ಅಸಹ್ಯ ಮತ್ತು ಕೆಟ್ಟ ಮಾರ್ಗವಾಗಿದೆ.
ئەرەپچە تەپسىرلەر:
حُرِّمَتْ عَلَیْكُمْ اُمَّهٰتُكُمْ وَبَنٰتُكُمْ وَاَخَوٰتُكُمْ وَعَمّٰتُكُمْ وَخٰلٰتُكُمْ وَبَنٰتُ الْاَخِ وَبَنٰتُ الْاُخْتِ وَاُمَّهٰتُكُمُ الّٰتِیْۤ اَرْضَعْنَكُمْ وَاَخَوٰتُكُمْ مِّنَ الرَّضَاعَةِ وَاُمَّهٰتُ نِسَآىِٕكُمْ وَرَبَآىِٕبُكُمُ الّٰتِیْ فِیْ حُجُوْرِكُمْ مِّنْ نِّسَآىِٕكُمُ الّٰتِیْ دَخَلْتُمْ بِهِنَّ ؗ— فَاِنْ لَّمْ تَكُوْنُوْا دَخَلْتُمْ بِهِنَّ فَلَا جُنَاحَ عَلَیْكُمْ ؗ— وَحَلَآىِٕلُ اَبْنَآىِٕكُمُ الَّذِیْنَ مِنْ اَصْلَابِكُمْ ۙ— وَاَنْ تَجْمَعُوْا بَیْنَ الْاُخْتَیْنِ اِلَّا مَا قَدْ سَلَفَ ؕ— اِنَّ اللّٰهَ كَانَ غَفُوْرًا رَّحِیْمًا ۟ۙ
ನಿಮಗೆ ವಿವಾಹವಾಗಲು ನಿಷಿದ್ಧವಾಗಿರುವವರು ಯಾರೆಂದರೆ—ನಿಮ್ಮ ತಾಯಂದಿರು, ಹೆಣ್ಣುಮಕ್ಕಳು, ಸಹೋದರಿಯರು, ತಂದೆಯ ಸಹೋದರಿಯರು, ತಾಯಿಯ ಸಹೋದರಿಯರು, ಸಹೋದರರ ಹೆಣ್ಣುಮಕ್ಕಳು, ಸಹೋದರಿಯರ ಹೆಣ್ಣುಮಕ್ಕಳು, ನಿಮಗೆ ಸ್ತನಪಾನ ಮಾಡಿದ ತಾಯಂದಿರು, ಸ್ತನಪಾನ ಸಂಬಂಧದಲ್ಲಿ ಸಹೋದರಿಗಳಾಗಿರುವವರು, ನಿಮ್ಮ ಪತ್ನಿಯರ ತಾಯಂದಿರು, ನಿಮ್ಮ ಪೋಷಣೆಯಲ್ಲಿ ಬೆಳೆಯುತ್ತಿರುವ ನಿಮ್ಮ ಪತ್ನಿಯರ ಹೆಣ್ಣುಮಕ್ಕಳು—ನೀವು ಆ ಪತ್ನಿಯರೊಡನೆ ಲೈಂಗಿಕ ಸಂಪರ್ಕ ಮಾಡಿದ್ದರೆ—ನೀವು ಅವರೊಡನೆ ಲೈಂಗಿಕ ಸಂಪರ್ಕ ಮಾಡಿರದಿದ್ದರೆ ಆ ಸಾಕುಪುತ್ರಿಯರನ್ನು ವಿವಾಹವಾಗುವುದರಲ್ಲಿ ದೋಷವಿಲ್ಲ; ನಿಮ್ಮ ಬೆನ್ನೆಲುಬಿನಿಂದ ಹುಟ್ಟಿದ ಗಂಡುಮಕ್ಕಳ ಪತ್ನಿಯರು ಮತ್ತು ಇಬ್ಬರು ಸಹೋದರಿಯರನ್ನು ಏಕಕಾಲದಲ್ಲಿ ವಿವಾಹವಾಗುವುದು—ಈಗಾಗಲೇ ಸಂಭವಿಸಿರುವುದರ ಹೊರತು. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
ئەرەپچە تەپسىرلەر:
وَّالْمُحْصَنٰتُ مِنَ النِّسَآءِ اِلَّا مَا مَلَكَتْ اَیْمَانُكُمْ ۚ— كِتٰبَ اللّٰهِ عَلَیْكُمْ ۚ— وَاُحِلَّ لَكُمْ مَّا وَرَآءَ ذٰلِكُمْ اَنْ تَبْتَغُوْا بِاَمْوَالِكُمْ مُّحْصِنِیْنَ غَیْرَ مُسٰفِحِیْنَ ؕ— فَمَا اسْتَمْتَعْتُمْ بِهٖ مِنْهُنَّ فَاٰتُوْهُنَّ اُجُوْرَهُنَّ فَرِیْضَةً ؕ— وَلَا جُنَاحَ عَلَیْكُمْ فِیْمَا تَرٰضَیْتُمْ بِهٖ مِنْ بَعْدِ الْفَرِیْضَةِ ؕ— اِنَّ اللّٰهَ كَانَ عَلِیْمًا حَكِیْمًا ۟
ವಿವಾಹಿತ ಮಹಿಳೆಯರು (ಕೂಡ ನಿಮಗೆ ನಿಷಿದ್ಧವಾಗಿದ್ದಾರೆ). ಆದರೆ ನಿಮ್ಮ ಅಧೀನದಲ್ಲಿರುವ ಗುಲಾಮಸ್ತ್ರೀಯರ ಹೊರತು. ಇವು ಅಲ್ಲಾಹು ಕಡ್ಡಾಯಗೊಳಿಸಿದ ನಿಯಮಗಳಾಗಿವೆ. ಇವರ ಹೊರತಾಗಿರುವ ಎಲ್ಲಾ ಮಹಿಳೆಯರು ನಿಮಗೆ ಧರ್ಮಸಮ್ಮತವಾಗಿದ್ದಾರೆ. ನೀವು ಪರಿಶುದ್ಧ ಜೀವನವನ್ನು ಬಯಸುವವರು ಮತ್ತು ಅನೈತಿಕತೆಯನ್ನು ಬಯಸದವರಾಗಿದ್ದರೆ, ನಿಮ್ಮ ಧನವನ್ನು ನೀಡಿ ಇವರನ್ನು ವಿವಾಹವಾಗಬಹುದು. ನೀವು ಯಾರಿಂದ ಸುಖವನ್ನು ಪಡೆಯಲು ಬಯಸುತ್ತೀರೋ ಅವರಿಗೆ ನಿಶ್ಚಯಿಸಲಾದ ವಧುದಕ್ಷಿಣೆಯನ್ನು (ಮಹರ್) ಕೊಟ್ಟುಬಿಡಿ. ವಧುದಕ್ಷಿಣೆಯನ್ನು ನಿಶ್ಚಯಿಸಲಾದ ಬಳಿಕ ನೀವು ಪರಸ್ಪರ ತೃಪ್ತಿಯಿಂದ ವಿನಾಯಿತಿ ತೋರಿದರೆ ಅದರಲ್ಲಿ ನಿಮಗೆ ದೋಷವಿಲ್ಲ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲವನ್ನೂ ತಿಳಿದವನು ಮತ್ತು ವಿವೇಕಪೂರ್ಣನಾಗಿದ್ದಾನೆ.
ئەرەپچە تەپسىرلەر:
وَمَنْ لَّمْ یَسْتَطِعْ مِنْكُمْ طَوْلًا اَنْ یَّنْكِحَ الْمُحْصَنٰتِ الْمُؤْمِنٰتِ فَمِنْ مَّا مَلَكَتْ اَیْمَانُكُمْ مِّنْ فَتَیٰتِكُمُ الْمُؤْمِنٰتِ ؕ— وَاللّٰهُ اَعْلَمُ بِاِیْمَانِكُمْ ؕ— بَعْضُكُمْ مِّنْ بَعْضٍ ۚ— فَانْكِحُوْهُنَّ بِاِذْنِ اَهْلِهِنَّ وَاٰتُوْهُنَّ اُجُوْرَهُنَّ بِالْمَعْرُوْفِ مُحْصَنٰتٍ غَیْرَ مُسٰفِحٰتٍ وَّلَا مُتَّخِذٰتِ اَخْدَانٍ ۚ— فَاِذَاۤ اُحْصِنَّ فَاِنْ اَتَیْنَ بِفَاحِشَةٍ فَعَلَیْهِنَّ نِصْفُ مَا عَلَی الْمُحْصَنٰتِ مِنَ الْعَذَابِ ؕ— ذٰلِكَ لِمَنْ خَشِیَ الْعَنَتَ مِنْكُمْ ؕ— وَاَنْ تَصْبِرُوْا خَیْرٌ لَّكُمْ ؕ— وَاللّٰهُ غَفُوْرٌ رَّحِیْمٌ ۟۠
ಸತ್ಯವಿಶ್ವಾಸಿಗಳಾದ ಸ್ವತಂತ್ರ ಮಹಿಳೆಯರನ್ನು ವಿವಾಹವಾಗಲು ನಿಮಗೆ ಆರ್ಥಿಕ ಸಾಮರ್ಥ್ಯವಿಲ್ಲದಿದ್ದರೆ, ನಿಮ್ಮ ಅಧೀನದಲ್ಲಿರುವ ಗುಲಾಮಸ್ತ್ರೀಯರಲ್ಲಿ ಒಬ್ಬಳನ್ನು (ಪತ್ನಿಯಾಗಿ ಸ್ವೀಕರಿಸಬಹುದು). ನಿಮ್ಮ ವಿಶ್ವಾಸದ ಬಗ್ಗೆ ಅಲ್ಲಾಹನಿಗೆ ಚೆನ್ನಾಗಿ ತಿಳಿದಿದೆ. ನೀವು ಒಬ್ಬರು ಇನ್ನೊಬ್ಬರಿಂದ ಉಂಟಾಗಿದ್ದೀರಿ. ಅವರ ಯಜಮಾನರ ಒಪ್ಪಿಗೆ ಪಡೆದು ಅವರನ್ನು ವಿವಾಹವಾಗಿರಿ. ಸ್ವೀಕಾರಾರ್ಹ ರೀತಿಯಲ್ಲಿ ಅವರ ವಧುದಕ್ಷಿಣೆಯನ್ನು ಅವರಿಗೆ ಕೊಟ್ಟುಬಿಡಿ. ಅವರು ಪರಿಶುದ್ಧೆಯರಾಗಿರಲಿ; ಅನೈತಿಕ ಸಂಬಂಧವಿರುವವರೋ ಅಥವಾ ರಹಸ್ಯ ಪ್ರೇಮಿಗಳನ್ನು ಹೊಂದಿದವರೋ ಆಗಿರಬಾರದು. ಅವರು ವಿವಾಹಿತೆಯರಾದ ಬಳಿಕ ವೇಶ್ಯಾವೃತ್ತಿ ಮಾಡಿದರೆ, ಸ್ವತಂತ್ರ ಮಹಿಳೆಯರಿಗೆ ನೀಡಲಾಗುವ ಶಿಕ್ಷೆಯ ಅರ್ಧ ಭಾಗವನ್ನು ಅವರಿಗೆ ನೀಡಲಾಗುವುದು. ಇದು (ಗುಲಾಮಸ್ತ್ರೀಯರ ವಿವಾಹ) ನಿಮ್ಮಲ್ಲಿ ಪಾಪವನ್ನು ಭಯಪಡುವವರಿಗೆ ನೀಡಲಾದ ಅನುಮತಿಯಾಗಿದೆ. ನೀವು ತಾಳ್ಮೆಯಿಂದಿದ್ದರೆ ಅದು ನಿಮಗೆ ಒಳಿತಾಗಿದೆ. ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
ئەرەپچە تەپسىرلەر:
یُرِیْدُ اللّٰهُ لِیُبَیِّنَ لَكُمْ وَیَهْدِیَكُمْ سُنَنَ الَّذِیْنَ مِنْ قَبْلِكُمْ وَیَتُوْبَ عَلَیْكُمْ ؕ— وَاللّٰهُ عَلِیْمٌ حَكِیْمٌ ۟
ಅಲ್ಲಾಹು ನಿಮಗೆ (ವಿಷಯಗಳನ್ನು) ಸ್ಪಷ್ಟಗೊಳಿಸಲು, ನಿಮ್ಮ (ನೀತಿವಂತ) ಪೂರ್ವಜರ ಚರ್ಯೆಗಳನ್ನು ತೋರಿಸಿಕೊಡಲು ಮತ್ತು ನಿಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸಲು ಬಯಸುತ್ತಾನೆ. ಅಲ್ಲಾಹು ಎಲ್ಲವನ್ನೂ ತಿಳಿದವನು ಮತ್ತು ವಿವೇಕಪೂರ್ಣನಾಗಿದ್ದಾನೆ.
ئەرەپچە تەپسىرلەر:
وَاللّٰهُ یُرِیْدُ اَنْ یَّتُوْبَ عَلَیْكُمْ ۫— وَیُرِیْدُ الَّذِیْنَ یَتَّبِعُوْنَ الشَّهَوٰتِ اَنْ تَمِیْلُوْا مَیْلًا عَظِیْمًا ۟
ಅಲ್ಲಾಹು ನಿಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸಲು ಬಯಸುತ್ತಾನೆ. ಆದರೆ ಸ್ವೇಚ್ಛೆಗಳನ್ನು ಹಿಂಬಾಲಿಸುವವರು ನೀವು ಅತಿದೊಡ್ಡ ದುರ್ಮಾರ್ಗದಲ್ಲಿ ತಪ್ಪಿಹೋಗಬೇಕೆಂದು ಬಯಸುತ್ತಾರೆ.
ئەرەپچە تەپسىرلەر:
یُرِیْدُ اللّٰهُ اَنْ یُّخَفِّفَ عَنْكُمْ ۚ— وَخُلِقَ الْاِنْسَانُ ضَعِیْفًا ۟
ಅಲ್ಲಾಹು ನಿಮಗೆ ರಿಯಾಯಿತಿ ನೀಡಲು ಬಯಸುತ್ತಾನೆ. (ಏಕೆಂದರೆ) ಮನುಷ್ಯನನ್ನು ದುರ್ಬಲನಾಗಿ ಸೃಷ್ಟಿಸಲಾಗಿದೆ.
ئەرەپچە تەپسىرلەر:
یٰۤاَیُّهَا الَّذِیْنَ اٰمَنُوْا لَا تَاْكُلُوْۤا اَمْوَالَكُمْ بَیْنَكُمْ بِالْبَاطِلِ اِلَّاۤ اَنْ تَكُوْنَ تِجَارَةً عَنْ تَرَاضٍ مِّنْكُمْ ۫— وَلَا تَقْتُلُوْۤا اَنْفُسَكُمْ ؕ— اِنَّ اللّٰهَ كَانَ بِكُمْ رَحِیْمًا ۟
ಓ ಸತ್ಯವಿಶ್ವಾಸಿಗಳೇ! ನೀವು ಒಬ್ಬರು ಇನ್ನೊಬ್ಬರ ಧನವನ್ನು ಅನ್ಯಾಯವಾಗಿ ತಿನ್ನಬೇಡಿ. ಪರಸ್ಪರ ಸಂತೃಪ್ತಿಯಿಂದ ನಡೆಸುವ ವ್ಯವಹಾರದ ಹೊರತು. ನೀವು ನಿಮ್ಮನ್ನೇ ಕೊಲ್ಲಬೇಡಿ.[1] ನಿಶ್ಚಯವಾಗಿಯೂ ಅಲ್ಲಾಹು ನಿಮ್ಮೊಡನೆ ಅತ್ಯಂತ ದಯೆಯುಳ್ಳವನಾಗಿದ್ದಾನೆ.
[1] ಮುಸ್ಲಿಂ ಸಮುದಾಯವು ಒಂದು ದೇಹದಂತೆ. ಅದರ ಒಬ್ಬ ಸದಸ್ಯನನ್ನು ಕೊಲ್ಲುವುದು ಸಮುದಾಯವನ್ನು ಕೊಲೆ ಮಾಡುವುದಕ್ಕೆ ಸಮಾನ. ನೀವೇ ನಿಮ್ಮನ್ನು ಕೊಲ್ಲಬೇಡಿ ಎಂದು ಹೇಳಿರುವುದು ಈ ಅರ್ಥದಲ್ಲಾಗಿರಬಹುದು. ಇಲ್ಲಿ ಹೇಳಿರುವುದು ಆತ್ಮಹತ್ಯೆ ಮಾಡಿಕೊಳ್ಳುವುದರ ಬಗ್ಗೆ ಎಂದು ಕೆಲವರು ಹೇಳಿದ್ದಾರೆ.
ئەرەپچە تەپسىرلەر:
وَمَنْ یَّفْعَلْ ذٰلِكَ عُدْوَانًا وَّظُلْمًا فَسَوْفَ نُصْلِیْهِ نَارًا ؕ— وَكَانَ ذٰلِكَ عَلَی اللّٰهِ یَسِیْرًا ۟
ಯಾರು ಅತಿರೇಕ ಮತ್ತು ಅನ್ಯಾಯದಿಂದ ಅದನ್ನು ಮಾಡುತ್ತಾನೋ—ಅವನನ್ನು ನಾವು ನರಕಾಗ್ನಿಯಲ್ಲಿ ಹಾಕಿ ಉರಿಸುವೆವು. ಅದು ಅಲ್ಲಾಹನಿಗೆ ಅತಿ ಸುಲಭವಾಗಿದೆ.
ئەرەپچە تەپسىرلەر:
اِنْ تَجْتَنِبُوْا كَبَآىِٕرَ مَا تُنْهَوْنَ عَنْهُ نُكَفِّرْ عَنْكُمْ سَیِّاٰتِكُمْ وَنُدْخِلْكُمْ مُّدْخَلًا كَرِیْمًا ۟
ನಿಮಗೆ ವಿರೋಧಿಸಲಾದ ಮಹಾಪಾಪಗಳಿಂದ ನೀವು ದೂರವಾದರೆ, ನಿಮ್ಮ ಸಣ್ಣ-ಪುಟ್ಟ ತಪ್ಪುಗಳನ್ನು ನಾವು ಅಳಿಸುತ್ತೇವೆ; ಮತ್ತು ಗೌರವಾನ್ವಿತ ಸ್ಥಾನಕ್ಕೆ ನಿಮ್ಮನ್ನು ಪ್ರವೇಶ ಮಾಡಿಸುತ್ತೇವೆ.
ئەرەپچە تەپسىرلەر:
وَلَا تَتَمَنَّوْا مَا فَضَّلَ اللّٰهُ بِهٖ بَعْضَكُمْ عَلٰی بَعْضٍ ؕ— لِلرِّجَالِ نَصِیْبٌ مِّمَّا اكْتَسَبُوْا ؕ— وَلِلنِّسَآءِ نَصِیْبٌ مِّمَّا اكْتَسَبْنَ ؕ— وَسْـَٔلُوا اللّٰهَ مِنْ فَضْلِهٖ ؕ— اِنَّ اللّٰهَ كَانَ بِكُلِّ شَیْءٍ عَلِیْمًا ۟
ಅಲ್ಲಾಹು ನಿಮ್ಮಲ್ಲಿ ಕೆಲವರಿಗೆ ಇತರರಿಗಿಂತ ಹೆಚ್ಚು ಔದಾರ್ಯ ತೋರಿದ್ದನ್ನು ನೀವು ಆಸೆಪಡಬೇಡಿ. ಪುರುಷರಿಗೆ ಅವರು ಸಂಪಾದಿಸಿದ ಪಾಲಿದೆ ಮತ್ತು ಮಹಿಳೆಯರಿಗೆ ಅವರು ಸಂಪಾದಿಸಿದ ಪಾಲಿದೆ. ಅಲ್ಲಾಹನ ಔದಾರ್ಯದಿಂದ ಅವನಲ್ಲಿ ಬೇಡಿಕೊಳ್ಳಿರಿ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳನ್ನು ತಿಳಿದವನಾಗಿದ್ದಾನೆ.
ئەرەپچە تەپسىرلەر:
وَلِكُلٍّ جَعَلْنَا مَوَالِیَ مِمَّا تَرَكَ الْوَالِدٰنِ وَالْاَقْرَبُوْنَ ؕ— وَالَّذِیْنَ عَقَدَتْ اَیْمَانُكُمْ فَاٰتُوْهُمْ نَصِیْبَهُمْ ؕ— اِنَّ اللّٰهَ كَانَ عَلٰی كُلِّ شَیْءٍ شَهِیْدًا ۟۠
ಮಾತಾಪಿತರು ಮತ್ತು ನಿಕಟ ಸಂಬಂಧಿಕರು ಬಿಟ್ಟು ಹೋದ ಆಸ್ತಿಯಲ್ಲಿ ನಾವು ಪ್ರತಿಯೊಬ್ಬರನ್ನೂ ಹಕ್ಕುದಾರರನ್ನಾಗಿ ಮಾಡಿದ್ದೇವೆ. ನಿಮ್ಮ ಬಲಗೈಗಳ ಮೂಲಕ ಕರಾರು ಮಾಡಿದವರಿಗೆ ಅವರ ಪಾಲನ್ನು ಕೊಟ್ಟುಬಿಡಿ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳಿಗೂ ಸಾಕ್ಷಿಯಾಗಿದ್ದಾನೆ.
ئەرەپچە تەپسىرلەر:
اَلرِّجَالُ قَوّٰمُوْنَ عَلَی النِّسَآءِ بِمَا فَضَّلَ اللّٰهُ بَعْضَهُمْ عَلٰی بَعْضٍ وَّبِمَاۤ اَنْفَقُوْا مِنْ اَمْوَالِهِمْ ؕ— فَالصّٰلِحٰتُ قٰنِتٰتٌ حٰفِظٰتٌ لِّلْغَیْبِ بِمَا حَفِظَ اللّٰهُ ؕ— وَالّٰتِیْ تَخَافُوْنَ نُشُوْزَهُنَّ فَعِظُوْهُنَّ وَاهْجُرُوْهُنَّ فِی الْمَضَاجِعِ وَاضْرِبُوْهُنَّ ۚ— فَاِنْ اَطَعْنَكُمْ فَلَا تَبْغُوْا عَلَیْهِنَّ سَبِیْلًا ؕ— اِنَّ اللّٰهَ كَانَ عَلِیًّا كَبِیْرًا ۟
ಪುರುಷರಿಗೆ ಮಹಿಳೆಯರ ಮೇಲೆ ಅಧಿಕಾರವಿದೆ. ಅದೇಕೆಂದರೆ, ಅಲ್ಲಾಹು ನಿಮ್ಮಲ್ಲಿ ಕೆಲವರನ್ನು ಇತರ ಕೆಲವರಿಗಿಂತ ಶ್ರೇಷ್ಠಗೊಳಿಸಿದ್ದಾನೆ ಮತ್ತು ಅವರು (ಪುರುಷರು) ತಮ್ಮ ಧನದಿಂದ ಖರ್ಚು ಮಾಡುತ್ತಾರೆ. ವಿಧೇಯತೆ ತೋರುವವರು ಮತ್ತು ಗಂಡಂದಿರ ಅನುಪಸ್ಥಿತಿಯಲ್ಲಿ ಅಲ್ಲಾಹು ಕಾಪಾಡಬೇಕೆಂದು ಹೇಳಿದ್ದನ್ನು ಕಾಪಾಡುವವರು ಯಾರೋ ಅವರೇ ನೀತಿವಂತ ಮಹಿಳೆಯರು. ಅವರು ವಿಧೇಯತೆ ತೋರುವುದಿಲ್ಲವೆಂದು ನಿಮಗೆ ಭಯವಾದರೆ, ಅವರಿಗೆ ಹಿತೋಪದೇಶ ಮಾಡಿ, ಹಾಸಿಗೆಯಿಂದ ದೂರವಿಡಿ ಮತ್ತು ಥಳಿಸಿ. ಅವರು ನಿಮ್ಮ ಮಾತನ್ನು ಕೇಳಿದರೆ, ಅವರ ವಿರುದ್ಧ ಬೇರೆ ಮಾರ್ಗವನ್ನು ಹುಡುಕಬೇಡಿ. ನಿಶ್ಚಯವಾಗಿಯೂ ಅಲ್ಲಾಹು ಅತ್ಯುನ್ನತನು ಮತ್ತು ಸರ್ವಶ್ರೇಷ್ಠನಾಗಿದ್ದಾನೆ.
ئەرەپچە تەپسىرلەر:
وَاِنْ خِفْتُمْ شِقَاقَ بَیْنِهِمَا فَابْعَثُوْا حَكَمًا مِّنْ اَهْلِهٖ وَحَكَمًا مِّنْ اَهْلِهَا ۚ— اِنْ یُّرِیْدَاۤ اِصْلَاحًا یُّوَفِّقِ اللّٰهُ بَیْنَهُمَا ؕ— اِنَّ اللّٰهَ كَانَ عَلِیْمًا خَبِیْرًا ۟
ಅವರಿಬ್ಬರ (ಗಂಡ-ಹೆಂಡತಿಯ) ನಡುವೆ ಒಡಕು ಮೂಡಬಹುದೆಂದು ನೀವು ಭಯಪಟ್ಟರೆ, ಅವನ ಕಡೆಯಿಂದ ಒಬ್ಬ ತೀರ್ಪುಗಾರನನ್ನು ಮತ್ತು ಅವಳ ಕಡೆಯಿಂದ ಒಬ್ಬ ತೀರ್ಪುಗಾರನನ್ನು ಕಳುಹಿಸಿರಿ. ಅವರಿಬ್ಬರು ರಾಜಿ ಮಾಡಿಕೊಳ್ಳಲು ಬಯಸುವುದಾದರೆ ಅಲ್ಲಾಹು ಅವರ ನಡುವೆ ಹೊಂದಾಣಿಕೆ ಮಾಡುವನು. ನಿಶ್ಚಯವಾಗಿಯೂ ಅಲ್ಲಾಹು ಎಲ್ಲವನ್ನೂ ತಿಳಿದವನು ಮತ್ತು ಸೂಕ್ಷ್ಮಜ್ಞಾನವುಳ್ಳವನಾಗಿದ್ದಾನೆ.
ئەرەپچە تەپسىرلەر:
وَاعْبُدُوا اللّٰهَ وَلَا تُشْرِكُوْا بِهٖ شَیْـًٔا وَّبِالْوَالِدَیْنِ اِحْسَانًا وَّبِذِی الْقُرْبٰی وَالْیَتٰمٰی وَالْمَسٰكِیْنِ وَالْجَارِ ذِی الْقُرْبٰی وَالْجَارِ الْجُنُبِ وَالصَّاحِبِ بِالْجَنْۢبِ وَابْنِ السَّبِیْلِ ۙ— وَمَا مَلَكَتْ اَیْمَانُكُمْ ؕ— اِنَّ اللّٰهَ لَا یُحِبُّ مَنْ كَانَ مُخْتَالًا فَخُوْرَا ۟ۙ
ನೀವು ಅಲ್ಲಾಹನನ್ನು ಆರಾಧಿಸಿರಿ ಮತ್ತು ಅವನೊಂದಿಗೆ ಏನನ್ನೂ ಸಹಭಾಗಿಯನ್ನಾಗಿ ಮಾಡಬೇಡಿ. ಮಾತಾಪಿತರಿಗೆ ಒಳಿತು ಮಾಡಿರಿ. ಸಂಬಂಧಿಕರು, ಅನಾಥರು, ಬಡವರು, ಕುಟುಂಬ ಸಂಬಂಧವಿರುವ ನೆರೆಹೊರೆಯವರು, ಇತರ ನೆರೆಹೊರೆಯವರು, ಸಂಗಡಿಗರು, ಪ್ರಯಾಣಿಕರು ಮತ್ತು ನಿಮ್ಮ ಅಧೀನದಲ್ಲಿರುವ ಗುಲಾಮರು ಮುಂತಾದವರೊಡನೆ ಉತ್ತಮವಾಗಿ ವರ್ತಿಸಿರಿ. ಅಹಂಕಾರ ಮತ್ತು ದರ್ಪವಿರುವ ಯಾರನ್ನೂ ಅಲ್ಲಾಹು ಇಷ್ಟಪಡುವುದಿಲ್ಲ.
ئەرەپچە تەپسىرلەر:
١لَّذِیْنَ یَبْخَلُوْنَ وَیَاْمُرُوْنَ النَّاسَ بِالْبُخْلِ وَیَكْتُمُوْنَ مَاۤ اٰتٰىهُمُ اللّٰهُ مِنْ فَضْلِهٖ ؕ— وَاَعْتَدْنَا لِلْكٰفِرِیْنَ عَذَابًا مُّهِیْنًا ۟ۚ
ಜಿಪುಣರು, ಜನರನ್ನು ಜಿಪುಣರಾಗಲು ಪ್ರೋತ್ಸಾಹಿಸುವವರು ಮತ್ತು ಅಲ್ಲಾಹು ಉದಾರವಾಗಿ ನೀಡಿದ ಧನವನ್ನು ಬಚ್ಚಿಡುವವರು ಯಾರೋ—ಆ ಸತ್ಯನಿಷೇಧಿಗಳಿಗೆ ನಾವು ಅಪಮಾನಕರ ಶಿಕ್ಷೆಯನ್ನು ಸಿದ್ಧಗೊಳಿಸಿದ್ದೇವೆ.
ئەرەپچە تەپسىرلەر:
وَالَّذِیْنَ یُنْفِقُوْنَ اَمْوَالَهُمْ رِئَآءَ النَّاسِ وَلَا یُؤْمِنُوْنَ بِاللّٰهِ وَلَا بِالْیَوْمِ الْاٰخِرِ ؕ— وَمَنْ یَّكُنِ الشَّیْطٰنُ لَهٗ قَرِیْنًا فَسَآءَ قَرِیْنًا ۟
ತೋರಿಕೆಗಾಗಿ ತಮ್ಮ ಹಣವನ್ನು ಖರ್ಚು ಮಾಡುವವರು ಮತ್ತು ಅಲ್ಲಾಹನಲ್ಲಿ ಅಥವಾ ಅಂತ್ಯದಿನದಲ್ಲಿ ವಿಶ್ವಾಸವಿಡದವರು. ಯಾರು ಶೈತಾನನನ್ನು ಸಂಗಡಿಗನಾಗಿ ಸ್ವೀಕರಿಸುತ್ತಾನೋ, ಆ ಸಂಗಡಿಗನು ಎಷ್ಟು ಕೆಟ್ಟವನು!
ئەرەپچە تەپسىرلەر:
وَمَاذَا عَلَیْهِمْ لَوْ اٰمَنُوْا بِاللّٰهِ وَالْیَوْمِ الْاٰخِرِ وَاَنْفَقُوْا مِمَّا رَزَقَهُمُ اللّٰهُ ؕ— وَكَانَ اللّٰهُ بِهِمْ عَلِیْمًا ۟
ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಟ್ಟರೆ ಮತ್ತು ಅಲ್ಲಾಹು ನೀಡಿದ ಧನದಿಂದ ಖರ್ಚು ಮಾಡಿದರೆ ಅವರಿಗೇನು ತೊಂದರೆ? ಅಲ್ಲಾಹು ಅವರನ್ನು ಬಹಳ ಚೆನ್ನಾಗಿ ತಿಳಿದಿದ್ದಾನೆ.
ئەرەپچە تەپسىرلەر:
اِنَّ اللّٰهَ لَا یَظْلِمُ مِثْقَالَ ذَرَّةٍ ۚ— وَاِنْ تَكُ حَسَنَةً یُّضٰعِفْهَا وَیُؤْتِ مِنْ لَّدُنْهُ اَجْرًا عَظِیْمًا ۟
ನಿಶ್ಚಯವಾಗಿಯೂ ಅಲ್ಲಾಹು ಒಂದು ಅಣುವಿನ ತೂಕದಷ್ಟು ಕೂಡ ಅನ್ಯಾಯ ಮಾಡುವುದಿಲ್ಲ. ಒಳಿತೇನಾದರೂ ಇದ್ದರೆ ಅವನು ಅದನ್ನು ದ್ವಿಗುಣಗೊಳಿಸಿ ತನ್ನ ಕಡೆಯ ಮಹಾ ಪ್ರತಿಫಲವನ್ನು ದಯಪಾಲಿಸುವನು.
ئەرەپچە تەپسىرلەر:
فَكَیْفَ اِذَا جِئْنَا مِنْ كُلِّ اُمَّةٍ بِشَهِیْدٍ وَّجِئْنَا بِكَ عَلٰی هٰۤؤُلَآءِ شَهِیْدًا ۟ؕؔ
ನಾವು ಪ್ರತಿಯೊಂದು ಸಮುದಾಯದಿಂದಲೂ ಒಬ್ಬ ಸಾಕ್ಷಿಯನ್ನು ತರುವಾಗ ಮತ್ತು ಇವರ ಮೇಲೆ ಸಾಕ್ಷಿಯಾಗಿ ನಿಮ್ಮನ್ನು ತರುವಾಗ ಪರಿಸ್ಥಿತಿ ಹೇಗಿರಬಹುದು!
ئەرەپچە تەپسىرلەر:
یَوْمَىِٕذٍ یَّوَدُّ الَّذِیْنَ كَفَرُوْا وَعَصَوُا الرَّسُوْلَ لَوْ تُسَوّٰی بِهِمُ الْاَرْضُ ؕ— وَلَا یَكْتُمُوْنَ اللّٰهَ حَدِیْثًا ۟۠
ಅಂದು ಸತ್ಯನಿಷೇಧಿಗಳು ಮತ್ತು ಸಂದೇಶವಾಹಕರಿಗೆ ಅವಿಧೇಯತೆ ತೋರಿದವರು ಭೂಮಿಯನ್ನು ತಮ್ಮೊಂದಿಗೆ ಸಮತಟ್ಟು ಮಾಡಲಾದರೆ ಎಷ್ಟು ಚೆನ್ನಾಗಿತ್ತು ಎಂದು ಹಾರೈಸುವರು. ಅಲ್ಲಾಹನಿಂದ ಯಾವುದೇ ಸಂಗತಿಯನ್ನು ಮುಚ್ಚಿಡಲು ಅವರಿಗೆ ಸಾಧ್ಯವಿಲ್ಲ.
ئەرەپچە تەپسىرلەر:
یٰۤاَیُّهَا الَّذِیْنَ اٰمَنُوْا لَا تَقْرَبُوا الصَّلٰوةَ وَاَنْتُمْ سُكٰرٰی حَتّٰی تَعْلَمُوْا مَا تَقُوْلُوْنَ وَلَا جُنُبًا اِلَّا عَابِرِیْ سَبِیْلٍ حَتّٰی تَغْتَسِلُوْا ؕ— وَاِنْ كُنْتُمْ مَّرْضٰۤی اَوْ عَلٰی سَفَرٍ اَوْ جَآءَ اَحَدٌ مِّنْكُمْ مِّنَ الْغَآىِٕطِ اَوْ لٰمَسْتُمُ النِّسَآءَ فَلَمْ تَجِدُوْا مَآءً فَتَیَمَّمُوْا صَعِیْدًا طَیِّبًا فَامْسَحُوْا بِوُجُوْهِكُمْ وَاَیْدِیْكُمْ ؕ— اِنَّ اللّٰهَ كَانَ عَفُوًّا غَفُوْرًا ۟
ಓ ಸತ್ಯವಿಶ್ವಾಸಿಗಳೇ! ಪಾನಮತ್ತರಾದ ಸ್ಥಿತಿಯಲ್ಲಿ ನೀವು ನಮಾಝ್ ಮಾಡಲು ಬರಬೇಡಿ—ನೀವೇನು ಹೇಳುತ್ತಿದ್ದೀರಿ ಎಂದು ನಿಮಗೆ ಅರ್ಥವಾಗುವ ತನಕ. ದೊಡ್ಡ ಅಶುದ್ಧಿಯಿರುವಾಗಲೂ[1] ಬರಬೇಡಿ—ಸ್ನಾನ ಮಾಡಿ ಶುದ್ಧರಾಗುವ ತನಕ. ಆದರೆ (ಮಸೀದಿಯ ಮೂಲಕ) ಹಾದು ಹೋಗುವುದರಲ್ಲಿ ತೊಂದರೆಯಿಲ್ಲ. ನೀವು ಅನಾರೋಗ್ಯದಲ್ಲಿದ್ದರೆ ಅಥವಾ ಪ್ರಯಾಣದಲ್ಲಿದ್ದರೆ; ಅಥವಾ ನಿಮ್ಮಲ್ಲೊಬ್ಬನು ಮಲಮೂತ್ರ ವಿಸರ್ಜನೆ ಮಾಡಿ ಬಂದಿದ್ದರೆ, ಅಥವಾ ಮಹಿಳೆಯರನ್ನು ಸ್ಪರ್ಶಿಸಿದ್ದರೆ (ಲೈಂಗಿಕ ಸಂಪರ್ಕ ಮಾಡಿದ್ದರೆ); ನಂತರ ನಿಮಗೆ ಶುದ್ಧಿಯಾಗಲು ನೀರು ದೊರೆಯದಿದ್ದರೆ, ಶುದ್ಧ ಮಣ್ಣಿನಿಂದ ತಯಮ್ಮುಮ್[2] ಮಾಡಿ ಮುಖ ಮತ್ತು ಕೈಗಳನ್ನು ಸವರಿರಿ. ನಿಶ್ಚಯವಾಗಿಯೂ ಅಲ್ಲಾಹು ಮನ್ನಿಸುವವನು ಮತ್ತು ಕ್ಷಮಿಸುವವನಾಗಿದ್ದಾನೆ.
[1] ದೊಡ್ಡ ಅಶುದ್ಧಿ (ಜನಾಬತ್) ಎಂದರೆ ಲೈಂಗಿಕ ಸಂಭೋಗ, ಸ್ವಪ್ನಸ್ಖಲನ ಅಥವಾ ವೀರ್ಯಸ್ಖಲನದ ಮೂಲಕ ಉಂಟಾಗುವ ಅಶುದ್ಧಿ. [2] ವುದೂ (ಅಂಗಸ್ನಾನ) ಅಥವಾ ಸ್ನಾನ ಮಾಡಲು ನೀರು ಸಿಗದಿದ್ದರೆ, ಅಥವಾ ಕಾಯಿಲೆ ಮುಂತಾದ ಕಾರಣದಿಂದ ನೀರು ಬಳಸಲು ಸಾಧ್ಯವಾಗದಿದ್ದರೆ ತಯಮ್ಮುಮ್ ಮಾಡಬಹುದು. ಇದು ವುದೂಗೆ ಪರ್ಯಾಯವಾಗಿದೆ. ತಯಮ್ಮುಮ್ ಎಂದರೆ ಎರಡು ಅಂಗೈಗಳನ್ನು ಶುದ್ಧ ಮಣ್ಣಿಗೆ ಬಡಿದು ಅದರಿಂದ ಅಂಗೈಗಳನ್ನು ಮತ್ತು ಮುಖವನ್ನು ಸವರುವುದು.
ئەرەپچە تەپسىرلەر:
اَلَمْ تَرَ اِلَی الَّذِیْنَ اُوْتُوْا نَصِیْبًا مِّنَ الْكِتٰبِ یَشْتَرُوْنَ الضَّلٰلَةَ وَیُرِیْدُوْنَ اَنْ تَضِلُّوا السَّبِیْلَ ۟ؕ
ಗ್ರಂಥದಿಂದ ಒಂದು ಪಾಲು ನೀಡಲಾದವರನ್ನು ನೀವು ನೋಡಿಲ್ಲವೇ? ಅವರು ದುರ್ಮಾರ್ಗವನ್ನು ಖರೀದಿಸುತ್ತಾರೆ ಮತ್ತು ನೀವು ನೇರಮಾರ್ಗದಿಂದ ತಪ್ಪಿಹೋಗಬೇಕೆಂದು ಬಯಸುತ್ತಾರೆ.
ئەرەپچە تەپسىرلەر:
وَاللّٰهُ اَعْلَمُ بِاَعْدَآىِٕكُمْ ؕ— وَكَفٰی بِاللّٰهِ وَلِیًّا ؗۗ— وَّكَفٰی بِاللّٰهِ نَصِیْرًا ۟
ನಿಮ್ಮ ಶತ್ರುಗಳನ್ನು ಅಲ್ಲಾಹು ಬಹಳ ಚೆನ್ನಾಗಿ ತಿಳಿದಿದ್ದಾನೆ. ನಿಮಗೆ ರಕ್ಷಕನಾಗಿ ಅಲ್ಲಾಹು ಸಾಕು. ಸಹಾಯ ಮಾಡುವವನಾಗಿಯೂ ಅಲ್ಲಾಹು ಸಾಕು.
ئەرەپچە تەپسىرلەر:
مِنَ الَّذِیْنَ هَادُوْا یُحَرِّفُوْنَ الْكَلِمَ عَنْ مَّوَاضِعِهٖ وَیَقُوْلُوْنَ سَمِعْنَا وَعَصَیْنَا وَاسْمَعْ غَیْرَ مُسْمَعٍ وَّرَاعِنَا لَیًّا بِاَلْسِنَتِهِمْ وَطَعْنًا فِی الدِّیْنِ ؕ— وَلَوْ اَنَّهُمْ قَالُوْا سَمِعْنَا وَاَطَعْنَا وَاسْمَعْ وَانْظُرْنَا لَكَانَ خَیْرًا لَّهُمْ وَاَقْوَمَ ۙ— وَلٰكِنْ لَّعَنَهُمُ اللّٰهُ بِكُفْرِهِمْ فَلَا یُؤْمِنُوْنَ اِلَّا قَلِیْلًا ۟
ಯಹೂದಿಗಳಲ್ಲಿ ಕೆಲವರಿದ್ದಾರೆ. ಅವರು ವಚನಗಳನ್ನು ಅದರ ಸ್ಥಾನದಿಂದ ವಿರೂಪಗೊಳಿಸುತ್ತಾರೆ. ಅವರು ಹೇಳುತ್ತಾರೆ: “ನಾವು ಕಿವಿಗೊಡುತ್ತೇವೆ ಮತ್ತು ಅವಿಧೇಯತೆ ತೋರುತ್ತೇವೆ.” “ಕೇಳು, ಆದರೆ ನಿನ್ನ ಮಾತು ಕೇಳದಂತಾಗಲಿ.” “ನಮ್ಮ ಕಡೆಗೆ ಗಮನಕೊಡು.” (ಹೀಗೆ ಹೇಳುವಾಗ) ಅವರು ತಮ್ಮ ನಾಲಗೆಗಳನ್ನು ತಿರುಚುತ್ತಾರೆ ಮತ್ತು ಧರ್ಮಕ್ಕೆ ಕಳಂಕ ಹಚ್ಚುತ್ತಾರೆ.[1] ನಾವು ಕಿವಿಗೊಡುತ್ತೇವೆ ಮತ್ತು ವಿಧೇಯತೆ ತೋರುತ್ತೇವೆ; ಕೇಳಿರಿ; ಮತ್ತು ನಮ್ಮನ್ನು ನೋಡಿರಿ ಎಂದು ಅವರು ಹೇಳುತ್ತಿದ್ದರೆ ಅವರಿಗೆ ಅದು ಅತ್ಯುತ್ತಮ ಮತ್ತು ನೇರವಾಗಿರುತ್ತಿತ್ತು. ಆದರೆ ಅವರ ಸತ್ಯನಿಷೇಧದಿಂದಾಗಿ ಅಲ್ಲಾಹು ಅವರನ್ನು ಶಪಿಸಿದ್ದಾನೆ. ಆದ್ದರಿಂದ ಅವರು ಸ್ವಲ್ಪ ಮಾತ್ರ ವಿಶ್ವಾಸವಿಡುತ್ತಾರೆ.
[1] ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಏನಾದರೂ ಆದೇಶಿಸಿದರೆ ಸತ್ಯವಿಶ್ವಾಸಿಗಳು ನಾವು ಕಿವಿಗೊಡುತ್ತೇವೆ ಮತ್ತು ವಿಧೇಯತೆ ತೋರುತ್ತೇವೆ ಎನ್ನುತ್ತಿದ್ದರು. ಆದರೆ ಯಹೂದಿಗಳು ನಾವು ಕಿವಿಗೊಡುತ್ತೇವೆ ಮತ್ತು ಅವಿಧೇಯತೆ ತೋರುತ್ತೇವೆ ಎನ್ನುತ್ತಾ ಸತ್ಯವಿಶ್ವಾಸಿಗಳನ್ನು ಲೇವಡಿ ಮಾಡುತ್ತಿದ್ದರು. ಅದೇ ರೀತಿ ಅವರು ದ್ವಂದ್ವಾರ್ಥವಿರುವ ಕೇಳು, ಆದರೆ ನಿನ್ನ ಮಾತು ಕೇಳದಂತಾಗಲಿ ಎಂಬ ಮಾತನ್ನೂ ಹೇಳುತ್ತಿದ್ದರು. ಇದಕ್ಕೆ ಹೊರತಾಗಿ ಅವರು ನಮ್ಮ ಕಡೆಗೆ ಗಮನಕೊಡು (ರಾಇನಾ) ಎಂಬ ದ್ವಂದ್ವಾರ್ಥವಿರುವ ಇನ್ನೊಂದು ವಚನವನ್ನು ಬಳಸುತ್ತಿದ್ದರು. ಇವುಗಳನ್ನು ಹೇಳುವಾಗ ಅವರು ತಮ್ಮ ನಾಲಗೆಗಳನ್ನು ತಿರುಚಿ ಎರಡು ರೀತಿಯ ಅರ್ಥ ಬರುವಂತೆ ಮಾಡುತ್ತಿದ್ದರು.
ئەرەپچە تەپسىرلەر:
یٰۤاَیُّهَا الَّذِیْنَ اُوْتُوا الْكِتٰبَ اٰمِنُوْا بِمَا نَزَّلْنَا مُصَدِّقًا لِّمَا مَعَكُمْ مِّنْ قَبْلِ اَنْ نَّطْمِسَ وُجُوْهًا فَنَرُدَّهَا عَلٰۤی اَدْبَارِهَاۤ اَوْ نَلْعَنَهُمْ كَمَا لَعَنَّاۤ اَصْحٰبَ السَّبْتِ ؕ— وَكَانَ اَمْرُ اللّٰهِ مَفْعُوْلًا ۟
ಓ ಗ್ರಂಥ ನೀಡಲಾದವರೇ! ನಾವು ಮುಖಗಳನ್ನು ಅಳಿಸಿ ಅವುಗಳನ್ನು ಹಿಂಭಾಗಕ್ಕೆ ತಿರುಗಿಸುವುದಕ್ಕೆ ಮೊದಲು; ಅಥವಾ ಸಬ್ಬತ್‍ನ ಜನರನ್ನು ಶಪಿಸಿದಂತೆ ನಿಮ್ಮನ್ನೂ ಶಪಿಸುವುದಕ್ಕೆ ಮೊದಲು, ನಿಮ್ಮ ಬಳಿಯಿರುವ ಗ್ರಂಥವನ್ನು ದೃಢೀಕರಿಸುತ್ತಾ ನಾವು ಅವತೀರ್ಣಗೊಳಿಸಿದ ಸಂದೇಶದಲ್ಲಿ ವಿಶ್ವಾಸವಿಡಿ. ಅಲ್ಲಾಹನ ಆಜ್ಞೆಯು ನೆರವೇರಿಯೇ ತೀರುತ್ತದೆ.
ئەرەپچە تەپسىرلەر:
اِنَّ اللّٰهَ لَا یَغْفِرُ اَنْ یُّشْرَكَ بِهٖ وَیَغْفِرُ مَا دُوْنَ ذٰلِكَ لِمَنْ یَّشَآءُ ۚ— وَمَنْ یُّشْرِكْ بِاللّٰهِ فَقَدِ افْتَرٰۤی اِثْمًا عَظِیْمًا ۟
ತನ್ನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡಲಾಗುವುದನ್ನು ಅಲ್ಲಾಹು ಎಂದಿಗೂ ಕ್ಷಮಿಸುವುದಿಲ್ಲ. ಅದರ ಹೊರತಾದ ಪಾಪಗಳನ್ನು ಅವನು ಇಚ್ಛಿಸುವವರಿಗೆ ಅವನು ಕ್ಷಮಿಸುತ್ತಾನೆ. ಅಲ್ಲಾಹನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡುವವನು ನಿಶ್ಚಯವಾಗಿಯೂ ಗಂಭೀರ ಪಾಪವನ್ನೆಸಗಿದನು.
ئەرەپچە تەپسىرلەر:
اَلَمْ تَرَ اِلَی الَّذِیْنَ یُزَكُّوْنَ اَنْفُسَهُمْ ؕ— بَلِ اللّٰهُ یُزَكِّیْ مَنْ یَّشَآءُ وَلَا یُظْلَمُوْنَ فَتِیْلًا ۟
ತಮ್ಮನ್ನು ತಾವೇ ಪರಿಶುದ್ಧರೆಂದು ಹೇಳುವವರನ್ನು ನೀವು ನೋಡಿಲ್ಲವೇ? ಅಲ್ಲ; ವಾಸ್ತವವಾಗಿ ಅಲ್ಲಾಹು ಅವನು ಇಚ್ಛಿಸುವವರನ್ನು ಪರಿಶುದ್ಧಗೊಳಿಸುತ್ತಾನೆ. (ಖರ್ಜೂರದ ಬೀಜದಲ್ಲಿರುವ) ನೂಲಿನಷ್ಟೂ ಕೂಡ ಯಾರಿಗೂ ಅನ್ಯಾಯವಾಗುವುದಿಲ್ಲ.
ئەرەپچە تەپسىرلەر:
اُنْظُرْ كَیْفَ یَفْتَرُوْنَ عَلَی اللّٰهِ الْكَذِبَ ؕ— وَكَفٰی بِهٖۤ اِثْمًا مُّبِیْنًا ۟۠
ಅವರು ಅಲ್ಲಾಹನ ಮೇಲೆ ಹೇಗೆ ಸುಳ್ಳು ಆರೋಪಿಸುತ್ತಾರೆಂದು ನೋಡಿರಿ. ಪ್ರತ್ಯಕ್ಷ ಪಾಪವಾಗಿ ಅವರಿಗೆ ಅದೇ ಸಾಕು.
ئەرەپچە تەپسىرلەر:
اَلَمْ تَرَ اِلَی الَّذِیْنَ اُوْتُوْا نَصِیْبًا مِّنَ الْكِتٰبِ یُؤْمِنُوْنَ بِالْجِبْتِ وَالطَّاغُوْتِ وَیَقُوْلُوْنَ لِلَّذِیْنَ كَفَرُوْا هٰۤؤُلَآءِ اَهْدٰی مِنَ الَّذِیْنَ اٰمَنُوْا سَبِیْلًا ۟
ಗ್ರಂಥದಿಂದ ಒಂದು ಪಾಲು ನೀಡಲಾದವರನ್ನು ನೀವು ನೋಡಿಲ್ಲವೇ? ಅವರು ವಿಗ್ರಹಗಳು ಮತ್ತು ಮಿಥ್ಯ ದೇವರುಗಳಲ್ಲಿ ವಿಶ್ವಾಸವಿಡುತ್ತಾರೆ ಮತ್ತು ಸತ್ಯನಿಷೇಧಿಗಳೊಡನೆ, “ಸತ್ಯವಿಶ್ವಾಸಿಗಳಿಗಿಂತಲೂ ಇವರೇ ಹೆಚ್ಚು ಸನ್ಮಾರ್ಗದಲ್ಲಿದ್ದಾರೆ” ಎಂದು ಹೇಳುತ್ತಾರೆ.
ئەرەپچە تەپسىرلەر:
اُولٰٓىِٕكَ الَّذِیْنَ لَعَنَهُمُ اللّٰهُ ؕ— وَمَنْ یَّلْعَنِ اللّٰهُ فَلَنْ تَجِدَ لَهٗ نَصِیْرًا ۟ؕ
ಅವರೇ ಅಲ್ಲಾಹನ ಶಾಪಕ್ಕೆ ಗುರಿಯಾದವರು. ಯಾರು ಅಲ್ಲಾಹನ ಶಾಪಕ್ಕೆ ಗುರಿಯಾಗುತ್ತಾರೋ ಅವರಿಗೆ ಯಾವುದೇ ಸಹಾಯಕನನ್ನು ನೀವು ಕಾಣಲಾರಿರಿ.
ئەرەپچە تەپسىرلەر:
اَمْ لَهُمْ نَصِیْبٌ مِّنَ الْمُلْكِ فَاِذًا لَّا یُؤْتُوْنَ النَّاسَ نَقِیْرًا ۟ۙ
ಆಧಿಪತ್ಯದಲ್ಲಿ ಅವರಿಗೇನಾದರೂ ಪಾಲಿದೆಯೇ? ಇದ್ದರೆ ಅವರು ಜನರಿಗೆ ಖರ್ಜೂರ ಬೀಜದ ಪೊರೆಯನ್ನೂ ನೀಡುತ್ತಿರಲಿಲ್ಲ.
ئەرەپچە تەپسىرلەر:
اَمْ یَحْسُدُوْنَ النَّاسَ عَلٰی مَاۤ اٰتٰىهُمُ اللّٰهُ مِنْ فَضْلِهٖ ۚ— فَقَدْ اٰتَیْنَاۤ اٰلَ اِبْرٰهِیْمَ الْكِتٰبَ وَالْحِكْمَةَ وَاٰتَیْنٰهُمْ مُّلْكًا عَظِیْمًا ۟
ಜನರಿಗೆ ಅಲ್ಲಾಹು ತನ್ನ ಔದಾರ್ಯದಿಂದ ನೀಡಿದ್ದನ್ನು ಕಂಡು ಅವರಿಗೆ ಹೊಟ್ಟೆ ಉರಿಯುತ್ತಿದೆಯೇ? ಹಾಗಾದರೆ, ನಾವು ಇಬ್ರಾಹೀಮರ ಕುಟುಂಬಕ್ಕೆ ಗ್ರಂಥ ಮತ್ತು ವಿವೇಕವನ್ನು ನೀಡಿದ್ದೇವೆ. ಅವರಿಗೆ ನಾವು ಮಹಾ ಸಾಮ್ರಾಜ್ಯವನ್ನು ಕೂಡ ನೀಡಿದ್ದೇವೆ.
ئەرەپچە تەپسىرلەر:
فَمِنْهُمْ مَّنْ اٰمَنَ بِهٖ وَمِنْهُمْ مَّنْ صَدَّ عَنْهُ ؕ— وَكَفٰی بِجَهَنَّمَ سَعِیْرًا ۟
ಅವರಲ್ಲಿ ಕೆಲವರು ಅದರಲ್ಲಿ (ಗ್ರಂಥದಲ್ಲಿ) ವಿಶ್ವಾಸವಿಡುತ್ತಾರೆ ಮತ್ತು ಅವರಲ್ಲಿ ಕೆಲವರು ಅದನ್ನು ದ್ವೇಷಿಸುತ್ತಾರೆ. ಅವರಿಗೆ ಧಗಧಗಿಸುವ ನರಕಾಗ್ನಿಯೇ ಸಾಕು.
ئەرەپچە تەپسىرلەر:
اِنَّ الَّذِیْنَ كَفَرُوْا بِاٰیٰتِنَا سَوْفَ نُصْلِیْهِمْ نَارًا ؕ— كُلَّمَا نَضِجَتْ جُلُوْدُهُمْ بَدَّلْنٰهُمْ جُلُوْدًا غَیْرَهَا لِیَذُوْقُوا الْعَذَابَ ؕ— اِنَّ اللّٰهَ كَانَ عَزِیْزًا حَكِیْمًا ۟
ನಿಶ್ಚಯವಾಗಿಯೂ ನಮ್ಮ ವಚನಗಳನ್ನು ನಿಷೇಧಿಸಿದವರು ಯಾರೋ—ಅವರನ್ನು ನಾವು ನರಕಾಗ್ನಿಯಲ್ಲಿ ಹಾಕಿ ಉರಿಸುವೆವು. ಅವರ ಚರ್ಮಗಳು ಬೆಂದು ಕರಟುವಾಗಲೆಲ್ಲಾ, ಅವರು ಶಿಕ್ಷೆಯನ್ನು ಅನುಭವಿಸುತ್ತಲೇ ಇರಲು, ನಾವು ಅವರಿಗೆ ಬೇರೆ ಚರ್ಮಗಳನ್ನು ಬದಲಿಯಾಗಿ ನೀಡುವೆವು. ನಿಶ್ಚಯವಾಗಿಯೂ ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.
ئەرەپچە تەپسىرلەر:
وَالَّذِیْنَ اٰمَنُوْا وَعَمِلُوا الصّٰلِحٰتِ سَنُدْخِلُهُمْ جَنّٰتٍ تَجْرِیْ مِنْ تَحْتِهَا الْاَنْهٰرُ خٰلِدِیْنَ فِیْهَاۤ اَبَدًا ؕ— لَهُمْ فِیْهَاۤ اَزْوَاجٌ مُّطَهَّرَةٌ ؗ— وَّنُدْخِلُهُمْ ظِلًّا ظَلِیْلًا ۟
ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ—ಅವರನ್ನು ನಾವು ಸದ್ಯವೇ ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿಗೆ ಪ್ರವೇಶ ಮಾಡಿಸುವೆವು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅಲ್ಲಿ ಅವರಿಗೆ ಪರಿಶುದ್ಧ ಸಂಗಾತಿಗಳಿರುವರು. ನಾವು ಅವರನ್ನು ಶಾಶ್ವತ ನೆರಳಿಗೆ ಪ್ರವೇಶ ಮಾಡಿಸುವೆವು.
ئەرەپچە تەپسىرلەر:
اِنَّ اللّٰهَ یَاْمُرُكُمْ اَنْ تُؤَدُّوا الْاَمٰنٰتِ اِلٰۤی اَهْلِهَا ۙ— وَاِذَا حَكَمْتُمْ بَیْنَ النَّاسِ اَنْ تَحْكُمُوْا بِالْعَدْلِ ؕ— اِنَّ اللّٰهَ نِعِمَّا یَعِظُكُمْ بِهٖ ؕ— اِنَّ اللّٰهَ كَانَ سَمِیْعًا بَصِیْرًا ۟
ನಂಬಿಕೆಯಿಂದ ನೀಡಲಾದ ವಸ್ತುಗಳನ್ನು ಅವುಗಳ ಹಕ್ಕುದಾರರಿಗೆ ಕೊಟ್ಟುಬಿಡಲು ಮತ್ತು ಜನರ ನಡುವೆ ತೀರ್ಪು ನೀಡುವಾಗ ನ್ಯಾಯವಾಗಿಯೇ ತೀರ್ಪು ನೀಡಲು ಅಲ್ಲಾಹು ನಿಮಗೆ ಆಜ್ಞಾಪಿಸುತ್ತಾನೆ. ನಿಶ್ಚಯವಾಗಿಯೂ ಅಲ್ಲಾಹು ನಿಮಗೆ ನೀಡುವ ಉಪದೇಶವು ಬಹಳ ಉತ್ತಮವಾಗಿದೆ! ನಿಶ್ಚಯವಾಗಿಯೂ ಅಲ್ಲಾಹು ಎಲ್ಲವನ್ನೂ ಕೇಳುವವನು ಮತ್ತು ನೋಡುವವನಾಗಿದ್ದಾನೆ.
ئەرەپچە تەپسىرلەر:
یٰۤاَیُّهَا الَّذِیْنَ اٰمَنُوْۤا اَطِیْعُوا اللّٰهَ وَاَطِیْعُوا الرَّسُوْلَ وَاُولِی الْاَمْرِ مِنْكُمْ ۚ— فَاِنْ تَنَازَعْتُمْ فِیْ شَیْءٍ فَرُدُّوْهُ اِلَی اللّٰهِ وَالرَّسُوْلِ اِنْ كُنْتُمْ تُؤْمِنُوْنَ بِاللّٰهِ وَالْیَوْمِ الْاٰخِرِ ؕ— ذٰلِكَ خَیْرٌ وَّاَحْسَنُ تَاْوِیْلًا ۟۠
ಓ ಸತ್ಯವಿಶ್ವಾಸಿಗಳೇ! ನೀವು ಅಲ್ಲಾಹನನ್ನು ಅನುಸರಿಸಿರಿ ಮತ್ತು ಸಂದೇಶವಾಹಕರನ್ನು ಅನುಸರಿಸಿರಿ. ನಿಮ್ಮ ಮೇಲೆ ಅಧಿಕಾರವಿರುವವರನ್ನೂ ಅನುಸರಿಸಿರಿ. ನಿಮ್ಮ ಮಧ್ಯೆ ಯಾವುದೇ ವಿಷಯದಲ್ಲಿ ಭಿನ್ನಮತವುಂಟಾದರೆ ಅದನ್ನು ಅಲ್ಲಾಹನಿಗೆ ಮತ್ತು ಸಂದೇಶವಾಹಕರಿಗೆ ಮರಳಿಸಿರಿ—ನೀವು ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುವವರಾಗಿದ್ದರೆ. ಅದು ಅತ್ಯುತ್ತಮ ಮಾರ್ಗವಾಗಿದ್ದು ಅತ್ಯುತ್ತಮ ಪರಿಣಾಮವನ್ನು ಹೊಂದಿದೆ.
ئەرەپچە تەپسىرلەر:
اَلَمْ تَرَ اِلَی الَّذِیْنَ یَزْعُمُوْنَ اَنَّهُمْ اٰمَنُوْا بِمَاۤ اُنْزِلَ اِلَیْكَ وَمَاۤ اُنْزِلَ مِنْ قَبْلِكَ یُرِیْدُوْنَ اَنْ یَّتَحَاكَمُوْۤا اِلَی الطَّاغُوْتِ وَقَدْ اُمِرُوْۤا اَنْ یَّكْفُرُوْا بِهٖ ؕ— وَیُرِیْدُ الشَّیْطٰنُ اَنْ یُّضِلَّهُمْ ضَلٰلًا بَعِیْدًا ۟
ನಿಮಗೆ ಅವತೀರ್ಣವಾದ ಗ್ರಂಥದಲ್ಲಿ ಮತ್ತು ನಿಮಗಿಂತ ಮುಂಚೆ ಅವತೀರ್ಣವಾದ ಗ್ರಂಥಗಳಲ್ಲಿ ನಾವು ವಿಶ್ವಾಸವಿಟ್ಟಿದ್ದೇವೆ ಎಂದು ವಾದಿಸುವವರನ್ನು ನೀವು ನೋಡಿಲ್ಲವೇ? ಅವರು ತೀರ್ಪಿಗಾಗಿ ಮಿಥ್ಯ ದೇವರುಗಳ ಬಳಿಗೆ ಹೋಗಲು ಬಯಸುತ್ತಾರೆ. ವಾಸ್ತವವಾಗಿ, ಮಿಥ್ಯ ದೇವರುಗಳನ್ನು ನಿಷೇಧಿಸಬೇಕೆಂದು ಅವರಿಗೆ ಆಜ್ಞಾಪಿಸಲಾಗಿತ್ತು. ಶೈತಾನನು ಅವರನ್ನು ವಿದೂರ ದುರ್ಮಾರ್ಗದಲ್ಲಿ ಬಿಟ್ಟುಬಿಡಲು ಬಯಸುತ್ತಾನೆ.
ئەرەپچە تەپسىرلەر:
وَاِذَا قِیْلَ لَهُمْ تَعَالَوْا اِلٰی مَاۤ اَنْزَلَ اللّٰهُ وَاِلَی الرَّسُوْلِ رَاَیْتَ الْمُنٰفِقِیْنَ یَصُدُّوْنَ عَنْكَ صُدُوْدًا ۟ۚ
“ಅಲ್ಲಾಹು ಅವತೀರ್ಣಗೊಳಿಸಿದ ಗ್ರಂಥಕ್ಕೆ ಮತ್ತು ಅವನ ಸಂದೇಶವಾಹಕರ ಕಡೆಗೆ ಬನ್ನಿರಿ” ಎಂದು ಅವರೊಡನೆ ಹೇಳಲಾದರೆ, ಆ ಕಪಟವಿಶ್ವಾಸಿಗಳು ದ್ವೇಷದಿಂದ ನಿಮ್ಮನ್ನು ಅವಗಣಿಸಿ ನಡೆಯುವುದನ್ನು ನೀವು ಕಾಣುವಿರಿ.
ئەرەپچە تەپسىرلەر:
فَكَیْفَ اِذَاۤ اَصَابَتْهُمْ مُّصِیْبَةٌ بِمَا قَدَّمَتْ اَیْدِیْهِمْ ثُمَّ جَآءُوْكَ یَحْلِفُوْنَ ۖۗ— بِاللّٰهِ اِنْ اَرَدْنَاۤ اِلَّاۤ اِحْسَانًا وَّتَوْفِیْقًا ۟
ಅವರ ಕೈಗಳು ಈಗಾಗಲೇ ಮಾಡಿಟ್ಟ ದುಷ್ಕರ್ಮಗಳ ಕಾರಣದಿಂದ ಅವರಿಗೇನಾದರೂ ಅನಾಹುತ ಸಂಭವಿಸಿದರೆ, ನಂತರ ಅವರು ತಮ್ಮ ಬಳಿಗೆ ಬಂದು ಅಲ್ಲಾಹನ ಮೇಲೆ ಆಣೆ ಮಾಡುತ್ತಾ, “ನಾವು ಒಳಿತು ಮತ್ತು ಹೊಂದಾಣಿಕೆಯನ್ನು ಮಾತ್ರ ಬಯಸಿದ್ದೆವು” ಎಂದು ಹೇಳುವಾಗ ಅವರ ಸ್ಥಿತಿ ಹೇಗಿರಬಹುದು?
ئەرەپچە تەپسىرلەر:
اُولٰٓىِٕكَ الَّذِیْنَ یَعْلَمُ اللّٰهُ مَا فِیْ قُلُوْبِهِمْ ۗ— فَاَعْرِضْ عَنْهُمْ وَعِظْهُمْ وَقُلْ لَّهُمْ فِیْۤ اَنْفُسِهِمْ قَوْلًا بَلِیْغًا ۟
ಅವರ ಹೃದಯಗಳಲ್ಲಿ ಏನಿದೆಯೆಂದು ಅಲ್ಲಾಹು ತಿಳಿದಿದ್ದಾನೆ. ಆದ್ದರಿಂದ ಅವರನ್ನು ಬಿಟ್ಟು ದೂರ ಸರಿಯಿರಿ; ಅವರಿಗೆ ಉಪದೇಶ ಮಾಡಿರಿ ಮತ್ತು ಅವರಿಗೆ ಹೃದಯಸ್ಪರ್ಶಿ ಮಾತನ್ನು ಹೇಳಿರಿ.
ئەرەپچە تەپسىرلەر:
وَمَاۤ اَرْسَلْنَا مِنْ رَّسُوْلٍ اِلَّا لِیُطَاعَ بِاِذْنِ اللّٰهِ ؕ— وَلَوْ اَنَّهُمْ اِذْ ظَّلَمُوْۤا اَنْفُسَهُمْ جَآءُوْكَ فَاسْتَغْفَرُوا اللّٰهَ وَاسْتَغْفَرَ لَهُمُ الرَّسُوْلُ لَوَجَدُوا اللّٰهَ تَوَّابًا رَّحِیْمًا ۟
ಅಲ್ಲಾಹನ ಅಪ್ಪಣೆಯಿಂದ ಅನುಸರಿಸುವುದಕ್ಕಾಗಿಯೇ ಹೊರತು ನಾವು ಯಾವುದೇ ಸಂದೇಶವಾಹಕರನ್ನು ಕಳುಹಿಸಿಲ್ಲ. ಅವರು ಸ್ವಯಂ ಅವರ ಮೇಲೆಯೇ ಅಕ್ರಮವೆಸಗಿ, ನಂತರ ನಿಮ್ಮ ಬಳಿಗೆ ಬಂದು ಅಲ್ಲಾಹನಲ್ಲಿ ಕ್ಷಮೆಯಾಚಿಸಿದರೆ, ಮತ್ತು ಅವರ ಪರವಾಗಿ ಸಂದೇಶವಾಹಕರು ಕೂಡ ಕ್ಷಮೆಯಾಚಿಸಿದರೆ, ಅವರು ಅಲ್ಲಾಹನನ್ನು ಪಶ್ಚಾತ್ತಾಪ ಸ್ವೀಕರಿಸುವವನಾಗಿ ಮತ್ತು ದಯೆ ತೋರುವವನಾಗಿ ಕಾಣುವರು.
ئەرەپچە تەپسىرلەر:
فَلَا وَرَبِّكَ لَا یُؤْمِنُوْنَ حَتّٰی یُحَكِّمُوْكَ فِیْمَا شَجَرَ بَیْنَهُمْ ثُمَّ لَا یَجِدُوْا فِیْۤ اَنْفُسِهِمْ حَرَجًا مِّمَّا قَضَیْتَ وَیُسَلِّمُوْا تَسْلِیْمًا ۟
ಇಲ್ಲ, ನಿಮ್ಮ ಪರಿಪಾಲಕನ (ಅಲ್ಲಾಹನ) ಮೇಲಾಣೆ! ಅವರು ತಮ್ಮ ನಡುವಿನ ಭಿನ್ನಮತಗಳಿಗೆ ನಿಮ್ಮನ್ನು ತೀರ್ಪುಗಾರನನ್ನಾಗಿ ಮಾಡಿ, ನಂತರ ನೀವು ನೀಡುವ ತೀರ್ಪನ್ನು ಯಾವುದೇ ಜಂಜಾಟವಿಲ್ಲದೆ ಸ್ವೀಕರಿಸಿ ಸಂಪೂರ್ಣ ವಿಧೇಯರಾಗುವ ತನಕ ಅವರು ಸತ್ಯವಿಶ್ವಾಸಿಗಳಾಗುವುದಿಲ್ಲ.
ئەرەپچە تەپسىرلەر:
وَلَوْ اَنَّا كَتَبْنَا عَلَیْهِمْ اَنِ اقْتُلُوْۤا اَنْفُسَكُمْ اَوِ اخْرُجُوْا مِنْ دِیَارِكُمْ مَّا فَعَلُوْهُ اِلَّا قَلِیْلٌ مِّنْهُمْ ؕ— وَلَوْ اَنَّهُمْ فَعَلُوْا مَا یُوْعَظُوْنَ بِهٖ لَكَانَ خَیْرًا لَّهُمْ وَاَشَدَّ تَثْبِیْتًا ۟ۙ
“ನೀವು ನಿಮ್ಮನ್ನೇ ಕೊಲ್ಲಿರಿ” ಅಥವಾ “ನೀವು ನಿಮ್ಮ ಮನೆಗಳನ್ನು ಬಿಟ್ಟು ಹೊರಡಿರಿ” ಎಂಬ ಆಜ್ಞೆಯನ್ನು ನಾವು ಅವರಿಗೆ ಕಡ್ಡಾಯಗೊಳಿಸುತ್ತಿದ್ದರೆ, ಅವರಲ್ಲಿ ಕೆಲವರ ಹೊರತು ಯಾರೂ ಅದನ್ನು ಮಾಡುತ್ತಿರಲಿಲ್ಲ. ಅವರಿಗೆ ನೀಡಲಾಗುವ ಉಪದೇಶದಂತೆ ಅವರು ನಡೆಯುತ್ತಿದ್ದರೆ, ಅದು ಅವರಿಗೆ ಶ್ರೇಷ್ಠವಾಗಿರುತ್ತಿತ್ತು ಮತ್ತು ಅವರಿಗೆ ಪ್ರಬಲ ದೃಢತೆಯಾಗಿ ಮಾರ್ಪಡುತ್ತಿತ್ತು.
ئەرەپچە تەپسىرلەر:
وَّاِذًا لَّاٰتَیْنٰهُمْ مِّنْ لَّدُنَّاۤ اَجْرًا عَظِیْمًا ۟ۙ
ಹಾಗಿದ್ದರೆ ನಾವು ಅವರಿಗೆ ನಮ್ಮ ಕಡೆಯ ಮಹಾ ಪ್ರತಿಫಲವನ್ನು ದಯಪಾಲಿಸುತ್ತಿದ್ದೆವು.
ئەرەپچە تەپسىرلەر:
وَّلَهَدَیْنٰهُمْ صِرَاطًا مُّسْتَقِیْمًا ۟
ಅವರನ್ನು ನೇರ ಮಾರ್ಗಕ್ಕೆ ಮುನ್ನಡೆಸುತ್ತಿದ್ದೆವು.
ئەرەپچە تەپسىرلەر:
وَمَنْ یُّطِعِ اللّٰهَ وَالرَّسُوْلَ فَاُولٰٓىِٕكَ مَعَ الَّذِیْنَ اَنْعَمَ اللّٰهُ عَلَیْهِمْ مِّنَ النَّبِیّٖنَ وَالصِّدِّیْقِیْنَ وَالشُّهَدَآءِ وَالصّٰلِحِیْنَ ۚ— وَحَسُنَ اُولٰٓىِٕكَ رَفِیْقًا ۟ؕ
ಯಾರು ಅಲ್ಲಾಹನನ್ನು ಮತ್ತು ಸಂದೇಶವಾಹಕರನ್ನು ಅನುಸರಿಸುತ್ತಾನೋ—ಅವರು ಅಲ್ಲಾಹು ಅನುಗ್ರಹಿಸಿದ ಪ್ರವಾದಿಗಳು, ಸತ್ಯವಂತರು, ಹುತಾತ್ಮರು ಮತ್ತು ನೀತಿವಂತರೊಡನೆ ಸೇರುವರು. ಅವರು ಬಹಳ ಉತ್ತಮ ಸಂಗಡಿಗರು!
ئەرەپچە تەپسىرلەر:
ذٰلِكَ الْفَضْلُ مِنَ اللّٰهِ ؕ— وَكَفٰی بِاللّٰهِ عَلِیْمًا ۟۠
ಅದು ಅಲ್ಲಾಹನ ಕಡೆಯ ಔದಾರ್ಯವಾಗಿದೆ. ಎಲ್ಲವನ್ನೂ ತಿಳಿದವನಾಗಿ ಅಲ್ಲಾಹು ಸಾಕು.
ئەرەپچە تەپسىرلەر:
یٰۤاَیُّهَا الَّذِیْنَ اٰمَنُوْا خُذُوْا حِذْرَكُمْ فَانْفِرُوْا ثُبَاتٍ اَوِ انْفِرُوْا جَمِیْعًا ۟
ಓ ಸತ್ಯವಿಶ್ವಾಸಿಗಳೇ! ನೀವು ಜಾಗರೂಕರಾಗಿರಿ ಮತ್ತು ಸಣ್ಣ ಗುಂಪುಗಳಾಗಿ ಅಥವಾ ಎಲ್ಲರೂ ಒಟ್ಟಾಗಿ ಯುದ್ಧಕ್ಕೆ ಹೊರಡಿರಿ.
ئەرەپچە تەپسىرلەر:
وَاِنَّ مِنْكُمْ لَمَنْ لَّیُبَطِّئَنَّ ۚ— فَاِنْ اَصَابَتْكُمْ مُّصِیْبَةٌ قَالَ قَدْ اَنْعَمَ اللّٰهُ عَلَیَّ اِذْ لَمْ اَكُنْ مَّعَهُمْ شَهِیْدًا ۟
ನಿಶ್ಚಯವಾಗಿಯೂ ನಿಮ್ಮಲ್ಲಿ ಹಿಂದೆ ಬೀಳುವ ಕೆಲವರಿದ್ದಾರೆ. ನಿಮಗೇನಾದರೂ ಅನಾಹುತ ಸಂಭವಿಸಿದರೆ, “ನಾನು ಅವರೊಂದಿಗೆ ಯುದ್ಧಕ್ಕೆ ಹೋಗದಂತೆ ಮಾಡುವ ಮೂಲಕ ಅಲ್ಲಾಹು ನನ್ನನ್ನು ಅನುಗ್ರಹಿಸಿದ್ದಾನೆ” ಎಂದು ಅವರು ಹೇಳುತ್ತಾರೆ.
ئەرەپچە تەپسىرلەر:
وَلَىِٕنْ اَصَابَكُمْ فَضْلٌ مِّنَ اللّٰهِ لَیَقُوْلَنَّ كَاَنْ لَّمْ تَكُنْ بَیْنَكُمْ وَبَیْنَهٗ مَوَدَّةٌ یّٰلَیْتَنِیْ كُنْتُ مَعَهُمْ فَاَفُوْزَ فَوْزًا عَظِیْمًا ۟
ನಿಮಗೆ ಅಲ್ಲಾಹನ ಕಡೆಯಿಂದ ಏನಾದರೂ ಔದಾರ್ಯ ದೊರೆತರೆ, ನಿಮ್ಮ ಮತ್ತು ಅವರ ನಡುವೆ ಯಾವುದೇ ಅನ್ಯೋನ್ಯತೆಯಿಲ್ಲದ ಶೈಲಿಯಲ್ಲಿ, “ಅಯ್ಯೋ! ನಾನು ಅವರ ಜೊತೆಗೆ ತೆರಳುತ್ತಿದ್ದರೆ ಎಷ್ಟು ಚೆನ್ನಾಗಿತ್ತು! ನನಗೂ ಮಹಾ ಗೆಲುವನ್ನು ಸಂಪಾದಿಸಬಹುದಿತ್ತು” ಎನ್ನುತ್ತಾರೆ.
ئەرەپچە تەپسىرلەر:
فَلْیُقَاتِلْ فِیْ سَبِیْلِ اللّٰهِ الَّذِیْنَ یَشْرُوْنَ الْحَیٰوةَ الدُّنْیَا بِالْاٰخِرَةِ ؕ— وَمَنْ یُّقَاتِلْ فِیْ سَبِیْلِ اللّٰهِ فَیُقْتَلْ اَوْ یَغْلِبْ فَسَوْفَ نُؤْتِیْهِ اَجْرًا عَظِیْمًا ۟
ಪರಲೋಕಕ್ಕಾಗಿ ಇಹಲೋಕವನ್ನು ತ್ಯಾಗ ಮಾಡಲು ಸಿದ್ಧರಾಗಿರುವವರು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಲಿ. ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿ ಕೊಲೆಯಾಗುವವರು ಅಥವಾ ಜಯಶಾಲಿಯಾಗುವವರು ಯಾರೋ—ಅವರಿಗೆ ನಾವು ಮಹಾ ಪ್ರತಿಫಲವನ್ನು ನೀಡುತ್ತೇವೆ.
ئەرەپچە تەپسىرلەر:
وَمَا لَكُمْ لَا تُقَاتِلُوْنَ فِیْ سَبِیْلِ اللّٰهِ وَالْمُسْتَضْعَفِیْنَ مِنَ الرِّجَالِ وَالنِّسَآءِ وَالْوِلْدَانِ الَّذِیْنَ یَقُوْلُوْنَ رَبَّنَاۤ اَخْرِجْنَا مِنْ هٰذِهِ الْقَرْیَةِ الظَّالِمِ اَهْلُهَا ۚ— وَاجْعَلْ لَّنَا مِنْ لَّدُنْكَ وَلِیًّا ۙۚ— وَّاجْعَلْ لَّنَا مِنْ لَّدُنْكَ نَصِیْرًا ۟ؕ
ನಿಮಗೇನಾಗಿದೆ? ದಬ್ಬಾಳಿಕೆಯಿಂದ ನರಳುತ್ತಿರುವ ಪುರುಷರು, ಮಹಿಳೆಯರು ಮತ್ತು ಮಕ್ಕಳಿಗಾಗಿ ನೀವೇಕೆ ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುವುದಿಲ್ಲ? “ಓ ನಮ್ಮ ಪರಿಪಾಲಕನೇ! ದಬ್ಬಾಳಿಕೆ ನಡೆಸುವ ಜನರು ವಾಸಿಸುತ್ತಿರುವ ಈ ಊರಿನಿಂದ ನಮ್ಮನ್ನು ವಿಮೋಚನೆಗೊಳಿಸು; ನಮಗೆ ನಿನ್ನ ಕಡೆಯ ಒಬ್ಬ ರಕ್ಷಕನನ್ನು ಮತ್ತು ನಿನ್ನ ಕಡೆಯ ಒಬ್ಬ ಸಹಾಯಕನನ್ನು ನಿಯೋಗಿಸು” ಎಂದು ಅವರು ಪ್ರಾರ್ಥಿಸುತ್ತಿದ್ದಾರೆ.
ئەرەپچە تەپسىرلەر:
اَلَّذِیْنَ اٰمَنُوْا یُقَاتِلُوْنَ فِیْ سَبِیْلِ اللّٰهِ ۚ— وَالَّذِیْنَ كَفَرُوْا یُقَاتِلُوْنَ فِیْ سَبِیْلِ الطَّاغُوْتِ فَقَاتِلُوْۤا اَوْلِیَآءَ الشَّیْطٰنِ ۚ— اِنَّ كَیْدَ الشَّیْطٰنِ كَانَ ضَعِیْفًا ۟۠
ಸತ್ಯವಿಶ್ವಾಸಿಗಳು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುತ್ತಾರೆ. ಸತ್ಯನಿಷೇಧಿಗಳು ಮಿಥ್ಯ ದೇವರುಗಳ ಮಾರ್ಗದಲ್ಲಿ ಯುದ್ಧ ಮಾಡುತ್ತಾರೆ. ಆದ್ದರಿಂದ ಶೈತಾನನ ಮಿತ್ರರ ವಿರುದ್ಧ ಯುದ್ಧ ಮಾಡಿರಿ. ನಿಶ್ಚಯವಾಗಿಯೂ ಶೈತಾನನ ತಂತ್ರವು ಬಲಹೀನವಾಗಿದೆ.
ئەرەپچە تەپسىرلەر:
اَلَمْ تَرَ اِلَی الَّذِیْنَ قِیْلَ لَهُمْ كُفُّوْۤا اَیْدِیَكُمْ وَاَقِیْمُوا الصَّلٰوةَ وَاٰتُوا الزَّكٰوةَ ۚ— فَلَمَّا كُتِبَ عَلَیْهِمُ الْقِتَالُ اِذَا فَرِیْقٌ مِّنْهُمْ یَخْشَوْنَ النَّاسَ كَخَشْیَةِ اللّٰهِ اَوْ اَشَدَّ خَشْیَةً ۚ— وَقَالُوْا رَبَّنَا لِمَ كَتَبْتَ عَلَیْنَا الْقِتَالَ ۚ— لَوْلَاۤ اَخَّرْتَنَاۤ اِلٰۤی اَجَلٍ قَرِیْبٍ ؕ— قُلْ مَتَاعُ الدُّنْیَا قَلِیْلٌ ۚ— وَالْاٰخِرَةُ خَیْرٌ لِّمَنِ اتَّقٰی ۫— وَلَا تُظْلَمُوْنَ فَتِیْلًا ۟
“ನಿಮ್ಮ ಕೈಗಳನ್ನು ತಡೆಹಿಡಿಯಿರಿ, ನಮಾಝ್ ಸಂಸ್ಥಾಪಿಸಿರಿ ಮತ್ತು ಝಕಾತ್ ನೀಡಿರಿ” ಎಂದು ಆದೇಶಿಸಲಾದ ಜನರನ್ನು ನೀವು ನೋಡಿಲ್ಲವೇ? ಅವರಿಗೆ ಯುದ್ಧವನ್ನು ಕಡ್ಡಾಯಗೊಳಿಸಲಾದಾಗ ಅವರಲ್ಲೊಂದು ಗುಂಪು ಅಲ್ಲಾಹನನ್ನು ಭಯಪಡುವಂತೆ ಅಥವಾ ಅದಕ್ಕಿಂತಲೂ ತೀವ್ರವಾಗಿ ಜನರನ್ನು ಭಯಪಡುತ್ತಾರೆ! ಅವರು ಕೇಳುತ್ತಾರೆ: “ಓ ನಮ್ಮ ಪರಿಪಾಲಕನೇ! ನಮಗೆ ಯುದ್ಧವನ್ನು (ಈಗಲೇ) ಏಕೆ ಕಡ್ಡಾಯಗೊಳಿಸಿದೆ? ಹತ್ತಿರದ ಒಂದು ಅವಧಿಯ ತನಕ ನಮಗೆ ಕಾಲಾವಕಾಶ ನೀಡಬಹುದಿತ್ತಲ್ಲವೇ?” ಹೇಳಿರಿ: “ಇಹಲೋಕದ ಆನಂದವು ಅತ್ಯಲ್ಪವಾಗಿದೆ. ದೇವಭಯವುಳ್ಳವರಿಗೆ ಪರಲೋಕವು ಅತ್ಯುತ್ತಮವಾಗಿದೆ. ನಿಮಗೆ (ಖರ್ಜೂರದ ಬೀಜದಲ್ಲಿರುವ) ನೂಲಿನಷ್ಟೂ ಅನ್ಯಾಯವಾಗುವುದಿಲ್ಲ.”
ئەرەپچە تەپسىرلەر:
اَیْنَمَا تَكُوْنُوْا یُدْرِكْكُّمُ الْمَوْتُ وَلَوْ كُنْتُمْ فِیْ بُرُوْجٍ مُّشَیَّدَةٍ ؕ— وَاِنْ تُصِبْهُمْ حَسَنَةٌ یَّقُوْلُوْا هٰذِهٖ مِنْ عِنْدِ اللّٰهِ ۚ— وَاِنْ تُصِبْهُمْ سَیِّئَةٌ یَّقُوْلُوْا هٰذِهٖ مِنْ عِنْدِكَ ؕ— قُلْ كُلٌّ مِّنْ عِنْدِ اللّٰهِ ؕ— فَمَالِ هٰۤؤُلَآءِ الْقَوْمِ لَا یَكَادُوْنَ یَفْقَهُوْنَ حَدِیْثًا ۟
ನೀವೆಲ್ಲೇ ಇದ್ದರೂ ಸಾವು ನಿಮ್ಮನ್ನು ಬೆನ್ನಟ್ಟುತ್ತದೆ. ನೀವು ಸುಭದ್ರ ಕೋಟೆಯೊಳಗಿದ್ದರೂ ಸಹ. ಅವರಿಗೆ ಒಳಿತುಂಟಾದರೆ, “ಇದು ಅಲ್ಲಾಹನಿಂದ” ಎಂದು ಅವರು ಹೇಳುತ್ತಾರೆ. ಆದರೆ ಅವರಿಗೆ ಕೆಡುಕುಂಟಾದರೆ, “ಇದು ನಿಮ್ಮಿಂದ” ಎನ್ನುತ್ತಾರೆ. ಹೇಳಿರಿ: “ಎಲ್ಲವೂ ಅಲ್ಲಾಹನಿಂದಲೇ ಆಗಿದೆ.” ಈ ಜನರಿಗೇನಾಗಿದೆ? ಇವರೇಕೆ ಮಾತನ್ನು ಅರ್ಥಮಾಡಿಕೊಳ್ಳುವುದಿಲ್ಲ?
ئەرەپچە تەپسىرلەر:
مَاۤ اَصَابَكَ مِنْ حَسَنَةٍ فَمِنَ اللّٰهِ ؗ— وَمَاۤ اَصَابَكَ مِنْ سَیِّئَةٍ فَمِنْ نَّفْسِكَ ؕ— وَاَرْسَلْنٰكَ لِلنَّاسِ رَسُوْلًا ؕ— وَكَفٰی بِاللّٰهِ شَهِیْدًا ۟
ನಿಮಗೇನಾದರೂ ಒಳಿತುಂಟಾದರೆ ಅದು ಅಲ್ಲಾಹನಿಂದ. ನಿಮಗೆ ಕೆಡುಕು ಬಾಧಿಸಿದರೆ, ಅದು ನಿಮ್ಮಿಂದಲೇ ಆಗಿದೆ. ನಾವು ನಿಮ್ಮನ್ನು ಮನುಷ್ಯರಿಗೆ ಸಂದೇಶವಾಹಕನನ್ನಾಗಿ ಮಾಡಿ ಕಳುಹಿಸಿದ್ದೇವೆ. ಸಾಕ್ಷಿಯಾಗಿ ಅಲ್ಲಾಹು ಸಾಕು.
ئەرەپچە تەپسىرلەر:
مَنْ یُّطِعِ الرَّسُوْلَ فَقَدْ اَطَاعَ اللّٰهَ ۚ— وَمَنْ تَوَلّٰی فَمَاۤ اَرْسَلْنٰكَ عَلَیْهِمْ حَفِیْظًا ۟ؕ
ಯಾರು ಸಂದೇಶವಾಹಕರನ್ನು ಅನುಸರಿಸುತ್ತಾನೋ ಅವನು ಅಲ್ಲಾಹನನ್ನು ಅನುಸರಿಸಿದನು. ಯಾರು ವಿಮುಖರಾಗುತ್ತಾರೋ ಅವರ ಮೇಲೆ ಕಾವಲುಗಾರನಾಗಿ ನಾವು ನಿಮ್ಮನ್ನು ಕಳುಹಿಸಿಲ್ಲ.
ئەرەپچە تەپسىرلەر:
وَیَقُوْلُوْنَ طَاعَةٌ ؗ— فَاِذَا بَرَزُوْا مِنْ عِنْدِكَ بَیَّتَ طَآىِٕفَةٌ مِّنْهُمْ غَیْرَ الَّذِیْ تَقُوْلُ ؕ— وَاللّٰهُ یَكْتُبُ مَا یُبَیِّتُوْنَ ۚ— فَاَعْرِضْ عَنْهُمْ وَتَوَكَّلْ عَلَی اللّٰهِ ؕ— وَكَفٰی بِاللّٰهِ وَكِیْلًا ۟
ಅವರು ಹೇಳುತ್ತಾರೆ: “ನಾವು ಅನುಸರಿಸಿದ್ದೇವೆ.” ನಂತರ ಅವರು ನಿಮ್ಮ ಬಳಿಯಿಂದ ಹೊರಟರೆ, ಅವರಲ್ಲೊಂದು ಗುಂಪು ನೀವು ಹೇಳಿದ್ದಕ್ಕೆ ವಿರುದ್ಧವಾಗಿ ರಾತ್ರಿಯಲ್ಲಿ ಗೂಢ ಮಾತುಕತೆ ನಡೆಸುತ್ತಾರೆ. ಅವರು ಮಾಡುವ ಗೂಢಾಲೋಚನೆಯನ್ನು ಅಲ್ಲಾಹು ದಾಖಲಿಸುತ್ತಿದ್ದಾನೆ. ಆದ್ದರಿಂದ ನೀವು ಅವರಿಂದ ವಿಮುಖರಾಗಿರಿ ಮತ್ತು ಅಲ್ಲಾಹನಲ್ಲಿ ಭರವಸೆಯಿಡಿರಿ. ಭರವಸೆಯಿಡಲು ನಿಮಗೆ ಅಲ್ಲಾಹು ಸಾಕು.
ئەرەپچە تەپسىرلەر:
اَفَلَا یَتَدَبَّرُوْنَ الْقُرْاٰنَ ؕ— وَلَوْ كَانَ مِنْ عِنْدِ غَیْرِ اللّٰهِ لَوَجَدُوْا فِیْهِ اخْتِلَافًا كَثِیْرًا ۟
ಅವರು ಕುರ್‌ಆನನ್ನು ಮನನ ಮಾಡುವುದಿಲ್ಲವೇ? ಅದು ಅಲ್ಲಾಹು ಅಲ್ಲದವರ ಕಡೆಯಿಂದ (ಅವತೀರ್ಣವಾಗಿರುತ್ತಿದ್ದರೆ) ಅವರು ಅದರಲ್ಲಿ ಅನೇಕ ವಿರೋಧಾಭಾಸಗಳನ್ನು ಕಾಣುತ್ತಿದ್ದರು.
ئەرەپچە تەپسىرلەر:
وَاِذَا جَآءَهُمْ اَمْرٌ مِّنَ الْاَمْنِ اَوِ الْخَوْفِ اَذَاعُوْا بِهٖ ؕ— وَلَوْ رَدُّوْهُ اِلَی الرَّسُوْلِ وَاِلٰۤی اُولِی الْاَمْرِ مِنْهُمْ لَعَلِمَهُ الَّذِیْنَ یَسْتَنْۢبِطُوْنَهٗ مِنْهُمْ ؕ— وَلَوْلَا فَضْلُ اللّٰهِ عَلَیْكُمْ وَرَحْمَتُهٗ لَاتَّبَعْتُمُ الشَّیْطٰنَ اِلَّا قَلِیْلًا ۟
ಅವರಿಗೆ ಶಾಂತಿ ಅಥವಾ ಭೀತಿಯ ಸುದ್ದಿಗಳು ತಲುಪಿದೊಡನೆ ಅವರು ಅದನ್ನು ಪ್ರಚಾರ ಮಾಡುತ್ತಾರೆ. ಅವರು ಅದನ್ನು ಸಂದೇಶವಾಹಕರಿಗೆ ಮತ್ತು ಅವರಲ್ಲಿ ವಿಷಯಗಳನ್ನು ಆಳವಾಗಿ ವಿಶ್ಲೇಷಿಸುವ ವಿದ್ವಾಂಸರಿಗೆ ಬಿಟ್ಟು ಬಿಡುತ್ತಿದ್ದರೆ, ಅವರು ಅದರ ಸತ್ಯಾಸತ್ಯತೆಗಳನ್ನು ತಿಳಿಯುತ್ತಿದ್ದರು. ನಿಮ್ಮ ಮೇಲೆ ಅಲ್ಲಾಹನ ಔದಾರ್ಯ ಮತ್ತು ದಯೆಯಿಲ್ಲದಿರುತ್ತಿದ್ದರೆ ನಿಮ್ಮಲ್ಲಿ ಕೆಲವರ ಹೊರತು ಎಲ್ಲರೂ ಶೈತಾನನನ್ನು ಹಿಂಬಾಲಿಸುತ್ತಿದ್ದರು.
ئەرەپچە تەپسىرلەر:
فَقَاتِلْ فِیْ سَبِیْلِ اللّٰهِ ۚ— لَا تُكَلَّفُ اِلَّا نَفْسَكَ وَحَرِّضِ الْمُؤْمِنِیْنَ ۚ— عَسَی اللّٰهُ اَنْ یَّكُفَّ بَاْسَ الَّذِیْنَ كَفَرُوْا ؕ— وَاللّٰهُ اَشَدُّ بَاْسًا وَّاَشَدُّ تَنْكِیْلًا ۟
ಆದ್ದರಿಂದ ನೀವು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿರಿ. ನಿಮಗೆ ನಿಮ್ಮ ವಿಷಯದ ಹೊಣೆಯನ್ನು ಮಾತ್ರ ಹೊರಿಸಲಾಗಿದೆ. ಸತ್ಯವಿಶ್ವಾಸಿಗಳನ್ನು ಹುರಿದುಂಬಿಸಿರಿ. ಅಲ್ಲಾಹು ಸತ್ಯನಿಷೇಧಿಗಳ ದಾಳಿಯನ್ನು ತಡೆಗಟ್ಟುವನು. ಅಲ್ಲಾಹು ಮಹಾ ಶಕ್ತಿಶಾಲಿ ಮತ್ತು ಅತಿಕಠಿಣವಾಗಿ ಶಿಕ್ಷಿಸುವವನಾಗಿದ್ದಾನೆ.
ئەرەپچە تەپسىرلەر:
مَنْ یَّشْفَعْ شَفَاعَةً حَسَنَةً یَّكُنْ لَّهٗ نَصِیْبٌ مِّنْهَا ۚ— وَمَنْ یَّشْفَعْ شَفَاعَةً سَیِّئَةً یَّكُنْ لَّهٗ كِفْلٌ مِّنْهَا ؕ— وَكَانَ اللّٰهُ عَلٰی كُلِّ شَیْءٍ مُّقِیْتًا ۟
ಯಾರು ಒಳಿತಿನ ಕಾರ್ಯದಲ್ಲಿ ಶಿಫಾರಸು ಮಾಡುತ್ತಾನೋ, ಅದರ ಒಂದು ಪಾಲು ಅವನಿಗೂ ಇದೆ. ಯಾರು ಕೆಡುಕಿನ ಕಾರ್ಯದಲ್ಲಿ ಶಿಫಾರಸು ಮಾಡುತ್ತಾನೋ, ಅದರ ಒಂದು ಪಾಲು ಅವನಿಗೂ ಇದೆ. ಅಲ್ಲಾಹು ಎಲ್ಲ ವಿಷಯಗಳಲ್ಲೂ ಮೇಲ್ವಿಚಾರಕನಾಗಿದ್ದಾನೆ.
ئەرەپچە تەپسىرلەر:
وَاِذَا حُیِّیْتُمْ بِتَحِیَّةٍ فَحَیُّوْا بِاَحْسَنَ مِنْهَاۤ اَوْ رُدُّوْهَا ؕ— اِنَّ اللّٰهَ كَانَ عَلٰی كُلِّ شَیْءٍ حَسِیْبًا ۟
ನಿಮಗೆ ಅಭಿವಂದನೆ (ಸಲಾಂ) ಸಲ್ಲಿಸಲಾದರೆ ಅದಕ್ಕಿಂತಲೂ ಉತ್ತಮವಾಗಿ ಅಭಿವಂದನೆ ಸಲ್ಲಿಸಿರಿ. ಅಥವಾ ಕನಿಷ್ಠ ಅದನ್ನು ಮರಳಿಸಿರಿ.[1] ನಿಶ್ಚಯವಾಗಿಯೂ ಅಲ್ಲಾಹು ಪ್ರತಿಯೊಂದು ವಿಷಯವನ್ನೂ ವಿಚಾರಣೆ ಮಾಡುತ್ತಾನೆ.
[1] ಯಾರಾದರೂ “ಅಸ್ಸಲಾಂ ಅಲೈಕುಂ” ಎಂದು ಹೇಳಿದರೆ, “ವಅಲೈಕುಮುಸ್ಸಲಾಂ ವರಹ್ಮತುಲ್ಲಾಹಿ ವಬರಕಾತುಹು” ಎಂದು ಹೇಳಿ ಉತ್ತರಿಸಬೇಕು. ಇದು ಐಚ್ಛಿಕವಾಗಿದೆ. ಕನಿಷ್ಠ “ವಅಲೈಕುಮುಸ್ಸಲಾಂ” ಎಂದು ಹೇಳಿ ಉತ್ತರಿಸುವುದು ಕಡ್ಡಾಯವಾಗಿದೆ.
ئەرەپچە تەپسىرلەر:
اَللّٰهُ لَاۤ اِلٰهَ اِلَّا هُوَ ؕ— لَیَجْمَعَنَّكُمْ اِلٰی یَوْمِ الْقِیٰمَةِ لَا رَیْبَ فِیْهِ ؕ— وَمَنْ اَصْدَقُ مِنَ اللّٰهِ حَدِیْثًا ۟۠
ಅಲ್ಲಾಹು! ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ನಿಶ್ಚಯವಾಗಿಯೂ ಅವನು ನಿಮ್ಮೆಲ್ಲರನ್ನೂ ಪುನರುತ್ಥಾನ ದಿನಕ್ಕೆ ಒಟ್ಟುಗೂಡಿಸುವನು. ಅದರಲ್ಲಿ ಸಂದೇಹವೇ ಇಲ್ಲ. ಮಾತಿನಲ್ಲಿ ಅಲ್ಲಾಹನಿಗಿಂತಲೂ ಹೆಚ್ಚು ಸತ್ಯವಂತನು ಯಾರು?
ئەرەپچە تەپسىرلەر:
فَمَا لَكُمْ فِی الْمُنٰفِقِیْنَ فِئَتَیْنِ وَاللّٰهُ اَرْكَسَهُمْ بِمَا كَسَبُوْا ؕ— اَتُرِیْدُوْنَ اَنْ تَهْدُوْا مَنْ اَضَلَّ اللّٰهُ ؕ— وَمَنْ یُّضْلِلِ اللّٰهُ فَلَنْ تَجِدَ لَهٗ سَبِیْلًا ۟
ನಿಮಗೇನಾಗಿದೆ? ಕಪಟವಿಶ್ವಾಸಿಗಳ ವಿಷಯದಲ್ಲಿ ನೀವೇಕೆ ಎರಡು ಗುಂಪುಗಳಾಗಿದ್ದೀರಿ? ಅವರು ಮಾಡಿದ (ದುಷ್ಕರ್ಮಗಳ) ಕಾರಣದಿಂದ ಅಲ್ಲಾಹು ಅವರನ್ನು ಹಿಂದಕ್ಕೆ ತಿರುಗಿಸಿದ್ದಾನೆ. ಅಲ್ಲಾಹು ದಾರಿತಪ್ಪಿಸಿದ ಜನರಿಗೆ ನೀವು ಸನ್ಮಾರ್ಗ ತೋರಿಸಲು ಬಯಸುತ್ತೀರಾ? ಅಲ್ಲಾಹು ಯಾರನ್ನು ದಾರಿತಪ್ಪಿಸುತ್ತಾನೋ ಅವನಿಗೆ ಯಾವುದೇ ದಾರಿಯನ್ನು ನೀವು ಕಾಣಲಾರಿರಿ.
ئەرەپچە تەپسىرلەر:
وَدُّوْا لَوْ تَكْفُرُوْنَ كَمَا كَفَرُوْا فَتَكُوْنُوْنَ سَوَآءً فَلَا تَتَّخِذُوْا مِنْهُمْ اَوْلِیَآءَ حَتّٰی یُهَاجِرُوْا فِیْ سَبِیْلِ اللّٰهِ ؕ— فَاِنْ تَوَلَّوْا فَخُذُوْهُمْ وَاقْتُلُوْهُمْ حَیْثُ وَجَدْتُّمُوْهُمْ ۪— وَلَا تَتَّخِذُوْا مِنْهُمْ وَلِیًّا وَّلَا نَصِیْرًا ۟ۙ
ಅವರು ಸತ್ಯನಿಷೇಧಿಗಳಾದಂತೆ ನೀವೂ ಸತ್ಯನಿಷೇಧಿಗಳಾಗಬೇಕು ಮತ್ತು ನೀವೆಲ್ಲರೂ ಸಮಾನರಾಗಬೇಕು ಎಂದು ಅವರು ಬಯಸುತ್ತಾರೆ. ಆದ್ದರಿಂದ ಅವರು ಅಲ್ಲಾಹನ ಮಾರ್ಗದಲ್ಲಿ ವಲಸೆ (ಹಿಜ್ರ) ಮಾಡುವ ತನಕ ಅವರಲ್ಲಿ ಯಾರನ್ನೂ ನೀವು ಮಿತ್ರರನ್ನಾಗಿ ಸ್ವೀಕರಿಸಬೇಡಿ. ಅವರು ವಿಮುಖರಾದರೆ, ಅವರನ್ನು ಹಿಡಿಯಿರಿ ಮತ್ತು ಕಂಡಲ್ಲಿ ಕೊಲ್ಲಿರಿ. ಅವರಲ್ಲಿ ಯಾರನ್ನೂ ನೀವು ಮಿತ್ರರನ್ನಾಗಿ ಅಥವಾ ಸಹಾಯಕರನ್ನಾಗಿ ಸ್ವೀಕರಿಸಬೇಡಿ.
ئەرەپچە تەپسىرلەر:
اِلَّا الَّذِیْنَ یَصِلُوْنَ اِلٰی قَوْمٍ بَیْنَكُمْ وَبَیْنَهُمْ مِّیْثَاقٌ اَوْ جَآءُوْكُمْ حَصِرَتْ صُدُوْرُهُمْ اَنْ یُّقَاتِلُوْكُمْ اَوْ یُقَاتِلُوْا قَوْمَهُمْ ؕ— وَلَوْ شَآءَ اللّٰهُ لَسَلَّطَهُمْ عَلَیْكُمْ فَلَقٰتَلُوْكُمْ ۚ— فَاِنِ اعْتَزَلُوْكُمْ فَلَمْ یُقَاتِلُوْكُمْ وَاَلْقَوْا اِلَیْكُمُ السَّلَمَ ۙ— فَمَا جَعَلَ اللّٰهُ لَكُمْ عَلَیْهِمْ سَبِیْلًا ۟
ಆದರೆ ನಿಮ್ಮೊಂದಿಗೆ ಒಪ್ಪಂದ ಮಾಡಿಕೊಂಡಿರುವ ಜನರ ಬಳಿಗೆ ಹೋಗಿ ಆಶ್ರಯ ಪಡೆದವರ ಹೊರತು; ಅಥವಾ, ನಿಮ್ಮ ವಿರುದ್ಧ ಯುದ್ಧ ಮಾಡಲು ಅಥವಾ ತಮ್ಮದೇ ಜನರ ವಿರುದ್ಧ ಯುದ್ಧ ಮಾಡಲು ಹೃದಯದಲ್ಲಿ ಇಕ್ಕಟ್ಟು ಅನುಭವಿಸುತ್ತಾ ನಿಮ್ಮ ಬಳಿಗೆ ಬಂದವರ ಹೊರತು. ಅಲ್ಲಾಹು ಇಚ್ಛಿಸುತ್ತಿದ್ದರೆ ಅವನು ಅವರಿಗೆ ನಿಮ್ಮ ಮೇಲೆ ಅಧಿಕಾರ ನೀಡುತ್ತಿದ್ದನು. ಆಗ ಅವರು ನಿಮ್ಮ ವಿರುದ್ಧ ಯುದ್ಧ ಮಾಡುತ್ತಿದ್ದರು. ಆದರೆ ಅವರು ಯುದ್ಧದಿಂದ ದೂರ ಸರಿದು, ನಿಮ್ಮ ವಿರುದ್ಧ ಯುದ್ಧ ಮಾಡದಿದ್ದರೆ ಮತ್ತು ಶಾಂತಿ ಪ್ರಸ್ತಾಪವನ್ನು ಮುಂದಿಟ್ಟರೆ, ಅವರಿಗೆ ವಿರುದ್ಧವಾಗಿ ಯಾವುದೇ ಮಾರ್ಗವನ್ನು ಸ್ವೀಕರಿಸಲು ಅಲ್ಲಾಹು ನಿಮಗೆ ಅನುಮತಿ ನೀಡಿಲ್ಲ.
ئەرەپچە تەپسىرلەر:
سَتَجِدُوْنَ اٰخَرِیْنَ یُرِیْدُوْنَ اَنْ یَّاْمَنُوْكُمْ وَیَاْمَنُوْا قَوْمَهُمْ ؕ— كُلَّ مَا رُدُّوْۤا اِلَی الْفِتْنَةِ اُرْكِسُوْا فِیْهَا ۚ— فَاِنْ لَّمْ یَعْتَزِلُوْكُمْ وَیُلْقُوْۤا اِلَیْكُمُ السَّلَمَ وَیَكُفُّوْۤا اَیْدِیَهُمْ فَخُذُوْهُمْ وَاقْتُلُوْهُمْ حَیْثُ ثَقِفْتُمُوْهُمْ ؕ— وَاُولٰٓىِٕكُمْ جَعَلْنَا لَكُمْ عَلَیْهِمْ سُلْطٰنًا مُّبِیْنًا ۟۠
ನೀವು ಇನ್ನೊಂದು ರೀತಿಯ ಜನರನ್ನು ಕಾಣುವಿರಿ. ಅವರು ನಿಮ್ಮಿಂದ ಮತ್ತು ತಮ್ಮದೇ ಜನರಿಂದ ಸುರಕ್ಷಿತರಾಗಿರಲು ಬಯಸುತ್ತಾರೆ. ಆದರೆ, ಅವರನ್ನು ಕ್ಷೋಭೆಗೆ (ಯುದ್ಧಕ್ಕೆ) ಮರಳಿಸಿದಾಗಲೆಲ್ಲಾ ಅವರು ಅದರಲ್ಲಿ ತಲೆಕೆಳಗಾಗಿ ಬೀಳುತ್ತಾರೆ.[1] ಅವರು ಯುದ್ಧದಿಂದ ದೂರ ಸರಿಯದಿದ್ದರೆ ಮತ್ತು ಶಾಂತಿ ಪ್ರಸ್ತಾಪವನ್ನು ಮುಂದಿಡದಿದ್ದರೆ, ಹಾಗೂ ತಮ್ಮ ಕೈಗಳನ್ನು ತಡೆಹಿಡಿಯದಿದ್ದರೆ, ಅವರನ್ನು ಹಿಡಿಯಿರಿ ಮತ್ತು ಕಂಡಲ್ಲಿ ಕೊಲ್ಲಿರಿ. ಅವರ ವಿರುದ್ಧ ನಾವು ನಿಮಗೆ ಸ್ಪಷ್ಟ ಅಧಿಕಾರವನ್ನು ನೀಡಿದ್ದೇವೆ.
[1] ಇವರು ಮುಸಲ್ಮಾನರೊಡನೆ ಶಾಂತಿ ಒಪ್ಪಂದ ಮಾಡಿಕೊಂಡವರಲ್ಲ; ಮುಸಲ್ಮಾನರೊಡನೆ ಸಹಾನುಭೂತಿಯುಳ್ಳವರೂ ಅಲ್ಲ. ಬದಲಾಗಿ, ಯುದ್ಧದ ಸಮಯದಲ್ಲಿ ತಟಸ್ಥರಾಗಿದ್ದು ಯುದ್ಧದ ಗತಿಯನ್ನು ವೀಕ್ಷಿಸುವವರು. ಇವರಿಗೆ ಮುಸಲ್ಮಾನರ ವಿರುದ್ಧ ಯುದ್ಧ ಮಾಡುವ ಉತ್ತಮ ಅವಕಾಶ ಸಿಕ್ಕಿದರೆ ಅವರು ಯುದ್ಧ ಮಾಡಲು ಹಿಂಜರಿಯುವುದಿಲ್ಲ. ಕೆಲವು ವ್ಯಾಖ್ಯಾನಕಾರರು ಕ್ಷೋಭೆ ಎಂದರೆ ದೇವಸಹಭಾಗಿತ್ವ (ಶಿರ್ಕ್) ಎಂದು ಅರ್ಥ ನೀಡಿದ್ದಾರೆ.
ئەرەپچە تەپسىرلەر:
وَمَا كَانَ لِمُؤْمِنٍ اَنْ یَّقْتُلَ مُؤْمِنًا اِلَّا خَطَأً ۚ— وَمَنْ قَتَلَ مُؤْمِنًا خَطَأً فَتَحْرِیْرُ رَقَبَةٍ مُّؤْمِنَةٍ وَّدِیَةٌ مُّسَلَّمَةٌ اِلٰۤی اَهْلِهٖۤ اِلَّاۤ اَنْ یَّصَّدَّقُوْا ؕ— فَاِنْ كَانَ مِنْ قَوْمٍ عَدُوٍّ لَّكُمْ وَهُوَ مُؤْمِنٌ فَتَحْرِیْرُ رَقَبَةٍ مُّؤْمِنَةٍ ؕ— وَاِنْ كَانَ مِنْ قَوْمٍ بَیْنَكُمْ وَبَیْنَهُمْ مِّیْثَاقٌ فَدِیَةٌ مُّسَلَّمَةٌ اِلٰۤی اَهْلِهٖ وَتَحْرِیْرُ رَقَبَةٍ مُّؤْمِنَةٍ ۚ— فَمَنْ لَّمْ یَجِدْ فَصِیَامُ شَهْرَیْنِ مُتَتَابِعَیْنِ ؗ— تَوْبَةً مِّنَ اللّٰهِ ؕ— وَكَانَ اللّٰهُ عَلِیْمًا حَكِیْمًا ۟
ಒಬ್ಬ ಸತ್ಯವಿಶ್ವಾಸಿ ಇನ್ನೊಬ್ಬ ಸತ್ಯವಿಶ್ವಾಸಿಯನ್ನು ಕೊಲ್ಲಬಾರದು. ಪ್ರಮಾದವಶಾತ್ ಸಂಭವಿಸುವುದರ ಹೊರತು. ಒಬ್ಬ ಸತ್ಯವಿಶ್ವಾಸಿಯನ್ನು ಯಾರಾದರೂ ಪ್ರಮಾದವಶಾತ್ ಕೊಂದುಬಿಟ್ಟರೆ, ಅದಕ್ಕೆ ಪರಿಹಾರವಾಗಿ ಒಬ್ಬ ಸತ್ಯವಿಶ್ವಾಸಿ ಗುಲಾಮನನ್ನು ಸ್ವತಂತ್ರಗೊಳಿಸಬೇಕು ಮತ್ತು ಕೊಲೆಯಾದವನ ಕುಟುಂಬಕ್ಕೆ ರಕ್ತ ಪರಿಹಾರ ಕೊಡಬೇಕು. ಅವರು (ಕೊಲೆಯಾದವನ ಕುಟುಂಬದವರು) ಅದನ್ನು ಉದಾರವಾಗಿ ಬಿಟ್ಟುಬಿಡುವ ಹೊರತು. ಕೊಲೆಯಾದವನು ಶತ್ರು ಪಕ್ಷಕ್ಕೆ ಸೇರಿದ ಸತ್ಯವಿಶ್ವಾಸಿಯಾಗಿದ್ದರೆ, ಒಬ್ಬ ಸತ್ಯವಿಶ್ವಾಸಿ ಗುಲಾಮನನ್ನು ಸ್ವತಂತ್ರಗೊಳಿಸಿದರೆ ಸಾಕು. ಅವನು ನಿಮ್ಮೊಂದಿಗೆ ಒಪ್ಪಂದದಲ್ಲಿರುವ ಪಕ್ಷಕ್ಕೆ ಸೇರಿದವನಾಗಿದ್ದರೆ ಅವನ ಕುಟುಂಬದವರಿಗೆ ರಕ್ತ ಪರಿಹಾರ ಕೊಡಬೇಕು ಮತ್ತು ಒಬ್ಬ ಸತ್ಯವಿಶ್ವಾಸಿ ಗುಲಾಮನನ್ನು ಸ್ವತಂತ್ರಗೊಳಿಸಬೇಕು. ಯಾರಿಗೆ ಇದು ಸಾಧ್ಯವಿಲ್ಲವೋ ಅವನು ಸತತ ಎರಡು ತಿಂಗಳು ಉಪವಾಸ ಆಚರಿಸಬೇಕು. ಇದು ಅಲ್ಲಾಹು ನಿಶ್ಚಯಿಸಿದ ಪಶ್ಚಾತ್ತಾಪವಾಗಿದೆ. ಅಲ್ಲಾಹು ಎಲ್ಲವನ್ನು ತಿಳಿದವನು ಮತ್ತು ವಿವೇಕಪೂರ್ಣನಾಗಿದ್ದಾನೆ.
ئەرەپچە تەپسىرلەر:
وَمَنْ یَّقْتُلْ مُؤْمِنًا مُّتَعَمِّدًا فَجَزَآؤُهٗ جَهَنَّمُ خَلِدًا فِیْهَا وَغَضِبَ اللّٰهُ عَلَیْهِ وَلَعَنَهٗ وَاَعَدَّ لَهٗ عَذَابًا عَظِیْمًا ۟
ಯಾರು ಒಬ್ಬ ಸತ್ಯವಿಶ್ವಾಸಿಯನ್ನು ಉದ್ದೇಶಪೂರ್ವಕ ಕೊಲ್ಲುತ್ತಾನೋ, ಅವನಿಗೆ ನರಕಾಗ್ನಿಯೇ ಪ್ರತಿಫಲವಾಗಿದೆ. ಅವನು ಅದರಲ್ಲಿ ಶಾಶ್ವತವಾಗಿ ವಾಸಿಸುವನು. ಅವನು ಅಲ್ಲಾಹನ ಕೋಪ ಮತ್ತು ಶಾಪಕ್ಕೆ ಪಾತ್ರನಾಗುವನು. ಅಲ್ಲಾಹು ಅವನಿಗೆ ಅತಿಕಠೋರ ಶಿಕ್ಷೆಯನ್ನು ಸಿದ್ಧಗೊಳಿಸಿದ್ದಾನೆ.
ئەرەپچە تەپسىرلەر:
یٰۤاَیُّهَا الَّذِیْنَ اٰمَنُوْۤا اِذَا ضَرَبْتُمْ فِیْ سَبِیْلِ اللّٰهِ فَتَبَیَّنُوْا وَلَا تَقُوْلُوْا لِمَنْ اَلْقٰۤی اِلَیْكُمُ السَّلٰمَ لَسْتَ مُؤْمِنًا ۚ— تَبْتَغُوْنَ عَرَضَ الْحَیٰوةِ الدُّنْیَا ؗ— فَعِنْدَ اللّٰهِ مَغَانِمُ كَثِیْرَةٌ ؕ— كَذٰلِكَ كُنْتُمْ مِّنْ قَبْلُ فَمَنَّ اللّٰهُ عَلَیْكُمْ فَتَبَیَّنُوْا ؕ— اِنَّ اللّٰهَ كَانَ بِمَا تَعْمَلُوْنَ خَبِیْرًا ۟
ಓ ಸತ್ಯವಿಶ್ವಾಸಿಗಳೇ! ನೀವು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುವಾಗ (ಶತ್ರು ಮತ್ತು ಮಿತ್ರ ಯಾರೆಂದು) ಸ್ಪಷ್ಟವಾಗಿ ಗುರುತಿಸಿರಿ. ನಿಮಗೆ ಸಲಾಮ್ ಹೇಳಿದವನೊಂದಿಗೆ ನೀನು ಸತ್ಯವಿಶ್ವಾಸಿಯಲ್ಲ ಎಂದು ಹೇಳಬೇಡಿ. ನೀವು ಭೌತಿಕ ಲಾಭದ ಹುಡುಕಾಟದಲ್ಲಿದ್ದರೆ, ಅಲ್ಲಾಹನ ಬಳಿ ಯಥೇಷ್ಟ ಐಶ್ವರ್ಯವಿದೆ. ಈ ಹಿಂದೆ ನೀವೂ ಹೀಗೆಯೇ (ಸತ್ಯನಿಷೇಧದಲ್ಲಿ) ಇದ್ದಿರಿ.[1] ನಂತರ ಅಲ್ಲಾಹು ನಿಮಗೆ (ಸನ್ಮಾರ್ಗ ತೋರಿಸಿ) ಉಪಕಾರ ಮಾಡಿದನು. ಆದ್ದರಿಂದ ನೀವು ಸ್ಪಷ್ಟವಾಗಿ ಗುರುತಿಸಿರಿ. ನಿಶ್ಚಯವಾಗಿಯೂ ನೀವು ಮಾಡುವುದನ್ನು ಅಲ್ಲಾಹು ಸೂಕ್ಷ್ಮವಾಗಿ ತಿಳಿಯುತ್ತಿದ್ದಾನೆ.
[1] ಯುದ್ಧದಲ್ಲಿ ಒಬ್ಬ ಶತ್ರು ಸೈನಿಕನನ್ನು ಕೊಂದರೆ, ಅವನ ಶಸ್ತ್ರ, ಯುದ್ಧಾಂಗಿ ಮುಂತಾದ ವಸ್ತುಗಳು ಕೊಂದವನಿಗೆ ಸಿಗುತ್ತದೆ. ಈ ಭೌತಿಕ ಲಾಭದ ಮೇಲೆ ಕಣ್ಣಿಟ್ಟು ಯಾರನ್ನೂ ಅನ್ಯಾಯವಾಗಿ ಕೊಲ್ಲಬೇಡಿ. ಹಿಂದಿನ ನಿಮಿಷದ ತನಕ ಶತ್ರುವಾಗಿದ್ದವನು, ನಿಮಗೆ ಸಲಾಂ ಹೇಳಿ ಮುಸಲ್ಮಾನನಾಗಲು ಮುಂದಾದರೆ, ಅವನು ತನ್ನ ಜೀವ ಉಳಿಸುವುದಕ್ಕಾಗಿ ಸಲಾಂ ಹೇಳುತ್ತಿದ್ದಾನೆಂದು ಭಾವಿಸಿ ಅವನನ್ನು ಕೊಲ್ಲಬೇಡಿ. ಹಿಂದೆ ನೀವು ಕೂಡ ಅವನಂತೆಯೇ ಸತ್ಯನಿಷೇಧಿಗಳಾಗಿದ್ದಿರಿ.
ئەرەپچە تەپسىرلەر:
لَا یَسْتَوِی الْقٰعِدُوْنَ مِنَ الْمُؤْمِنِیْنَ غَیْرُ اُولِی الضَّرَرِ وَالْمُجٰهِدُوْنَ فِیْ سَبِیْلِ اللّٰهِ بِاَمْوَالِهِمْ وَاَنْفُسِهِمْ ؕ— فَضَّلَ اللّٰهُ الْمُجٰهِدِیْنَ بِاَمْوَالِهِمْ وَاَنْفُسِهِمْ عَلَی الْقٰعِدِیْنَ دَرَجَةً ؕ— وَكُلًّا وَّعَدَ اللّٰهُ الْحُسْنٰی ؕ— وَفَضَّلَ اللّٰهُ الْمُجٰهِدِیْنَ عَلَی الْقٰعِدِیْنَ اَجْرًا عَظِیْمًا ۟ۙ
ಯಾವುದೇ ಕಾರಣವಿಲ್ಲದೆ ಕುಳಿತಿರುವ ಸತ್ಯವಿಶ್ವಾಸಿಗಳು ಮತ್ತು ಅಲ್ಲಾಹನ ಮಾರ್ಗದಲ್ಲಿ ತನು-ಧನಗಳಿಂದ ಯುದ್ಧ ಮಾಡುವ ಸತ್ಯವಿಶ್ವಾಸಿಗಳು ಸಮಾನರಲ್ಲ. ತನು-ಧನಗಳಿಂದ ಯುದ್ಧ ಮಾಡುವವರಿಗೆ ಅಲ್ಲಾಹು ಕುಳಿತವರಿಗಿಂತ ಹೆಚ್ಚು ಪದವಿಗಳನ್ನು ನೀಡಿ ಅನುಗ್ರಹಿಸುತ್ತಾನೆ. ಅಲ್ಲಾಹು (ಅವರಿಬ್ಬರಲ್ಲಿ) ಪ್ರತಿಯೊಬ್ಬರಿಗೂ ಉತ್ತಮ ಪ್ರತಿಫಲದ ವಾಗ್ದಾನ ಮಾಡಿದ್ದಾನೆ. ಆದರೆ ಯುದ್ಧ ಮಾಡುವವರಿಗೆ ಅಲ್ಲಾಹು ಕುಳಿತವರಿಗೆ ನೀಡುವುದಕ್ಕಿಂತಲೂ ದೊಡ್ಡ ಪ್ರತಿಫಲವನ್ನು ನೀಡಿ ಅನುಗ್ರಹಿಸುತ್ತಾನೆ.
ئەرەپچە تەپسىرلەر:
دَرَجٰتٍ مِّنْهُ وَمَغْفِرَةً وَّرَحْمَةً ؕ— وَكَانَ اللّٰهُ غَفُوْرًا رَّحِیْمًا ۟۠
ಅವನ ಕಡೆಯ ಪದವಿಗಳು, ಕ್ಷಮೆ ಮತ್ತು ದಯೆ. ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
ئەرەپچە تەپسىرلەر:
اِنَّ الَّذِیْنَ تَوَفّٰىهُمُ الْمَلٰٓىِٕكَةُ ظَالِمِیْۤ اَنْفُسِهِمْ قَالُوْا فِیْمَ كُنْتُمْ ؕ— قَالُوْا كُنَّا مُسْتَضْعَفِیْنَ فِی الْاَرْضِ ؕ— قَالُوْۤا اَلَمْ تَكُنْ اَرْضُ اللّٰهِ وَاسِعَةً فَتُهَاجِرُوْا فِیْهَا ؕ— فَاُولٰٓىِٕكَ مَاْوٰىهُمْ جَهَنَّمُ ؕ— وَسَآءَتْ مَصِیْرًا ۟ۙ
ಸ್ವಯಂ ಅಕ್ರಮವೆಸಗಿದವರ ಆತ್ಮಗಳನ್ನು ವಶಪಡಿಸುವಾಗ ದೇವದೂತರುಗಳು ಕೇಳುವರು: “ನೀವು ಯಾವ ಸ್ಥಿತಿಯಲ್ಲಿದ್ದಿರಿ?” ಅವರು ಹೇಳುವರು: “ನಾವು ಊರಿನಲ್ಲಿ ದಬ್ಬಾಳಿಕೆಗೆ ಗುರಿಯಾಗಿ ಬದುಕುತ್ತಿದ್ದೆವು.” ದೇವದೂತರುಗಳು ಕೇಳುವರು: “ಅಲ್ಲಾಹನ ಭೂಮಿ ವಿಶಾಲವಾಗಿತ್ತಲ್ಲವೇ? ನಿಮಗೆ ನಿಮ್ಮ ಊರನ್ನು ತ್ಯಜಿಸಿ ವಲಸೆ ಹೋಗಬಹುದಿತ್ತಲ್ಲವೇ?” ಅಂತಹವರಿಗೆ ನರಕಾಗ್ನಿಯೇ ವಾಸಸ್ಥಳವಾಗಿದೆ. ಅದು ಬಹಳ ಕೆಟ್ಟ ಗಮ್ಯಸ್ಥಾನ!
ئەرەپچە تەپسىرلەر:
اِلَّا الْمُسْتَضْعَفِیْنَ مِنَ الرِّجَالِ وَالنِّسَآءِ وَالْوِلْدَانِ لَا یَسْتَطِیْعُوْنَ حِیْلَةً وَّلَا یَهْتَدُوْنَ سَبِیْلًا ۟ۙ
ಬೇರೆ ಯಾವ ಉಪಾಯವೂ ಇಲ್ಲದೆ (ದಬ್ಬಾಳಿಕೆಯಿಂದ) ಪಾರಾಗುವ ಮಾರ್ಗವನ್ನೂ ತಿಳಿಯದೆ, ದಬ್ಬಾಳಿಕೆಗೆ ಗುರಿಯಾಗಿ ಬದುಕುತ್ತಿರುವ ಪುರುಷರು, ಮಹಿಳೆಯರು ಮತ್ತು ಮಕ್ಕಳು ಇದರಿಂದ ಹೊರತಾಗಿದ್ದಾರೆ.
ئەرەپچە تەپسىرلەر:
فَاُولٰٓىِٕكَ عَسَی اللّٰهُ اَنْ یَّعْفُوَ عَنْهُمْ ؕ— وَكَانَ اللّٰهُ عَفُوًّا غَفُوْرًا ۟
ಅವರನ್ನು ಅಲ್ಲಾಹು ಮನ್ನಿಸಲೂ ಬಹುದು. ಅಲ್ಲಾಹು ಮನ್ನಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
ئەرەپچە تەپسىرلەر:
وَمَنْ یُّهَاجِرْ فِیْ سَبِیْلِ اللّٰهِ یَجِدْ فِی الْاَرْضِ مُرٰغَمًا كَثِیْرًا وَّسَعَةً ؕ— وَمَنْ یَّخْرُجْ مِنْ بَیْتِهٖ مُهَاجِرًا اِلَی اللّٰهِ وَرَسُوْلِهٖ ثُمَّ یُدْرِكْهُ الْمَوْتُ فَقَدْ وَقَعَ اَجْرُهٗ عَلَی اللّٰهِ ؕ— وَكَانَ اللّٰهُ غَفُوْرًا رَّحِیْمًا ۟۠
ಅಲ್ಲಾಹನ ಮಾರ್ಗದಲ್ಲಿ ವಲಸೆ (ಹಿಜ್ರ) ಮಾಡುವವನು ಭೂಮಿಯಲ್ಲಿ ಅನೇಕ ಆಶ್ರಯಗಳನ್ನು ಮತ್ತು ಜೀವನ ವೈಶಾಲ್ಯತೆಗಳನ್ನು ಕಾಣುವನು. ಯಾರು ಅಲ್ಲಾಹು ಮತ್ತು ಅವನ ಸಂದೇಶವಾಹಕರ ಬಳಿಗೆ ವಲಸೆ (ಹಿಜ್ರ) ಮಾಡಲು ಮನೆಯಿಂದ ಹೊರಡುತ್ತಾನೋ—ನಂತರ (ದಾರಿ ಮಧ್ಯೆ) ಸಾವು ಅವನನ್ನು ಅಪ್ಪಿಕೊಂಡರೂ ಸಹ—ಅವನ ಪ್ರತಿಫಲವು ಅಲ್ಲಾಹನ ಬಳಿ ಖಾತ್ರಿಯಾಗಿ ಬಿಟ್ಟಿತು. ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
ئەرەپچە تەپسىرلەر:
وَاِذَا ضَرَبْتُمْ فِی الْاَرْضِ فَلَیْسَ عَلَیْكُمْ جُنَاحٌ اَنْ تَقْصُرُوْا مِنَ الصَّلٰوةِ ۖۗ— اِنْ خِفْتُمْ اَنْ یَّفْتِنَكُمُ الَّذِیْنَ كَفَرُوْا ؕ— اِنَّ الْكٰفِرِیْنَ كَانُوْا لَكُمْ عَدُوًّا مُّبِیْنًا ۟
ನೀವು ಭೂಮಿಯಲ್ಲಿ ಪ್ರಯಾಣ ಮಾಡುವಾಗ ಸತ್ಯನಿಷೇಧಿಗಳು ನಿಮಗೆ ತೊಂದರೆ ಕೊಡುವರೆಂಬ ಭಯವಿದ್ದರೆ, ನಮಾಝನ್ನು ಕುಗ್ಗಿಸಿ (ಎರಡು ರಕಅತ್‌ಗಳಾಗಿ) ನಿರ್ವಹಿಸುವುದರಲ್ಲಿ ನಿಮಗೆ ದೋಷವಿಲ್ಲ.[1] ನಿಶ್ಚಯವಾಗಿಯೂ ಸತ್ಯನಿಷೇಧಿಗಳು ನಿಮ್ಮ ಪ್ರತ್ಯಕ್ಷ ಶತ್ರುಗಳಾಗಿದ್ದಾರೆ.
[1] ಪ್ರಯಾಣದ ಸಂದರ್ಭದಲ್ಲಿ ನಮಾಝನ್ನು ಕುಗ್ಗಿಸಿ ನಿರ್ವಹಿಸಲು ಅನುಮತಿಯಿದೆ. ಕುಗ್ಗಿಸುವುದು ಎಂದರೆ ಝುಹರ್, ಅಸರ್ ಮತ್ತು ಇಶಾ ನಮಾಝ್‌ಗಳನ್ನು ಎರಡು ರಕಅತ್‌ಗಳಾಗಿ ನಿರ್ವಹಿಸುವುದು. ಮಗ್ರಿಬ್ ನಮಾಝನ್ನು ಕುಗ್ಗಿಸಬಾರದು.
ئەرەپچە تەپسىرلەر:
وَاِذَا كُنْتَ فِیْهِمْ فَاَقَمْتَ لَهُمُ الصَّلٰوةَ فَلْتَقُمْ طَآىِٕفَةٌ مِّنْهُمْ مَّعَكَ وَلْیَاْخُذُوْۤا اَسْلِحَتَهُمْ ۫— فَاِذَا سَجَدُوْا فَلْیَكُوْنُوْا مِنْ وَّرَآىِٕكُمْ ۪— وَلْتَاْتِ طَآىِٕفَةٌ اُخْرٰی لَمْ یُصَلُّوْا فَلْیُصَلُّوْا مَعَكَ وَلْیَاْخُذُوْا حِذْرَهُمْ وَاَسْلِحَتَهُمْ ۚ— وَدَّ الَّذِیْنَ كَفَرُوْا لَوْ تَغْفُلُوْنَ عَنْ اَسْلِحَتِكُمْ وَاَمْتِعَتِكُمْ فَیَمِیْلُوْنَ عَلَیْكُمْ مَّیْلَةً وَّاحِدَةً ؕ— وَلَا جُنَاحَ عَلَیْكُمْ اِنْ كَانَ بِكُمْ اَذًی مِّنْ مَّطَرٍ اَوْ كُنْتُمْ مَّرْضٰۤی اَنْ تَضَعُوْۤا اَسْلِحَتَكُمْ ۚ— وَخُذُوْا حِذْرَكُمْ ؕ— اِنَّ اللّٰهَ اَعَدَّ لِلْكٰفِرِیْنَ عَذَابًا مُّهِیْنًا ۟
(ಓ ಪ್ರವಾದಿಯವರೇ!) ನೀವು ಅವರ ಜೊತೆಯಲ್ಲಿರುವಾಗ ಮತ್ತು ಅವರಿಗೆ ಇಮಾಂ ನಿಂತು ನಮಾಝ್ ನಿರ್ವಹಿಸುತ್ತಿರುವಾಗ, ಅವರಲ್ಲೊಂದು ಗುಂಪು ತಮ್ಮ ಜೊತೆಗೆ ನಮಾಝ್ ಮಾಡಲಿ. ಅವರು ತಮ್ಮ ಶಸ್ತ್ರಗಳನ್ನು ಹಿಡಿದುಕೊಂಡಿರಲಿ. ಅವರು ಸುಜೂದ್ ಮಾಡಿದ ನಂತರ ತಮ್ಮ ಹಿಂಭಾಗಕ್ಕೆ ಸರಿದು, ನಮಾಝ್ ನಿರ್ವಹಿಸದ ಇನ್ನೊಂದು ಗುಂಪು ಬಂದು ನಿಮ್ಮೊಂದಿಗೆ ನಮಾಝ್ ನಿರ್ವಹಿಸಲಿ. ಅವರು ಎಚ್ಚರವಾಗಿರಲಿ ಮತ್ತು ತಮ್ಮ ಶಸ್ತ್ರಗಳನ್ನು ಹಿಡಿದುಕೊಂಡಿರಲಿ. ನೀವು ನಿಮ್ಮ ಶಸ್ತ್ರಗಳನ್ನು ಮತ್ತು ನಿಮ್ಮ ಸಾಮಗ್ರಿಗಳನ್ನು ನಿರ್ಲಕ್ಷಿಸಿದರೆ, ನಿಮ್ಮ ಮೇಲೆ ಒಮ್ಮೆಲೇ ದಾಳಿ ಮಾಡಬಹುದೆಂದು ಸತ್ಯನಿಷೇಧಿಗಳು ಬಯಸುತ್ತಾರೆ. ಆದರೆ ನೀವು ಮಳೆಯಿಂದ ತೊಂದರೆ ಅನುಭವಿಸುತ್ತಿದ್ದರೆ, ಅಥವಾ ನೀವು ಅನಾರೋಗ್ಯದಲ್ಲಿದ್ದರೆ, ನಿಮ್ಮ ಶಸ್ತ್ರಗಳನ್ನು ಕೆಳಗಿಡುವುದರಲ್ಲಿ ದೋಷವಿಲ್ಲ. ಆದರೆ ಪೂರ್ಣ ಎಚ್ಚರಿಕೆಯಿಂದಿರಿ. ನಿಶ್ಚಯವಾಗಿಯೂ ಅಲ್ಲಾಹು ಸತ್ಯನಿಷೇಧಿಗಳಿಗೆ ಅವಮಾನಕರ ಶಿಕ್ಷೆಯನ್ನು ಸಿದ್ಧಗೊಳಿಸಿದ್ದಾನೆ.[1]
[1] ಇದು ಯುದ್ಧ ಮಾಡುವ ಸಂದರ್ಭದಲ್ಲಿ ನಮಾಝ್ ಹೇಗೆ ನಿರ್ವಹಿಸಬೇಕು ಎಂಬುದರ ವಿವರಣೆಯಾಗಿದೆ. ಇದನ್ನು ಸಲಾತುಲ್ ಖೌಫ್ (ಭಯದ ನಮಾಝ್) ಎಂದು ಕರೆಯಲಾಗುತ್ತದೆ.
ئەرەپچە تەپسىرلەر:
فَاِذَا قَضَیْتُمُ الصَّلٰوةَ فَاذْكُرُوا اللّٰهَ قِیٰمًا وَّقُعُوْدًا وَّعَلٰی جُنُوْبِكُمْ ۚ— فَاِذَا اطْمَاْنَنْتُمْ فَاَقِیْمُوا الصَّلٰوةَ ۚ— اِنَّ الصَّلٰوةَ كَانَتْ عَلَی الْمُؤْمِنِیْنَ كِتٰبًا مَّوْقُوْتًا ۟
ನೀವು ನಮಾಝ್ ನಿರ್ವಹಿಸಿದ ಬಳಿಕ ನಿಂತು, ಕುಳಿತು ಮತ್ತು ಪಾರ್ಶ್ವಕ್ಕೆ ಸರಿದು (ಮಲಗಿ) ಅಲ್ಲಾಹನನ್ನು ಸ್ಮರಿಸಿರಿ. ನೀವು ನಿರ್ಭಯರಾಗಿರುವಾಗ, ನಮಾಝನ್ನು ಯಥಾಪ್ರಕಾರ ಸಂಸ್ಥಾಪಿಸಿರಿ. ನಿಶ್ಚಯವಾಗಿಯೂ ನಮಾಝ್ ಸತ್ಯವಿಶ್ವಾಸಿಗಳ ಮೇಲೆ ಸಮಯ ನಿರ್ಣಿತ ಕಡ್ಡಾಯ ಕರ್ಮವಾಗಿದೆ.
ئەرەپچە تەپسىرلەر:
وَلَا تَهِنُوْا فِی ابْتِغَآءِ الْقَوْمِ ؕ— اِنْ تَكُوْنُوْا تَاْلَمُوْنَ فَاِنَّهُمْ یَاْلَمُوْنَ كَمَا تَاْلَمُوْنَ ۚ— وَتَرْجُوْنَ مِنَ اللّٰهِ مَا لَا یَرْجُوْنَ ؕ— وَكَانَ اللّٰهُ عَلِیْمًا حَكِیْمًا ۟۠
ಶತ್ರುಗಳನ್ನು ಬೆನ್ನಟ್ಟುವುದರಲ್ಲಿ ಬಲಹೀನರಾಗಬೇಡಿ. ನೀವು ನೋವು ಅನುಭವಿಸುತ್ತಿದ್ದರೆ, ಅವರು ಕೂಡ ನಿಮ್ಮಂತೆಯೇ ನೋವು ಅನುಭವಿಸುತ್ತಿದ್ದಾರೆ. ಆದರೆ ನೀವು ಅಲ್ಲಾಹನಿಂದ ಅವರು ನಿರೀಕ್ಷಿಸದೇ ಇರುವುದನ್ನು ನಿರೀಕ್ಷಿಸುತ್ತೀರಿ. ಅಲ್ಲಾಹು ಎಲ್ಲವನ್ನು ತಿಳಿದವನು ಮತ್ತು ವಿವೇಕಪೂರ್ಣನಾಗಿದ್ದಾನೆ.
ئەرەپچە تەپسىرلەر:
اِنَّاۤ اَنْزَلْنَاۤ اِلَیْكَ الْكِتٰبَ بِالْحَقِّ لِتَحْكُمَ بَیْنَ النَّاسِ بِمَاۤ اَرٰىكَ اللّٰهُ ؕ— وَلَا تَكُنْ لِّلْخَآىِٕنِیْنَ خَصِیْمًا ۟ۙ
ಅಲ್ಲಾಹು ನಿಮಗೆ ತೋರಿಸಿಕೊಟ್ಟಂತೆ ನೀವು ಜನರ ನಡುವೆ ತೀರ್ಪು ನೀಡಲು ನಾವು ನಿಮಗೆ ಈ ಗ್ರಂಥವನ್ನು ಸತ್ಯಸಹಿತ ಅವತೀರ್ಣಗೊಳಿಸಿದ್ದೇವೆ. ನೀವು ವಂಚಕರಿಗಾಗಿ ತರ್ಕಿಸುವವರಾಗಬೇಡಿ.
ئەرەپچە تەپسىرلەر:
وَّاسْتَغْفِرِ اللّٰهَ ؕ— اِنَّ اللّٰهَ كَانَ غَفُوْرًا رَّحِیْمًا ۟ۚ
ಅಲ್ಲಾಹನಲ್ಲಿ ಕ್ಷಮೆಯಾಚಿಸಿರಿ. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
ئەرەپچە تەپسىرلەر:
وَلَا تُجَادِلْ عَنِ الَّذِیْنَ یَخْتَانُوْنَ اَنْفُسَهُمْ ؕ— اِنَّ اللّٰهَ لَا یُحِبُّ مَنْ كَانَ خَوَّانًا اَثِیْمًا ۟ۚۙ
ಆತ್ಮವಂಚನೆ ಮಾಡುವವರಿಗಾಗಿ ತರ್ಕಿಸಬೇಡಿ. ನಿಶ್ಚಯವಾಗಿಯೂ ಪಾಪಿಯಾದ ನಯವಂಚಕನನ್ನು ಅಲ್ಲಾಹು ಇಷ್ಟಪಡುವುದಿಲ್ಲ.
ئەرەپچە تەپسىرلەر:
یَّسْتَخْفُوْنَ مِنَ النَّاسِ وَلَا یَسْتَخْفُوْنَ مِنَ اللّٰهِ وَهُوَ مَعَهُمْ اِذْ یُبَیِّتُوْنَ مَا لَا یَرْضٰی مِنَ الْقَوْلِ ؕ— وَكَانَ اللّٰهُ بِمَا یَعْمَلُوْنَ مُحِیْطًا ۟
ಅವರು ಜನರಿಂದ (ತಮ್ಮ ನಿಜಬಣ್ಣವನ್ನು) ಅಡಗಿಸುತ್ತಾರೆ. ಆದರೆ ಅಲ್ಲಾಹನಿಂದ ಅಡಗಿಸಲು ಅವರಿಗೆ ಸಾಧ್ಯವಿಲ್ಲ. ಅಲ್ಲಾಹು ಇಷ್ಟಪಡದ ಮಾತುಗಳನ್ನು ಹೇಳುತ್ತಾ, ಅವರು ರಾತ್ರಿಯಲ್ಲಿ ಗೂಢ ಮಾತುಕತೆ ನಡೆಸುವಾಗ ಅವನು ಅವರ ಜೊತೆಯಲ್ಲೇ ಇದ್ದಾನೆ. ಅಲ್ಲಾಹು (ತನ್ನ ಜ್ಞಾನದಿಂದ) ಅವರು ಮಾಡುವುದನ್ನು ಪೂರ್ಣವಾಗಿ ಆವರಿಸಿಕೊಂಡಿದ್ದಾನೆ.
ئەرەپچە تەپسىرلەر:
هٰۤاَنْتُمْ هٰۤؤُلَآءِ جَدَلْتُمْ عَنْهُمْ فِی الْحَیٰوةِ الدُّنْیَا ۫— فَمَنْ یُّجَادِلُ اللّٰهَ عَنْهُمْ یَوْمَ الْقِیٰمَةِ اَمْ مَّنْ یَّكُوْنُ عَلَیْهِمْ وَكِیْلًا ۟
ಹೌದು, ನೀವು ಇಹಲೋಕ ಜೀವನದಲ್ಲಿ ಅವರಿಗಾಗಿ ತರ್ಕಿಸಿದ್ದೀರಿ. ಆದರೆ ಪುನರುತ್ಥಾನ ದಿನದಂದು ಅವರ ವಿಷಯದಲ್ಲಿ ಅಲ್ಲಾಹನೊಂದಿಗೆ ತರ್ಕಿಸಲು ಯಾರು ಮುಂದೆ ಬರುತ್ತೀರಿ? ಅಥವಾ ಅವರ ವಿಷಯವನ್ನು ಯಾರು ವಹಿಸಿಕೊಳ್ಳುತ್ತೀರಿ?
ئەرەپچە تەپسىرلەر:
وَمَنْ یَّعْمَلْ سُوْٓءًا اَوْ یَظْلِمْ نَفْسَهٗ ثُمَّ یَسْتَغْفِرِ اللّٰهَ یَجِدِ اللّٰهَ غَفُوْرًا رَّحِیْمًا ۟
ಪಾಪವನ್ನು ಮಾಡಿದ ನಂತರ, ಅಥವಾ ಸ್ವಯಂ ಅನ್ಯಾಯವೆಸಗಿದ ನಂತರ ಅಲ್ಲಾಹನಲ್ಲಿ ಕ್ಷಮೆಯಾಚಿಸುವವನು ಯಾರೋ—ಅವನು ಅಲ್ಲಾಹನನ್ನು ಕ್ಷಮಿಸುವವನಾಗಿ ಮತ್ತು ದಯೆ ತೋರುವವನಾಗಿ ಕಾಣುವನು.
ئەرەپچە تەپسىرلەر:
وَمَنْ یَّكْسِبْ اِثْمًا فَاِنَّمَا یَكْسِبُهٗ عَلٰی نَفْسِهٖ ؕ— وَكَانَ اللّٰهُ عَلِیْمًا حَكِیْمًا ۟
ಪಾಪ ಮಾಡುವವನು ಸ್ವಯಂ ತನಗೆ ವಿರುದ್ಧವಾಗಿಯೇ ಅದನ್ನು ಮಾಡುತ್ತಾನೆ. ಅಲ್ಲಾಹು ಎಲ್ಲವನ್ನು ತಿಳಿದವನು ಮತ್ತು ವಿವೇಕಪೂರ್ಣನಾಗಿದ್ದಾನೆ.
ئەرەپچە تەپسىرلەر:
وَمَنْ یَّكْسِبْ خَطِیْٓئَةً اَوْ اِثْمًا ثُمَّ یَرْمِ بِهٖ بَرِیْٓـًٔا فَقَدِ احْتَمَلَ بُهْتَانًا وَّاِثْمًا مُّبِیْنًا ۟۠
ಯಾರು ಒಂದು ತಪ್ಪು ಅಥವಾ ಪಾಪವನ್ನು ಮಾಡಿ, ನಂತರ ಅದನ್ನು ಒಬ್ಬ ಅಮಾಯಕನ ಮೇಲೆ ಹೊರಿಸುತ್ತಾನೋ, ನಿಶ್ಚಯವಾಗಿಯೂ ಅವನು ಸುಳ್ಳಾರೋಪವನ್ನು ಮತ್ತು ಪ್ರತ್ಯಕ್ಷ ಪಾಪವನ್ನು ವಹಿಸಿಕೊಂಡನು.
ئەرەپچە تەپسىرلەر:
وَلَوْلَا فَضْلُ اللّٰهِ عَلَیْكَ وَرَحْمَتُهٗ لَهَمَّتْ طَّآىِٕفَةٌ مِّنْهُمْ اَنْ یُّضِلُّوْكَ ؕ— وَمَا یُضِلُّوْنَ اِلَّاۤ اَنْفُسَهُمْ وَمَا یَضُرُّوْنَكَ مِنْ شَیْءٍ ؕ— وَاَنْزَلَ اللّٰهُ عَلَیْكَ الْكِتٰبَ وَالْحِكْمَةَ وَعَلَّمَكَ مَا لَمْ تَكُنْ تَعْلَمُ ؕ— وَكَانَ فَضْلُ اللّٰهِ عَلَیْكَ عَظِیْمًا ۟
(ಪ್ರವಾದಿಯವರೇ) ನಿಮ್ಮ ಮೇಲೆ ಅಲ್ಲಾಹನ ಔದಾರ್ಯ ಮತ್ತು ದಯೆಯಿಲ್ಲದಿರುತ್ತಿದ್ದರೆ ಅವರಲ್ಲೊಂದು ಗುಂಪು ನಿಮ್ಮನ್ನು ದಾರಿತಪ್ಪಿಸಲು ಮುಂದಾಗುತ್ತಿದ್ದರು. ಆದರೆ ಅವರು ಸ್ವಯಂ ಅವರನ್ನೇ ದಾರಿತಪ್ಪಿಸುತ್ತಿದ್ದಾರೆ. ಅವರು ನಿಮಗೆ ಯಾವುದೇ ತೊಂದರೆ ಮಾಡಲಾರರು. ಅಲ್ಲಾಹು ನಿಮಗೆ ಗ್ರಂಥವನ್ನು ಮತ್ತು ವಿವೇಕವನ್ನು ಅವತೀರ್ಣಗೊಳಿಸಿದ್ದಾನೆ ಮತ್ತು ನೀವು ತಿಳಿಯದ ವಿಷಯಗಳನ್ನು ನಿಮಗೆ ಕಲಿಸಿದ್ದಾನೆ. ಅಲ್ಲಾಹು ನಿಮ್ಮ ಮೇಲೆ ತೋರಿದ ಔದಾರ್ಯವು ಬಹಳ ದೊಡ್ಡದಾಗಿದೆ.
ئەرەپچە تەپسىرلەر:
لَا خَیْرَ فِیْ كَثِیْرٍ مِّنْ نَّجْوٰىهُمْ اِلَّا مَنْ اَمَرَ بِصَدَقَةٍ اَوْ مَعْرُوْفٍ اَوْ اِصْلَاحٍ بَیْنَ النَّاسِ ؕ— وَمَنْ یَّفْعَلْ ذٰلِكَ ابْتِغَآءَ مَرْضَاتِ اللّٰهِ فَسَوْفَ نُؤْتِیْهِ اَجْرًا عَظِیْمًا ۟
ಅವರು ಮಾಡುವ ಗೂಢ ಮಾತುಕತೆಗಳಲ್ಲಿ ಯಾವುದೇ ಒಳಿತಿಲ್ಲ. ದಾನ-ಧರ್ಮ ಮಾಡಲು, ಒಳಿತು ಮಾಡಲು ಮತ್ತು ಜನರ ನಡುವೆ ಸಾಮರಸ್ಯ ಮೂಡಿಸಲು ಆದೇಶಿಸುವವರ ಹೊರತು. ಯಾರು ಅಲ್ಲಾಹನ ಸಂಪ್ರೀತಿಯನ್ನು ಬಯಸಿ ಅದನ್ನು ಮಾಡುತ್ತಾನೋ ಅವನಿಗೆ ನಾವು ಸದ್ಯವೇ ಮಹಾ ಪ್ರತಿಫಲವನ್ನು ದಯಪಾಲಿಸುವೆವು.
ئەرەپچە تەپسىرلەر:
وَمَنْ یُّشَاقِقِ الرَّسُوْلَ مِنْ بَعْدِ مَا تَبَیَّنَ لَهُ الْهُدٰی وَیَتَّبِعْ غَیْرَ سَبِیْلِ الْمُؤْمِنِیْنَ نُوَلِّهٖ مَا تَوَلّٰی وَنُصْلِهٖ جَهَنَّمَ ؕ— وَسَآءَتْ مَصِیْرًا ۟۠
ಸನ್ಮಾರ್ಗವು ಸ್ಪಷ್ಟವಾದ ಬಳಿಕ ಯಾರು ಸಂದೇಶವಾಹಕರಿಗೆ ವಿರುದ್ಧವಾಗಿ ಚಲಿಸುತ್ತಾನೋ ಮತ್ತು ಸತ್ಯವಿಶ್ವಾಸಿಗಳದ್ದಲ್ಲದ[1] ಮಾರ್ಗವನ್ನು ಅನುಸರಿಸುತ್ತಾನೋ ಅವನು ತಿರುಗಿದ ಮಾರ್ಗಕ್ಕೆ ನಾವು ಅವನನ್ನು ತಿರುಗಿಸುವೆವು ಮತ್ತು ನರಕಾಗ್ನಿಗೆ ಹಾಕಿ ಉರಿಸುವೆವು. ಆ ಗಮ್ಯಸ್ಥಾನವು ಬಹಳ ನಿಕೃಷ್ಟವಾಗಿದೆ!
[1] ಇಲ್ಲಿ ಸತ್ಯವಿಶ್ವಾಸಿಗಳು ಎಂದರೆ ಸಹಾಬಿಗಳು [ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಂಗಡಿಗರು].
ئەرەپچە تەپسىرلەر:
اِنَّ اللّٰهَ لَا یَغْفِرُ اَنْ یُّشْرَكَ بِهٖ وَیَغْفِرُ مَا دُوْنَ ذٰلِكَ لِمَنْ یَّشَآءُ ؕ— وَمَنْ یُّشْرِكْ بِاللّٰهِ فَقَدْ ضَلَّ ضَلٰلًا بَعِیْدًا ۟
ತನ್ನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡಲಾಗುವುದನ್ನು ಅಲ್ಲಾಹು ಎಂದಿಗೂ ಕ್ಷಮಿಸುವುದಿಲ್ಲ. ಅದರ ಹೊರತಾದ ಪಾಪಗಳನ್ನು ಅವನು ಇಚ್ಛಿಸುವವರಿಗೆ ಅವನು ಕ್ಷಮಿಸುತ್ತಾನೆ. ಯಾರು ಅಲ್ಲಾಹನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡುತ್ತಾನೋ ಅವನು ವಿದೂರ ದುರ್ಮಾರ್ಗದಲ್ಲಿ ಬಿದ್ದಿದ್ದಾನೆ.
ئەرەپچە تەپسىرلەر:
اِنْ یَّدْعُوْنَ مِنْ دُوْنِهٖۤ اِلَّاۤ اِنٰثًا ۚ— وَاِنْ یَّدْعُوْنَ اِلَّا شَیْطٰنًا مَّرِیْدًا ۟ۙ
ಅವರು ಅಲ್ಲಾಹನನ್ನು ಬಿಟ್ಟು ಕೆಲವು ದೇವತೆಗಳನ್ನು ಮಾತ್ರ ಕರೆದು ಪ್ರಾರ್ಥಿಸುತ್ತಾರೆ. (ವಾಸ್ತವದಲ್ಲಿ) ಅವರು ಕಡು ಧಿಕ್ಕಾರಿಯಾದ ಶೈತಾನನನ್ನೇ ಕರೆದು ಪ್ರಾರ್ಥಿಸುತ್ತಾರೆ.
ئەرەپچە تەپسىرلەر:
لَّعَنَهُ اللّٰهُ ۘ— وَقَالَ لَاَتَّخِذَنَّ مِنْ عِبَادِكَ نَصِیْبًا مَّفْرُوْضًا ۟ۙ
ಅಲ್ಲಾಹು ಅವನನ್ನು (ಶೈತಾನನನ್ನು) ಶಪಿಸಿದ್ದಾನೆ. ಅವನು ಹೇಳಿದನು: “ನಿನ್ನ ದಾಸರಲ್ಲಿ ಒಂದು ನಿಶ್ಚಿತ ಪಾಲನ್ನು ನಾನು ವಶಪಡಿಸಿಯೇ ತೀರುವೆನು.
ئەرەپچە تەپسىرلەر:
وَّلَاُضِلَّنَّهُمْ وَلَاُمَنِّیَنَّهُمْ وَلَاٰمُرَنَّهُمْ فَلَیُبَتِّكُنَّ اٰذَانَ الْاَنْعَامِ وَلَاٰمُرَنَّهُمْ فَلَیُغَیِّرُنَّ خَلْقَ اللّٰهِ ؕ— وَمَنْ یَّتَّخِذِ الشَّیْطٰنَ وَلِیًّا مِّنْ دُوْنِ اللّٰهِ فَقَدْ خَسِرَ خُسْرَانًا مُّبِیْنًا ۟ؕ
ನಾನು ಅವರನ್ನು ಖಂಡಿತ ದಾರಿತಪ್ಪಿಸುವೆನು ಮತ್ತು ಅವರಲ್ಲಿ ಆಸೆಗಳನ್ನು ಹುಟ್ಟಿಸುವೆನು. ನಾನು ಅವರಿಗೆ ಆದೇಶಿಸಿದಾಗ, ಅವರು ಜಾನುವಾರುಗಳ ಕಿವಿಗಳನ್ನು ಹರಿಯುವರು. ನಾನು ಅವರಿಗೆ ಆದೇಶಿಸಿದಾಗ, ಅವರು ಅಲ್ಲಾಹನ ಸಹಜ ಪ್ರಕೃತಿಯನ್ನು ಬದಲಾಯಿಸುವರು.” ಯಾರು ಅಲ್ಲಾಹನನ್ನು ಬಿಟ್ಟು ಶೈತಾನನನ್ನು ರಕ್ಷಕನನ್ನಾಗಿ ಸ್ವೀಕರಿಸುತ್ತಾನೋ—ಅವನು ಅತ್ಯಂತ ಸ್ಪಷ್ಟವಾದ ನಷ್ಟಕ್ಕೊಳಗಾದನು.
ئەرەپچە تەپسىرلەر:
یَعِدُهُمْ وَیُمَنِّیْهِمْ ؕ— وَمَا یَعِدُهُمُ الشَّیْطٰنُ اِلَّا غُرُوْرًا ۟
ಅವನು (ಶೈತಾನನು) ಅವರಿಗೆ ಆಶ್ವಾಸನೆಗಳನ್ನು ನೀಡುತ್ತಾನೆ ಮತ್ತು ಅವರಲ್ಲಿ ಆಸೆಗಳನ್ನು ಹುಟ್ಟಿಸುತ್ತಾನೆ. ಆದರೆ ಶೈತಾನನು ಅವರಿಗೆ ನೀಡುವ ಆಶ್ವಾಸನೆಗಳು ವಂಚನೆಯಲ್ಲದೆ ಇನ್ನೇನಲ್ಲ.
ئەرەپچە تەپسىرلەر:
اُولٰٓىِٕكَ مَاْوٰىهُمْ جَهَنَّمُ ؗ— وَلَا یَجِدُوْنَ عَنْهَا مَحِیْصًا ۟
ಅವರ ವಾಸಸ್ಥಳವು ನರಕಾಗ್ನಿಯಾಗಿದೆ. ಅದರಿಂದ ತಪ್ಪಿಸಿಕೊಳ್ಳಲು ಅವರು ಯಾವುದೇ ದಾರಿಯನ್ನೂ ಕಾಣಲಾರರು.
ئەرەپچە تەپسىرلەر:
وَالَّذِیْنَ اٰمَنُوْا وَعَمِلُوا الصّٰلِحٰتِ سَنُدْخِلُهُمْ جَنّٰتٍ تَجْرِیْ مِنْ تَحْتِهَا الْاَنْهٰرُ خٰلِدِیْنَ فِیْهَاۤ اَبَدًا ؕ— وَعْدَ اللّٰهِ حَقًّا ؕ— وَمَنْ اَصْدَقُ مِنَ اللّٰهِ قِیْلًا ۟
ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ—ಅವರನ್ನು ನಾವು ಸದ್ಯವೇ ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿಗೆ ಪ್ರವೇಶ ಮಾಡಿಸುವೆವು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅಲ್ಲಾಹನ ಆಶ್ವಾಸನೆಯು ಸತ್ಯವಾಗಿದೆ. ಮಾತಿನಲ್ಲಿ ಅಲ್ಲಾಹನಿಗಿಂತಲೂ ಹೆಚ್ಚು ಸತ್ಯವಂತನು ಯಾರು?
ئەرەپچە تەپسىرلەر:
لَیْسَ بِاَمَانِیِّكُمْ وَلَاۤ اَمَانِیِّ اَهْلِ الْكِتٰبِ ؕ— مَنْ یَّعْمَلْ سُوْٓءًا یُّجْزَ بِهٖ ۙ— وَلَا یَجِدْ لَهٗ مِنْ دُوْنِ اللّٰهِ وَلِیًّا وَّلَا نَصِیْرًا ۟
ವಸ್ತುಸ್ಥಿತಿ ನಿಮ್ಮ ಇಷ್ಟದಂತಿಲ್ಲ. ಗ್ರಂಥದವರ ಇಷ್ಟದಂತೆಯೂ ಇಲ್ಲ. ಪಾಪ ಮಾಡಿದವನಿಗೆ ಅದರ ಪ್ರತಿಫಲವನ್ನು ನೀಡಲಾಗುತ್ತದೆ. ಅಲ್ಲಾಹನ ಹೊರತು ಬೇರೆ ಯಾವುದೇ ರಕ್ಷಕನನ್ನು ಅಥವಾ ಸಹಾಯಕನನ್ನು ಅವನು ಕಾಣಲಾರ.
ئەرەپچە تەپسىرلەر:
وَمَنْ یَّعْمَلْ مِنَ الصّٰلِحٰتِ مِنْ ذَكَرٍ اَوْ اُ وَهُوَ مُؤْمِنٌ فَاُولٰٓىِٕكَ یَدْخُلُوْنَ الْجَنَّةَ وَلَا یُظْلَمُوْنَ نَقِیْرًا ۟
ಸತ್ಯವಿಶ್ವಾಸಿಯಾಗಿದ್ದು ಸತ್ಕರ್ಮವೆಸಗುವವರು ಯಾರೋ—ಅವರು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ—ಅವರು ಸ್ವರ್ಗವನ್ನು ಪ್ರವೇಶಿಸುವರು. ಅವರಿಗೆ ಖರ್ಜೂರ ಬೀಜದ ಪೊರೆಯ ಗಾತ್ರದಷ್ಟು ಸಹ ಅನ್ಯಾಯವಾಗುವುದಿಲ್ಲ.
ئەرەپچە تەپسىرلەر:
وَمَنْ اَحْسَنُ دِیْنًا مِّمَّنْ اَسْلَمَ وَجْهَهٗ لِلّٰهِ وَهُوَ مُحْسِنٌ وَّاتَّبَعَ مِلَّةَ اِبْرٰهِیْمَ حَنِیْفًا ؕ— وَاتَّخَذَ اللّٰهُ اِبْرٰهِیْمَ خَلِیْلًا ۟
ಒಳಿತು ಮಾಡುತ್ತಾ ತನ್ನ ಮುಖವನ್ನು ಅಲ್ಲಾಹನಿಗೆ ಶರಣಾಗಿಸುವವನು ಮತ್ತು ಏಕನಿಷ್ಠರಾದ ಇಬ್ರಾಹೀಮರ ಮಾರ್ಗವನ್ನು ಹಿಂಬಾಲಿಸುವವನಿಗಿಂತ ಧರ್ಮದ ವಿಷಯದಲ್ಲಿ ಉತ್ತಮನಾಗಿರುವವನು ಯಾರು? ಅಲ್ಲಾಹು ಇಬ್ರಾಹೀಮರನ್ನು ಆಪ್ತಮಿತ್ರನಾಗಿ ಸ್ವೀಕರಿಸಿದ್ದಾನೆ.[1]
[1] ಇಸ್ಲಾಂ ಎಂದರೆ ಒಬ್ಬ ವ್ಯಕ್ತಿ ತನ್ನನ್ನು ತಾನೇ ಅಲ್ಲಾಹನ ಇಚ್ಛೆಗೆ ಶರಣಾಗಿಸುವುದು. ಅಂದರೆ ಅಲ್ಲಾಹನ ಆಜ್ಞೆಗಳನ್ನು ಅನುಸರಿಸುತ್ತಾ ಅವನು ವಿರೋಧಿಸಿದ ವಿಷಯಗಳಿಂದ ದೂರವಿದ್ದು ಅವನನ್ನು ಭಯಪಡುತ್ತಾ ಜೀವಿಸುವುದು. ಅಲ್ಲಾಹನ ಆಜ್ಞೆಗಳನ್ನು ಯಾವುದೇ ಹಿಂಜರಿಕೆಯಿಲ್ಲದೆ ಅಕ್ಷರಶಃ ಪಾಲಿಸಿದ್ದರಿಂದ ಅಲ್ಲಾಹು ಇಬ್ರಾಹೀಮರನ್ನು (ಅವರ ಮೇಲೆ ಶಾಂತಿಯಿರಲಿ) ಆಪ್ತಮಿತ್ರನಾಗಿ ಸ್ವೀಕರಿಸಿದನು. ಅಲ್ಲಾಹು ಪ್ರವಾದಿ ಮುಹಮ್ಮದ್ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರನ್ನು ಕೂಡ ಆಪ್ತಮಿತ್ರನಾಗಿ ಸ್ವೀಕರಿಸಿದ್ದಾನೆಂದು ಹದೀಸ್‌ಗಳಲ್ಲಿ ಉಲ್ಲೇಖವಿದೆ.
ئەرەپچە تەپسىرلەر:
وَلِلّٰهِ مَا فِی السَّمٰوٰتِ وَمَا فِی الْاَرْضِ ؕ— وَكَانَ اللّٰهُ بِكُلِّ شَیْءٍ مُّحِیْطًا ۟۠
ಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನಿಗೆ ಸೇರಿದ್ದು. ಅಲ್ಲಾಹು ಎಲ್ಲಾ ವಿಷಯಗಳನ್ನೂ ಆವರಿಸಿಕೊಂಡಿದ್ದಾನೆ.
ئەرەپچە تەپسىرلەر:
وَیَسْتَفْتُوْنَكَ فِی النِّسَآءِ ؕ— قُلِ اللّٰهُ یُفْتِیْكُمْ فِیْهِنَّ ۙ— وَمَا یُتْلٰی عَلَیْكُمْ فِی الْكِتٰبِ فِیْ یَتٰمَی النِّسَآءِ الّٰتِیْ لَا تُؤْتُوْنَهُنَّ مَا كُتِبَ لَهُنَّ وَتَرْغَبُوْنَ اَنْ تَنْكِحُوْهُنَّ وَالْمُسْتَضْعَفِیْنَ مِنَ الْوِلْدَانِ ۙ— وَاَنْ تَقُوْمُوْا لِلْیَتٰمٰی بِالْقِسْطِ ؕ— وَمَا تَفْعَلُوْا مِنْ خَیْرٍ فَاِنَّ اللّٰهَ كَانَ بِهٖ عَلِیْمًا ۟
ಅವರು ತಮ್ಮೊಡನೆ ಮಹಿಳೆಯರ ವಿಷಯದಲ್ಲಿ ಧರ್ಮವಿಧಿಯನ್ನು ಕೇಳುತ್ತಾರೆ. ಹೇಳಿರಿ: “ಅಲ್ಲಾಹು ನಿಮಗೆ ಅವರ (ಮಹಿಳೆಯರ) ವಿಷಯದಲ್ಲಿ—ಅವರಿಗೆ ನಿಶ್ಚಯಿಸಲಾದ ಹಕ್ಕನ್ನು ನೀಡದೆ ನೀವು ವಿವಾಹವಾಗಲು ಬಯಸುವ ಅನಾಥ ಹೆಣ್ಣುಮಕ್ಕಳ ವಿಷಯದಲ್ಲಿ, ದುರ್ಬಲ ಮಕ್ಕಳ ವಿಷಯದಲ್ಲಿ ಮತ್ತು ಅನಾಥರೊಡನೆ ನ್ಯಾಯನಿಷ್ಠೆಯಿಂದ ವರ್ತಿಸಬೇಕೆಂಬ ವಿಷಯದಲ್ಲಿ ಧರ್ಮವಿಧಿ ನೀಡುತ್ತಾನೆ.” ನೀವು ಏನೇ ಒಳಿತು ಮಾಡಿದರೂ ನಿಶ್ಚಯವಾಗಿಯೂ ಅಲ್ಲಾಹು ಅದನ್ನು ತಿಳಿಯುತ್ತಾನೆ.
ئەرەپچە تەپسىرلەر:
وَاِنِ امْرَاَةٌ خَافَتْ مِنْ بَعْلِهَا نُشُوْزًا اَوْ اِعْرَاضًا فَلَا جُنَاحَ عَلَیْهِمَاۤ اَنْ یُّصْلِحَا بَیْنَهُمَا صُلْحًا ؕ— وَالصُّلْحُ خَیْرٌ ؕ— وَاُحْضِرَتِ الْاَنْفُسُ الشُّحَّ ؕ— وَاِنْ تُحْسِنُوْا وَتَتَّقُوْا فَاِنَّ اللّٰهَ كَانَ بِمَا تَعْمَلُوْنَ خَبِیْرًا ۟
ಒಬ್ಬ ಮಹಿಳೆ ತನ್ನ ಗಂಡನಿಂದ ಕೆಟ್ಟ ವರ್ತನೆ ಅಥವಾ ಅವಗಣನೆಯನ್ನು ಭಯಪಟ್ಟರೆ, ಅವರಿಬ್ಬರು ಸೇರಿ ಅದನ್ನು ಇತ್ಯರ್ಥ ಮಾಡಿಕೊಳ್ಳುವುದರಲ್ಲಿ ಅವರಿಬ್ಬರಿಗೂ ದೋಷವಿಲ್ಲ. ಇತ್ಯರ್ಥ ಮಾಡುವುದು ಉತ್ತಮವಾಗಿದೆ. ಮನಸ್ಸುಗಳಲ್ಲಿ ಜಿಪುಣತನವು ಇದ್ದೇ ಇದೆ. ನೀವು ಒಳಿತು ಮಾಡುವವರು ಮತ್ತು ದೇವಭಯವುಳ್ಳವರಾಗಿದ್ದರೆ, ನಿಶ್ಚಯವಾಗಿಯೂ ನೀವು ಮಾಡುವುದನ್ನು ಅಲ್ಲಾಹು ಸೂಕ್ಷ್ಮವಾಗಿ ತಿಳಿಯುತ್ತಿದ್ದಾನೆ.
ئەرەپچە تەپسىرلەر:
وَلَنْ تَسْتَطِیْعُوْۤا اَنْ تَعْدِلُوْا بَیْنَ النِّسَآءِ وَلَوْ حَرَصْتُمْ فَلَا تَمِیْلُوْا كُلَّ الْمَیْلِ فَتَذَرُوْهَا كَالْمُعَلَّقَةِ ؕ— وَاِنْ تُصْلِحُوْا وَتَتَّقُوْا فَاِنَّ اللّٰهَ كَانَ غَفُوْرًا رَّحِیْمًا ۟
ನೀವು ಎಷ್ಟೇ ಆಸಕ್ತಿ ವಹಿಸಿದರೂ ಪತ್ನಿಯರ ನಡುವೆ ನ್ಯಾಯನಿಷ್ಠೆಯಿಂದ ವರ್ತಿಸಲು ನಿಮಗೆ ಖಂಡಿತ ಸಾಧ್ಯವಿಲ್ಲ. ಆದ್ದರಿಂದ ನೀವು ಒಬ್ಬಳ ಕಡೆಗೆ ಸಂಪೂರ್ಣ ಆಕರ್ಷಿತರಾಗಿ ಇನ್ನೊಬ್ಬಳನ್ನು ತೂಗು ಹಾಕಲಾದವಳಂತೆ ಬಿಟ್ಟುಬಿಡಬೇಡಿ. ನೀವು (ನಿಮ್ಮ ವರ್ತನೆಯನ್ನು) ಸುಧಾರಿಸಿದರೆ ಮತ್ತು ಅಲ್ಲಾಹನನ್ನು ಭಯಪಟ್ಟರೆ, ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
ئەرەپچە تەپسىرلەر:
وَاِنْ یَّتَفَرَّقَا یُغْنِ اللّٰهُ كُلًّا مِّنْ سَعَتِهٖ ؕ— وَكَانَ اللّٰهُ وَاسِعًا حَكِیْمًا ۟
ಆದರೆ ಅವರಿಬ್ಬರು ಬೇರ್ಪಡುವುದಾದರೆ, ಅಲ್ಲಾಹು ತನ್ನ ವಿಶಾಲ ಸಾಮರ್ಥ್ಯದಿಂದ ಅವರಿಬ್ಬರಲ್ಲಿ ಪ್ರತಿಯೊಬ್ಬರಿಗೂ ಸ್ವಾವಲಂಬನೆಯನ್ನು ನೀಡುವನು. ಅಲ್ಲಾಹು ವಿಶಾಲನು ಮತ್ತು ವಿವೇಕಪೂರ್ಣನಾಗಿದ್ದಾನೆ.
ئەرەپچە تەپسىرلەر:
وَلِلّٰهِ مَا فِی السَّمٰوٰتِ وَمَا فِی الْاَرْضِ ؕ— وَلَقَدْ وَصَّیْنَا الَّذِیْنَ اُوْتُوا الْكِتٰبَ مِنْ قَبْلِكُمْ وَاِیَّاكُمْ اَنِ اتَّقُوا اللّٰهَ ؕ— وَاِنْ تَكْفُرُوْا فَاِنَّ لِلّٰهِ مَا فِی السَّمٰوٰتِ وَمَا فِی الْاَرْضِ ؕ— وَكَانَ اللّٰهُ غَنِیًّا حَمِیْدًا ۟
ಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನಿಗೆ ಸೇರಿದ್ದು. “ಅಲ್ಲಾಹನನ್ನು ಭಯಪಡಿರಿ” ಎಂದು ನಾವು ನಿಮಗೂ ನಿಮಗಿಂತ ಮೊದಲು ಗ್ರಂಥ ನೀಡಲಾದವರಿಗೂ ಆದೇಶಿಸಿದ್ದೇವೆ. ನೀವು ನಿಷೇಧಿಸಿದರೆ (ಅದರಿಂದ ಅಲ್ಲಾಹನಿಗೇನೂ ನಷ್ಟವಿಲ್ಲ). ಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನಿಗೆ ಸೇರಿದ್ದು. ಅಲ್ಲಾಹು ನಿರಪೇಕ್ಷನು ಮತ್ತು ಸ್ತುತ್ಯರ್ಹನಾಗಿದ್ದಾನೆ.
ئەرەپچە تەپسىرلەر:
وَلِلّٰهِ مَا فِی السَّمٰوٰتِ وَمَا فِی الْاَرْضِ ؕ— وَكَفٰی بِاللّٰهِ وَكِیْلًا ۟
ಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನಿಗೆ ಸೇರಿದ್ದು. ಕಾರ್ಯನಿರ್ವಾಹಕನಾಗಿ ಅಲ್ಲಾಹು ಸಾಕು.
ئەرەپچە تەپسىرلەر:
اِنْ یَّشَاْ یُذْهِبْكُمْ اَیُّهَا النَّاسُ وَیَاْتِ بِاٰخَرِیْنَ ؕ— وَكَانَ اللّٰهُ عَلٰی ذٰلِكَ قَدِیْرًا ۟
ಓ ಜನರೇ! ಅಲ್ಲಾಹು ಇಚ್ಛಿಸಿದರೆ ಅವನು ನಿಮ್ಮನ್ನು ತೊಲಗಿಸಿ ಬೇರೆ ಜನರನ್ನು ತರುವನು. ಅಲ್ಲಾಹನಿಗೆ ಅದರಲ್ಲಿ ಸಂಪೂರ್ಣ ಸಾಮರ್ಥ್ಯವಿದೆ.
ئەرەپچە تەپسىرلەر:
مَنْ كَانَ یُرِیْدُ ثَوَابَ الدُّنْیَا فَعِنْدَ اللّٰهِ ثَوَابُ الدُّنْیَا وَالْاٰخِرَةِ ؕ— وَكَانَ اللّٰهُ سَمِیْعًا بَصِیْرًا ۟۠
ಯಾರು ಇಹಲೋಕದ ಪ್ರತಿಫಲವನ್ನು ಬಯಸುತ್ತಾನೋ—ಅಲ್ಲಾಹನ ಬಳಿ ಇಹಲೋಕ ಮತ್ತು ಪರಲೋಕಗಳ ಪ್ರತಿಫಲವಿದೆ (ಎಂದು ಅವನಿಗೆ ತಿಳಿದಿರಲಿ). ಅಲ್ಲಾಹು ಎಲ್ಲವನ್ನು ಕೇಳುವವನು ಮತ್ತು ನೋಡುವವನಾಗಿದ್ದಾನೆ.
ئەرەپچە تەپسىرلەر:
یٰۤاَیُّهَا الَّذِیْنَ اٰمَنُوْا كُوْنُوْا قَوّٰمِیْنَ بِالْقِسْطِ شُهَدَآءَ لِلّٰهِ وَلَوْ عَلٰۤی اَنْفُسِكُمْ اَوِ الْوَالِدَیْنِ وَالْاَقْرَبِیْنَ ۚ— اِنْ یَّكُنْ غَنِیًّا اَوْ فَقِیْرًا فَاللّٰهُ اَوْلٰی بِهِمَا ۫— فَلَا تَتَّبِعُوا الْهَوٰۤی اَنْ تَعْدِلُوْا ۚ— وَاِنْ تَلْوٗۤا اَوْ تُعْرِضُوْا فَاِنَّ اللّٰهَ كَانَ بِمَا تَعْمَلُوْنَ خَبِیْرًا ۟
ಓ ಸತ್ಯವಿಶ್ವಾಸಿಗಳೇ! ನೀವು ಅಲ್ಲಾಹನಿಗೆ ಸಾಕ್ಷಿಯಾಗಿದ್ದು, ನ್ಯಾಯ ನಿಷ್ಠೆಯಲ್ಲಿ ಸದಾ ದೃಢವಾಗಿ ನಿಲ್ಲಿರಿ. ಅದು ನಿಮಗೆ, ನಿಮ್ಮ ತಂದೆ-ತಾಯಿಗಳಿಗೆ, ಅಥವಾ ಹತ್ತಿರದ ಸಂಬಂಧಿಕರಿಗೆ ವಿರುದ್ಧವಾಗಿದ್ದರೂ ಸಹ. ಶ್ರೀಮಂತನಾಗಿರಲಿ ಅಥವಾ ಬಡವನಾಗಿರಲಿ—ಇಬ್ಬರಿಗೂ ಅಲ್ಲಾಹು ಬಹಳ ಹತ್ತಿರದಲ್ಲಿದ್ದಾನೆ. ಆದ್ದರಿಂದ ನೀವು ಸ್ವೇಚ್ಛೆಗಳನ್ನು ಹಿಂಬಾಲಿಸಿ ನ್ಯಾಯ ತಪ್ಪಿ ನಡೆಯಬೇಡಿ. ನೀವು (ಸಾಕ್ಷ್ಯವನ್ನು) ತಿರುಚಿದರೆ, ಅಥವಾ (ಸಾಕ್ಷಿ ನುಡಿಯದೆ) ಹಿಂದೆ ಸರಿದರೆ, ನಿಶ್ಚಯವಾಗಿಯೂ ನೀವು ಮಾಡುವುದನ್ನು ಅಲ್ಲಾಹು ಸೂಕ್ಷ್ಮವಾಗಿ ತಿಳಿಯುತ್ತಾನೆ.
ئەرەپچە تەپسىرلەر:
یٰۤاَیُّهَا الَّذِیْنَ اٰمَنُوْۤا اٰمِنُوْا بِاللّٰهِ وَرَسُوْلِهٖ وَالْكِتٰبِ الَّذِیْ نَزَّلَ عَلٰی رَسُوْلِهٖ وَالْكِتٰبِ الَّذِیْۤ اَنْزَلَ مِنْ قَبْلُ ؕ— وَمَنْ یَّكْفُرْ بِاللّٰهِ وَمَلٰٓىِٕكَتِهٖ وَكُتُبِهٖ وَرُسُلِهٖ وَالْیَوْمِ الْاٰخِرِ فَقَدْ ضَلَّ ضَلٰلًا بَعِیْدًا ۟
ಓ ಸತ್ಯವಿಶ್ವಾಸಿಗಳೇ! ನೀವು ಅಲ್ಲಾಹನಲ್ಲಿ, ಅವನ ಸಂದೇಶವಾಹಕರಲ್ಲಿ, ಅವನ ಸಂದೇಶವಾಹಕರಿಗೆ ಅವತೀರ್ಣವಾದ ಗ್ರಂಥದಲ್ಲಿ ಮತ್ತು ಅವರಿಗಿಂತ ಮೊದಲು ಅವತೀರ್ಣವಾದ ಗ್ರಂಥಗಳಲ್ಲಿ ವಿಶ್ವಾಸವಿಡಿ. ಯಾರು ಅಲ್ಲಾಹನನ್ನು, ಅವನ ದೇವದೂತರುಗಳನ್ನು, ಅವನ ಗ್ರಂಥಗಳನ್ನು, ಅವನ ಸಂದೇಶವಾಹಕರುಗಳನ್ನು ಮತ್ತು ಅಂತ್ಯದಿನವನ್ನು ನಿಷೇಧಿಸುತ್ತಾನೋ—ಅವನು ವಿದೂರ ದುರ್ಮಾರ್ಗದಲ್ಲಿ ದಾರಿತಪ್ಪಿದ್ದಾನೆ.
ئەرەپچە تەپسىرلەر:
اِنَّ الَّذِیْنَ اٰمَنُوْا ثُمَّ كَفَرُوْا ثُمَّ اٰمَنُوْا ثُمَّ كَفَرُوْا ثُمَّ ازْدَادُوْا كُفْرًا لَّمْ یَكُنِ اللّٰهُ لِیَغْفِرَ لَهُمْ وَلَا لِیَهْدِیَهُمْ سَبِیْلًا ۟ؕ
ನಿಶ್ಚಯವಾಗಿಯೂ, ಸತ್ಯವಿಶ್ವಾಸ ಸ್ವೀಕರಿಸಿದ ನಂತರ ಸತ್ಯನಿಷೇಧಿಗಳಾದವರು, ನಂತರ ಪುನಃ ಸತ್ಯವಿಶ್ವಾಸಿಗಳಾಗಿ ಪುನಃ ಸತ್ಯನಿಷೇಧಿಗಳಾದವರು, ನಂತರ ಸತ್ಯನಿಷೇಧವನ್ನು ಹೆಚ್ಚಿಸುತ್ತಲೇ ಹೋದವರು ಯಾರೋ—ಅವರಿಗೆ ಅಲ್ಲಾಹು ಕ್ಷಮಿಸುವುದಿಲ್ಲ. ಅವರಿಗೆ ಸರಿದಾರಿಯನ್ನು ತೋರಿಸುವುದೂ ಇಲ್ಲ.
ئەرەپچە تەپسىرلەر:
بَشِّرِ الْمُنٰفِقِیْنَ بِاَنَّ لَهُمْ عَذَابًا اَلِیْمَا ۟ۙ
ಕಪಟವಿಶ್ವಾಸಿಗಳಿಗೆ ಯಾತನಾಮಯ ಶಿಕ್ಷೆಯಿದೆಯೆಂಬ ಸುವಾರ್ತೆಯನ್ನು ತಿಳಿಸಿರಿ.
ئەرەپچە تەپسىرلەر:
١لَّذِیْنَ یَتَّخِذُوْنَ الْكٰفِرِیْنَ اَوْلِیَآءَ مِنْ دُوْنِ الْمُؤْمِنِیْنَ ؕ— اَیَبْتَغُوْنَ عِنْدَهُمُ الْعِزَّةَ فَاِنَّ الْعِزَّةَ لِلّٰهِ جَمِیْعًا ۟ؕ
ಸತ್ಯವಿಶ್ವಾಸಿಗಳನ್ನು ಬಿಟ್ಟು ಸತ್ಯನಿಷೇಧಿಗಳನ್ನು ಆಪ್ತಮಿತ್ರರನ್ನಾಗಿ ಸ್ವೀಕರಿಸಿದವರು ಯಾರೋ—ಅವರು ಸತ್ಯನಿಷೇಧಿಗಳ ಬಳಿ ಪ್ರತಿಷ್ಠೆಯನ್ನು ಹುಡುಕುತ್ತಿದ್ದಾರೆಯೇ? ನಿಶ್ಚಯವಾಗಿಯೂ ಪ್ರತಿಷ್ಠೆಯು ಸಂಪೂರ್ಣವಾಗಿ ಅಲ್ಲಾಹನ ವಶದಲ್ಲಿದೆ (ಎಂದು ಅವರು ತಿಳಿದಿರಲಿ).
ئەرەپچە تەپسىرلەر:
وَقَدْ نَزَّلَ عَلَیْكُمْ فِی الْكِتٰبِ اَنْ اِذَا سَمِعْتُمْ اٰیٰتِ اللّٰهِ یُكْفَرُ بِهَا وَیُسْتَهْزَاُ بِهَا فَلَا تَقْعُدُوْا مَعَهُمْ حَتّٰی یَخُوْضُوْا فِیْ حَدِیْثٍ غَیْرِهٖۤ ۖؗ— اِنَّكُمْ اِذًا مِّثْلُهُمْ ؕ— اِنَّ اللّٰهَ جَامِعُ الْمُنٰفِقِیْنَ وَالْكٰفِرِیْنَ فِیْ جَهَنَّمَ جَمِیْعَا ۟ۙ
ಜನರು ಅಲ್ಲಾಹನ ವಚನಗಳನ್ನು ನಿಷೇಧಿಸುವುದನ್ನು ಮತ್ತು ತಮಾಷೆ ಮಾಡುವುದನ್ನು ಕೇಳಿದರೆ, ಅವರು ಬೇರೆ ವಿಷಯದಲ್ಲಿ ಪ್ರವೇಶಿಸುವ ತನಕ ಅವರೊಡನೆ ಕುಳಿತುಕೊಳ್ಳಬೇಡಿ ಎಂಬ ಆದೇಶವನ್ನು ಗ್ರಂಥದಲ್ಲಿ ಈಗಾಗಲೇ ನಿಮಗೆ ಅವತೀರ್ಣಗೊಳಿಸಲಾಗಿದೆ.[1] ಅವರೊಡನೆ ಕುಳಿತುಕೊಂಡರೆ ನೀವು ಕೂಡ ಅವರಂತೆಯೇ ಆಗುವಿರಿ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ಕಪಟವಿಶ್ವಾಸಿಗಳನ್ನು ಮತ್ತು ಸತ್ಯನಿಷೇಧಿಗಳನ್ನು ನರಕಾಗ್ನಿಯಲ್ಲಿ ಒಟ್ಟುಗೂಡಿಸುವನು.
[1] ಈ ವಚನವು ಅವತೀರ್ಣವಾದದ್ದು ಮದೀನದಲ್ಲಿ. ಇದಕ್ಕೆ ಮೊದಲು ಮಕ್ಕಾದಲ್ಲಿ ಇದೇ ವಿಷಯದ ಕುರಿತು ವಚನವು ಅವತೀರ್ಣವಾಗಿತ್ತು. (ನೋಡಿ 6:68)
ئەرەپچە تەپسىرلەر:
١لَّذِیْنَ یَتَرَبَّصُوْنَ بِكُمْ ۚ— فَاِنْ كَانَ لَكُمْ فَتْحٌ مِّنَ اللّٰهِ قَالُوْۤا اَلَمْ نَكُنْ مَّعَكُمْ ۖؗ— وَاِنْ كَانَ لِلْكٰفِرِیْنَ نَصِیْبٌ ۙ— قَالُوْۤا اَلَمْ نَسْتَحْوِذْ عَلَیْكُمْ وَنَمْنَعْكُمْ مِّنَ الْمُؤْمِنِیْنَ ؕ— فَاللّٰهُ یَحْكُمُ بَیْنَكُمْ یَوْمَ الْقِیٰمَةِ ؕ— وَلَنْ یَّجْعَلَ اللّٰهُ لِلْكٰفِرِیْنَ عَلَی الْمُؤْمِنِیْنَ سَبِیْلًا ۟۠
ಅವರು ನಿಮ್ಮನ್ನು ಕಾದು ನೋಡುತ್ತಾರೆ. ನಿಮಗೆ ಅಲ್ಲಾಹನಿಂದ ಗೆಲುವು ಪ್ರಾಪ್ತವಾದರೆ, “ನಾವು ನಿಮ್ಮೊಂದಿಗೆ ಇರಲಿಲ್ಲವೇ?” ಎಂದು ಅವರು (ನಿಮ್ಮೊಂದಿಗೆ) ಕೇಳುತ್ತಾರೆ. ಗೆಲುವು ಸತ್ಯನಿಷೇಧಿಗಳ ಪಾಲಾದರೆ (ಅವರ ಬಳಿಗೆ ಹೋಗಿ), “ನಿಮ್ಮ ಮೇಲೆ ಗೆಲುವು ಪಡೆಯುವ ಸಾಧ್ಯತೆಯಿದ್ದೂ ಸಹ ನಾವು ನಿಮ್ಮನ್ನು ಸತ್ಯವಿಶ್ವಾಸಿಗಳಿಂದ ರಕ್ಷಿಸಲಿಲ್ಲವೇ?” ಎಂದು ಕೇಳುತ್ತಾರೆ. ಪುನರುತ್ಥಾನ ದಿನದಂದು ಅಲ್ಲಾಹು ನಿಮ್ಮ ನಡುವೆ ತೀರ್ಪು ನೀಡುವನು. ಅಲ್ಲಾಹು ಸತ್ಯವಿಶ್ವಾಸಿಗಳ ಮೇಲೆ ಸತ್ಯನಿಷೇಧಿಗಳಿಗೆ ಯಾವುದೇ ಮಾರ್ಗವನ್ನು ಮಾಡಿಕೊಡುವುದಿಲ್ಲ.
ئەرەپچە تەپسىرلەر:
اِنَّ الْمُنٰفِقِیْنَ یُخٰدِعُوْنَ اللّٰهَ وَهُوَ خَادِعُهُمْ ۚ— وَاِذَا قَامُوْۤا اِلَی الصَّلٰوةِ قَامُوْا كُسَالٰی ۙ— یُرَآءُوْنَ النَّاسَ وَلَا یَذْكُرُوْنَ اللّٰهَ اِلَّا قَلِیْلًا ۟ؗۙ
ನಿಶ್ಚಯವಾಗಿಯೂ ಕಪಟವಿಶ್ವಾಸಿಗಳು ಅಲ್ಲಾಹನನ್ನು ವಂಚಿಸಬಹುದೆಂದು (ಭಾವಿಸುತ್ತಾರೆ). ಆದರೆ, (ವಾಸ್ತವವಾಗಿ) ಅಲ್ಲಾಹನೇ ಅವರನ್ನು ವಂಚಿಸುತ್ತಿದ್ದಾನೆ.[1] ಅವರು ನಮಾಝ್ ಮಾಡಲು ನಿಲ್ಲುವಾಗ ಉದಾಸೀನರಾಗಿ ಮತ್ತು ಜನರಿಗೆ ತೋರಿಸುವುದಕ್ಕಾಗಿ ನಿಲ್ಲುತ್ತಾರೆ. ಅವರು ಅಲ್ಲಾಹನನ್ನು ಸ್ವಲ್ಪ ಮಾತ್ರ ಸ್ಮರಿಸುತ್ತಾರೆ.
[1] ಅಲ್ಲಾಹು ಅವರನ್ನು ವಂಚಿಸುತ್ತಿದ್ದಾನೆ ಎಂದರೆ ಅವರು ಮಾಡಿದ ವಂಚನೆಯ ಫಲವನ್ನು ಅವರೇ ಉಣ್ಣುವಂತೆ ಮಾಡುತ್ತಿದ್ದಾನೆ ಎಂದರ್ಥ.
ئەرەپچە تەپسىرلەر:
مُّذَبْذَبِیْنَ بَیْنَ ذٰلِكَ ۖۗ— لَاۤ اِلٰی هٰۤؤُلَآءِ وَلَاۤ اِلٰی هٰۤؤُلَآءِ ؕ— وَمَنْ یُّضْلِلِ اللّٰهُ فَلَنْ تَجِدَ لَهٗ سَبِیْلًا ۟
ಅವರು ಎರಡು ಗುಂಪುಗಳ ಮಧ್ಯೆ ತೊಳಲಾಡುತ್ತಾರೆ. ಆ ಗುಂಪಿಗೂ ಸೇರುವುದಿಲ್ಲ; ಈ ಗುಂಪಿಗೂ ಸೇರುವುದಿಲ್ಲ. ಅಲ್ಲಾಹು ಯಾರನ್ನು ದಾರಿತಪ್ಪಿಸುತ್ತಾನೋ ಅವನಿಗೆ ಯಾವುದೇ ದಾರಿಯನ್ನು ನೀವು ಕಾಣಲಾರಿರಿ.
ئەرەپچە تەپسىرلەر:
یٰۤاَیُّهَا الَّذِیْنَ اٰمَنُوْا لَا تَتَّخِذُوا الْكٰفِرِیْنَ اَوْلِیَآءَ مِنْ دُوْنِ الْمُؤْمِنِیْنَ ؕ— اَتُرِیْدُوْنَ اَنْ تَجْعَلُوْا لِلّٰهِ عَلَیْكُمْ سُلْطٰنًا مُّبِیْنًا ۟
ಓ ಸತ್ಯವಿಶ್ವಾಸಿಗಳೇ! ನೀವು ಸತ್ಯವಿಶ್ವಾಸಿಗಳನ್ನು ಬಿಟ್ಟು ಸತ್ಯನಿಷೇಧಿಗಳನ್ನು ಆಪ್ತಮಿತ್ರರನ್ನಾಗಿ ಸ್ವೀಕರಿಸಬೇಡಿ. ನಿಮ್ಮ ವಿರುದ್ಧ ಅಲ್ಲಾಹನಿಗೆ ಸ್ಪಷ್ಟ ಸಾಕ್ಷ್ಯಾಧಾರವನ್ನು ಮಾಡಿಕೊಡಲು ನೀವು ಬಯಸುತ್ತೀರಾ?
ئەرەپچە تەپسىرلەر:
اِنَّ الْمُنٰفِقِیْنَ فِی الدَّرْكِ الْاَسْفَلِ مِنَ النَّارِ ۚ— وَلَنْ تَجِدَ لَهُمْ نَصِیْرًا ۟ۙ
ನಿಶ್ಚಯವಾಗಿಯೂ ಕಪಟ ವಿಶ್ವಾಸಿಗಳು ನರಕದ ಅತ್ಯಂತ ತಳಮಟ್ಟದಲ್ಲಿರುತ್ತಾರೆ. ನೀವು ಅವರಿಗೆ ಯಾವುದೇ ಸಹಾಯಕನನ್ನು ಕಾಣಲಾರಿರಿ.
ئەرەپچە تەپسىرلەر:
اِلَّا الَّذِیْنَ تَابُوْا وَاَصْلَحُوْا وَاعْتَصَمُوْا بِاللّٰهِ وَاَخْلَصُوْا دِیْنَهُمْ لِلّٰهِ فَاُولٰٓىِٕكَ مَعَ الْمُؤْمِنِیْنَ ؕ— وَسَوْفَ یُؤْتِ اللّٰهُ الْمُؤْمِنِیْنَ اَجْرًا عَظِیْمًا ۟
ಆದರೆ ಪಶ್ಚಾತ್ತಾಪಪಡುವವರು, ಸುಧಾರಿಸಿಕೊಳ್ಳುವವರು, ಅಲ್ಲಾಹನನ್ನು ಬಿಗಿಯಾಗಿ ಹಿಡಿದುಕೊಳ್ಳುವವರು ಮತ್ತು ತಮ್ಮ ಧರ್ಮವನ್ನು ಅಲ್ಲಾಹನಿಗೆ ನಿಷ್ಕಳಂಕಗೊಳಿಸುವವರು ಇದರಿಂದ ಹೊರತಾಗಿದ್ದಾರೆ. ಅವರು ಸತ್ಯವಿಶ್ವಾಸಿಗಳಲ್ಲಿ ಸೇರಿದವರು. ಅಲ್ಲಾಹು ಸತ್ಯವಿಶ್ವಾಸಿಗಳಿಗೆ ಮಹಾ ಪ್ರತಿಫಲವನ್ನು ನೀಡುವನು.
ئەرەپچە تەپسىرلەر:
مَا یَفْعَلُ اللّٰهُ بِعَذَابِكُمْ اِنْ شَكَرْتُمْ وَاٰمَنْتُمْ ؕ— وَكَانَ اللّٰهُ شَاكِرًا عَلِیْمًا ۟
ನೀವು ಕೃತಜ್ಞರಾಗಿ ಜೀವಿಸಿದರೆ ಮತ್ತು ಸತ್ಯವಿಶ್ವಾಸಿಗಳಾದರೆ, ನಿಮ್ಮನ್ನು ಶಿಕ್ಷಿಸಿ ಅಲ್ಲಾಹು ಮಾಡುವುದೇನು? ಅಲ್ಲಾಹು ಶ್ಲಾಘನಾರ್ಹನು ಮತ್ತು ಸರ್ವಜ್ಞನಾಗಿದ್ದಾನೆ.
ئەرەپچە تەپسىرلەر:
لَا یُحِبُّ اللّٰهُ الْجَهْرَ بِالسُّوْٓءِ مِنَ الْقَوْلِ اِلَّا مَنْ ظُلِمَ ؕ— وَكَانَ اللّٰهُ سَمِیْعًا عَلِیْمًا ۟
ಕೆಟ್ಟ ಪದಗಳನ್ನು ಜೋರಾಗಿ ಹೇಳುವುದನ್ನು ಅಲ್ಲಾಹು ಇಷ್ಟಪಡುವುದಿಲ್ಲ. ಆದರೆ ಅನ್ಯಾಯಕ್ಕೆ ಗುರಿಯಾದವನು ಇದರಿಂದ ಹೊರತಾಗಿದ್ದಾನೆ. ಅಲ್ಲಾಹು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ.
ئەرەپچە تەپسىرلەر:
اِنْ تُبْدُوْا خَیْرًا اَوْ تُخْفُوْهُ اَوْ تَعْفُوْا عَنْ سُوْٓءٍ فَاِنَّ اللّٰهَ كَانَ عَفُوًّا قَدِیْرًا ۟
ನೀವು ಬಹಿರಂಗವಾಗಿ ಅಥವಾ ರಹಸ್ಯವಾಗಿ ಒಳಿತು ಮಾಡಿದರೂ, ಅಥವಾ ಒಂದು ದುಷ್ಕರ್ಮವನ್ನು ಕ್ಷಮಿಸಿದರೂ—ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ಸರ್ವಶಕ್ತನಾಗಿದ್ದಾನೆ.
ئەرەپچە تەپسىرلەر:
اِنَّ الَّذِیْنَ یَكْفُرُوْنَ بِاللّٰهِ وَرُسُلِهٖ وَیُرِیْدُوْنَ اَنْ یُّفَرِّقُوْا بَیْنَ اللّٰهِ وَرُسُلِهٖ وَیَقُوْلُوْنَ نُؤْمِنُ بِبَعْضٍ وَّنَكْفُرُ بِبَعْضٍ ۙ— وَّیُرِیْدُوْنَ اَنْ یَّتَّخِذُوْا بَیْنَ ذٰلِكَ سَبِیْلًا ۙ۟
ನಿಶ್ಚಯವಾಗಿಯೂ ಅಲ್ಲಾಹನನ್ನು ಮತ್ತು ಅವನ ಸಂದೇಶವಾಹಕರನ್ನು ನಿಷೇಧಿಸುವವರು, ಅಲ್ಲಾಹು ಮತ್ತು ಅವನ ಸಂದೇಶವಾಹಕರ ನಡುವೆ ಬೇಧ ಮಾಡಲು ಬಯಸುವವರು, ನಾವು ಕೆಲವರನ್ನು ನಂಬುತ್ತೇವೆ ಮತ್ತು ಕೆಲವರನ್ನು ನಿಷೇಧಿಸುತ್ತೇವೆ ಎಂದು ಹೇಳುವವರು ಹಾಗೂ ಅದರ ಮಧ್ಯೆ ಒಂದು ಮಾರ್ಗವನ್ನು ಸ್ವೀಕರಿಸಲು ಬಯಸುವವರು ಯಾರೋ,
ئەرەپچە تەپسىرلەر:
اُولٰٓىِٕكَ هُمُ الْكٰفِرُوْنَ حَقًّا ۚ— وَاَعْتَدْنَا لِلْكٰفِرِیْنَ عَذَابًا مُّهِیْنًا ۟
ಅವರೇ ನಿಜವಾದ ಸತ್ಯನಿಷೇಧಿಗಳು. ಆ ಸತ್ಯನಿಷೇಧಿಗಳಿಗೆ ನಾವು ಅವಮಾನಕರ ಶಿಕ್ಷೆಯನ್ನು ಸಿದ್ಧಗೊಳಿಸಿದ್ದೇವೆ.
ئەرەپچە تەپسىرلەر:
وَالَّذِیْنَ اٰمَنُوْا بِاللّٰهِ وَرُسُلِهٖ وَلَمْ یُفَرِّقُوْا بَیْنَ اَحَدٍ مِّنْهُمْ اُولٰٓىِٕكَ سَوْفَ یُؤْتِیْهِمْ اُجُوْرَهُمْ ؕ— وَكَانَ اللّٰهُ غَفُوْرًا رَّحِیْمًا ۟۠
ಅಲ್ಲಾಹನಲ್ಲಿ ಮತ್ತು ಅವನ ಸಂದೇಶವಾಹಕರಲ್ಲಿ ವಿಶ್ವಾಸವಿಡುವವರು, ಮತ್ತು ಅವರಲ್ಲಿ ಯಾರ ನಡುವೆಯೂ ಬೇಧ ಮಾಡದವರು ಯಾರೋ—ಅವರಿಗೆ ಅಲ್ಲಾಹು ಅರ್ಹ ಪ್ರತಿಫಲವನ್ನು ನೀಡುವನು. ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
ئەرەپچە تەپسىرلەر:
یَسْـَٔلُكَ اَهْلُ الْكِتٰبِ اَنْ تُنَزِّلَ عَلَیْهِمْ كِتٰبًا مِّنَ السَّمَآءِ فَقَدْ سَاَلُوْا مُوْسٰۤی اَكْبَرَ مِنْ ذٰلِكَ فَقَالُوْۤا اَرِنَا اللّٰهَ جَهْرَةً فَاَخَذَتْهُمُ الصّٰعِقَةُ بِظُلْمِهِمْ ۚ— ثُمَّ اتَّخَذُوا الْعِجْلَ مِنْ بَعْدِ مَا جَآءَتْهُمُ الْبَیِّنٰتُ فَعَفَوْنَا عَنْ ذٰلِكَ ۚ— وَاٰتَیْنَا مُوْسٰی سُلْطٰنًا مُّبِیْنًا ۟
ಗ್ರಂಥದವರು ನಿಮ್ಮೊಂದಿಗೆ—ಅವರಿಗೆ ಆಕಾಶದಿಂದ ಒಂದು ಗ್ರಂಥವನ್ನು ಇಳಿಸಿಕೊಡಬೇಕೆಂದು ಕೇಳುತ್ತಾರೆ. ಅವರು ಮೂಸಾರೊಡನೆ ಇದಕ್ಕಿಂತಲೂ ದೊಡ್ಡ ಸಂಗತಿಯನ್ನು ಕೇಳಿದ್ದರು. ಅವರು ಹೇಳಿದರು: “ನಮಗೆ ಅಲ್ಲಾಹನನ್ನು ಪ್ರತ್ಯಕ್ಷವಾಗಿ ತೋರಿಸಿಕೊಡಿ.” ಆಗ ಅವರು ಮಾಡಿದ ಅನ್ಯಾಯದಿಂದಾಗಿ ಮಿಂಚು ಅವರ ಮೇಲೆರಗಿತು. ನಂತರ ಅವರಿಗೆ ಸ್ಪಷ್ಟ ಸಾಕ್ಷ್ಯಾಧಾರಗಳು ತಲುಪಿದ ಬಳಿಕವೂ ಅವರು ಕರುವನ್ನು (ದೇವರನ್ನಾಗಿ) ಸ್ವೀಕರಿಸಿದರು. ಆದರೂ ನಾವು ಅದನ್ನು ಕ್ಷಮಿಸಿದೆವು. ಮೂಸಾರಿಗೆ ನಾವು ಸ್ಪಷ್ಟ ಸಾಕ್ಷ್ಯಾಧಾರಗಳನ್ನು ನೀಡಿದ್ದೆವು.
ئەرەپچە تەپسىرلەر:
وَرَفَعْنَا فَوْقَهُمُ الطُّوْرَ بِمِیْثَاقِهِمْ وَقُلْنَا لَهُمُ ادْخُلُوا الْبَابَ سُجَّدًا وَّقُلْنَا لَهُمْ لَا تَعْدُوْا فِی السَّبْتِ وَاَخَذْنَا مِنْهُمْ مِّیْثَاقًا غَلِیْظًا ۟
ಅವರಿಂದ ಕರಾರು ಪಡೆಯಲು ನಾವು ಅವರ ಮೇಲೆ ತೂರ್ ಪರ್ವತವನ್ನು ಎತ್ತಿಹಿಡಿದೆವು. ತಲೆಬಾಗುತ್ತಾ ದ್ವಾರವನ್ನು ಪ್ರವೇಶಿಸಿರಿ ಎಂದು ನಾವು ಅವರಿಗೆ ಆದೇಶಿಸಿದೆವು. ಸಬ್ಬತ್ ದಿನದಲ್ಲಿ ಅತಿರೇಕವೆಸಗಬೇಡಿ ಎಂದು ಅವರೊಡನೆ ಹೇಳಿದೆವು. ನಾವು ಅವರಿಂದ ಪ್ರಬಲ ಕರಾರನ್ನು ಪಡೆದೆವು.
ئەرەپچە تەپسىرلەر:
فَبِمَا نَقْضِهِمْ مِّیْثَاقَهُمْ وَكُفْرِهِمْ بِاٰیٰتِ اللّٰهِ وَقَتْلِهِمُ الْاَنْۢبِیَآءَ بِغَیْرِ حَقٍّ وَّقَوْلِهِمْ قُلُوْبُنَا غُلْفٌ ؕ— بَلْ طَبَعَ اللّٰهُ عَلَیْهَا بِكُفْرِهِمْ فَلَا یُؤْمِنُوْنَ اِلَّا قَلِیْلًا ۪۟
ಅವರು ಕರಾರನ್ನು ಉಲ್ಲಂಘಿಸಿದ, ಅಲ್ಲಾಹನ ವಚನಗಳನ್ನು ನಿಷೇಧಿಸಿದ, ಅನ್ಯಾಯವಾಗಿ ಪ್ರವಾದಿಗಳನ್ನು ಕೊಲೆ ಮಾಡಿದ ಮತ್ತು ತಮ್ಮ ಹೃದಯಗಳು ಮುಚ್ಚಿವೆಯೆಂದು ಹೇಳಿದ ಕಾರಣದಿಂದ (ಶಾಪಕ್ಕೆ ಗುರಿಯಾದರು). ಅಲ್ಲ, ವಾಸ್ತವವಾಗಿ ಅವರ ಸತ್ಯನಿಷೇಧದಿಂದಾಗಿ ಅಲ್ಲಾಹು ಅವರ ಹೃದಯಗಳಿಗೆ ಮೊಹರು ಹಾಕಿದ್ದಾನೆ. ಆದ್ದರಿಂದ ಅವರು ಸ್ವಲ್ಪ ಮಾತ್ರ ವಿಶ್ವಾಸವಿಡುತ್ತಾರೆ.
ئەرەپچە تەپسىرلەر:
وَّبِكُفْرِهِمْ وَقَوْلِهِمْ عَلٰی مَرْیَمَ بُهْتَانًا عَظِیْمًا ۟ۙ
ಅವರ ಸತ್ಯನಿಷೇಧದ ನಿಮಿತ್ತ ಮತ್ತು ಮರ್ಯಮರ ಮೇಲೆ ಗುರುತರ ಆರೋಪವನ್ನು ಹೊರಿಸಿದ ನಿಮಿತ್ತ (ಅವರು ಶಾಪಕ್ಕೆ ಗುರಿಯಾದರು).
ئەرەپچە تەپسىرلەر:
وَّقَوْلِهِمْ اِنَّا قَتَلْنَا الْمَسِیْحَ عِیْسَی ابْنَ مَرْیَمَ رَسُوْلَ اللّٰهِ ۚ— وَمَا قَتَلُوْهُ وَمَا صَلَبُوْهُ وَلٰكِنْ شُبِّهَ لَهُمْ ؕ— وَاِنَّ الَّذِیْنَ اخْتَلَفُوْا فِیْهِ لَفِیْ شَكٍّ مِّنْهُ ؕ— مَا لَهُمْ بِهٖ مِنْ عِلْمٍ اِلَّا اتِّبَاعَ الظَّنِّ ۚ— وَمَا قَتَلُوْهُ یَقِیْنًا ۟ۙ
“ಅಲ್ಲಾಹನ ಸಂದೇಶವಾಹಕರಾದ ಮರ್ಯಮರ ಪುತ್ರ ಮಸೀಹ ಈಸಾರನ್ನು ನಾವು ಕೊಂದಿದ್ದೇವೆ” ಎಂದು ಹೇಳಿದ ನಿಮಿತ್ತ (ಅವರು ಶಾಪಕ್ಕೆ ಗುರಿಯಾದರು). ಅವರು ಅವರನ್ನು ಕೊಲ್ಲಲಿಲ್ಲ ಮತ್ತು ಶಿಲುಬೆಗೇರಿಸಲೂ ಇಲ್ಲ. ವಾಸ್ತವವಾಗಿ, ಅವರಿಗೆ ಅದನ್ನು ಸಾದೃಶ್ಯಗೊಳಿಸಲಾಯಿತು. ನಿಶ್ಚಯವಾಗಿಯೂ ಅವರ (ಈಸಾರ) ವಿಷಯದಲ್ಲಿ ಭಿನ್ನಮತ ತಳೆದವರು ಅದರ ಬಗ್ಗೆ ಸಂಶಯದಲ್ಲಿದ್ದಾರೆ. ವದಂತಿಗಳನ್ನು ಹಿಂಬಾಲಿಸುವುದನ್ನು ಬಿಟ್ಟರೆ ಅವರಿಗೆ ಅದರ ಬಗ್ಗೆ ಸರಿಯಾದ ಜ್ಞಾನವೇ ಇಲ್ಲ. ನಿಶ್ಚಯವಾಗಿಯೂ ಅವರು ಈಸಾರನ್ನು ಕೊಲ್ಲಲಿಲ್ಲ.[1]
[1] ಯಹೂದಿಗಳು ಈಸಾ (ಯೇಸು) (ಅವರ ಮೇಲೆ ಶಾಂತಿಯಿರಲಿ) ರನ್ನು ಕೊಂದಿಲ್ಲ. ಶಿಲುಬೆಗೇರಿಸಿಯೂ ಇಲ್ಲ. ಬದಲಿಗೆ ಈಸಾ (ಅವರ ಮೇಲೆ ಶಾಂತಿಯಿರಲಿ) ರಂತೆಯೇ ಇದ್ದ ಒಬ್ಬ ವ್ಯಕ್ತಿಯನ್ನು ಅವರು ಈಸಾ ಎಂದು ಭಾವಿಸಿ ಶಿಲುಬೆಗೇರಿಸಿದರು.
ئەرەپچە تەپسىرلەر:
بَلْ رَّفَعَهُ اللّٰهُ اِلَیْهِ ؕ— وَكَانَ اللّٰهُ عَزِیْزًا حَكِیْمًا ۟
ಬದಲಿಗೆ, ಅಲ್ಲಾಹು ಅವರನ್ನು ತನ್ನ ಬಳಿಗೆ ಎತ್ತಿಕೊಂಡನು. ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.
ئەرەپچە تەپسىرلەر:
وَاِنْ مِّنْ اَهْلِ الْكِتٰبِ اِلَّا لَیُؤْمِنَنَّ بِهٖ قَبْلَ مَوْتِهٖ ۚ— وَیَوْمَ الْقِیٰمَةِ یَكُوْنُ عَلَیْهِمْ شَهِیْدًا ۟ۚ
ಅವರ (ಈಸಾರ) ಮರಣಕ್ಕೆ ಮೊದಲು ಅವರಲ್ಲಿ ವಿಶ್ವಾಸವಿಡದವರು ಯಾರೂ ಗ್ರಂಥದವರಲ್ಲಿ ಇರಲಾರರು. ಪುನರುತ್ಥಾನ ದಿನದಂದು ಅವರು ಇವರಿಗೆ ವಿರುದ್ಧವಾಗಿ ಸಾಕ್ಷಿ ನುಡಿಯುವರು.
ئەرەپچە تەپسىرلەر:
فَبِظُلْمٍ مِّنَ الَّذِیْنَ هَادُوْا حَرَّمْنَا عَلَیْهِمْ طَیِّبٰتٍ اُحِلَّتْ لَهُمْ وَبِصَدِّهِمْ عَنْ سَبِیْلِ اللّٰهِ كَثِیْرًا ۟ۙ
ಯಹೂದಿಗಳು ಮಾಡಿದ ಅನ್ಯಾಯದ ನಿಮಿತ್ತ ಮತ್ತು ಅಲ್ಲಾಹನ ಮಾರ್ಗದಿಂದ ಅವರು ಹೇರಳವಾಗಿ ಜನರನ್ನು ತಡೆಗಟ್ಟಿದ ನಿಮಿತ್ತ ಅವರಿಗೆ ಅನುಮತಿಸಲಾಗಿದ್ದ ಹಲವಾರು ಉತ್ತಮ ವಸ್ತುಗಳನ್ನು ನಾವು ಅವರಿಗೆ ನಿಷೇಧಿಸಿದೆವು.
ئەرەپچە تەپسىرلەر:
وَّاَخْذِهِمُ الرِّبٰوا وَقَدْ نُهُوْا عَنْهُ وَاَكْلِهِمْ اَمْوَالَ النَّاسِ بِالْبَاطِلِ ؕ— وَاَعْتَدْنَا لِلْكٰفِرِیْنَ مِنْهُمْ عَذَابًا اَلِیْمًا ۟
ಅವರಿಗೆ ಬಡ್ಡಿಯನ್ನು ವಿರೋಧಿಸಲಾಗಿದ್ದೂ ಸಹ ಅವರು ಅದನ್ನು ಪಡೆದ ನಿಮಿತ್ತ ಮತ್ತು ಜನರ ಧನವನ್ನು ಅನ್ಯಾಯವಾಗಿ ತಿಂದ ನಿಮಿತ್ತ. ಅವರಲ್ಲಿರುವ ಸತ್ಯನಿಷೇಧಿಗಳಿಗೆ ನಾವು ಯಾತನಾಮಯ ಶಿಕ್ಷೆಯನ್ನು ಸಿದ್ಧಗೊಳಿಸಿದ್ದೇವೆ.
ئەرەپچە تەپسىرلەر:
لٰكِنِ الرّٰسِخُوْنَ فِی الْعِلْمِ مِنْهُمْ وَالْمُؤْمِنُوْنَ یُؤْمِنُوْنَ بِمَاۤ اُنْزِلَ اِلَیْكَ وَمَاۤ اُنْزِلَ مِنْ قَبْلِكَ وَالْمُقِیْمِیْنَ الصَّلٰوةَ وَالْمُؤْتُوْنَ الزَّكٰوةَ وَالْمُؤْمِنُوْنَ بِاللّٰهِ وَالْیَوْمِ الْاٰخِرِ ؕ— اُولٰٓىِٕكَ سَنُؤْتِیْهِمْ اَجْرًا عَظِیْمًا ۟۠
ಆದರೆ ಅವರಲ್ಲಿರುವ ಮಹಾಜ್ಞಾನಿಗಳು ಮತ್ತು ಸತ್ಯವಿಶ್ವಾಸಿಗಳು ನಿಮಗೆ ಅವತೀರ್ಣವಾದ ಗ್ರಂಥದಲ್ಲಿ ಮತ್ತು ನಿಮಗಿಂತ ಮೊದಲು ಅವತೀರ್ಣವಾದ ಗ್ರಂಥಗಳಲ್ಲಿ ವಿಶ್ವಾಸವಿಡುತ್ತಾರೆ. ಅವರು ನಮಾಝ್ ಸಂಸ್ಥಾಪಿಸುತ್ತಾರೆ, ಝಕಾತ್ ನೀಡುತ್ತಾರೆ ಮತ್ತು ಅಲ್ಲಾಹನಲ್ಲಿ ಹಾಗೂ ಅಂತ್ಯದಿನದಲ್ಲಿ ವಿಶ್ವಾಸವಿಡುತ್ತಾರೆ. ನಾವು ಅವರಿಗೆ ಮಹಾ ಪ್ರತಿಫಲವನ್ನು ದಯಪಾಲಿಸುವೆವು.
ئەرەپچە تەپسىرلەر:
اِنَّاۤ اَوْحَیْنَاۤ اِلَیْكَ كَمَاۤ اَوْحَیْنَاۤ اِلٰی نُوْحٍ وَّالنَّبِیّٖنَ مِنْ بَعْدِهٖ ۚ— وَاَوْحَیْنَاۤ اِلٰۤی اِبْرٰهِیْمَ وَاِسْمٰعِیْلَ وَاِسْحٰقَ وَیَعْقُوْبَ وَالْاَسْبَاطِ وَعِیْسٰی وَاَیُّوْبَ وَیُوْنُسَ وَهٰرُوْنَ وَسُلَیْمٰنَ ۚ— وَاٰتَیْنَا دَاوٗدَ زَبُوْرًا ۟ۚ
ನೂಹ್ ಮತ್ತು ಅವರ ನಂತರದ ಪ್ರವಾದಿಗಳಿಗೆ ದೇವವಾಣಿ ನೀಡಿದಂತೆಯೇ ನಾವು ನಿಮಗೂ ದೇವವಾಣಿ ನೀಡಿದ್ದೇವೆ. ಇಬ್ರಾಹೀಮ್, ಇಸ್ಮಾಈಲ್, ಇಸ್‍ಹಾಕ್, ಯಾಕೂಬ್, ಯಾಕೂಬ್ ಸಂತತಿಗಳು, ಈಸಾ, ಅಯ್ಯೂಬ್, ಯೂನುಸ್, ಹಾರೂನ್, ಸುಲೈಮಾನ್ ಮುಂತಾದವರಿಗೂ ನಾವು ದೇವವಾಣಿಯನ್ನು ನೀಡಿದ್ದೇವೆ. ನಾವು ದಾವೂದರಿಗೆ ಝಬೂರನ್ನು ನೀಡಿದ್ದೇವೆ.
ئەرەپچە تەپسىرلەر:
وَرُسُلًا قَدْ قَصَصْنٰهُمْ عَلَیْكَ مِنْ قَبْلُ وَرُسُلًا لَّمْ نَقْصُصْهُمْ عَلَیْكَ ؕ— وَكَلَّمَ اللّٰهُ مُوْسٰی تَكْلِیْمًا ۟ۚ
ನಾವು ಈಗಾಗಲೇ ನಿಮಗೆ ತಿಳಿಸಿಕೊಟ್ಟ ಸಂದೇಶವಾಹಕರನ್ನು ಮತ್ತು ನಾವು ನಿಮಗೆ ತಿಳಿಸಿಕೊಡದ ಸಂದೇಶವಾಹಕರನ್ನು (ನಾವು ಕಳುಹಿಸಿದ್ದೇವೆ). ಅಲ್ಲಾಹು ಮೂಸಾರೊಡನೆ ನೇರವಾಗಿ ಮಾತನಾಡಿದ್ದಾನೆ.
ئەرەپچە تەپسىرلەر:
رُسُلًا مُّبَشِّرِیْنَ وَمُنْذِرِیْنَ لِئَلَّا یَكُوْنَ لِلنَّاسِ عَلَی اللّٰهِ حُجَّةٌ بَعْدَ الرُّسُلِ ؕ— وَكَانَ اللّٰهُ عَزِیْزًا حَكِیْمًا ۟
ಸುವಾರ್ತೆ ತಿಳಿಸುವ ಮತ್ತು ಮುನ್ನೆಚ್ಚರಿಕೆ ನೀಡುವ ಸಂದೇಶವಾಹಕರನ್ನು (ನಾವು ಕಳುಹಿಸಿದ್ದೇವೆ). ಸಂದೇಶವಾಹಕರನ್ನು ಕಳುಹಿಸಿದ ನಂತರ ಅಲ್ಲಾಹನಿಗೆದುರಾಗಿ ಜನರಿಗೆ ಯಾವುದೇ ಸಾಕ್ಷ್ಯಾಧಾರಗಳು ಇಲ್ಲದಿರುವುದಕ್ಕಾಗಿ. ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.
ئەرەپچە تەپسىرلەر:
لٰكِنِ اللّٰهُ یَشْهَدُ بِمَاۤ اَنْزَلَ اِلَیْكَ اَنْزَلَهٗ بِعِلْمِهٖ ۚ— وَالْمَلٰٓىِٕكَةُ یَشْهَدُوْنَ ؕ— وَكَفٰی بِاللّٰهِ شَهِیْدًا ۟ؕ
ಆದರೆ ನಿಮಗೆ ಅವತೀರ್ಣಗೊಳಿಸಿದ ಸಂದೇಶಕ್ಕೆ ಅಲ್ಲಾಹು ಸಾಕ್ಷಿಯಾಗಿದ್ದಾನೆ. ಅವನು ಅದನ್ನು ಪೂರ್ಣ ತಿಳುವಳಿಕೆಯೊಂದಿಗೆ ಅವತೀರ್ಣಗೊಳಿಸಿದ್ದಾನೆ. ದೇವದೂತರುಗಳು ಕೂಡ ಅದಕ್ಕೆ ಸಾಕ್ಷಿಯಾಗಿದ್ದಾರೆ. ಸಾಕ್ಷಿಯಾಗಿ ಅಲ್ಲಾಹು ಸಾಕು.
ئەرەپچە تەپسىرلەر:
اِنَّ الَّذِیْنَ كَفَرُوْا وَصَدُّوْا عَنْ سَبِیْلِ اللّٰهِ قَدْ ضَلُّوْا ضَلٰلًا بَعِیْدًا ۟
ಸತ್ಯನಿಷೇಧಿಗಳು ಮತ್ತು ಅಲ್ಲಾಹನ ಮಾರ್ಗದಿಂದ ಜನರನ್ನು ತಡೆದವರು ಯಾರೋ—ನಿಶ್ಚಯವಾಗಿಯೂ ಅವರು ವಿದೂರ ದುರ್ಮಾರ್ಗದಲ್ಲಿ ದಾರಿತಪ್ಪಿದ್ದಾರೆ.
ئەرەپچە تەپسىرلەر:
اِنَّ الَّذِیْنَ كَفَرُوْا وَظَلَمُوْا لَمْ یَكُنِ اللّٰهُ لِیَغْفِرَ لَهُمْ وَلَا لِیَهْدِیَهُمْ طَرِیْقًا ۟ۙ
ಸತ್ಯನಿಷೇಧಿಗಳು ಮತ್ತು ಅಕ್ರಮವೆಸಗಿದವರು ಯಾರೋ—ಅವರನ್ನು ಅಲ್ಲಾಹು ಎಂದಿಗೂ ಕ್ಷಮಿಸುವುದಿಲ್ಲ ಮತ್ತು ಅವರಿಗೆ ಯಾವುದೇ ಮಾರ್ಗವನ್ನು ತೋರಿಸುವುದಿಲ್ಲ.
ئەرەپچە تەپسىرلەر:
اِلَّا طَرِیْقَ جَهَنَّمَ خٰلِدِیْنَ فِیْهَاۤ اَبَدًا ؕ— وَكَانَ ذٰلِكَ عَلَی اللّٰهِ یَسِیْرًا ۟
ನರಕದ ಮಾರ್ಗವನ್ನು ಬಿಟ್ಟು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅದು ಅಲ್ಲಾಹನಿಗೆ ಬಹಳ ಸುಲಭವಾಗಿದೆ.
ئەرەپچە تەپسىرلەر:
یٰۤاَیُّهَا النَّاسُ قَدْ جَآءَكُمُ الرَّسُوْلُ بِالْحَقِّ مِنْ رَّبِّكُمْ فَاٰمِنُوْا خَیْرًا لَّكُمْ ؕ— وَاِنْ تَكْفُرُوْا فَاِنَّ لِلّٰهِ مَا فِی السَّمٰوٰتِ وَالْاَرْضِ ؕ— وَكَانَ اللّٰهُ عَلِیْمًا حَكِیْمًا ۟
ಓ ಜನರೇ! ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯಿಂದ ನಿಮ್ಮ ಬಳಿಗೆ ಸಂದೇಶವಾಹಕರು ಸತ್ಯಸಹಿತ ಬಂದಿದ್ದಾರೆ. ಆದ್ದರಿಂದ ಅವರಲ್ಲಿ ವಿಶ್ವಾಸವಿಡಿ. ಅದು ನಿಮಗೆ ಒಳಿತಾಗಿದೆ. ನೀವು ನಿಷೇಧಿಸಿದರೆ (ಅದರಿಂದ ಅಲ್ಲಾಹನಿಗೇನೂ ನಷ್ಟವಿಲ್ಲ). ಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನಿಗೆ ಸೇರಿದ್ದು. ಅಲ್ಲಾಹು ಎಲ್ಲವನ್ನು ತಿಳಿದವನು ಮತ್ತು ವಿವೇಕಪೂರ್ಣನಾಗಿದ್ದಾನೆ.
ئەرەپچە تەپسىرلەر:
یٰۤاَهْلَ الْكِتٰبِ لَا تَغْلُوْا فِیْ دِیْنِكُمْ وَلَا تَقُوْلُوْا عَلَی اللّٰهِ اِلَّا الْحَقَّ ؕ— اِنَّمَا الْمَسِیْحُ عِیْسَی ابْنُ مَرْیَمَ رَسُوْلُ اللّٰهِ وَكَلِمَتُهٗ ۚ— اَلْقٰىهَاۤ اِلٰی مَرْیَمَ وَرُوْحٌ مِّنْهُ ؗ— فَاٰمِنُوْا بِاللّٰهِ وَرُسُلِهٖ ۫— وَلَا تَقُوْلُوْا ثَلٰثَةٌ ؕ— اِنْتَهُوْا خَیْرًا لَّكُمْ ؕ— اِنَّمَا اللّٰهُ اِلٰهٌ وَّاحِدٌ ؕ— سُبْحٰنَهٗۤ اَنْ یَّكُوْنَ لَهٗ وَلَدٌ ۘ— لَهٗ مَا فِی السَّمٰوٰتِ وَمَا فِی الْاَرْضِ ؕ— وَكَفٰی بِاللّٰهِ وَكِیْلًا ۟۠
ಓ ಗ್ರಂಥದವರೇ! ನೀವು ನಿಮ್ಮ ಧರ್ಮದಲ್ಲಿ ಹದ್ದುಮೀರಿ ವರ್ತಿಸಬೇಡಿ. ಅಲ್ಲಾಹನ ಬಗ್ಗೆ ಸತ್ಯವನ್ನಲ್ಲದೆ ಬೇರೇನನ್ನೂ ಹೇಳಬೇಡಿ. ಮರ್ಯಮರ ಮಗ ಮಸೀಹ ಈಸಾ ಅಲ್ಲಾಹನ ಸಂದೇಶವಾಹಕರು, ಮರ್ಯಮರಿಗೆ ಅವನು ಹಾಕಿಕೊಟ್ಟ ಅವನ ವಚನ ಮತ್ತು ಅವನ ಕಡೆಯ ಒಂದು ಆತ್ಮವಾಗಿದ್ದಾರೆ. ಆದ್ದರಿಂದ ಅಲ್ಲಾಹನಲ್ಲಿ ಮತ್ತು ಅವನ ಸಂದೇಶವಾಹಕರುಗಳಲ್ಲಿ ವಿಶ್ವಾಸವಿಡಿರಿ. ಮೂರು ಎಂದು ಹೇಳಬೇಡಿ.[1] ಹಾಗೆ ಹೇಳುವುದನ್ನು ನಿಲ್ಲಿಸಿದರೆ ನಿಮಗೇ ಒಳ್ಳೆಯದು. ಅಲ್ಲಾಹು ಏಕೈಕ ದೇವನಾಗಿದ್ದಾನೆ. ಮಕ್ಕಳು ಉಂಟಾಗುತ್ತಾರೆ ಎಂಬುದರಿಂದ ಅವನು ಎಷ್ಟೋ ಪರಿಶುದ್ಧನಾಗಿದ್ದಾನೆ. ಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಅವನಿಗೆ ಸೇರಿದ್ದು. ಕಾರ್ಯನಿರ್ವಾಹಕನಾಗಿ ಅಲ್ಲಾಹು ಸಾಕು.
[1] ಕ್ರೈಸ್ತರು ತಿಯೇಕತ್ವದಲ್ಲಿ ನಂಬಿಕೆಯಿಡುತ್ತಾರೆ. ತ್ರಿಯೇಕತ್ವ ಎಂದರೆ ತಂದೆ, ಮಗ ಮತ್ತು ಪವಿತ್ರಾತ್ಮ—ಇವರು ಮೂವರೂ ಒಂದೇ ಮತ್ತು ಇವರು ಮೂವರೂ ದೇವರುಗಳು ಎಂಬ ನಂಬಿಕೆ.
ئەرەپچە تەپسىرلەر:
لَنْ یَّسْتَنْكِفَ الْمَسِیْحُ اَنْ یَّكُوْنَ عَبْدًا لِّلّٰهِ وَلَا الْمَلٰٓىِٕكَةُ الْمُقَرَّبُوْنَ ؕ— وَمَنْ یَّسْتَنْكِفْ عَنْ عِبَادَتِهٖ وَیَسْتَكْبِرْ فَسَیَحْشُرُهُمْ اِلَیْهِ جَمِیْعًا ۟
ಅಲ್ಲಾಹನ ದಾಸನಾಗಿರಲು ಮಸೀಹರಿಗೆ ಯಾವುದೇ ತಿರಸ್ಕಾರವಿಲ್ಲ. (ಅಲ್ಲಾಹನ) ಸಾಮೀಪ್ಯವನ್ನು ಗಳಿಸಿದ ದೇವದೂತರುಗಳಿಗೂ ತಿರಸ್ಕಾರವಿಲ್ಲ.ಅಲ್ಲಾಹನನ್ನು ಆರಾಧಿಸಲು ತಿರಸ್ಕಾರ ಮಾಡುವವರು ಮತ್ತು ಅಹಂಕಾರಪಡುವವರು ಯಾರೋ—ಅವರೆಲ್ಲರನ್ನೂ ಅವನು ತನ್ನ ಬಳಿಗೆ ಒಟ್ಟುಗೂಡಿಸುವನು.
ئەرەپچە تەپسىرلەر:
فَاَمَّا الَّذِیْنَ اٰمَنُوْا وَعَمِلُوا الصّٰلِحٰتِ فَیُوَفِّیْهِمْ اُجُوْرَهُمْ وَیَزِیْدُهُمْ مِّنْ فَضْلِهٖ ۚ— وَاَمَّا الَّذِیْنَ اسْتَنْكَفُوْا وَاسْتَكْبَرُوْا فَیُعَذِّبُهُمْ عَذَابًا اَلِیْمًا ۙ۬— وَّلَا یَجِدُوْنَ لَهُمْ مِّنْ دُوْنِ اللّٰهِ وَلِیًّا وَّلَا نَصِیْرًا ۟
ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ—ಅವರ ಪ್ರತಿಫಲವನ್ನು ಅವನು ಅವರಿಗೆ ಪೂರ್ಣವಾಗಿ ನೀಡುವನು ಮತ್ತು ತನ್ನ ಅನುಗ್ರಹದಿಂದ ಅವರಿಗೆ ಹೆಚ್ಚುವರಿಯನ್ನು ದಯಪಾಲಿಸುವನು. ಆದರೆ ತಿರಸ್ಕಾರ ಮಾಡುವವರು ಮತ್ತು ಅಹಂಕಾರಪಡುವವರು ಯಾರೋ—ಅವರಿಗೆ ಅವನು ಯಾತನಾಮಯ ಶಿಕ್ಷೆಯನ್ನು ನೀಡುವನು. ಅವರು ಅಲ್ಲಾಹನ ಹೊರತು ಯಾವುದೇ ರಕ್ಷಕನನ್ನು ಅಥವಾ ಸಹಾಯಕನನ್ನು ಕಾಣಲಾರರು.
ئەرەپچە تەپسىرلەر:
یٰۤاَیُّهَا النَّاسُ قَدْ جَآءَكُمْ بُرْهَانٌ مِّنْ رَّبِّكُمْ وَاَنْزَلْنَاۤ اِلَیْكُمْ نُوْرًا مُّبِیْنًا ۟
ಓ ಮನುಷ್ಯರೇ! ನಿಶ್ಚಯವಾಗಿಯೂ ನಿಮಗೆ ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಸ್ಪಷ್ಟವಾದ ಸಾಕ್ಷ್ಯವು ಬಂದಿದೆ. ನಾವು ನಿಮಗೆ ಸ್ಪಷ್ಟ ಬೆಳಕನ್ನು ಇಳಿಸಿಕೊಟ್ಟಿದ್ದೇವೆ.
ئەرەپچە تەپسىرلەر:
فَاَمَّا الَّذِیْنَ اٰمَنُوْا بِاللّٰهِ وَاعْتَصَمُوْا بِهٖ فَسَیُدْخِلُهُمْ فِیْ رَحْمَةٍ مِّنْهُ وَفَضْلٍ ۙ— وَّیَهْدِیْهِمْ اِلَیْهِ صِرَاطًا مُّسْتَقِیْمًا ۟ؕ
ಅಲ್ಲಾಹನಲ್ಲಿ ವಿಶ್ವಾಸವಿಟ್ಟು ಅವನನ್ನು ಬಿಗಿಯಾಗಿ ಹಿಡಿದುಕೊಳ್ಳುವವರು ಯಾರೋ—ಅವರನ್ನು ಅವನು ತನ್ನ ದಯೆ ಮತ್ತು ಅನುಗ್ರಹದಲ್ಲಿ ಸೇರಿಸುವನು. ಅವರನ್ನು ತನ್ನ ಬಳಿಗೆ ನೇರಮಾರ್ಗದಲ್ಲಿ ಮುನ್ನಡೆಸುವನು.
ئەرەپچە تەپسىرلەر:
یَسْتَفْتُوْنَكَ ؕ— قُلِ اللّٰهُ یُفْتِیْكُمْ فِی الْكَلٰلَةِ ؕ— اِنِ امْرُؤٌا هَلَكَ لَیْسَ لَهٗ وَلَدٌ وَّلَهٗۤ اُخْتٌ فَلَهَا نِصْفُ مَا تَرَكَ ۚ— وَهُوَ یَرِثُهَاۤ اِنْ لَّمْ یَكُنْ لَّهَا وَلَدٌ ؕ— فَاِنْ كَانَتَا اثْنَتَیْنِ فَلَهُمَا الثُّلُثٰنِ مِمَّا تَرَكَ ؕ— وَاِنْ كَانُوْۤا اِخْوَةً رِّجَالًا وَّنِسَآءً فَلِلذَّكَرِ مِثْلُ حَظِّ الْاُنْثَیَیْنِ ؕ— یُبَیِّنُ اللّٰهُ لَكُمْ اَنْ تَضِلُّوْا ؕ— وَاللّٰهُ بِكُلِّ شَیْءٍ عَلِیْمٌ ۟۠
ಅವರು ತಮ್ಮೊಂದಿಗೆ ಧರ್ಮವಿಧಿಯನ್ನು ಕೇಳುತ್ತಾರೆ. ಹೇಳಿರಿ: “ತಂದೆ-ತಾಯಿ ಮತ್ತು ಮಕ್ಕಳಿಲ್ಲದವರ ಬಗ್ಗೆ ಅಲ್ಲಾಹು ನಿಮಗೆ ಧರ್ಮವಿಧಿಯನ್ನು ನೀಡುತ್ತಾನೆ.”[1] ಒಬ್ಬ ವ್ಯಕ್ತಿ ಸಾಯುವಾಗ ಸಂತಾನರಹಿತನಾಗಿದ್ದು ಅವನಿಗೆ ಒಬ್ಬ ಸಹೋದರಿ ಮಾತ್ರವಿದ್ದರೆ ಅವನು ಬಿಟ್ಟು ಹೋದ ಆಸ್ತಿಯಲ್ಲಿ ಅರ್ಧ ಭಾಗ ಅವಳಿಗೆ ದೊರೆಯುತ್ತದೆ. ಅವಳು ಸಂತಾನರಹಿತೆಯಾಗಿದ್ದು ಮರಣಹೊಂದಿದರೆ, ಅವಳ ಪೂರ್ಣ ಆಸ್ತಿಗೆ ಇವನು ವಾರಸುದಾರನಾಗುತ್ತಾನೆ. ಅವನಿಗೆ ಇಬ್ಬರು ಸಹೋದರಿಯರಿದ್ದರೆ ಅವನು ಬಿಟ್ಟು ಹೋದ ಆಸ್ತಿಯ ಮೂರನೇ ಎರಡು ಭಾಗವು ಅವರಿಗೆ ದೊರೆಯುತ್ತದೆ. ಅವನಿಗೆ ಅನೇಕ ಸಹೋದರ-ಸಹೋದರಿಯರಿದ್ದರೆ ಒಬ್ಬ ಪುರುಷನ ಪಾಲು ಇಬ್ಬರು ಮಹಿಳೆಯರ ಪಾಲಿಗೆ ಸಮಾನವಾಗಿದೆ. ನೀವು ದಾರಿತಪ್ಪದಿರಲು ಅಲ್ಲಾಹು ನಿಮಗೆ ವಿಷಯಗಳನ್ನು ಸ್ಪಷ್ಟಗೊಳಿಸುತ್ತಿದ್ದಾನೆ. ಅಲ್ಲಾಹು ಎಲ್ಲಾ ವಿಷಯಗಳನ್ನೂ ತಿಳಿದವನಾಗಿದ್ದಾನೆ.
[1] ಮೃತ ವ್ಯಕ್ತಿಗೆ ತಂದೆ-ತಾಯಿ ಮತ್ತು ಮಕ್ಕಳಿಲ್ಲದಿದ್ದರೆ ಅವನ ಆಸ್ತಿಯನ್ನು ಹೇಗೆ ಪಾಲು ಮಾಡಬೇಕೆಂದು ಈ ವಚನವು ವಿವರಿಸುತ್ತದೆ.
ئەرەپچە تەپسىرلەر:
 
مەنالار تەرجىمىسى سۈرە: سۈرە نىسا
سۈرە مۇندەرىجىسى بەت نومۇرى
 
قۇرئان كەرىم مەنىلىرىنىڭ تەرجىمىسى - الترجمة الكنادية - تەرجىمىلەر مۇندەرىجىسى

ترجمة معاني القرآن الكريم إلى اللغة الكنادية ترجمها محمد حمزة بتور.

تاقاش